Author: kannadanewsnow05

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಚನೆ ಮಾಡಿರುವ ಸಮಿತಿ ಸದಸ್ಯರಿಗೆ ಸಂಪುಟ ಸ್ಥಾನಮಾನ ನೀಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸಮಿತಿಗಳ ಮುಖ್ಯಸ್ಥರಿಗೆ ಸಚಿವ ಸಂಪುಟ ಸ್ನಾನಮಾನ ಪ್ರಶ್ನಿಸಿ ಪಿಐಎಲ್ ಸಲ್ಲಿಸಲಾಗಿದೆ. ಪಿ.ರಾಜೀವ್ ಸಲ್ಲಿಸಿದ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ಕಾಂಗ್ರೆಸ್ ಪಕ್ಷದ ನಾಯಕರಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಸಂವಿಧಾನ ಆರ್ಟಿಕಲ್ 164 (1A) ಉಲ್ಲಂಘಿಸಿ ನೇಮಕ ಮಾಡಲಾಗಿದೆ. ಯಾವುದೇ ಶೈಕ್ಷಣಿಕ ತಾಂತ್ರಿಕ ಅರ್ಹತೆ ಪರಿಗಣಿಸದೆ ನೇಮಕದ ಆರೋಪ ಕೇಳಿ ಬಂದಿದೆ ಎಂದು ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ಬಳಿಕ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ನ್ಯಾಯಪೀಠವು, ಆರೋಪ ಸತ್ಯವಾದರೆ ಸರ್ಕಾರದ ಕ್ರಮ ಸ್ವಾಗತಾ ರ್ಹವಲ್ಲ ಎಂದು ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಮತ್ತು ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಸಮಿತಿಯ ಸದಸ್ಯರಿಗೆ ನೋಟಿಸ್ ಜಾರಿ…

Read More

ಕಲಬುರ್ಗಿ : ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿಳಂಬ, ನಕಲಿ ಪದವಿ ಪ್ರಮಾಣ ಪತ್ರ, ಅಂಕಪಟ್ಟಿ ಮತ್ತು ಲಂಚದ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಲೋಕಾಯುಕ್ತ ಅಧಿಕಾರಿಗಳ 5 ತಂಡಗಳು ಏಕಕಾಲಕ್ಕೆ ದಾಳಿ ನಡೆಸಿವೆ. ಹೌದು ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ದಾಳಿಯ ವೇಳೆ ಗುಲ್ಬರ್ಗ ವಿಶ್ವವಿದ್ಯಾನಿಲಯದ ಹಾಜರಿ ಪುಸ್ತಕ, ಚಲನವಲನ ರಿಜಿಸ್ಟರ್, ಕ್ಯಾಸಿಸ್ಟರ್, ಸಿಸಿಟಿವಿ ಕ್ಯಾಮರಾ ಸೇರಿದಂತೆ ಹಲವು ರೀತಿಯಲ್ಲಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಡಿವೈಎಸ್ಪಿ ಗೀತಾ ಬೇನಾಳ, ಡಿವೈಎಸ್ಪಿ ಹನುಮಂತ್ ರಾಯ, ಇನ್ ಸ್ಪೆಕ್ಟರ್ ಸಂತೋಷ್, ಅರುಣ್ ಕುಮಾರ್, ಸಿದ್ದರಾಯ ರಾಜಶೇಖರ್ ಹಾಗೂ ಪೊಲೀಸ್ ಸಿಬ್ಬಂದಿಯಾದ ಬಸವರಾಜ್, ಪ್ರದೀಪ್ ಕುಮಾರ್, ರೇಣುಕಾ, ಜಯಶ್ರೀ, ಮಸೂದ್, ಗುಂಡುರಾವ್ ಸಿಬ್ಬಂದಿ ಈ ದಾಳಿ ನಡೆಸಿದೆ ಎನ್ನಲಾಗಿದೆ.

Read More

ಕಲಬುರ್ಗಿ : ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ದೆಹಲಿ ಮೂಲದ ರಾಜೀವ್ ಸಿಂಗ್ ಆರೋರ ಎಂಬಾತನನ್ನು ಇದೀಗ ಕಲಬುರ್ಗಿಯ ಸೆನ್ ಠಾಣೆ ಪೊಲೀಸರು ದೆಹಲಿಯ ದ್ವಾರಕಮೋಡ್ ರಾಮ ಪಾರ್ಕ್ ಅಪಾರ್ಟ್ಮೆಂಟ್ ನಲ್ಲಿ ಅರೆಸ್ಟ್ ಮಾಡಿದ್ದಾರೆ. ನಕಲಿ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ಅಂಕಪಟ್ಟಿ ಸಿದ್ಧಪಡಿಸಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯ, ಮೈಸೂರು ವಿಶ್ವವಿದ್ಯಾಲಯ, KSOU ನಕಲಿ ಅಂಕಪಟ್ಟಿ ಮಾರಾಟ ಮಾಡುತ್ತಿದ್ದ. ದೆಹಲಿ ಮೂಲದ ರಾಜೀವ್ ಸಿಂಗ್ ಆರೋಪಿಯನ್ನು ಇದೀಗ ಕಲಬುರ್ಗಿಯ ಸೆನ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಬಂಧಿತ ರಾಜೀವ್ ಸಿಂಗ್ ಬಳಿ 522 ನಕಲಿ ಅಂಕಪಟ್ಟಿ ವಶಕ್ಕೆ ಪಡೆದ ಪೊಲೀಸರು, ನಕಲಿ ಅಂಕಪಟ್ಟಿಸಿದ ಪಡಿಸಲು 1626 ಖಾಲಿ ಪೇಪರ್ ಗಳನ್ನು ಇದೆ ವೇಳೆ ವಶಕ್ಕೆ ಪಡಿಸಿಕೊಳ್ಳಲಾಯಿತು. ವಿವಿಧ ವಿಶ್ವವಿದ್ಯಾಲಯಗಳ 122 ನಕಲಿ ಸೀಲ್ಗಳು, 36 ಮೊಬೈಲ್, ಎರಡು ಲ್ಯಾಪ್ಟಾಪ್, 1 ಪ್ರಿಂಟರ್, ಎಟಿಎಂ ಕಾರ್ಡ್ ಗಳು, 123 ನಕಲಿ ಗುರುತಿನ ಚೀಟಿಗಳನ್ನು ವಶಕ್ಕೆ ಪಡೆಯಲಾಯಿತು. ರಾಜೀವ್ ಸಿಂಗ್…

Read More

ನವದೆಹಲಿ : ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ನಲ್ಲಿ ಮೈಸೂರು ರಾಜಮನೆತನ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು.ವಿಚಾರಣೆ ಬಳಿಕ ನ್ಯಾ.ಸುಂದರೇಶ್ ಹಾಗು ನ್ಯಾ ಅರವಿಂದ್ ಕುಮಾರ್ ನೇತೃತ್ವದ ಪೀಠವು ಒಂದು ವಾರಗಳಿಗೆ ಟಿಡಿಆರ್ ಪಾವತಿಸಬೇಕು ಎಂದು ರಾಜ್ಯ ಸರಕಾರಕ್ಕೆ ಸೂಚನೆ ನೀಡಿ, ವಿಚಾರಣೆಯನ್ನು ಮಾರ್ಚ್ 22ಕ್ಕೆ ಮುಂದೂಡಿತು ಈ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ರಾಜಮನೆತನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ನ್ಯಾ.ಸುಂದರೇಶ್ ಹಾಗು ನ್ಯಾ ಅರವಿಂದ್ ಕುಮಾರ್ ನೇತೃತ್ವದ ಪೀಠವು ರಾಜಮನೆತನ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದರು. ರಾಜ್ಯ ಸರ್ಕಾರದ ಪರವಾಗಿ ಕಪಿಲ್ ಸಿಬಲ್ ವಾದ ಮಂಡಿಸಿದರು. ಬಳಕೆ ಮಾಡಿದ್ದಷ್ಟು ಭೂಮಿಗೆ ಟಿಡಿಆರ್ ನೀಡಲಾಗುತ್ತದೆ. ಉಳಿದ ಭೂಮಿಯನ್ನು ನಾವು ಬಳಕೆ ಮಾಡುತ್ತಿಲ್ಲ ಎಂದು ವಾದಿಸಿದರು. ರಸ್ತೆ ಅಗಲೀಕರಣ ಪ್ರಸ್ತಾಪವನ್ನು ಕ್ಯಾಬಿನೆಟ್ ನಲ್ಲಿ ಕೈ ಬಿಡಲಾಗಿದೆ.ಈಗ ಬಳಸಿದ ಭೂಮಿಗೆ ಸುಮಾರು 45 ಕೋಟಿ ಆರ್ ನೀಡಬೇಕು. ಹಾಗಾಗಿ ನಾವು ಬಳಸಿದ ಜಮೀನಿಗೆ ಮಾತ್ರ…

Read More

ಮೈಸೂರು : ಶೌಚಾಲಯ ಗುಂಡಿಯನ್ನು ದುರಸ್ತಿ ಮಾಡುವ ಸಂದರ್ಭದಲ್ಲಿ ಗುಂಡಿಯಲ್ಲಿ ಮನುಷ್ಯನ ತಲೆ ಬುರುಡೆ ಹಾಗೂ ಕೈ ಕಾಲಿನ ಮೂಳೆಗಳು ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಜೋಂಪನಪಾಳ್ಯ ಎಂಬಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಜೋಂಪನಪಾಳ್ಯ ಎಂಬಲ್ಲಿ ದಾಸ್ ಪ್ರಕಾಶ್ ಎಂಬುವವರ ಮನೆಯ ಹಿತ್ತಲಿನ ಶೌಚಾಲಯ ಗುಂಡಿಯಲ್ಲಿ ಶೌಚಾಲಯದ ಗುಂಡಿ ದುರಸ್ತಿ ಮಾಡುತ್ತಿದ್ದರು. ಈ ವೇಳೆ ಅಲ್ಲಿ ತಲೆ ಬುರುಡೆ ಹಾಗು ದೇಹದ ಹಲವು ಮೂಳೆಗಳು ಪತ್ತೆಯಾಗಿವೆ. ಏಳು ತಿಂಗಳ ಹಿಂದೆ ದಾಸ್ ಪ್ರಕಾಶ್ ಕಾಣೆಯಾಗಿದ್ದಾರೆ. ಮನೆ ಹಿಂದಿನ ಶೌಚಾಲಯ ಗುಂಡಿಯಲ್ಲಿ ಮೂಳೆ ಪತ್ತೆಯಾಗಿವೆ. ದಾಸ್ ಎನ್ನುವವನು ಕೂಲಿ ಕೆಲಸವನ್ನು ಮಾಡಿಕೊಂಡಿದ್ದಾರೆ ಇದುವರೆಗೂ ದಾಸ್ ಪ್ರಕಾಶ್ ಪತ್ತೆಯಾಗದೆ ಇರುವ ಹಿನ್ನೆಲೆ ತಲೆ ಬುರುಡೆ, ಮೂಳೆ ಅವನದ್ದೇ ಇರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ.

Read More

ಹುಬ್ಬಳ್ಳಿ : ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಹೃದಯಾಘಾತ ಅನ್ನೋದು ಸಾಮಾನ್ಯ ಕಾಯಿಲೆಯಾಗಿದೆ. ಇದೀಗ ಬಟ್ಟೆ ಅಂಗಡಿ ಸಿಬ್ಬಂದಿಯೊಬ್ಬ ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಹುಬ್ಬಳ್ಳಿಯ ಕಂಚಗಾರ ಗಲ್ಲಿಯ ಎನ್.ಆರ್.ಸಾರಿ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ರಾಜಸ್ಥಾನ ಮೂಲದ ಭವರ್ ಸಿಂಗ್ (43) ಎಂದು ಗುರುತಿಸಲಾಗಿದೆ. ನಗರದ ಕಂಚಗಾರ ಗಲ್ಲಿಯಲ್ಲಿರುವ ಎನ್​ಆರ್ ಸಾರಿ ಸೆಂಟರ್​ನಲ್ಲಿ ಗ್ರಾಹಕರಿಗೆ ಬಟ್ಟೆ ತೋರಿಸುವಾಗ ಏಕಾಏಕಿ ಕೂತಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಇನ್ನೋರ್ವ ಸಿಬ್ಬಂದಿ ಆತನನ್ನು ಮೇಲಕೆತ್ತಲು ಯತ್ನಿಸಿದರೂ ಎಚ್ಚರಗೊಂಡಿಲ್ಲ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಿಲ್ಲ. ಆಸ್ಪತ್ರೆಗೆ ದಾಖಲಿಸುವ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

Read More

ರಾಯಚೂರು : ಕರ್ನಾಟಕ ಪಕ್ಕದ ರಾಜ್ಯ ತೆಲಂಗಾಣದಲ್ಲಿ ಇತ್ತೀಚೆಗೆ ಹಕ್ಕಿ ಜ್ವರದಿಂದ ಸಾವಿರಾರು ಸಂಖ್ಯೆಯಲ್ಲಿ ಪಕ್ಷಿಗಳು ಸಾವನ್ನಪ್ಪುತ್ತಿರುವ ಘಟನೆ ವಾರದಿಯಾಗಿದ್ದು, ಇದೀಗ ಈ ಹಕ್ಕಿ ಜ್ವರ ಕರ್ನಾಟಕಕ್ಕೂ ಕಾಲಿಟ್ಟಿರುವ ಶಂಕೆ ವ್ಯಕ್ತವಾಗುತ್ತಿದ್ದು, ಇದೀಗ ರಾಯಚೂರಿನಲ್ಲಿ ಕಳೆದ ಒಂದು ವಾರದಿಂದ ಪಕ್ಷಿಗಳು ಸರಣಿ ಸಾವನಪುತ್ತಿರುವುದು ಜನರಲ್ಲಿ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಹೌದು ಪಕ್ಕದ ತೆಲಂಗಾಣದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ರಾಯಚೂರು ಜಿಲ್ಲೆಯಲ್ಲಿ ಹಲವು ಪಕ್ಷಗಳ ನಿಗೂಢ ಸಾವಾಗುತ್ತಿದೆ ರಾಯಚೂರಲ್ಲು ಕೂಡ ಹಕ್ಕಿ ಜ್ವರ ಹರಡಿರುವ ಶಂಕೆ ವ್ಯಕ್ತವಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಪಕ್ಷಿಗಳ ಸರಣಿ ಸಾವುಗಳಾಗುತ್ತಿವೆ. ಪಾರಿವಾಳ, ಕೊಕ್ಕರೆ, ಕಾಗೆ ಹಾಗು ಸುವರ್ಣ ಪಕ್ಷಿಗಳ ಸಾವುಗಳಾಗುತ್ತಿವೆ. ಮಾನ್ವಿ ತಾಲೂಕಿನ ಮಕ್ಸೂದ್ ಅಲಿ ತೋಟದಲ್ಲಿ 8 ರಿಂದ 10 ಪಕ್ಷಿಗಳು ಸಾವನ್ನಪ್ಪಿವೆ. ನಾಲ್ಕು ಐದು ದಿನಗಳಿಂದ ತಾಲೂಕಿನ ಹಲವೆಡೆ ಪಕ್ಷಿಗಳ ಸಾವು ಆಗುತ್ತಿರುವುದು ಜನರಲ್ಲಿ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಮಾನ್ವಿ ಸೇರಿದಂತೆ ಹಲವು ಕಡೆ ಹಕ್ಕಿಗಳು ಪಕ್ಷಿಗಳು ಸಾವನ್ನಪುತ್ತಿವೆ. ಈ ವೇಳೆ ಪಶು…

Read More

ಬೆಂಗಳೂರು : ಡಿಕೆ ಶಿವಕುಮಾರ್ ಬಿಜೆಪಿ ನಾಯಕರಿಗೆ ಹತ್ತಿರ ಆಗುತ್ತಿದ್ದಾರೆ ಎಂಬ ವಿಚಾರವಾಗಿ, ನಾನು ಇನ್ನೂ ಅಮಿತ್ ಶಾ ಅವರನ್ನೇ ಭೇಟಿ ಮಾಡಿಲ್ಲ. ನಾನು ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ ಹಿಂದೂ ಆಗಿಯೆ ಸಾಯುತ್ತೇನೆ. ಜೈಲಿನಲ್ಲಿ ಇದ್ದಾಗ ಸಿಖ್ ಧರ್ಮದ ಕುರಿತು ಕಲಿತಿದ್ದೇನೆ. ದರ್ಗಾಕ್ಕೂ ಹೋಗುತ್ತೇನೆ. ಚರ್ಚ್ ಗೂ ಕೂಡ ಹೋಗುತ್ತೇನೆ. ಅವರೆಲ್ಲ ಆಶೀರ್ವಾದ ಮಾಡುತ್ತಾರೆ. ಎಲ್ಲಾ ಸಮುದಾಯದವರು ನನ್ನನ್ನು ಪ್ರೀತಿಸುತ್ತಾರೆ ಮತ್ತು ಗೌರವಿಸುತ್ತಾರೆ. ಕುಂಭಮೇಳ ಉತ್ತಮವಾಗಿ ಸಂಘಟಿಸಿದ್ದರು ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಜೊತೆ ನಾನು ಯಾವುದೇ ಸಂಪರ್ಕ ಇಟ್ಟುಕೊಂಡಿಲ್ಲ. ಪಾಪ ನಾನು ಇನ್ನೂ ಅಮಿತ್ ಶಾ ಅವರನ್ನು ಭೇಟಿನೆ ಮಾಡಿಲ್ಲ ಆಗಲೇ ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿಗೆ ಹತ್ತಿರ ಎಂದು ವೈರಲ್ ಆಗುತ್ತಿದೆ ಎಂದು ಅವರು ತಿಳಿಸಿದರು. ಭಗವಂತ ಬಂದರು ಬೆಂಗಳೂರು ಸರಿಪಡಿಸಲು ಆಗಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಬಿಜೆಪಿ ನಾಯಕರು ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆ ಒತ್ತಾಯಿಸಿದ್ದರು. ಇದೀಗ ಬಿಜೆಪಿ ನಾಯಕರು ಒತ್ತಾಯಕ್ಕೆ…

Read More

ಬೆಂಗಳೂರು : ಶಿವರಾತ್ರಿಯಂದೆ ಬೆಂಗಳೂರಿನಲ್ಲಿ ಘೋರವಾದ ಘಟನೆ ನಡೆದಿದ್ದು, ಪತಿ-ಪತ್ನಿ ನಡುವೆ ಕ್ಷುಲ್ಲಕ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆ ಮಾಡಿ ಬಳಿಕ ಮನನೊಂದು ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ತಿಗಳರಪಾಳ್ಯದ ಮುಬಾರಕ್ ನಗರದಲ್ಲಿ ನಡೆದಿದೆ.ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಪತಿ ಪತ್ನಿಗೆ ಹಿಂಸೆ ಕೊಡ್ತಿದ್ದ ಎಂದು ಪತ್ನಿ ಪೋಷಕರ ಬಳಿ ಆಳಲು ತೋಡಿಕೊಂದಿದ್ದಾಳೆ. ಮೃತರನ್ನು ಸುರೇಶ್ (40) ಹಾಗೂ ಈತನ ಪತ್ನಿ ಮಮತಾ (33) ಎಂದು ಗುರುತಿಸಲಾಗಿದೆ. ಲೈಂಗಿಕ ವಿಡಿಯೋ ತೋರಿಸಿ ವಿಡಿಯೋದಲ್ಲಿರುವಂತೆ ಸಹಕರಿಸುವಂತೆ ಆತ್ಮಹತ್ಯೆ ಮಾಡಿಕೊಂಡ ಸುರೇಶ್ ಪತ್ನಿ ಮಮತಾಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ರ್. ಇದೆ ವಿಚಾರವಾಗಿ ಮಮತಾ ಪೋಷಕರ ಬಳಿ ಅಳಲು ತೋಡಿಕೊಂಡಿದ್ದಳು. ಲೈಂಗಿಕ ಕ್ರಿಯೆಗೆ ಸುರೇಶ್ ಹಪಹಪಿಸುತ್ತಿದ್ದನಂತೆ. ಲೈಂಗಿಕ ವಿಡಿಯೋ ತೋರಿಸಿ ವಿಡಿಯೋದಲ್ಲಿರುವಂತೆ ನನಗೆ ಸಹಕರಿಸು ಎಂದು ಪತ್ನಿಗೆ ಹಿಂಸೆ ನೀಡುತ್ತಿದ್ದ ಎಂದು ಮಮತಾ ಪೋಷಕರ ಬಳಿ ಸಂಕಷ್ಟ ಹೇಳಿಕೊಂಡಿದ್ದಳು. ಆತ್ಮಹತ್ಯೆ ಮಾಡಿಕೊಂಡಿರುವ ಸುರೇಶ್ ಆಟೋ…

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಕೂಡಲೇ ರಾಜ್ಯದಲ್ಲಿ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಪ್ರಮುಖವಾಗಿ ಮಹಿಳೆಯರಿಗೆ ಎಂದೆ ಜಾರಿಯಾಗಿರುವ ಶಕ್ತಿ ಯೋಜನೆ. ಇದುವರೆಗೂ ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ ಮಹಿಳೆಯರು ಒಟ್ಟು 400 ಕೋಟಿ ಬಾರಿ ಪ್ರಯಾಣಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಕುರಿತು ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶಕ್ತಿ ಯೋಜನೆಯು ಕರುನಾಡಿನಲ್ಲಿ ಶಕ್ತಿ ಸಂಚಾರವನ್ನೇ ಸೃಷ್ಟಿಸಿದೆ. ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿರುವುದು ಯೋಜನೆಯ ಯಶಸ್ಸಿಗೆ ಹಿಡಿದಿರುವ ಕೈಗನ್ನಡಿ. ಶಕ್ತಿ ಯೋಜನೆ ಜಾರಿಗೊಂಡ ನಂತರದಿಂದ 400 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದು ಸ್ವಾವಲಂಬಿ ಬದುಕಿನೆಡೆಗೆ ಮುಂದಡಿಯಿಟ್ಟಿದ್ದಾರೆ. ಈವರೆಗಿನ ಒಟ್ಟು ಟಿಕೆಟ್‌ ಮೌಲ್ಯ ರೂ.9,803 ಕೋಟಿ ಆಗಿದ್ದು, ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಶಕ್ತಿ ನವ ಇತಿಹಾಸ…

Read More