Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಪೋಸ್ಟ್ ಗೆ ಎಂದು ಬಂದಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈಯಲ್ಲಿ ಇರುವ ಒಂದೇ ಬ್ರಾಂಡ್ ವಾಚ್ ಎಲ್ಲರ ಗಮನ ಸೆಳೆದಿತ್ತು. ಇನ್ನು ಸಿಎಂ ಮತ್ತು ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಟೀಕೆ ಮಾಡಿರುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು 24 ಲಕ್ಷ ರೂಪಾಯಿ ಕೊಟ್ಟು ಈ ಗಡಿಯಾರ ನಾನೇ ಖರೀದಿ ಮಾಡಿದ್ದೇನೆ ನನ್ನದೇ ಕ್ರೆಡಿಟ್ ಕಾರ್ಡ್ ಕೊಟ್ಟು ಖರೀದಿಸಿದ್ದೇನೆ ಚೆಕ್ ಮಾಡಬಹುದು ಎಲೆಕ್ಷನ್ ಅಫೀಡಿವೇಟ್ ನಲ್ಲೂ ಕೂಡ ತೋರಿಸಿದ್ದೇನೆ ಎಂದರು. ಇನ್ನು ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ಗುರಿಯಾಗಿಸಿಕೊಂಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ನನಗೆ ಅದರ ಬಗ್ಗೆ ಗೊತ್ತಿಲ್ಲ ಸಿಎಂ ಸಿದ್ದರಾಮಯ್ಯ ಅವರಿಗೆ ವಾಚ್ ಹಾಕಿಕೊಳ್ಳುವ ಅಧಿಕಾರವಿದೆ ಸಿಎಂ ಸಿದ್ದರಾಮಯ್ಯ ಅವರಿಗೆ ವಾಜ್ ಖರೀದಿಸುವ ತಾಕತ್ತು ಕೂಡ ಇದೆ ನನ್ನ ತಂದೆ…
ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬೆಂಗಳೂರಲ್ಲಿ ಮಾರಾಟ ಮಾಡಲು ಶೇಖರಿಸಿಟ್ಟಿದ್ದ 28.75 ಕೋಟಿ ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕ ಮೂರು ಪ್ರಕರಣಗಳಲ್ಲಿ 10.369 ಕೆ.ಜಿ ಎಂಡಿಎಂಎ ಹಾಗೂ 8 ಕೆ.ಜಿ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈ ಡ್ರಗ್ಸ್ ಜಾಲದ ಸಂಬಂಧ ತಾಂಜೇನಿಯಾ ಮೂಲದ ನ್ಯಾನ್ಸಿ ಮತ್ತು ನೈಜೀರಿಯಾ ಮೂಲದ ಎಮುನಲ್ ಅರೆಂಜಿ ಇಡಿಕೋ ಎಂಬ ಇಬ್ಬರು ವಿದೇಶಿ ಪ್ರಜೆಗಳನ್ನು ಸಿಸಿಬಿ ಬಂಧಿಸಿದೆ. ಬಂಧಿತ ನ್ಯಾನ್ಸಿ ಮೂರು ವರ್ಷಗಳ ಹಿಂದೆ ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದಿದ್ದಳು. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ಈಕೆ ಡ್ರಗ್ ಪೆಡ್ಲಿಂಗ್ನಲ್ಲಿ ಸಕ್ರಿಯಳಾಗಿದ್ದಳು. ಈಕೆಗೆ ಸಹಕರಿಸುತ್ತಿದ್ದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಗಳು ಸ್ಥಳೀಯರು, ವಿದ್ಯಾರ್ಥಿಗಳು ಮತ್ತು ಐಟಿ-ಬಿಟಿ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಹೆಚ್ಚಿನ ಬೆಲೆಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಇನ್ನೊಬ್ಬ ಆರೋಪಿ ಎಮುನಲ್ ಅರೆಂಜಿ ಇಡಿಕೋ ನಾಲ್ಕು ವರ್ಷಗಳ ಹಿಂದೆ ವ್ಯಾಪಾರ ವೀಸಾದಡಿ ಭಾರತಕ್ಕೆ ಬಂದಿದ್ದ. ಸಿದ್ದಾಪುರ ಪೊಲೀಸ್…
ಮಂಡ್ಯ : ಇಂದು ಹನುಮ ಜಯಂತಿ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಸಂಕೀರ್ತನ ಯಾತ್ರೆ ನಡೆಯಿತು. ಜಾಮಿಯಾ ಮಸೀದಿ ಮುಂದೆ ಕುಳಿತು ಹನುಮ ಮಾಲಾಧಾರಿಗಳು ಭಜನೆ ಮಾಡಿದರು. ಈ ವೇಳೆ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡೆ ಅವರು ಹನುಮ ಮಾಲಾಧಾರಿಗಳ ಮನವೊಲಿಸಿದರು. ಬಳಿಕ ಮಾಲಾಧಾರಿಗಳು ಎಸ್ ಪಿ ಮನೋವೊಲಿಕೆಗೆ ನಂತರ ಮುಂದೆ ಸಾಗಿದರು. ಜಾಮಿಯಾ ಮಸೀದಿ ವೃತದಿಂದ ಹನುಮ ಮಾಲಾಧಾರಿಗಳು ಮುಂದೆ ಸಾಗಿದರು ಕೆಲವೇ ನಿಮಿಷಗಳಲ್ಲಿ ರಂಗನಾಥ ಸ್ವಾಮಿ ದೇವಾಲಯ ಬಳಿ ಯಾತ್ರೆ ಸಮಾಪ್ತಿ ಆಗಲಿದೆ. ಈ ವೇಳೆ ಜಾಮಿಯಾ ಮಸೀದಿ ಜಾಗ ನಮ್ಮದು ಎಂದು ಮಾಲಾಧಾರಿಗಳು ಘೋಷಣೆ ಕೂಗಿದರು. ಮಸೀದಿ ವೃತದಲ್ಲೇ ಹನುಮ ಮಾಲಾಧಾರಿಗಳು ಘೋಷಣೆ ಕೂಗುತ್ತಿದ್ದರು. ಈ ವೇಳೆ ಕೆಲವು ಹನುಮ ಮಾಲಾಧಾರಿಗಳು ಜಾಮಿಯ ಮಸೀದಿಗೆ ಹೋಗಲು ಯತ್ನಿಸಿದರು. ಪೊಲೀಸರು ಹಾಗೂ ಹನುಮ ಮಾಲಾಧಾರಿಗಳ ನಡುವೆ ಈ ಬೆಳೆ ವಾಗ್ವಾದ ನಡೆಯಿತು. ಹರಸಾಹಸ ಪಟ್ಟು ಮಾಲದಾರಿಗಳನ್ನು ಪೊಲೀಸರು ಮುಂದೆ ಕಳುಹಿಸಿದರು.
ಬೆಂಗಳೂರು : ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ಕಾಂತಾರ ಸೀಕ್ವೆಲ್’ನ ಸಿನಿಮಾವನ್ನು ನೋಡಿದ ನಟ ರಣವೀರ್ ಸಿಂಗ್ ಅವರು ಈ ಸಿನಿಮಾದಲ್ಲಿರುವ ಚಾವುಂಡಿ ದೈವವನ್ನು ಫೀಮೇಲ್ ಘೋಸ್ಟ್ ಎಂದು ಕರೆದು ಅದರ ನಟನೆಯ ಅನುಕರಣೆ ಮಾಡಿದ್ದರು. ಇದೀಗ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ದ ದೂರು ದಾಖಲಾಗಿದೆ. ಬಾಲಿವುಡ್ ಸ್ಟಾರ್ ನಟ ದೀಪಿಕಾ ಪಡುಕೋಣೆ ಪ, ಸ್ಟಾರ್ ನಟ ರಣವೀರ್ ಸಿಂಗ್ ವಿರುದ್ಧ ಇದೀಗ ಕರ್ನಾಟಕದಲ್ಲಿ, ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಣವೀರ್ ಸಿಂಗ್ ಅವರು ಕಾಂತಾರ ದೈವವನ್ನು ‘ದೆವ್ವ’ ಎಣಬ ಪದ ಉಪಯೋಗಿಸಿ ಕರೆದಿದ್ದು ದೊಡ್ಡ ವಿವಾದವಾಗುತ್ತಿದೆ.28 ನವೆಂಬರ್ 2025ರಂದು, ಗೋವಾದ ಇಂಟರ್ ನ್ಯಾಷನಲ್ ಫೀಲಂ ಫೆಸ್ಟಿವಲ್ ಆಫ್ ಇಂಡಿಯಾದಲ್ಲಿ ಈ ಘಟನೆ ನಡೆದಿತ್ತು. ಕಾಂತಾರ ಸಿನಿಮಾದ ಉಳ್ಳಾಳ್ತಿ ದೈವದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ನಟ ರಣವೀರ್ ಸಿಂಗ್ ವಿರುದ್ಧ ಇದೀಗ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ಕಾಂತಾರ…
ಶಿವಮೊಗ್ಗ : ರಾಜ್ಯದಲ್ಲಿ ಹೃದಯಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮದುವೆಯಾದ ಮರುದಿನವೇ ಕುಸಿದು ಬಿದ್ದು ನವ ವರ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಹನುಮಂತಾಪುರದ ಯುವಕ ಮದುವೆಯಾದ ಮರುದಿನವೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಮೇಶ್(30) ಮೃತಪಟ್ಟವರು. ಭಾನುವಾರ ಹರಪನಹಳ್ಳಿ ಸಮೀಪದ ಬಂಡ್ರಿಯ ಯುವತಿಯನ್ನು ರಮೇಶ್ ಮದುವೆಯಾಗಿದ್ದರು. ವಧುವಿನ ಮನೆಗೆ ನವ ದಂಪತಿ ತೆರಳಿದ್ದಾರೆ. ದೇವರ ಕೋಣೆಗೆ ಹೋಗಿ ಕೈಮುಗಿದು ಹೊರ ಬರುತ್ತಿದ್ದಂತೆ ರಮೇಶ್ ಹೃದಯಾಘಾತದಿಂದ ಕುಸಿತು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಮೃತಪಟ್ಟಿದ್ದಾರೆ.
ಬೆಂಗಳೂರು : ಕಳೆದ ಶನಿವಾರದಿಂದ ರಾಜ್ಯದಲ್ಲಿ ಬ್ರೇಕ್ ಫಾಸ್ಟ್ ರಾಜಕಾರಣ ಜೋರಾಗಿತ್ತು. ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಗೆ ಕರೆದು ಬ್ರೇಕ್ ಫಾಸ್ಟ್ ಮೀಟಿಂಗ್ ಆರೇಂಜ್ ಮಾಡಿದ್ದರು. ಬಳಿಕ ನಿನ್ನೆ ಡಿಕೆ ಶಿವಕುಮಾರ್ ಖುದ್ದು ಸಿಎಂ ಸಿದ್ದರಾಮಯ್ಯಗೆ ಅಹ್ವಾನ ನೀಡಿದ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು. ಇದೀಗ ಇಂದು ರಾಜ್ಯಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಆಗಮಿಸಿದ್ದು, ಮಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಲಂಚ್ ಮೀಟಿಂಗ್ ಅರೇಂಜ್ ಮಾಡಿದ್ದಾರೆ. ಮಂಗಳೂರಲ್ಲಿ ಕಾವೇರಿ ಗೆಸ್ಟ್ ಹೌಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಕೆ.ಸಿ ವೇಣುಗೋಪಾಲ್ ಸೇರಿದಂತೆ ಹಲವು ಸಚಿವರು ಭಾಗಿಯಾಗಲಿದ್ದಾರೆ. ಸಿಎಂಗೆ ಖಾದ್ಯ ರೆಡಿ ಡಿಕೆ ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಗೆ ಸಿಎಂ ಫೆವರೇಟ್ ನಾಟಿಕೋಳಿ ಸಾರು ಮಾಡಿದ್ದರು. ಇದೀಗ ಮಂಗಳೂರಲ್ಲಿ ಸಹ ನಾಟಿ ಕೋಳಿ ಸಾರು ಸೇರಿದಂತೆ ಮಂಗಳೂರಿನ ಹಲವು ಖಡಯಗಳನ್ನು ತಯ್ಯಾರಿಸಲಾಗಿದೆ. ಕೆಲವೇ ಕ್ಷಣಗಳಲ್ಲಿ ಲಂಚ್ ಮೀಟಿಂಗ್ ಆರಂಭವಾಗಲಿದೆ. ರಾಜ್ಯದ ಬೆಳವಣಿಗೆ ಬಗ್ಗೆ ವೇಣುಗೋಪಾಲ್ ಮಾಹಿತಿ ಸಂಗ್ರಹಿಸಲಿದ್ದಾರೆ. https://twitter.com/siddaramaiah/status/1996110251494711411?t=IiQqITxUyGSvFXF6VLRNZw&s=19
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಂದ ವಶಪಡಿಸಿಡ್ಕೊಂಡ 82 ಲಕ್ಷ ಹಣವನ್ನು ಇದೀಗ ಐಟಿ ಅರ್ಜಿ ಪುರಸ್ಕರಿಸಿ ಆದಾಯ ತೆರಿಗೆ ಇಲಾಖೆ ವಶಕ್ಕೆ ನೀಡಿ ಬೆಂಗಳೂರಿನ 57ನೇ CCH ಕೋರ್ಟ್ ಆದೇಶ ಹೊರಡಿಸಿದೆ. ಇಂದು ಬೆಂಗಳೂರಿನ 57ನೇ CCH ಕೋರ್ಟ್ ನಲ್ಲಿ ಆದಾಯ ತೆರಿಗೆ ಇಲಾಖೆ ಮುಂದೆ ದರ್ಶನ್ ತಕರಾರು ಸಲ್ಲಿಸಬಹುದು. ಐಟಿ ಹಣ ಬಿಡುಗಡೆ ಮಾಡಿದರೆ ದರ್ಶನ್ ಹಣ ಹಿಂಪಡೆಯಬಹುದು. ಹಣ ಹಿಂತಿರುಗಿಸುವಂತೆ ಕೋರಿದ್ದ ಅರ್ಜಿ ಸಂಬಂಧ ಆದೇಶ ನೀಡಿದೆ.
ಬೆಂಗಳೂರು : ಇಲ್ಲಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ 42 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದ್ದು, ಅಗತ್ಯ ತಪಾಸಣೆ ಹಾಗೂ ಇತರ ಕಾರಣಗಳಿಂದ ಫ್ಲೈಟ್ ಕ್ಯಾನ್ಸಲ್ ಮಾಡಲಾಗಿದೆ ಎಂದು ಇಂಡಿಗೋ ಮಾಹಿತಿ ನೀಡಿದೆ. ವಿಮಾನ ಹಾರಾಟ ರದ್ದುಗೊಂಡಿದ್ದಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಇಂಡಿಗೋ ವಿರುದ್ಧ ಜನರು ಕಿಡಿಕಾರಿದ್ದಾರೆ. ಇದರ ಬೆನ್ನಲ್ಲೇ ಇಂಡಿಗೋ ಪ್ರತಿಕ್ರಿಯೆ ನೀಡಿದ್ದು, ಅಗತ್ಯ ತಪಾಸಣೆ ಹಾಗೂ ಕಾರ್ಯಾಚರಣೆ ಕಾರಣಗಳಿಂದ ಫ್ಲೈಟ್ ಕ್ಯಾನ್ಸಲ್ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ. ಹೈದರಾಬಾದ್, ಮುಂಬೈ, ಚೆನ್ನೈ, ದೆಹಲಿ, ಗೋವಾ ಕೋಲ್ಕತ್ತಾ ಹಾಗೂ ಅಹಮದಾಬಾದ್ನಿಂದ ಬೆಂಗಳೂರಿಗೆ ಬರಬೇಕಿದ್ದ 22 ವಿಮಾನ ಹಾಗೂ ಬೆಂಗಳೂರಿನಿಂದ ಬೇರೆ ನಗರಗಳಿಗೆ ಸಂಚರಿಸಬೇಕಿದ್ದ 20 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಈ ಪೈಕಿ ಒಟ್ಟು 42 ವಿಮಾನಗಳ ಹಾರಾಟ ರದ್ದಾಗಿದೆ.
ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಮತ್ತೊಂದು ಶಾಕ್ ನೀಡಿದೆ ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್ ಇದೀಗ ನಿರಾಕರಿಸಿದೆ. ಇಂದು ಜೀವಿತಾವರಿ ಸೆರೆವಾಸದ ಶಿಕ್ಷಕ ಪ್ರಶ್ನೆಸಿ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಿತು ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ಕೋರಿದ್ದ ಮಧ್ಯಂತರ ಅರ್ಜಿಯನ್ನು ಹೈ ಕೋರ್ಟ್ ವಜಾ ಗೊಳಿಸಿದೆ ನ್ಯಾಯಮೂರ್ತಿ ಕೆ ಎಸ್ ಮುದುಗಲ್ ಹಾಗೂ ಟಿ ವೆಂಕಟೇಶ ನಾಯಕ ಅವರಿದ್ದ ಪೀಠ ಆದೇಶ ಹೊರಡಿಸಿದೆ
ಬೆಂಗಳೂರು : ನಿನ್ನೆವರೆಗೂ ರಾಜ್ಯದಲ್ಲಿ ಬ್ರೇಕ್ ಫಾಸ್ಟ್ ರಾಜಕೀಯ ಜೋರಾಗಿತ್ತು. ಕಳೆದ ಶನಿವಾರ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಹ್ವಾನ ನೀಡಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿ ಸಿಎಂ ಬದಲಾವಣೆಗೆ ಬ್ರೇಕ್ ಹಾಕಿದ್ದರು. ಇನ್ನು ನಿನ್ನೆ ಡಿಕೆ ಶಿವಕುಮಾರ್ ತಮ್ಮ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯರನ್ನು ಆಹ್ವಾನಿಸಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಡಿಸಿಎಂ ಡಿಕೆ ಶಿವಕುಮಾರ್ ಬ್ರದರ್ಸ್. ನಮ್ಮ ಪಕ್ಷವು ಒಂದೇ, ಸಿದ್ಧಾಂತವು ಒಂದೇ ಎಂದು ಹೇಳುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು. ಇದೀಗ ಇಂದು ಮಾಧಹ್ನ 3 ಗಂಟೆಗೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ. ಹಾಗಾಗಿ ಹೈಕಮಾಂಡ್ ಅವರನ್ನು ಭೇಟಿ ಮಾಡ್ತಾರಾ ಎನ್ನುವ ಕುತೂಹಲ ಮೂಡಿಸಿದೆ.














