Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಬೆಂಗಳೂರಲ್ಲಿ 7.11 ಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿದ್ದಾಪುರ ಠಾಣೆ ಪೋಲೀಸರು ಇದೀಗ ಬೆಂಗಳೂರಿನ 56ನೇ ACMM ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪೊಲೀಸರು ಕೋರ್ಟಿಗೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ನಲ್ಲಿ 9 ಆರೋಪಿಗಳ ಹೆಸರು ಉಲ್ಲೇಖ ಮಾಡಿದ್ದಾರೆ. ಪ್ರಕರಣ ಸಂಬಂಧ 129 ಸಾಕ್ಷಿಗಳನ್ನು ಪೊಲೀಸರು ಸಂಗ್ರಹಿಸಿದ್ದರು. ಇದೀಗ ನ್ಯಾಯಾಲಯಕ್ಕೆ 1328 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರು : ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ, ಇಂದು ಭಾರತ್ ಬಂದ್ ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ಹಾಗೂ ವಾಗ್ವಾದ ನಡೆಯಿತು. ಹೌದು ಇಂದು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಬೆಂಗಳೂರಿನ ಟೌನ್ ಹಾಲ್ ಬಳಿ ವಿವಿಧ ಕಾರ್ಮಿಕ ಸಂಘಟನೆಗಳು ಧರಣಿ ನಡೆಸಿದರು. ಧರಣಿ ಮಾಡಲು ಎರಡು ಲಾರಿಗಳಲ್ಲಿ ಕಾರ್ಮಿಕರು ಬಂದಿದ್ದರು. ಈ ವೇಳೆ ಪೊಲೀಸರು ಧರಣಿಗೆ ಮುಂದಾದ ಕಾರ್ಮಿಕರನ್ನು ತಡೆದರು. ಇಲ್ಲಿ ಧರಣಿಗೆ ಅವಕಾಶ ಇಲ್ಲ ಎಂದು ಪೊಲೀಸರು ತಿಳಿಸಿದರು. ಆಗ ಪೊಲೀಸರು ವಿರುದ್ಧ ಪ್ರತಿಭಟನಾ ನಿರತ ಕಾರ್ಮಿಕರು ಆಕ್ರೋಶ ಹೊರ ಹಾಕಿದರು. ಕಾರ್ಮಿಕರು ಮತ್ತು ಪೊಲೀಸರ ನಡುವೆ ವಾಗ್ವಾದ ನೂಕಾಟ ತಳಾಟ ನಡೆಯಿತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ…
ಇಂದಿನ ವಾತಾವರಣದಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚುತ್ತಿದೆ. ಒಳ್ಳೆಯದಕ್ಕೆ ಖರ್ಚು ಮಾಡಿದರೆ ಖರ್ಚು ಮಾಡುವುದು ದೊಡ್ಡ ಮಾನಸಿಕ ನ್ಯೂನತೆಯಲ್ಲ. ಆದರೆ ನಮ್ಮ ಹಣವನ್ನು ಅನಗತ್ಯ ವಿಷಯಗಳಿಗೆ ಮತ್ತು ವೈದ್ಯಕೀಯ ವೆಚ್ಚಗಳಿಗೆ ವ್ಯರ್ಥ ಮಾಡುವುದನ್ನು ಮುಂದುವರೆಸಿದರೆ, ಅದು ನಮಗೆ ಅನಾನುಕೂಲವನ್ನು ಉಂಟುಮಾಡುತ್ತದೆ. ಈ ಪರಿಸ್ಥಿತಿಯನ್ನು ಎಷ್ಟರ ಮಟ್ಟಿಗೆ ಬದಲಾಯಿಸಬಹುದು ಎಂಬುದು ತಿಳಿದಿಲ್ಲ. ಆದರೆ ಆದಾಯವನ್ನು ಹೆಚ್ಚಿಸುವುದರಿಂದ ವೆಚ್ಚವನ್ನು ಕಡಿಮೆ ಮಾಡಬಹುದು, ಆದರೆ ಖರ್ಚು ಮಾಡದಿರುವುದು ಅಸಾಧ್ಯ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ 1 ರೂಪಾಯಿ ಖರ್ಚನ್ನೂ 1000 ರೂಪಾಯಿಗಳಾಗಿ ಪರಿವರ್ತಿಸಲು ನಾವು ಏನು ಮಾಡಬೇಕೆಂದು ತಿಳಿಯಬಹುದು . ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು…
ಬೆಂಗಳೂರು : ಬೆಂಗಳೂರಲ್ಲಿ ರೋಡ್ ರೇಜ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಮತ್ತೊಂದು ರೋಡ್ ರೇಜ್ ಪ್ರಕರಣ ವರದಿಯಾಗಿದೆ. ಕ್ಯಾಮೆರಾದಲ್ಲಿ ರೋಡ್ ರೇಜಿನ ಭಯಾನಕ ದೃಶ್ಯ ಸೆರೆಯಾಗಿದೆ. ಬೆಂಗಳೂರಲ್ಲಿ ಕಾರು ಚಾಲಕನಿಂದ ಅಟ್ಟಹಾಸ ಮೆರೆದಿದ್ದು, ಕಾರಿನ ಬಾನೆಟ್ ಮೇಲೆ ಎಳೆದೊಯ್ದು ಅಟ್ಟಹಾಸ ಮೆರೆದಿದ್ದಾನೆ. ಸುಮಾರು 1 ಕಿಲೋಮೀಟರ್ ದೂರದವರೆಗೆ ವ್ಯಕ್ತಿಯನ್ನು ಕಾರಿನ ಬಾನೆಟ್ ಮೇಲೆ ಎಳೆದೋಯ್ದು ದರ್ಪ ತೋರಿದ್ದಾನೆ. ನಂಜುಂಡ ಎಂಬ ಚಾಲಕ ಗೂಡ್ಸ್ ಹಣದಲ್ಲಿ ಹೂವು ಸಾಗಿಸುತ್ತಿದ್ದ. ಟ್ರಿನಿಟಿ ಜಂಕ್ಷನ್ ಬಳಿ ಬಲ ತಿರುವು ಪಡೆಯುವಾಗ ಗಲಾಟೆ ಆಗಿದೆ ನಂಜುಂಡನಿಗೆ ಕಾರು ಚಾಲಕ ಸುರೇಶ್ ಅವಾಚ್ಯವಾಗಿ ನಿಂದಿಸಿದ್ದಾನೆ. ಹಿಂದೆ ಬಂದ ಕಾರು ಚಾಲಕ ಸುರೇಶ್ ನಿಂದ ಅವಾಚ್ಯವಾಗಿ ನಿಂದನೆ ಮಾಡಿದ್ದಾನೆ. ನಂತರ ಸಿವಿ ಜಂಕ್ಷನ್ ಬಳಿ ಮತ್ತೆ ಇಬ್ಬರ ಮಧ್ಯೆ ಗಲಾಟೆ ಆಗಿದೆ ಅವಾಚ್ಯ ಪದ ಬಳಕೆ ಪ್ರಶ್ನಿಸಿದ್ದ ಗೂಡ್ಸ್ ಚಾಲಕ ನಂಜುಂಡ. ಆ ಸಂದರ್ಭದಲ್ಲಿ ವ್ಯಕ್ತಿ ಎದುರುಗಡೆ ಇದ್ದಾನೆ ಎನ್ನುವುದನ್ನು ಕೇರ್ ಮಾಡದೆ ಆತನನ್ನು ಕಾರಿನ ಬಾನೆಟ್ ಮೇಲೆ…
BREAKING : ಸುಪ್ರೀಂ ಕೋರ್ಟ್ ನಲ್ಲೂ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಹೆಚ್ಚಿತು ಬಂಧನದ ಭೀತಿ!
ನವದೆಹಲಿ : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಭೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು. ಅದರ ಬದನಲ್ಲೇ ನಿನ್ನೆ ಭೈರತಿ ಬಸವರಾಜ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದರು. ಇದೀಗ ಸುಪ್ರೀಂ ಕೋರ್ಟ್ ಶಾಸಕ ಭೈರತಿ ಬಸವರಾಜ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಇದೀಗ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಗೊಳಿಸಿದೆ. ವಿಚಾರಣೆಯ ವೇಳೆ ನಿಯಮಿತ ಜಾಮೀನುಗೆ ಅರ್ಜಿ ಹಾಕಿ ಎಂದು ಸುಪ್ರೀಂ ಕೋರ್ಟ್ ಇದೆ ವೇಳೆ ತಿಳಿಸಿತು. ಹಾಗಾಗಿ ಶಾಸಕ ಭೈರತಿ ಬಸವರಾಜ ಮತ್ತಷ್ಟು ಬಂಧನದ ಭೀತಿ ಎದುರಾಗಿದೆ ಈಗಾಗಲೇ CID ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣ ಹಿನ್ನೆಲೆ? ಬೆಂಗಳೂರಿನ ಹಲಸೂರು ಕೆರೆ ಸಮೀಪದ ಮನೆಯೊಂದರ ಎದುರು 2025ರ ಜುಲೈನಲ್ಲಿ ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ ಕೊಲೆ ಆರೋಪದ ಮೇರೆಗೆ ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಬೈರತಿ ಬಸವರಾಜ್ ವಿರುದ್ಧ ಭಾರತೀನಗರ…
ನವದೆಹಲಿ : ದೆಹಲಿಗೆ ಹಾರಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಾಜ್ಯ ರಾಜಕೀಯದ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿಯ ಜನಪಥನಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಾವು ಅಸ್ಸಾಂ ಮತ್ತು ಬೇರೆ ಬೇರೆ ರಾಜ್ಯಗಳ ಚುನಾವಣೆಗಳ ಕುರಿತು ಚರ್ಚೆ ಮಾಡಿದ್ದೇವೆ. ನಮಗೆ ಇರುವಂತಹ ಎಲ್ಲಾ ವರದಿಗಳನ್ನು ಕೂಡ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಚರ್ಚೆ ಮಾಡಿದ್ದೇವೆ ಎಂದರು. ನಾನು ಒಳಗಡೆ ಯಾರ ಜೊತೆ ಏನು ಮಾತಾಡಿದೆ ಎನ್ನುವುದರ ಕುರಿತು ಬೀದಿಯಲ್ಲಿ ನಿಂತು ರಾಜಕಾರಣ ಮಾಡಲು ಆಗಲ್ಲ ನಾವು ನಮ್ಮ ವರಿಷ್ಠರ ಭೇಟಿ ಮಾಡಿದ್ದೇವೆ ಏನು ಮಾತನಾಡಬೇಕು ಮಾತನಾಡಿದ್ದೇವೆ. ಎಲ್ಲ ವಿಚಾರಗಳನ್ನು ತಿಳಿಸಲೇಬೇಕಲ್ವಾ ಹಾಗಾಗಿ ತಿಳಿಸಿದ್ದೇನೆ. ಏನು ಬೇಕು ಅದೆಲ್ಲರ ಕುರಿತು ಮಾತನಾಡಿದ್ದು…
ನವದೆಹಲಿ : ದೆಹಲಿಗೆ ಹಾರಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಾಜ್ಯ ರಾಜಕೀಯದ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿಯ ಜನಪಥನಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಾವು ಅಸ್ಸಾಂ ಮತ್ತು ಬೇರೆ ಬೇರೆ ರಾಜ್ಯಗಳ ಚುನಾವಣೆಗಳ ಕುರಿತು ಚರ್ಚೆ ಮಾಡಿದ್ದೇವೆ. ನಮಗೆ ಇರುವಂತಹ ಎಲ್ಲಾ ವರದಿಗಳನ್ನು ಕೂಡ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಚರ್ಚೆ ಮಾಡಿದ್ದೇವೆ ಎಂದರು. ನಾನು ಒಳಗಡೆ ಯಾರ ಜೊತೆ ಏನು ಮಾತಾಡಿದೆ ಎನ್ನುವುದರ ಕುರಿತು ಬೀದಿಯಲ್ಲಿ ನಿಂತು ರಾಜಕಾರಣ ಮಾಡಲು ಆಗಲ್ಲ ನಾವು ನಮ್ಮ ವರಿಷ್ಠರ ಭೇಟಿ ಮಾಡಿದ್ದೇವೆ ಏನು ಮಾತನಾಡಬೇಕು ಮಾತನಾಡಿದ್ದೇವೆ. ಎಲ್ಲ ವಿಚಾರಗಳನ್ನು ತಿಳಿಸಲೇಬೇಕಲ್ವಾ ಹಾಗಾಗಿ ತಿಳಿಸಿದ್ದೇನೆ. ಏನು ಬೇಕು ಅದೆಲ್ಲರ ಕುರಿತು ಮಾತನಾಡಿದ್ದು…
ಬೆಂಗಳೂರು : ದೆಹಲಿಗೆ ಹಾರಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್ ಸುಮಾರು 20 ನಿಮಿಷಗಳ ಕಾಲ ರಾಜ್ಯ ರಾಜಕೀಯದ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿಯ ಜನಪಥನಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಹಾಗಾಗಿ ಇದೀಗ ಕಾಂಗ್ರೆಸ್ ಪಟ್ಟದ ಆಟ ರೋಚಕ ಘಟ್ಟಕ್ಕೆ ತಲುಪಿದೆ. ಹೈಕಮಾಂಡ್ ಮಟ್ಟದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಫೈನಲ್ ಆಟ ಆಡಿದ್ದು, ತಡರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದು ತೀವ್ರ ಕುತೂಹಲ ಮೂಡಿಸಿದೆ .
ಬೆಂಗಳೂರು : ಕಾಂಗ್ರೆಸ್ ಪಕ್ಷದ ಕೆಲವು ಶಾಸಕರಿಂದ ಅಧ್ಯಯನದ ಹೆಸರಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದು ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಶಾಸಕರ ವಿದೇಶ ಪ್ರವಾಸಕ್ಕೆ ಬ್ರೇಕ್ ಹಾಕುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಸಿಎಂ ಸಿದ್ದರಾಮಯ್ಯ ಮತ್ತು ಕೆಲಸವರಿಗೆ ಹೈಕಮಾಂಡ್ ನಾಯಕರು ಕರೆ ಮಾಡುವ ಸಾಧ್ಯತೆಯಿದ್ದು ದೂರವಾಣಿ ಮೂಲಕ ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಶಾಸಕರಿಗೆ ಬ್ರೇಕ್ ಹಾಕುವ ಸಾಧ್ಯತೆ ಇದು ಈಗಾಗಲೇ ಹೈಕಮಾಂಡ್ ನಾಯಕರು ಶಾಸಕರ ವಿದೇಶ ಪ್ರವಾಸದ ಕುರಿತು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟಾಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬೆಲ್ಗೆ ಬಿಗ್ ಶಾಕ್ ನೀಡಿದ್ದು, ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಬಿಸಿ ಮುಟ್ಟಿಸಿದೆ. ಬೆಂಗಳೂರು, ಮೈಸೂರು ದಾವಣಗೆರೆ ಜಿಲ್ಲೆಗಳಲ್ಲಿ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. PWD ಚೀಫ್ ಇಂಜಿನಿಯರ್ ಪುರುಷೋತ್ತಮ ದಾಸ್ ಎಂಬುವವರಿಗೆ ಸೇರಿದ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ 5 ಕಡೆ, ಬೆಂಗಳೂರಿನಲ್ಲಿ 6 ಕಡೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳ ಹುಡುಕಾಟ ನಡೆಸಿದ್ದಾರೆ. ಇನ್ನು ದಾವಣಗೆರೆಯ ಬೆಸ್ಕಾಂನ ಸಿವಿಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಜುನ್ ವಿರುದ್ಧ ಆದಾಯ ಮೀರಿ ಅಪಾರ ಪ್ರಮಾಣದ ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತ್ರತ್ವದ ತಂಡ ದಾಳಿ ನಡೆಸಿದೆ. ಬೆಸ್ಕಾಂ ಇಂಜಿನಿಯರ್ ಆರ್.ಹೆಚ್ ಅರ್ಜುನ್ ಅವರ ಮನೆ ಹಾಗೂ ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.














