Author: kannadanewsnow05

ಬೆಂಗಳೂರು : ಪಾನಮತ್ತರಾಗಿ ಕುಡಿದು ಬಂದು ಗಲಾಟೆ ಮಾಡುತ್ತಿದ್ದವರನ್ನು ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. https://kannadanewsnow.com/kannada/deepak-mehrotra-appointed-ceo-of-byjus-groups-aakash-educational-services/ ಏಪ್ರಿಲ್ 4ರಂದು ಚಾಲಕ ನಾಗೇಂದ್ರ ಹಾಗೂ ನಿರ್ವಾಹಕ ಮಹೇಶ್ ಕರ್ತವ್ಯ ಮುಗಿಸಿ ಕುಮಾರಸ್ವಾಮಿ ಲೇಔಟ್‍ನ 15E ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಮಲಗಿದ್ದರು. ರಾತ್ರಿ 12.30ರ ಸಮಯದಲ್ಲಿ ಪಾನಮತ್ತರಾಗಿ ಸ್ಥಳಕ್ಕೆ ಬಂದಿದ್ದ ನಾಲ್ವರು ಜೋರಾಗಿ ಕೂಗಾಡುತ್ತಿದ್ದರು. ಯಾಕೆ ಗಲಾಟೆ ಮಾಡುತ್ತೀರಿ ಗಲಾಟೆ ಮಾಡಬೇಡಿ ಎಂದು ಹೇಳಿದ್ದಾರೆ. https://kannadanewsnow.com/kannada/bengaluru-transgenders-harassed-by-fake-police/ ಇದನ್ನು ಕೇಳಿದ್ದೆ ತಡ ಕೋಪಗೊಂಡ ಕಿಡಿಗೇಡಿಗಳು ನಾವು ಏನಾದರೂ ಮಾಡುತ್ತೇವೆ ನಿನಗ್ಯಾಕೆ? ಎಂದಿದ್ದಾರೆ.ಈ ವೇಳೆ ಬಸ್‍ನಿಂದ ಕೆಳಗಿಳಿದ ನಾಗೇಂದ್ರ, ಯಾಕೆ ಬೈಯುತ್ತಿದ್ದೀರಿಎಂದಾಗ ಆರೋಪಿಯೊಬ್ಬ ಕೈಯಿಂದ ನಾಗೇಂದ್ರ ಅವರ ಮುಖಕ್ಕೆ ಹಲ್ಲೆ ಮಾಡಿ, ಮಚ್ಚು ಬೀಸಿದ್ದಾನೆ. ಈ ವೇಳೆ ತಪ್ಪಿಸಿಕೊಳ್ಳಲು ಕೈ ಅಡ್ಡ ಹಾಕಿದಾಗ ಎರಡು ಬೆರಳುಗಳಿಗೆ ಪೆಟ್ಟು ಬಿದ್ದಿದೆ. ತಕ್ಷಣ ನಿರ್ವಾಹಕ ಮಹೇಶ್ ಸಹಾಯಕ್ಕೆ ಧಾವಿಸಿದಾಗ ಆರೋಪಿಗಳು…

Read More

ಬೆಂಗಳೂರು : ತಾನು ಪೊಲೀಸ್ ಎಂದು ಹೇಳಿ ನಾನು ಬಂದಾಗ ಎಲ್ಲರೂ ಮಾಮೂಲಿ ಕೊಡಬೇಕು ಎಂದು ಹೆದರಿಸಿ ಮಂಗಳಮುಖಿಯರಿಗೆ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಮಾದನಾಯಕನ ಹಳ್ಳಿಯಲ್ಲಿ ನಡೆದಿದೆ. ಪೊಲೀಸ್ ಎಂದು ಹೇಳಿ ಮಂಗಳಮುಖಿಯರಿಗೆ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಫೇಕ್ ಪೊಲೀಸ್ ಹೆಸರಲ್ಲಿ ರಾಮಾಂಜಿನೇಯ ಎಂಬುವವನಿಂದ ಮಂಗಳಮುಖಿಯರಿಗೆ ಕಿರುಕುಳ ನೀಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ. ನಾನು ಬಂದಾಗ ಮಾಮೂಲಿ ಕೊಡಬೇಕು ಎಂದು ಮಂಗಳಮುಖಿಯರಿಗೆ ಫೇಕ್ ಪೊಲೀಸ್ ಬೆದರಿಕೆ ಹಾಕಿದ್ದಾನೆ. ಮಾಮೂಲಿ ಕೊಡದಿದ್ದರೆ ತೊಂದರೆ ಕೊಡುತ್ತೇನೆ ಎಂದು ಅವರಿಗೆ ಬೆದರಿಕೆ ಹಾಕಿದ್ದಾನೆ.ರಕ್ಷಣೆ ಕೋರಿ ಮಾದನಾಯಕನಹಳ್ಳಿ ಪೊಲೀಸ್ ರಿಗೆ ಮಂಗಳಮುಖಿಯರು ಮನವಿ ಮಾಡಿದ್ದಾರೆ. ನಮಗೆ ರಕ್ಷಣೆ ನೀಡುವಂತೆ ಈಗ ಪೊಲೀಸ್ರ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ವೈಟ್ಫೀಲ್ಡ್ ನಲ್ಲಿ ಮಾರ್ಚ್ ಒಂದರಂದು ಬಾಂಬೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್ಐಎ ಶಂಕಿತ ಮಾಜ್ ಮುನೀರ್ ತೀವ್ರ ವಿಚಾರಣೆಗೆ ಒಳಪಡಿಸಿದಾಗ ಪ್ರಕರಣದಲ್ಲಿ ಬಂಧಿತ ಶಂಕಿತ ಉಗ್ರ ಮಾಜ್​ ಮುನೀರ್ ಕೈವಾಡವಿರುವುದು ಧೃಡವಾಗಿದೆ. ಶಂಕಿತ ಉಗ್ರ ಮಾಜ್​ ಮುನೀರ್ ಎನ್​ಐಎ (NIA) ಕಸ್ಟಡಿಯಲ್ಲಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬಾಯಿ ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮಾರ್ಚ್​ 1 ರಂದು ರಾಮೇಶ್ವರಂ ಕೇಫೆಯಲ್ಲಿ ಸ್ಫೋಟ ಸಂಭವಿಸಿತ್ತು. ಇದಾದ ಬೆನ್ನಲ್ಲೇ ಎನ್​ಐಎ ಅಧಿಕಾರಿಗಳು ಮಾರ್ಚ್​ 4ರ ರಾತ್ರಿ ಪರಪ್ಪನ ಅಗ್ರಹಾರದ ಮೇಲೆ ದಾಳಿ ಮಾಡಿ, ಶಂಕಿತ ಉಗ್ರ ಮಾಜ್​ ಮುನೀರ್​ನನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಶಂಕಿತ ಉಗ್ರ ಮಾಜ್​ ಮುನೀರ್ ಸತ್ಯ ಬಾಯಿಬಿಟ್ಟಿದ್ದಾನೆ. ಮಾರ್ಚ್​ 4ರ ರಾತ್ರಿ ಪರಪ್ಪನ ಅಗ್ರಹಾರ ಸೇರಿದಂತೆ ದೇಶದ 18 ಜೈಲುಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿ ಪರಿಶೀಲಿಸಿದ್ದರು. ಈ ಸಮಯದಲ್ಲಿ ಪರಪ್ಪನ ಅಗ್ರಹಾರದಲ್ಲಿದ್ದ ಶಂಕಿತ ಉಗ್ರ ಮಾಜ್​ ಮುನೀರ್​ನನ್ನು ಎನ್​ಐಎ ಅಧಿಕಾರಿಗಳು ಎಂಟು…

Read More

ರಾಮನಗರ : ಸಮಾಜದಲ್ಲಿ ಆದಾಗ ವೈದ್ಯಕೀಯ ಲೋಕಕ್ಕೂ ಸವಾಲು ಹಾಗೂ ಅಚ್ಚರಿಗೊಳಿಸುವಂತಹ ಘಟನೆಗಳು ಜರುಗುತ್ತವೆ.ಇದೀಗ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹುಚ್ಚದೊಡ್ಡಯ್ಯನ ಹಳ್ಳಿ ಎಂಬ ಗ್ರಾಮದಲ್ಲಿ ವೈದ್ಯಕೀಯ ಲೋಕಕ್ಕೆ ಅಚ್ಚರಿ ಆಗುವಂಥ ಘಟನೆ ನಡೆದಿದ್ದು, ಸತ್ತ ವ್ಯಕ್ತಿಯ ಶವ ಸಂಸ್ಕಾರಕ್ಕೆ ಎಂದು ಕೊಂಡೊಯ್ಯುವಾಗ ತಕ್ಷಣ ಸತ್ತಿರುವ ವ್ಯಕ್ತಿ ಎದ್ದು ಕುಳಿತಿರುವ ಅಚ್ಚರಿಯ ಘಟನೆ ನಡೆದಿದೆ. ಹೌದು ರಾಮನಗರ ಜಿಲ್ಲೆಯಲ್ಲಿ ಒಂದು ವೈದಿಕೀಯ ಲೋಕದ ಅಚ್ಚರಿ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹುಚ್ಚಯ್ಯನ ದೊಡ್ಡಿಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.ಬೆಳಗ್ಗೆ 6.30ಕ್ಕೆ ಕುಸಿದು ಬಿದ್ದು 55 ವರ್ಷದ ಶಿವರಾಮು ಎಂಬ ವ್ಯಕ್ತಿ ಸಾವನಪ್ಪಿದ್ದರು. ವೈದ್ಯರು ಸಹ ಆತ ಮೃತಪಟ್ಟಿದ್ದನ್ನು ದೃಢಪಡಿಸಿದ್ದರು. ಶಿವರಾಮ ಹೃದಯ ಘಾತದಿಂದ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದ್ದರು. ಈ ಕುರಿತಂತೆ ಸಂಬಂಧಿಕರಿಗೆ ಶಿವರಾಮ ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದರು. ಆದರೆ ಶವಸಂಸ್ಕಾರಕ್ಕೆ ಕೊಂಡೊಯ್ಯುವಾಗ ಶಿವರಾಮ ತಕ್ಷಣ ಎದ್ದು ಕುಳಿತಿದ್ದಾನೆ. ಶಿವರಾಮು ಎದುರುತ್ತಿದ್ದಂತೆ ವೈದ್ಯರಿಗೆ ಕುಟುಂಬಸ್ಥರು ಮಾಹಿತಿ…

Read More

ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲಾ ಪಕ್ಷಗಳ ನಾಯಕರ ನಡುವೆ ಪರಸ್ಪರ ಟಿಕೆ ಟಿಪ್ಪಣಿಗಳು ನಡೆಯುವುದು ಸಹಜ.ಇದೀಗ ಬೆಂಗಳೂರು ಕೇಂದ್ರದ ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿರುವ ಪಿಸಿ ಮೋಹನ ಅವರು ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗೆ ಇಳಿಸಲು ಕಾಂಗ್ರೆಸ್ ನಲ್ಲಿಯೇ ಯತ್ನ ನಡೆಯುತ್ತಿದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/good-news-for-epfo-employees-when-you-change-jobs-autotransfer-your-account/ ಸಿದ್ದರಾಮಯ್ಯ ರನ್ನು ಸಿಎಂ ಸ್ಥಾನದಿಂದ ಇಳಿಸಲು ಕಾಂಗ್ರೆಸ್ ನಲ್ಲಿ ಯತ್ನ ನಡೆಯುತ್ತಿದೆ ಬೆಂಗಳೂರು ಕೇಂದ್ರ ಬಿ ಜೆ ಪಿ ಅಭ್ಯರ್ಥಿ ಪಿಸಿ ಮೋಹನ್ ಹೇಳಿಕೆ ನೀಡಿದ್ದು ಸಿದ್ದರಾಮಯ್ಯರನ್ನ ಇಳಿಸಲು ಕೆಲ ಕಾಂಗ್ರೆಸ್ ಗರೆ ಓಡಾಡುತ್ತಿದ್ದಾರೆ ಎಂದು ತಿಳಿಸಿದರು. https://kannadanewsnow.com/kannada/siddaramaiahs-guarantee-is-nothing-before-modis-permanent-guarantee-bommai/ ಇನ್ನು ಕೇಂದ್ರದ ಬಳಿ ಬಿಜೆಪಿ ಸಂಸದರು ಅನುದಾನ ಕೇಳಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಪಿಸಿ ಮೋಹನ್ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರಿಗೆ ನಾವು ಸಾಕಷ್ಟು ಅನುದಾನವನ್ನು ತಂದಿದ್ದೇವೆ ತೇಜಸ್ವಿ ಸೂರ್ಯ ನಾನು ಡಿವಿ ಸದಾನಂದ ಗೌಡ ಅವರು ಹೆಚ್ಚು ಅನುದಾನ ತಂದಿದ್ದೇವೆ ಬೆಂಗಳೂರಿಗೆ ಸುಮಾರು 1.30 ಲಕ್ಷ ಕೋಟಿ…

Read More

ದಾವಣಗೆರೆ : ಈಗಾಗಲೇ ಬಿಜೆಪಿಯಲ್ಲಿ ಟಿಕೆಟ್ ಕೈತಪವಾಹಿ ನೆಲೆಯಲ್ಲಿ ಹಲವು ನಾಯಕರು ಬಂಡಾಯ ವೆಂದು ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಕಣಕ್ಕಿಳಿಯುತ್ತಿದ್ದಾರೆ ಅದರ ಜೊತೆಗೆ ಕಾಂಗ್ರೆಸ್ ನಲ್ಲೂ ಕೂಡ ಇದೀಗ ಬಂಡಾಯದ ಬಿಸಿ ಎದಿದ್ದು, ದಾವಣಗೆರೆ ಕಾಂಗ್ರೆಸ್ ನಲ್ಲಿ ಯುವ ಕಾಂಗ್ರೆಸ್ ನಾಯಕ ಜಿಬಿ ವಿನಯ್ ಕುಮಾರ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಹೌದು ದಾವಣಗೆರೆಯಲ್ಲಿ ಕಾಂಗ್ರೆಸ್ ಕೈ ಟಿಕೆಟ್ ತಪ್ಪಿರುವ ಹಿನ್ನೆಲೆಯಲ್ಲಿ ಇದೀಗ ಯುವ ಕಾಂಗ್ರೆಸ್ ನಾಯಕರಾಗಿರುವಂತಹ ಜೀವಿ ವಿನಯ್ ಕುಮಾರ್ ಅವರು ಆ ಬಂಡಾಯ ವೆದಿದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಪ್ರಭು ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಇದರಿಂದ ಸಹಜವಾಗಿ ಬಂಡಾಯವೇದಿರುವ ಜಿಬಿ ವಿನಯ್ ಕುಮಾರ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಬಲಮೂಲಗಳಿಂದ ತಿಳಿದುಬಂದಿದೆ ಹಾಗಾಗಿ ಕಾಂಗ್ರೆಸ್ ನಿಂದ ಕೂಡ ಹಲವು ನಾಯಕರು ಬಂಡಾಯ ವೆದಿದ್ದು ಇದೀಗ ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಇಕ್ಕಟ್ಟಿಗೆ ಸಿಲುಕಿದಂತಾಗಿದೆ.

Read More

ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರ ಚುನಾವಣಾ ರ್ಯಾಲಿಯ ವೇಳೆ ಅಪಘಾತವಾಗಿದ್ದು ಓರ್ವ ವ್ಯಕ್ತಿ ಸಾವನಪ್ಪಿರುವ ಘಟನೆ ಬೆಂಗಳೂರಿನ ಕೆಆರ್ ಪುರದ ಬಳಿ ನಡೆದಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಕೆಆರ್ ಪುರದ ಗಣೇಶ ದೇಗುಲದ ಬಳಿ ಅಪಘಾತ ನಡೆದಿದೆ.ಪ್ರಚಾರದ ವೇಳೆ ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ ನಡೆದಿದ್ದು, ಈ ವೇಳೆ ಸ್ಕೂಟಿ ಸವಾರ ಪ್ರಕಾಶ್ (60) ಎನ್ನುವ ವ್ಯಕ್ತಿ ಸಾವನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ಮೃತ ಪ್ರಕಾಶ್ ಕೆಆರ್ ಪುರದ ಟಿಸಿ ಪಾಳ್ಯದ ನಿವಾಸಿ ಎಂದು ಹೇಳಲಾಗುತ್ತಿದೆ. ಪ್ರಚಾರಕ್ಕೆ ಬಂದಿದ್ದ ಕಾರಿಗೆ ಡಿಕ್ಕಿ ಹೊಡೆದು ಪ್ರಕಾಶ ಗಾಯಗೊಂಡಿದ್ದರು.ಕಾರು ಡೋರ್ ಗೆ ಡಿಕ್ಕಿ ಹೊಡೆದು ಸ್ಕೂಟಿ ಪ್ರಕಾಶ್ ಗಾಯಗೊಂಡಿದ್ದ ಎನ್ನಲಾಗಿದೆ.ಈ ವೇಳೆ ತಕ್ಷಣ ಕೆ.ಆರ್.ಪುರದ ಸರ್ಕಾರಿ ಆಸ್ಪತ್ರೆಗೆ ಗಾಯಾಳು ವೆಂಕಟೇಶ್ ಅವರನ್ನು ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಪ್ರಕಾಶ್ 35 ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕೆಆರ್ ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಲಬುರಗಿ : ಎರಡು ವಾಹನಗಳ ನಡುವೆ ಅಪಘಾತ ಸಂಭವಿಸಿದ್ದರಿಂದ ಘಟನೆಗೆ ಸಂಬಂಧಿಸಿದಂತೆ ಗಲಾಟೆ ನಡೆಯುತ್ತಿತ್ತು. ಈ ವೇಳೆ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ತೆರಳಿ ಗಲಾಟೆ ಬಿಡಿಸುವ ಸಂದರ್ಭದಲ್ಲಿ ಎಂಟು ಜನ ಯುವಕರು ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ.ಗಣಪತರಾವ್ ಘಂಟೆ ಹಲ್ಲೆಗೊಳಗಾದ ಆಳಂದ ಠಾಣೆ ಪೊಲೀಸ್​ ಪೇದೆ ಎನ್ನಲಾಗುತ್ತಿದೆ. ಆಳಂದ ಹೊರವಲಯದ ಚಿಲ್ಲಾಳ ಪೆಟ್ರೋಲ್ ಪಂಪ್ ಬಳಿ ಬೊಲೆರೊ ಹಾಗೂ ಆಟೋ ಮಧ್ಯೆ ಅಪಘಾತವಾಗಿತ್ತು. ಅಪಘಾತ ಸ್ಥಳಕ್ಕೆ ಪೊಲೀಸ್​ ಪೇದೆ ತೆರಳಿದ್ದರು. ಪ್ರಕರಣ ಬಗೆಹರಿಸಿ ಗಣಪತ್​ರಾವ್​ ಘಂಟೆ ಠಾಣೆಗೆ ತೆರಳುತ್ತಿರುವ ವೇಳೆ ಸ್ಥಳಕ್ಕೆ ನಿಪ್ಪಾಣಿ ತಾಂಡಾ ಗ್ಯಾಂಗ್ ಬಂದಿದ್ದು, ಟಂಟಂ ಆಟೋದವನ ಜೊತೆ ಗಲಾಟೆ ಆರಂಭಿಸಿದೆ. ಈ ಜಗಳ ಬಿಡಿಸಲು ಹೋದ ಪೊಲೀಸ್​ ಪೊಲೀಸ್​ ಪೇದೆ​ ಗಣಪತ್​ರಾವ್​ ಘಂಟೆ ಮೇಲೆ ನಿಪ್ಪಾಣಿ ತಾಂಡಾ ಗ್ಯಾಂಗ್​ನ ನಿಖಿಲ್, ಕರ್ಣ್ ಸೇರಿದಂತೆ ಎಂಟು ಜನರು ಹಲ್ಲೆ ಮಾಡಿದ್ದಾರೆ.ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ ಹೆಚ್ಚುವರಿ ಪೊಲೀಸರು…

Read More

ಹಾಸನ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಗಟ್ಟಲು ಪೊಲೀಸ್ ಅಧಿಕಾರಿಗಳು ಹಾಗೂ ಚುನಾವಣಾ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ಅಲ್ಲದೆ ನೀತಿ ಸಂಹಿತೆ ಜಾರಿ ಆಗಿರುವುದರಿಂದ ಅಕ್ರಮ ತಡೆಗಟ್ಟಲು ಪಾಲಿಸಲಾಗುತ್ತಿದೆ. ಹಾಗಾಗಿ ಇಂದು ಹಾಸನದಲ್ಲಿ ಅಬಕಾರಿ ಅಧಿಕಾರಿಗಳಿಂದ ಒಂಬತ್ತು ಕೋಟಿ ಮೌಲ್ಯದ ಬಿಯರ್ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಹಾಸನದಲ್ಲಿ ವುಡ್ ಪೆಕರ ಡಿಸ್ಟಲರಿಸ್ ಅಂಡ್ ಬ್ರೇವರೀಸ್ ಫ್ಯಾಕ್ಟರಿ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ದಾಸ್ತಾನಿನಲ್ಲಿ ನ್ಯೂನ್ಯತೆ ಕಂಡುಬಂದ ಹಿನ್ನೆಲೆಯಲ್ಲಿ 9 ಕೋಟಿ ರೂ. ಮೌಲ್ಯದ ಬಿ ಆರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪವರ್ ಕೂಲ್, ಲೆಜೆಂಡ್, ವುಡ್ ಪೆಕರ ಸೇರಿದಂತೆ ಇತರೆ ಮಧ್ಯದ ಬ್ರಾಂಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ.ಒಟ್ಟು 56,736 ಬಾಕ್ಸ್ ಗಳಲ್ಲಿದ್ದ 5 ಕೋಟಿ 63 ಲಕ್ಷ 756 ಬಿಯರ್ ಬಾಟಲ್ ಸೇರಿದಂತೆ 9 ಕೋಟಿ 54 ಲಕ್ಷ 8,400 ರೂಪಾಯಿ ಮೌಲ್ಯದ ಬಿಯರ್ ಯನ್ನು ಜಪ್ತಿ…

Read More

ಕಲಬುರ್ಗಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯಾದಂತಹ ಅಪರಾಧ ಚಟುವಟಿಕೆಗಳು ಹಾಗೂ ಅಕ್ರಮಗಳು ನಡೆಯದಂತೆ ಪೊಲೀಸ್ ಸರು ತೀವ್ರ ಪಟ್ಟಚರ ವಹಿಸಿದ್ದು ಇದೀಗ ಕಲ್ಬುರ್ಗಿ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಕಲಬುರಗಿ ನಗರದ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರೂ ದಾಳಿ ನಡೆಸಿದ್ದಾರೆ.ಕಲಬುರ್ಗಿ ಪೊಲೀಸ್ ಆಯುಕ್ತ ಆರ್ ಚೇತನ ನೇತೃತ್ವದಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ. ಚುನಾವಣೆ ಹೊತ್ತಲ್ಲಿ ಜೈಲಿನಿಂದಲೇ ಅಪರಾಧ ಚಟುವಟಿಕೆ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.ಪೊಲೀಸರ ದಾಳಿಯ ವೇಳೆ ಕೈದಿಗಳ ಬಳಿ ಗುಟುಕಾ ಹಾಗೂ ನಗದು ಪತ್ತೆಯಾಗಿದೆ. ಫಾರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More