Author: kannadanewsnow05

ಧಾರವಾಡ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮುಂದೆ ಸಚಿವ ಸಂತೋಷ ಲಾರ್ಡ್ ಅವರ ಮಕ್ಕಳು ಏನಾಗುತ್ತಾರೆ ಎಂಬ ಪ್ರಶ್ನೆಗೆ ಇದೀಗ ಸಚಿವ ಸಂತೋಷಕ್ಕೆ ತಿರುಗಟ್ಟಿ ನೋಡಿದ್ದು ನನ್ನ ಮಕ್ಕಳು ಮೋದಿ ಅವರಂತೆ ಸುಳ್ಳು ಹೇಳದೆ ರಾಹುಲ್ ಗಾಂಧಿ ಅವರಂತೆ ಆಗುತ್ತಾರೆ ಎಂದು ಹೆಮ್ಮೆಯಿಂದ ಹೇಳುತ್ತಿದ್ದೇನೆ ಎಂದು ತಿರುಗೇಟು ನೀಡಿದರು. https://kannadanewsnow.com/kannada/how-many-sim-cards-are-running-in-your-name-find-out-this-easy-way/ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಲಾಡ್ ಮಕ್ಕಳು ಏನಾಗಬೇಕೆಂಬ ಪ್ರಹ್ಲಾದ ಜೋಶಿ ಪ್ರಶ್ನೆಗೆ ಸಂತೋಷ ಲಾಡ್ ಉತ್ತರಿಸಿದ್ದು, ಪ್ರಹ್ಲಾದ ಜೋಶಿ ಹೇಳಿಕೆಗೆ ಸಂತೋಷ್ ಲಾಡ್ ಇದೀಗ ಕೌಂಟರ್ ಕೊಟ್ಟಿದ್ದಾರೆ. ನನ್ನ ಮಕ್ಕಳು ರಾಹುಲ್ ಗಾಂಧಿ ಅವರ ರೀತಿ ಆಗಬೇಕು ಇದನ್ನು ಹೆಮ್ಮೆಯಿಂದ ಹೇಳುತ್ತಿದ್ದೇನೆ ಎಂದು ಸಚಿವ ಸಂತೋಷ್ ಲಾಡ್ ತಿರುಗೇಟು ನೀಡಿದರು. https://kannadanewsnow.com/kannada/india-exports-india-exports-rice-wheat-for-sugar-onion/ ನನ್ನ ಮಕ್ಕಳು ಮೋದಿಯಂತೆ ಸುಳ್ಳು ಹೇಳುವವರಾಗಬಾರದು. ಹಾಗಾಗಿ ರಾಹುಲ್ ಗಾಂಧಿಯವರ ತರ ಆಗಬೇಕು ಎಂದು ಹೆಮ್ಮೆಯಿಂದ ಹೇಳುತ್ತಿದ್ದೇನೆ. ಮೋದಿ ಪ್ರಭುದ್ಧರಾಗಿದ್ದರೆ ಒಂದು ಸುದ್ದಿಗೋಷ್ಠಿ ಮಾಡಲಿ. ರಾಹುಲ್ ಗಾಂಧಿ ಟಿವಿ…

Read More

ಮಂಗಳೂರು : ಇತ್ತೀಚಿಗೆ ಅಗ್ನಿಯ ಅವಘಡಗಳು ಸಾಕಷ್ಟು ಹೆಚ್ಚಾಗುತ್ತಿದ್ದು, ಇದೀಗ ಮಂಗಳೂರು ನಗರದ ಬಂದರಿನ ಜಿ ಎಂ ರಸ್ತೆಯ ಮನೆಯಲ್ಲಿ ಶನಿವಾರ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಕುರಿತಂತೆ ವರದಿಯಾಗಿದೆ. https://kannadanewsnow.com/kannada/air-india-to-hire-5700-new-employees/ ಹೌದು ಮಂಗಳೂರು ನಗರದ ಬಂದರಿನ ಜಿ ಎಂ ರಸ್ತೆಯ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಹೊತ್ತಿ ಉರಿದಿದೆ. ಮನೆಯಲ್ಲಿದ್ದ ಹಲವಾರು ವಸ್ತುಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅಗ್ನಿಯ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. https://kannadanewsnow.com/kannada/bengaluru-mother-gives-theft-training-to-son-hands-of-two-men/ ಇಂದು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಮನೆಯವರು ಹೊರಗೆ ಬಂದು ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿದೆ. ಪಾಂಡೇಶ್ವರ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಸಾಧ್ಯತೆಇದೆ ಎಂದು ಅಗ್ನಿ ಶಾಮಕ ದಳದವರು ಅಭಿಪ್ರಾಯಪಟ್ಟಿದ್ದಾರೆ.

Read More

ಬೆಂಗಳೂರು : ಮನೆಯೇ ಮೊದಲ ಪಾಠ ಶಾಲೆ ತಾಯಿಯೇ ಮೊದಲ ಗುರು ಎಂದು ಹೇಳುತ್ತಾರೆ ಆದರೆ ಬೆಂಗಳೂರಿನಲ್ಲಿ ಹೆತ್ತ ತಾಯಿಯೊಬ್ಬಳು ಮಗನಿಗೆ ಕಳ್ಳತನದ ಟ್ರೇನಿಂಗ ಕೊಡುವುದಲ್ಲದೆ ಕೈಗೆ ಮಚ್ಚು ಕೊಟ್ಟು ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಕಳ್ಳತನಕ್ಕೆ ಪ್ರೋತ್ಸಾಹ ನೀಡುತ್ತಿರುವ ಘಟನೆ ನಡೆದಿದ್ದು ಇದೀಗ ಇಬ್ಬರನ್ನು ಅನ್ನಪೂರ್ಣೇಶ್ವರಿ ನಗರದ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೌದು ಬೆಂಗಳೂರಿನಲ್ಲಿ ಸ್ವತಃ ಹೆತ್ತಮ್ಮನೇ ತನ್ನ ಮಗನಿಗೆ ಮಚ್ಚು ಹಾಗೂ ಚಾಕು ಕೊಟ್ಟು ಒಬ್ಬಂಟಿ ಮಹಿಳೆಯರನ್ನು ಬೆದರಿಸಿ ಚಿನ್ನ, ಬೆಳ್ಳಿ ಸೇರಿ ಬೆಲೆಬಾಳುವ ವಸ್ತುಗಳನ್ನು ರಾಬರಿ ಮಾಡಿಕೊಂಡು ಬರಲು ತರಬೇತಿ ನೀಡುತ್ತಿದ್ದಳು. ಈಗ ಪೊಲೀಸರು ಮಹಿಳೆಯಿಂದ ಬರೋಬ್ಬರಿ 103 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಮಗನನ್ನು ತಪ್ಪು ದಾರಿಗೆಳೆದ ತಾಯಿ ರೋಜ (32) ಎಂಬಾಕೆ ಆಗಿದ್ದಾಳೆ. ಈ ಘಟನೆಯ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ತಾಯಿ ಮತ್ತು ಅಪ್ರಾಪ್ತ ಮಗನನ್ನು ಬಂಧಿಸಲಾಗಿದೆ. ಈಕೆ ಹೆತ್ತ ತಾಯಿ ಆಗಿದ್ದರೂ ತನ್ನ ಮಗನಿಗೆ ದುಡಿದು ತಿನ್ನುವುದನ್ನು ಬಿಟ್ಟು ಕಳ್ಳತನ…

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನಲ್ಲಿ ಭಾರಿ ದುರಂತ ಸಂಭವಿಸಿದ್ದು, ಹುಸ್ಕೂರು ಮದ್ದೂರಮ್ಮ’ ಜಾತ್ರೆಯಲ್ಲಿ ಸುಮಾರು 120 ಅಡಿ ಎತ್ತರ ತೇರು ನೆಲಕ್ಕೆ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹಿಲಲಿಗೆ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಹುಸ್ಕೂರೂ ಮದ್ದೂರಮ್ಮ ಜಾತ್ರೆಯಲ್ಲಿ ಘಟನೆ ನಡೆದಿದೆ.ಹತ್ತಾರು ಗ್ರಾಮಗಳಿಂದ ಮದ್ದೂರಮ್ಮ ಜಾತ್ರೆಗೆ ತೇರು ಬರುತ್ತದೆ.ಎತ್ತುಗಳು ಟ್ರಕ್ಟರ್ ಗಳ ಮೂಲಕ ತೀರುವಿನಲ್ಲಿ ಘಟನೆ ನಡೆದಿದೆ. ಹೀಲಲಿಗೆ ಗ್ರಾಮದಿಂದ ಹಸ್ಕೂರಿಗೆ ಬರುತ್ತಿದ್ದ 120 ಅಡಿ ತೇರು ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ತೇರು ಉರುಳಿ ಬಿದ್ದಿದೆ.ತಿರುವಿನಲ್ಲಿ ಎಡಭಾಗಕ್ಕೆ ವಾಲಿಕೊಂಡು ನಿಧಾನವಾಗಿ ತೇರು ಉರುಳಿದೆ ಅದೃಷ್ಟವಶಾತ್ ಯಾವುದೇ ರೀತಿಯಾದಂತಹ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Read More

ಕೋಲಾರ : ನಾವು ತಂದ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಬಿಜೆಪಿಯವರು ಹೇಳಿದರು ಆದರೆ ಆ ರೀತಿ ಆಗಲಿಲ್ಲ ಹಾಗಾಗಿ ಮುಂದಿನ ವರ್ಷಗಳವರೆಗೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತಹ ಐದು ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/three-members-of-a-family-were-killed-and-over-20-jawans-of-the-35th-battalion-were-injured-when-their-car-collided-with-an-army-bus/ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಸಿಎಂ ಸಿದ್ದರಾಮಯ್ಯ ಚುನಾವಣಾ ಪ್ರಚಾರದ ವೇಳೆ ಮಾತನಾಡಿ, ನಾವು ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದೇವೆ. ಗ್ಯಾರೆಂಟಿ ಯೋಜನೆಗಳಿಂದ ಖಜಾನೆ ಖಾಲಿ ಎಂದು ಬಿಜೆಪಿ ಹೇಳಿತ್ತು. ಮುಂದಿನ ವರ್ಷಕ್ಕೂ ಗ್ಯಾರಂಟಿ ಯೋಜನೆಗೆ ಹಣ ಮೀಸಲಿಟ್ಟಿದ್ದೇವೆ ಎಂದರು. https://kannadanewsnow.com/kannada/heat-wave-people-advised-not-to-venture-out-between-11-am-and-4-pm/ ಬಿಜೆಪಿಯವರು ಹೇಳಿದ್ದು ಎಲ್ಲವೂ ಸುಳ್ಳು. ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರೆಯುತ್ತದೆ.ಹೀಗಾಗಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಕಿತ್ತೊಗೆಯಬೇಕು ಮೋದಿಯನ್ನು ಇಳಿಸಿ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಬೇಕು ಎಂದು ಕೋಲಾರ ಜಿಲ್ಲೆ ಮುಳಬಾಗಿಲಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Read More

ಬೆಂಗಳೂರು : ಬೆಂಗಳೂರಿನಲ್ಲಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರಲ್ಲಿ ಕಾಲರಾ ರೋಗ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸ್ಟೆಲ್ ವಿರುದ್ಧ ಸಮೋಟೋ ಕೆ ಎಸ್ ದಾಖಲಾಗಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ ಚೌದರಿ ತಿಳಿಸಿದರು. ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಯರ ಆರೋಗ್ಯವನ್ನು ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭೇಟಿಯ ವೇಳೆ ಅನೇಕ ವಿದ್ಯಾರ್ಥಿಗಳಿಗೆ ಪ್ರಜ್ಞೆ ಇರಲಿಲ್ಲ. ಒಂದು ವಾರದಲ್ಲಿ ವರದಿಯನ್ನು ಕೊಡೋಕೆ ಹೇಳಿದ್ದೇನೆ.ಒಂದು ವಾರದಲ್ಲಿ ಸಮಸ್ಯೆ ಬಗ್ಗೆ ಹರಿಸಲು ಹೇಳಿದ್ದೇನೆ. ಪ್ರಕರಣ ಕುರಿತಂತೆ ಹಾಸ್ಟೆಲ್ ವಿರುದ್ಧ ಸುಮೊಟೊ ಕೇಸ್ ದಾಖಲಾಗಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿಕೆ ನೀಡಿದ್ದಾರೆ. ಕೆಲವರು ಪಿಜಿ ಮಾಡುತ್ತಿದ್ದಾರೆ. ಅವರೆಲ್ಲರೂ ಕೂಡ ಭೇಟಿ ಮಾಡಿದಾಗ ಅವರಿಗೆ ವಾಂತಿ ಭೇದಿ ಹಾಗೂ ಹೊಟ್ಟೆನೋವು ಶುರುವಾಯಿತು ಅಂತ ಹೇಳಿದರು. ಕೆಲವರು ಪ್ರಜ್ಞೆನೆ ಕಳೆದುಕೊಂಡಿದ್ದಾರೆ ಅವ್ರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಈಗ ಎಲ್ಲರೂ ಚೆನ್ನಾಗಿದ್ದಾರೆ ಇದಕ್ಕೆಲ್ಲ ಕಾರಣ ಐದನೇ ಮಹಡಿಯಲ್ಲಿ ಇರುವ ನೀರಿನ…

Read More

ನವದೆಹಲಿ : ದೆಹಲಿಯಲ್ಲಿ ಅಕ್ರಮವಾಗಿ ಮಕ್ಕಳನ್ನು ಕಳಸಾಗಾಣೆ ಮಾಡುತ್ತಿದ್ದ ಹಲವು ಪ್ರದೇಶಗಳಲ್ಲಿ ಇದೀಗ ಸಿಬಿಐ ದಾಳಿ ನಡೆಸಿದ್ದು, ಅಲ್ಲದೆ ಮಕ್ಕಳನ್ನು 4 ರಿಂದ 5 ಲಕ್ಷಕ್ಕೆ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಬಂದ ತಕ್ಷಣ ದಾಳಿ ವೇಳೆ ಎರಡು ನವಜಾತ ಶಿಶುಗಳು ಸೇರಿದಂತೆ ಒಟ್ಟು 10 ಮಕ್ಕಳನ್ನು ಸಿಬಿಐ ಅಧಿಕಾರಿಗಳು ರಚನೆ ಮಾಡಿದ್ದಾರೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಾಲವರನ್ನು ವಶಪಡಿಸಿಕೊಂಡಿದ್ದು ಮಕ್ಕಳನ್ನು ಮಾರಾಟ ಕೂಡ ಮಾಡಲಾಗುತ್ತೆ ಎಂದು ತಿಳಿದುಬಂದಿದೆ.ಬಂಧಿತರಲ್ಲಿ ಆಸ್ಪತ್ರೆಯ ವಾರ್ಡ್ ಬಾಯ್ ಸೇರಿದಂತೆ ಕೆಲವು ಮಹಿಳೆಯರು ಮತ್ತು ಪುರುಷರು ಸೇರಿದ್ದಾರೆ. ಶುಕ್ರವಾರ ಸಂಜೆ ದೆಹಲಿ-ಎನ್‌ಸಿಆರ್‌ನ ಹಲವೆಡೆ ಸಿಬಿಐ ದಾಳಿ ನಡೆಸಿತ್ತು. ದಾಳಿ ವೇಳೆ ಸಿಬಿಐ ತಂಡ ಕೇಶವಪುರಂನ ಮನೆಯೊಂದರಿಂದ 2 ನವಜಾತ ಶಿಶುಗಳನ್ನು ಮತ್ತು 8 ಮಕ್ಕಳನ್ನು ರಕ್ಷಿಸಿದೆ. ಮೂಲಗಳ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಸುಮಾರು 10 ಮಕ್ಕಳನ್ನು ಮಾರಾಟ ಮಾಡಲಾಗಿದೆ. ಈ ಗ್ಯಾಂಗ್ ನ ನಂಟುಗಳು ಹಲವು ರಾಜ್ಯಗಳಲ್ಲಿ ಹರಡಿಕೊಂಡಿವೆ ಎಂದು…

Read More

ಬೆಂಗಳೂರು : ಬೆಂಗಳೂರಿನಲ್ಲಿ ಬಿಜೆಪಿ ನಾಯಕನಿಗೆ ಹನಿ ಟ್ರ್ಯಾಪ್ ಮೂಲಕ ಹೆದರಿಸಿ ಸುಮಾರು ಎರಡು ಕೋಟಿ ಬೇಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಹೆಬ್ಬಾಳ ಠಾಣೆಯಲ್ಲಿ ಇದೀಗ ಬಿಜೆಪಿ ನಾಯಕ ದೂರು ನೀಡಿದ್ದಾರೆ. https://kannadanewsnow.com/kannada/my-aim-is-to-make-mandya-a-model-constituency-congress-candidate-venkataramanegowda/ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ.ಜ್ಯೋತಿ, ಧರ್ಮೇಂದ್ರ ಹಾಗೂ ಬಾಲು ಎಂಬುವವರ ವಿರುದ್ಧ ಇದೀಗ ಬಿಜೆಪಿ ನಾಯಕ ದೂರು ನೀಡಿದ್ದಾರೆ.ಹೊಳೆನರಸೀಪುರದಲ್ಲಿ ವಾಸವಾಗಿರುವ ಜ್ಯೋತಿ, ಇವರ ಪತಿ ಧರ್ಮೇಂದ್ರ ಹಾಗು ಸ್ನೇಹಿತ ಬಾಲು ಸೇರಿಕೊಂಡು ವಿಡಿಯೋ ಕಾಲ್ ಮಾಡಿ ಅಶ್ಲೀಲ ವಿಡಿಯೋ ತೋರಿಸಿ ರೆಕಾರ್ಡ್ ಮಾಡಿಕೊಂಡಿದ್ದರು. https://kannadanewsnow.com/kannada/siddaramaiah-govt-has-5-guarantees-to-defeat-candidates-bommai/ ಕರೆ ಸ್ಥಗಿತಗೊಂಡ ಬಳಿಕ ರೆಕಾರ್ಡ್ ಮಾಡಿದ ವಿಡಿಯೋ ವೈರಲ್ ಮಾಡದೇ ಇರಲು 2 ಕೋಟಿ ರೂ. ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ್ದರು ಎಂದು ಬಿಜೆಪಿ ನಾಯಕ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More

ಬೆಂಗಳೂರು : ನಗರದ ಆರ್.ಟಿ.ನಗರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ ಸ್ಥಳಕ್ಕೆ ಭೇಟಿ ನೀಡಿ, ಶಾರ್ಟ್ ಸರ್ಕ್ಯೂಟ್ ನಿಂದ ಈ ದುರದ ಸಂಭವಿಸಿದೆ ಎಂದು ಮಾಹಿತಿ ಬಂದಿದೆ ಎಂದರು. https://kannadanewsnow.com/kannada/no-wonder-elections-were-held-again-in-the-state-after-lok-sabha-elections-bommai/ ಮಧ್ಯಾಹ್ನ 12:45ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ.ಅಗ್ನಿ ಅವಘಡದಲ್ಲಿ ಸಿಲುಕಿದ್ದ 11 ಜನರನ್ನು ರಕ್ಷಿಸಲಾಗಿದೆ ಎಂದು ಆರ್ ಟಿ ನಗರದಲ್ಲಿ ಸಚಿವ ಭೈರತಿ ಸುರೇಶ್ ಈ ಕುರಿತಂತೆ ಹೇಳಿಕೆ ನೀಡಿದರು. ಎಂಟು ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿರುವ ಮಾಹಿತಿ ಇದೆ. ಇದು ಖಾಸಗಿಯರಿಗೆ ಸೇರಿದ ಕಟ್ಟಡ ಬಾಡಿಗೆ ನೀಡಿದ್ದರು ಎಂದು ಆರ್ ಟಿ ನಗರದಲ್ಲಿ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು. https://kannadanewsnow.com/kannada/shivamogga-power-outages-in-these-areas-of-the-district-on-april-7/ ಮೊದಲಿಗೆ ಡಿಜೆ ಸ್ಫೋಟಗೊಂಡು ಮಿರಾಕಲ್ ಡ್ರಿಂಕ್ಸ್ ನ ಗ್ರೌಂಡ್ ಫ್ಲೋರ್ ಕಚೇರಿಯಲ್ಲಿ ಬೆಂಕಿ ಉಂಟಾಗಿತ್ತು. ತದನಂತರ ಬೆಂಕಿಯ ಕೆನ್ನಾಲಿಗೆ…

Read More

ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಕುರಿತು ಚರ್ಚಿಸಲು ಸಿದ್ಧವಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ, ಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ನಾಯಕರ ನಡುವಣ ಆರೋಪ ಪ್ರತ್ಯಾರೋಪಗಳು ಬಿರುಸುಗೊಂಡಿವೆ. https://kannadanewsnow.com/kannada/chikkaballapur-man-commits-suicide-by-hanging-himself-after-being-abandoned-by-his-girlfriend/ ಆರ್ಥಿಕತೆ ಹಾಗೂ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಕುರಿತು ಸತ್ಯ ಹಾಗೂ ವಾಸ್ತವದ ನೆಲೆಯಲ್ಲಿ ಚರ್ಚೆ ನಡೆಸಲು ನಾಗರಿಕ ಸಮಾಜ ನೀಡಿರುವ ಆಹ್ವಾನವನ್ನು ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನು, ಕೇಂದ್ರ ಹಣಕಾಸು ಸಚಿವರನ್ನು ಮುಕ್ತ ಚರ್ಚೆಗೆ ಆಹ್ವಾನಿಸಿದ್ದೇವೆ. ಅವರು ಭಾಗವಹಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ಟ್ವೀಟ್‌ ಮಾಡಿದ್ದಾರೆ. https://kannadanewsnow.com/kannada/disproportionate-assets-case-against-dk-shivakumar-hc-adjourns-hearing-to-april-18/ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಅಧಿಕಾರಕ್ಕೇರಿದ ಮೊದಲ ದಿನದಿಂದಲೂ ಅಬ್ಬರಿಸುತ್ತಿದ್ದಾರೆ. ಆದರೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಗೃಹ ಸಚಿವ ಅಮಿತ್‌ ಶಾ ಅವರು, ಸಿದ್ದರಾಮಯ್ಯ ಆರೋಪವನ್ನು ಅಲ್ಲಗಳೆಯುತ್ತಾ ಬಂದಿದ್ದಾರೆ. https://twitter.com/krishnabgowda/status/1776101256635027642?t=WiakBFyPv19zXKV_xY8urQ&s=19

Read More