Author: kannadanewsnow05

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಪಾತ್ರ ಇದೆ ಎಂದು ಇತ್ತೀಚಿಗೆ ಇಡಿ ಅಧಿಕಾರಿಗಳು ದಾಖಲೆಗಳಲ್ಲಿ ಉಲ್ಲೇಖಿಸಿದ್ದರು. ಇದರ ಬೆನ್ನಲ್ಲೇ ಮೈಸೂರು ನಗರಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನಗಳನ್ನು ಕೊಂಡ ಜನರಿಗೆ ಇದೀಗ ED ಬಿಗ್ ಶಾಕ್ ನೀಡಿದೆ. ಹೌದು ಮೈಸೂರಿನ ಉಪನಂದಾನಾಧಿಕಾರಿಗಳಿಗೆ ಇಡಿ ಅಧಿಕಾರಿಗಳು ಪತ್ರ ಬರೆದಿದ್ದು, ಮುಡಾದ ಸುಮಾರು 160 ಸೈಟ್ಗಳನ್ನು ಸೀಜ್ ಮಾಡುವಂತೆ ಪತ್ರ ಬರೆದಿದ್ದಾರೆ. ಮುಡಾದಲ್ಲಿ ಸೈಟ್ ಕೊಂಡವರು ಈಗಾಗಲೇ ಮನೆ ನಿರ್ಮಿಸುತ್ತಿದ್ದು, ಮನೆ ನಿರ್ಮಾಣದ ಖುಷಿಯಲ್ಲಿದ್ದವರಿಗೆ ಈಗ ನೋಟಿಸ್ ಸಂಕಷ್ಟ ತಂದೊಡ್ಡಿದೆ. ಸೈಟ್ಗಳನ್ನು ವಾಪಸ್ ನೀಡಲಾರದೆ ಮನೆ ಕಟ್ಟಲಾಗದೆ ಕಂಗಾಲಾಗಿದ್ದಾರೆ. 50:50 ಅನುಪಾತದಲ್ಲಿ ಸೈಟ್ ಪಡೆದು ಬಳಿಕ ಹಲವರಿಂದ ಮಾರಾಟ ಮಾಡಲಾಗಿತ್ತು. ಸೈಟ್ ಖರೀದಿ ಮಾಡಿ ಮನೆ ಕಟ್ಟಿ ಇದೀಗ ಜನರು ಸಂಕಷ್ಟ ಎದುರಿಸುತ್ತಿದ್ದಾರೆ.

Read More

ಕೊಪ್ಪಳ : ಕಳೆದ 2 ದಿನಗಳ ಹಿಂದೆ ಶಿವರಾಜ್ ತಂಗಡಿಗಿ ಶಾಲೆಯೊಂದರಲ್ಲಿ ತಪ್ಪಾಗಿ ಕನ್ನಡ ಬರೆದಿದ್ದ ವಿಚಾರವಾಗಿ, ಕನ್ನಡ ಬರೆಯಲು ಬರಲ್ಲ ಎಂಬ ವೈರಲ್ ಆದ ವಿಡಿಯೋ ವಿಚಾರವಾಗಿ ಶಿವರಾಜ್ ತಂಗಡಗಿ ಪ್ರತಿಕ್ರಿಯೆ ನೀಡಿದ್ದು, ನಾನು ಬಿಎಸ್ಸಿ ಪದವೀಧರ ಕನ್ನಡ ಬರೆಯಲು ಬಾರದಷ್ಟು ದಡ್ಡ ನಾನಲ್ಲ. ಪೂರ್ತಿ ಬರುವವರಿಗೆ ಕಾಯುವ ತಾಳ್ಮೆ ಇಲ್ಲದವರಿಂದ ವಿಡಿಯೋ ಮಾಡಲಾಗಿದೆ ಎಂದು ಅವರು ತಿಳಿಸಿದರು. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೂಳೆಕಲ್ ಎಂಬ ಗ್ರಾಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಬೇರೆ ಏನೋ ಬರೆಯಲು ಮುಂದಾಗಿದ್ದೆ. ಆದರೆ ಅಲ್ಲಿದ್ದವರು ಶುಭವಾಗಲಿ ಅಂತ ಬರೆಯಲು ಹೇಳಿದ್ದರು ಆಗ ಭ ಅಕ್ಷರದಲ್ಲಿ ಸ್ವಲ್ಪ ತಪ್ಪಾಗಿತ್ತು. ಆದರೆ ಅಕ್ಷರ ಬರೆಯಲಾರದ ಸ್ಥಿತಿಯಲ್ಲಿ ನಾನಿಲ್ಲ. ನನ್ನ ಬಗ್ಗೆ ಮಾತನಾಡುವವರು ತಾಳ್ಮೆಯನ್ನು ಪರೀಕ್ಷೆ ಮಾಡಬೇಡಿ.ಎಂದು ಎಚ್ಚರಿಸದರು. ಕಳೆದ 12 ವರ್ಷಗಳಿಂದ ನಾನು ರಾಜಕೀಯದಲ್ಲಿ ಇದ್ದೇನೆ. ಯಾವತ್ತಾದರೂ ತಪ್ಪಾಗಿ ಕನ್ನಡ ಮಾತನಾಡಿದ್ದೀನಾ? ಕಳೆದ ಎರಡು ವರ್ಷ ಇಲಾಖೆ ಹೇಗಿದೆ ಅಂತ ನೋಡಿ ನನ್ನ…

Read More

ನವದೆಹಲಿ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣ ಬಿಗಿಪಟ್ಟು ಹಿಡಿದಿದ್ದು, ಬಿ.ವೈ ವಿಜೇಂದ್ರ ವಿರುದ್ಧ ಯತ್ನಾಳ್ ಬಣದ ಸಮರ ಇದೀಗ ಮುಂದುವರೆದಿದೆ. ಹಾಗಾಗಿ ಫೆಬ್ರವರಿ 10ರಂದು ನವದೆಹಲಿಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಹೈಕಮಾಂಡ್ ಬಳಿ ಲಿಂಗಾಯತ ಅಸ್ತ್ರ ಹೂಡಿದ ಯತ್ನಾಳ್, ತಟಸ್ಥ ಬಣದಲ್ಲಿ ಗುರುತಿಸಿಕೊಂಡಿದ್ದ ಸಂಸದ ಬಸವರಾಜ್ ಬೊಮ್ಮಾಯಿಯನ್ನು ಭೇಟಿಯಾಗಿದ್ದಾರೆ. ಬಿವೈ ವಿಜಯೇಂದ್ರ ವಿರುದ್ಧ ಹೋರಾಟಕ್ಕೆ ಕೈಜೋಡಿಸುವಂತೆ ಯತ್ನಾಳ್ ಬಣ ಮನವಿ ಮಾಡಿಕೊಂಡಿದ್ದಾರೆ. ಹಾಗಾಗಿ ಫೆಬ್ರುವರಿ 10 ರಂದು ನವದೆಹಲಿಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಸರ್ಕಾರಿ ನಿವಾಸದ ಪೂಜೆ ನೆಪದಲ್ಲಿ ಸಭೆಗೆ ಪ್ಲಾನ್ ಮಾಡಿಕೊಂಡಿದ್ದು, ಸಂಸದ ಬೊಮ್ಮಾಯಿ ನೇತೃತ್ವದಲ್ಲಿ ಫೆಬ್ರವರಿ 10ರಂದು ಈ ಒಂದು ಸಭೆ ನಡೆಯಲಿದೆ. ಈ ಮೂಲಕ ಬಿವೈ ವಿಜಯೇಂದ್ರ ವಿರುದ್ಧ ಯತ್ನಾಳ್ ಬಣ ಸಿಡಿದೆದ್ದಿದೆ.

Read More

ದಕ್ಷಿಣಕನ್ನಡ : ಭೂತ ಪ್ರೇತದ ಬಗ್ಗೆ ನಾವೆಲ್ಲ ಕಥೆಗಳಲ್ಲಿ ಕೇಳಿರುತ್ತೇವೆ. ಸಿನೆಮಾಗಳಲ್ಲಿ ನೋಡಿರುತ್ತೇವೆ. ಆದರೆ ದಕ್ಷಿಣ ಕನ್ನಡದಲ್ಲಿ ಕುಟುಂಬವೊಂದಕ್ಕೆ ಕಳೆದ 3 ತಿಂಗಳಿನಿಂದ ಪ್ರೇತ ಭಾದೆ ಕಾಡುತ್ತಿದೆ ಅಂತೇ. ಅಲ್ಲದೇ ಮೊಬೈಲ್ ನಲ್ಲಿ ವಿಚಿತ್ರ ಮುಖದ ವ್ಯಕ್ತಿಯ ಫೋಟೋ ಕೂಡ ಸೆರೆಹಿಡಿದಿದ್ದಾರೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದಲ್ಲಿ ಮೊಬೈಲ್ ಕ್ಯಾಮೆರಾದಲ್ಲಿ ವಿಚಿತ್ರವಾದಂತ ಮುಖ ಸೆರೆಯಾಗಿದೆ. ಮೊಬೈಲ್ ನಲ್ಲಿ ವಿಚಿತ್ರವಾದ ಮುಖ ಗೋಚರವಾಗಿದೆ. ಮಾಲಾಡಿ ಗ್ರಾಮದ ಉಮೇಶ್ ಶೆಟ್ಟಿ ಕುಟುಂಬಕ್ಕೆ ವಿಚಿತ್ರವಾದಂತಹ ಅನುಭವವಾಗುತ್ತಿದ್ದು, ಕಳೆದ ಮೂರು ತಿಂಗಳಿನಿಂದ ಕುಟುಂಬಕ್ಕೆ ಪ್ರೇತ ಭಾದೆ ಕಾಡುತ್ತಿದೆಯಂತೆ. ಉಮೇಶ್ ಶೆಟ್ಟಿ ಮನೆ ಒಳಗೆ ಬಟ್ಟೆಗೆ ಆಗಾಗ ಬೆಂಕಿ ಬೀಳುತ್ತದಂತೆ. ಮನೆಯಲ್ಲಿರುವ ಪಾತ್ರೆಗಳು ಸೇರಿದಂತೆ ಎಲ್ಲ ವಸ್ತುಗಳು ಏಕಾಏಕಿ ಬೀಳುತ್ತಾವೇಯಂತೆ. ರಾತ್ರಿ ಹೊತ್ತು ನಿದ್ದೆ ಇಲ್ಲದೆ ಇಡೀ ಕುಟುಂಬ ಕಾಲ ಕಳೆಯುತ್ತಿದೆ. ಉಮೇಶ್ ಶೆಟ್ಟಿ ಪುತ್ರಿ ಮೊಬೈಲ್ ನಲ್ಲಿ ಈ ಒಂದು ವಿಲಕ್ಷಣ ಫೋಟೋವನ್ನು ಸೆರೆಹಿಡಿದಿದ್ದಾಳೆ. ಮನೆ ಒಳಗೆ ಯಾರೋ ಅತ್ತಿಂದಿತ್ತ ಓಡಾಡುತ್ತಿರುವ…

Read More

ತಮಿಳುನಾಡು : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ತಮಿಳುನಾಡಿನಲ್ಲಿ ಪ್ರೌಢಶಾಲೆ ವಿದ್ಯಾರ್ಥಿನಿಯ ಮೇಲೆ ಮೂವರು ಶಿಕ್ಷಕರು ಸಾಮೂಹಿಕ ಅತ್ಯಾಚಾರ ನಟಿಸಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಹೌದು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬ ಮೇಲೆ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆಯು ಪ್ರದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಿಕರು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆ ಬಾಲಕಿ ಒಂದು ತಿಂಗಳಿಗೂ ಹೆಚ್ಚು ಕಾಲ ಶಾಲೆಗೆ ಹೋಗಿರಲಿಲ್ಲ. ಶಾಲೆಯ ಮುಖ್ಯ ಶಿಕ್ಷಕರು ವಿಚಾರಿಸಿದಾಗ, ತಾಯಿ ಹಲ್ಲೆ ನಡೆಸಿರುವುದಾಗಿ ಬಹಿರಂಗಪಡಿಸಿದರು.

Read More

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಅಕ್ರಮ ಆರೋಪದ ಕುರಿತಂತೆ KSOU ಕುಲಪತಿ ಪ್ರೊ. ಶರಣಪ್ಪ ವಿ.ಹಲಸೇ ಮತ್ತು ಸಿಬ್ಬಂದಿ ವಿರುದ್ಧ ಗಂಭೀರವಾದ ಆರೋಪ ಕೇಳಿ ಬಂದಿದೆ. KSOU ನಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿಗಳ ಅಕ್ರಮದ ದಾಖಲೆಗಳನ್ನು ಕಾನೂನು ವಿದ್ಯಾರ್ಥಿ ಪುಟ್ಟಸ್ವಾಮಿ ಬಿಡುಗಡೆ ಮಾಡಿದ್ದಾರೆ. ಕೆಎಸ್ಒಯು ಕಟ್ಟಡದ ವರ್ಚುಯಲ್ ಟೂರ್ಗೆ ಫೋಟೋಗ್ರಾಫಿಕ್ ಬಿಲ್ ಮಾಡಲು 96,91,812 ಬಿಲ್ ಮಾಡಿದ ಆರೋಪ ಕೇಳಿ ಬಂದಿದೆ.ಮೈಸೂರು ಕಟ್ಟಡ ಒಂದಕ್ಕೆ 26,15,000 ಮಾಡಿದ ಆರೋಪ ಕೇಳಿ ಬಂದಿದೆ.ಇನ್ನುಳಿದ 11 ಕಟ್ಟಡಗಳ ಫೋಟೋಗ್ರಾಫಿ ಗೆ ತಲಾ 4 ಲಕ್ಷ ಮತ್ತು 5 ಲಕ್ಷ ಬಿಲ್ ಆಗಿದೆ 20 ರಿಂದ 30 ಸಾವಿರದ ಕೆಲಸಕ್ಕೆ 96 ಲಕ್ಷ ಬಿಲ್ ಮಾಡಿರುವ ಆರೋಪ ಕೇಳಿ ಬಂದಿದೆ. ಕೆಎಸ್ಒಯು ಕಟ್ಟಡಕ್ಕೆ ಎಲ್ಇಡಿ ಬಲ್ಬ್ ಹಾಕಿಸಲು 2 ಕೋಟಿ ಬಿಲ್ ಮಾಡಿರುವ ಆರೋಪ ಕೇಳಿ ಬಂದಿದೆ. ಇನ್ನು ಕೆಎಸ್ಒಯು ವಸತಿಗೃಹದ ಹಾಸಿಗೆ ದಿಂಬಿಗೆ 15 ಲಕ್ಷ ರೂಪಾಯಿ, ಪುಸ್ತಕ ತುಂಬಿಕೊಂಡು…

Read More

ಬೆಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ಕ್ಷೇತ್ರದ ಶಾಸಕ ಪಿಎಂ ನರೇಂದ್ರ ಸ್ವಾಮಿಯವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪಿ.ಎಂ. ನರೇಂದ್ರ ಸ್ವಾಮಿ, ನಂ.305, ಪೂರಿಗಲಿ, ಮಳವಳ್ಳಿ ತಾಲ್ಲೂಕು, ಮಂಡ್ಯ ಜಿಲ್ಲೆ ಅವರನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ನೀರು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ, 1974 ರ ಸೆಕ್ಷನ್ 4 (2) ರ ಅಡಿಯಲ್ಲಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ನಾಮನಿರ್ದೇಶನ ವಿಧಾನ ಮತ್ತು ಅಧ್ಯಕ್ಷರು ಮತ್ತು ಸದಸ್ಯರ ಸೇವಾ ನಿಯಮಗಳು ಮತ್ತು ಷರತ್ತುಗಳು ಮತ್ತು ಸದಸ್ಯ ಕಾರ್ಯದರ್ಶಿಯ ನೇಮಕಾತಿ), ನಿಯಮಗಳು, 2024 ರ ಪ್ರಕಾರ, ದಿನಾಂಕ: 18.12.2024 ರ ಅಧಿಸೂಚನೆ ಸಂಖ್ಯೆ ಎಫ್ಇಇ 526 ಇಪಿಸಿ 2024 (ಭಾಗ-1) ರಲ್ಲಿ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ.ಈ ನಾಮನಿರ್ದೇಶನಕ್ಕೆ ಸಂಬಂಧಿಸಿದ ನಿಯಮಗಳು…

Read More

ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ರಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ನಗರದಲ್ಲಿ 3 ದಿನಗಳ ಕಾಲ 5 ಕಡೆ ಎಲ್ಲಾ ಎಂಟು ವಲಯಗಳನ್ನು ಒಳಗೊಂಡಂತೆ ಸಾರ್ವಜನಿಕರು, ಸಂಘ ಸಂಸ್ಥೆಗಳಿಂದ ಸಲಹೆಗಳನ್ನು ಸ್ವೀಕರಿಸುವ ಸಭೆಗಳನ್ನು ಆಯೋಜನೆ ಮಾಡಲಾಗುತ್ತಿದೆ. ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ರ ಪರಿಶೀಲನೆ ಮತ್ತು ವರದಿಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಮಂಡಲ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿದ್ದು, ಆ ಸಮಿತಿಗೆ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ರವರನ್ನು ಅಧ್ಯಕ್ಷರನ್ನಾಗಿ ನಿಯೋಜನೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರದೇಶದ ಅಭಿವೃದ್ಧಿಯ ಯೋಜನೆ, ಸಮನ್ವಯ ಮತ್ತು ಮೇಲ್ವಿಚಾರಣೆಗಾಗಿ, ಪರಿಣಾಮಕಾರಿಯಾದ, ಸಹಭಾಗಿತ್ವದ ಮತ್ತು ಸ್ಪಂದನಶೀಲ ಆಡಳಿತಕ್ಕಾಗಿ, ನಗರಾಡಳಿತದ ಮೂಲಕ ಘಟಕಗಳನ್ನಾಗಿಸುವುದಕ್ಕೆ ಮತ್ತು ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಸುಗಮಗೊಳಿಸುವುದಕ್ಕೆ ಹಾಗೂ ಸಹಭಾಗಿ, ದಕ್ಷ ಮತ್ತು ನ್ಯಾಯೋಚಿತ ಆಡಳಿತದ ಚೌಕಟ್ಟನ್ನು ಸ್ಥಾಪಿಸುವ ಸಲುವಾಗಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಜಾರಿಗೆ ತರಲಾಗುತ್ತಿದೆ. ಮುಂದುವರಿದು, ಮೇಲ್ಕಂಡ ವಿಷಯಗಳನ್ನು ಕೂಲಂಕುಷವಾಗಿ ಪರಿಶೀಲಿಸುವ ಸಲುವಾಗಿ…

Read More

ಕಲಬುರ್ಗಿ : ಕಳೆದ ಡಿಸೆಂಬರ್ 26 ರಂದು ಬೀದರ್ ನಲ್ಲಿ ರೈಲಿಗೆ ತಲೆ ಕೊಟ್ಟು ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣದ ಪ್ರಮುಖ ಆರೋಪಿ ಆಗಿರುವ ರಾಜು ಕಪ್ ನವರಿಗೆ ಕಲ್ಬುರ್ಗಿ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹೌದು ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾದ ರಾಜು ಕಪನೂರ್ ಗೆ ತನ್ನ ಹುಟ್ಟು ಹಬ್ಬದ ದಿನದಂದೇ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಅರ್ಜಿದಾರರ ಹತ್ತಿರ ಶಸ್ತ್ರಾಸ್ತ್ರಗಳಿದ್ದಲ್ಲಿ ಕಲಬುರ್ಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಒಪ್ಪಿಸಬೇಕು. ಅವರು ಸಾಕ್ಷಿ ನಾಶಪಡಿಸಲು ಪ್ರಯತ್ನಿಸದೆ, ತನಿಖೆಗೆ ಸಹಕರಿಸಬೇಕು. ತನಿಖಾಧಿಕಾರಿಯು ಅವರಿಗೆ ನಿರ್ದಿಷ್ಟವಾಗಿ ಸಮನ್ಸ್ ನೀಡಿದಾಗ ತನಿಖಾ ಉದ್ದೇಶಕ್ಕಾಗಿ ಹೊರತುಪಡಿಸಿ ಯಾವುದೇ ಕಾರಣಕ್ಕೂ ಬೀದರ್ ಜಿಲ್ಲೆಗೆ ಪ್ರವೇಶ ಮಾಡಬಾರದು. ತನಿಖೆ ಪೂರ್ಣಗೊಂಡ ನಂತರ…

Read More

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಕೂಡಲೇ ಪ್ರಮುಖ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾಗಿದ್ದು, ಮನೆಯ ಯಜಮಾನತಿಗೆ ತಿಂಗಳಿಗೆ ರೂ.2000 ಅವರ ಖಾತೆಗೆ ಜಮೆ ಆಗುತ್ತದೆ. ಇದೀಗ ಈ ಒಂದು ಮಾಸಿಕ ಹಣದಲ್ಲಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಹೌದು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗಾಗಲೇ 2 ಸಾವಿರ ಹಣ ಮಹಿಳೆಯರ ಖಾತೆಗೆ ಹಾಕಲಾಗುತ್ತಿದ್ದೂ, ಅತೀ ಶೀಘ್ರದಲ್ಲಿ ಗೃಹಲಕ್ಷ್ಮಿಯರ ಮಾಸಿಕ ಹಣ ಹೆಚ್ಚಳ ಸಾಧ್ಯತೆ ಇದೆ ಎನ್ನಲಾಗಿದೆ.ಇದೀಗ 2000 ರೂ. ಮಾಸಿಕವಾಗಿ ನೀಡಲಾಗುತ್ತಿದೆ. ಅದನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್‌ 7ರಂದು ರಾಜ್ಯ ಬಜೆಟ್‌ ಮಂಡನೆಯಾಗಲಿದೆ. ಈ ವೇಳೆ ಗೃಹಲಕ್ಷ್ಮಿಯರ ಮಾಸಿಕ ಹಣ 2000 ರೂ.ನಿಂದ 2300 ರೂ. ವರೆಗೆ ಹೆಚ್ಚಿಸುವ ಸಾಧ್ಯತೆ ಇದೆ. ರಾಜ್ಯದ ಒಟ್ಟು ಆರ್ಥಿಕ ಸ್ಥಿತಿ ಪರಿಗಣಿಸಿ ಸಿಎಂ ಸಿದ್ದರಾಮಯ್ಯ ಇದರ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ. ಹಾಗಾಗಿ ಮಾರ್ಚ್ 7…

Read More