Author: kannadanewsnow05

ಚಿತ್ರದುರ್ಗ : ಜಗತ್ತಿನಲ್ಲಿ ಇಂತಹ ತಾಯಂದಿರು ಇರುತ್ತಾರೆ ಎಂದು ತಿಳಿದು ದಿಗ್ಭ್ರಮೆಯಾಗುತ್ತದೆ. ಹೌದು ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿಯ ಆಶ್ರಯ ಕಾಲೋನಿಯಲ್ಲಿ ಗಂಡನ ಮೇಲಿನ ಕೋಪಕ್ಕೆ ತನ್ನ ಮಗನಿಗೆ ತಾಯಿಯೊಬ್ಬಳು ಬರೆ ಎಳೆದು ಕ್ರೌರ್ಯ ಬರೆದಿರುವ ಘಟನೆ ಇದೀಗ ವರದಿಯಾಗಿದೆ. ಹೌದು ಗಂಡನ ಮೇಲಿನ ದ್ವೇಷವನ್ನು ಮಗುವಿನ ಮೇಲೆ ಚೆಲ್ಲಿದ ತಾಯಿಯ ಕ್ರೌರ್ಯಕ್ಕೆ 7 ವರ್ಷದ ಬಾಲಕ ನರಳುತ್ತಿದ್ದಾನೆ. ಕೈ-ಕಾಲುಗಳಿಗೆ ಬರೆ ಎಳೆದು ಕ್ರೌರ್ಯ ಮೆರೆದಿದ್ದಾಳೆ.ಕಳೆದ 10 ವರ್ಷಗಳ ಹಿಂದೆ ಪ್ರೀತಿಯಿಂದ ಮದುವೆಯಾಗಿದ್ದ ಅನಿಲ್ ಮತ್ತು ನಗ್ಮಾ ದಂಪತಿ, 2 ವರ್ಷಗಳ ಹಿಂದೆ ಡೈವೋರ್ಸ್ ಪಡೆದು ಬೇರೆಯಾಗಿದ್ದರು. ನಂತರ ಇಬ್ಬರೂ ಬೇರೆ ಮದುವೆಯಾಗಿದ್ದಾರೆ. ಇದರ ನಡುವೆ, ಇಬ್ಬರಿಗೂ ಹುಟ್ಟಿದ 7 ವರ್ಷದ ಮಗುವಿನ ಕಾಳಜಿಯನ್ನು ಕುರಿತು ವಿವಾದ ಮೂಡಿತು. ತಾಯಿ ನಗ್ಮಾ ಮಗುವನ್ನು ತನ್ನ ಬಳಿ ಇರಿಸಿಕೊಂಡು, ಅವನ ತಂದೆ ಅನಿಲ್ ಮತ್ತು ಅಜ್ಜಿ ಶಮಶಾದ್ ರನ್ನು ಭೇಟಿಯಾಗದಂತೆ ನಿರ್ಬಂದಿಸಿದ್ದಳು .ಮನೆಯಲ್ಲಿ ಬಂಧನದಲ್ಲಿಡುವುದು, ಊಟ ಕೊಡದಿರುವುದು, ಕೈ-ಕಾಲುಗಳಿಗೆ ಬರೆ ಎಳೆದು ಹಿಂಸಿಸುವುದು ಸೇರಿದಂತೆ…

Read More

ಬೆಂಗಳೂರು : ಫೆಬ್ರವರಿ 10ರಿಂದ 14 ರವರೆಗೆ ಬೆಂಗಳೂರಿನಲ್ಲಿ ಏರ್ ಶೋ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಗರದ ಹಲವಡೆ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ. ಫೆಬ್ರುವರಿ 10 ರಿಂದ ಬೆಳಿಗ್ಗೆ 5 ರಿಂದ ಫೆಬ್ರವರಿ 14ರ ರಾತ್ರಿ 10 ರವರೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಏರ್ಪೋರ್ಟ್ ರಸ್ತೆ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಈ ಕುರಿತು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರದಲ್ಲಿರುವ ನಿಟ್ಟೆ ಮೀನಾಕ್ಷಿ ಕಾಲೇಜ್ ರಸ್ತೆ, ಹಾಗೂ ಬಾಗಲೂರು ಮುಖ್ಯರಸ್ತೆಯನ್ನು ಏಕಮುಖ ರಸ್ತೆಯಾಗಿ ಬದಲಾವಣೆ ಮಾಡಲಾಗಿದೆ. ಜಿಕೆವಿಕೆ ಕ್ಯಾಂಪಸ್ ನಲ್ಲಿ ಸಾರ್ವಜನಿಕರಿಗೆ ಉಚಿತ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಜಿಕೆವಿಕೆ ಪಾರ್ಕಿಂಗ್ ಸ್ಥಳದಿಂದ ಉಚಿತ ಬಿಎಂಟಿಸಿ ಎಸಿ ಬಸ್ ಕೂಡ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಪೂರ್ವ ದಿಕ್ಕಿನಿಂದ ಬರುವ ವಾಹನ ಸವಾರರಿಗೆ ಮಾರ್ಗ ಬದಲಾವಣೆ ಮಾಹಿತಿ ನೀಡಿದ್ದು, ಕೆಆರ್ ಪುರ, ಬಾಗಲೂರು, ಹೆಣ್ಣೂರು ಕ್ರಾಸ್, ಕೊತ್ತನೂರು, ಕಣ್ಣೂರು, ಆರ್. ಪಾಳ್ಯ, ವಿದ್ಯಾನಗರ ಕ್ರಾಸ್, ಹುಣಸಮಾರನಹಳ್ಳಿ, ಗುಬ್ಬಿ…

Read More

ರಾಯಚೂರು : ರಾಜ್ಯದಲ್ಲಿ ಕಾಮಾಂಧರ ಅಟ್ಟಹಾಸ ಮಿತಿಮೀರುತ್ತಿದ್ದು, ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ.ಇದೀಗ ರಾಯಚೂರಲ್ಲಿ ಖಾಸಗಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ. ಹೌದು ಖಾಸಗಿ ಶಾಲೆಯ 2ನೇ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ನಡೆದಿದೆ.ಪೋತ್ನಾಳ್ ಗ್ರಾಮದ ಖಾಸಗಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಕಾಮುಕ ಶಿವನಗೌಡನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರತಿದಿನ ಊರಿನಿಂದ ಶಾಲೆಗೆ ಸ್ಕೂಲ್‌ ಬಸ್‌ನಲ್ಲಿ ತೆರಳುತ್ತಿದ್ದ ಬಾಲಕಿ. ಬಂಧಿತ ಆರೋಪಿ ಶಿವನಗೌಡ ಎಂಬಾತ ಅದೇ ಊರಿನವನಾಗಿದ್ದು ಬಾಲಕಿಗೆ ಪರಿಚಿತನಾಗಿದ್ದಾನೆ. ಮಧ್ಯಾನ ಶಾಲೆಗೆ ಬರುತ್ತಿದ್ದ ಆರೋಪಿ ಊಟದ ಸಮಯಕ್ಕೆ ಬಾಲಕಿಯನ್ನ ಹೊರಗಡೆ ಕರೆದುಕೊಂಡು ಹೋಗಿದ್ದಾನೆ. ಹೊರಗಡೆ ಕರೆದೊಯ್ದ ವೇಳೆ ಆರೋಪಿ…

Read More

ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ನಡೆದಿದ್ದು ಕ್ಷುಲ್ಲಕ ಕಾರಣಕ್ಕೆ ಬಾಲಕಿಯ ಕೆನ್ನೆಗೆ ಬಿಸಿ ಚಮಚದಿಂದ ಬರೆಯಿಟ್ಟು ಅಂಗನವಾಡಿ ಸಹಾಯಕಿ ಕ್ರೂರತ್ವ ಮೆರೆದಿದ್ದಾಳೆ. ಈ ಹಿನ್ನೆಲೆಯಲ್ಲಿ ಕೂಡಲೇ ಅಂಗನವಾಡಿ ಸಹಾಯಕಿಯನ್ನು ಅಮಾನತು ಮಾಡಲಾಗಿದೆ.ಈ ಒಂದು ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಗುಲಗಾಲಜಂಬಗಿ ಗ್ರಾಮದ ಅಂಗನವಾಡಿಯಲ್ಲಿ ನಡೆದಿದೆ. ಬಾಲಕಿಯ ಕೆನ್ನೆಗೆ ಸಹಾಯಕಿ ಅನ್ನದ ಚಮಚದಿಂದಬರೆಹಾಕಿದ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಗುಲಗಾಲಜಂಬಗಿ ಗ್ರಾಮದ ಅಂಗನವಾಡಿಯಲ್ಲಿ ನಿನ್ನೆ ನಡೆದಿದೆ. ಬರೆಯಿಂದ ಪ್ರೀತಿ ಎಂಬ ಬಾಲಕಿಯ ಕೆನ್ನೆಗೆ ಗಾಯವಾಗಿದೆ. ಅಂಗನವಾಡಿ ಕಾರ್ಯಕರ್ತೆ ಶೋಭಾ, ಸಹಾಯಕಿ ಶಾರವ್ವಅವರನ್ನು ತಕ್ಷಣ ಅಮಾನತುಗೊಳಿಸಿ ಸಿಡಿಪಿಒ ಕಾಶಿಬಾಯಿ ಆದೇಶಿಸಿದ್ದಾರೆ. ಬರೆ ಹಾಕಿದ್ದಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

Read More

ಬೆಂಗಳೂರು : ಎಲ್ಲವೂ ಫ್ರೀಯಾಗಿ ಕೊಡುತ್ತಾ ಹೋದರೆ ಸರ್ಕಾರ ನಡೆಸುವುದು ಹೇಗೆ? ಎಂದು ಇತ್ತೀಚಿಗೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಕಾವೇರಿ ನೀರಿನ ದರ ಏರಿಕೆ ವಿಚಾರವಾಗಿ ನಡೆದ ಸಭೆಯಲ್ಲಿ ಹೇಳಿಕೆ ನೀಡಿದ್ದರು. ಇದೀಗ ಜಲಮಂಡಳಿ ನೀರಿನ ದರ ಏರಿಕೆ ಕುರಿತಂತೆ 3 ಮಾದರಿ ದರ ಪರಿಷ್ಕರಣೆಯ ಪಟ್ಟಿಗಳನ್ನು ಒಳಗೊಂಡ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದು, ಶೀಘ್ರದಲ್ಲಿ ದರ ಏರಿಕೆ ಆದೇಶ ಹೊರಬೀಳುವ ಸಾಧ್ಯತೆ ಇದೆ. ಹೌದು ಕಾವೇರಿ ನೀರಿನ ದರ ಏರಿಕೆಗೆ ಸಂಬಂಧಿಸಿದಂತೆ ಹೊಸದಾಗಿ ಪ್ರಸ್ತಾವನೆ ಸಲ್ಲಿಸುವಂತೆ ಬೆಂಗಳೂರು ಅಭಿವೃದ್ಧಿ ಸಚಿವ ಡಿ. ಕೆ.ಶಿವಕುಮಾರ್‌ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ಜಲಮಂಡಳಿಯ ಅಧಿಕಾರಿಗಳು ಇದೀಗ ಪ್ರಸ್ತಾವನೆ ಸಿದ್ದಪಡಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಒಂದೆರಡು ದಿನದಲ್ಲಿ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರ ಅನುಮೋದನೆ ನೀಡುವ ಸಾಧ್ಯತೆ ಇದೆ. ಜಲ ಮಂಡಳಿಯು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕಳೆದ 14 ವರ್ಷದಿಂದ ನಗರದಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಮಂಡಳಿಯು ಪ್ರತಿ ತಿಂಗಳು…

Read More

ಬೆಂಗಳೂರು : ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಹಗರಣದ ಕಿಂಗ್ ಪಿನ್ ಶ್ರೀಕಿಯನ್ನು ಬಂಧಿಸಲಾಗಿದ್ದು, ಇದೀಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗು ಸಹ ತೀವ್ರ ಸಂಕಷ್ಟ ತಂದೊಡ್ಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಮತ್ತೆ ಎಸ್‌ಐಟಿ ನೋಟಿಸ್‌ ನೀಡಿದ ಬೆನ್ನಲ್ಲೇ ಬಂಧನ ಭೀತಿ ಶುರುವಾಗಿದೆ. ಹೌದು ಬಿಟ್ ಕಾಯಿನ್ ಹಗರಣದ ಪ್ರಮುಖ ರೂವಾರಿ ಎನ್ನಲಾದ ಅಂತಾರಾಷ್ಟ್ರೀಯ ಮಟ್ಟದ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜತೆ ನಲಪಾಡ್ ವ್ಯಾವಹಾರಿಕ ನಂಟು ಹೊಂದಿ ದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪ ಹಿನ್ನೆಲೆಯಲ್ಲಿ ನಲಪಾಡ್ ಅವರಿಗೆ ಫೆ.7 ರಂದು ವಿಚಾರಣೆಗೆ ಬರು ವಂತೆ ಸೆಕ್ಷನ್‌ 41ರಡಿ SIT ನೋಟಿಸ್‌ ನೀಡಿದೆ. ಸಾಮಾನ್ಯವಾಗಿ ಆರೋಪಿ ತರಿಗೆ ಈ ಸೆಕ್ಷನ್ ಅಡಿ ತನಿಖಾ ಧಿಕಾರಿ ನೋಟಿಸ್ ನೀಡು ತ್ತಾರೆ. ಹೀಗಾಗಿ ಅದೇ ಸೆಕ್ಷನ್ ಅಡಿ ನಲಪಾಡ್ ಅವರಿಗೆ 2ನೇ ಬಾರಿಗೆ ಎಸ್‌ಐಟಿ ವಿಚಾರಣೆಗೆ ಕರೆದಿರುವುದು…

Read More

ಬೆಂಗಳೂರು : ಆನೆಗಳ ಚಲನವಲನಗಳ ಮೇಲೆ ನಿಗಾವಹಿಸಲು ಅರಣ್ಯ ಇಲಾಖೆ ಸಹಯೋಗದೊಂದಿಗೆ ಇನ್ ಫಿಕ್ಷನ್ ಲ್ಯಾಬ್‌ ಸಂಸ್ಥೆ ಅಭಿವೃದ್ಧಿ ಮಾಡಿರುವ ದೇಶೀಯ ಕರ್ನಾ ಟಕ-ಪರಿಶೋಧಿತ ಪತ್ತೆ (ಕೆಪಿ ಟ್ರ್ಯಾಕರ್) ಹೆಸರಿನ ರೇಡಿಯೋ ಕಾಲ‌ರ್ ಅನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಲೋಕಾರ್ಪಣೆ ಮಾಡಿದರು. ಅರಣ್ಯ ಭವನದಲ್ಲಿ ಬುಧವಾರ ಏರ್ಪ ಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ರೇಡಿಯೋ ಕಾಲರ್ ಅನ್ನು ಬಂಡೀಪುರ ಮತ್ತು ನಾಗರಹೊಳೆ ಹುಲಿಸಂರಕ್ಷಿತ ಪ್ರದೇ ಶದ ಅಧಿಕಾರಿಗಳಿಗೆ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಖಂಡ್ರೆ, ಕೊಡಗು, ಚಿಕ್ಕಮಗಳೂರು, ಹಾಸನ ಸೇರಿ ಮತ್ತಿತರಜಿಲ್ಲೆಗಳಲ್ಲಿ ಆನೆಗಳು ನಾಡಿಗೆ ಬರುವುದನ್ನು ತಡೆಯಲು, ಚಲನವಲನದ ಮೇಲೆ ನಿಗಾವಹಿಸಲು ಆನೆಗಳ ಗುಂಪಿನ ನಾಯಕಿಗೆ ಅಳವಡಿಸ ಲಾಗುವುದು. ಅದರಿಂದ ಆನೆಗಳ ಸಂಚಾರದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾ ಗುವುದು ಎಂದರು. ಆನೆ ಮಾನವ ಸಂಘರ್ಷದಲ್ಲಿ ಹೆಚ್ಚಿನ ಸಾವು ನೋವು ಆಗುತ್ತಿವೆ. ಆನೆಗಳ ಚಲನ ವಲನ ತಿಳಿಯಲು ರೇಡಿಯೋ ಕಾಲರ್ ಬಳಸುತ್ತಿದ್ದೇವೆ. ಇಷ್ಟು ದಿನ ವಿದೇಶದ ರೇಡಿಯೋ ಕಾಲರ್ ಗಳನ್ನು ಬಳಸುತ್ತಿದ್ದೆವು 50…

Read More

ಬೆಂಗಳೂರು : ರಾಜ್ಯದಲ್ಲಿನ ಆಸ್ತಿ ದಸ್ತಾವೇಜು ನೋಂದಣಿ ಪ್ರಕ್ರಿಯೆ ಹಾಗೂ ಇಸಿ/ಸಿಸಿ ಸೇವೆ ನೀಡುವ ಕಾವೇರಿ 2.0 ತಂತ್ರಾಂಶದಲ್ಲಿನ ಸರ್ವರ್ ಸಮಸ್ಯೆಯಿಂದಾಗಿ ಏಳನೇ ಸಾರ್ವಜನಿಕರು ಪರದಾಡುವಂತಾಗಿದೆ.ಕಳೆದ ಒಂದು ವಾರದಿಂದ ಇದ್ದ ಸರ್ವರ್ ಸಮಸ್ಯೆ ಬುಧವಾರವೂ ಮುಂದುವರೆದಿದ್ದು, ಬೆಳಗ್ಗೆಯೂ ಕಾವೇರಿ 2.0 ತಂತ್ರಾಂಶದ ನಾಗರಿಕರ ಲಾಗಿನ್ ತೆರೆದುಕೊಳ್ಳಲಿಲ್ಲ. ಉಪ ನೋಂದಣಾಧಿಕಾರಿಗಳ ಲಾಗಿನ್ ತೆರೆದು ಕೊಂಡಿದ್ದರೂ ತಾಂತ್ರಿಕ ಸಮಸ್ಯೆ ಮುಂದು ವರೆದಿದ್ದರಿಂದಗೊಂದಲಗಳಿಗೆ ಇನ್ನೂ ಮುಕ್ತಿ ಸಿಕ್ಕಿಲ್ಲ ಎಂದು ತಿಳಿದುಬಂದಿದೆ. ಆದರೆ ಸಂಜೆ ವೇಳೆಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಸಮಸ್ಯೆಗೆ ತುತ್ತಾಗಿದ್ದ ಕಾವೇರಿ 2.0 ತಂತ್ರಾಂಶವನ್ನೀಗ ಪೂರ್ಣ ಪುನಃಸ್ಥಾಪಿಸಲಾಗಿದೆ ಎಂದಿದ್ದಾರೆ. ಕಳೆದ 1 ವಾರದಿಂದ DDoS ದಾಳಿಯಿಂದ ಸಮಸ್ಯೆಗೆ ತುತ್ತಾಗಿದ್ದ ಕಾವೇರಿ 2.0 ತಂತ್ರಾಂಶ ಈಗ ಸಂಪೂರ್ಣವಾಗಿ ಪುನಃಸ್ಥಾಪಿಸಲಾಗಿದೆ ಮತ್ತು ಈ ತಂತ್ರಾಂಶ ಇದೀಗ ಎಂದಿನಂತೆ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದೆ. ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಕಳೆದ ಕೆಲ ದಿನಗಳಿಂದ ಆಸ್ತಿ ನೋಂದಣಿ ಪ್ರಕ್ರಿಯೆ ಮತ್ತು EC/CC ಸೇವೆಗಳ ಮೇಲೆ ಪರಿಣಾಮ…

Read More

ಚಿಕ್ಕಮಗಳೂರು : ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಚಿಕ್ಕಮಂಗಳೂರು ಜಿಲ್ಲೆಯ 6 ಮೋಸ್ಟ ವಾಂಟೆಡ್ ನಕ್ಸಲರು ಶರಣಾಗತಿಯಾಗಿದ್ದರು ಬಳಿದ ಕೆಲವು ದಿನಗಳ ಹಿಂದೆ ನಕ್ಸಲ್ ರವೀಂದ್ರ ಕೂಡ ಚಿಕ್ಕಮಗಳೂರು ಜಿಲ್ಲಾಡಳಿತದ ಎದುರು ಶರಣಾಗತಿಯಾಗಿದ್ದ. ಇದರ ಬೆನ್ನಲ್ಲೇ ಕಾಡಿನಲ್ಲಿ 1 ನಾಡ ಬಂದೂಕು 10 ಕಾರ್ಟ್ರೇಜ್ ಗಳು ಪತ್ತೆಯಾಗಿರುವುದು ತಿಳಿದುಬಂದಿದೆ. ಹೌದು ಹುಲಗಾರುಬಯಲು ಅರಣ್ಯದಲ್ಲಿ ನಾಡ ಬಂದು ಪತ್ತೆಯಾಗಿದೆ. 1 ನಾಡ ಬಂದು 10 ಕಾಲಿ ಕಾಟ್ರೇಜ್ ಗಳು ಪತ್ತೆಯಾಗಿವೆ. ಚಿಕ್ಕಮಗಳೂರು ಜಿಲ್ಲೆಯ ಶ್ರೀಗೀರಿ ತಾಲೂಕಿನ ಗ್ರಾಮದಲ್ಲಿ ಪತ್ತೆಯಾಗಿವೆ. ಕಳೆದ ಶನಿವಾರ ನಕ್ಸಲ್ ರವೀಂದ್ರ ಶರಣಾಗತಿಯಾಗಿದ್ದ. ಶಸ್ತ್ರ ರೈತವಾಗಿ ನಕ್ಷಲ್ ರವೀಂದ್ರ ಶರಣಾಗತಿಯಾಗಿದ್ದ ಶರಣಾಗತಿಗೂ ಮೊದಲೇ ಕಾಡಿನಲ್ಲಿ ಬಂದು ಎಸೆದಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ ಒಂದು ಬಂದೂಕು ಹತ್ತು ಕಾಲಿ ಕಾದ್ರೇಜ್ ಗಳನ್ನು ಪೊಲೀಸರು ಸದ್ಯಕ್ಕೆ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Read More

ಕಲಬುರ್ಗಿ : ಕಳೆದ ಡಿಸೆಂಬರ್ 26 ರಂದು ಬೀದರ್ ನಲ್ಲಿ ರೈಲಿಗೆ ತಲೆ ಕೊಟ್ಟು ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣದ ಪ್ರಮುಖ ಆರೋಪಿ ಆಗಿರುವ ರಾಜು ಕಪನೂರ್ ನವರಿಗೆ ಕಲ್ಬುರ್ಗಿ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹೌದು ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾದ ರಾಜು ಕಪನೂರ್ ಗೆ ತನ್ನ ಹುಟ್ಟು ಹಬ್ಬದ ದಿನದಂದೇ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಅರ್ಜಿದಾರರ ಹತ್ತಿರ ಶಸ್ತ್ರಾಸ್ತ್ರಗಳಿದ್ದಲ್ಲಿ ಕಲಬುರ್ಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಒಪ್ಪಿಸಬೇಕು. ಅವರು ಸಾಕ್ಷಿ ನಾಶಪಡಿಸಲು ಪ್ರಯತ್ನಿಸದೆ, ತನಿಖೆಗೆ ಸಹಕರಿಸಬೇಕು. ತನಿಖಾಧಿಕಾರಿಯು ಅವರಿಗೆ ನಿರ್ದಿಷ್ಟವಾಗಿ ಸಮನ್ಸ್ ನೀಡಿದಾಗ ತನಿಖಾ ಉದ್ದೇಶಕ್ಕಾಗಿ ಹೊರತುಪಡಿಸಿ ಯಾವುದೇ ಕಾರಣಕ್ಕೂ ಬೀದರ್ ಜಿಲ್ಲೆಗೆ ಪ್ರವೇಶ ಮಾಡಬಾರದು. ತನಿಖೆ ಪೂರ್ಣಗೊಂಡ ನಂತರ…

Read More