Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಲೋಕಾಯುಕ್ತ ಕಚೇರಿ ಬಳಿ ಕೆಆರ್ಎಸ್ ಪಕ್ಷದಿಂದ ಪ್ರತಿಭಟನೆ ವಿಚಾರವಾಗಿ ಇದೀಗ ಪ್ರತಿಭಟನೆ ನಡೆಸಿದ್ದ 15 ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ಅನುಮತಿ ಪಡೆಯದೆ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದೆ. ಪ್ರತಿಭಟನೆ ನಡೆಸಿದ 15 ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.ಲೋಕಾಯುಕ್ತರು ಆಸ್ತಿ ಘೋಷಿಸಬೇಕು ಎಂದು KRS ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.
ಬೆಂಗಳೂರು : ರೂಪ ಮೌದ್ಗಿಲ್ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ 5ನೇ ACMM ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ಹಾಗಾಗಿ ಇಂದು ರೋಹಿಣಿ ಸಿಂಧೂರಿಗೆ ಕೋರ್ಟಿಗೆ ಹಾಜರಾಗಿದ್ದರು. ವಿಚಾರಣೆ ಸಂದರ್ಭದಲ್ಲಿ ನ್ಯಾಯಾಧೀಶರಾದ ವಿಜಯಕುಮಾರ್ ಜಾಟ್ಲ ಅವರು ಇಬ್ಬರು ಅಧಿಕಾರಿಗಳಿಗೆ ONE MINUTE APAOLOGY ಪುಸ್ತಕ ಓದುವಂತೆ ಜಡ್ಜ್ ಸಲಹೆ ನೀಡಿದರು. ಇಂದು ಬೆಂಗಳೂರಿನ 5ನೇ ACMM ಕೋರ್ಟ್ ನಲ್ಲಿ ಸಾಕ್ಷಿ ವಿಚಾರಣೆ ನಡೆಯಿತು. ರೋಹಿಣಿ ಸಿಂಧೂರಿ ಮತ್ತು ರೂಪಾ ಕೋರ್ಟಿಗೆ ಹಾಜರಾಗಿದ್ದಾರೆ. ರೂಪಾ ಪರ ವಕೀಲ ಪ್ರಸನ್ನ ಕುಮಾರ್ ಅವರಿಂದ ಪಾಟೀಸವಾಲು ಹಾಕಿದ್ದು, 45 ನಿಮಿಷಗಳ ಕಾಲ ರೋಹಿಣಿ ಸಿಂಧೂರಿ ಪಾಟೀಸವಾಲು ಹಾಕಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ನ್ಯಾಯಾಧೀಶರು ವಿಜಯಕುಮಾರ್ ಜಾಟ್ಲ ಸಲಹೆ ನೀಡಿದ್ದು. ಇಬ್ಬರು ಉತ್ತಮ ಹೆಸರು ಗಳಿಸಿದ ಹಿರಿಯ ಅಧಿಕಾರಿಗಳಾಗಿದ್ದೀರಿ. ನಿಮ್ಮ ಸಮಯ ಸಮಾಜಕ್ಕಾಗಿ ಮೀಸಲಿಡಬೇಕು. ಕೋರ್ಟ್ ಕಲಾಪದಲ್ಲಿ ಸಮಯ ವ್ಯರ್ಥ ಮಾಡುವ ಬದಲು ರಾಜಿ ಸಾಧ್ಯವೇ ಎನ್ನುವುದನ್ನು ಯೋಚಿಸಿ. ಒನ್…
ಶಿವಮೊಗ್ಗ : ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯ ಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮೆಸ್ಕಾಂ ಅಭಿಯಂತರರಿಗೆ ಸೂಚಿಸಿದರು.ಅವರು ಇಂದು ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾನು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಶಿಕಾರಿಪುರ, ಶಿರಾಳಕೊಪ್ಪ ಮತ್ತು ಸೊರಬ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿರಂತರ ವ್ಯತ್ಯಾಯವಾಗುತ್ತಿರುವ ಕಾರಣ ಕೃಷಿ ಚಟುವಟಿಕೆಗಳಿಗೆ ತೀವ್ರ ಅಡಚಣೆ ಆಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದರ ವ್ಯವಸ್ಥಿತ ನಿರ್ವಹಣೆಯ ಜವಾಬ್ದಾರಿ ಹೊತ್ತ ಅಧಿಕಾರಿಗಳು ವಿದ್ಯುತ್ ನ್ನು ಒದಗಿಸುವಂತೆ ಹಾಗೂ ಯಾವುದೇ ದೂರಗಳು ಬಾರದಂತೆ ನೋಡಿಕೊಳ್ಳಬೇಕು. ಮಾತ್ರವಲ್ಲ ಈ ಸಂಬಂಧ ಬರುವ ಸಾರ್ವಜನಿಕರ ಅಹವಾಲುಗಳಿಗೆ ಸಕಾಲಿಕವಾಗಿ ಸ್ಪಂದಿಸುವಂತೆ ಸೂಚಿಸಿದರು. ತಾಲೂಕಿನ ಆಯ್ದ ಭಾಗಗಳಲ್ಲಿ ಟ್ರಾನ್ಸ್ಫರ್ಮರ್ ಗಳು ಹಾಳಾಗಿದ್ದು ದುರಸ್ತಿ ಮಾಡುವ ಬಗ್ಗೆ ಹಾಗೂ ಅಗತ್ಯವಿರುವೆಡೆಗಳಲ್ಲಿ ಹೊಸ ಟ್ರಾನ್ಸ್ಫರ್ಮರ್…
ಹಾವೇರಿ : ಇಲ್ಲಿನ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಜ್ಯೋತಿ ಎಂಬಾಕೆ ಬಾಲಕನ ಗಾಯಕ್ಕೆ ಹೊಲಿಗೆ ಹಾಕೋ ಬದಲು ಫೆವಿಕ್ವಿಕ್ ಹಾಕಿ ಅಂಟಿಸಿ ಕಳುಹಿಸಿದ್ದ ಘಟನೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆಟವಾಡುವ ವೇಳೆ ಬಿದ್ದು ಗಾಯಗೊಂಡಿದ್ದ 7 ವರ್ಷದ ಬಾಲಕ ಗುರುಶಿಕನ್ ಅಣ್ಣಪ್ಪ ಹೊಸಮನಿಯನ್ನು ಈ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆತರಲಾಗಿತ್ತು. ಆದ್ರೆ ಈ ವೇಳೆ ವೈದ್ಯರಿಲ್ಲದ ಕಾರಣ ನರ್ಸ್ ಜ್ಯೋತಿ ಗಾಯಗೊಂಡಿದ್ದ ಜಾಗಕ್ಕೆ ಡ್ರೆಸ್ಸಿಂಗ್ ಮಾಡಿ, ಫೆವಿಕ್ವಿಕ್ ಹಚ್ಚಿ, ಅದರ ಮೇಲೆ ಬ್ಯಾಂಡೇಜ್ ಟೇಪ್ ಹಚ್ಚಿ ಕಳುಹಿಸಿದ್ದಳು.ಈ ಬಗ್ಗೆ ವ್ಯಾಪಕ ಟೀಕೆ ಮತ್ತು ಸಾರ್ವಜನಿಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಯಾಕೆ ಈ ರೀತಿ ಮಾಡಿದ್ದೀರಿ ಎಂದು ವ್ಯಕ್ತಿಯೊಬ್ಬರು ನರ್ಸ್ ಅನ್ನು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನರ್ಸ್ ದರ್ಪ ಮೆರೆದಿದ್ದು, ತಾನು ಮಾಡಿದ್ದೇ ಸರಿ ಎಂಬಂತೆ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾಳೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ, ನರ್ಸ್ ಜ್ಯೋತಿ ಅವರನ್ನು ಅಮಾನತು ಮಾಡಲಾಗಿದೆ. ಈ ಕುರಿತು…
ಬೆಂಗಳೂರು: ಇದೇ 11ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಶಿ ತರೂರ್, ಆನಂದ್ ಮಹೀಂದ್ರ, ಕಿರಣ್ ಮಜುಂದಾರ್ ಷಾ, ಪ್ರಶಾಂತ್ ಪ್ರಕಾಶ್, ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಪಪಾಂಡ್ರಿಯೂ, ವೋಲ್ವೊ ಸಮೂಹದ ಅಧ್ಯಕ್ಷ ಮಾರ್ಟಿನ್ ಲುಂಡ್ ಸ್ಟೆಡ್ ಸೇರಿದಂತೆ 75 ಸಾಧಕ ಉದ್ಯಮಿಗಳು ಮಾತನಾಡಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ತಿಳಿಸಿದ್ದಾರೆ. ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ಆದಿತ್ಯ ಬಿರ್ಲಾ ಗ್ರೂಪ್ ಅಧ್ಯಕ್ಷ ಕುಮಾರಮಂಗಲಂ ಬಿರ್ಲಾ, ಜಿಂದಾಲ್ ಸ್ಟೀಲ್ ವರ್ಕ್ಸ್ ವ್ಯವಸ್ಥಾಪಕ ನಿರ್ದೇಶಕ ಸಜ್ಜನ್ ಜಿಂದಾಲ್, ಆಯುಷ್ಮಾನ್ ಭಾರತ ಯೋಜನೆಯ ಮಾಜಿ ಸಿಇಒ ಇಂದುಭೂಷಣ್, ಸಿನಿಮಾ ನಿರ್ಮಾಪಕಿ ಕಿರಣ್ ರಾವ್, ಇಸ್ರೋ ಮಾಜಿ ಅಧ್ಯಕ್ಷ ಸೋಮನಾಥ್, ಏಕಸ್ ಸಿಇಒ ಅರವಿಂದ್ ಮೆಳ್ಳಿಗೇರಿ, ಅಮೆರಿಕದ ಇಂಧನ ಇಲಾಖೆಯ ಸಿಐಒ ಆ್ಯನ್ ಡಂಕಿನ್, ಝೆರೋದಾ ಸಹ ಸಂಸ್ಥಾಪಕ ನಿಖಿಲ್ ಕಾಮತ್, ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ,…
ನವದೆಹಲಿ: ಇದೇ ತಿಂಗಳ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬುಧವಾರ ಖುದ್ದಾಗಿ ಆಹ್ವಾನಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಸಚಿವೆಯನ್ನು ಭೇಟಿಯಾದ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಆಮಂತ್ರಣ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು, ಹೂಡಿಕೆದಾರರ ಸಮಾವೇಶದ ವೈಶಿಷ್ಟ್ಯಗಳನ್ನು ಮತ್ತು ರಾಜ್ಯ ಸರಕಾರದ ನೂತನ ಕೈಗಾರಿಕಾ ನೀತಿ ಹಾಗೂ ಸ್ವಚ್ಛ ಇಂಧನ ನೀತಿಯ ಬಗ್ಗೆ ನಿರ್ಮಲಾ ಅವರಿಗೆ ಮಾಹಿತಿ ನೀಡಿದರು. ಬಳಿಕ ಪಾಟೀಲ ಅವರು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಮತ್ತು ಎಐಸಿಸಿ ಕರ್ನಾಟಕ ಉಸ್ತುವಾರಿ, ಸಂಸದ ಕೆ ಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ, ಆಹ್ವಾನ ಪತ್ರಿಕೆ ನೀಡಿದರು.
BIG NEWS : ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಿಂದ ACT1 ರೇಕ್ನಿಂದ ‘SUV’ ಕಾರುಗಳನ್ನು ಸಾಗಿಸುವ ಕಾರ್ಯಕ್ಕೆ ಚಾಲನೆ
ಬೆಂಗಳೂರು : ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಭಾರತದಲ್ಲಿಯೇ ಮೊದಲ ACT1 (ಬೋಗಿ ಕವರ್ಡ್ ಟಾಲರ್ ಹೈಟ್ ಆಟೋ-ಕಾರ್ ಕ್ಯಾರಿಯರ್) ರೇಕ್ ಇಂದು ಸಂಚರಿಸಿತು. ಈ ರೇಕ್ 264 ಎಸ್.ಯು.ವಿ. (ಸ್ಪೋರ್ಟ್ ಯುಟಿಲಿಟಿ ವೆಹಿಕಲ್) ಕಾರುಗಳನ್ನು ಹೊತ್ತು ಪೆನುಕೊಂಡದಿಂದ ಹರಿಯಾಣದ ಗುರ್ಗಾಂವ್ ಜಿಲ್ಲೆಯ ಫರ್ರುಖ್ ನಗರಕ್ಕೆ ಸಾಗಿತು. ಈ ಸರಕು ಸಾಗಣೆಯಿಂದ ರೈಲ್ವೆಗೆ ₹34 ಲಕ್ಷ ಆದಾಯ ಬಂದಿದೆ.ACT1 ರೇಕ್, 33 ವಿಶೇಷವಾಗಿ ವಿನ್ಯಾಸಗೊಳಿಸಿದ ವ್ಯಾಗನ್ಗಳನ್ನು ಒಳಗೊಂಡಿದ್ದು, 264 SUV ಕಾರುಗಳನ್ನು ಸಾಗಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಹೊಸ ವ್ಯವಸ್ಥೆ ಭಾರತದಾದ್ಯಂತ ದೊಡ್ಡ ವಾಹನಗಳ ಸಾಗಾಣಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದ್ದು, ಇದು ಸದ್ಯ ಬಳಕೆಯಲ್ಲಿರುವ BCACBM ರೇಕ್ ಗಳಿಗಿಂತ ಹೆಚ್ಚಿನ ಸಾಮರ್ಥ್ಯ ಹೊಂದಿದೆ. ACT1 ರೇಕ್ ವೈಶಿಷ್ಟ್ಯಪೂರ್ಣ ಡಬಲ್-ಡೆಕರ್ ವಿನ್ಯಾಸವನ್ನು ಹೊಂದಿದ್ದು SUVಗಳನ್ನು ಎರಡೂ ಡೆಕ್( ಮೇಲೆ ಮತ್ತು ಕೆಳಗೆ) ಗಳಲ್ಲಿ ಲೋಡ್ ಮಾಡಬಹುದಾಗಿದೆ. ಇದರಿಂದ ಒಟ್ಟಾರೆ ವಾಹನ ಸಾಗಣೆಯ ಸಾಮರ್ಥ್ಯ ವೃದ್ಧಿಯಾಗಲಿದ್ದು ಇದರಿಂದ ವಾಹನ ಸಾಗಣೆ ವೆಚ್ಚ ಇಳಿಕೆಯಾಗಲಿದೆ.ACT1 ರೇಕ್ನ…
ಬೆಂಗಳೂರು : ಕಳೆದ 1 ವಾರದಿಂದ DDoS ದಾಳಿಯಿಂದ ಸಮಸ್ಯೆಗೆ ತುತ್ತಾಗಿದ್ದ ಕಾವೇರಿ 2.0 ತಂತ್ರಾಂಶ ಈಗ ಸಂಪೂರ್ಣವಾಗಿ ಪುನಃಸ್ಥಾಪಿಸಲಾಗಿದೆ ಮತ್ತು ಈ ತಂತ್ರಾಂಶ ಇದೀಗ ಎಂದಿನಂತೆ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದೆ. ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಕಳೆದ ಕೆಲ ದಿನಗಳಿಂದ ಆಸ್ತಿ ನೋಂದಣಿ ಪ್ರಕ್ರಿಯೆ ಮತ್ತು EC/CC ಸೇವೆಗಳ ಮೇಲೆ ಪರಿಣಾಮ ಉಂಟಾಗಿತ್ತು. ಇದು ಆದಾಯ ಸಂಗ್ರಹವನ್ನು ಮತ್ತಷ್ಟು ಕಡಿಮೆ ಮಾಡಿತು. ಇಂತಹ ಅನಿರೀಕ್ಷಿತ ದಾಳಿಗಳನ್ನು ಪರಿಹರಿಸಲು ಹಾಗೂ ಭವಿಷ್ಯದಲ್ಲಿ ಎದುರಾಗಬಹುದಾದ ಅಪಾಯಗಳನ್ನು ತಗ್ಗಿಸಲು ವರ್ಧಿತ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗಿದೆ ಮತ್ತು ಅರ್ಜಿಯನ್ನು ರಕ್ಷಿಸಲು ಇ-ಆಡಳಿತ ಇಲಾಖೆ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ತಾಂತ್ರಿಕ ದಾಳಿಯ ಕಾರಣಕ್ಕೆ ಫೆಬ್ರವರಿ 1, 2025 ರಂದು ತಂತ್ರಾಂಶದ ಮೇಲೆ ವ್ಯತಿರೀಕ್ತ ಪರಿಣಾಮ ಉಂಟಾಗಿತ್ತು. ಪರಿಣಾಮ ನೋಂದಣಿಗಳ ಸಂಖ್ಯೆ 556 ಕ್ಕೆ ಇಳಿದಿತ್ತು. ಸಹಿ ಮಾಡಿದ ಇಸಿ (ಋಣಭಾರ ಪ್ರಮಾಣ ಪತ್ರ) ಸಂಖ್ಯೆ 1649 ಮತ್ತು ನೀಡಲಾದ ಸಿಸಿ ಸಂಖ್ಯೆ 405 ಆಗಿದ್ದು, 15,18,72,565.45 ರೂ. ಆದಾಯ…
BREAKING : ದೆಹಲಿ ವಿಧಾನಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟ : ಬಿಜೆಪಿಗೆ ಬಹುಮತ, ಕಾಂಗ್ರೆಸ್ ಶೂನ್ಯ ಸಾಧನೆ!
ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಹಲವು ಎಕ್ಸಿಟ್ ಪೋಲ್ ಗಳ ಪ್ರಕಾರ ಈ ಬಾರಿ ಬಿಜೆಪಿ ಬಹುಮತ ಪಡೆದುಕೊಂಡು ಗೆಲುವು ಸಾಧಿಸಲಿದೆ, ಅಲ್ಲದೇ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದೆ ಎಂದು ಹಲವು ಸಮೀಕ್ಷೆ ಗಳ ಎಕ್ಸಿಟ್ ಪೋಲ್ ನಲ್ಲಿ ತಿಳಿದು ಬಂದಿದೆ. ಮ್ಯಾಟ್ರಿಜ್ ಸಮೀಕ್ಷೆ ಪ್ರಕಾರ ಬಿಜೆಪಿಗೆ ಹೆಚ್ಚಿನ ಸ್ಥಾನ ದೊರೆಯಲಿದ್ದು, ಬಿಜೆಪಿ ಈ ಬಾರಿ 35 ರಿಂದ 40 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಡಿವಿ ರಿಸರ್ಚ್ ಅಂತೆ ಆಪ್ ಗೆ 26 ರಿಂದ 34 ಸ್ಥಾನ, ಬಿಜೆಪಿಗೆ 36 ರಿಂದ 34 ಸ್ಥಾನ ಹಾಗೂ ಕಾಂಗ್ರೆಸ್ ಗೆ 0 ಮತ್ತು ಇತರರು 0 ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇನ್ನು ಅದೇ ರೀತಿಯಾಗಿ ಪೀಪಲ್ಸ್ ಇನ್ಸೈಟ್ ಸಮೀಕ್ಷೆಯ ಪ್ರಕಾರ ಬಿಜೆಪಿಗೆ ಬಹುಮತ ಸಿಗುವ ಸಾಧ್ಯತೆ ಇದ್ದು, 40 ರಿಂದ 44 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಸಾಧ್ಯತೆ…
ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಸದ್ಯ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಿದೆ. ಮೈಕ್ರೋ ಫೈನಾನ್ಸ್ ಪದ ಬಳಸಿದರೆ ಸಮಸ್ಯೆ ಆಗಬಹುದೆಂಬ ಲೆಕ್ಕಾಚಾರ ಹಿನ್ನಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಸಣ್ಣ ಸಾಲ ಎಂಬ ಪದ ಸೇರಿಸಿದೆ. ಹೌದು ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು, ಅನೇಕ ಜನರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿ ಸುಗ್ರೀವಾಜ್ಞೆ ಜಾರಿ ಮಾಡಲು ನಿರ್ಧರಿಸಿತ್ತು. ಇದೀಗ ಈ ಒಂದು ಸುಗ್ರೀವಾಜ್ಞೆ ಜಾರಿ ಮಾಡೋಕೆ ಮುಂಚೆ ರಾಜ್ಯ ಸರ್ಕಾರ ಹಲವು ಅಂಶಗಳನ್ನು ಬದಲಾವಣೆ ಮಾಡಿದೆ. ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಸದ್ಯ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಿದೆ. ಮೈಕ್ರೋ ಸಾಲ ಮತ್ತು ಸಣ್ಣ ಸಾಲ, ದಬ್ಬಾಳಿಕೆ ಕ್ರಮಗಳ ತಡೆಗಟ್ಟುವಿಕೆ, ಸುಗ್ರೀವಾಜ್ಞೆ…