Subscribe to Updates
Get the latest creative news from FooBar about art, design and business.
Author: kannadanewsnow05
ಬಳ್ಳಾರಿ : ಬಳ್ಳಾರಿಯಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ಆಗಿ ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದರು ಇದೀಗ ರಾಜಶೇಖರ ಪೋಸ್ಟ್ ಮಾರ್ಟಂ ಹಾಗೂ ವೈದ್ಯರ ನಡೆ ತೀವ್ರ ಅನುಮಾನ ಗುಡಿಸಿದ್ದು ರಾಜಕೀಯ ಒತ್ತಡಕ್ಕೆ ಮಾಡಿದ ವೈದ್ಯರು ಈ ಒಂದು ರಾಜಶೇಖರ್ ಸಾವಿನ ಸಾಕ್ಷಿ ನಾಶ ಮಾಡಲು ಬಂದಾಗಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಹೌದು ಫೈರಿಂಗ್ ಪ್ರಕರಣವನ್ನು ಮುಚ್ಚಿಹಾಕಲು ಷಡ್ಯಂತರ ನಡೆದಿದೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಭರತ್ ರೆಡ್ಡಿ ಗನ್ ಮ್ಯಾನ್ ಹಾರಿಸಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದು, ಗುಂಡು ಹಾರಿದ್ದನ್ನೇ ಮುಚ್ಚಿ ಹಾಕಲು ಇದೀಗ ರಾಜಕೀಯ ಒತ್ತಡ ಹೇರಲಾಗಿದೆ ಎನ್ನುವ ಅನುಮಾನ ವ್ಯಕ್ತವಾಗಿದೆ. ರಾಜಶೇಖರ್ ದೇಹವನ್ನು ಡಬಲ್ ಪೋಸ್ಟ್ ಮಾರ್ಟಂ ಮಾಡಲಾಗಿತ್ತು. ಎರಡೆರಡು ಬಾರಿ ರಾಜಶೇಖರ ಪೋಸ್ಟ್ ಮಾರ್ಟಂ ನಡೆದಿತ್ತು ರಾಜಶೇಖರ್ ದೇಹದಲ್ಲಿಯೇ ವೈದ್ಯರು ಬುಲೆಟ್ ಬಿಟ್ಟಿದ್ದರು. ರಾಜಕೀಯ ಒತ್ತಡಕ್ಕೆ ಸಿಲುಕಿ ವೈದ್ಯರು ಗುಂಡು ಹೊರಗಡೆ ತೆಗೆದಿರಲಿಲ್ಲ. ಭರತ ರೆಡ್ಡಿ ತಂದೆ ನಾರಾಯಣ ರೆಡ್ಡಿ ಇಂದ…
ಇರಾನ್, ಅಮೆರಿಕಾದಿಂದ ಭದ್ರತೆ ಕರೆಸಿಕೊಳ್ಳುವುದಾದರೆ, ನೀವೇನು ದನ ಕಾಯೋದಿಕ್ಕೆ ಇದ್ದೀರಾ : HD ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು : ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆಯ ಮುಂದೆ ಬ್ಯಾನರ್ ವಿಚಾರಕ್ಕೆ ಗಲಾಟೆ ಆಗಿ ಫೈರಿಂಗ್ ನಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನಪ್ಪಿದ್ದ ಈ ಒಂದು ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಕಿಡಿ ಕಾರಿದ್ದು ಇರಾನ್ ಅಮೆರಿಕಾದಿಂದ ಭದ್ರತೆ ಕರೆಸಿಕೊಳ್ಳುವ ಹಾಗಿದ್ದರೆ ನೀವೇನು ದನ ಕಾಯೋಕೆ ಇದ್ದೀರಾ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಳ್ಳಾರಿ ಘರ್ಷಣೆಗೆ ಕ್ಷುಲ್ಲಕ ಕಾರಣ ಅಂತಾರೆ. ಇದು ಕಾಕತಾಳಿಯ ಎಂದು ಗೃಹ ಸಚಿವ ಹಿಮ್ಮೆಳ ಬಾರಿಸುತ್ತಾರೆ. ಈ ಸರ್ಟಿಫಿಕೇಟ್ ಕೊಟ್ಟ ಮೇಲೆ ಯಾವ ತನಿಖೆ ನಡೆಸುತ್ತೀರಾ? ಇವರ ತೆವಲಿಗೆ ಅಧಿಕಾರಕ್ಕೆ ಯಾರನ್ನು ಬೇಕಾದರೂ ಬಲಿಕೊಡುತ್ತಾರೆ. ಭದ್ರತೆ ಕೇಳಿದರೆ ಇರಾಕ್ ಅಮೇರಿಕಾದಿಂದ ತರಿಸಿಕೊಳ್ಳಿ ಅಂತಾರೆ ನೀವು ಏನು ದನ ಕಾಯೋಕ್ಕೆ ಇದ್ದೀರಾ ಎಂದು ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದರು. ಬ್ಯಾನರ್ ಕಟ್ಟುವ ವಿಚಾರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಕಾಂಗ್ರೆಸ್ ಕಾರ್ಯಕರ್ತನ ಹತ್ತೆಯಾಗಿದೆ…
ಬೆಂಗಳೂರು : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ಆಗಿ ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ ಕಾಂಗ್ರೆಸ್ ಹಾಗೂ ಬಿಜೆಪಿಯ 26 ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದು ಅಲ್ಲದೆ, ಸೋಮಶೇಖರ ರೆಡ್ಡಿ ಗನ್ ಮ್ಯಾನ್ ಗುರುಚರಣ ಸಿಂಗ್ ನನ್ನು ಅರೆಸ್ಟ್ ಮಾಡಿ ಬೆಂಗಳೂರಿಗೆ ಕರೆ ತಂದಿದ್ದಾರೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕೊಲೆ ಆರೋಪಿ ಗನ್ ಮ್ಯಾನ್ ಗುರು ಚರಣ್ ಸಿಂಗ್ ನಾಲ್ವರು ಗನ್ ಮ್ಯಾನ್, ಸೇರಿದಂತೆ ಎಲ್ಲಾ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದರು. ವಿಚಾರಣೆಯ ವೇಳೆ ಪೊಲೀಸರು ಕಸ್ಟಡಿಗೆ ಕೇಳದ ಹಿನ್ನೆಲೆ, ಎಲ್ಲಾ ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿತು. ವಿಚಾರಣೆಯ ವೇಳೆ ತನಿಖಾಧಿಕಾರಿ ವಿರುದ್ಧ ಜಡ್ಜ್ ಗರಂ ಆಗಿದ್ದಾರೆ. ಅರೆಸ್ಟ್ ಮೆಮೋ ಬಗ್ಗೆ ತನಿಖಾಧಿಕಾರಿಗೆ ಪ್ರಶ್ನೆ ಮಾಡಿದ್ದು ಎಲ್ಲಾ ಆರೋಪಿಗಳದ್ದು ಒಂದೇ ಅರೆಸ್ಟ್ ಮೆಮೋ ಇದೆಯಲ್ಲ ಯಾಕೆ? ಎಂದು ತನಿಖಾಧಿಕಾರಿಗಳಿಗೆ ಪ್ರಶ್ನೆ ಕೇಳಿ…
ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್, ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಶಾಸಕ ಜನಾರ್ದನ ರೆಡ್ಡಿ ಮನೆಗೆ ಹುಬ್ಬಳ್ಳಿಯಿಂದ ಬಾಂಬ್ ನಿಷ್ಕ್ರಿಯ ದಳ ಹಾಗೂ ಎಫ್ಎಸ್ಎಲ್ ತಂಡ ಭೇಟಿ ನೀಡಿದ್ದು, ಇದೀಗ ಶಾಸಕ ಜನಾರ್ಧನ ರೆಡ್ಡಿ ಮನೆಯ ಮುಂದೆ ಮತ್ತೊಂದು ಬುಲೆಟ್ ಪತ್ತೆಯಾಗಿದೆ. ಹೌದು ಶಾಸಕ ಜನಾರ್ಧನರೆಡ್ಡಿ ಮನೆ ಮುಂಭಾಗದಲ್ಲಿ ಮತ್ತೊಂದು ಬುಲೆಟ್ ಪತ್ತೆಯಾಗಿದೆ. ಬುಲೆಟ್ ಪತ್ತೆಯನ್ನು ಬಾಂಬ್ ನಿಷ್ಕ್ರಿಯ ದಳ ಇದೀಗ ಪತ್ತೆ ಮಾಡಿದೆ. ಬುಲೆಟ್ ಪತ್ತೆ ಹಚ್ಚುವ ಮಷೀನ್ ನಿಂದ ಮತ್ತೊಂದು ಬುಲೆಟ್ ಪತ್ತೆಯಾಗಿದೆ. ಪತ್ತೆಯಾದ ಬುಲೆಟ್ 9 MM ಇದ್ದು, ಫೋಟೋ ಚಿತ್ರೀಕರಣ ಕೂಡ ಮಾಡಲಾಗಿದೆ. ಸ್ಥಳದಲ್ಲಿ ಎಫ್ ಎಸ ಎಲ್ ತಂಡ ಇರುವುದರಿಂದ ಫೋಟೋ ಚಿತ್ರೀಕರಣ ಮಾಡಲಿದ್ದಾರೆ. ಚಿತ್ರೀಕರಣದ ಬಳಿಕ ಅಧಿಕಾರಿಗಳು ಬುಲೆಟ್ ರವಾನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. FSL ಅಧಿಕಾರಿಗಳಿಂದ ಬುಲೆಟ್ ಪತ್ತೆಯಾದ ಸ್ಥಳ ಅಳತೆ ಮಾಡಲಾಗುತ್ತಿದೆ ಬುಲೆಟ್ ಪತ್ತೆಯಾದ ಸ್ಥಳ ಮತ್ತು ಬ್ಯಾರಿಕೆ ಇರುವಂತಹ ಅಂತರ ಬುಲೆಟ್ ಎಷ್ಟು ದೂರದಿಂದ ಹಾರಿದೆ ಎಂಬುದರ ಕುರಿತು…
ಬೆಂಗಳೂರು : ಬಳ್ಳಾರಿಯಲ್ಲಿ ಶಾಸಕ ಜನಾರ್ಧನ್ ರೆಡ್ಡಿ ಮನೆಯ ಮುಂದೆ ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಗಲಾಟೆ ನಡೆದು ಫೈರಿಂಗ್ ಆಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನಪ್ಪಿದ್ದ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ ಈಶ್ವರ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದು, ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜಶೇಖರ್ ಸಾವನ್ನಪ್ಪಿದ್ದು, ನಮ್ಮ ಪಕ್ಷದ ಕಾರ್ಯಕರ್ತರನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯವರ ಕುಮ್ಮಕ್ಕಿನಿಂದಲೇ ಬಳ್ಳಾರಿಯಲ್ಲಿ ಈ ಗಲಾಟೆ ಆಗಿದೆ. ಬಿಜೆಪಿಗರಿಗೆ ಮಾನ ಮರ್ಯಾದೆ ಇದ್ದರೆ ಬಾಯಿ ಮುಚ್ಚಿಕೊಂಡು ಇರಬೇಕು. ಏನಾಗಿದೆ ಎಂದು ಪೊಲೀಸ್ ತನಿಖೆಯಲ್ಲಿ ಗೊತ್ತಾಗುತ್ತದೆ. ಮಾಜಿ ಸಚಿವ ಶ್ರೀ ರಾಮುಲು ಬಂದು ಬ್ಯಾನರ್ ಹರಿದು ಹಾಕಿದ್ದಾರೆ ಎಂದು ಆರೋಪಿಸಿದರು. ನಮ್ಮ ಪಕ್ಷದ ಕಾರ್ಯಕರ್ತ ರಾಜಶೇಖರ್ ಸಾವಿಗೆ ಈಡಾಗಲು ಬಿಜೆಪಿನೇ ಕಾರಣ. ಕಾಂಗ್ರೆಸ್ ಪಕ್ಷದಲ್ಲಿರುವ ಯುವಕರನ್ನು ಕೆಣಕಬೇಡಿ. ವಿನಾಕಾರಣ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದರೆ ಸರಿ ಇರಲ್ಲ. ಪೊಲೀಸ್ ತನಿಖೆ ನಡೆಯುತ್ತಿದೆ ಕೆಲವರನ್ನು ಅರೆಸ್ಟ್ ಸಹ ಮಾಡಿದ್ದಾರೆ…
ಚಿಕ್ಕಮಗಳೂರು : ರೋಗಿಗಳು ಆಸ್ಪತ್ರೆಗೆ ಬಂದರೆ ವೈದ್ಯರು ತಕ್ಷಣ ಅವರನ್ನು ಪರಿಶೀಲಿಸಿ ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸುವ ಕೆಲಸ ಮಾಡಬೇಕು. ಆದರೆ ಇಲ್ಲಿ ಒಬ್ಬ ವೈದ್ಯ ರೋಗಿ ಬಂದು ಆಸ್ಪತ್ರೆಯಲ್ಲಿ ನರಳಾಡುತ್ತಿದ್ದರು ಕೂಡ ನಿರ್ಲಕ್ಷ ವಹಿಸಿದ್ದು, ವೈದ್ಯ ಮತ್ತು ಸಿಬ್ಬಂದಿಗಳ ನಿರ್ಲಕ್ಷಕ್ಕೆ 60 ವರ್ಷದ ವೃದ್ಧ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಹೌದು ವೈದ್ಯ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿದ್ದಾರೆ. ರೋಗಿಯು ನೋವಿನಿಂದ ನರಳಾಡುತ್ತಿದ್ದರೆ, ಮತ್ತೊಂದೆಡೆ ಫೋನಲ್ಲಿ ವೈದ್ಯ ಬಿಜಿಯಾಗಿದ್ದಾನೆ. ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡ ಬಯಲಾಗಿದೆ. 60 ವರ್ಷದ ಮಂಜುನಾಥ್ ಇದೀಗ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ.
ಬೆಂಗಳೂರು : ಕನ್ನಡ ಭಾಷೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಹಲವಾರು ಘಟನೆಗಳು ನಡೆದಿದ್ದು, ಇದೀಗ ಕನ್ನಡ ಮಾತನಾಡಿದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವಾರ್ಡನ್ ಒಬ್ಬ ಧಮ್ಕಿ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಬಳಿ ಇರುವಂತಹ ಎ ಎಂ ಸಿ ಕಾಲೇಜಿನ ಹಾಸ್ಟೆಲ್ ವಾರ್ಡನ್ ಸುರೇಶ್ ಕನ್ನಡಕ್ಕೆ ಅವಮಾನ ಮಾಡಿದ್ದು, ಕನ್ನಡ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ ಅವಾಜ್ ಹಾಕಿದ್ದಾನೆ. ಕನ್ನಡ ಬೇಡ ಹಿಂದಿಯಲ್ಲಿ ಮಾತಾಡು. ಇದು ಒಂದು ಸಂಸ್ಥೆ ನಿನಗೆ ಕನ್ನಡದಲ್ಲಿ ಮಾತಾಡುವುದಾದರೆ ಮನೆಗೆ ಹೋಗಿ ಮಾತನಾಡು ಇದು ಒಂದು ಸಂಸ್ಥೆ ಅರ್ಥ ಆಯ್ತಾ. ಸಂಸ್ಥೆ ಆದರೆ ಹಿಂದಿಯಲ್ಲಿ ಮಾತಾಡ್ಬೇಕಾ ಕನ್ನಡದಲ್ಲಿ ಮಾತನಾಡಬಾರದ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದಾಗ ಇಲ್ಲ ಬೇಡ ಇಲ್ಲಿ ಕಡ್ಡಾಯ ಇಲ್ಲ ಕಡ್ಡಾಯ ಇಲ್ಲ ಅಂದರೆ ಮತ್ತೇನು ಅಂತ ಕೇಳಿದಾಗ ಕಡ್ಡಾಯ ಇಲ್ಲ ಅಷ್ಟೇ. ಏನಾದರೂ ಡೌಟ್ ಇದೆಯಾ ಅಂತ ಅವಾಜ್ ಹಾಕಿದ್ದಾನೆ. ನಿನ್ ಜೊತೆ ಹಿಂದಿಯಲ್ಲಿ ಮಾತಾಡಬೇಕಾ ಅಥವಾ ಕನ್ನಡದಲ್ಲಿ ಮಾತಾಡಬೇಕಾ ಅಂತ ನಾನು…
ಬೆಂಗಳೂರು : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ಆಗಿ ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ ಕಾಂಗ್ರೆಸ್ ಹಾಗೂ ಬಿಜೆಪಿಯ 26 ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದು ಅಲ್ಲದೆ, ಸೋಮಶೇಖರ ರೆಡ್ಡಿ ಗನ್ ಮ್ಯಾನ್ ಗುರು ಚರಣ ಸಿಂಗ್ ನನ್ನು ಅರೆಸ್ಟ್ ಮಾಡಿ ಬೆಂಗಳೂರಿಗೆ ಕರೆ ತಂದಿದ್ದಾರೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕೊಲೆ ಆರೋಪಿ ಗನ್ ಮ್ಯಾನ್ ಗುರು ಚರಣ್ ಸಿಂಗ್ ನಾಲ್ವರು ಗನ್ ಮ್ಯಾನ್, ಸೇರಿದಂತೆ ಎಲ್ಲಾ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದರು. ಕೋರ್ಟ್ ಬಳಿ ಪೊಲೀಸರಿಂದ ಭಾರಿ ಬಿಗಿಬದ್ಧತೆ ಒದಗಿಸಲಾಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಎರಡು ಕೆಎಸ್ಆರ್ಪಿ ತಕುಡಿಗಳನ್ನು ನಿಯೋಜನೆ ಮಾಡಲಾಗಿದ್ದು ಕೆಎಸ್ಆರ್ಪಿ ತುಕುಡಿಗಳ ನಿಯೋಜನೆ ಮಾಡಲಾಗಿದೆ ಜೊತೆಗೆ ಸ್ಥಳೀಯ ಪೊಲೀಸರಿಂದ ಒದಗಿಸಲಾಗಿದೆ.
ಬಳ್ಳಾರಿ : ಬಳ್ಳಾರಿಯಲಿ ಶಾಸಕ ಜನಾರ್ಧನ ಮನೆಯ ಮುಂದೆ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿದ್ದ ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಜನಾರ್ಧನ ರೆಡ್ಡಿ ಅವರ ಮನೆಗೆ ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿದೆ. ಹೌದು ಗಲಾಟೆಯ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಆಟೋಗಳಲ್ಲಿ ಪೆಟ್ರೋಲ್ ಬಾಂಬ್, ಬಾಟಲಿಗಳನ್ನು ತಂದಿದ್ದರು ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಜನಾರ್ದನ ರೆಡ್ಡಿ ಮನೆಗೆ ಇಂದು ಬಾಂಬ್ ಸ್ಕಾರ್ಡ್ ಭೇಟಿ ನೀಡಿದ್ದು ತೀವ್ರ ಶೋಧ ನೆಡೆಸುತ್ತಿದೆ.ಬಳ್ಳಾರಿ ಅವಂಭಾವಿಯಲ್ಲಿರುವ ಶಾಸಕ ಜನಾರ್ಧನ್ ರೆಡ್ಡಿ ಮನೆಗೆ ಭೇಟಿ ನೀಡಿದ್ದು ಮನೆಯ ಬಳಿ ಇಂಚಿಂಚು ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯ ಬಾಂಬ್ ನಿಷ್ಕ್ರಿಯ ತಂಡದಿಂದ ಬುಲೆಟ್ ಗಳ ಹುಡುಕಾಟ ನಡೆಯುತ್ತಿದೆ. DSMD ಹಾಗು ಮಿಷನ್ಗಳ ಮೂಲಕ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಇಡೀ ಮನೆ ಶೋಧ ನಡೆಸುತ್ತಿದ್ದಾರೆ. ಘಟನಾ ಸ್ಥಳದ ಮೂಲೆ ಮೂಲೆಯನ್ನು ಸಿಬ್ಬಂದಿಗಳು ಸರ್ಚ್ ಮಾಡುತ್ತಿದ್ದಾರೆ ಬಾಂಬ್ ನಿಷ್ಕ್ರಿಯ…
ಬೆಳಗಾವಿ : ಬೆಳಗಾವಿಯ ಕೇಂದ್ರ ಸಹಕಾರಿ ಬ್ಯಾಂಕ್ (DCC) ನೌಕರರ ಸಂಘದ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ಸೇರಿದಂತೆ 8 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. BNS ಕಾಯ್ದೆ 189(2), 191(2), 115(2), 351(2), 352 (2), 190 ಕಲಂ ಅಡಿ ಪ್ರಕರಣ ದಾಖಲಿಸಲಾಗಿದೆ. ಹಲ್ಲೆಗೊಳಗಾದ ನಿಂಗರಾಜ ಕರೆಣ್ಣವರ ಬೆಳಗಾವಿಯ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಿಂದಲೇ ಅಥಣಿ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಶಾಸಕ ಸವದಿ, ಪುತ್ರ ಚಿದಾನಂದ ಸೇರಿದಂತೆ ಒಟ್ಟು 8 ಜನರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನನ್ನನ್ನು ಲಕ್ಷ್ಮಣ್ ಸವದಿ ಅವರು ಮನೆಗೆ ಕರೆಯಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದರು. ಲಕ್ಷ್ಮಣ ಸವದಿ ಅವರೇ ಕಪಾಳಕ್ಕೆ ಹೊಡೆದರು. ಪುತ್ರ ಚಿದಾನಂದ ಸವದಿ ಬಲವಾಗಿ ಸೊಂಟಕ್ಕೆ ಒದ್ದರು. ಬಳಿಕ ಕುಸಿದು ನೆಲಕ್ಕೆ ಬಿದ್ದ ನನ್ನ ಮೇಲೆ 7ರಿಂದ 8 ಜನರು ಹಲ್ಲೆ…














