Subscribe to Updates
Get the latest creative news from FooBar about art, design and business.
Author: kannadanewsnow05
ತಮಿಳುನಾಡು : ತಮಿಳುನಾಡಿನ ರಾಜಕೀಯದಲ್ಲಿ ಇದೀಗ ಭಾರಿ ಬದಲಾವಣೆ ಆಗಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜೋತೆ AIADMK ಮೈತ್ರಿಯ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿವೆ. AIADMK NDA ಮೈತ್ರಿಕೂಟದ ಭಾಗವಾಗಲಿದೆ. ಮೈತ್ರಿ ಆಗಿ ಸ್ಪರ್ಧಿಸೋ ಬಗ್ಗೆ ನಾವಿಬ್ಬರೂ ನಿರ್ಧರಿಸಿದ್ದೇವೆ ಎಂದು ಕೇಂದ್ರ ಸಚಿವ ಅಮಿತ್ ಷಾ ಘೋಷಣೆ ಮಾಡಿದರು. ಚೆನ್ನೈನಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಷಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳಗಿ ಹೋಗಿದೆ. ಅಕ್ರಮ ಮಧ್ಯ ಮಾರಾಟ ಅಕ್ರಮ ಮರಳು ಗಣಿಗಾರಿಕೆ ನಡೀತಿದೆ. ಡಿಎಂಕೆ ಸರ್ಕಾರ ಉದ್ಯೋಗ ನೀಡಲು ಹಣ ಪಡೆಯುತ್ತಿದೆ. ನೀಟ್ ಕ್ಷೇತ್ರ ಮರ ವಿಂಗಡಣೆ ವಿಚಾರ ರಾಜಕೀಯಕ್ಕೆ ಬಳಸಿದ್ದಾರೆ ಎಂದು ತಮಿಳುನಾಡು ಡಿಎಂಕೆ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದರು.
ಬೆಂಗಳೂರು : ಜಾತಿ ಗಣತಿ ವರದಿ ಜಾರಿ ಸಂಬಂಧ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಸಚಿವರ ಅಭಿಪ್ರಾಯ ಅಲಿಸಿದ ಸಿಎಂ ಸಿದ್ದರಾಮಯ್ಯ ಒಬ್ಬೊಬ್ಬರು ತಮ್ಮ ನಿಲುವು ತಿಳಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ವೇಳೆ ಪರವಿರೋಧ ಅಭಿಪ್ರಾಯಗಳು ವ್ಯಕ್ತವಾದವು. ವರದಿ ವೈಜ್ಙಾನಿಕವಿದ್ದರೆ ಯಾವುದೇ ಭಿನ್ನಾಬಿಪ್ರಾಯವಿಲ್ಲ. ಸರಿಯಾದ ದತ್ತಾಂಶಗಳಿದ್ದರೆ ಒಪ್ಪಬಹುದು. ಜಾತಿ ಗಣತಿ ವರದಿ ಸೋರಿಕೆಯಾಗಿದೆ ಅಂತ ಊಹಾಪೋಹ ಆಗ್ತಿದೆ.ವರದಿ ವೈಜ್ನಾನಿಕವಾಗಿ ಮಾಡಿಲ್ಲ ಎಂಬ ಮಾತಿದೆ. ಇದರ ಬಗ್ಗೆ ಪರಿಶೀಲಿಸಿ ನಿರ್ಧರಿಸಿ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ವೈಜ್ಙಾನಿಕವರದಿಗೆ ವಿರೋಧವಿಲ್ಲವೆಂದ ಎಂ ಬಿ ಪಾಟೀಲ್, ನಾವು ವರದಿಯನ್ನ ನೋಡಿಲ್ಲ.ವರದಿ ಬಗ್ಗೆ ತಪ್ಪು ಅಭಿಪ್ರಾಯ ಹೋಗುವುದು ಬೇಡ. ಇದನ್ನ ಮತ್ತೊಮ್ಮೆ ಪರಿಶೀಲಿಸಿದರೆ ಉತ್ತಮ ಎಂದು ಡಿಕೆ ಶಿವಕುಮಾರ್ ಹೇಳಿದರು.ಸಂಪುಟ ಉಪಸಮಿತಿ ರಚಿಸಿದರೆ ಉತ್ತಮ.ಎಲ್ಲರ ಅಭಿಪ್ರಾಯ ಪಡೆದು ತೀರ್ಮಾನಿಸಿಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ಸಂಗ್ರಹ. ತಜ್ಙರನ್ನೊಳಗೊಂಡ ಸಮಿತಿ ರಚನೆಯಾಗಲಿ ಎಂದುಕೆಲವು ಸಚಿವರಿಂದ…
ಚಿತ್ರದುರ್ಗ : ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಶುರುವಾಗಿದ್ದು, ಬಿರು ಬೇಸಿಗೆಯಿಂದ ಬಸವಳಿದಿದ್ದ ಜನತೆಗೆ ವರುಣ ತಂಪೆರಿದಿದ್ದಾನೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಹವಮಾನ ಇಲಾಖೆಯು ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಚಿತ್ರದುರ್ಗದಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿದೆ. ಹೌದು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿದೆ. ಬಿಸಿಲ ಬೆಗೆಯಿಂದ ಬಸವಳಿದಿದ್ದ ಜನರಿಗೆ ಇದೀಗ ವರುಣ ತಂಪೆರೆದಿದ್ದಾನೆ. ಮಳೆ ಆಗಮನದಿಂದ ಬಯಲು ಸೀಮೆಯ ಜನರಲ್ಲಿ ಇದೀಗ ಸಂತಸ ಮೂಡಿದೆ.
ಕೊಪ್ಪಳ : ಅತಿಯಾಗಿ ಕಿರುಕುಳದಿಂದ ಬೇಸತ್ತ ಪತ್ನಿ ಒಬ್ಬಳು ತನ್ನ 5 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ಆದರೆ ಅದೃಷ್ಟವಶಾತ್ ಈ ಒಂದು ಘಟನೆಯಲ್ಲಿ ತಾಯಿ ಸಾವನ್ನಪ್ಪಿದ್ದು 5 ವರ್ಷದ ಮಗಳು ಪ್ರಾಣಾಪಾಯದಿಂದ ಬಚಾವ್ ಆಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಯನಗರದಲ್ಲಿ ನಡೆದಿದೆ. ಬೆಂಕಿ ಹಚ್ಚಿಕೊಂಡ ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದು, 5 ವರ್ಷದ ಮಗುವಿನ ಸ್ಥಿತಿ ಗಂಭೀರವಾಗಿದೆ.ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಮಂಗಲ ಎಂದು ತಿಳಿದುಬಂದಿದೆ.ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪುತ್ರಿ ಸಮಾನ್ವಿತಾ ಸ್ಥಿತಿ ಗಂಭೀರವಾಗಿದೆ.ತಕ್ಷಣ ಮಗುವನ್ನು ಬಳ್ಳಾರಿ ಆಸ್ಪತ್ರೆಗೆ ಸ್ಥಳೀಯರು ರವಾನಿಸಿದ್ದಾರೆ. ಮೃತ ಮಹಿಳೆಗೆ ಪತಿ ವಿಪರೀತ ಕಿರುಕುಳ ನೀಡುತ್ತಿದ್ದ ಎಂದು ಆರೋಪ ಕೇಳಿ ಬಂದಿದೆ.
ತಮಿಳುನಾಡು : ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಸ್ವಯಂ ಪ್ರೇರಿತರಾಗಿ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಕೆಳಗಿಳಿದಿದ್ದರಿಂದ ಅಲ್ಲದೇ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಇದೀಗ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರ ನೋಂದಣಿಗೆ ಚುನಾವಣೆ ಘೋಷಣೆಯಾಗಿತ್ತು. ಏಪ್ರಿಲ್ 12ರಂದು ಚುನಾವಣೆ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ, ಬಿಜೆಪಿಯಿಂದ ನೈನಾರ್ ನಾಗೇಂದ್ರನ್ ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಅಣ್ಣಾಮಲೈ ನೈನಾರ್ ನಾಗೇಂದ್ರನ್ ಅವರನ್ನು ನಾಮನಿರ್ದೇಶನ ಮಾಡಲು ನೈನಾರ್ ನಾಗೇಂದ್ರನ್ ನಾಮಪತ್ರ ಸಲ್ಲಿಸಿದ್ದಾರೆ. ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ನೈನಾರ್ ನಾಗೇಂದ್ರನ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಬಿಜೆಪಿಯ ಇತರ ನಾಯಕರು ಅದನ್ನು ಅನುಮೋದಿಸಿದರು. ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಅಧಿಕೃತ ಘೋಷಣೆಯನ್ನು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಿಂದ ಮಾಡಲಾಗುವುದು…
ಬೆಂಗಳೂರು : ಫ್ಲಿಪ್ಕಾರ್ಟ್, ಅಮೆಜಾನ್ ಮತ್ತಿತರ ಇ-ಕಾಮರ್ಸ್ ಕಂಪನಿಗಳಲ್ಲಿ ಕಾರ್ಯನಿರ್ವಹಿಸುವ ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಿ ಅನೇಕ ಕಲ್ಯಾಣ ಕಾರ್ಯಕ್ರಮ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಇದೀಗ ಸಂಪುಟ ಸಭೆಯಲ್ಲಿ ಗಿಗ್ ವರ್ಕರ್ಸ್ ವಿಧೇಯಕಕ್ಕೆ ಕ್ಯಾಬಿನೆಟ್ ತೀರ್ಮಾನ ಕೈಗೊಂಡಿದೆ. ಸುಗ್ರೀವಾಜ್ಞೆ ಮೂಲಕ ಗಿಗ್ ವರ್ಕರ್ಸ್ ಜಾರಿಗೆಗೆ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಜೀವನ ನಿರ್ವಹಣೆಗೆ ಯಾವುದೇ ಭದ್ರತೆ ಇಲ್ಲದೆ ದುಡಿಯುವ ಗಿಗ್ ಕಾರ್ಮಿಕರಿಗೆ ಅನುಕೂಲ ಮಾಡಿಕೊಡುವಂತೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಲಹೆ ನೀಡಿದ್ದು, ಅವರ ಸಲಹೆ ಮೇರೆಗೆ ಮಂಡಳಿ ರಚನೆ ಮಾಡಲಾಗುತ್ತಿದೆ. ಇ -ಕಾರ್ಮಸ್, ಪ್ಲಾಟ್ ಫಾರಂ ಆಧಾರಿತ ಕಂಪನಿಗಳಿಂದ ಶೇಕಡ 5ರಷ್ಟು ಸೆಸ್ ಸಂಗ್ರಹಿಸಿ ರಾಜ್ಯ ಸರ್ಕಾರದ ಪಾಲು ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲಾಗುವುದು. ಈ ನಿಧಿಯನ್ನು ಬಳಕೆ ಮಾಡಿ ಗಿಗ್ ಕಾರ್ಮಿಕರಿಗೆ ಭದ್ರತೆ ಕಲ್ಪಿಸುವ ಜೊತೆಗೆ 8 ಅಂಶಗಳನ್ನು ಆಧರಿಸಿ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುವುದು ಎನ್ನಲಾಗಿದೆ.
ಬೆಂಗಳೂರು : ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆಯು ಬೆಳಗಾವಿ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಬೆಂಗಳೂರು ಮತ್ತು ಎಸ್ಎಂವಿಟಿ ಬೆಂಗಳೂರು-ಎರ್ನಾಕುಲಂ ನಿಲ್ದಾಣಗಳ ನಡುವೆ ಒಂದು ಟ್ರಿಪ್ ಬೇಸಿಗೆ ವಿಶೇಷ ರೈಲುಗಳ ಸಂಚಾರವನ್ನು ಏರ್ಪಡಿಸಿದೆ. ರೈಲು ಸೇವೆಗಳ ವಿವರಗಳು ಈ ಕೆಳಗಿನಂತಿವೆ. 1. ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ನಡುವೆ ಒಂದು ಟ್ರಿಪ್ ವಿಶೇಷ ರೈಲು (07373/07374) ಸಂಚಾರ: ರೈಲು ಸಂಖ್ಯೆ 07373 ಏಪ್ರಿಲ್ 12, 2025 ರಂದು ಬೆಳಗಾವಿಯಿಂದ ಬೆಳಿಗ್ಗೆ 4:00 ಗಂಟೆಗೆ ಹೊರಟು ಮಧ್ಯಾಹ್ನ 3:30ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಹಿಂತಿರುಗುವ ಮಾರ್ಗದಲ್ಲಿ, ರೈಲು ಸಂಖ್ಯೆ 07374 ಏಪ್ರಿಲ್ 15, 2025 ರಂದು ಎಸ್ಎಂವಿಟಿ ಬೆಂಗಳೂರಿನಿಂದ ಮಧ್ಯಾಹ್ನ 12:00 ಗಂಟೆಗೆ ಹೊರಟು ರಾತ್ರಿ 11:30ಕ್ಕೆ ಬೆಳಗಾವಿಯನ್ನು ತಲುಪಲಿದೆ. ಈ ರೈಲು ಲೋಂಡಾ, ಅಳ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. 2 ಎಸ್ಎಂವಿಟಿ…
ಬೆಂ ಗಳೂರು : ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಸಚಿವ ಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ರಾಜ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನ ಸಂಚಿಬ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಮಂಡನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆಯಾಗಿದೆ. ಅಲ್ಲದೆ ಗುರುವಾರ ಅಂದರೆ ಏಪ್ರಿಲ್ 17 ರಂದು ಸಂಜೆ 4 ಗಂಟೆಗೆ ವಿಶೇಷ ಸಂಪುಟ ಸಭೆ ಕರೆಯಲಾಗಿದೆ. ಸಂಪುಟ ಸಭೆಯಲ್ಲಿ ಜಾತಿ ಗಣ ಜನಗಣತಿ ವರದಿ ಕುರಿತು ಚರ್ಚಿಸುತ್ತೇವೆ. ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಂಗಳೂರು : ಬಿಜೆಪಿ ಅವಧಿಯ 40% ಕಮಿಷನ್ ಆರೋಪದ ವಿಚಾರವಾಗಿ ನಾಗಮೋಹನ್ ದಾಸ್ ವರದಿಯನ್ನು ಇದೀಗ ಸಂಪುಟ ಸಭೆ ಅಂಗೀಕರಿಸಿದೆ.ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿಯನ್ನು ಆಧರಿಸಿ ಇದೀಗ ಸಂಪುಟ ಸಭೆ ಎಸ್ಐಟಿ ರಚನೆಗೆ ನಿರ್ಧಾರ ಕೈಗೊಂಡಿದೆ. ಬಿಜೆಪಿ ಅವಧಿಯ 40% ಕಮಿಷನ್ ಆರೋಪದ ವಿಚಾರವಾಗಿ ಇದೀಗ ಎಸ್ಐಟಿ ರಚನೆ ಮಾಡಲು ನಿರ್ಧರಿಸಿದೆ. ಹೌದು ಕಳೆದ ಬಿಜೆಪಿ ಅವಧಿಯಲ್ಲಿ ರಾಜ್ಯ ಗುತ್ತಿಗೆದಾರರಿಂದ 40% ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಲು ಕ್ಯಾಬಿನೆಟ್ ನಿರ್ಧರಿಸಿದೆ. ಹೌದು ನಾಗಮೋಹನ ದಾಸ್ ವರದಿಯನ್ನು ಅಂಗೀಕರಿಸಿದ ಸಂಪುಟ ಸಭೆ, ನಾಗಮೋಹನ ದಾಸ್ ಸಮಿತಿ ವರದಿ ಆಧರಿಸಿ SIT ರಚನೆಗೆ ನಿರ್ಧಾರ ಕೈಗೊಂಡಿದೆ. ಗುತ್ತಿಗೆದಾರರ ಸಂಘದ ಆರೋಪ ಬಗ್ಗೆ ತನಿಖೆಗೆ ಎಸ್ಐಟಿ ರಚನೆಗೆ ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ವಿಶೇಷ ತನಿಖಾ ತಂಡ ರಚಿಸಲು…
ಬೆಂಗಳೂರು : ಜಾತಿ ಗಣತಿ ವರದಿ ಅನುಷ್ಟಾನ ವಿಚಾರಕ್ಕೆ ಸಂಬಂಧಿಸಿದಂತೆ ಏ.17 ರಂದು ಸಂಜೆ 4 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ.ಏ.17 ರಂದು ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಜಾತಿ ಗಣತಿ ವರದಿ ಅನುಷ್ಟಾನ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಿದೆ. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಅನುಷ್ಠಾನ ಕುರಿತು ದೀರ್ಘ ಚರ್ಚೆ ಆಯಿತು. ಆದರೆ ಏಪ್ರಿಲ್ 17ರಂದು ರಾಜ್ಯ ಸರ್ಕಾರ ವಿಶೇಷ ಸಂಪುಟ ಸಭೆ ನಿಗದಿ ಮಾಡಿದ್ದು, ಏಪ್ರಿಲ್ 17ರಂದು ಸಂಜೆ 4 ಗಂಟೆಗೆ ವಿಶೇಷ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಜಾರಿ ಆಗುವ ಕುರಿತು ಮಹತ್ವದ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಸಂಪುಟ ಸಭೆಯಲ್ಲಿ ಸಚಿವರು ಯಾವುದೇ ಅಭಿಪ್ರಾಯವನ್ನು ಮಂಡಿಸಿಲ್ಲ.ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಸಚಿವರು ಪರ ಮತ್ತು…