Author: kannadanewsnow05

ಬೆಂಗಳೂರು : ಒಳಮೀಸಲಾತಿ ಜಾರಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್ ಸಿ ಸಮುದಾಯದ ಆಂತರಿಕ ಸಮೀಕ್ಷೆ ನಡೆಸಲು ಸೂಚಿಸಿತ್ತು. ಈ ನಿಟ್ಟಿನಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮೀಕ್ಷೆ ನಡೆಸಿದ್ದು, ಸಮೀಕ್ಷೆಯ ಪ್ರಗತಿ ಕುರಿತು ನಿವೃತ್ತ ನ್ಯಾ.ನಾಗಮೋಹನದಾಸ್ ಆಯೋಗವು ಇದೀಗ ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿದೆ. ಜುಲೈ 30ರಂದೇ ವರದಿ ಸಿದ್ಧವಾಗಿತ್ತು. ಮುಖ್ಯಮಂತ್ರಿಯವರ ಸಮಯಾವಕಾಶ ಕೇಳಿದ್ದರೂ ಕಾರ್ಯ ಒತ್ತಡ ಕಾರಣಕ್ಕೆ ಅವರು ಲಭ್ಯರಾಗಲಿಲ್ಲ. ಹೀಗಾಗಿ, ಇಂದು ಬೆಳಿಗ್ಗೆ 11 ಗಂಟೆಗೆ ವರದಿ ನಾಗಮೋಹನ್‌ದಾಸ್ ವರದಿ ಸಲ್ಲಿಸಿದ್ದಾರೆ. ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಈ ಹಿಂದೆ ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆದರೆ, ಆ ವರದಿಯನ್ನು ಬದಿಗಿಟ್ಟು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿ.ಸಿ. ಮಾಧುಸ್ವಾಮಿ ನೇತೃತ್ವದ ಸಚಿವ ಸಂಪುಟ ಉಪ ಸಮಿತಿ ಪ್ರತ್ಯೇಕ ವರದಿ ನೀಡಿತ್ತು. ಆ ಸಮಿತಿಯು ಪರಿಶಿಷ್ಟ ಜಾತಿಯನ್ನು ಪ್ರತ್ಯೇಕ ಗುಂಪುಗಳನ್ನಾಗಿ ವಿಂಗಡಿಸಿ…

Read More

ಬೆಂಗಳೂರು :ಕನ್ನಂಬಾಡಿ ಕಟ್ಟೊದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ರು. ಆದರೆ ಈಗ ಅದನು ಹೇಳೋಕೆ ಯಾರಿಗೂ ಧೈರ್ಯ ಇಲ್ಲ. ಕೆ.ಆರ್.ಎಸ್. ಗೇಟ್ ಹೆಬ್ಬಾಗಿಲಿನಲ್ಲಿ ಈಗಲೂ ಅದನ್ನು ಕಾಣಬಹುದು. ಮೈಸೂರು ರಾಜರ್ಷಿ ನಾಲ್ವಡಿ ಒಡೆಯರ್ ಪುಣ್ಯ ಸ್ಮರಣೆ ದಿನದಂದೇ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ KRS ಜಲಾಶಯಕ್ಕೆ ಮತಾಂಧ ಟಿಪ್ಪು ಸುಲ್ತಾನನ ಹೆಸರಿಟ್ಟು TS ಜಲಾಶಯ ಎಂದು ಮರುನಾಮಕರಣ ಮಾಡುವ ಹುನ್ನಾರ ನಡೆಯುತ್ತಿದೆಯೇ? ಎಂದು ಆರ್.ಅಶೋಕ್ ಆರೋಪಿಸಿದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ನಾಡದ್ರೋಹಿ, ಮತಾಂಧ ಟಿಪ್ಪು ಸುಲ್ತಾನ ಸತ್ತಿದ್ದು 1799ರಲ್ಲಿ. ಮೈಸೂರು ಭಾಗದ ಗ್ರಾಮೀಣ ಜನರ ನಾಲಿಗೆಯ ಮೇಲೆ ಇಂದಿಗೂ ಕನ್ನಂಬಾಡಿ ಕಟ್ಟೆ ಎಂದೇ ಕರೆಸಿಕೊಳ್ಳುವ ಕೆಆರ್ ಎಸ್ ಜಲಾಶಯದ ಕಾಮಗಾರಿ ಪ್ರಾರಂಭವಾದದ್ದು 1911ರಲ್ಲಿ. 1799ರಲ್ಲಿ ಸತ್ತ ಮತಾಂಧ ಟಿಪ್ಪು ಸುಲ್ತಾನನಿಗೂ, ಅವನು ಸತ್ತ ಮೇಲೆ ಸರಿಸುಮಾರು 112 ವರ್ಷ ಆದಮೇಲೆ ಕಾಮಗಾರಿ ಪ್ರಾರಂಭವಾದ ಕನ್ನಂಬಾಡಿ ಕಟ್ಟೆಗೂ ಏನು ಸಂಬಂಧ ಸಚಿವ @CMahadevappa ನವರೇ? ನಿಮ್ಮ ಬಾಲಿಶ ಹೇಳಿಕೆ ಗೋಕುಲಾಷ್ಟಮಿಗೂ ಇಮಾಮ್…

Read More

ತುಮಕೂರು : ಇತ್ತೀಚಿಗೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಮಾರಣಹೋಮ ನಡೆದಿತ್ತು. ಇಂದು ತುಮಕೂರಿನಲ್ಲಿ ರಾಷ್ಟ್ರ ಪಕ್ಷಿ ನವಿಲುಗಳ ನಿಗೂಢ ಸಾವಾಗಿದೆ. ಮಿಡಿಗೇಶಿಯ ಹನುಮಾನ್ಪುರದಲ್ಲಿ 19 ನವಿಲುಗಳು ನಿಗೂಢವಾಗಿ ಸಾವನಪ್ಪಿವೆ. ಐದು ಗಂಡು ನವಿಲು ಹಾಗು 14 ಹೆಣ್ಣು ನವಿಲುಗಳು ಸಾವನ್ನಪ್ಪಿವೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬಿಡಿಗೇಶಿಯ ಹನುಮಾಂಪುರ ಕೆರೆ ಕೋಡಿ ನೀರು ಹರಿಯುವ ಪಕ್ಕದ ಜಮೀನಿನಲ್ಲಿ ಆಗಸ್ಟ್ 1ರಂದು ರಾತ್ರಿ ನವಿಲುಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಜಮೀನಿಗೆ ಬಂದಾಗ ರೈತರ ಕಣ್ಣಿಗೆ ಒಂದು ನವಿಲುಗಳ ಮೃತ ದೇಹಗಳು ಕಂಡುಬಂದಿವೆ. ನವಿಲುಗಳು ಸಾವನಪ್ಪಿದ ವಿಷಯ ತಿಳಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಮತ್ತು ಪಶು ವೈದ್ಯರು ಸ್ಥಳಕ್ಕೆ ಬಂದು ಪೋಸ್ಟ್ ಮಾಟಂ ಮಾಡಿ ಎಫ್ಎಸ್ಎಲ್ ಗೆ ಕಳುಹಿಸಿದ್ದಾರೆ ಎಂದು ಸ್ಥಳೀಯ ರೈತರು ಒಬ್ಬರು ಮಾಹಿತಿ ನೀಡಿದರು.

Read More

ಶಿವಮೊಗ್ಗ : ಆತ್ಮಹತ್ಯೆಗೆ ಯತ್ನಿಸಿದ್ದ ಸಿಇಓ ಮನೆಯ ಅಡುಗೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಓ ಮನೆಯ ಅಡುಗೆ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸುರೇಶ್ ಎನ್ನುವವರು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ಆದರೆ ಇಂದು ಚಿಕಿತ್ಸೆ ಫಲಿಸದೆ ಸುರೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಡುಗೆ ಸಿಬ್ಬಂದಿ ಸುರೇಶ್ ಸಾವನ್ನಪ್ಪಿದ್ದಾರೆ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಬಳಿ ಸುರೇಶ್ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೆ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಸುರೇಶ ಇದೀಗ ಸಾವನಪ್ಪಿದ್ದಾರೆ. ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಸುರೇಶ್ ಒಂಬತ್ತು ದಿನ ರಜೆ ತೆಗೆದುಕೊಂಡಿದ್ದರು. ಜುಲೈ 31ರಂದು ಮತ್ತೆ ಸುರೇಶ ಕೆಲಸಕ್ಕೆ ಹಾಜರಾಗಿದ್ದಾರೆ. 9 ದಿನ ಗೈರಾಗಿದ್ದಕ್ಕೆ ಅಡುಗೆ ಸಿಬ್ಬಂದಿ ಸುರೇಶ್ ಗೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ತರಾಟೆಗೆ ತೆಗೆದುಕೊಂಡಿದ್ದರು. ಸಿಇಓ ಮಾತಿನಿಂದ ಮನನೊಂದಿದ್ದ ಸುರೇಶ್ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗಿದೆ ಅಡುಗೆ ಸಿಬ್ಬಂದಿ ಸುರೇಶ್…

Read More

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆ ಒಂದು ನಡೆದಿದ್ದು, ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ನೇಣು ಬಿಗಿದುಕೊಂಡು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಸಿಕೆ ಅಚ್ಚುಕಟ್ಟುವಿನಲ್ಲಿ ಒಂದು ಘಟನೆ ನಡೆದಿದೆ. ಗಾಂಧಾರ್ (13) ಆತ್ಮಹತ್ಯೆಗೆ ಶರಣಾಗಿದ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಬೆಳಿಗ್ಗೆ ತಂದೆ ಬಾಲಕನ ರೂಮ್ಗೆ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕೆಗೆ ಬಂದಿದೆ. ಬಾಲಕನ ತಂದೆ ಮ್ಯೂಸಿಕ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ವಿದ್ಯಾರ್ಥಿ ಆತ್ಮತೆಯ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸಿ.ಕೆ ಅಚ್ಚುಘಟ್ಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನಟ ದರ್ಶನ್ ಅಭಿಮಾನಿಗಳು ಎಂದು ಹೇಳಿ ನಟಿ ರಮ್ಯಾ ಗೆ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿದರು. ಈ ಕುರಿತು ನಟಿ ರಮ್ಯಾ ಬೆಂಗಳೂರು ಕಮಿಷನರ್ ಗೆ ದೂರು ನೀಡಿದ್ದರು. ಬಳಿಕ ಕಮಿಷನರ್ ಈ ಒಂದು ಪ್ರಕರಣ ಸಿಸಿಬಿಗೆ ವರ್ಗಾಯಿಸಿದರು. ಈ ವೇಳೆ ಸಿಸಿಬಿ ಪೊಲೀಸರು ಇತ್ತೀಚಿಗೆ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಮತ್ತೆ ಇಬ್ಬರ ಆರೋಪಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಹಾಕಿ, ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಮತ್ತೆ ಇಬ್ಬರನ್ನು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಜಾಲತಾಣದಲ್ಲಿ ಪೋಸ್ಟ್ ಹಾಕಿ ನಿಂದಿಸಿದ ಇಬ್ಬರು ಆರೋಪಿಗಳನ್ನು ಇದೀಗ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇತ್ತೀಚಿಗೆ ಸಿಸಿಬಿ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ಬಳ್ಳಾರಿ ಮೂಲದ ಒಬ್ಬ ಹಾಗೂ ಚಿತ್ರದುರ್ಗ ಮೂಲದ ಮತ್ತೊಬ್ಬನನ್ನು ಅರೆಸ್ಟ್ ಮಾಡಿದ್ದರು.

Read More

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದು ಈ ಹಿನ್ನೆಲೆಯಲ್ಲಿ  ನಾಳೆಯಿಂದ ರಸ್ತೆಗೆ ಬಸ್ ಇಳಿಯುವುದು ಬಹುತೇಕ ಡೌಟ್ ಎನ್ನಲಾಗುತ್ತಿದೆ. ಇದರ ಬೆನ್ನೆಲೆ ನೌಕರರಿಗೆ ಸಾರಿಗೆ ಇಲಾಖೆ ಶಾಕ್ ನೀಡಿದ್ದು ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರ ರಜೆ ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಹೌದು ನಾಳೆಯಿಂದ ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನೌಕರರ ರಜೆ ರದ್ದು ಮಾಡಿದ ಸಾರಿಗೆ ಇಲಾಖೆ. ಮುಷ್ಕರದಲ್ಲಿ ಭಾಗಿ ಆದರೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ. ಡ್ಯೂಟಿ ಮಾಡಿಲ್ಲ ಅಂದರೆ ಸಂಬಳ ನೀಡಲ್ಲ ಎಂದು ಸಾರಿಗೆ ಇಲಾಖೆ ನೌಕರರಿಗೆ ಎಚ್ಚರಿಕೆ ನೀಡಿದೆ. ಇಂದು ಮಧ್ಯ ರಾತ್ರಿಯಿಂದಲೇ ಸಾರಿಗೆ ನೌಕರರ ಮುಷ್ಕರ ಆರಂಭ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಸಾರಿಗೆ ನೌಕರರಿಗೆ ಯಾವುದೇ ರಜೆ ಇಲ್ಲ ನೌಕರರಿಗೆ ಯಾವುದೇ ರಜೆ ಮಂಜೂರು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಗತ್ಯ ಬಿದ್ದರೆ ವೀಕ್ಲಿ ಆಫ್ ಕೂಡ ರದ್ದು ಮಾಡಲು ಅಧಿಕಾರಿಗಳಿಗೆ…

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮತ್ತೆ ಶೋಧ ಕಾರ್ಯ ಆರಂಭವಾಗಲಿದೆ. ಪಾಯಿಂಟ್ ನಂಬರ್ 11, 12 ಮತ್ತು 13ನೇ ಜಾಗದಲ್ಲಿ ಎಸ್ಐಟಿ ಶೋಧ ಕಾರ್ಯ ಮುಂದುವರಿಸಲಿದೆ. ಕೆಲವೇ ಕ್ಷಣಗಳಲ್ಲಿ ಎಸ್ಐಟಿ ಶೋಧ ಕಾರ್ಯ ಆರಂಭಿಸಲಿದೆ ಪಾಯಿಂಟ್ ನಂಬರ್ 11 ರಿಂದ ಇಂದು ಎಸ್ಐಟಿ ತಂಡ ಶೋಧ ಆರಂಭಿಸಲಿದೆ ದೂರುದಾರ ಗುರುತಿಸಿದ 13. ಪಾಯಿಂಟ್ ಗಳಿಗೂ ಕೂಡ ಭದ್ರತೆ ಒದಗಿಸಲಾಗಿದೆ. ಬಾಕಿ ಉಳಿದಿರುವ ಮೂರು ಪಾಯಿಂಟ್ ಗಳತ್ತ ಇದೀಗ ಎಲ್ಲರ ಚಿತ್ತ ನೆಟ್ಟಿದೆ.

Read More

ದಿನಾಂಕ:09:08:2025 ರಂದು ಬೆಳಿಗ್ಗೆ5:47am ರಿಂದ ಪ್ರಾರಂಭವಾಗಿ ಮಧ್ಯಾಹ್ನ 01:24pm ರವರೆಗೆ ಮುಂದುವರಿಯುತ್ತದೆ ಇದರಿಂದ ಸರ್ವಾರ್ಥ ಸಿದ್ದಿ ಯೋಗ & ಸೌಭಾಗ್ಯ ಯೋಗ ದೊರಕುತ್ತದೆ.ಭದ್ರನ ನೆರಳು ಇಲ್ಲದಿರುವುದರಿಂದ ದಿನವಿಡೀ ರಾಖಿ ಕಟ್ಟಲು ಅವಕಾಶವಿದೆ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ…

Read More

ವಿಜಯನಗರ : ಅರಣ್ಯ ಇಲಾಖೆಗೆ ಸೇರಿದ ಜಾಗವೆಂದು ಸುಮಾರು 30ಕ್ಕೂ ಹೆಚ್ಚು ಎಕರೆ ಬೆಳೆ ನಾಶಪಡಿಸಲಾಗಿದ್ದು ಅಧಿಕಾರಿಗಳ ವರ್ತನೆಗೆ ಬೆಸತ್ತು ರೈತ ಮಹಿಳೆಯರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಲೋಕಮ್ಮ (51) ಮತ್ತು ದುರ್ಗಮ್ಮ (46) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಾಳೆದಹಳ್ಳಿ ತಾಂಡ ಹಾಗೂ ಮಾಚಿಹಳ್ಳಿ ಕೊರಚರಹಟ್ಟಿಯಲ್ಲಿ ಒಂದು ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಗ್ರಾಮಗಳು ಎಂದು ತಿಳಿದು ಬಂದಿದೆ. ನೋಟಿಸ್ ನೀಡದೆ ಅರಣ್ಯ ಅಧಿಕಾರಿಗಳು ಏಕಾಏಕಿ ಬೆಳೆ ನಾಶಪಡಿಸಿದ್ದಾರೆ. ಜೆಸಿಬಿಗಳ ಮೂಲಕ ಸುಮಾರು 30ಕ್ಕೂ ಹೆಚ್ಚು ಎಕರೆ ಅಧಿಕಾರಿಗಳು ಬೆಳೆಯನ್ನು ನಾಶಪಡಿಸಿದ್ದಾರೆ. ಸರ್ವೆ ನಂಬರ್ 31 ಮತ್ತು 386 ರಲ್ಲಿ ಮೆಕ್ಕೆಜೋಳ ಬೆಳೆದಿದ್ದರು. ರೈತರು ಸಾಗುವಳಿ ಪತ್ರ ಆರ್ ಟಿ ಸಿ ಹೊಂದಿದ್ದರು ಸಹ ಅಧಿಕಾರಿಗಳು ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಅರಣ್ಯ ಇಲಾಖೆಗೆ ಸೇರಿದ ಜಾಗ ಎಂದು ಅಧಿಕಾರಿಗಳು ಬೆಳೆ ನಾಶಪಡಿಸಿದ್ದಾರೆ ದೌರ್ಜನ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹರಪನಹಳ್ಳಿ…

Read More