Author: kannadanewsnow05

ಬೆಳಗಾವಿ : ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಗಾಂಧಿ ಭಾರತ್ ಸಮಾವೇಶದಲ್ಲಿ ಮಹಾತ್ಮ ಗಾಂಧಿ ಬೃಹತ್ ಪುತ್ಥಳಿಯನ್ನು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾವರಣಗೊಳಿಸಿದರು. ಸಮಾವೇಶದ ಕುರಿತು ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಮಿತ್ ಶಾ ಹಾಗೂ ಕೆಲವು ಚಮಚಗಳು ಅಭಿವೃದ್ಧಿ ಮಾಡೋಕೆ ಆಗದೆ ಗಾಂಧಿ ಕುಟುಂಬಕ್ಕೆ ಬೈಯುತ್ತಾರೆ ಎಂದು ವಾಗ್ದಾಳಿ ಎಂದು ನಡೆಸಿದರು. ಇಂದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಗಾಂಧಿ ಭಾರತ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, RSS, ಬಿಜೆಪಿಯವರು ಯಾವಾಗಲೂ ದಲಿತ ವಿರೋಧಿಗಳು. ಬಡವರು ರೈತರು ಕೂಲಿಕಾರ್ಮಿಕರ ಬಗ್ಗೆ ಬಿಜೆಪಿಯವರಿಗೆ ಚಿಂತೆ ಇಲ್ಲ. ದೇಶಕ್ಕಾಗಿ ಚೆನ್ನಮ್ಮ ಹೋರಾಟ ಮಾಡಿದ ನೆಲ ಇದು. ಗಾಂಧಿ ಕುಟುಂಬಕ್ಕೆ ಪ್ರಧಾನಿ ಮೋದಿ ಅಮಿತ್ ಶಾ ಹಾಗೂ ಚಮಚಗಳು ಬೈಯುತ್ತಾರೆ. ಕೆಲಸ ಮಾಡಲು ಆಗದೆ ಗಾಂಧಿ ಕುಟುಂಬದ ಬಗ್ಗೆ ಬೈಯುತ್ತಾರೆ. ನಾಥುರಾಮ್ ಗೋಡ್ಸೆ ಸಾವರ್ಕರ್ ಶಿಷ್ಯ. ಗಾಂಧೀಜಿಯನ್ನ ಕೊಂದ ಗೋಡ್ಸೆಯನ್ನು ಮೋದಿ ಪೂಜೆ ಮಾಡುತ್ತಾರೆ ಎಂದು ಬೆಳಗಾವಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

Read More

ಉತ್ತರಕನ್ನಡ : ಕಳೆದ ಎರಡು ದಿನಗಳ ಹಿಂದೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭ ಧರಿಸಿದಂತಹ ಹಸುವಿನ ತಲೆಕೆಡಿದು ಮಾಂಸ ಕದ್ದು ದುರುಳರು ವಿಕೃತಿ ಮೇರಿದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೌದು ಉತ್ತರ ಕನ್ನಡದಲ್ಲಿ ಈ ಒಂದು ಘಟನೆಯಿಂದ ಜನರು ಬೆಚ್ಚಿಬಿದ್ದಿದ್ದಾರೆ. ಇದೆ ವೇಳೆ ಉತ್ತರ ಕನ್ನಡ ಎಸ್​ಪಿ ಜತೆ ಗೃಹಸಚಿವ ಪರಮೇಶ್ವರ್ ನಿನ್ನೆ ಪ್ರತ್ಯೇಕ ಸಭೆ ಮಾಡಿದ್ದಾರೆ. ಗೋ ಹತ್ಯೆಯನ್ನ ಸರ್ಕಾರ ಯಾವುದೇ ಕಾರಣಕ್ಕೂ ಬೆಂಬಲಿಸಲ್ಲ. ಗೋ ಹಂತಕರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಗೋ ಮಾಂಸ ಸಾಗಾಟದ ಜಾಲ ಇದರೆ ಸಂಪೂರ್ಣ ಕಲೆ ಹಾಕುವಂತೆ ಗೃಹ ಸಚಿವ ಪರಮೇಶ್ವರ್ ಸಭೆಯಲ್ಲಿ ಸೂಚನೆ ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಉತ್ತರ ಕನ್ನಡ ಜಿಲ್ಲೆಯ ಎಸ್ಪಿ ನಾರಾಯಣ್ ಅವರು, ನಾಲ್ಕು ತಂಡಗಳನ್ನು ರಚಿಸಿ ಗೋ ಹಂತಕರನ್ನು ಬಂಧಿಸಲು ಕಾರ್ಯಚರಣೆ ನಡೆಸಿ ಇದುವರೆಗೂ ಒಟ್ಟು ಐದು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಕಳೆದ ಒಂದು ತಿಂಗಳಲ್ಲಿ…

Read More

ಬೆಂಗಳೂರು : ನಿನ್ನೆ ಬೆಂಗಳೂರಳಲ್ಲಿ ರಾತ್ರಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ನಡೆದಿತ್ತು.ಇದೀಗ ಬೆಂಗಳೂರಲ್ಲಿ ವಕೀಲೇಯ ಮೇಲೆ ಐಟಿ ಅಧಿಕಾರಿಯೊಬ್ಬರು ಹಲ್ಲೆ ನಡೆಸಿದ್ದು ಅಲ್ಲದೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ FIR ದಾಖಲಾಗಿದೆ. ಹೌದು ಐಟಿ ಅಧಿಕಾರಿ ವರುಣ್ ಮಲ್ಲಿಕ್ ಲೈಂಗಿಕ ಕಿರುಕುಳ ನೀಡಿದ್ದಾರೆ. ಅಲ್ಲದೇ ಹಲ್ಲೆ ನಡೆಸಿದ್ದಾರೆ ಎಂದು ವಕೀಲೆಯೊಬ್ಬರು ಆರೋಪಿಸಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಆರೋಪಿಗೆ ಪೊಲೀಸರು 2 ನೋಟಿಸ್ ನೀಡಿದ್ದಾರೆ.ಈ ಕುರಿತು ಬೆಂಗಳೂರಿನ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ವರುಣ್ ಮಲ್ಲಿಕ್ ವಿರುದ್ಧ FIR ದಾಖಲಾಗಿದೆ.

Read More

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ಗಾಂಧಿ ಭಾರತ ಸಮಾವೇಶ ಆಯೋಜನೆ ಮಾಡಲಾಗಿತ್ತು.ಈ ಒಂದು ಸಮಾವೇಶದಲ್ಲಿ ಮಹಾತ್ಮ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಅನಾವರಣಗೊಳಿಸಿದರು. ಸಮಾವೇಶದ ಬಳಿಕ ತೆರಳುತ್ತಿದ್ದ ವೇಳೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಅವರ ಕಾರು ಅಪಘಾತವಾಗಿದೆ. ಹೌದು ಸಚಿವ ಭೈರತಿ ಸುರೇಶ್ ಕಾರಿಗೆ ಹಿಂಬದಿಯಿಂದ ಎಸ್ಕಾರ್ಟ್ ವಾಹನ ಡಿಕ್ಕಿ ಹೊಡೆದಿದೆ. ಈ ವೇಳೆ ಗಲಿಬಿಲಿಗೊಂಡ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಚಾಲಕ ಹಾಗೂ ಪೊಲೀಸರಿಗೆ ಕಾರಲ್ಲೇ ಕುಳಿತು ಸುರೇಶ್ ಈ ವೇಳೆ ತರಾಟೆಗೆ ತೆಗೆದುಕೊಂಡರು. ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ಪ್ರವೇಶ ದ್ವಾರದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಸಚಿವ ಭಾರತಿ ಸುರೇಶ್ ಅವರಿಗೆ ಯಾವುದೇ ಗಾಯಗಳಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read More

ಬೆಳಗಾವಿ : 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿಯವರು ಅಧ್ಯಕ್ಷತೆ ವಹಿಸಿಕೊಂಡಿದ್ದರು. ಇದರ ಭಾಗವಾಗಿ ಇಂದು ಕಾಂಗ್ರೆಸ್ ಬೆಳಗಾವಿಯಲ್ಲಿ ಗಾಂಧೀ ಭಾರತ್ ಸಮಾವೇಶ ಹಮ್ಮಿಕೊಂಡಿತ್ತು ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೃಹತ್ ಗಾಂಧೀಜಿ ಪುತ್ಥಳಿಯನ್ನು ಅನಾವರಣಗೊಳಿಸಿದರು. ಈ ಕಾರ್ಯಕ್ರಮದಲ್ಲಿ ಬಿಜೆಪಿಯ ಶಾಸಕ ಎಸ್ ಟಿ ಸೋಮಶೇಖರ್ ಅವರು ಕೂಡ ಭಾಗಿಯಾಗಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಮೂಲ ಕಾಂಗ್ರೆಸ್ಸಿಗ ಹಾಗಾಗಿ ಮಹಾತ್ಮ ಗಾಂಧೀಜಿ ಅನುಯಾಯಿಯಾಗಿ ಇಲ್ಲಿಗೆ ಬಂದಿದ್ದೇನೆ.ಗಾಂಧೀಜಿಗೂ ಬಿಜೆಪಿ ಅವರಿಗೂ ಅಜಗಜಾಂತರ ವ್ಯತ್ಯಾಸವಿದೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ. ಸರ್ಕಾರಿ ಕಾರ್ಯಕ್ರಮಕ್ಕೆ ಆಹ್ವಾನ ಬಂದಿತ್ತು. ಹಾಗಾಗಿ ಇಲ್ಲಿಗೆ ಬಂದಿದ್ದೇನೆ ಎಂದರು. ಅಲ್ಲದೆ ಕಾರ್ಯಕ್ರಮದಲ್ಲಿ ಮೊದಲ ಸಾಲಿನ ಶಾಸಕರ ಕುರ್ಚಿಯಲ್ಲಿ ಸೋಮಶೇಖರ್ ಕುಳಿತಿದ್ದರು. ಗಾಂಧೀಜಿಯ ಮೇಲೆ ಗೌರವ ಇಟ್ಟವರು ಕಾರ್ಯಕ್ರಮಕ್ಕೆ ಬರುತ್ತಾರೆ. ಮಹಾತ್ಮ ಗಾಂಧೀಜಿಗೂ ಬಿಜೆಪಿಗೂ ಅಜಗಜಾಂತರ ವ್ಯತ್ಯಾಸ ಇದೆ. ಪ್ರತಿಯೊಬ್ಬರೂ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು.…

Read More

ಚಿತ್ರದುರ್ಗ : ಹಸಿವಿನಿಂದ ಬಳಲುತ್ತಿರುವ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಈ ಒಂದು ಅನ್ನಭಾಗ್ಯ ಯೋಜನೆ ಜಾರಿ ಮಾಡಿದೆ. ಆದರೆ ಇದನ್ನು ಅದೆಷ್ಟೋ ಕಡೆ ದುರುಪಯೋಗಪಡಿಸಿಕೊಳ್ಳಲಾಗುತ್ತಿದ್ದು, ಇದೀಗ ಚಿತ್ರದುರ್ಗದಲ್ಲಿ ಬಡವರಿಗೆ ಸೇರಬೇಕಾಗಿದ್ದ ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿ ಹಾಗೂ ನಾಲ್ವರು ಆರೋಪಿಗಳನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಬಡವರಿಗೆ ಹಂಚಿಕೆ ಮಾಡಬೇಕಾದ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಐಮಂಗಲ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನ ಚಂದ್ರಶೇಖರ, ಗುರು, ವೀರೇಶ ಮತ್ತು ಮುಜ್ಜು ಎಂದು ತಿಳಿದುಬಂದಿದೆ. ಅವರಿಂದ ಲಾರಿ ಮತ್ತು ಲಾರಿಯಲ್ಲಿದ್ದ ಸುಮಾರು 15 ಟನ್ ಪಡಿತರ ಅನ್ನ ಭಾಗ್ಯ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿ ಸಾಗಾಟ ಮಾಡುತ್ತಿರುತ್ತಾರೆ ಎಂಬ ಖಚಿತವಾಗಿ ಮಾಹಿತಿ ಮೇರೆಗೆ ಗುಯಿಲಾಳು ಟೋಲ್ ಪ್ಲಾಜಾದಲ್ಲಿ ಐಮಂಗಲ ವೃತ್ತ ನಿರೀಕ್ಷಕರಾದ ಎನ್ ಗುಡ್ಡಪ್ಪ ಮತ್ತು ಐಮಂಗಲ ಠಾಣೆಯ ಪಿಎಸ್‌ಐ ಶ್ರೀಮತಿ ಎಂ. ಟಿ. ದೀಪು ಹಾಗೂ ಸಿಬ್ಬಂಧಿಯವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.…

Read More

ಬೆಳಗಾವಿ : 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆದಿತ್ತು. . ಈ ಒಂದು ಐತಿಹಾಸಿಕ ದಿನದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಗಾಂಧಿ ಭಾರತ ಸಮಾವೇಶ ಆಯೋಜನೆ ಮಾಡಲಾಗಿತ್ತು. ಇದೆ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕ ತಿರುಗಿಸುವುದರ ಮೂಲಕ ಅನಾವರಣಗೊಳಿಸಿದರು. ಈ ಒಂದು ಸಮಾವೇಶಕ್ಕೆ ಈಗಾಗಲೇ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,ಸಂಸದೆ ಪ್ರಿಯಾಂಕಾ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಎಲ್ಲಾ ಸಚಿವರು ಶಾಸಕರುಗಳು ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರು ಭಾಗಿಯಾಗಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿ ಡ್ಯೂಟಿ ಖಾದರ್ ಸಚಿವರಾದಂತಹ HK ಪಾಟೀಲ್, ಪ್ರಿಯಾಂಕ್ ಖರ್ಗೆ, ಚೆಲುವರಾಯಸ್ವಾಮಿ, ಸಿರಿಗಂತೆ ಇನ್ನು ಅನೇಕ ಕಾಂಗ್ರೆಸ್ ನಾಯಕರು ಈ ಒಂದು ಸಮಾವೇಶದಲ್ಲಿ ಭಾಗಿಯಾಗಿದ್ದರು

Read More

ರಾಮನಗರ : ಕಳೆದ ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ 10 ಲಕ್ಷ ತೆಗೆದುಕೊಂಡ ಸಾಲಕ್ಕೆ 65 ಲಕ್ಷ ಬಡ್ಡಿ ಕಟ್ಟಿದರು ಕೂಡ ಸಾಲ ಕೊಟ್ಟ ವ್ಯಕ್ತಿ ಕಿರುಕುಳ ನೀಡಿದ್ದರಿಂದ ವ್ಯಕ್ತಿ ಒಬ್ಬ ಲಾರಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದ. ಇದೀಗ ಮತ್ತೊಂದು ಘಟನೆ ನಡೆದಿದ್ದು ಫೈನಾನ್ಸಿನಲ್ಲಿ ಸಾಲ ಪಡೆದಿದ್ದ ಮಹಿಳೆಯೊಬ್ಬರು ಸಾಲಗಾರರ ಕಿರುಕುಳ ತಾಳಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ತಾಲೂಕಿನ ತಿಮ್ಮಯ್ಯನದೊಡ್ಡಿಯಲ್ಲಿ ನಡೆದಿದೆ. ಹೌದು ಸಾಲಗಾರರ ಕಾಟಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬರುತ್ತಿದ್ದು, ರಾಮನಗರದ ಯಶೋಧಮ್ಮ (60) ಎನ್ನುವ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಖಾಸಗಿ ಫೈನಾನ್ಸ್ ಕಂಪನಿಗಳಲ್ಲಿ ಯಶೋಧಮ್ಮ 5 ಲಕ್ಷ ರೂಪಾಯಿ ಸಾಲವನ್ನು ಪಡೆದಿದ್ದರು. ಸುಮಾರು 8ಕ್ಕೂ ಹೆಚ್ಚು ಫೈನಾನ್ಸ್ ಕಂಪನಿಗಳಲ್ಲಿ ಯಶೋಧಮ್ಮ ಸಾಲ ಪಡೆದಿದ್ದರು. ಆದರೆ ಸಾಲ ಮರುಪಾವತಿಸಿದ ಹಿನ್ನೆಲೆಯಲ್ಲಿ ಫೈನಾನ್ಸ್ ನವರು ಮನೆಯ ಬಳಿ ಬಂದು ಗಲಾಟೆ ಮಾಡುತ್ತಿದ್ದರು.ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಇದೀಗ ಆರೋಪ…

Read More

ಉತ್ತರಕನ್ನಡ : ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿ ಕೊಟ್ಟಿಗೆಯಲ್ಲಿದ್ದಂತಹ 7 ಹೋರಿಗಳು ಸಜೀವವಾಗಿ ದಹನ ಗೊಂಡಿರುವ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇಮಗಾರದಲ್ಲಿ ನಡೆದಿದೆ. ಮನೆಯಲ್ಲಿದ್ದ ವೈರ್‌ಗೆ ಶಾರ್ಟ್ ಸರ್ಕ್ಯೂರ್ಟ್‌ನಿಂದಾಗಿ ಕಿಡಿ ಹೊತ್ತಿದ್ದು, ಕೊಟ್ಟಿಗೆಯ ಅಟ್ಟದ ಮೇಲಿರುವ ಹುಲ್ಲಿಗೆ ಈ ಕಿಡಿ ತಾಗಿ ಬೆಂಕಿ ಹತ್ತಿದೆ. ಹುಲ್ಲಿಗೆ ಬಿದ್ದ ಬೆಂಕಿ ಆವರಿಸಿ ಕೊಟ್ಟಿಗೆಯಲ್ಲಿದ್ದ 7 ಹೋರಿಗಳು ಸಜೀವ ದಹನವಾಗಿದೆ. ಹೇಮಗಾರದ ಮಹೇಶ್ ಹೆಗಡೆ ಎಂಬವರ ಮನೆಯಲ್ಲಿ ಬಾನುವಾರ ತಡರಾತ್ರಿ ಘಟನೆ ನಡೆದಿದ್ದು, ಸೋಮವಾರ ಸಂಜೆ ವೇಳೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Read More

ವಿಜಯಪುರ : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ 5 ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಲೇ ಬಂದವು. ಆದರೆ ಈ ಗ್ಯಾರಂಟಿ ಯೋಜನೆಗಳಿಂದ ಅದೆಷ್ಟೋ ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸುತ್ತಿದ್ದಾರೆ. ಅದಕ್ಕೆ ಮತ್ತೊಂದು ಉದಾಹರಣೆ ಎಂಬಂತೆ ಇದೀಗ ಕರ್ನಾಟಕ ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಶಿರಾಡೋಣ ಗ್ರಾಮದಲ್ಲಿ ಮಹಿಳೆಯೊಬ್ಬರು ಪತ್ರಾಸ್‌ ಮನೆ ಕಟ್ಟಿಕೊಂಡಿದ್ದಾರೆ. ಹೌದು ಶಿರಾಡೋಣ ಗ್ರಾಮದ ಗೃಹಿಣಿ ನೀಲಾಬಾಯಿ ಗಂಗಣ್ಣ ಪಾಂಡ್ರೆ ತಮಗೆ ಬಂದ ಗೃಹಲಕ್ಷ್ಮಿ ಹಣ 30 ಸಾವಿರದೊಂದಿಗೆ ಇನ್ನಷ್ಟು ಹಣ ಹೊಂದಿಸಿಕೊಂಡು 1 ಲಕ್ಷ ವೆಚ್ಚದಲ್ಲಿ ಪತ್ರಾಸ್‌ ಮನೆ ನಿರ್ಮಿಸಿಕೊಂಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ನೀಲಾಬಾಯಿ ಅವರು ನಮಗೆ ಸ್ವಂತ ಮನೆ ಇರಬೇಕು ಎಂಬ ಆಸೆ ಬಹಳ ದಿನಗಳಿಂದ ಇತ್ತು, ಇದೀಗ ಗೃಹಲಕ್ಷ್ಮಿ ಹಣದಿಂದ ಕೂಡಿಟ್ಟ ಹಣದಲ್ಲಿ ಈ ಒಂದು ಮನೆ ನಿರ್ಮಿಸಿದ್ದೇವೆ ಎಂದು ಸಂತಸ ಹಂಚಿಕೊಂಡರು. ಮನೆಗೆ ‘ಗೃಹಲಕ್ಷ್ಮಿ ನಿಲಯ’ ಎಂದು ನಾಮಕರಣ ಮಾಡಿದ್ದೂ…

Read More