Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ಮಂಗಳವಾರ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ನೇತೃತ್ವದ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ ನೀಡಲಾಯಿತು. ಸಾಧು-ಸಂತರ ಮೂಲಕ ಈಶ್ವರಪ್ಪ ತಮ್ಮ ಶಕ್ತಿ ಪ್ರದರ್ಶನ ಮಾಡಿದರು. ಇಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಉದ್ಘಾಟನೆ ಮಾಡಲಾಯಿತು. ಕೆ.ಎಸ್ ಈಶ್ವರಪ್ಪರಿಂದ ಕನ್ನೆರಿ ಮಠದ ಕಾಡಸಿದ್ದೇಶ್ವರ ಶ್ರೀಗಳ ಪಾದಪೂಜೆ ನೆರವೇರಿತು. ಶ್ರೀಗಳಿಗೆ ಪಾದಪೂಜೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದೆ ವೇಳೆ ಕನ್ನೆರಿ ಮಠದ ಸ್ವಾಮೀಜಿ ಕ್ರಾಂತಿವೀರ ಬ್ರಿಗೇಡ್ ಲಾಂಛನ ಬಿಡುಗಡೆ ಮಾಡಿದರು. ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹಾಗೂ ಹಲವು ಸ್ವಾಮೀಜಿಗಳ ಸಮ್ಮುಖದಲ್ಲಿ ಈಶ್ವರಪ್ಪ ಗೋ ಪೂಜೆ ಸಲ್ಲಿಸಿದರು. ನೀಲಕಂಠ ಶಾಸ್ತ್ರಿಗಳ ನೇತೃತ್ವದಲ್ಲಿ ವೇದ ಘೋಷಗಳ ಪಠಣ ನಡೆಯಿತು.ಇದೇ ವೇಳೆ, 1008 ಸಾಧು ಸಂತರ ಪಾದ ಪೂಜೆಯನ್ನು ನೆರವೇರಿಸಲಾಯಿತು. ಇದಕ್ಕೂ ಮುನ್ನ 1008 ಮಹಿಳೆಯರು ಕುಂಭ, ಕಲಾ ತಂಡಗಳು ಹಾಗೂ ವಾದ್ಯಗಳೊಂದಿಗೆ ಮೆರವಣಿಗೆ ಜರುಗಿತು. ಈ ಹಿಂದೆ ರಾಯಣ್ಣ ಬ್ರಿಗೇಡ್ ಮೂಲಕ ರಾಜ್ಯ ರಾಜಕೀಯದಲ್ಲಿ ಸದ್ದು…
ಚಾಮರಾಜನಗರ : ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ಬಸ್ ಚಲಾಯಿಸಿದ ಶಿಕ್ಷಕನನ್ನು ಇದೀಗ ಅಮಾನತುಗೊಳಿಸಲಾಗಿದೆ. ಗೊಂಬಳ್ಳಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ವೀರಭದ್ರಸ್ವಾಮಿಯನ್ನು ಸಸ್ಪೆಂಡ್ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ವೀರಭದ್ರಸ್ವಾಮಿ ಚಾಲಕನ ಬದಲು ತಾವೇ ಬಸ್ ಚಲಾಯಿಸಿದ್ದರು. ಶಿಕ್ಷಕ ವೀರಭದ್ರ ಸ್ವಾಮಿ ಶಾಲಾ ಬಸ್ ಚಲಾಯಿಸುವ ವಿಡಿಯೋ ಸಹ ವೈರಲ್ ಆಗಿತ್ತು.ಸಾರ್ವಜನಿಕರ ದೂರಿನ ಮೇರೆಗೆ ಶಿಕ್ಷಕ ವೀರಭದ್ರ ಸ್ವಾಮಿಯನ್ನು ಇದೀಗ ಅಮಾನತು ಮಾಡಲಾಗಿದೆ. ಉಲ್ಲಂಘನೆ ಆರೋಪದ ಅಡಿ ವೀರಭದ್ರ ಸ್ವಾಮಿಯನ್ನು ಅಮಾನತು ಮಾಡಲಾಗಿದೆ ಅಮಾನತುಗೊಳಿಸಿ ಡಿಡಿಪಿಐ ರಾಮಚಂದ್ರರಾಜೆ ಅರಸ್ ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರ : ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿ ನಂತರ ಪತಿ ನಾಪತ್ತೆ ಎನ್ನುವ ನಾಟಕ ಆಡಿದ್ದ ಘಟನೆ ಚಾಮರಾಜನಗರ ತಾಲೂಕಿನ ಜನ್ನೂರು ಎಂಬ ಗ್ರಾಮದಲ್ಲಿ ನಡೆದಿದೆ. ಸಂತೇಮರಹಳ್ಳಿ ತಾಲೂಕಿನ ಜನ್ನೂರು ಗ್ರಾಮದ ರಮೇಶ್(45) ಎಂಬಾತ ಪತ್ನಿಯಿಂದಲೇ ಕೊಲೆಯಾದ ದುರ್ದೈವಿ ಎಂದು ತಿಳಿದುಬಂದಿದೆ. ಈತನ ಪತ್ನಿ ಗೀತಾ(38) ಹಾಗೂ ಈಕೆಯ ಪ್ರಿಯಕರ ಗುರುಪಾದಸ್ವಾಮಿ(40) ಎಂಬವರನ್ನು ಪೊಲೀಸರು ಜೈಲಿಗಟ್ಟಿದ್ದಾರೆ.ಪತಿ ರಮೇಶ್ ಗೆ ಮಚ್ಚಿನ ಹಿಂಭಾಗದಿಂದ ಬಲವಾಗಿ ತಲೆಗೆ ಹೊಡೆದು ಬಳಿಕ ದಿಂಬಿನಲ್ಲಿ ಉಸಿರುಗಟ್ಟಿಸಿ ಸಾಯಿಸಲಾಗಿದೆ. ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಕೊಂಡು ಬೈಕ್ ನಲ್ಲಿ ಹೊತ್ತು ಕುಪ್ಪೇಗಾಲದ ಕಪಿಲಾ ನದಿಯಲ್ಲಿ ಬಿಸಾಡಿದ್ದಾರೆ. ಗೀತಾ ಮತ್ತು ಪ್ರಿಯಕರ ಗುರುಪಾದಸ್ವಾಮಿಯನ್ನು ಪೊಲೀಸರು ಭಾನುವಾರದಂದು ಹೆಚ್ಚಿನ ವಿಚಾರಣೆ ನಡೆಸಿದ ಬಳಿಕ ಕೊಲೆ ಪ್ರಕರಣವನ್ನು ಬೇಧಿಸಿದ್ದಾರೆ. ಕುದೇರು ಠಾಣೆ ಪೊಲೀಸರು ನಾಪತ್ತೆ ನಾಟಕ ಆಡಿದ್ದ ಪತ್ನಿ ಹಾಗೂ ಪ್ರಿಯಕರನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಫೆ.2ರಂದು ಮೃತ ರಮೇಶನ ಅಕ್ಕ ಸುವರ್ಣ ಠಾಣೆಗೆ ಬಂದು ಅನೈತಿಕ ಸಂಬಂಧದ ಕಾರಣದಿಂದ ತಮ್ಮನನ್ನು ಪತ್ನಿಯೇ…
ದಕ್ಷಿಣಕನ್ನಡ : ದಕ್ಷಿಣಕನ್ನಡದಲ್ಲಿ ವಿವಿಧ ಶಾಲೆಗಳಲ್ಲಿ ಒಟ್ಟು 21 ಮಕ್ಕಳಿಗೆ ಚಿಕನ್ ಪಾಕ್ಸ್ ಸೋಂಕು ದೃಢಪಟ್ಟಿದೆ. ದಕ್ಷಿಣಕನ್ನಡ ಜಿಲ್ಲೆಯ ಕಡಬ ಒಂದೇ ತಾಲೂಕಿನ ವಿವಿಧ ಶಾಲೆಗಳಲ್ಲಿ ಒಟ್ಟು 21 ಮಕ್ಕಳಿಗೆ ಈ ಒಂದು ಚಿಕನ್ ಪಾಕ್ಸ್ ದೃಢಪಟ್ಟಿದೆ. ಹಾಗಾಗಿ ಮಕ್ಕಳ ಪೋಷಕರಲ್ಲಿ ಇದೀಗ ಆತಂಕ ಮನೆ ಮಾಡಿದೆ. ಹೌದು ರೋಗ ಹರಡಿರುವ ಶಾಲೆಗಳ ಆಡಳಿತ ಮಂಡಳಿಗೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಆದೇಶ ನೀಡಿದೆ. ರೋಗ ಕಡಿಮೆಯಾಗುವವರೆಗೂ ಮಕ್ಕಳಿಗೆ ರಜೆ ನೀಡುವಂತೆ ಮತ್ತು ಮಕ್ಕಳನ್ನು ಶಾಲೆಗೆ ಕಳುಹಿಸದಂತೇ ಶಾಲೆಗಳಿಗೆ ಮತ್ತು ಪೋಷಕರಿಗೆ ಜಿಲ್ಲಾ ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ವಿನಂತಿ ಮಾಡಿದ್ದಾರೆ. ಆರೋಗ್ಯ ಇಲಾಖೆಯಿಂದ ದೊರೆತ ಮಾಹಿತಿ ಅನ್ವಯ ನೆಲ್ಯಾಡಿಯಲ್ಲಿ ಎರಡು ಶಾಲೆಗಳಲ್ಲಿ ಒಟ್ಟು ಒಂಬತ್ತು ಮಕ್ಕಳಿಗೆ, ಬೆಳ್ಳಾರೆ ಶಾಲೆಯಲ್ಲಿ ಒಂದು, ಲಾವತ್ತಡ್ಕದಲ್ಲಿ ಒಂದು, ಗೋಳಿತ್ತೊಟ್ಟುವಿನಲ್ಲಿ ಒಂದು, ಕುಕ್ಕೆ ಸುಬ್ರಹ್ಮಣ್ಯದ ಶಾಲೆಯ 6 ಮಕ್ಕಳಿಗೆ ಸೇರಿದಂತೆ ಒಟ್ಟು 21 ಮಕ್ಕಳಿಗೆ ಚಿಕನ್ಪಾಕ್ಸ್ ಹರಡಿರುವ ಬಗ್ಗೆ ಪ್ರಸ್ತುತ ಮಾಹಿತಿ ಲಭ್ಯವಾಗಿದೆ.
ಗದಗ : ಒಂದೆಡೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಬೇಸತ್ತು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ, ಇನ್ನೊಂದು ಕಡೆ ಖಾಸಗಿಯಾಗಿ ಕೈಸಾಲ ಮಾಡಿ ಅವರ ಕಿರುಕುಳಕ್ಕೆ ಹಲವರು ಬೀದಿಗೆ ಬಂದಿದ್ದಾರೆ, ಇದೀಗ ಗದಗದಲ್ಲಿ ಅಮಾನವೀಯ ಘಟನೆ ನಡೆದಿದ್ದು ಕೇವಲ 10,000 ಪಡೆದ ಸಾಲವನ್ನ ತೀರಿಸಲು ಸ್ವಲ್ಪ ತಡವಾಗಿದ್ದಕ್ಕೆ ವೃದ್ಧೆಯನ್ನು ಹೊರಹಾಕಿ ಬಡ್ಡಿ ದಂಧೆ ಕೂಡ ದರ್ಪ ತೋರಿರುವ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ. ಹೌದು ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯಿಂದ ಉಷಾ ದೇವಿಯನ್ನು ಮೌಲಾಸಾಬ್ ಎನ್ನುವ ವ್ಯಕ್ತಿ ಹೊರಹಾಕಿ ಮನೆಗೆ ಬೀಗ ಹಾಕಿದ್ದಾನೆ. ಮೌಲಾಸಾಬ್ ಬಳಿ 10 ಸಾವಿರ ಸಾಲವನ್ನು ಪಡೆದುಕೊಂಡಿದ್ದರು. ಸಹೋದರ ಚಿಕಿತ್ಸೆಗೆಂದು ಉಷಾದೇವಿ ಸಾಲ ಪಡೆದಿದ್ದರು. ಕಾಲಾವಕಾಶ ಕೇಳಿದರು ಕೂಡ ಬಡ್ಡೆ ದಂಧೆ ಕೋರ ದರ್ಪ ತೋರಿದ್ದಾನೆ. ಮನೆಯಿಂದ ವೃದ್ಧೆಯನ್ನು ಮೌಲಾಸಾಬ್ ಹೊರಹಾಕಿದ್ದಾನೆ. ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕಲಬುರ್ಗಿ : ಇತ್ತೀಚೆಗೆ ಬೆಂಗಳೂರಿನ ಹಲವು ಶಾಲೆಗಳಿಗೆ ನಿರಂತರವಾಗಿ ಬೆದರಿಕೆ ಸಂದೇಶ ಬಂದಿದ್ದ ಪ್ರಕರಣ ನಡೆದಿತ್ತು. ಇದೀಗ ಕಲಬುರ್ಗಿಯ MLC ಬಿಜಿ ಪಾಟೀಲ್ ಒಡೆತನದ ಖಾಸಗಿ ಶಾಲೆ ಒಂದಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಹೌದು ಕಲ್ಬುರ್ಗಿಯ ಕರುಣೆಶ್ವರ ನಗರದ ಶಾಲೆಗೆ ಬಾಂಬ್ ಬೆದರಿಕೆ ಈ ಮೇಲೆ ಸಂದೇಶವನ್ನು ಬಂದಿದೆ ತಮಿಳುನಾಡಿನಿಂದ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ ಎಂದು ತಿಳಿದು ಬಂದಿದೆ. ಮಧ್ಯಾಹ್ನ ಒಂದು ಗಂಟೆಗೆ ಬಾಂಬ್ ಸ್ಪೋಟಿಸುವುದಾಗಿ ಈ ಒಂದು ಬೆದರಿಕೆ ಸಂದೇಶ ಬಂದಿದೆ. ಬೆದರಿಕೆ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲಾ ಆಡಳಿತ ಮಂಡಳಿ ಮಕ್ಕಳನ್ನು ಮನೆಗೆ ಕಳುಹಿಸಿದೆ. ಕೂಡಲೇ ಶಾಲೆಗೆ ಅಶೋಕ್ ನಗರ ಪೊಲೀಸರು ಬಾಂಬ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸಲಾಗುತ್ತಿದೆ. ವಿಧಾನ ಪರಿಷತ್ ಸದಸ್ಯರಾದ ಬಿಜಿ ಪಾಟೀಲ್ ಒಡೆತನದ ಶಾಲೆ ಎಂದು ತಿಳಿದುಬಂದಿದೆ. ಶಾಲೆಯಲ್ಲಿ ಬಾಂಬ್ ನಿಷ್ಕ್ರಿಯದಳ ಶ್ವಾನದಳ ಪರಿಶೀಲನೆ ನಡೆಸಿದೆ. ತಮಿಳುನಾಡಿನ ರಾಜಕೀಯದ ಬಗ್ಗೆ ಉಲ್ಲೇಖಿಸಲಾಗಿದೆ. ಮೆಲ್…
ಬೆಳಗಾವಿ : ಇಂದು ಬೆಳಗಾವಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಟ್ರಕ್ ಗೆ ವೇಗವಾಗಿ ಬಂದಂತಹ ಕಾರೊಂದು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ವೈದ್ಯೆ ಒಬ್ಬಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವೈದ್ಯೆಯನ್ನು ಸಂಗನಕೇರಿ ಗ್ರಾಮದ ಡಾ. ಆಶಾ ಕೋಳಿ (32) ಎಂದು ತಿಳಿದುಬಂದಿದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿ ಈ ಒಂದು ಭೀಕರವಾದಂತಹ ಅಪಘಾತ ಸಂಭವಿಸಿದೆ. ಮುಂದೆ ಹೋಗುತ್ತಿದ್ದ ಟ್ರಕ್ಕಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಈ ಒಂದು ಘಟನೆಯಲ್ಲಿ ವೈದಯ ಪತಿ ಡಾ.ಭೀಮಪ್ಪ ಕೋಳಿ ಹಾಗೂ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳಿಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತಂತೆ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ಕಳ್ಳತನ ಮಾಡಿ ಬಾಲಿವುಡ್ ನಟಿಗೆ 3 ಕೋಟಿ ಮನೆಯ ಗಿಫ್ಟ್ : ಬೆಂಗಳೂರಲ್ಲಿ ಕುಖ್ಯಾತ ಅಂತಾರಾಜ್ಯ ಕಳ್ಳನ ಬಂಧನ!
ಬೆಂಗಳೂರು : ಬೆಂಗಳೂರಿನಲ್ಲಿ ಅಂತರಾಜ್ಯ ಕುಖ್ಯಾತ ಖತರ್ನಾಕ್ ಕಳ್ಳನನ್ನು ಮಡಿವಾಳ ಠಾಣೆಯ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಈತ ಎಂತಹ ಖತರ್ನಾಕ್ ಕಳ್ಳ ಎಂದರೆ, ಕಳ್ಳತನವೇ ಈತನ ಪ್ರೊಫೆಷನಲ್ ವೃತ್ತಿಯಾಗಿದ್ದು, ತಾನು 400 ಚದರ ಅಡಿ ಮನೆಯಲ್ಲಿ ಇದ್ದರು ಸಹ, ಇದೇ ಕಳ್ಳತನವನ್ನು ಮಾಡಿ ಬಾಲಿವುಡ್ ನಟಿಗೆ 3 ಕೋಟಿ ರೂಪಾಯಿ ಬಂಗಲೆ ಗಿಫ್ಟ್ ನೀಡಿದ್ದಾನೆ. ಸದ್ಯ ಈತನನ್ನು ಮಡಿವಾಳ ಠಾಣೆ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೊಳಪಡಿಸಿದ್ದಾರೆ. ಇದು ಅಂತ ರಾಜ್ಯ ಕಳ್ಳ ಪಂಚಾಕ್ಷರಿಯ ಕಥೆಯಾಗಿದ್ದು ಬಾಲಿವುಡ್ ನ ಖ್ಯಾತ ನಟಿ ಜೊತೆ ಕಳ್ಳನಿಗೆ ನಂಟಿತ್ತು ಎನ್ನಲಾಗಿದೆ. ಕಳ್ಳತನ ಮಾಡಿದ ಹಣದಲ್ಲೇ ಸುಮಾರು 3 ಕೋಟಿಯ ಮನೆಯನ್ನು ಕಟ್ಟಿಸಿ ಕೊಟ್ಟಿದ್ದಾನೆ. ಬಾಲಿವುಡ್ ನಟಿಗೆ ಕಳ್ಳ ಪಂಚಾಕ್ಷರಿ ಮನೆ ಕಟ್ಟಿಸಿ ಕೊಟ್ಟಿದ್ದಾನೆ. ಮದುವೆಯಾಗಿದ್ದರು ಕೂಡ ಬಾಲಿವುಡ್ ನಟಿ ಈತನ ಗರ್ಲ್ ಫ್ರೆಂಡ್ ಆಗಿದ್ದಳು. ತಾನಿರೋದು 400 ಅಡಿಯ ಅಡಿಯಲ್ಲಿ ಸಣ್ಣ ಮನೆಯಲ್ಲಿ ಆದರೆ ಆಕೆಗೆ ಮಾತ್ರ ಬಂಗಲೆ ಕಟ್ಟಿಸಿ ಕೊಟ್ಟಿದ್ದಾನೆ. 2003ರಿಂದ ಆದ…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಜಾರಿ ನಿರ್ದೇಶನಾಲಯ ಕಚೇರಿಯ ಅಧಿಕಾರಿಗಳು 50:50 ಅನುಪಾತ ಮಾದರಿಯ ಸೈಟ್ ಹಂಚಿಕೆಯ ಮೂಲವನ್ನು ಕೆದಕಿದ್ದು, ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಸಿಎಂ ಆಗಿದ್ದಾಗಿನಿದಾಗಲು ಈ ಒಂದು 50:50 ಅನುಪಾತದಲ್ಲಿ ಸೈಟ್ ಹಂಚಿಕೆಯಾಗಿದೆ ಎಂದು ಮುಡಾ ತನಿಖೆಯ ವೇಳೆ ಬಹಿರಂಗವಾಗಿದೆ. ಹೌದು 2016 ರಿಂದಲೂ ಈ 50-50 ಸೈಟ್ ಹಂಚಿಕೆಯಾಗಿದೆ. ಸಿದ್ದರಾಮಯ್ಯ ಮೊದಲು ಅವಧಿಯಲ್ಲಿ 50:50 ಸೈಟ್ ಹಂಚಿಕೆಯಾಗಿದೆ. 2022ರ ಅವಧಿಯಲ್ಲಿ ದಿನೇಶ್ ಅವರಿಂದ 812 ಸೈಟ್ ಹಂಚಿಕೆಯಾಗಿದೆ. 550 ದಿನದಲ್ಲಿ ಬರೋಬ್ಬರಿ 812ಸೆಂಟ್ ಹಂಚಿದ ಮಾಜಿ ಆಯುಕ್ತ ದಿನೇಶ್. ದಿನೇಶ್ ಅವಧಿಯ 50:50 ಸೈಟ್ ಸೀಜ್ ಗೆ ಇಡಿ ಸಿದ್ಧತೆ ಮಾಡಿಕೊಂಡಿದ್ದು ಪ್ರತಿನಿತ್ಯವೂ ಮೂಡಾದಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. 2016 ರಲ್ಲಿ ಆಯುಕ್ತರಾಗಿದ್ದ ಮಹೇಶದಿಂದ 8ಸೈಟ್, 2018ರಲ್ಲಿ ಕಾಂತರಾಜುರಿಂದ 10 ಸೈಟ್ ಹಾಗೂ 2020ರ ಅವಧಿಯಲ್ಲಿ ನಟೇಶ್ ರಿಂದ 58 ಸೈಟ್ ಹಂಚಿಕೆಯಾಗಿದೆ.
ನವದೆಹಲಿ : ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ ಇದೀಗ ದೆಹಲಿ ಅಂಗಳಕ್ಕೂ ತಲುಪಿದ್ದು, ಬಿಜೆಪಿಯ ರೆಬೆಲ್ಸ್ ನಾಯಕರು ಇಂದು ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ಅವರನ್ನು ಭೇಟಿಯಾಗಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಇದೀಗ ರೆಬೆಲ್ಸ್ ನಾಯಕರು ಹೈಕಮಾಂಡ್ಗೆ ದೂರು ನೀಡಿದ್ದಾರೆ.ರಾಜ್ಯಾಧ್ಯಕ್ಷ ಸ್ಥಾನದಲ್ಲಿ ವಿಜಯೇಂದ್ರ ಮುಂದುವರಿಸದಂತೆ ಹೈಕಮಾಂಡ್ ಅವರಲ್ಲಿ ಮನವಿ ಮಾಡಿದ್ದಾರೆ. ರಾಷ್ಟೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ರಮೇಶ್ ಜಾರಕಿಹೊಳಿ ಹಾಗೂ ಕುಮಾರ್ ಬಂಗಾರಪ್ಪ ಅವರು ಚರ್ಚಿಸಿದ್ದಾರೆ. ರಾಜ್ಯದ ಸ್ಥಿತಿ ಹೈಕಮಾಂಡ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ವಿಜಯೇಂದ್ರ ರೀತಿಯಲ್ಲಿ ಹತಾಶೆ ಭಾವನೆಯಲ್ಲಿ ಮಾತನಾಡಲ್ಲ. ನಮ್ಮ ಪಕ್ಷದ ಹೈಕಮಾಂಡ್ಗೆ ಮನವರಿಕೆ ಮಾಡಿಕೊಂಡಿದ್ದೇವೆ ಅವರು ಏನು ನಿರ್ಧಾರ ಮಾಡುತ್ತಾರೆ ತಲೆಬಾಗಿ ಸ್ವೀಕರಿಸುತ್ತೇವೆ. ವಿಜಯೇಂದ್ರ ಕರ್ಮಕಾಂಡ ಬಿಚ್ಚಿಡುವ ಬಗ್ಗೆ ಯತ್ನಾಳ್ ಅವರನ್ನೇ ಕೇಳಿ ಎಂದು ದೆಹಲಿಯಲ್ಲಿ ಬಿಜೆಪಿ ಶಾಸಕ ರಮೇಶ್…