Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನೆನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು ಕರಡು ಪ್ರತಿಯನ್ನು ಪರಿಶೀಲಿಸಿ ಅಂಕಿತ ಹಾಕುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು. ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಈ ಹಿಂದೆ ಶಿಕ್ಷೆ ಮೂರು ವರ್ಷ ಬಿಟ್ಟು ಈಗ 10 ವರ್ಷ ಮಾಡಿದ್ದೇವೆ.ದಂಡದ ಮತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದೇವೆ. ಬಿಲ್ ಅನ್ನು ರಾಜ್ಯಪಾಲರಿಗೆ ಕಳುಹಿಸಿದ್ದೇವೆ. ಇವತ್ತು ಪರಿಶೀಲಿಸಿ ರಾಜಪಾಲರು ಅಂಕಿತ ಹಾಕಬಹುದು. ಕಾನೂನಿನ ತೊಡಕುಗಳನ್ನು ಸರಿಪಡಿಸಿದ್ದೇವೆ. ಕಾನೂನಿನ ತೊಂದರೆ ಬರುವುದಿಲ್ಲ ಅಂತ ಅಂದುಕೊಂಡಿದ್ದೇವೆ ಎಂದು ತಿಳಿಸಿದರು. ಗೋ ಹತ್ಯೆ ಮಾಡುವವರನ್ನು ಗುಂಡಿಕ್ಕಿ ಕೊಲ್ಲುತ್ತೇನೆ ಎಂದು ಶಾಸಕ ಮಂಕಾಳು ವೈದ್ಯ ಹೇಳಿಕೆ ಕುರಿತಾಗಿ ಮಂಕಾಳು ವೈದ್ಯ ವಯಕ್ತಿಕವಾಗಿ ಹೇಳಿರುತ್ತಾರೆ. ಕ್ಯೂಆರ್ ಕೋಡ್ ಮೂಲಕ ಮತಾಂತರ ಮಾಡುತ್ತಿರುವ ವಿಚಾರವಾಗಿ ಆ ಬಗ್ಗೆ ನನಗೆ…
ಚಿಕ್ಕಬಳ್ಳಾಪುರ : ಪತ್ನಿಗೆ ಅಕ್ರಮ ಸಂಬಂಧವೇ ಇದೆ ಎಂದು ಪತಿಯೊಬ್ಬ ಪತ್ನಿಗೆ ನಿರಂತರ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ಪತ್ನಿಯ ಸಹೋದರ ಮಾರಕಾಸ್ತ್ರಗಳಿಂದ ಐದಾರು ಜನರು ಸೇರಿ ಸ್ವಂತ ಅಕ್ಕನ ಗಂಡನನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮೋಟಲೂರು ಎಂಬಲ್ಲಿ ನಡೆದಿದೆ. ಹೌದು ಚಿಕ್ಕಬಳ್ಳಾಪುರ ತಾಲೂಕಿನ ಮೋಟಲೂರು ಕ್ರಾಸ್ ಬಳಿ ಕೊಲೆಯಾಗಿದೆ. ಘೋಷನಹಳ್ಳಿ ನಿವಾಸಿ ಸುಭಾಷ್ (35) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಸುಭಾಷ್ ವಿರುದ್ಧ ಅನೈತಿಕ ಸಂಬಂಧ ಇಟ್ಟುಕೊಂಡು ಪತ್ನಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿತ್ತು. ಐದು ಜನ ಸ್ನೇಹಿತರ ಜೊತೆ ಗೋಡೆ ಬಾಮೈದ ಅಟ್ಟಾಡಿಸಿ ಕೊಲೆ ಮಾಡಿದ್ದಾನೆ. ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾನೆ. ಘಟನೆ ಕುರಿತು ಪ್ರಕರಣದ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಂಡ್ಯ : ನಿನ್ನೆ ಮಂಡ್ಯ ಜಿಲ್ಲೆಯ ತಿಬ್ಬನಹಳ್ಳಿ ಬಳಿ ವಿಸಿ ನಾಲೆಗೆ ಕಾರು ಬಿದ್ದು ಘೋರ ದುರಂತ ಸಂಭವಿಸಿದ್ದು, ವಿಸಿ ನಾಲಿಗೆ ಬಿದ್ದಿದ್ದ ಇಂಡಿಕಾ ಕಾರಿನಲ್ಲಿ ಇಬ್ಬರ ಮೃತ ದೇಹಗಳು ಪತ್ತೆಯಾಗಿವೆ. ಸುಮಾರು 15 ಅಡಿ ಆಳದಲ್ಲಿ ಸಿಲುಕಿದ್ದ ಕಾರಣ ಇದೀಗ ಕ್ರೇನ್ ಮೂಲಕ ಕಾರನ್ನು ಮೇಲೆ ಎತ್ತಲಾಗಿದೆ.ಇಂದು ಇನ್ನೊಬ್ಬನ ಮೃತದೇಹ ಪತ್ತೆಯಾಗಿದ್ದು, ಮೃತರ ಸಂಖ್ಯೆ ಮೂರಕ್ಕೇರಿದೆ. ಹೌದು ಮಂಡ್ಯ ತಾಲೂಕಿನ ಮಾಚನಹಳ್ಳಿ ಸಮೀಪ ತಿಬ್ಬನಹಳ್ಳಿ ಬಳಿ ವಿಸಿ ನಾಳೆಯಲ್ಲಿ ಪೀರ್ ಖಾನ್ ಶವ ಪತ್ತೆಯಾಗಿದೆ. ಮಂಡ್ಯದ ಹಾಲಹಳ್ಳಿ ನಿವಾಸಿಯಾಗಿರುವ ಪೀರ್ ಖಾನ್ ನಿನ್ನೆ ಫಯಾಜ್ ಸಂಪಾದನೆ ಪತಿಯಾಗಿತ್ತು ಮಂಡ್ಯ ತಾಲೂಕಿನ ಮಾಚನಹಳ್ಳಿ ಬಳಿ ಈ ಒಂದು ಕಾರು ನಾಲಿಗೆ ಬಿದ್ದು ಪಲ್ಟಿಯಾಗಿ ಬಿದ್ದಿತ್ತು. ಘಟನೆಯಲ್ಲಿ ಕಾರಿನ ಮಾಲೀಕ ಫಯಾಜ್ (40) ಸಾವನ್ನಪ್ಪಿದ್ದಾರೆ. ನಯಾಜ್ ಎಂಬುವರನ್ನು ರಕ್ಷಿಸಲಾಗಿದ್ದು, ಅಸ್ಲಂಪಾಷಾ ಮತ್ತು ಪೀರ್ಖಾನ್ ಸೇರಿದಂತೆ ಇಬ್ಬರು ನಾಪತ್ತೆಯಾಗಿದ್ದರು. ನಿನ್ನೆ ಅಸ್ಲಂ ಪಾಷಾ ಮೃತದೇಹ ಹೊರತೆಗೆಯಲಾಗಿತ್ತು. ಇದೀಗ ಇಂದು ಪೀರ್ ಖಾನ್ ಮೃತದೇಹವನ್ನು ಹೊರ…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಇದೀಗ ಮತ್ತೆ ಗುಂಡಿನ ಸದ್ದು ಕೇಳಿಸಿದ್ದು, ಉತ್ತರ ಭಾರತದಿಂದ ಬಂದಂತಹ ಕಳ್ಳರ ಗ್ಯಾಂಗ್ ಮೇಲೆ ಹುಬ್ಬಳ್ಳಿಯ ಬೆಂಡಿಗಿರಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಈ ವೇಳೆ ಇಬ್ಬರು ಕಳ್ಳರ ಕಾಲಿಗೆ ಗುಂಡೇಟು ತಗುಲಿರುವ ಘಟನೆ ವರದಿಯಾಗಿದೆ. ಹೌದು ಹುಬ್ಬಳ್ಳಿಯಲ್ಲಿ ನಟೋರಿಯಸ್ ಕಳ್ಳರ ಕಾಲಿಗೆ ಗುಂಡೇಟು ಬಿದ್ದಿದ್ದು, ಹುಬ್ಬಳ್ಳಿಯ ಬಿಡ್ನಾಳ್ ಬಳಿ ಬೆಂಡಿಗೇರಿ ಪೊಲೀಸ್ರಿಂದ ಫೈರಿಂಗ್ ನಡೆಸಲಾಗಿದೆ. ಗುಜರಾತ್ ಮೂಲದ ನಿಲೇಶ್ ಮತ್ತು ದೀಪಕ್ ಕಾಲಿಗೆ ಗುಂಡೇಟು ತಗುಲಿದೆ. ಗುಜರಾತ್ ಮೂಲದಿಂದ ಐವರ ಗುಂಪು ಕಟ್ಟಿಕೊಂಡು ಈ ಗ್ಯಾಂಗ್ ಹುಬ್ಬಳ್ಳಿಗೆ ಬಂದಿತ್ತು. ಒಂದು ತಿಂಗಳಲ್ಲಿ 5 ಕಳ್ಳತನ ಕೇಸ್ ನಲ್ಲಿ ಈ ಒಂದು ಕಳ್ಳರ ತಂಡ ಭಾಗಿಯಾಗಿತ್ತು. ಮನೆ ಕಳ್ಳತನ ಬೈಕ್ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದರು. ನಿನ್ನೆ ರಾತ್ರಿ ನಮಗೆ ಮಾಹಿತಿ ಬಂದ ತಕ್ಷಣ ನಾವು ಘಟನಾ ಸ್ಥಳಕ್ಕೆ ಹೋಗಿದ್ದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ನಾವು ಫೈರಿಂಗ್ ಮಾಡಿದಾಗ ನೀಲೇಶ್ ಮತ್ತು ದೀಪಕ್ ಮೇಲೆ ಫೈರಿಂಗ್ ಮಾಡಿದ್ದೇವೆ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕ ಮತ್ತು ಕಂಡಕ್ಟರ್ ಗಳ ಮೇಲೆ ಹಲ್ಲೆ ನಡೆಸುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ಕುಡಿದ ನಶೆಯಲ್ಲಿದ್ದ ಇಬ್ಬರು ವ್ಯಕ್ತಿಗಳು ಬಿಎಂಟಿಸಿ ಕಂಡಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಶಾಂತಿನಗರ ಬಳಿ ನಡೆದಿದೆ. ಹೌದು ಪಾನಮತ್ತ ಇಬ್ಬರು ವ್ಯಕ್ತಿಗಳಿಂದ ಬಿಎಂಟಿಸಿ ಬಸ್ ನಲ್ಲಿ ಗಲಾಟೆ ನಡೆದಿದ್ದು, ಪ್ರಶ್ನೆ ಮಾಡಿದ ಕಂಡಕ್ಟರ್ ರಾಜಣ್ಣ ಎನ್ನುವವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಶಾಂತಿನಗರ ಬಳಿ ಈ ಒಂದು ಘಟನೆ ನಡೆದಿದೆ. ಗೋಪಾಲ ಹಾಗೂ ಹನುಮಂತಯ್ಯನನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಮೆಜೆಸ್ಟಿಕ್ ನಿಂದ ಗಂಗೊಂಡನಹಳ್ಳಿಗೆ ಬರುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಪಾನಮತ್ತರಾಗಿ ಇಬ್ಬರು ಬಿಎಂಟಿಸಿ ಬಸ್ನಲ್ಲಿ ಗಲಾಟೆ ಮಾಡಿದ್ದಾರೆ. ಈ ವೇಳೆ ಪ್ರಶ್ನೆ ಮಾಡಿದ ಕಂಡಕ್ಟರ್ ರಾಜಣ್ಣ ಮೇಲೆ ಗೋಪಾಲ್ ಮತ್ತು ಹನುಮಂತಯ್ಯ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಕುರಿತು…
ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಕೊಲೆ ಆರೋಪಿಯ ಮೇಲೆ ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣೆಯ ಪೊಲೀಸರು ಫೈರಿಂಗ್ ಮಾಡಿ ಅರೆಸ್ಟ್ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ದೊಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ. ಕೊಲೆ ಆರೋಪಿ ಮೇಲೆ ಸರ್ಜಾಪುರ ಪೊಲೀಸರಿಂದ ಫೈರಿಂಗ್ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನಾ ಮೇಲೆ ಫೈರಿಂಗ್ ಮಾಡಲಾಗಿದೆ. ದೊಮ್ಮಸಂದ್ರದ ಬಳಿ ಫೈರಿಂಗ್ ನಡೆಸಿ ಆರೋಪಿ ಶ್ರೀನಿವಾಸ್ ನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ದೊಮ್ಮಸಂದ್ರ ಗ್ರಾಮದಲ್ಲಿ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಮಾಜಿ ರೌಡಿಶೀಟರ್ ವೆಂಕಟೇಶ್ ಅಲಿಯಾಸ್ ವೆಂಕಿಯ ಕೊಲೆ ಆಗಿತ್ತು. ಜನವರಿ 28ರ ರಾತ್ರಿ ವೆಂಕಟೇಶ್ ನನ್ನು ಶ್ರೀನಿವಾಸ್ ಮತ್ತು ಗ್ಯಾಂಗ್ ಕೊಲೆ ಮಾಡಿತ್ತು. ಈ ಒಂದು ಕೊಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರು ಫೈರಿಂಗ್ ಮಾಡಿದ್ದಾರೆ.ವೆಂಕಟೇಶ್ ನನ್ನು ಬರ್ಬರವಾಗಿ ಹತ್ಯೆ ಮಾಡಿ ಶ್ರೀನಿವಾಸ್ ಮತ್ತು ಗ್ಯಾಂಗ್ ಪರಾರಿಯಾಗಿತ್ತು. ಈ ಸಂದರ್ಭದಲ್ಲಿ…
ತುಮಕೂರು : ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತುಮಕೂರಿನ ಜುವೆಲ್ಲರೀ ಶಾಪ್ ಮಾಲೀಕನ ವಂಚನೆ ಕೇಸ್ ನಲ್ಲಿ ಮಾಲೀಕ ಪತ್ತೆಯಾಗಿದ್ದಾನೆ. ನಾಪತ್ತೆಯಾಗಿದ್ದ ಜ್ಯುವೆಲರಿ ಶಾಪ್ ಮಾಲೀಕನನ್ನ ಅರೆಸ್ಟ್ ಮಾಡಲಾಗಿದೆ. ಹೌದು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಚಿನ್ನ ಖರೀದಿಸಿ, ಬೆಲೆ ಹೆಚ್ಚಾದಾಗ ಮಾರಾಟ ಮಾಡಿ ದುಪ್ಪಟ್ಟು ಲಾಭಕೊಡುವುದಾಗಿ ಜನರನ್ನು ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದ ಆಕಾಶ್ ಜ್ಯುವೆಲರ್ಸ್ ಮಾಲೀಕ ಶಿವಾನಂದಮೂರ್ತಿ, ಪತ್ನಿ ಅನ್ನಪೂರ್ಣ ಅವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆಕಾಶ್ ಜ್ಯುವೆಲರ್ಸ್ ಮಾಲೀಕರ ವಿರುದ್ಧ ಜ.29ರಿಂದ ಫೆ.2ರ ವರೆಗೆ ನಗರ ಠಾಣೆಯಲ್ಲಿ 56 ದೂರುಗಳು ಸಲ್ಲಿಕೆಯಾಗಿವೆ. ಮೊದಲ ದಿನ 50 ಕ್ಕೂ ಹೆಚ್ಚು ಜನ ಠಾಣೆಯ ಮೆಟ್ಟಿಲು ಹತ್ತಿದ್ದರು. ಈ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗಿದ್ದು ಭಾನುವಾರವೂ ಹಲವರು ದೂರು ಸಲ್ಲಿಸಿದ್ದರ್ಉ. ಕೋಟಿಗಟ್ಟಲೆ ಹಣ ವಂಚಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಸಿದ್ದಲಿಂಗಪ್ಪ ಎಂಬುವರು ನೀಡಿದ ದೂರಿನ ಮೇರೆಗೆ ಶಿವಾನಂದಮೂರ್ತಿ, ಅನ್ನಪೂರ್ಣ, ಪುತ್ರ ಆಕಾಶ್ ಮತ್ತು ಇತರರ ವಿರುದ್ಧ…
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನಿನ್ನೆ ಒಂದೇ ದಿನ 6 ಜನ ಬಲಿಯಾಗಿದ್ದು, ಬೆಳಗಾವಿ, ಹಾವೇರಿ, ಹಾಸನ, ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಸೇರಿದಂತೆ ಒಟ್ಟು 6 ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಅಡವಿ ಆಂಜನೇಯ ಬಡಾವಣೆಯಲ್ಲಿ ಮಾಲತೇಶ್ (42) ಎಂಬುವರು ಮೈಕ್ರೋ ಫೈನಾನ್ಸ್ ಕಿರುಕುಳದಿಂದ ನೊಂದು ಮನೆಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನು ಹಾಸನ ಜಿಲ್ಲೆಯ ಅರಕಲಗೂಡ ತಾಲೂಕಿನ ಕಂಟೇನಹಳ್ಳಿಯಲ್ಲಿ ರೈತ ರವಿ (50) ಎಂಬುವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿ ವಿವಿಧ ಸಂಘ, ಮೈಕ್ರೋ ಫೈನಾನ್ಸ್ ಗಳಿಂದ 9 ಲಕ್ಷ ಸಾಲ ಮಾಡಿದ್ದರು. ಜೊತೆಗೆ ಶುಂಠಿ ಬೆಲೆ ಕುಸಿತ ಕಂಡಿದ್ದು, ಇದರಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಎಚ್.ನಾಗಸಂದ್ರ ಗ್ರಾಮದಲ್ಲಿ ಎನ್. ಆರ್ ನರಸಿಂಹಯ್ಯ (58) ಎಂಬುವರು ನೇಣಿಗೆ ಶರಣಾಗಿದ್ದಾರೆ. ಆಟೋ…
ಬೆಂಗಳೂರು : ಜಮೀನು ಮಾಲೀಕರ ಹೆಸರನ್ನು ಪಹಣಿಯಲ್ಲಿ ಸೇರಿಸಲು 2 ಲಕ್ಷ ಲಂಚ ಪಡೆಯುತ್ತಿದ್ದ ಯಲಹಂಕ ತಾಲ್ಲೂಕಿನ ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಸೇರಿ ಮೂವರನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಮಧ್ಯವರ್ತಿಗಳಾದ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕ ನಾಗರಾಜು ಮತ್ತು ಸಂದೀಪ್ ಹಾಗೂ ಮುನಿಶಾಮಿ ರೆಡ್ಡಿ ಬಂಧಿತ ಆರೋಪಿಗಳು. ಜಮೀನಿನ ದಾಖಲೆಗೆ ಮಾಲೀಕರ ಹೆಸರು ಸೇರಿಸುವಂತೆ ವಕೀಲ ಮಹೇಶ್ ಅವರು ಅರ್ಜಿ ಸಲ್ಲಿಸಿದ್ದರು. ಕೆಲಸ ಮಾಡಿಕೊಡಲು ವಿಶೇಷ ತಹಶೀಲ್ದಾರ್ ಅವರು 10 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 3 ಲಕ್ಷ ಪಡೆದುಕೊಂಡಿದ್ದರು. ಎರಡನೇ ಕಂತಿನಲ್ಲಿ 2 ಲಕ್ಷ ಕೊಡುವಂತೆ ಸೂಚಿಸಿದ್ದರು. ಈ ಕುರಿತು ಮಹೇಶ್ ಅವರು ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ದೂರು ನೀಡಿದ್ದರು. ವಿಶೇಷ ತಹಶೀಲ್ದಾರ್ ಸೂಚನೆಯಂತೆ ನಾಗರಾಜು ಅವರನ್ನು ಭೇಟಿಮಾಡಿದ ದೂರುದಾರ 2 ಲಕ್ಷ ನಗದನ್ನು ನೀಡಿದರು. ನಾಗರಾಜು ಹಣವನ್ನು ತನ್ನ ಸಂಬಂಧಿಯೂ ಆದ ವಿಐಟಿ ಕಾಲೇಜು ಪ್ರಯೋಗಾಲಯದ ಸಿಬ್ಬಂದಿ ಸಂದೀಪ್ ಕೈಗೆ ನೀಡಿದ್ದರು. ತಕ್ಷಣ…
ಹಾವೇರಿ : ಹಾವೇರಿಯಲ್ಲಿ ಘೋರವಾದ ಘಟನೆ ನಡೆದಿದ್ದು, ಎಗ್ ರೈಸ್ ನಲ್ಲಿ ವಿಷ ಬೆರೆಸಿ ಮೊದಲು ಮಕ್ಕಳಿಗೆ ತಿನ್ನಿಸಿ ಬಳಿಕ ತಂದೆ ತಾನು ಕೂಡ ತಿಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾವೇರಿ ತಾಲೂಕಿನ ಹಳೇರಿತ್ತಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗಪ್ಪ ತಿಪ್ಪಣ್ಣ ಪೌಡೆಪ್ಪನವರ ಎಂಬುವವರು ತಮ್ಮ ಮಕ್ಕಳಿಬ್ಬರಿಗೆ ವಿಷವುಣಿಸಿ ತಾವೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಪತ್ನಿ ಹಾಗೂ ಇಬ್ಬರು ಮಕ್ಕಳು, ಹಳೇರಿತ್ತಿಯಲ್ಲಿ ವಾಸವಿದ್ದರು. ಇತ್ತೀಚೆಗಷ್ಟೇ ಊರಿಗೆ ಬಂದಿದ್ದ ನಾಗಪ್ಪ, ಸೋಮವಾರ ತಮ್ಮಿಬ್ಬರ ಮಕ್ಕಳಿಗೆ ವಿಷ ಮಿಶ್ರಣ ಮಾಡಿದ್ದ ಎಗ್ರೈಸ್ ತಿನ್ನಿಸಿದ್ದ. ನಂತರ, ತಾವೂ ಅದೇ ಎಗ್ರೈಸ್ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾಗಪ್ಪ ಅವರು ವಿವಿಧ ಕಡೆಗಳಲ್ಲಿ ಸಾಲ ಮಾಡಿದ್ದರು. ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿರುವ ಅನುಮಾನವಿದೆ. ಜೊತೆಗೆ, ಕೌಟುಂಬಿಕ ವಿಚಾರವೂ ಕಾರಣವಾಗಿರಬಹುದು. ಪೊಲೀಸರು ಸೂಕ್ತ ತನಿಖೆ ನಡೆಸಿ, ನಿಜಾಂಶ ತಿಳಿಸಬೇಕು ಎಂದು ಸಂಬಂಧಿಕರೊಬ್ಬರು ತಿಳಿಸಿದರು. ವಿಷದ ಆಹಾರ ಸೇವನೆಯಿಂದ ತೀವ್ರ ಅಸ್ವಸ್ಥಗೊಂಡಿದ್ದ ತಂದೆ ಹಾಗೂ ಮಕ್ಕಳಿಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ನೀಡಿರುವ…