Author: kannadanewsnow05

ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಇಂದು ಅವರು ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.  ಅವರು ಅಲ್ಲಿ ಜನರಲ್ ಚೆಕ್ ಅಪ್ ಗಾಗಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ನಟ ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಸಂಜೆ ವೇಳೆ ಆಸ್ಪತ್ರೆಯಿಂದ ನಟ ಶಿವರಾಜಕುಮಾರ್ ಡಿಸ್ಚಾರ್ಜ್ ಸಾಧ್ಯತೆ ಇರಲಾಗುತ್ತಿದೆ.

Read More

ಮೈಸೂರು : ಲೋಕಸಭಾ ಚುನಾವಣೆಗೆ ಈ ಬಾರಿ ಮೈಸೂರು ಕ್ಷೇತ್ರದಲ್ಲಿ ಮೈಸೂರು ಮಹಾರಾಜರಾಗಿರುವ ಯದುವೀರ ಒಡೆಯರ್ ಅವರು ಸ್ಪರ್ಧಿಸುತ್ತಿದ್ದು ನಾಮಪತ್ರ ಸಲ್ಲಿಸುವ ವೇಳೆದ್ದು ಯಾವುದೇ ಕೃಷಿಭೂಮಿ ಹಾಗೂ ಸ್ವಂತ ಮನೆ ಹೊಂದಿಲ್ಲ ಎಂದು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಮೈಸೂರು ಮಹಾರಾಜರ ಬಳಿ ಸ್ವಂತ ಮನೆಯು ಇಲ್ಲ. ಈ ಕುರಿತಂತೆ ಆಸ್ತಿ ಘೋಷಣೆ ಮಾಡಿದ ಬಿಜೆಪಿ ಅಭ್ಯರ್ಥಿ ಯದುವೀರ ಅವರು, ಚುನಾವಣಾ ನಾಮಪತ್ರದ ವೇಳೆ ಆಫೀಡಿವೇಟ್ ಸಲ್ಲಿಸಿದ್ದು, ಒಟ್ಟು 4 ಕೋಟಿ 99 ಲಕ್ಷ 59 ಸಾವಿರ ರೂಪಾಯಿ ಚರಾಸ್ಥಿ ಹೊಂದಿದ್ದಾರೆ. ಸದ್ಯ ಕೈಯಲ್ಲಿ ಒಂದು ಲಕ್ಷ ರುಪಾಯಿ ನಗದು ಇದೆ. ಎರಡು ಬ್ಯಾಂಕಿನ ಖಾತೆಗಳಲ್ಲಿ 23.55 ಲಕ್ಷ ಬ್ಯಾಂಕ್ ಬ್ಯಾಲೆನ್ಸ್ ಹೊಂದಿದ್ದಾರೆ. ವಿವಿಧ ಕಂಪನಿಗಳಲ್ಲಿ 1 ಕೋಟಿ ಮೌಲ್ಯದ ಬಾಂಡ್ ಹಾಗೂ ಶೇರುಗಳನ್ನು ಹೊಂದಿದ್ದಾರೆ.4 ಕೆಜಿ ಚಿನ್ನ ಮತ್ತು 20 ಕೆಜಿ ಬೆಳ್ಳಿ ಹೊಂದಿದ್ದಾರೆ. ಯಾವುದೇ ಕೃಷಿ ಭೂಮಿ ಹಾಗೂ ಸ್ವಂತ ಮನೆಯನ್ನು ಹೊಂದಿಲ್ಲ. ವಾಣಿಜ್ಯ ಕಟ್ಟಡಗಳು ಇಲ್ಲ. ಬ್ಯಾಂಕ್…

Read More

ಮೈಸೂರು : ನಿನ್ನೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಅಹಂ ಇದೆ ಅವರ ಗರ್ಭಭಂಗ ಮಾಡುತ್ತೇನೆ ಎಂದು ವಾಗ್ದಾಳಿ ನಡೆಸಿದರು. ಅದಕ್ಕೆ ಇಂದುಸಿಎಂ ಸಿದ್ದರಾಮಯ್ಯ ನನಗೆ ಗರ್ವನೇ ಇಲ್ಲ ಅವರೇನು ನನ್ನ ಗರ್ವಭಂಗ ಮಾಡುವುದು ಎಂದು ಎಚ್ ಡಿ ದೇವೇಗೌಡ ಅವರ ಹೇಳಿಕೆಗೆ ತಿರುಗೇಟು ನೀಡಿದರು. https://kannadanewsnow.com/kannada/breaking-gst-collection-swells-to-rs-1-78-lakh-crore-in-march-2nd-highest-so-far/ ಮೈಸೂರಿನ ವರುಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ನನ್ನ ಗರ್ವ ಭಂಗ ಮಾಡ್ತೀನಿ ಅಂತ ಎಚ್ ಡಿ ದೇವೇಗೌಡರು ಹೇಳುತ್ತಾರೆ. ಕೋಮುವಾದಿ ಪಕ್ಷ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿ ಕೊಂಡಿದೆ. ಬಿಜೆಪಿ ಕೋಮುವಾದಿ ಪಕ್ಷ ಅಂತ ಹೇಳಿದ್ದು ಯಾರು? ಇದನ್ನು ಹೇಳಿದರೆ ಸಿದ್ದರಾಮಯ್ಯಗೆ ಗರ್ವ ಅಂತ ಹೇಳುತ್ತಾರೆ, ಸಿದ್ದರಾಮಯ್ಯ ಗರ್ವಭಂಗ ಮಾಡುತ್ತೇನೆ ಅಂತಾರೆ ನನಗೆ ಗರ್ವ ಇದ್ದರೆ ಅಲ್ವಾ ಭಂಗ ಮಾಡೋದು ಎಂದು ತಿರುಗೇಟು ನೀಡಿದರು. https://kannadanewsnow.com/kannada/breaking-stock-market-jumps-spectacular-on-the-first-day-of-the-month-rs-6-50-lakh-crore-profit-for-investors/ ಇದೆ HD ದೇವೇಗೌಡರು ಬಿಜೆಪಿ ಒಂದು ಕೋಮುವಾದಿ ಪಕ್ಷ.ಯಾವ ಕಾರಣಕ್ಕೂ ಬಿಜೆಪಿಗೆ ಸೇರುವುದಿಲ್ಲ.…

Read More

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಬಿಕೆ ನಾಯ್ಡು ವಿರುದ್ಧ ಇದೀಗ FIR ದಾಖಲಾಗಿದೆ. ಬೆಂಗಳೂರಿನ ಹೈ ಗ್ರೌಂಡ್ ಠಾಣೆಯ ಪೊಲೀಸರಿಂದ FIR ದಾಖಳಿಸಿಕೊಳ್ಳಲಾಗಿದೆ.ಬಿಜೆಪಿ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೊಡಗಟ್ಟ ಅವರಿಂದ ದೂರು ಸಲ್ಲಿಸಲಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟಿಗೆ ಅವರು ಖಾಸಗಿ ದೂರನ್ನು ಸಲ್ಲಿಸಿದ್ದರು. ಬಿಜೆಪಿಯ ನಾನು ಕರಸೇವಕ ನನ್ನನ್ನು ಬಂಧಿಸಿ ಅಭಿಯಾನದ ಕುರಿತಂತೆ ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು.ಈ ವೇಳೆ ಕಾಂಗ್ರೆಸ್ ಪಕ್ಷ ತಿರುಚಿದ ಪೋಸ್ಟ್ ಹಂಚಿಕೊಂಡಿತ್ತು. ಫೋರ್ಜರಿ ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು.

Read More

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಹಾಗೂ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರ ಮಗಳು ಆಗಿರುವ ಸೌಮ್ಯ ರೆಡ್ಡಿ ಅವರು ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಆಸ್ತಿಯ ಕುರಿತಂತೆ ಅಫಿಡೆವಿಟ್ ಸಲ್ಲಿಸಿದ್ದಾರೆ. ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಬಳಿ 1 ಕೋಟಿ ಚಿರಾಸ್ಥಿ 1. 28 ಕೋಟಿ ಸ್ಥಿರಾಸ್ತಿ ಹೊಂದಿದ್ದು, 5 ಕೆ.ಜಿ ಬೆಳ್ಳಿ 950 ಗ್ರಾಂ ಚಿನ್ನ ಹೊಂದಿದ್ದಾರೆ. ಅಲ್ಲದೆ ಒಂದು ಇನೋವಾ ಕಾರು ಹೊಂದಿದ್ದು, ಕೃಷಿ ಜಮೀನು ಎಲ್ಲಾ ಇಲ್ಲ ಎಂದು ಉಲ್ಲೇಖಸಿದ್ದಾರೆ. ಬೇಗೂರು ಬಳಿ ಅಪಾರ್ಟ್ಮೆಂಟ್ ಇದೆ. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಸಾಲ 1.5 ಕೋಟಿ ರೂಪಾಯಿ ಸಾಲವಿದ್ದು ಅವರ ವಿರುದ್ಧ 5 FIR ಹಾಗೂ ಒಂದು ಖಾಸಗಿ ದೂರು ದಾಖಲಾಗಿದೆ. ಅಲ್ಲದೆ ಕೋರ್ಟ್ ನಲ್ಲಿ ಒಟ್ಟು 6 ಪ್ರಕರಣಗಳ ವಿಚಾರಣೆ ನಡೆಯುತ್ತಿದೆ ಎಂದು ಅಫಿಡೆವಿಟ್ ನಲ್ಲಿ ಸಲ್ಲಿಸಿದ್ದಾರೆ.

Read More

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲೆಯ ವರುಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ, ಕಳೆದ ಚುನಾವಣೆಯಲ್ಲಿ ನನಗೆ 48 ಗೆಲ್ಲಿಸಿದ್ದೀರಿ ಸಿಎಂ ಸ್ಥಾನದಲ್ಲಿ ನಾನು ಇರಬೇಕಾ ಬೇಡ್ವಾ? ಹಾಗಿದ್ದರೆ ಅರವತ್ತು ಸಾವಿರ ಲೀಡ್ ನಿಂದ ನನ್ನನ್ನು ಗೆಲ್ಲಿಸಿ. ಈ ಬಾರಿ 60,000 ಲೀಡಿನಿಂದ ಗೆಲ್ಲಿಸಿ ಕೊಟ್ಟರೆ ನನ್ನನ್ನು ಯಾರಿಗೂ ಮುಟ್ಟೋಕೆ ಆಗಲ್ಲ ಎಂದು ತಿಳಿಸಿದರು. ವರುಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಶಾಕಿಂಗ್ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ನಾನು ಇರಬೇಕಾ ಬೇಡವಾ ಹೇಳಿ. ನಾನು ಇರಬೇಕು ಅಂದರೆ ಅರವತ್ತು ಸಾವಿರ ಲೀಡ್ ಕೊಡಿ. ವರುಣ ಕ್ಷೇತ್ರದಲ್ಲಿ 60,000 ಲೀಡ್ ಕೊಡಬೇಕು ವರುಣದಲ್ಲಿ ಲೀಡ್ ಕೊಟ್ಟರೆ ನನ್ನ ಯಾರು ಮುಟ್ಟುವುದಿಲ್ಲ ಎಂದು ಅವರು ತಿಳಿಸಿದರು. ನನಗೆ ವಿಧಾನಸಭೆ ಚುನಾವಣೆಯಲ್ಲಿ 48,000 ಲೀಡ್ನಲ್ಲಿ ಕೊಟ್ಟು ಗೆಲ್ಲಿಸಿದ್ದೀರಾ ಈಗ ಅದಕ್ಕಿಂತ ಜಾಸ್ತಿ ಕೊಟ್ಟು ಗೆಲ್ಲಿಸಬೇಕಾ? ಅಷ್ಟೇ ಕೊಡಬೇಕಾ ಕನಿಷ್ಠಪಕ್ಷ ಅರವತ್ತು ಸಾವಿರ ಲೀಡ್ನಲ್ಲಿ ಗೆಲ್ಲಬೇಕು. ನಾನು ಮಹದೇವಪ್ಪ, ಯತೀಂದ್ರ…

Read More

ಮಂಡ್ಯ : ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರ ಹಿನ್ನೆಲೆಯಲ್ಲಿ, ಮಂಡ್ಯದಲ್ಲಿ ಎಚ್‍ಡಿ ದೇವೇಗೌಡ ಹಾಗೂ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದು ಮೈತ್ರಿ ಮಾಡಿಕೊಂಡು ಸಿದ್ಧಾಂತದಲ್ಲಿ ಸತ್ತ ಹಾಗೆ ಎಂದು ವಾಗ್ದಾಳಿ ನಡೆಸಿದರು. https://kannadanewsnow.com/kannada/brahmos-missile-test-fired-successfully/ ಮಂಡ್ಯದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ದಳಪತಿಗಳ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ. ಎಚ್ಡಿಕೆ ಮತ್ತು ಎಚ್ ಡಿ ದೇವೇಗೌಡ ಕೆಸರಿ ಬಾವುಟ ಹಾಕಿದ್ದಾರೆ.ಜಾತ್ಯಾತೀತ ತತ್ವವನ್ನ ನೀರಿಗೆ ಹಾಕಿ ತೊಳೆದುಬಿಟ್ಟಿದ್ದಾರೆ.ಮಂಡ್ಯದ ರಾಜಕೀಯ ನೋಡಿದರೆ ನಾಚಿಕೆ ಅನ್ನಿಸುತ್ತಿದೆ.ಪುಟ್ಟರಾಜು ಟಿಕೆಟ್ ಸಿಗುತ್ತೆ ಅಂತ ಕಾಕಾ ಹೊಡೆತಿದ್ದ ಸಿ ಎಸ್ ಪುಟ್ಟರಾಜು ಕಥೆ ಗೋವಿಂದ ಅಂತ ಡಿಕೆ ಶಿವಕುಮಾರ್ ವ್ಯಂಗ್ಯ ವಾಡಿದ್ದಾರೆ. https://kannadanewsnow.com/kannada/mandya-swar-chandru-files-nomination-papers-through-massive-roadshow/ ಮಂಡ್ಯ ಜನರು ಸ್ವಾಭಿಮಾನಕ್ಕೆ ಗೌರವ ಕೊಟ್ಟಿದ್ದಾರೆ.ಮಂಡ್ಯ ಪಾರುಪತ್ಯವನ್ನು ಯಾರಿಗೂ ಬಿಟ್ಟು ಕೊಟ್ಟಿಲ್ಲ ಇದು ಟೂರಿಂಗ್ ಟಾಕೀಸ್, ಸಿನಿಮಾ ರಾಜಕಾರಣ ಅಲ್ಲ ಇದು ಬದುಕಿನ ರಾಜಕಾರಣ. ಮಂಡ್ಯದಲ್ಲಿ ಒಂದಲ್ಲ…

Read More

ಮಂಡ್ಯ : ಮಂಡ್ಯ ಲೋಕಸಭಾ ರಣಕಣ ರಂಗೇರಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ವಾರ್ ಚಂದ್ರು) ಸೋಮವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನಾ ಟೆಂಪಲ್ ರನ್​ ಮಾಡಿದ್ದ ಅವರು, ಶ್ರೀ ಆದಿ ಚುಂಚನಗಿರಿ ಮಠದಲ್ಲಿ ಶ್ರೀ ಕಾಲ ಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದರು. https://kannadanewsnow.com/kannada/breaking-%e0%b2%ae%e0%b3%88%e0%b2%b8%e0%b3%82%e0%b2%b0%e0%b2%b2%e0%b3%8d%e0%b2%b2%e0%b2%bf-jds%e0%b2%97%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%8a%e0%b2%82%e0%b2%a6%e0%b3%81/ ಮಂಡ್ಯ ನಗರದ ಶಕ್ತಿ ದೇವತೆ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಬೆಳಿಗ್ಗೆ 10.30 ರ ವೇಳೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ಶಾಸಕರಾದ ನರೇಂದ್ರ ಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಕದಲೂರು ಉದಯ್, ಪುಟ್ಟಸ್ವಾಮಿಗೌಡ, ಶರತ್ ಬಚ್ಚೇಗೌಡ, ಗಣಿಗ ರವಿಕುಮಾರ್ ಹಾಗೂ ಕಾಂಗ್ರೆಸ್ ಮುಖಂಡರು ಸೇರಿದಂತೆ ಸಾವಿರಾರು ಕಾರ್ಯಕರ್ತರು ಜೊತೆಗೂಡಿ ವಿಶೇಷ ಪೂಜೆ ಸಲ್ಲಿಸಿದರು. https://kannadanewsnow.com/kannada/hc-adjourns-hearing-for-2-weeks-on-pil-petition-seeking-steps-not-to-lure-voters-during-elections/ ಬಳಿಕ ತೆರೆದ ವಾಹನದಲ್ಲಿ ಶ್ರೀ ಕಾಳಿಕಾಂಬ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಮೆರವಣಿಗೆ ಮಾಡುವ ಮೂಲಕ ಕಾಂಗ್ರೇಸ್ ಅಭ್ಯರ್ಥಿ ಸ್ವಾರ್ ಚಂದ್ರು ತಮ್ಮ ಬಲ ಪ್ರದರ್ಶನ ಮಾಡಿದರು.ನಂತರ 1.15…

Read More

ಮೈಸೂರು : ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದೆ. ಹೌದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ಭಾರತಿ ಶಂಕರ್ ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು. ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸೇರ್ಪಡೆಗೊಂಡರು. ಈ ವೇಳೆ  ಕಾಂಗ್ರೆಸ್ ಬಾವುಟ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾರತೀ ಶಂಕರ್ ರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರತಿ ಶಂಕರ್ ವರುಣ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದರು. ಕೆ.ಪಿ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ಇನ್ನೂ ನಿನ್ನೆ ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪರಮಾಪ್ತ, ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ ಅವರು ಜೆಡಿಎಸ್ ತೊರೆದು, ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್…

Read More

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾರಿಗೆ ಗ್ಯಾರಂಟಿ ಕಾರ್ಡ್ ಗಳ ಮೂಲಕ ಅಮಿಷ ಒಡ್ಡಲಾಗಿತ್ತು. ಹೀಗಾಗಿ ಈ ಬಾರಿ ಲೋಕಸಭೆ ಚುನಾವಣೆ ವೇಳೆ ಮತದಾರರಿಗೆ ಆಮಿಷ ಒಡ್ಡದಂತೆ ಕ್ರಮ ಕೋರಿ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಇತರರು ಸಲ್ಲಿಸಿದ ಪಿಐಎಲ್ ಅನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಚುನಾವಣೆ ವೇಳೆ ಮತದಾರರಿಗೆ ಆಮಿಷ ಒಡದಂತೆ ಕ್ರಮ ಕೋರಿ ಇದೀಗ ಹೈಕೋರ್ಟಿಗೆ ಪಿ ಐ ಎಲ್ ಸಲ್ಲಿಸಲಾಗಿದೆ. ಹೈಕೋರ್ಟಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಮತ್ತಿತರರ PIL ಅರ್ಜಿ ಸಲ್ಲಿಸಲಾಗಿದ್ದು ಅರ್ಜಿಯ ಕುರಿತು ಆಕ್ಷೇಪಣೆ ಸಲ್ಲಿಸಲು ಚುನಾವಣಾ ಆಯೋಗ ಕಾಲಾವಕಾಶ ಕೋರಿದೆ. ಹೀಗಾಗಿ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್ 2 ವಾರಗಳ ಕಾಲ ಮುಂದೂಡಿತು. ಆಧುನಿಕ ತಂತ್ರಜ್ಞಾನ ಬಳಸಿ ಮತದಾರರಿಗೆ ಅಮಿಷ ಒಡ್ಡಲಾಗುತ್ತಿದೆ. ಮತದಾರರಿಗೆ ಗ್ಯಾರಂಟಿ ಕಾರ್ಡ್ ನೀಡಿ ಆಮಿಷ ಒಡ್ಡಲಾಗಿದೆ.ಇದರಿಂದ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಸಾಧ್ಯವಿಲ್ಲ.ಕರ್ನಾಟಕ ಮಾಡೆಲ್ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿದೆ. ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿದೆ. 2023 ವಿಧಾನಸಭಾ ಚುನಾವಣೆಯ…

Read More