Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸಿದೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ 8ನೇ ಮೈಲಿಯ ಪ್ರಕ್ರಿಯ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ. ಆದರೆ ಆಸ್ಪತ್ರೆಯ ವೈದ್ಯರು 2 ಲಕ್ಷ ಹಣ ವಸೂಲಿ ಮಾಡಿದ ಬಳಿಕ ಸಾವನ್ನು ದಡಪಡಿಸಿದ್ದಾರೆ ಎಂದು ಇದೀಗ ಕುಟುಂಬಸ್ಥರು ವೈದ್ಯರ ವಿರುದ್ಧ ಹಾಗೂ ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕಿತ್ಸೆ ಫಲಿಸಿದೆ ಜೆ ಬ್ಯಾಡರಹಳ್ಳಿ ನಿವಾಸಿ ರವಿಕಿರಣ್ (25) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜೆ. ಬ್ಯಾಡರಹಳ್ಳಿ ನಿವಾಸಿ ರವಿಕಿರಣ್ ಮನೆಯವರು ನಿಂದಿಸಿದ್ದಾರೆ ಎಂದು ನಿನ್ನೆ ಮನೆಯಲ್ಲಿ ವಿಷ ಸೇವಿಸಿದ್ದ. ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿತ್ತು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲು ವೈದ್ಯರು ಸಲಹೆ ನೀಡಿದರು. ಆದರೆ ಆಂಬುಲೆನ್ಸ್ ವಾಹನದ ಚಾಲಕ ಪ್ರಕ್ರಿಯೆ ಆಸ್ಪತ್ರೆಗೆ ದಾಖಲಿಸಿದ್ದ ರಾತ್ರಿ 9:00 ಸುಮಾರಿಗೆ ಚಿಕಿತ್ಸೆ ಫಲಿಸಿದೆ ರವಿಕಿರಣ್ ಸಾವನ್ನಪ್ಪಿದ್ದಾನೆ. ಎರಡು ಲಕ್ಷ ರೂಪಾಯಿ ಮಾಡಿದ…
ಬೆಂಗಳೂರು : ಬೆಂಗಳೂರಲ್ಲಿ ಹೊರರಾಜ್ಯಗಳಲ್ಲಿ ನೋಂದಣಿಯಾಗಿ ರಾಜ್ಯದಲ್ಲಿ ತೆರಿಗೆ ಪಾವತಿಸದೆ ವಂಚಿಸುತ್ತಿದ್ದ 30ಕ್ಕೂ ಹೆಚ್ಚಿನಐಷಾರಾಮಿ ಕಾರುಗಳನ್ನು ಬೆಂಗಳೂರು ದಕ್ಷಿಣ ವಲಯ ವ್ಯಾಪ್ತಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಐಷಾರಾಮಿ ಕಾರುಗಳಿಗೆ ತೆರಿಗೆ ವಂಚನೆಯಾಗುತ್ತಿರುವ ಕುರಿತಂತೆ ಕಳೆದ ಶುಕ್ರವಾರದಿಂದ ಭಾನುವಾರದವರೆಗೆ ಸಾರಿಗೆ ಅಧಿಕಾರಿಗಳು ವಿವಿಧೆಡೆ ಕಾರ್ಯ ಚರಣೆ ನಡೆಸಿದರು. ಈ ವೇಳೆ ಬೆನ್ಸ್, ಪೋರ್ಶ್, ಫೆರಾರಿ, ಬಿಎಂಡಬ್ಲ್ಯು ಸೇರಿ ದಂತೆ ಇನ್ನಿತರ ಸಂಸ್ಥೆಗಳ ಐಷಾರಾಮಿ ಕಾರುಗಳು ಹೊರರಾಜ್ಯಗಳಲ್ಲಿ ನೋಂದಣಿಯಾಗಿ ನಂತರ ರಾಜ್ಯದಲ್ಲಿ ಸಾರಿಗೆ ತೆರಿಗೆ ಪಾವತಿಸದೇ ಸಂಚರಿಸುವುದು ಪತ್ತೆಯಾಗಿದೆ. ಹೀಗೆ ಸುಮಾರು 30ಕ್ಕೂ ಹೆಚ್ಚಿನ ಕಾರು ಪತ್ತೆ ಮಾಡಿ ಅವನ್ನು ಜಪ್ತಿ ಮಾಡ ಲಾಗಿದೆ. ಈ ಕಾರುಗಳಿಂದ ಸುಮಾರು 3 ಕೋಟಿ ರು.ಗೂ ಹೆಚ್ಚಿನ ತೆರಿಗೆ ವಸೂಲಿ ಯಾಗುವ ನಿರೀಕ್ಷೆ ಹೊಂದಲಾಗಿದೆ.ದಕ್ಷಿಣ ವಲಯದ ಹೆಚ್ಚುವರಿ ಸಾರಿಗೆ ಆಯುಕ್ತ ಸಿ. ಮಲ್ಲಿಕಾರ್ಜುನ್ ಮಾರ್ಗ ದರ್ಶನದಲ್ಲಿ ಆರ್ಟಿಒಗಳಾದ ಬಿ. ಶ್ರೀನಿವಾಸ್ ಪ್ರಸಾದ್, ಎಲ್. ದೀಪಕ್, ಶ್ರೀನಿವಾಸಪ್ಪ, ರಂಜಿತ್ ಅವರನ್ನೊಳ ಗೊಂಡ…
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ನವರ ಅಟ್ಟಹಾಸಕ್ಕೆ ಅಂಕುಶ ಹಾಕಲು, ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ಮುಂದಾಗಿದೆ. ಅದರಂತೆಯೇ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಸಿಎಂಗೆ ಡ್ರಾಫ್ಟ್ ಪ್ರತಿ ರವಾನಿಸಿದ್ದರು. ಇದೀಗ ಪರಿಶೀಲಿಸಿದ ಬಳಿಕ ಕರುಡು ಪ್ರತಿ ರಾಜ್ಯಪಾಲರಿಗೆ ರವಾನೆ ಮಾಡಲಾಗಿದೆ. 3 ವರ್ಷದ ಬದಲು 10 ವರ್ಷ ಜೈಲು ಶಿಕ್ಷೆ ಅಂತಾ ಕರಡು ಪ್ರತಿಯಲ್ಲಿ ಬದಲಾವಣೆ ಮಾಡಲಾಗಿದ್ದು, ರಾಜ್ಯಪಾಲರ ಅಂಕಿತದ ಬಳಿಕ ಸುಗ್ರೀವಾಜ್ಞೆ ಹೊರಬೀಳಲಿದೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ವಿರುದ್ಧ ಸುಗ್ರೀವಾಜ್ಞೆ ಜಾರಿಗೆ ಗ್ರೀನ್ಸಿಗ್ನಲ್ ಸಿಕ್ಕಿತ್ತು. ಅದರಂತೆಯೇ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಸಿಎಂಗೆ ಡ್ರಾಫ್ಟ್ ಪ್ರತಿ ರವಾನೆ ಮಾಡಿದ್ದರು. ಇದೀಗ ಪರಿಶೀಲಿಸಿದ ಬಳಿಕ ಡ್ರಾಫ್ಟ್ ಪ್ರತಿ ರಾಜ್ಯಪಾಲರಿಗೆ ರವಾನೆ ಮಾಡಲಾಗಿದೆ. ಶಿಕ್ಷೆ ಪ್ರಮಾಣದಲ್ಲಿ 3 ವರ್ಷದ ಬದಲು 10 ವರ್ಷ ಜೈಲು ಶಿಕ್ಷೆಗೆ ಒಳಪಡಿಸೋಕೆ ಬದಲಾವಣೆ ಮಾಡಿ ಕರಡು ಪ್ರತಿ ರವಾನೆ ಮಾಡಲಾಗಿದೆ. ಇನ್ನೇನಿದ್ದರೂ ರಾಜ್ಯಪಾಲರ ಅಂಕಿತ ಒಂದೇ ಬಾಕಿ ಇದೆ.
ಬೆಂಗಳೂರು: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧದ ಚುನಾವಣಾ ಬಾಂಡ್ ಸುಲಿಗೆ ಆರೋಪ ಪ್ರಕರಣದ ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಅಸ್ಪಷ್ಟ ದೂರು ಎಂದು ಹೇಳಿ ಮೇಲ್ಮನವಿಯನ್ನು ವಜಾಗೊಳಿಸಿದೆ. ಆ ಮೂಲಕ ನಳಿನ್ ಕುಮಾರ್ ಕಟೀಲ್ಗೆ ರಿಲೀಫ್ ಸಿಕ್ಕಿದೆ. ಹೌದು ಈ ಕುರಿತು ಮೇಲ್ಮನವಿ ಅರ್ಜಿ ಸಲ್ಲಿಸಿದ್ದ ಅರ್ಜಿಯನ್ನು ಸಿಜೆಐ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ ಪೀಠವು ಜನಾಧಿಕಾರ ಸಂಘರ್ಷ ಪರಿಷತ್ತಿನ ಆದರ್ಶ ಅಯ್ಯರ್ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂದು ವಿಚಾರಣೆ ಮಾಡಿದ್ದು, ಅಸ್ಪಷ್ಟ ದೂರು, ಸಂಪೂರ್ಣ ಊಹೆಯ ದೂರು ಎಂದು ಹೇಳಿದೆ. ಆ ಮೂಲಕ ಮೇಲ್ಮನವಿಯನ್ನು ವಜಾಗೊಳಿಸಿದೆ. ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಬೆಂಗಳೂರಿನ ತಿಲಕನಗರ ಪೊಲೀಸ್…
BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ರೆಫ್ರಿಜರೇಟರ್ ಗೆ ಏಕಾಏಕಿ ಬೆಂಕಿ ತಗುಲಿ, ಸುಟ್ಟು ಭಸ್ಮವಾದ ಮನೆ!
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಸೆಕೆಂಡ್ ಹ್ಯಾಂಡ್ ರೆಫ್ರಿಜರೇಟರ್ ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಮೂರು ಯುವತಿಯರು ಪ್ರಾಣಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನ ಕಾಡುಗೋಡಿ ಮುಖ್ಯ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ರೆಫ್ರಿಜರೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಮನೆ ಬೆಂಕಿಗೆ ಅಹುತಿಯಾಗಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನ ಕಾಡುಗೋಡಿ ಮುಖ್ಯ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೆಂಕಿಗೆ ಆಹುತಿಯಾದ ಮನೆಯಲ್ಲಿ ಮೂವರು ಯುವತಿಯರು ಇದ್ದರು. ಎರಡು ವರ್ಷದ ಹಿಂದೆ ಸೆಕೆಂಡ್ ಹ್ಯಾಂಡ್ ರೆಫ್ರಿಜಿರೇಟರ್ ಅನ್ನು ಖರೀದಿಸಿದ್ದರು.ರೆಫ್ರಿಜರೇಟರ್ ನಲ್ಲಿ ಇಂದು ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ನಂದಿಸಲು ಯತ್ನಿಸಿದರು ಕೂಡ ನಂದಿಸಲು ಸಾಧ್ಯವಾಗಿರಲಿಲ್ಲ. ಮನೆಯಲ್ಲಿದ್ದ ಬಹುತೇಕ ವಸ್ತುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಅಗ್ನಿಶಾಮಕದಳ ಸಿಬ್ಬಂದಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಲಿಂಡರ್ ಗೆ ಬೆಂಕಿ ತಗುಲದಿದ್ದರಿಂದ ಭಾರಿ ಅನಾಹುತ ಒಂದು…
ಮಂಡ್ಯ : ಇಂದು ಮಂಡ್ಯ ಜಿಲ್ಲೆಯಲ್ಲಿ 8 ವರ್ಷದ ಬಾಲಕಿಯ ಮೇಲೆ ಪಾಪಿಗಳು ಅತ್ಯಾಚಾರ ಎಸಿಗಿದ್ದ ಘಟನೆ ನಡೆದಿತ್ತು ಇದೀಗ ಈ ಒಂದು ಘಟನೆ ಮಾಸುವ ಮುನ್ನವೇ ಗದಗದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೌದು ಗದಗ ಜಿಲ್ಲೆಯ ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಘಟನೆ ನಡೆದಿದ್ದು, ಕಾಮಾಂಧರ ದುಷ್ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಿ ಆರೋಪಿ ಸುಲೇಮಾನ್ ಸೇರಿದಂತೆ ಅತ್ಯಾಚಾರ ಎಸಗುವುದನ್ನು ವಿಡಿಯೋ ಮಾಡಿದ್ದ ಅಲ್ತಾಫ್ ಎನ್ನುವಾತನನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಸುಲೇಮಾನ್ ಎನ್ನುವವ ಬಾಲಕಿಯನ್ನು ಕರೆದು ಅತ್ಯಾಚಾರ ಎಸಿಗಿದ್ದಾನೆ ಈ ವೇಳೆ ಆತನ ಜೊತೆಗೆ ಇದ್ದ ಅಲ್ತಾಫ್ ಎಂಬ ಇನ್ನೊಬ್ಬ ಆರೋಪಿ ಅತ್ಯಾಚಾರ ಎಸಗುವ ದೃಶ್ಯವನ್ನು ವಿಡಿಯೋ ರೆಕಾರ್ಡ್ ಮಾಡಿದ್ದಾನೆ.ಇನ್ನು ಈ ಘಟನೆ ಬಾಲಕಿ ಪಾಲಕರಿಗೆ ತಡವಾಗಿ ಗೋತ್ತಾಗಿದ್ದು, ಈ ಸಂಬಂಧ ಇಂದು(ಫೆಬ್ರವರಿ 03) ನರೇಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಪೊಲೀಸರು, ಅತ್ಯಾಚಾರಿ ಆರೋಪಿ ಸುಲೇಮಾನ್ ಹಾಗೂ…
ಬೆಂಗಳೂರು : ಬೆಂಗಳೂರಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಗಳೂರಿನ ಲಾಲ್ ಬಾಗ್ ಮೆಟ್ರೋ ನಿಲ್ದಾಣದ ಬಳಿ ಈ ಒಂದು ಘಟನೆ ನಡೆದಿದೆ. ರಸ್ತೆಯ ಮೇಲೆ ಹೊತ್ತಿ ಉರಿದ ಕಾರು ಈ ವೇಳೆ ಕಾರಿನ ಪಕ್ಕದಲ್ಲಿದ್ದ ನಿಂತಿದ್ದ ಬೈಕ್ ಗೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ.ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದೆ. ಅಗ್ನಿ ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆ ಕುರಿತು ಬಸವನಗುಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
ತುಮಕೂರು : ರಾಜ್ಯದಲ್ಲಿ ನಿರಂತರವಾಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆಗಳು ನಡೆಯುತ್ತಿವೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ಶೀಘ್ರದಲ್ಲಿ ಸುಗ್ರೀವಾಜ್ಞೆ ಜಾರಿಗೆ ತರುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಆದರೂ ಸಹ ಆತ್ಮಹತ್ಯೆ ಪ್ರಕರಣಗಳು ನಿಲ್ಲುತ್ತಿಲ್ಲ ಇದೀಗ ಕೈ ಸಾಲದಿಂದ ಹೆದರಿ ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ ಹೊಸಳ್ಳಿ ಗ್ರಾಮದ ಕೆರೆಯಲ್ಲಿ ಪಾಂಡುರಂಗಯ್ಯ (38) ಮೃತದೇಹ ಪತ್ತೆಯಾಗಿದೆ.ಶನಿವಾರ ಸಂಬಂಧಿಕರ ಮನೆಗೆ ಹೋಗುವುದಾಗಿ ಪಾಂಡುರಂಗಯ್ಯ ಹೆಂಡತಿಗೆ ಹೇಳಿ ಮನೆ ಬಿಟ್ಟಿದ್ದ. ಮೇಲ್ನೋಟಕ್ಕೆ ಕೈಸಲ ಹೆಚ್ಚಾಗಿ ಕೆರೆಗೆ ಹಾರಿದ್ದಾರೆ ಎಂದು ಶಂಕಿಸಲಾಗಿದೆ. ಸದ್ಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗುಬ್ಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ : ಇಂದು ಮಂಡ್ಯ ಜಿಲ್ಲೆಯ ತಿಬ್ಬನಹಳ್ಳಿ ಬಳಿ ವಿಸಿ ನಾಲೆಗೆ ಕಾರು ಬಿದ್ದು ಘೋರ ದುರಂತ ಸಂಭವಿಸಿದ್ದು, ಇದೀಗ ವಿಸಿ ನಾಲಿಗೆ ಬಿದ್ದಿದ್ದ ಇಂಡಿಕಾ ಕಾರಿನಲ್ಲಿ ಇನ್ನಿಬ್ಬರ ಮೃತ ದೇಹಗಳು ಪತ್ತೆಯಾಗಿವೆ. ಸುಮಾರು 15 ಅಡಿ ಆಳದಲ್ಲಿ ಸಿಲುಕಿದ್ದ ಕಾರಣ ಇದೀಗ ಕ್ರೇನ್ ಮೂಲಕ ಕಾರನ್ನು ಮೇಲೆ ಎತ್ತಲಾಗಿದೆ. ಹೌದು ವಿ.ಸಿ ನಾಲಿಯಲ್ಲಿ ಬಿದ್ದಿದ್ದ ಕಾರಿನಲ್ಲಿ ಇಬ್ಬರು ಶವಗಳು ಪತ್ತೆಯಾಗಿವೆ. ಕ್ರೇನ್ ಮೂಲಕ ಪೊಲೀಸರು ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾರನ್ನು ಮೇಲೆ ಎತ್ತಿದ್ದಾರೆ. ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಬಳಿ ಬಿಸಿ ನಾಲಿಗೆ ಕಾರು ಬಿದ್ದಿತ್ತು ವಿಸಿನಾಲಿಗೆ ಬಿದ್ದಿದ್ದ ಕಾರಿನಲ್ಲಿ ಸದ್ಯ ಇಬ್ಬರ ಮೃತ ದೇಹಗಳು ಪತ್ತೆಯಾಗಿವೆ. ಘಟನೆಯಲ್ಲಿ ಕಾರಿನ ಮಾಲೀಕ ಫಯಾಜ್ (40) ಸಾವನ್ನಪ್ಪಿದ್ದಾರೆ. ನಯಾಜ್ ಎಂಬುವರನ್ನು ರಕ್ಷಿಸಲಾಗಿದ್ದು, ಅಸ್ಲಂಪಾಷಾ ಮತ್ತು ಪೀರ್ಖಾನ್ ಸೇರಿದಂತೆ ಇಬ್ಬರು ನಾಪತ್ತೆಯಾಗಿದ್ದರು. ವಿಗ ಇವರು ಇಬ್ಬರ ಮೃತ ದೇಹಗಳನ್ನು ಕಾರಿನಿಂದ ಹೊರ ತೆಗೆಯಲಾಗಿದೆ.
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡಿ ಸಂಕಷ್ಟ ಎದುರಿಸುತ್ತಿದ್ದಾರೆ ಇದರ ಮಧ್ಯೆ ಅವರ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದ್ದು ಬೇನಾಮಿ ಆಸ್ತಿ ಖರೀದಿಸಿದ ಆರೋಪದಲ್ಲಿ ಸ್ನೇಹಮಯಿ ಕೃಷ್ಣ ಅವರು ಈಗ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಹೌದು ಎಂ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಖರೀದಿಸಿದ ಆರೋಪದ ಅಡಿ ದೂರು ಸಲ್ಲಿಕೆ ಆಗಿದೆ. ಮೈಸೂರು ಲೋಕಾಯುಕ್ತ ಕಚೇರಿಗೆ ಸ್ನೇಹಮಯಿ ಕೃಷ್ಣ ಅವರಿಂದ ಸಿಎಂ ಸಿದ್ದರಾಮಯ್ಯ ಬೇನಾಮಿ ಆಸ್ತಿ ಖರೀದಿಸಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಖರೀದಿಸಿರುವ ಆರೋಪ ಕೇಳಿ ಬಂದಿದೆ ಮೈಸೂರು ತಾಲೂಕಿನ ಆಲನಹಳ್ಳಿ ಭೂಮಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ವೆ ನಂಬರ್ 113/4 ರಲ್ಲಿ 1 ಎಕರೆ ಭೂಮಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. 1983ರ ಡಿಸೆಂಬರ್ 15 ರಂದು ಮಲ್ಲಿಕಾರ್ಜುನ ಸ್ವಾಮಿ ಖರೀದಿಸಿದ್ದ ಹನುಮಗೌಡ, ಹನುಮಯ್ಯ, ಕರಿಯಪ್ಪ ಮತ್ತು ಕೇತಮ್ಮ ಅವರಿಂದ ಭೂಮಿ ಖರೀದಿಸಿಲಾಗಿತ್ತು. ಭೂಮಿ ಖರೀದಿಸಿದ್ದ…