Subscribe to Updates
Get the latest creative news from FooBar about art, design and business.
Author: kannadanewsnow05
ಶಿವಮೊಗ್ಗ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳು ಎಣ್ಣೆ ಹೊಡೆಯುತ್ತಾ ಮದ್ಯದ ನಶೆಯಲ್ಲಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿರುವಾಗಲೇ ಶಿವಮೊಗ್ಗ ಜೈಲಿನಲ್ಲಿ ಬಾಳೆಗೊನೆ ಜೊತೆಗೆ ಗಾಂಜಾ ಮತ್ತು ಸಿಗರೇಟ್ ಗಳನ್ನು ಸಾಗಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಶಿವಮೊಗ್ಗದ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಗುರುವಾರ ನಡೆದ ಪ್ರತ್ಯೇಕ ಪ್ರಕರಣದಲ್ಲಿ ಜೈಲಿನ ಆವರಣದಲ್ಲಿ 293 ಗ್ರಾಂ ಒಣ ಗಾಂಜಾ ಹಾಗೂ 40 ಸಿಗರೇಟ್ಗಳು ಪತ್ತೆಯಾಗಿವೆ. ಬಾಳೆಗೊನೆ ಹಾಗೂ ಒಳ ಉಡುಪಿನಲ್ಲಿ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ನಿನ್ನೆ ಮಧ್ಯಾಹ್ನ ಆಟೋ ಚಾಲಕ ಕಾರಾಗೃಹದ ಮುಖ್ಯದ್ವಾರದ ಬಳಿ ಬಂದು, ಜೈಲಿನ ಕ್ಯಾಂಟೀನ್ನವರು ಆರ್ಡರ್ ಮಾಡಿದ್ದರು ಎಂದು ಹೇಳಿ ಮೂರು ಬಾಳೆಹಣ್ಣಿನ ಗೊನೆಗಳನ್ನು ಇಳಿಸಿ ವಾಪಸ್ ಹೋಗಿದ್ದ. ಈ ವೇಳೆ ಕಾರಾಗೃಹದ ಕಾವಲು ಉಸ್ತುವಾರಿಯಾದ ಕರ್ನಾಟಕ ರಾಜ್ಯ ಕೈಗಾರಿಕ ಭದ್ರತಾ ಪಡೆಯ ಇನ್ಸ್ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ಪ್ರೋಫೆಸನರಿ ಪಿಎಸ್ಐ ಪ್ರಭು ಎಸ್. ಹಾಗೂ ಸಿಬ್ಬಂದಿಯಾದ…
ಉಡುಪಿ : ಈ ಸಾವು ಅನ್ನೋದು ಯಾವಾಗ ಹೇಗೆ ಬರುತ್ತೆ ಅಂತ ಹೇಳೋಕೆ ಆಗುವುದಿಲ್ಲ. ಇದೀಗ ಉಡುಪಿಯಲ್ಲಿ ಯಕ್ಷಗಾನ ಕಲಾವಿದರು ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದು, ‘ಮಹಿಷಾಸುರ’ನ ವೇಷ ಕಳಚುತ್ತಿದ್ದಂತೆ ಹೃದಯಾಘಾತದಿಂದ ಯಕ್ಷಗಾನ ಕಲಾವಿದರು ಒಬ್ಬರು ಸಾವನಪ್ಪಿದ್ದಾರೆ. ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ (51) ಮೃತಪಟ್ಟವರು. ಇವರು ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರನ ಪಾತ್ರ ಮಾಡುತ್ತಿದ್ದರು. ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಿ ಅವರು ನಿಧನರಾಗಿದ್ದಾರೆ. ಮಂದಾರ್ತಿ ಮೇಳದಲ್ಲಿ ಇವರ ತಂದೆಯೂ ವೇಷಧಾರಿಯಾಗಿದ್ದರು. ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ಈಶ್ವರ ಗೌಡ ಪಾತ್ರ ನಿರ್ವಹಿಸಿದ್ದರು. ಯಕ್ಷಗಾನ ಕಲಾವಿದರು ಮತ್ತು ಯಕ್ಷಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ. ಇಂದು ಶೃಂಗೇರಿ ಸಮೀಪದ ನೆಮ್ಮಾರು ಗ್ರಾಮದ ಬುಕ್ಡಿಬೖಲಿನಲ್ಲಿ ಅಂತ್ಯಕ್ರಿಯೆ ಜರುಗಲಿದೆ. ಈಶ್ವರ ಗೌಡ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಬೆಂಗಳೂರು : ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿದ್ದು, ತೀವ್ರ ಕುತೂಹಲ ಮೂಡಿಸಿತ್ತು. ಇದೀಗ ಸಿಎಂ ಮತ್ತು ಡಿಸಿಎಂ ಬಳಿಕ ಕಾಂಗ್ರೆಸ್ ನ ಕೆಲವು ಸಚಿವರು ಹಾಗೂ ಶಾಸಕರು ದಿಢೀರ್ ಎಂದು ದೆಹಲಿ ಪ್ರಯಾಣ ಬೆಳೆಸಿದ್ದಾರೆ. ಇವರ ಒಂದು ನಡೆ ರಾಜ್ಯ ಕಾಂಗ್ರೆಸ್ ನಲ್ಲಿ ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಹೌದು ರಾಜ್ಯ ಕಾಂಗ್ರೆಸ್ಸಿನ ಕೆಲವು ಸಚಿವರು ಹಾಗೂ ಶಾಸಕರು ದಿಢೀರ್ ಎಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಚಿವ ಚೆಲುವರಾಯಸ್ವಾಮಿ, ಇಕ್ಬಾಲ್ ಹುಸೇನ್, ಮಾಗಡಿ ಬಾಲಕೃಷ್ಣ ಹಾಗು ಗುಬ್ಬಿ ಶ್ರೀನಿವಾಸ್ ದೆಹಲಿಗೆ ಪ್ರಯಾಣ ಬೆಳೆಸಿದ್ದು ಕೆ ಸಿ ವೇಣುಗೋಪಾಲ್ ಅವರ ಬೇಟೆಗೆ ನಾಳೆ ಸಮಯ ನಿಗದಿಯಾಗಿದೆ ಎಂದು ತಿಳಿದು ಬಂದಿದೆ. ಹೈಕಮಾಂಡ್ ಬೇಟಿಗೆ ಸಚಿವರು ಮತ್ತು ಶಾಸಕರು ತೆರಳಿದ್ದಾರೆ.
ಚಾಮರಾಜನಗರ : ಸಿದ್ದರಾಮಯ್ಯ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿತು ಅಲ್ಲದೆ ಇದ್ದ ರಾಜ್ಯದಲ್ಲಿ ಸಚಿವ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿಯೇ ಇತ್ತು ಆದರೆ ಸಿಎಂ ಸಿದ್ದರಾಮಯ್ಯ ಇಂದು ಸದ್ಯಕ್ಕೆ ಸಚಿವ ಸಂಪುಟ ಪುನಾರಕ್ಷಣಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಇದು ವೇಳೆ ಶಾಸಕ ಕೆ ಎನ್ ರಾಜಣ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ ಅಂತ ಹೇಳಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ. ನಾನು ಮಂತ್ರಿ ಆಗುತ್ತೇನೋ ಇಲ್ಲವೋ ಅನ್ನೋದು ಗೊತ್ತಿಲ್ಲ. ಆದರೆ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಯಬೇಕು. ಜೆಡಿಎಸ್ ಗೆ ದೇವೇಗೌಡರು ಹಾಗೂ ಅವರ ಮಕ್ಕಳು ಹೇಗೆ ಮುಖ್ಯವೋ ಅದೇ ರೀತಿ ಬಿಜೆಪಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಗೆ ಮುಖ್ಯವೊ, ಹಾಗೆಯೇ ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ. ಸಿಎಂ ಕುರ್ಚಿ ಸದ್ಯಕ್ಕೆ ಖಾಲಿ ಇಲ್ಲ. ಹಾಗಾಗಿ ಈ ವೇಳೆ ಬದಲಾವಣೆ ಮಾತು ಏಕೆ? ಎಂದು ಶಾಸಕ ಕೆಎನ್ ರಾಜಣ್ಣ ಹೇಳಿಕೆ ನೀಡಿದರು.
ಚಿತ್ರದುರ್ಗ : ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಮುರುಘಾ ಶ್ರೀ ವಿರುದ್ಧ ದಾಖಲಾಗಿರುವ ಮೊದಲ ಪೋಕ್ಸೊ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್ ಕೋರ್ಟ್ ನ.26ಕ್ಕೆ ಆದೇಶ ಕಾಯ್ದಿರಿಸಿದೆ. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ನಜ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಪ್ರಕರಣದ ವಾದ-ಪ್ರತಿವಾದವು ಪೂರ್ಣಗೊಂಡಿದೆ. ಇದೇ ನವೆಂಬರ್ 26ರಂದು ಮಹತ್ವದ ತೀರ್ಪು ಪ್ರಕಟಿಸಲು ದಿನಾಂಕ ನಿಗದಿಪಡಿಸಿ ಇಲ್ಲಿನ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಕಾಯ್ದಿರಿಸಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಹೆಚ್ ಆರ್ ಜಗದೀಶ್ ಹೇಳಿದ್ದಾರೆ. ಶರಣರ ವಿರುದ್ಧದ ಎರಡು ಪೋಕ್ಸೊ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ಸಂಬಂಧ ಸುದೀರ್ಘ ವಿಚಾರಣೆ ನಡೆದಿದೆ. ವಿಚಾರಣೆ ವೇಳೆ ಸಂತ್ರಸ್ತೆಯ ಪರ ಅಂತಿಮ ವಾದ ಮಂಡಿಸಲಾಗಿದ್ದು, ವಾದ ಆಲಿಸಿದ ನ್ಯಾಯಾಲಯ ನ.26ಕ್ಕೆ ಪ್ರಕರಣದ ತೀರ್ಪನ್ನು ಪ್ರಕಟಿಸುವುದಾಗಿ ತಿಳಿಸಿದೆ.
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನಡೆದ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೋರ್ಟಿಗೆ ಟಾರ್ಸಿಟ್ ಹಾಗೂ ಸುಳ್ಳು ಸಾಕ್ಷಿ ವರದಿ ಸಲ್ಲಿಸಲಾಯಿತು ತನಿಕ ಅಧಿಕಾರಿ ಜಿತೇಂದ್ರ ಕುಮಾರ್ ನೇತೃತ್ವದಲ್ಲಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಲಾಯಿತು. ಹೌದು ಬೆಳ್ತಂಗಡಿ ಕೋರ್ಟಿಗೆ ಎಸ್ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಮತ್ತು ಸುಳ್ಳು ಸಾಕ್ಷಿ ವರದಿಯನ್ನು ಸಲ್ಲಿಸಿದೆ. ಸುಮಾರು 3923 ಪುಟಗಳ ವರದಿಯನ್ನು ಅಧಿಕಾರಿಗಳು ಸಲ್ಲಿ ಸಿದರು. ಸೆಕ್ಷನ್ 25 ರ ಅಡಿಯಲ್ಲಿ ಸುಳ್ಳು ಸಾಕ್ಷಿ ವರದಿ ಸಲ್ಲಿಸಿತು. , ಬೆಳ್ತಂಗಡಿಯ ಹೆಚ್ಚುವರಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ಷಡ್ಯಂತರದಲ್ಲಿ ಬುರುಡೆ ಚಿನ್ನಯ್ಯ ಸೇರಿದಂತೆ ಆರು ಮಂದಿ ಭಾಗಿಯಾಗಿದ್ದಾರೆ ಎಂದು ಎಸ್ಐಟಿ ಚಾರ್ಜ್ ಶೀಟ್ನಲ್ಲಿ ಉಲ್ಲೇಖ ಮಾಡಿದೆ. ಚೆನ್ನಯ್ಯ, ಮಹೇಶ್ ತಿಮ್ಮರೋಡಿ, ಗಿರೀಶ್ ಮಟಣ್ಣನವರ್, ಜಯಂತ್ ಟಿ, ವಿಠ್ಠಲ್ ಗೌಡ ಹಾಗೂ ಸುಜಾತಾ ಭಟ್ ಈ ರೀತಿ ಷಡ್ಯಂತರ ರೂಪಿಸಿದ್ದರು ಎಂದು ಅಧಿಕಾರಿಗಳು ಉಲ್ಲೇಖಿಸಿದ್ದು, 7 ಫೈಲ್ಗಳಲ್ಲಿ ಎಸ್ಐಟಿ ಅಧಿಕಾರಿಗಳು ವರದಿ ತಯಾರು…
ಚಾಮರಾಜನಗರ : ಜೆಡಿಎಸ್ ಪಕ್ಷದಲ್ಲಿ ಇದ್ದಿದ್ರೆ ನಾನು ಸಿಎಂ ಆಗುತ್ತಿರಲಿಲ್ಲ. ದೇವೇಗೌಡ ಮತ್ತು ಅವರ ಮಕ್ಕಳು ಸಿಎಂ ಆಗಲು ಬಿಡುತ್ತಿರಲಿಲ್ಲ ಈಗ ಜಿ ಟಿ ದೇವೇಗೌಡ ಜೆಡಿಎಸ್ ನಲ್ಲೇ ಇದ್ದರೂ ಕೂಡ ನಮ್ಮ ಪರವಾಗಿ ಇದ್ದಾರೆ. ನಮ್ಮ ಸರ್ಕಾರ ಎರಡೂವರೆ ವರ್ಷ ಆಗಿದೆ ಕರ್ನಾಟಕದ ಜನರ ಆಶೀರ್ವಾದದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ ನಾನು ಯಾವುದೇ ಜಾತಿ ಅಥವಾ ಮತ ಪಂಥದ ಪರವಾಗಿ ಇಲ್ಲ. ಎಲ್ಲರ ಪರವಾಗಿ ಕೆಲಸ ಮಾಡಿದ್ದೇನೆ ಮುಂದೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಚಾಮರಾಜನಗರದ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 72ನೇ ಸಹಕಾರ ಸಪ್ತಹ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ಸಿಗೆ ಬಂದ ಮೇಲೆ ಎರಡು ಬಾರಿ ಮುಖ್ಯಮಂತ್ರಿಯಾಗಿ ಜೆಡಿಎಸ್ ನಲ್ಲಿ ಯಾವುದೇ ಕಾರಣಕ್ಕೂ ಸಿಎಂ ಆಗುತ್ತಿರಲಿಲ್ಲ 2006 ವರೆಗೂ ಜಿ ಟಿ ದೇವೇಗೌಡ ಹಾಗೂ ನಾನು ಒಟ್ಟಿಗೆ ಇದ್ದೆವು ಆಗ ಜೆಡಿಎಸ್ ಪಕ್ಷದಿಂದ ನನ್ನನ್ನು ತೆಗೆದು ಹಾಕಿದರು. ಆದರೆ ಜಿಟಿ ದೇವೇಗೌಡ ಜೆಡಿಎಸ್…
ಬೆಂಗಳೂರು : ಇತ್ತೀಚಿಗೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಸ್ಕ್ಯಾನಿಂಗ್ ಮಾಡಿಸಲು ಹೋಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಮುಕ ರೆಡಿಯಾಲಾಜಿಸ್ಟ್ ಜಯಕುಮಾರ್ ನನ್ನು ಕೊನೆಗೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಆನೇಕಲ್ ಪೊಲೀಸ್ರು ಕಾಮುಕ ಜಯಕುಮಾರ್ ರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿ ಜಯಕುಮಾರ್ ಬಂಧನಕ್ಕೆ ಆಗ್ರಹಿಸಿ ನಿನ್ನೆ ಧರಣಿ ನಡೆದಿತ್ತು ಕರ್ನಾಟಕ ತಕ್ಷಣ ವೇದಿಕೆ ರಾಜ್ಯ ಉಪಾಧ್ಯಕ್ಷ ಲೋಕೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಇನ್ಸ್ಪೆಕ್ಟರ್ ತಿಪ್ಪೇಸ್ವಾಮಿ ವಿರುದ್ಧ ಆಕ್ರೋಶ ಹೊರಹಾಕಿದ್ದರು ಘಟನೆ ನಡೆದು 10 ದಿನ ಕಳೆದರೂ ಆರೋಪಿಯನ್ನು ಬಂಧಿಸಿಲ್ಲ. ಈ ಕೂಡಲೇ ಆನೇಕಲ್ ಪೊಲೀಸರು ಆರೋಪಿಯನ್ನು ಬಂಧಿಸಬೇಕು ಇಲ್ಲದಿದ್ದರೆ ಆನೇಕಲ್ ಪಟ್ಟಣ ಬಂದ್ ಮಾಡುವ ಎಚ್ಚರಿಕೆ ನೀಡಲಾಗಿತ್ತು. ಕರ್ನಾಟಕ ರಕ್ಷಣಾ ವೇದಿಕೆ ಹೋರಾಟಕ್ಕೆ ಮಣಿದು, ಇದೀಗ ಆನೇಕಲ್ ಠಾಣೆ ಪೊಲೀಸರು ಪಾಲಿಸಲು ಆರೋಪಿ ಜಯಕುಮಾರ್ ಅರೆಸ್ಟ್ ಮಾಡಿದ್ದಾರೆ. ಸ್ಕ್ಯಾನಿಂಗ್ ಮಾಡಿಸಲು ಹೋಗಿದ್ದ ಮಹಿಳೆಗೆ ಜೈ ಕುಮಾರ್ ಲೈಂಗಿಕ ಕಿರುಕುಳ ನೀಡಿದ್ದ. ಸ್ಕ್ಯಾನಿಂಗ್ ಸೆಂಟರ್…
ಬೆಂಗಳೂರು : ಬಿಗ್ ಬಾಸ್ ಸೀಸನ್ 12 ಶುರುವಾಗಿನಿಂದ ಒಂದಿಲ್ಲೊಂದು ಸಮಸ್ಯೆಗಳು ಇದರಾಗುತ್ತಲೇ ಇವೆ . ಮೊದಲು ಅಶ್ವಿನಿ ಗೌಡ ರಕ್ಷಿತಾ ಕುರಿತು ಹೇಳಿಕೆ ನೀಡಿದ ವಿರುದ್ಧ ದೂರು ದಾಖಲಾಗಿದ್ದಾರೆ ಇನ್ನೊಂದು ಕಡೆ ಮಹಿಳಾ ಸ್ಪರ್ಧಿಯನ್ನು ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಆರೋಪ ಸಂಬಂಧ ಗಿಲ್ಲಿ ನಟ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಗಿಲ್ಲಿ ನಟನ ಮೇಲೆ ಹಲ್ಲೆ ಮಾಡಿದ್ದರ ಕುರಿತು ಗಿಲ್ಲಿ ಅಭಿಮಾನಿಗಳು ರಿಷಾ ವಿರುದ್ಧ ದೂರು ದಾಖಲಿಸಿದ್ದಾರೆ. ಹೌದು ಈಗಾಗಲೇ ಬಿಗ್ಬಾಸ್ ಮನೆಯಲ್ಲಿರುವ ಅಶ್ವಿನಿ ಗೌಡ ಮತ್ತು ಗಿಲ್ಲಿ ನಟ ವಿರುದ್ಧ ದೂರು ದಾಖಲಾಗಿವೆ. ಇದೀಗ ಮತ್ತೋರ್ವ ಸ್ಪರ್ಧಿ ವಿರುದ್ಧ ದೂರು ದಾಖಲಾಗಿದೆ. ಹಳೆಯ ಪ್ರಕರಣವೊಂದು ಮತ್ತೆ ಜೀವ ಪಡೆದುಕೊಂಡಿದ್ದು, ಜಿಲ್ಲಾ ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಪರ್ಧಿ ಗಿಲ್ಲಿ ನಟ ಅವರ ಮೇಲೆ ಹಲ್ಲೆ ಸಂಬಂಧ ರಿಷಾ ಗೌಡ ವಿರುದ್ಧ ದೂರು ದಾಖಲಾಗಿದೆ. ಕಾರ್ಯಕ್ರಮದ ಆಯೋಜಕರು ರಿಷಾ ಗೌಡ ವಿರುದ್ಧ ಯಾವುದೇ ಸೂಕ್ತ ಕ್ರಮ…
ಚಾಮರಾಜನಗರ : ರಾಜ್ಯದಲ್ಲಿ ನವೆಂಬರ್ಕ್ರಾಂತಿ ಆಗಲಿದೆ ನಾಯಕತ್ವ ಬದಲಾವಣೆ ಆಗಲಿದೆ ಎಂದು ಕಾಂಗ್ರೆಸ್ ಬಿಜೆಪಿ ನಾಯಕರು ಇತ್ತೀಚಿಗೆ ಈ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದರು ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಜನರ ಆಶೀರ್ವಾದ ಇರುವವರೆಗೂ ನಾನೆ ಸಿಎಂ ಆಗಿರುತ್ತೇನೆ ಯಾವ ಕ್ರಾಂತಿಯು ಇಲ್ಲ ಬ್ರಾಂತಿಯು ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಜನರ ಆಶೀರ್ವಾದ ಇರುವವರೆಗೂ ನಾನೆ ಸಿಎಂ ಆಗಿರುತ್ತೇನೆ ಎರಡು ವರ್ಷದ ಬಳಿಕ ಸಂಪುಟ ಪುನಾರಚನೆ ಎಂದಿದ್ದೆ ಆ ವಿಚಾರಕ್ಕೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದಕ್ಕೆ ಎಲ್ಲರೂ ಕೂಡ ಕ್ರಾಂತಿ ಅಂತ ತಿಳಿದುಕೊಂಡಿದ್ದರು ಆದರೆ ಯಾವ ಕ್ರಾಂತಿಯು ಇಲ್ಲ ಯಾವ ಬ್ರಾಂತಿಯು ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಮುಂದಿನ ಬಜೆಟ್ ನಾನೇ ಮಂಡಿಸುತ್ತೇನೆ ಎಂದು ಸ್ಪಷ್ಟಪಡಿಸಿದರು. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಎರಡೆರಡು ಬಾರಿ ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿಯಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚಿಸಿದರು. ಈ ವೇಳೆ ಮಲ್ಲಿಕಾರ್ಜುನ…














