Author: kannadanewsnow05

ಚಿಕ್ಕಬಳ್ಳಾಪುರ : ಇತ್ತೀಚಿಗೆ ಮಾಗಡಿ ಶಾಸಕ ಬಾಲಕೃಷ್ಣ ಅವರು ಕಾರ್ಯಕ್ರಮ ಒಂದರಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕದಿದ್ದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.ಇದೀಗ ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ ಈಶ್ವರ ಕೂಡ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದರೆ ಗ್ಯಾರಂಟಿ ಯೋಜನೆ ನಿಲ್ಲಿಸಲಾಗುತ್ತದೆ ಎಂದು ಹೇಳಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲೆ ಬಾಗೇಪಲ್ಲಿಯಲ್ಲಿ ಪ್ರದೀಪ್ ಈಶ್ವರ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಡಿ ಒಂದು ವೇಳೆ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಶಾಸಕ ಪ್ರದೀಪ ಈಶ್ವರ ಸ್ಫೋಟಕ ವಾದಂತಹ ಹೇಳಿಕೆ ನೀಡಿದರು. ಕೆಲವು ತಿಂಗಳ ಹಿಂದೆ ಮಾಗಡಿ ಶಾಸಕ ಬಾಲಕೃಷ್ಣ ಅವರು ಕೂಡ ಇದೇ ರೀತಿ ಹೇಳಿಕೆ ನೀಡಿದರು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕದಿದ್ದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ಹೇಳಿಕೆ ನೀಡಿದ್ದರು. ಇದೀಗ ಶಾಸಕ ಪ್ರದೀಪ್ ಈಶ್ವರ್…

Read More

ಬೆಂಗಳೂರು : ಬೆಂಗಳೂರಿನ ಕಾಡುಗುಡಿ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ವೈಟ್ ಫೀಲ್ಡ್ ನ ಮುಖ್ಯ ರಸ್ತೆಯ ಐಟಿಪಿಎಲ್ ಮುಂಭಾಗದಲ್ಲಿ ಈ ಘಟನೆ ಸಂಭವಿಸಿದ್ದು ಅರಣ್ಯದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಕಾಣಿಸಿಕೊಂಡಿದೆಎನ್ನಲಾಗುತ್ತಿದೆ. ಈ ಅರಣ್ಯ ಪ್ರದೇಶವು ಸುಮಾರು ಸುಮಾರು 700 ಎಕರೆ ವ್ಯಾಪ್ತಿಯಲ್ಲಿ ಈ ಅರಣ್ಯ ಪ್ರದೇಶವಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆ. ವೈಟ್ ಫೀಲ್ಡ್ ಮುಖ್ಯ ರಸ್ತೆಯ ಐಟಿಪಿಎಲ್ ಮುಂಭಾಗದಲ್ಲಿ ಘಟನೆ ನಡೆದಿದೆ. ಅರಣ್ಯದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.ಆದರೆ ಈ ಬೆಂಕಿ ಅವಘಡಕ್ಕೆ ಕಾರಣ ಏನೆಂಬುದು ಇದುವರೆಗೂ ತಿಳಿದುಬಂದಿಲ್ಲ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಕಲಬುರಗಿ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಚುನಾವಣೆ ವೇಳೆ ಕೊಟ್ಟಂತಹ ಭರವಸೆಗಳಾದ ಪ್ರಮುಖ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ ಈ 5 ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯ ಮಹಿಳಾ ಮೋರ್ಚಾದವರು ಸಹ ಶಕ್ತಿ ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು. ಅವರು ಇಂದು ಕಲಬುರ್ಗಿಯ ಕಮಲಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯ ರೀತಿ ಭಾವನಾತ್ಮಕ ವಿಚಾರ ಇಟ್ಟುಕೊಂಡು ಮತ ಕೇಳುತ್ತಿಲ್ಲ. ನಿಮ್ಮ ಬದುಕು ಕಟ್ಟುವ ವಿಚಾರ ಇಟ್ಟುಕೊಂಡು ಮತ ಕೇಳುತ್ತಿದ್ದೇವೆ.ನಮ್ಮ ಕೂಲಿ ಕೆಲಸಕ್ಕೆ ಮತ ಕೇಳಲು ಬಂದಿದ್ದೇವೆ. ನೀವು ಕೊಟ್ಟ ಮತದ ಆಶೀರ್ವಾದದಿಂದ ನಾವು 5 ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ.ಯಾವುದೇ ಜಾತಿ ಧರ್ಮ ನೋಡಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿಲ್ಲ ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು. https://kannadanewsnow.com/kannada/in-2019-deve-gowda-was-taken-away-and-his-throat-slit-nikhil-kumaraswamy-to-congress/ ಎಲ್ಲಾ ಪಕ್ಷದವರು ಗ್ಯಾರಂಟಿ ಯೋಜನೆಯ ಫಲಾನುಭವಿಗಳು. ಬಿಜೆಪಿ ಮಹಿಳಾ ಮೋರ್ಚಾದವರು ಸಹ ಶಕ್ತಿ ಯೋಜನೆಯ ಫಲಾನುಭವಿಗಳು ಕೇಂದ್ರದಿಂದ ನಮ್ಮ ರಾಜ್ಯಕ್ಕೆ ತೆರಿಗೆ ವಿಚಾರದಲ್ಲಿ…

Read More

ಮಂಡ್ಯ : 2019 ರಲ್ಲಿ ದೇವೇಗೌಡರನ್ನು ಕರೆದುಕೊಂಡು ಹೋಗಿ ಮೈತ್ರಿ ಹೆಸರಲ್ಲಿ ಅವರ ಕುತ್ತಿಗೆ ಕೊಯ್ದರು ಎಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. https://kannadanewsnow.com/kannada/big-news-bjp-worker-attacked-for-ruckus-at-bjp-coordination-meeting-in-chitradurga/ ಚುನಾವಣಾ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಟ್ಟ ಮಾತಿನಂತೆ ಉಳಿಸಿಕೊಂಡ ನಾಯಕರೆಂದರೆ ಅದು ಕುಮಾರಸ್ವಾಮಿ ಎಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದರು. ಕಾಂಗ್ರೆಸ್ ಸಚಿವರು ಶಾಸಕರು ದುರಹಂಕಾರದ ಮಾತು ಆಡುತ್ತಿದ್ದಾರೆ. ಜೆಡಿಎಸ್ ಕಾರ್ಯಕರ್ತರನ್ನು ಕೆರಳಿಸುವ ಮಾತುಗಳನ್ನು ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು. https://kannadanewsnow.com/kannada/kerala-govt-slams-it-companies-for-water-scarcity-m-b-patil/ ಹೊಸ ತಂತ್ರಜ್ಞಾನದ ಮೂಲಕ ಎಚ್ ಡಿ ಕುಮಾರಸ್ವಾಮಿ ಅವರಿಗೆ ಆಪರೇಷನ್ ಮಾಡಲಾಗಿದೆ. ನಮ್ಮ ತಂದೆಯವರ ಬಳಿ ಪ್ರತಿದಿನ ಕಷ್ಟ ಹೇಳಿಕೊಂಡು ಜನ ಬರುತ್ತಾರೆ. ಮಾತೃ ಹೃದಯ ಇರುವ ವ್ಯಕ್ತಿ ಅಂದರೆ ಅದು ಎಚ್ ಡಿ ಕುಮಾರಸ್ವಾಮಿ.2019 ರಲ್ಲಿ ದೇವೇಗೌಡರನ್ನು ಕರೆದುಕೊಂಡು ಹೋಗಿ ಕುತ್ತಿಗೆ ಕೊಯ್ದರು ಎಂದು ವಾಗ್ದಾಳಿ ನಡೆಸಿದರು. https://kannadanewsnow.com/kannada/amit-shahs-roadshow-in-channapatna-due-to-lack-of-coordination-among-workers-dks/ ಬಿಜೆಪಿ ಜೆಡಿಎಸ್ ಕಾರ್ಯಕರ್ತರು…

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಲೋಕಸಭಾ ಚುನಾವಣೆ ಅಭ್ಯರ್ಥಿ ಗೋವಿಂದ ಕಾರಜೋಳ ಹಾಗೂ ಇತರೆ ನಾಯಕರ ಸಮ್ಮುಖದಲ್ಲಿ ಸಮನ್ವಯ ಸಭೆಯ ನಡೆಯಿತು. ಸಭೆಯ ಬಳಿಕ ನೋಡು ನೋಡುತ್ತಿದ್ದಂತೆ ಗಲಾಟೆ ನಡೆದು ಓರ್ವ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಹೌದು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಮನ್ವಯ ಸಭೆ ನಡೆಯಿತು ಸಭೆಯ ಬಳಿಕ ಅಭ್ಯರ್ಥಿ ಗೋವಿಂದ ಕಾರಜೋಳ್ ಅವರು ತೆರಳಿದಾಗ ಈ ವೇಳೆ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೌಷ್ಟಿ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಆಗಿದೆ. ಈ ವೇಳೆ ಪಾವಗಡ ಬಿಜೆಪಿ ಕಾರ್ಯಕರ್ತ ಚೈತನ್ಯ ಎನ್ನುವವರ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪ ಕೇಳಿ ಬಂದಿದೆ. ಪಾವಗಡ ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಮಧು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧದ ಪೋಸ್ಟ್ ಹಿನ್ನೆಲೆಯಲ್ಲಿ ಈ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ.…

Read More

ನವದೆಹಲಿ : ಕಾಂಗ್ರೆಸ್ ಸೇರಿ ಎಲ್ಲಾ ವಿಪಕ್ಷಗಳ ಬ್ಯಾಂಕ್ ಅಕೌಂಟ್ ಅನ್ನು ಫ್ರೀಜ್ ಮಾಡಿದ್ದಾರೆ ಎಂದು ಇಂಡಿಯಾ ಒಕ್ಕೂಟದ ಮಹಾ ರ್‍ಯಾಲಿಯಲ್ಲಿ ರಾಹುಲ್ ಗಾಂಧಿ ಹೇಳಿಕೆ ನೀಡಿದರು. ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟ ಕೇಂದ್ರ ಸರ್ಕಾರದ ವಿರುದ್ಧ ರ್ಯಾಲಿ ನಡೆಸುತ್ತಿದೆ. ಲೋಕಸಭಾ ಚುನಾವಣೆಗೆ ವೆಚ್ಚ ಮಾಡಲು ನಮ್ಮ ಬಳಿ ಹಣವೇ ಇಲ್ಲ. ಸಾಂವಿಧಾನಿಕ ಸಂಸ್ಥೆಗಳನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಐಟಿ ಇಡಿ ಸಿಬಿಐ ಪೊಲೀಸರನ್ನು ಬಳಸಿ ಚುನಾವಣೆ ನಡೆಸುತ್ತಿದೆ. ಚುನಾವಣೆಗೆ ಘೋಷಣೆಗೂ ಮೊದಲೇ ನಾಲ್ಕು ಸ್ಥಾನ ಗೆಲ್ಲುತ್ತೇವೆ ಅಂತಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಹೇಳಿಕೆಯನ್ನು ನೀಡುತ್ತಿದ್ದಾರೆ. ಯಾವ ಆಧಾರದಲ್ಲಿ 400 ಸ್ಥಾನ ಗೆಲ್ಲುವುದಾಗಿ ಬಿಜೆಪಿಯವರು ಹೇಳುತ್ತಾರೆ ಇಂಡಿಯಾ ಒಕ್ಕೂಟದ ಮಹಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ವಿಪಕ್ಷಗಳ ಬ್ಯಾಂಕ್ ಖಾತೆಯನ್ನು ಕೇಂದ್ರ ಸರ್ಕಾರ ಫ್ರೀಜ್ ಮಾಡಿದೆ. ಇದನ್ನೆಲ್ಲಾ ನೋಡಿದ್ರೆ ಮ್ಯಾಚ್ ಫಿಕ್ಸಿಂಗ್ ಆದಂತೆ ಆಗಿದೆ. ಈ ಚುನಾವಣೆ ಸಾಮಾನ್ಯ ಚುನಾವಣೆ…

Read More

ದಕ್ಷಿಣಕನ್ನಡ : ಕಾರಿನಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಮರ್ಧಾಳದಲ್ಲಿ ನಡೆದಿದೆ.ಮೃತರನ್ನು ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ವಿಠಲ ರೈ ಅವರು ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ಡಿಕ್ಕಿ ಹೊಡೆದಿದೆ. ಕಾರನ್ನು ಚಾಲಕ ನಿಲ್ಲಿಸದೇ ಪರಾರಿಯಾಗಿದ್ದಾನೆ. ವಿಠಲ ರೈ ಸ್ಥಳದಲ್ಲೇ ಮೃತಪಟ್ಟಿದ್ದಾರೆ. https://kannadanewsnow.com/kannada/case-registered-against-rebel-bjp-leader-ks-eshwarappa-for-violating-model-code-of-conduct/ ವಿಷಯ ತಿಳಿಯುತ್ತಿದ್ದಂತೆ ಕಡಬ ಸರಕಾರಿ ಆಸ್ಪತ್ರೆಯ ಬಳಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ದಕ್ಷಿಣ ಕನ್ನಡ ಎಸ್​ಪಿ ಸ್ಥಳಕ್ಕೆ ಬರುವಂತೆ ಆಗ್ರಹಿಸಿದರು. ಮಧ್ಯರಾತ್ರಿ ಎರಡು ಗಂಟೆಯವರೆಗೂ ರಾಜ್ಯ ಹೆದ್ದಾರಿ ರಸ್ತೆ ತಡೆ ನಡೆಸಿದರು. ಪ್ರತಿಭಟನೆಯಲ್ಲಿ ನೂರಾರು ಜನರು ಸೇರಿದ್ದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಅರುಣ್ ಕುಮಾರ್…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕೃಷರ್ ಮಾಲಿಕನಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು ಶಾಸಕ ಭೈರತಿ ಬಸವರಾಜ್ ಸಹಾಯಕ ಅಳಿಯ ಹಾಗೂ ಕೃಷರ್ ಮಾಲೀಕರಾದಂತಹ ಲೋಕೇಶ್ ಎನ್ನುವವರ ಮನೆಯ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸಿ ಸುಮರು 1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ಹೊಸೂರು ನಿವಾಸಿ ಲೋಕೇಶ್ ಮನೆಯ ಮೇಲೆ ಐಟಿ ಅಧಿಕಾರಿಗಳು ಇದೀಗ ದಾಳಿ ನಡೆಸಿದ್ದಾರೆ.ಇತ್ತೀಚಿಗೆ ತಮಿಳುನಾಡಿನ ಹೊಸೂರು ಚೆಕ್ ಪೋಸ್ಟ್ ನಲ್ಲಿ ಕ್ರಷರ್ ಮಾಲೀಕರಾಗಿರುವ ಲೋಕೇಶ್ ಅವರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಲಕ್ಷ ರೂಪಾಯಿಗಳ ಜೊತೆಗೆ ಸಿಗಿಬಿದ್ದಿದ್ದರು ಎಂದು ತಿಳಿದುಬಂದಿದೆ. ಈ ನೆಲೆಯಲ್ಲಿ ಇಂದು ಐಟಿ ಅಧಿಕಾರಿಗಳು ಅವರ ಮನೆಯ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಅಲ್ಲದೆ ಇವರು ಬೆಂಗಳೂರಿನಲ್ಲಿ ಕೆಆರ್ ಪುರಂ ಬಿಜೆಪಿ ಶಾಸಕರಾಗಿರುವ ಭೈರತಿ ಬಸವರಾಜ್ ಆಪ್ತ ಸಹಾಯಕ ಮಂಜುನಾಥ ಅವರ ಅಳಿಯ ಎಂದು ಹೇಳಲಾಗುತ್ತಿದೆ. ಇದೀಗ ಅವರ ಮನೆ ಮೇಲೆ…

Read More

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದ್ದೆ ಪ್ರಮುಖ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ ತಡ ಅದರಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯ ಜಾರಿಯಾದ ಬಳಿಕ ಮಹಿಳೆಯರು ಹೇಳದೆ ಕೇಳದೆ ಹೊರಟು ಹೋಗುತ್ತಿರುವ ಘಟನೆಗಳು ನಡೆಯುತ್ತಿವೆ. ಇದೀಗ ತವರಿಗೆ ಪತ್ನಿಯೊಬ್ಬಳು ಹೇಳದೆ ಕೇಳದೆ ತೆರಳಿರುವುದಕ್ಕೆ ಕುಪಿತಗೊಂಡ ಪತಿ ಕೆಎಸ್ಆರ್ಟಿಸಿ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ನಡೆದಿದೆ.ಹೌದು ಪತ್ನಿ ಫ್ರೀ ಬಸ್​ನಲ್ಲಿ ತವರಿಗೆ ಹೋಗಿದ್ದನ್ನ ಕಂಡು ಸಿಟ್ಟಿಗೆದ್ದ ಕುಡುಕ ಗಂಡ ಕೆಎಸ್​ಆರ್​ಟಿಸಿ (KSRTC) ಸಿಬ್ಬಂದಿ ಮೇಲೆ ಚಾಕು, ದೊಣ್ಣೆಯಿಂದ ಹಲ್ಲೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಉಚಿತ ಬಸ್ ಇದೆ ಎಂದು ತನಗೆ ಹೇಳದೆ ಪತ್ನಿ ತವರಿಗೆ ಹೊಗಿದ್ದಾಳೆ ಎಂದು ಚಿಕ್ಕಸಂದ್ರದ ನಾಗ ಎಂಬಾತ ಸಿಟ್ಟಿಗೆದ್ದು ರಂಪಾಟ ನಡೆಸಿದ್ದಾನೆ. ಮೊದಲು ಚಾಕು ಹಿಡಿದು ಹಲ್ಲೆ ನಡೆಸಲು ಯತ್ನಿಸಿದಾಗ ಸ್ಥಳೀಯರು ತಡೆದಿದ್ದಾರೆ. ಬಳಿಕ ದೊಣ್ಣೆ ಹಿಡಿದುಕೊಂಡು ಹಲ್ಲೆಗೆ ಮುಂದಾದಾಗ ಅಲ್ಲೇ ಇದ್ದ ವ್ಯಕ್ತಿಯೊಬ್ಬರು…

Read More

ಶಿವಮೊಗ್ಗ : ಮಕ್ಕಳಾಗಿಲ್ಲವೆಂದು ಪತಿ ಹಾಗೂ ಆತನ ಮನೆಯ ಕಡೆಯವರು ಕಿರುಕುಳ ನೀಡಿದ್ದರಿಂದ ಮನನೊಂದು ಮಹಿಳೆ ಒಬ್ಬರು ಆ ನೇಣು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಗಾಡಿಕೊಪ್ಪದಲ್ಲಿ ನಡೆದಿದೆ. https://kannadanewsnow.com/kannada/tcs-jobs-recruitment-of-newcomers-in-tcs-begins-ai-training-for-3-5-lakh-employees/ ಶಿವಮೊಗ್ಗದ ಗಾಡಿಕೊಪ್ಪದ ಮನೆಯಲ್ಲಿ ಅಶ್ವಿನಿ (31)ನೇಣಿಗೆ ಶರಣಾದ ಮಹಿಳೆ ಎಂದು ಹೇಳಲಾಗುತ್ತಿದ್ದು, ಮದುವೆಯಾಗಿ 5 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂದು ಪತಿ ಅಭಿಷೇಕ್ ಹಾಗೂ ಮನೆಯವರಿಂದ ಕಿರುಕುಳ ಆರೋಪ ಕೇಳಿಬಂದಿದೆ. ಹೀಗಾಗಿ ಘಟನೆ ಕುರಿತಂತೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More