Author: kannadanewsnow05

ಕೋಲಾರ : ಎರಡು ಬನಗಳನ್ನು ಹೊರತುಪಡಿಸಿ ಇದೀಗ ಕಾಂಗ್ರೆಸ್ ಹೈಕಮಾಂಡ್ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕೆ ವಿ ಗೌತಮ್ ಅವರ ಹೆಸರನ್ನು ಘೋಷಣೆ ಮಾಡಿದ್ದು ಇದೀಗ ಕೋಲಾರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಂದ ಕೆ ವಿ ಗೌತಮಗೂ ಗೋ ಬ್ಯಾಕ್ ಬಿಸಿ ತಟ್ಟಿದೆ ಎನ್ನಲಾಗುತ್ತಿದೆ. https://kannadanewsnow.com/kannada/bjp-trying-to-send-siddaramaiah-to-jail-like-kejriwal-m-venkaiah-naidu-lakshmanas-serious-allegations/ ಕೆವಿ ಗೌತಮ್ ಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಗೋ ಬ್ಯಾಕ್ ಪೋಸ್ಟ್ ಹಾಕಿದ ಕಾಂಗ್ರೆಸ್ ಕಾರ್ಯಕರ್ತರು. ಸಾಮಾಜಿಕ ಜಾಲತಾಣದಲ್ಲಿ ಗೌತಮ್ ಗೋ ಬ್ಯಾಕ್ ಪೋಸ್ಟ್ ಹರಿದಾಡುತ್ತಿದೆ. ಸ್ಥಳೀಯರನ್ನು ಕಡೆಗಣಿಸಿ ಹೊರಗಿನವರಿಗೆ ಮನೆಯ ಹಾಕಿದ್ದಾರೆ ಎಂದು ಕಾರ್ಯಕರ್ತರು ಇದೀಗ ಆಕ್ರೋಶಗೊಂಡಿದ್ದಾರೆ. https://kannadanewsnow.com/kannada/breaking-nta-announces-nittt-result-heres-the-direct-link-to-check-the-result/ ಕಾಂಗ್ರೆಸ್ ಹೈಕಮಾಂಡ್ ನಡೆ ಖಂಡಿಸಿ ಕಾರ್ಯಕರ್ತರು ಗೋ ಬ್ಯಾಕ್ ಪೋಸ್ಟ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಹೈಕಮಾಂಡ್ ನಡೆಯಿಂದ ಬೇಸರಗೊಂಡಿದ್ದಾರೆ. ಇದೀಗ ಕೋಲಾರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಅಸಮಾಧಾನವಿದ್ದು ಹೀಗಾಗಿ ಇದೀಗ ಅಭ್ಯರ್ಥಿ ಕೆ ವಿ ಗೌತಮ್ ವಿರುದ್ಧ ಗೋ ಬ್ಯಾಕ್ ಪೋಸ್ಟ್ ಅಭಿಯಾನ ಆರಂಭಿಸಿದ್ದಾರೆ.

Read More

ಮೈಸೂರು : ಬಿಜೆಪಿ ತಮ್ಮ ವಿರೋಧಿಗಳನ್ನು ವ್ಯವಸ್ಥಿತವಾಗಿ ಮುಗಿಸಲು ಸಂಚು ರೂಪಿಸಿದೆ. ಹಾಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರೀತಿ ಸಿಎಂ ಸಿದ್ದರಾಮಯ್ಯರವರು ಜೈಲಿಗೆ ಕಳುಹಿಸಲು ಬಿಜೆಪಿಯ ತಿನಿಸುತ್ತಿದೆ ಎಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ‍ಅಭ್ಯರ್ಥಿ ಎಂ.ಲಕ್ಷ್ಮಣ ಗಂಭೀರ ‍ಆರೋಪ ಮಾಡಿದರು. https://kannadanewsnow.com/kannada/breaking-nta-announces-nittt-result-heres-the-direct-link-to-check-the-result/ ಕಾಂಗ್ರೆಸ್‌ ‍ಭವನದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ,ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು. https://kannadanewsnow.com/kannada/pv-narasimha-raos-contribution-will-always-be-respected-pm-modi/ ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ನನ್ನನ್ನು ಸೋಲಿಸಿ ಮತ್ತೆ ಸಿದ್ದರಾಮಯ್ಯ ಅವರಿಗೆ ಅವಮಾನ ಮಾಡಬೇಡಿ. ನನ್ನನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯ ಅವರಿಗೆ ಗೌರವ ಸಲ್ಲಿಸಿ. ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಎಂದು ಅವರು ಮನವಿ ಮಾಡಿದರು.

Read More

ಉಡುಪಿ: ಕಳೆದ ವರ್ಷ ಉಡುಪಿಯ ನೇಜಾರು ಎಂಬಲ್ಲಿ ತಾಯಿ ಹಾಗೂ ಮೂವರು ಮಕ್ಕಳನ್ನು ಬರ್ಬರವಾಗಿ ಕೊಲೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಎರಡನೇ ಬಾರಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿ ಇಂದು ಆದೇಶ ನೀಡಿದೆ. https://kannadanewsnow.com/kannada/four-people-including-three-children-killed-in-cylinder-blast-in-uttar-pradesh/ ಆರೋಪಿ ಮೇಲಿನ ಆರೋಪಗಳು ಎಫ್ ಎಸ್ ಎಲ್ ವರದಿ ಸೇರಿದಂತೆ ಇನ್ನಿತರ ಸಾಕ್ಷಿಗಳಿಂದ ಮೇಲ್ನೋಟಕ್ಕೆ ಕಂಡು ಬಂದಿದ್ದು ಜಾಮೀನು ನೀಡಿದರೆ ಸಾಕ್ಷಿಗಳಿಗೆ ಹೆದರಿಸುವ ಸಾಧ್ಯತೆ ಇದೆ. ನ್ಯಾಯಾಂಗ ಬಂಧನದಲ್ಲೂ ಆರೋಪಿಗೆ ಚಿಕಿತ್ಸೆ ಪಡೆಯುವ ಅವಕಾಶ ಇರುವುದರಿಂದ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದಾಗಿ ನ್ಯಾಯಾಧೀಶರು ಆದೇ ತಿಳಿಸಿದ್ದಾರೆ. https://kannadanewsnow.com/kannada/we-dont-have-any-room-for-group-politics-dk-shivakumar-to-ministers-mlas/ ಚೌಗುಲೆ ಮಾ.13ರಂದು ಎರಡನೇ ಬಾರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗೆ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಮಾ.27ರಂದು ಆಕ್ಷೇಪಣೆ ಸಲ್ಲಿಸಿದ್ದರು. ಈ ಕುರಿತು ಆರೋಪಿ ಪರ ವಕೀಲ ರಾಜೇಶ್ ಹಾಗೂ ವಿಶೇಷ ಸರಕಾರಿ ಅಭಿಯೋಜಕರ ಮಧ್ಯೆ ವಾದ ಪ್ರತಿವಾದಗಳು ನಡೆದವು.…

Read More

ಬೆಂಗಳೂರು : ಲೋಕಸಭಾ ಚುನಾವಣೆಗೆ ಕೋಲಾರ ಕ್ಷೇತ್ರ ಕಾಂಗ್ರೆಸ್ ಎಕ ಗಂಟೆ ಆಗಿ ಪರಿಣಮಿಸುತ್ತಿತ್ತು. ಇದೀಗ ಕಾಂಗ್ರೆಸ್ ಹೊಸ ಅಭ್ಯರ್ಥಿಯಾದ ಕೆ ವಿ ಗೌತಮ್ಗೆ ಮನೆ ಹಾಕಿದೆ ಈ ಕುರಿತಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು ಹೊಸ ಮುಖ ಗೌತಮಗೆ ಅವಕಾಶವನ್ನು ನೀಡಿದ್ದೇವೆ ಎಲ್ಲರೂ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೇಟ್ ವಿಚಾರವಾಗಿ ಸಾ ಕೆ ಎಚ್ ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಜೊತೆ ನಾನು ಚರ್ಚಿಸಿದ್ದೇನೇ. ಅವರವರ ಅಭಿಪ್ರಾಯವನ್ನು ಅವರು ತಿಳಿಸಿದ್ದಾರೆ. ಅವರವರ ಸ್ವಾರ್ಥಕ್ಕಾಗಿ ಅವರು ಹೇಳಿದ್ದಾರೆ. ಎರಡು ಗುಂಪಿಗೂ ನಾವು ಅವಕಾಶ ಕೊಡುವುದಿಲ್ಲ ಎಂದು ಅವರು ತಿಳಿಸಿದರು.ಯಾರೇ ಆದರೂ ಲಕ್ಷ್ಮಣ ರೇಖೆ ದಾಟಲು ಆಗುವುದಿಲ್ಲ ಸೀಟು ಗೆಲ್ಲೋದು ಬಿಡುವುದು ಅನಂತರ ಪಕ್ಷದಲ್ಲಿ ಮೊದಲು ಶಿಸ್ತು ಬಹಳ ಮುಖ್ಯ ಯಾರೇ ಸಿಕ್ತು ಉಳ್ಳಂಗಿಸಿದರು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು ನಮ್ಮ ಪಕ್ಷದಲ್ಲಿ ಯಾವುದೇ ರೀತಿಯಾಗಿ ಗುಂಪು ರಾಜಕಾರಣ…

Read More

ಬೆಂಗಳೂರು : ತೆರಿಗೆ ಪಾವತಿಸುವಂತೆ ಕಾಂಗ್ರೆಸ್ ಪಕ್ಷಕ್ಕೆ ಐಟಿ ನೋಟಿಸ್ ವಿಚಾರವಾಗಿ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಐಟಿ ಇಲಾಖೆ ನೋಟಿಸ್ ಮುಂದುವರೆದಿದ್ದು ಕಳೆದ ರಾತ್ರಿ ಐಟಿ ಅಧಿಕಾರಿಗಳು ಮತ್ತೆರಡು ನೋಟೀಸ್ ಗಳನ್ನು ನೀಡಿದೆ ಎಂದು ತಿಳಿದುಬಂದಿದೆ. ಈ ವೇಳೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೂ ಐ ಟಿ ಇಲಾಖೆ ನೋಟಿಸ್ ನೀಡಿದೆ. ಅಲ್ಲದೆ ಐಟಿ ಇಲಾಖೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೂ ನೋಟಿಸ್ ನೀಡಿದೆ. ಈ ಕುರಿತಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದು ನನಗೂ ಕೂಡ ಐ ಟಿ ಇಲಾಖೆ ನೋಟಿಸ್ ನೀಡಿದೆ ಎಂದು ತಿಳಿಸಿದರು. ಅದೇ ರೀತಿಯಾಗಿ 11 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ಸಿಪಿಐ ಪಕ್ಷಕ್ಕೂ ಐಟಿ ಇಲಾಖೆ ನೋಟೀಸ್ ನೀಡಿದೆ ಎಂದು ತಿಳಿದುಬಂದಿದೆ.ಆದಾಯ ತೆರಿಗೆ ಇಲಾಖೆಯು ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಸುಮಾರು 1,700 ಕೋಟಿ ರೂ.ಗಳ ನೋಟಿಸ್ ನೀಡಿದ ನಂತರ, ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಐ-ಟಿ ಇಲಾಖೆಯೊಂದಿಗೆ ಕಾನೂನು ಹೋರಾಟದಲ್ಲಿ ಸಿಲುಕಿಕೊಂಡಿದೆ.…

Read More

ನವದೆಹಲಿ : ಲೋಕಸಭೆ ಚುನಾವಣೆಹೊಸ್ತಿಲಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಇತ್ತೀಚಿಗೆ ಬಿಜೆಪಿ ವಿಧಾನ​ ಪರಿಷತ್ ​ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಇದೀಗ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹೌದು ಇತ್ತೀಚಿಗೆ ವಿಧಾನ್​ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಉಲ್ಲೇಖಿಸಿದ್ದಾರೆ. ತೇಜಸ್ವಿನಿ ಗೌಡ ಅವರ ಪರಿಷತ್​ ಸದಸ್ಯ ಸ್ಥಾನದ ಅವಧಿ ಜೂನ್ 24ರ ವರೆಗೆ ಇತ್ತು ಎನ್ನಲಾಗುತ್ತಿದೆ. ಇದೀಗ ನವದೆಹಲಿಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಎಂಎಲ್ಸಿ ತೇಜಸ್ವಿನಿ ಗೌಡ ಅವರು ಪಕ್ಷದ ನಾಯಕರಾದ ಜಯರಾಮ್ ರಮೇಶ್ ಹಾಗೂ ಪವನ್ ಕೆರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.

Read More

ಬೆಂಗಳೂರು : ಲೋಕಸಭೆ ದಿನಾಂಕ ಘೋಷಣೆಯಾದ ಬಳಿಕ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದ ದೀಗ ಬೆಂಗಳೂರಿನ ವಿವಿಧಡೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ಚುಚ್ಚಿ ಮಾಡಿಕೊಂಡಿದ್ದು ಇದೀಗ ತಮಿಳುನಾಡಿನ ಜೂಜುವಡಿ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 2 ಲಕ್ಷ 70 ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಬೆಂಗಳೂರು ಗಡಿ ಭಾಗದ ವ್ಯಾಪ್ತಿಯಲ್ಲಿ ವಿವಿಧಡೆ ಹಣ ವಶ ತಮಿಳುನಾಡಿನ ಜೂಜುವಾಡಿ ಚೆಕ್ ಪೋಸ್ಟ್ ಬಳಿ ಹಣ ವಶಪಡಿಸಿಕೊಳ್ಳಲಾಗಿದೆ. ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಫ್ಲೈಯಿಂಗ್ ಸ್ಕ್ವಾಡ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಖಲೆ ಇಲ್ಲದೆ ಸುಮಾರು 2,70,000 ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ ಬೆಂಗಳೂರಿನ ನಾಗೇಂದ್ರ ದೀಕ್ಷಿತ್ (65) ಎಂಬರವರಿಗೆ ಸೇರಿದ ಹಣ ಎಂದು ಹೇಳಲಾಗುತ್ತಿದೆ.

Read More

ಕೋಲಾರ : ಲೋಕಸಭಾ ಚುನಾವಣೆಗೆ ಕೋಲಾರ ಕ್ಷೇತ್ರ ಕಾಂಗ್ರೆಸ್ ಗೆ ಕಗ್ಗಂಟಾಗಿ ಪ್ರೇಮಿಸಿತ್ತು ಅಲ್ಲದೆ ಐದು ಮಂದಿ ಶಾಸಕರು ರಾಜೀನಾಮೆಗೆ ಮುಂದಾಗಿದ್ದರು, ಇದೀಗ ಟಿಕೇಟ್ ಆಕಾಂಕ್ಷಿಗಳನ್ನು ಹೊರತುಪಡಿಸಿ ಕಾಂಗ್ರೆಸ್ ಹೊಸ ಅಭ್ಯರ್ಥಿಗೆ ಮಣೆ ಹಾಕಿದೆ. ಈ ಕುರಿತಾಗಿ ಶಾಸಕ ಕೊತ್ತೂರು ಮಂಜುನಾಥ್ ಗೌತಮ್ ಯಾರೆಂಬುದೇ ನಮಗೆ ಗೊತ್ತಿಲ್ಲ ಎಂದು ತಿಳಿಸಿದರು. https://kannadanewsnow.com/kannada/mobile-users-should-note-this-service-will-not-be-available-from-april-15/ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಲಾರ ಅಭ್ಯರ್ಥಿ ಕೆವಿ ಗೌತಮ್ ನಮಗೆ ಯಾರೆಂಬುದೇ ತಿಳಿದಿಲ್ಲ ಪರಿಚಯವೇ ಇಲ್ಲ. ಆದರೂ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಿದ್ದೇವೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ನೀಡಿದ್ದಾರೆ. ಪಕ್ಷ ಎರಡು ಬಣಗಳಿಗೂ ಟಿಕೆಟ್ ಕೊಡಲ್ಲ ಅಂತ ಅಂದಿದ್ದರು. ಒಬ್ಬರಿಗೆ ಕೊಡಿ ಎಂದು ನಾವು ವರಿಷ್ಠರಿಗೆ ಕೇಳಿದ್ದೆವು.ಆದರೆ ವರಿಷ್ಠರು ಇಬ್ಬರು ಬಣಕ್ಕು ಕೊಡಲ್ಲ ಅಂತ ಹೇಳಿದ್ದರು.ಹೈಕಮಾಂಡ್ ಯಾವುದೇ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿದರು ನಾವು ಅದಕ್ಕೆ ಬದ್ಧರಾಗಿದ್ದೇವೆ. ಕೋಲಾರ ಅಭ್ಯರ್ಥಿ ಗೌತಮ್ ನನಗೆ ಪರಿಚಯವೇ ಇಲ್ಲ ಆದರೂ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.…

Read More

ಬೆಂಗಳೂರು : 1,823 ಕೋಟಿ ತೆರಿಗೆ ಕಟ್ಟುವಂತೆ ಕಾಂಗ್ರೆಸ್​ಗೆ IT ನೋಟಿಸ್ ವಿಚಾರ ಸಂಬಂಧ ಬಿಜೆಪಿಯವರು 8,200 ಕೋಟಿ ತೆಗೆದುಕೊಂಡಿದ್ದಾರೆ ಅವರಿಗೆ ನೋಟಿಸ್ ಯಾಕಿಲ್ಲ? ನಾವು ಯಾವ ದೇಶದಲ್ಲಿದ್ದೇವೆ ಅನ್ನೋದೇ ಕನ್ಫ್ಯೂಸ್ ಆಗುತ್ತಿದೆ ಎಂದು ಬೆಂಗಳೂರಿನಲ್ಲಿ ಗ್ರಹ ಇಲಾಖೆಯ ಸಚಿವ ಡಾಕ್ಟರ್ ಜಿ ಪರಮೇಶ್ವರ್ ತಿಳಿಸಿದರು. https://kannadanewsnow.com/kannada/breaking-president-draupadi-murmu-confers-bharat-ratna-on-lk-advani-4-others/ ಸುದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಯಾರು ಹಣ ಕೊಡುವಂತಿಲ್ಲ. ಚುನಾವಣೆ ಬಾಂಡ್ ಕೊಡಬಹುದು ಎಂದು ಹೇಳಿದ್ದರು. ಆಗ ಎಲ್ಲಾ ಪಕ್ಷಗಳು ದೇಣಿಗೆಯನ್ನು ಬಾಂಡ್ ರೂಪದಲ್ಲಿ ಪಡೆದರು. ಈಗ ಚುನಾವಣೆ ಬಾಂಡ್ ತಪ್ಪು ಎಂದು ಹೇಳುತ್ತಿದ್ದಾರೆ ಎಂದು ಅವರು ತಿಳಿಸಿದರು. https://kannadanewsnow.com/kannada/college-student-receives-tax-notice-worth-rs-46-crore-what-happened-next/ ಬಿಜೆಪಿಯವರೇ ಹೆಚ್ಚು ದೇಣಿಗೆಯನ್ನು ಪಡೆದಿದ್ದಾರೆ. ಬಿಜೆಪಿಯವರು 8,200 ಕೋಟಿ ತೆಗೆದುಕೊಂಡಿದ್ದಾರೆ ಏಕಾಂಗಿ ಕಾಂಗ್ರೆಸ್ಗೆ ಅಷ್ಟೇ ಏಕೆ ನೋಟಿಸ್ ಬಂತು?ಕೊಡುವುದಾದರೆ ಬಿಜೆಪಿಗೂ ನೋಟಿಸ್ ಕೊಡಬೇಕಲ್ಲವಾ? ಇದು ರಾಜಕೀಯ ದುರುದ್ದೇಶ ಅಲ್ಲದೆ ಮತ್ತೇನು ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದರು.

Read More

ಕಲಬುರಗಿ : ಕಲಬುರಗಿಯ ಆರಾಧ್ಯ ದೈವರಾದ ಶ್ರೀ ಶರಣಬಸವೇಶ್ವರರ ಮಹೋತ್ಸವದ ಅಂಗವಾಗಿ ನಿನ್ನೆ ನಡೆದ ಉಚ್ಛಾಯಿ (ಚಿಕ್ಕ ರಥೋತ್ಸವ) ಎಳೆಯುವ ವೇಳೆ ದುರಂತವೊಂದು ಸಂಭವಿಸಿದ್ದು ಓರ್ವ ಭದ್ರತಾ ಸಿಬ್ಬಂದಿ ಸಾವನಪ್ಪಿದ್ದು ಇನ್ನೊರ್ವ ಸಿಬ್ಬಂದಿಗೆ ಗಾಯಗಳಾಗಿರುವ ಘಟನೆ ನಡೆದಿದೆ. https://kannadanewsnow.com/kannada/candidate-for-kolar-reserved-lok-sabha-seat-finalised-k-chandrasekhar-rao-gautams-name-is-final/ ನಿನ್ನೆ ಕಲಬುರ್ಗಿ ನಗರದಲ್ಲಿ ಶ್ರೀ ಶರಣಬಸವೇಶ್ವರರ 202ನೇ ಜಾತ್ರಾ ಮಹೋತ್ಸವದ ಅಂಗವಾಗಿ ಉಚ್ಛಾಯಿ ಎಳೆಯಲಾಗುತ್ತಿತ್ತು ಈ ವೇಳೆ ರಥದ ಚಕ್ರಕ್ಕೆ ಸಿಲುಕಿ ಓರ್ವ ಗೃಹರಕ್ಷಕ ದಳದ ಸಿಬ್ಬಂದಿ ಮೃತಪಟ್ಟಿದ್ದು, ಇನ್ನೋರ್ವ ಗಾಯಗೊಂಡಿದ್ದಾರೆ. ಮೃತರನ್ನು ಚಿಟಗುಪ್ಪಾ ತಾಲ್ಲೂಕಿನ ಇಟಗಾ ಗ್ರಾಮದ ನಿವಾಸಿ ರಾಮು ವಾಲಿ ಎಂದು ಗುರುತಿಸಲಾಗಿದೆ.ಬೀದರ್ ಜಿಲ್ಲೆಯ ಚಿಟಗುಪ್ಪಾ ಘಟಕದ ಗೃಹ ರಕ್ಷಕ ದಳದ ಸಿಬ್ಬಂದಿ ಅಶೋಕರೆಡ್ಡಿ ಗಾಯಗೊಂಡ ವ್ಯಕ್ತಿಯಾಗಿದ್ದಾರೆ ಎಂದು ಹೇಳಲಗುತ್ತಿದೆ. https://kannadanewsnow.com/kannada/sumalatha-to-hold-high-voltage-meeting-with-supporters-today-will-mandya-gowdi-contest-as-an-independent-candidate/ ಉಚ್ಛಾಯಿಯನ್ನು ಸುಗಮವಾಗಿ ಎಳೆಯುವ ಸಲುವಾಗಿ ಸುಮಾರು 100 ಸಿಬ್ಬಂದಿಗಳನ್ನು ಭದ್ರತಾ ವ್ಯವಸ್ಥೆಗೆ ನಿಯೋಜಿಸಲಾಗಿತ್ತು. ಕಲ್ಬುರ್ಗಿ ಜಿಲ್ಲೆ ಅಷ್ಟೇ ಅಲ್ಲದೆ ಸುತ್ತಮುತ್ತಲಿನ ಕೊಪ್ಪಳ ಯಾದಗಿರಿ ಬಳ್ಳಾರಿ ಸೇರಿದಂತೆ ಅನೇಕ ಜಿಲ್ಲೆಗಳಿಂದ ಈ ಒಂದು ಶರಣಬಸವೇಶ್ವರ ರಥೋತ್ಸವ ಕಣ್ತುಂಬಿಕೊಳ್ಳಲು…

Read More