Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ.ರಾಜ್ಯಗಳಿಗೆ 1.5 ಲಕ್ಷ ಕೋಟಿಯವರೆಗೆ ಬಡ್ಡಿ ರಹಿತ ಸಾಲ ವಿಮಾ ಕ್ಷೇತ್ರದಲ್ಲಿ ನೂರರಷ್ಟು ವಿದೇಶಿ ಹೂಡಿಕೆಗೆ ಅವಕಾಶ ವಿದೇಶಿ ಹೂಡಿಕೆ ಶೇಕಡ 74 ರಿಂದ ಶೇಕಡ 100ಕ್ಕೆ ಹೆಚ್ಚಳ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ…
ಬೆಂಗಳೂರು : ಖಾಸಗಿ ಕ್ಲಿನಿಕಲ್ ಟ್ರಯಲ್ಗೆ ಸ್ವಪ್ರೇರಿತರಾಗಿ ಸೇರಿಕೊಂಡು ಯುವಕನೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡಿರುವ ಘೋರ ಘಟನೆ ಬೆಂಗಳೂರಲ್ಲಿ ನಡೆದಿದೆ.ಮೃತ ಯುವಕನನ್ನು ಕಲಬುರ್ಗಿ ಮೂಲದ ನಾಗೇಶ್ ಎಂದು ತಿಳಿದುಬಂದಿದೆ. ಹೌದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಖಾಸಗಿ ಔಷಧ ಪ್ರಯೋಗ ಕಂಪನಿಯಲ್ಲಿ ಡಿಸೆಂಬರ್ 2ನೇ ವಾರದಲ್ಲಿ ನಾಗೇಶ್ ಮೆಡಿಸಿನ್ ಟ್ರಯಲ್ಗೆ ಒಳಗಾದರು.ಆದರೆ, ಎರಡೇ ದಿನಗಳಲ್ಲಿ ಹೊಟ್ಟೆನೋವು ಬಂದಿತ್ತು, ಖಾಸಗಿ ಆಸ್ಪತ್ರೆಗೆ ದಾಖಲಾಗಬೇಕಾಯಿತು. 10 ದಿನಗಳ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಆದರೂ, ಜನವರಿ 21ರಂದು ಸಹೋದರನ ಮನೆಯಲ್ಲಿ ಸಾವನಪ್ಪಿದ್ದಾನೆ.ಈ ಕುರಿತು ನಾಗೇಶ್ ಸಹೋದರ ಜಾಲಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾಗೇಶ್ನಸಹೋದರನದೂರಿನಪ್ರಕಾರ, ಟ್ರಯಲ್ಗೆ ಮುನ್ನ ಸಾವಿನ ಸಾಧ್ಯತೆಯನ್ನು ಹೊರತುಪಡಿಸಿ ಉಳಿದ ದುಷ್ಪರಿಣಾಮಗಳ ಬಗ್ಗೆ ಮಾತ್ರ ಕಂಪನಿ ಮಾಹಿತಿ ನೀಡಿತ್ತು. ಆದರೆ, ರಕ್ತಹೆಪ್ಪುಗಟ್ಟುವಿಕೆಯಿಂದ ನಾಗೇಶ್ನ ಮರಣವಾಗಿದ್ದು, ಇದಕ್ಕೆ ಔಷಧಿ ಪ್ರಯೋಗವೇ ಕಾರಣ ಎಂದು ಕುಟುಂಬವು ಆರೋಪಿಸಿದೆ. ಸದ್ಯ ಘಟನೆ ಕುರಿತು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ ಆರಂಭಕ್ಕೂ ಮುನ್ನ ತೆಲುಗು ಕವಿ ಗುರುಜಾಡು ಅಪ್ಪಾರಾವ್ ಅವರನ್ನು ಸ್ಮರಿಸಿ ಪ್ರಧಾನಿ ಮೋದಿ ಅವರಿಗೆ ನಮಿಸಿ ಬಜೆಟ್ ಮಂಡನೆ ಆರಂಭಿಸಿದರು. ರೈತರಿಗಾಗಿ ಕಿಸಾನ್ ಕಾರ್ಡ್ ಸಾಲಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಅಲ್ಲದೆ ರೈತರಿಗಾಗಿ ಮೂರು ಯೂರಿಯಾ ಪ್ಲಾಂಟ್ ನಿರ್ಮಾಣ ಮಾಡಲಾಗುತ್ತದೆ. ಪೌಷ್ಟಿಕತೆಯಲ್ಲಿ ಬೇಡಿಕೆ ಇರುವ ಮುಖಾನ ಬೆಲೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಅಂಡಮಾನ್ ನಿಕೋಬಾರ್ ದ್ವೀಪ, ಲಕ್ಷ ದ್ವೀಪಗಳಲ್ಲಿ ಮೀನುಗಾರಿಕೆಗೆ ಹೆಚ್ಚು ಒತ್ತು ನೀಡಲಾಗಿದೆ. ಈ ವೇಳೆ ಬಜೆಟ್ ಮಂಡನೆ ಆರಂಭದಲ್ಲಿ ವಿಪಕ್ಷಗಳು ಗದ್ದಲ ಆರಂಭಿಸಿದವು. ಮುಂದಿನ ಐದು ವರ್ಷ ಸುಖ ಭಾರತಕ್ಕಾಗಿ ಬಜೆಟ್ ಮಂಡನೆ ಮಾಡಲಾಗುತ್ತಿದ್ದು ದೇಶ ಕೇವಲ ಮಣ್ಣಿಗೆ ಮಾತ್ರವಲ್ಲ ಜನರಿಗಾಗಿ ದೇಶ. ಭಾರತದ ಅರ್ಥವ್ಯವಸ್ಥೆ ವೇಗದ ಗತಿಯಲ್ಲಿ ಬೆಳೆಯುತ್ತಿದೆ. ಯುವಕರು ರೈತರು ಮಧ್ಯಮ ವರ್ಗಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ವಿಕಸಿತ ಭಾರತವೇ…
ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ ಆರಂಭಕ್ಕೂ ಮುನ್ನ ತೆಲುಗು ಕವಿ ಗುರುಜಾಡು ಅಪ್ಪಾರಾವ್ ಅವರನ್ನು ಸ್ಮರಿಸಿ ಪ್ರಧಾನಿ ಮೋದಿ ಅವರಿಗೆ ನಮಿಸಿ ಬಜೆಟ್ ಮಂಡನೆ ಆರಂಭಿಸಿದರು. ಈ ವೇಳೆ ಬಜೆಟ್ ಮಂಡನೆ ಆರಂಭದಲ್ಲಿ ವಿಪಕ್ಷಗಳು ಗದ್ದಲ ಆರಂಭಿಸಿದವು. ಮುಂದಿನ ಐದು ವರ್ಷ ಸುಖ ಭಾರತಕ್ಕಾಗಿ ಬಜೆಟ್ ಮಂಡನೆ ಮಾಡಲಾಗುತ್ತಿದ್ದು ದೇಶ ಕೇವಲ ಮಣ್ಣಿಗೆ ಮಾತ್ರವಲ್ಲ ಜನರಿಗಾಗಿ ದೇಶ. ಭಾರತದ ಅರ್ಥವ್ಯವಸ್ಥೆ ವೇಗದ ಗತಿಯಲ್ಲಿ ಬೆಳೆಯುತ್ತಿದೆ. ಯುವಕರು ರೈತರು ಮಧ್ಯಮ ವರ್ಗಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ವಿಕಸಿತ ಭಾರತವೇ ನಮ್ಮ ಸರ್ಕಾರದ ಮೊದಲ ಗುರಿಯಾಗಿದೆ ಎಂದು ತಿಳಿಸಿದರು. 2047ಕ್ಕೆ ಬಡತನ ಮುಕ್ತ ಭಾರತ ಕಟ್ಟುವ ಸಂಕಲ್ಪ ಒಂದಾಗಿದ್ದು ಯುವಕರು ಬಡವ ಮಹಿಳೆ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ವಿಕಾಸಿತ್ ಭಾರತ ಗುರಿಯತ್ತ ಭಾರತ ಮುಂದುವರೆದಿದೆ. ಭಾರತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ದೇಶವಾಗಿದೆ. ಸಣ್ಣ ಮತ್ತು ಅತಿ ಸಣ್ಣ…
ಚಿಕ್ಕಮಗಳೂರು : ಕಳೆದ ಕೆಲವು ದಿನಗಳ ಹಿಂದೆ ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ 6 ಜನ ನಕ್ಸಲರು ಸಿಎಂ ಸಿದ್ದರಾಮಯ್ಯ ಎದುರು ಶರಣಾಗಿದ್ದರು. ಇದೀಗ ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವಿ ಅಲಿಯಾಸ್ ರವೀಂದ್ರ ನೆಮ್ಮಾರ್ ಕಳೆದ ರಾತ್ರಿ ಶೃಂಗೇರಿಯಲ್ಲಿ ಶರಣಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತದ ಎದುರು ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೆ ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಾಣಾಗಿದ್ದರು. ಆದರೆ ಕೋಟೆಹೊಂಡ ರವಿ ಮಾತ್ರ ಭೂಗತವಾಗಿದ್ದರು. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು. ಕಳೆದ ರಾತ್ರಿ ಶೃಂಗೇರಿಯ ಅರಣ್ಯ ಐಬಿಯಲ್ಲಿ ಕೋಟೆಹೊಂಡ ರವಿ ಅವರು ಶರಣಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ಹೊತ್ತಿಗೆ ಅವರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ ಎಂದು ಪ್ರಗತಿಪರ ಹೋರಾಟಗಾರ ಕೆ.ಎಲ್.ಅಶೋಕ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಇತ್ತೀಚಿಗೆ ಬಹುಭಾಷ ನಟ ಪ್ರಕಾಶ್ ರೈ ಅವರ AI ಫೋಟೋ ಎಲ್ಲೆಡೆ ಭಾರಿ ವೈರಲ್ ಆಗಿತ್ತು.ಇದೀಗ ಈ ರೀತಿ ಫೋಟೋ ವೈರಲ್ ಮಾಡಿದ ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕಾಶ್ ರಾಜ್ ಕೇಸ್ ದಾಖಲು ಮಾಡಿದ್ದಾರೆ. ಈ ಫೋಟೋ ನಿಜ ಎಂದು ನಂಬಿಸುವ ಕೆಲಸ ಕೆಲವರಿಂದ ಆಗಿದೆ. ಇಲ್ಲದ್ದನ್ನು ಇರುವ ರೀತಿಯಲ್ಲಿ ತೋರಿಸುತ್ತಿರುವ ಬಗ್ಗೆ ಪ್ರಕಾಶ್ ರೈಗೆ ಅಸಮಾಧಾನ ಇದೆ. ಹೀಗಾಗಿ, ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಆಗಮಿಸಿ ದೂರು ಕೊಟ್ಟಿದ್ದಾರೆ. ‘ತಮ್ಮ ಪೋಟೋವನ್ನು ಎಐ ತಂತ್ರಜ್ಞಾನ ಬಳಸಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಪ್ರಕಾಶ್ ರೈ ದೂರಿನಲ್ಲಿ ಕೋರಿದ್ದಾರೆ. ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುವುದರಲ್ಲಿ ತಪ್ಪಿಲ್ಲ. ಅದು ಅವರ ನಂಬಿಕೆ. ನನಗೆ ದೇವರ ಮೇಲೆ ನಂಬಿಕೆ ಇಲ್ಲ. ನನಗೆ ಮನ್ಯುಷ್ಯರ ಮೇಲೆ ನಂಬಿಕೆ. ದೇವರಿಲ್ಲದೆ ಬದುಕಬಹುದು ಆದರೆ, ಮನುಷ್ಯರಿಲ್ಲದೆ ಬದುಕಲು ಸಾಧ್ಯವಿಲ್ಲ. ಹಾಗಾಂತ ಅವರ ನಂಬಿಕೆಯನ್ನ ಪ್ರಶ್ನೆ…
ಬೆಂಗಳೂರು : ಬೆಂಗಳೂರಿನಲ್ಲಿ ಶಾಲಾ ಕಾಲೇಜು ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಡ್ರಗ್ ಪೆಡ್ಲರ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಯುವಕನನ್ನು ಸಂಜಯ್ (21) ಎಂದು ತಿಳಿದುಬಂದಿದೆ. ದಾಸರಹಳ್ಳಿಯ ಕೆಂಪೇಗೌಡ ಉದ್ಯಾನವನದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನ ಬಳಿ ಇದ್ದ 2ಕೆಜಿಗೂ ಅಧಿಕ ಗಾಂಜಾ ಜಪ್ತಿ ಮಡಲಾಗಿದೆ. ಆರೋಪಿ ಚಿಕ್ಕ ಕವರ್ ನಲ್ಲಿ ಪ್ಯಾಕ್ ಮಾಡಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಕೆಂಪೇಗೌಡ ಉದ್ಯಾನವನದಲ್ಲಿ ಮಾರಾಟ ಮಾಡುತ್ತಿದ್ದಾಗಲೇ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ: ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಜಿಲ್ಲೆಯ ನಾಲ್ವರ ಅಂತ್ಯಕ್ರಿಯೆ ವಿವಿಧೆಡೆ ನೆರವೇರಿತು.ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಟ ಮತ್ತು ಅವರ ಪುತ್ರಿ ಮೇಘಾ ಅವರ ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದ ವಿಧಿ ವಿಧಾನದಂತೆ ಶುಕ್ರವಾರ ನೆರವೇರಿತು.ಈ ವೇಳೆ ಅವರ ಸಾಕು ನಾಯಿ ಅಂತಿಮಯಾತ್ರೆ ಯಲ್ಲಿ ಹೆಜ್ಜೆ ಹಾಕಿದ್ದು ನೆರೆದವರ ಕರಳು ಕಿವುಚಿದಂತಾಯಿತು. ಇಬ್ಬರ ಶವಗಳನ್ನು ದೆಹಲಿಯಿಂದ ಗೋವಾಗೆ ಏರ್ಲಿಫ್ಟ್ ಮಾಡಿ, ಅಲ್ಲಿಂದ ಆಂಬುಲೆನ್ಸ್ನಲ್ಲಿ ಬೆಳಗಾವಿಗೆ ತಂದಾಗ ಗುರುವಾರ ಮಧ್ಯರಾತ್ರಿ 12.30 ಆಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಶುಕ್ರವಾರ ನಸುಕಿನ 4ಕ್ಕೆ ಶವಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಬೆಳಿಗ್ಗೆ 10.30ರ ಸುಮಾರಿಗೆ ಅಂತ್ಯಕ್ರಿಯೆ ಮುಗಿಯಿತು. ಇನ್ನು ಅದಕ್ಕೂ ಮುನ್ನ ಆಗಮಿಸಿದ್ದ ಅರುಣ ಕೋಪರ್ಡೆ ಅವರ ಅಂತ್ಯಕ್ರಿಯೆ ಗುರುವಾರ ರಾತ್ರಿ 11ಕ್ಕೆ ಇಲ್ಲಿನ ಸದಾಶಿವ ನಗರದ ಸ್ಮಶಾನದಲ್ಲಿ ನೆರವೇರಿದರೆ, ಮಹಾದೇವಿ ಬಾವನೂರ ಅವರ ಅಂತ್ಯಕ್ರಿಯೆ ಅವರ ತವರೂರಾದ ಹುಬ್ಬಳ್ಳಿ ತಾಲ್ಲೂಕಿನ ನೂಲಿ ಗ್ರಾಮದಲ್ಲಿ ನಡೆಯಿತು. ಶವದೊಂದಿಗೆ ಹೆಜ್ಜೆ ಹಾಕಿದ ನಾಯಿ ಪ್ರಯಾಗ್ರಾಜ್ನಲ್ಲಿ ಮೃತಪಟ್ಟ ಬೆಳಗಾವಿಯ…
ಬಳ್ಳಾರಿ : ಕಳೆದ ವರ್ಷ ಬಳ್ಳಾರಿ ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲಾ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಆದರೆ ಇದೀಗ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಇದೀಗ ಮತ್ತೋರ್ವ ಬಾಣಂತಿ ಸಾವನಪ್ಪಿದ್ದಾರೆ. ಹೌದು ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಮಹಾದೇವಿ (21) ಇದೀಗ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಬಾಣಂತಿಯನ್ನು ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.ಜನವರೀ 25ರಂದು ಸಿರಿಯನ್ ಮೂಲಕ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದರು.ಬಳಿಕ ಬಾಣಂತಿ ಮಹಾದೇವಿ ಆರೋಗ್ಯವಾಗಿದ್ದರು. ಐದು ದಿನದ ಬಳಿಕ ಮಾದೇವಿಗೆ ಇನ್ಫೆಕ್ಷನ್ ಆಗಿದೆ ಅಂತ ವೈದ್ಯರು ತಿಳಿಸಿದರು ನಿನ್ನೆ ರಾತ್ರಿ ತೀವ್ರ ಅಸ್ವಸ್ಥವಾಗಿ ಬಾಣಂತಿ ಮಹಾದೇವಿ ಸಾವನ್ನಪ್ಪಿದ್ದಾರೆ.ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಇದೀಗ ಮೃತ ಮಹದೇವಿ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು : ಕೋರ್ಟ್ ವಾರೆಂಟ್ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಹಿಡಿಯಲು ಪೊಲೀಸರು ಮನೆಯ ಬಳಿ ತೆರಳಿದಾಗ ಆರೋಪಿ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ. ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿಯನ್ನು ಅರೆಸ್ಟ್ ಮಾಡಿರುವ ಘಟನೆ ಬೆಂಗಳೂರಿನ ಜೆಬಿ ನಗರದ ನ್ಯೂ ತಿಪ್ಪಸಂದ್ರದಲ್ಲಿ ನಡೆದಿದೆ. ಎಚ್ ಎ ಎಲ್ ಪೋಲಿಸರಿಂದ ಇದೀಗ ರೌಡಿ ಶೀಟರ್ ಸೈಕೋ ಕಿರಣ್ ನನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಆರೋಪಿ ಸೈಕೋ ಕಿರಣ್ ಬಂಧಿಸಲು ಮನೆಯ ಬಳಿ ತೆರಳಿದ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ. ದ್ಯಾಗರ್ ಮೂಲಕ ಪೊಲೀಸ್ ಸಿಬ್ಬಂದಿ ಮೇಲೆ ಸೈಕೋ ಕಿರಣ ದಾಳಿ ನಡೆಸಿದ್ದಾನೆ. ಈ ವೇಳೆ ಇನ್ಸ್ಪೆಕ್ಟರ್ ಅಜರುದ್ದಿನ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಪೊಲೀಸರು ಸೂಚಿಸಿದ್ದಾರೆ. ನಂತರ ರೌಡಿಶೀಟರ್ ಸೈಕೋ ಕಿರಣ್ ನನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಸೈಕೋ ಕಿರಣ್ ವಿರುದ್ಧ ಪ್ರಕರಣ ದಾಖಲಾಗಿದೆ.