Subscribe to Updates
Get the latest creative news from FooBar about art, design and business.
Author: kannadanewsnow05
ತಮಿಳುನಾಡು : ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಸ್ವಯಂ ಪ್ರೇರಿತರಾಗಿ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಕೆಳಗಿಳಿದಿದ್ದರಿಂದ ಅಲ್ಲದೇ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಇದೀಗ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರ ನೋಂದಣಿಗೆ ಚುನಾವಣೆ ಘೋಷಣೆಯಾಗಿತ್ತು. ಏಪ್ರಿಲ್ 12ರಂದು ಚುನಾವಣೆ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ, ಬಿಜೆಪಿಯಿಂದ ನೈನಾರ್ ನಾಗೇಂದ್ರನ್ ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಅಣ್ಣಾಮಲೈ ನೈನಾರ್ ನಾಗೇಂದ್ರನ್ ಅವರನ್ನು ನಾಮನಿರ್ದೇಶನ ಮಾಡಲು ನೈನಾರ್ ನಾಗೇಂದ್ರನ್ ನಾಮಪತ್ರ ಸಲ್ಲಿಸಿದ್ದಾರೆ. ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ನೈನಾರ್ ನಾಗೇಂದ್ರನ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಬಿಜೆಪಿಯ ಇತರ ನಾಯಕರು ಅದನ್ನು ಅನುಮೋದಿಸಿದರು. ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಅಧಿಕೃತ ಘೋಷಣೆಯನ್ನು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಿಂದ ಮಾಡಲಾಗುವುದು…
ಬೆಂಗಳೂರು : ಫ್ಲಿಪ್ಕಾರ್ಟ್, ಅಮೆಜಾನ್ ಮತ್ತಿತರ ಇ-ಕಾಮರ್ಸ್ ಕಂಪನಿಗಳಲ್ಲಿ ಕಾರ್ಯನಿರ್ವಹಿಸುವ ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಿ ಅನೇಕ ಕಲ್ಯಾಣ ಕಾರ್ಯಕ್ರಮ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಇದೀಗ ಸಂಪುಟ ಸಭೆಯಲ್ಲಿ ಗಿಗ್ ವರ್ಕರ್ಸ್ ವಿಧೇಯಕಕ್ಕೆ ಕ್ಯಾಬಿನೆಟ್ ತೀರ್ಮಾನ ಕೈಗೊಂಡಿದೆ. ಸುಗ್ರೀವಾಜ್ಞೆ ಮೂಲಕ ಗಿಗ್ ವರ್ಕರ್ಸ್ ಜಾರಿಗೆಗೆ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಜೀವನ ನಿರ್ವಹಣೆಗೆ ಯಾವುದೇ ಭದ್ರತೆ ಇಲ್ಲದೆ ದುಡಿಯುವ ಗಿಗ್ ಕಾರ್ಮಿಕರಿಗೆ ಅನುಕೂಲ ಮಾಡಿಕೊಡುವಂತೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಲಹೆ ನೀಡಿದ್ದು, ಅವರ ಸಲಹೆ ಮೇರೆಗೆ ಮಂಡಳಿ ರಚನೆ ಮಾಡಲಾಗುತ್ತಿದೆ. ಇ -ಕಾರ್ಮಸ್, ಪ್ಲಾಟ್ ಫಾರಂ ಆಧಾರಿತ ಕಂಪನಿಗಳಿಂದ ಶೇಕಡ 5ರಷ್ಟು ಸೆಸ್ ಸಂಗ್ರಹಿಸಿ ರಾಜ್ಯ ಸರ್ಕಾರದ ಪಾಲು ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲಾಗುವುದು. ಈ ನಿಧಿಯನ್ನು ಬಳಕೆ ಮಾಡಿ ಗಿಗ್ ಕಾರ್ಮಿಕರಿಗೆ ಭದ್ರತೆ ಕಲ್ಪಿಸುವ ಜೊತೆಗೆ 8 ಅಂಶಗಳನ್ನು ಆಧರಿಸಿ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುವುದು ಎನ್ನಲಾಗಿದೆ.
ಬೆಂಗಳೂರು : ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆಯು ಬೆಳಗಾವಿ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಬೆಂಗಳೂರು ಮತ್ತು ಎಸ್ಎಂವಿಟಿ ಬೆಂಗಳೂರು-ಎರ್ನಾಕುಲಂ ನಿಲ್ದಾಣಗಳ ನಡುವೆ ಒಂದು ಟ್ರಿಪ್ ಬೇಸಿಗೆ ವಿಶೇಷ ರೈಲುಗಳ ಸಂಚಾರವನ್ನು ಏರ್ಪಡಿಸಿದೆ. ರೈಲು ಸೇವೆಗಳ ವಿವರಗಳು ಈ ಕೆಳಗಿನಂತಿವೆ. 1. ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ನಡುವೆ ಒಂದು ಟ್ರಿಪ್ ವಿಶೇಷ ರೈಲು (07373/07374) ಸಂಚಾರ: ರೈಲು ಸಂಖ್ಯೆ 07373 ಏಪ್ರಿಲ್ 12, 2025 ರಂದು ಬೆಳಗಾವಿಯಿಂದ ಬೆಳಿಗ್ಗೆ 4:00 ಗಂಟೆಗೆ ಹೊರಟು ಮಧ್ಯಾಹ್ನ 3:30ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಹಿಂತಿರುಗುವ ಮಾರ್ಗದಲ್ಲಿ, ರೈಲು ಸಂಖ್ಯೆ 07374 ಏಪ್ರಿಲ್ 15, 2025 ರಂದು ಎಸ್ಎಂವಿಟಿ ಬೆಂಗಳೂರಿನಿಂದ ಮಧ್ಯಾಹ್ನ 12:00 ಗಂಟೆಗೆ ಹೊರಟು ರಾತ್ರಿ 11:30ಕ್ಕೆ ಬೆಳಗಾವಿಯನ್ನು ತಲುಪಲಿದೆ. ಈ ರೈಲು ಲೋಂಡಾ, ಅಳ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. 2 ಎಸ್ಎಂವಿಟಿ…
ಬೆಂ ಗಳೂರು : ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಸಚಿವ ಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ರಾಜ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನ ಸಂಚಿಬ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಮಂಡನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆಯಾಗಿದೆ. ಅಲ್ಲದೆ ಗುರುವಾರ ಅಂದರೆ ಏಪ್ರಿಲ್ 17 ರಂದು ಸಂಜೆ 4 ಗಂಟೆಗೆ ವಿಶೇಷ ಸಂಪುಟ ಸಭೆ ಕರೆಯಲಾಗಿದೆ. ಸಂಪುಟ ಸಭೆಯಲ್ಲಿ ಜಾತಿ ಗಣ ಜನಗಣತಿ ವರದಿ ಕುರಿತು ಚರ್ಚಿಸುತ್ತೇವೆ. ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಂಗಳೂರು : ಬಿಜೆಪಿ ಅವಧಿಯ 40% ಕಮಿಷನ್ ಆರೋಪದ ವಿಚಾರವಾಗಿ ನಾಗಮೋಹನ್ ದಾಸ್ ವರದಿಯನ್ನು ಇದೀಗ ಸಂಪುಟ ಸಭೆ ಅಂಗೀಕರಿಸಿದೆ.ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿಯನ್ನು ಆಧರಿಸಿ ಇದೀಗ ಸಂಪುಟ ಸಭೆ ಎಸ್ಐಟಿ ರಚನೆಗೆ ನಿರ್ಧಾರ ಕೈಗೊಂಡಿದೆ. ಬಿಜೆಪಿ ಅವಧಿಯ 40% ಕಮಿಷನ್ ಆರೋಪದ ವಿಚಾರವಾಗಿ ಇದೀಗ ಎಸ್ಐಟಿ ರಚನೆ ಮಾಡಲು ನಿರ್ಧರಿಸಿದೆ. ಹೌದು ಕಳೆದ ಬಿಜೆಪಿ ಅವಧಿಯಲ್ಲಿ ರಾಜ್ಯ ಗುತ್ತಿಗೆದಾರರಿಂದ 40% ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಲು ಕ್ಯಾಬಿನೆಟ್ ನಿರ್ಧರಿಸಿದೆ. ಹೌದು ನಾಗಮೋಹನ ದಾಸ್ ವರದಿಯನ್ನು ಅಂಗೀಕರಿಸಿದ ಸಂಪುಟ ಸಭೆ, ನಾಗಮೋಹನ ದಾಸ್ ಸಮಿತಿ ವರದಿ ಆಧರಿಸಿ SIT ರಚನೆಗೆ ನಿರ್ಧಾರ ಕೈಗೊಂಡಿದೆ. ಗುತ್ತಿಗೆದಾರರ ಸಂಘದ ಆರೋಪ ಬಗ್ಗೆ ತನಿಖೆಗೆ ಎಸ್ಐಟಿ ರಚನೆಗೆ ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ವಿಶೇಷ ತನಿಖಾ ತಂಡ ರಚಿಸಲು…
ಬೆಂಗಳೂರು : ಜಾತಿ ಗಣತಿ ವರದಿ ಅನುಷ್ಟಾನ ವಿಚಾರಕ್ಕೆ ಸಂಬಂಧಿಸಿದಂತೆ ಏ.17 ರಂದು ಸಂಜೆ 4 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ.ಏ.17 ರಂದು ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಜಾತಿ ಗಣತಿ ವರದಿ ಅನುಷ್ಟಾನ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಿದೆ. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಅನುಷ್ಠಾನ ಕುರಿತು ದೀರ್ಘ ಚರ್ಚೆ ಆಯಿತು. ಆದರೆ ಏಪ್ರಿಲ್ 17ರಂದು ರಾಜ್ಯ ಸರ್ಕಾರ ವಿಶೇಷ ಸಂಪುಟ ಸಭೆ ನಿಗದಿ ಮಾಡಿದ್ದು, ಏಪ್ರಿಲ್ 17ರಂದು ಸಂಜೆ 4 ಗಂಟೆಗೆ ವಿಶೇಷ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಜಾರಿ ಆಗುವ ಕುರಿತು ಮಹತ್ವದ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಸಂಪುಟ ಸಭೆಯಲ್ಲಿ ಸಚಿವರು ಯಾವುದೇ ಅಭಿಪ್ರಾಯವನ್ನು ಮಂಡಿಸಿಲ್ಲ.ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಸಚಿವರು ಪರ ಮತ್ತು…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ಆಗಿದ್ದು ಹಣಕ್ಕಾಗಿ ಹೆತ್ತ ತಾಯಿಯನ್ನೇ ಪಾಪಿ ಮಗನೊಬ್ಬ ರಾಡ್ ನಿಂದ ತಲೆಗೆ ಹೊಡೆದು ಭೀಕರವಾಗಿ ಕೊಲೆ ಮಾಡಿ, ಬಳಿಕ ಪರಾರಿ ಆಗಿರುವ ಘಟನೆ ಬೆಂಗಳೂರಿನ ಬಾಗಲಕುಂಟೆ ಮುನೇಶ್ವರ ನಗರದಲ್ಲಿ ಈ ಒಂದು ಹತ್ಯೆ ನಡೆದಿದೆ. ಕಬ್ಬಿಣದ ರಾಡ್ ನಿಂದ ಹೊಡೆದು ಪಾಪಿ ಮಗ ಹೆತ್ತ ತಾಯಿಯನ್ನೆ ಕೊಂದಿದ್ದಾನೆ. ಬಾಗಲಕುಂಟೆಯ ಮುನೇಶ್ವರ ನಗರದಲ್ಲಿ ತಡರಾತ್ರಿ ಒಂದು ಘಟನೆ ನಡೆದಿದೆ. ಶಾಂತಾಬಾಯಿ ಎನ್ನುವ ತಾಯಿಯನ್ನು ಮಹೇಂದ್ರ ಸಿಂಗ್ ಎನ್ನುವ ಮಗ ಕೊಲೆ ಮಾಡಿ ಇದೀಗ ತಲೆಮರಿಸಿಕೊಂಡಿದ್ದಾನೆ. ಹಣಗೋಸ್ಕರ ಶಾಂತಾಬಾಯಿ ಅವರಿಗೆ ಆರೋಪಿ ಮಹೇಂದ್ರ ಸಿಂಗ್ ದಿನಾಲು ಪೀಡಿಸುತ್ತಿದ್ದ ಎಂದು ತಿಳಿದುಬಂದಿದೆ.ನಿನ್ನೆ ರಾತ್ರಿ ಕೂಡ ಹಣಕ್ಕಾಗಿ ಕಿರುಕುಳ ನೀಡಿದ್ದು ಈ ವೇಳೆಯಿಂದ ತಲೆಗೆ ಬಲವಾಗಿ ಹೊಡೆದು ತಾಯನ್ನು ಕೊಂದು ಇದೀಗ ಆರೋಪಿ ಪರಾರಿಯಾಗಿದ್ದಾನೆ.
BIG NEWS : ಗುತ್ತಿಗೆದಾರರಿಂದ ಕಮಿಷನ್ ಪಡೆದಿದ್ದು ಸಾಬೀತು ಮಾಡಿದರೆ, ರಾಜೀನಾಮೆ ನೀಡ್ತೇನೆ : ಸಚಿವ ಎನ್.ಎಸ್ ಬೋಸರಾಜು
ಬೆಂಗಳೂರು : ಸಣ್ಣ ನೀರಾವರಿ ಸಚಿವ ಎನ್ಎಸ್ ಬೋಸರಾಜು ಅವರ ವಿರುದ್ಧ ಗುತ್ತಿಗೆದಾರರಿಂದ ಕಮಿಷನ್ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ವಿಚಾರವಾಗಿ ಬೆಂಗಳೂರಿನಲ್ಲಿ ಸಚಿವ ಎನ್ಎಸ್ ಬೊಸ ರಾಜು ಅವರು ಪ್ರತಿಕ್ರಿಯೆ ನೀಡಿ, ಗುತ್ತಿಗೆದಾರರಿಂದ ಕಮಿಷನ್ ಪಡೆದಿದ್ದನ್ನು ಸಾಬೀತು ಮಾಡಿದರೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದರು. ರಾಜ್ಯ ಗುತ್ತಿಗೆದಾರರ ಸಂಘದಿಂದ ಕಮಿಷನ್ ಆರೋಪ ವಿಚಾರವಾಗಿ ಕಮಿಷನ್ ಪಡೆದಿದ್ದನ್ನು ಸಾಬೀತು ಮಾಡಿದರೆ ರಾಜೀನಾಮೆ ನೀಡುತ್ತೇನೆ ಎಂದು ಬೆಂಗಳೂರಿನಲ್ಲಿ ಸಣ್ಣ ನೀರಾವರಿ ಸಚಿವ ಎನ್ಎಸ್ ಬೋಸರಾಜು ಹೇಳಿಕೆ ನೀಡಿದರು ಮೊದಲು ನಮ್ಮ ಸ್ಪಷ್ಟನೆ ಕೇಳಲಿ ಆಮೇಲೆ ಆರೋಪ ಮಾಡಲಿ ಎಂದು ಅವರು ತಿಳಿಸಿದರು. ನನ್ನ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲ ಇಲಾಖೆಯಲ್ಲಿ ಅಧಿಕಾರಿಗಳ ತಪ್ಪು ಕಂಡು ಬಂದಾಗ ನಾನು ಸರಿಪಡಿಸಿದ್ದೇನೆ ಗುತ್ತಿಗೆದಾರರ ಬಗ್ಗೆ ನಾನು ಆರೋಪ ಮಾಡುವುದಿಲ್ಲ. ಆದರೆ ಗುತ್ತಿಗೆದಾರರು ಕೂಡ ಸುಮ್ಮನೆ ಆರೋಪ ಮಾಡಬಾರದು ಎಂದು ಎನ್ ಎಸ್ ಹೊಸರಾಜು ತಿಳಿಸಿದರು.
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಘೋರವಾದ ಘಟನೆ ಸಂಭವಿಸಿದ್ದು ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆರೋಗ್ಯ ಒಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (KMCRI) ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ರೋಗಿಯನ್ನು ನೇಕಾರ ನಗರದ ಆದರ್ಶ ಗೋಂದಕರ್ (18) ಎಂದು ತಿಳಿದುಬಂದಿದೆ. ಆದರ್ಶ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ರಕ್ತದ ಪ್ಲೇಬ್ಲೆಟ್ ಸಂಖ್ಯೆ ಸಹ ಕಡಿಮೆಯಾಗಿತ್ತು. ಅವರು ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಕೆಎಂಸಿಆರ್ಐ ನಿರ್ದೇಶಕ ಡಾ.ಎಸ್.ಎಫ್.ಕಮ್ಮಾರ ತಿಳಿಸಿದರು. ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಬೆಳಿಗ್ಗೆ 4.30ಕ್ಕೆ ವಾರ್ಡ್ನಲ್ಲಿನ ಸಿಬ್ಬಂದಿಯ ಕಣ್ಣಪ್ಪಿಸಿ ಅವರು ಆಸ್ಪತ್ರೆಯ ಮುಖ್ಯ ಕಟ್ಟಡದ 303ನೇ ವಾರ್ಡ್ನ ಕಿಟಕಿಯಿಂದ ಜಿಗಿದಿದ್ದಾರೆ. ಅವರ ತಲೆ ಮತ್ತು ಯಕೃತ್ತಿಗೆ ಹಾನಿಯಾಗಿತ್ತು. ಕೂಡಲೇ ಚಿಕಿತ್ಸೆ ನೀಡಿದರೂ ಸ್ಪಂದಿಸಲಿಲ್ಲ ಎಂದರು.ಮರಣೋತ್ತರ ಪರೀಕ್ಷೆ ನಂತರ ವರದಿ ನೀಡುವಂತೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೆ ಸೂಚಿಸಲಾಗಿದೆ.
ಚಿಕ್ಕಮಗಳೂರು : ಐಪಿಎಲ್ ಅನ್ನು ಕ್ರಿಕೆಟ್ ಪ್ರೀಯರಿಗೆ ಹಬ್ಬದ ಊಟ ಅಂತಲೇ ಕರೆಯಲಾಗುತ್ತೆ. ಇದೀಗ ಐಪಿಎಲ್ ಬೆಟ್ಟಿಂಗ್ ತಂದೆ ನಡೆಸುತ್ತಿದ್ದವನನ್ನು ಪೊಲೀಸರು ಅರೆಸ್ಟ್ ಮಾಡಿದ್ದು ಆತನ ಬಳಿದ್ದ ನಗದು ಹಣ ಹಾಗೂ ಮೊಬೈಲ್ ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆ ಪೊಲೀಸರು ಬೆಟ್ಟಿಂಗ್ ನಡೆಸುತ್ತಿದ್ದ ಹರೀಶ್ ಎನ್ನುವವನ್ನು ನನ್ನ ಬಂಧಿಸಿದ್ದಾರೆ. ಕೊಟ್ಟಿಗೆಹಾರ ಪಟ್ಟಣದ ಬಾರ್ ಮುಂದೆ ನಡೆಸುತ್ತಿದ್ದ 12 ಜನರ ತಂಡ ಮಾಡಿಕೊಂಡು ಹರೀಶ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ. ಬುಕ್ಕಿ ಹರೀಶ್ ಅನ್ನು ಬಂಧಿಸಿ 8500 ನಗದು ಹಾಗೂ ಹಲವು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.