Author: kannadanewsnow05

ಚಿಕ್ಕಬಳ್ಳಾಪುರ : ಇತ್ತೀಚೆಗೆ ಬಾಗಲಕೋಟೆ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿತ್ತು. ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೆಬ್ಬರಿ ಗ್ರಾಮದ ಬಳಿಯಿರುವ ಫಾರ್ಮ್‌ ಒಂದರಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದ್ದು, ಈಗಾಗಲೇ 100 ಹಂದಿಗಳು ಸಾವನ್ನಪ್ಪಿದ್ದು, 57 ಹಂದಿಗಳನ್ನು ಕೊಲ್ಲಲು ನಿರ್ಧಾರ ಮಾಡಲಾಗಿದೆ. ಈ ವಿಚಾರವಾಗಿ ಪಶುಪಾಲನಾ, ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ರಂಗಪ್ಪ, ಮಾತನಾಡಿ, ಹಂದಿಜ್ವರ ಶಂಕೆ ಹಿನ್ನಲೆ ಸ್ಯಾಂಪಲ್​​ ಅನ್ನು ಭೋಪಾಲ್‌ನ ರಾಷ್ಟ್ರೀಯ ಲ್ಯಾಬ್‌ಗೆ ಸ್ಯಾಂಪಲ್ ಕಳಿಸಲಾಗಿತ್ತು. ಇಂದು ಬಂದಿರುವ ವರದಿಯಲ್ಲಿ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ. ಸದ್ಯ ಫಾರ್ಮ್‌ನಿಂದ ಹಂದಿಗಳ ಸಾಗಾಟ, ಮಾರಾಟ ನಿಷೇಧ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಹಂದಿಗಳನ್ನು ಹೊಸಕೋಟೆ ಮೂಲಕ ನಾಗಲ್ಯಾಂಡ್‌ಗೆ ರವಾನಿಸುತ್ತಿದ್ದರು. ಹಂದಿಗಳಿಗೆ ಆಫ್ರಿಕನ್ ಜ್ವರ ಹರಡದಂತೆ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಸೋಂಕಿತ ಹಂದಿಗಳಿಂದ ಮನುಷ್ಯರಿಗೆ ರೋಗ ಹರಡುವುದಿಲ್ಲ. ಹಾಗಾಗಿ ಆಫ್ರಿಕನ್ ಹಂದಿ ಜ್ವರದಿಂದ ಜನರಿಗೆ ಯಾವುದೇ ಆತಂಕಬೇಡ ಎಂದು ಅವರು ಹೇಳಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಒಂದುವರೆ ತಿಂಗಳ ಗರ್ಭಿಣಿ ಟೆಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಬ್ಬಳ್ಳಿ ಮೂಲದ ಶಿಲ್ಪ ಎನ್ನುವವರು ಆತ್ಮಹತ್ಯೆ ಶರಣಾಗಿದ್ದಾರೆ. ಮೂರು ವರ್ಷಗಳ ಹಿಂದೆ ಶಿಲ್ಪ ಪ್ರವೀಣ್ ಜೊತೆಗೆ ಮದುವೆಯಾಗಿದ್ದರು. ಆದರೆ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಶಿಲ್ಪ ಪೋಷಕರು ಗಂಭೀರವಾದ ಆರೋಪ ಮಾಡಿದ್ದಾರೆ. ಪತಿ ಪ್ರವೀಣ್, ಪತ್ತೆ ಶಾಂತ ನಾದಿನಿ ಪ್ರಿಯ ವಿರುದ್ಧ ಶಿಲ್ಪ ಪೋಷಕರು ಆರೋಪಿಸಿದ್ದಾರೆ. ಕಳೆದ ಹಲವು ತಿಂಗಳ ಹಿಂದೆ ಗಲಾಟೆ ಮಾಡಿ ಶಿಲ್ಪ ತವರು ಮನೆಗೆ ಬಂದಿದ್ದರು. ಪತಿ ಮನೆಯವರು ರಾಜಿ ಪಂಚಾಯ್ತಿ ಮಾಡಿ ಮತ್ತೆ ಗಂಡನ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ ಘಟನೆ ಕುರಿತು ಎಸ್.ಜಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಈ ಬಾರಿ ದಸರಾವನ್ನು ಬಾನು ಮುಷ್ತಾಕ್ ಉದ್ಘಾಟಿಸಲಿದ್ದು, ಈ ವಿಚಾರವಾಗಿ ವಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದವು. ಕಳೆದೆರಡು ದಿನಗಳ ಹಿಂದೆ ಇದೇ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಚಾಮುಂಡೇಶ್ವರಿ ದೇವಸ್ಥಾನ ಹಿಂದೂಗಳ ಆಸ್ತಿಯಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಮೈಸೂರು ಅರಮನೆಯ ರಾಜಮಾತೆ ಪ್ರಮೋದ ದೇವಿ ಒಡೆಯರ್ ಅವರು ಹಿಂದುಗಳ ಸ್ವತ್ತು ಅಲ್ಲ ಎನದಿದ್ದರೆ ಚಾಮುಂಡೇಶ್ವರಿ ದೇವಸ್ಥಾನ ಮುಜರಾಯಿ ಇಲಾಖೆಗೆ ಹೇಗೆ ಒಳಪಡುತ್ತದೆ ಎಂದು ಬೇಸರ ಹೊರಹಾಕಿದ್ದಾರೆ. ಇದೀಗ ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸದನದಲ್ಲಿ ಸೇರಿದಂತೆ ಎಲ್ಲಿ ಏನೇ ಮಾತನಾಡಿದರೂ ಅದರಲ್ಲಿ ಕೇವಲ ತಪ್ಪು ಕಂಡು ಹಿಡಿಯುವುದೇ ಬೇರೆಯವರ ಕೆಲಸವಾಗಿದೆ. ರಾಜಕೀಯದವರು, ಪ್ರಮೋದಾ ದೇವಿ ಅವರು, ಸಂಸದ ಯದುವೀರ್ ಅವರು, ವಿಧಾನಸಭೆಯಲ್ಲಿ ಹೀಗೆ ಎಲ್ಲರೂ ತಪ್ಪು ಹುಡುಕುವವರೇ. ಹೀಗಾಗಿ ನಾನು…

Read More

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ಚಿನ್ನಯ್ಯ ಬಂಧನ ವಿಚಾರವಾಗಿ ಇದೀಗ ಚಿನ್ನಯ್ಯ ಪ್ರಕರಣದ ಯಾವುದೇ ಮಾಹಿತಿ ನೀಡದಂತೆ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ.ವಿಚಾರಣ ನ್ಯಾಯಾಲಯಕ್ಕೆ ವಿಶೇಷ ತನಿಖಾ ತಂಡದಿಂದ ಅರ್ಜಿ ಸಲ್ಲಿಸಲಾಗಿದೆ. FIR, ಪ್ರಕರಣ ಸೇರ್ಪಡೆ ಇತರೆ ಮಾಹಿತಿ ಗೌಪ್ಯವಾಗಿಸಲು SIT ಮನವಿ ಮಾಡಿದೆ. 39/2025 ಪ್ರಕರಣ ಗೌಪ್ಯವಾಗಿರಿಸಲು SIT ಅರ್ಜಿ ಸಲ್ಲಿಸಿದೆ. ಇನ್ನೊಂದು ಕಡೆ ಅನನ್ಯ ಭಟ್ ಧರ್ಮಸ್ಥಳಕ್ಕೆ ತೆರಳಿದ್ದಾಗ ನಾಪತ್ತೆ ದೂರು ವಿಚಾರವಾಗಿ ಇದೀಗ ದೂರುದಾರೆ ಸುಜಾತಾ ಭಟ್ ಅವರನ್ನು SIT ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ. ಕಳೆದ ಮೂರು ದಿನಗಳಿಂದ ಸುಜಾತಾ ಭಟ್ ವಿಚಾರಣೆ ಎದುರಿಸುತ್ತಿದ್ದಾರೆ. ಅನನ್ಯ ಭಟ್ ನನ್ನ ಮಗಳೆಂದು ಬಿಂಬಿಸಿದ್ದ ಸುಜಾತಾ ಭಟ್ ಸುಳ್ಳು ದೂರು ನೀಡಿ ಪೊಲೀಸರ ದಿಕ್ಕು ತಪ್ಪಿಸಿದ ಹಿನ್ನೆಲೆಯಲ್ಲಿ, ಸುಳ್ಳು ದೂರು ಸುಳ್ಳು ಸಾಕ್ಷಿ ಸೃಷ್ಟಿಸಿದ ಆರೋಪದ ಮೇಲೆ SIT ಪೋಲಿಸರು ಸುಜಾತಾ ಭಟ್ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Read More

ದಕ್ಷಿಣಕನ್ನಡ : ಅನನ್ಯ ಭಟ್ ಧರ್ಮಸ್ಥಳಕ್ಕೆ ತೆರಳಿದ್ದಾಗ ನಾಪತ್ತೆ ದೂರು ವಿಚಾರವಾಗಿ ಇದೀಗ ದೂರುದಾರೆ ಸುಜಾತಾ ಭಟ್ ಅವರನ್ನು SIT ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ. ಕಳೆದ ಮೂರು ದಿನಗಳಿಂದ ಸುಜಾತಾ ಭಟ್ ವಿಚಾರಣೆ ಎದುರಿಸುತ್ತಿದ್ದಾರೆ. ಅನನ್ಯ ಭಟ್ ನನ್ನ ಮಗಳೆಂದು ಬಿಂಬಿಸಿದ್ದ ಸುಜಾತಾ ಭಟ್ ಸುಳ್ಳು ದೂರು ನೀಡಿ ಪೊಲೀಸರ ದಿಕ್ಕು ತಪ್ಪಿಸಿದ ಹಿನ್ನೆಲೆಯಲ್ಲಿ, ಸುಳ್ಳು ದೂರು ಸುಳ್ಳು ಸಾಕ್ಷಿ ಸೃಷ್ಟಿಸಿದ ಆರೋಪದ ಮೇಲೆ SIT ಪೋಲಿಸರು ಸುಜಾತಾ ಭಟ್ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು : ಕನ್ನಡದ ಖ್ಯಾತ ನಿರೂಪಕಿ ಆಂಕರ್ ಅನುಶ್ರೀ ಅವರು ಕೊನೆಗೂ ಹಸೆಮಣೆ ಏರಿದ್ದಾರೆ. ಕೊಡಗು ಮೂಲದ ರೋಷನ್ ಅವರೊಂದಿಗೆ ಬೆಂಗಳೂರಿನ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಅನುಶ್ರೀ ರೋಷನ್ ಮದುವೆ ಇಂದು ನೆರವೇರಿತು. ಇದಕ್ಕೂ ಮುನ್ನ ನಿನ್ನೆ ಅನುಶ್ರೀ ರೋಷನ್ ಅರಿಶಿಣ ಶಾಸ್ತ್ರ ನೆರವೇರಿತ್ತು. ಇಂದು ಬೆಂಗಳೂರಿನ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಅನುಶ್ರೀ ಹಾಗೂ ರೋಷನ್ ಮದುವೆ ಬಹಳ ಅದ್ದೂರಿಯಾಗಿ ನೆರವೇರಿತು ಈ ವೇಳೆ ಅನುಶ್ರೀ ಹಣೆಗೆ ಖುಷಿಯಿಂದ ಅವರು ಮುತ್ತಿಟ್ಟಿದ್ದಾರೆ ಈ ಒಂದು ಮದುವೆ ಸಮಾರಂಭದಲ್ಲಿ ಹಲವು ಸೆಲೆಬ್ರಿಟಿಗಳು ಗಣ್ಯರು ಭಾಗವಹಿಸಿದ್ದರು.

Read More

ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಒಂದು ನಡೆದಿದ್ದು ಗಣೇಶ ವಿಸರ್ಜನೆಯ ವೇಳೆ ನೀರಿನಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೇಲೂರು ಕೆರೆಯಲ್ಲಿ ಯುವಕರು ಗಣೇಶ ವಿಸರ್ಜನೆ ಮಾಡುತ್ತಿದ್ದರು ಈ ವೇಳೆ ನೀರಿನಲ್ಲಿ ಮುಳುಗಿ ಯರವಳ್ಳಿಯ ಪ್ರದೀಪ್ (28) ಸಾವನ್ನಪ್ಪಿದ್ದಾನೆ.ತಕ್ಷಣ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿಗಳು ಪ್ರದೀಪ್ ಮೃತದೇಹವನ್ನು ಹೊರಗಡೆ ತೆಗೆದಿದ್ದಾರೆ. ಘಟನೆ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಇಂದಿನ ಕಾಲದಲ್ಲಿ, ಹಣ ಎಷ್ಟು ಮುಖ್ಯವೋ, ಶಿಕ್ಷಣವೂ ಅಷ್ಟೇ ಮುಖ್ಯ. ಅನೇಕ ಜನರು ಶಿಕ್ಷಣದ ಆಧಾರದ ಮೇಲೆ ತಮ್ಮ ಜೀವನವನ್ನು ನಡೆಸುತ್ತಾರೆ. ಇಂದಿನ ಕಾಲದಲ್ಲಿ ಮಾತ್ರವಲ್ಲದೆ ನಮ್ಮ ಪೂರ್ವಜರ ಕಾಲದಲ್ಲೂ ಶಿಕ್ಷಣವನ್ನು ಪಡೆಯುವುದು ಬಹಳ ಮುಖ್ಯವಾದ ಅಗತ್ಯವಾಗಿತ್ತು. ಆದರೆ, ಇಂದಿನ ಕಾಲದಲ್ಲಿ, ನಾವು ಬಯಸಿದ ಕೆಲಸಕ್ಕೆ ಸೇರಲು ಮತ್ತು ನಮ್ಮ ಅಪೇಕ್ಷಿತ ವೃತ್ತಿಯನ್ನು ಮಾಡಲು ಸಾಕಷ್ಟು ಶಿಕ್ಷಣವಿದ್ದರೆ ಮಾತ್ರ, ನಾವು ಅದನ್ನು ಉತ್ತಮ ರೀತಿಯಲ್ಲಿ ಮಾಡಬಹುದು ಮತ್ತು ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು. ಅಂತಹ ಶಿಕ್ಷಣವನ್ನು ಪಡೆಯುವಲ್ಲಿ ಏನೇ ಅಡೆತಡೆಗಳು ಉದ್ಭವಿಸಬಹುದು, ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ನಾವು ಆ ಅಡೆತಡೆಗಳನ್ನು ತೆಗೆದುಹಾಕಲು ಮನೆಯಲ್ಲಿ ಬೆಳಗಿಸಬೇಕಾದ ಪಂಚಕಾವ್ಯ ದೀಪವನ್ನು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ…

Read More

ತುಮಕೂರು : ತುಮಕೂರಿನ ಅಶ್ವಿನಿ ಆತ್ಮಹತ್ಯೆ ಕೇಸಿಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಅಶ್ವಿನಿ ಮೊಬೈಲ್ ನಲ್ಲಿ ಆತ್ಮಹತ್ಯೆ ರಹಸ್ಯ ಬಯಲಾಗಿದ್ದು, ಪುತ್ರಿ ಅಶ್ವಿನಿ ಲವ್ ಸ್ಟೋರಿ ಮತ್ತು ಕಿರುಕುಳ ಬೆಳಕಿಗೆ ಬಂದಿದೆ. ಹೊಟ್ಟೆ ನೋವಿನಿಂದ ಆತ್ಮಹತ್ಯೆ ಎಂದು ಪೋಷಕರು ಭಾವಿಸಿದ್ದರು. ಆದರೆ ಆತ್ಮಹತ್ಯೆಗು ಮುನ್ನ ಕುಣಿಕೆಯ ಜೊತೆ ಅಶ್ವಿನಿ ಸೆಲ್ಫಿ ತೆಗೆದುಕೊಂಡಿದ್ದಳು. ಇದಿಗ ಅಶ್ವಿನಿ ಮೊಬೈಲ್ ನಲ್ಲಿ ಮೆಸೇಜ್ ಮತ್ತು ಸಂಭಾಷಣೆ ಕುರಿತು ಪತ್ತೆಯಾಗಿದೆ. ವಾಟ್ಸಾಪ್ನಲ್ಲಿ ಮೆಸೇಜ್ ಮಾಡಿರುವುದು ಪತ್ತೆಯಾಗಿದೆ. ಅಶ್ವಿನಿ ತಮ್ಮದೇ ಊರಿನ ಯುವಕನನ್ನು ಪ್ರೀತಿಸುತ್ತಿದ್ದಳು ಆತ್ಮಹತ್ಯೆಗೆ ಮುನ್ನ ಅಶ್ವಿನಿ ಸೆಲ್ಫಿ ತೆಗೆದುಕೊಂಡಿದ್ದಳು. ಅಂತ್ಯಕ್ರಿಯೆ ಮುಗಿಸಿ ಬಂದಾಗ ಮೊಬೈಲ್ ನಲ್ಲಿ ಆತ್ಮಹತ್ಯೆ ರಹಸ್ಯ ಪತ್ತೆಯಾಗಿದೆ. ಪೋಷಕರಿಗೆ ಸಿಕ್ಕಿದ್ದ ಮೊಬೈಲ್ ನಲ್ಲಿ ತನ್ನ ಪ್ರಿಯಕರನಿಗೆ ಮಾಡಿದ ಮೆಸೇಜ್ ಪತ್ತೆಯಾಗಿದೆ ಸಿದ್ದನಕಟ್ಟೆ ಗ್ರಾಮದ ಅಶ್ವಿನಿ ಅದೇ ಗ್ರಾಮದ ಯುವಕನೊಂದಿಗೆ ಪ್ರೀತಿಸುತ್ತಿದ್ದಳು. ಆದರೆ ಯುವಕನಿಗೆ ಮತ್ತೋರ್ವ ಯುವತಿಯ ಜೊತೆಗೆ ಸಂಬಂಧ ಶಂಕೆ ವ್ಯಕ್ತವಾಗಿದೆ. ಈ ವಿಚಾರವಾಗಿ ಅಶ್ವಿನಿ ಮತ್ತು ಪ್ರಿಯಕರ ನಡುವೆ ಗಲಾಟೆ…

Read More

ಮಂಡ್ಯ : ಮಂಡ್ಯದಲ್ಲಿ ಯುವಕನ ಭೀಕರ ಕೊಲೆಯಾಗಿದ್ದು, ರಾಮಂದೂರಿನಲ್ಲಿ ಅಪ್ರಾಪ್ತೆಯನ್ನು ಪ್ರೀತಿಸಿದ್ದಕ್ಕೆ ಯುವಕನ ಬರ್ಬರವಾಗಿ ಕೊಲೆಗೈಯ್ಯಲಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ರಾಮಂದೂರು ಗ್ರಾಮದಲ್ಲಿ ಯುವಕನು ಕೊಂದು ಅಪಘಾತ ಎಂದು ಬಿಂಬಿಸಿದ್ದಾಗಿ ಪೋಷಕರು ಆರೋಪಿಸಿದ್ದಾರೆ ರಾಮಂದೂರು ಕೆರೆಯ ಬಳಿ ಕಲ್ಕುಣಿ ನಿವಾಸಿ ಮಂಜು (21) ಶವ ಸಿಕ್ಕಿತ್ತು. ರಾಮಂದೂರಿನ ಕೆರೆಯಲ್ಲಿ ಮೀನು ಹಿಡಿಯಲು ಮಂಜು ಬಂದಿದ್ದ. ಈ ವೇಳೆ ಕೆರೆಯ ಪಕ್ಕದ ಹಳ್ಳದಲ್ಲಿ ಮಂಜು ಶವ ಪತ್ತೆಯಾಗಿತ್ತು. ಆಟೋ ಪಲ್ಟಿಯಾಗಿ ಮೃತಪಟ್ಟಂತೆ ಮಂಜು ಮೃತ ದೇಹ ಮತ್ತೆಯಾಗಿದೆ ಮಂಜುನನ್ನು ಕೊಂದು ಆಟೋದಲ್ಲಿ ಶವ ಬಿಟ್ಟು ಹಳ್ಳಕ್ಕೆ ದೂಡಿರುವ ಶಂಕೆ ವ್ಯಕ್ತವಾಗಿದೆ ಮಂಜು ಸಾವಿನ ಬಗ್ಗೆ ಮಂಡ್ಯ ಜಿಲ್ಲಾ ಪೊಲೀಸರಲ್ಲೂ ಕೂಡ ಅನುಮಾನ ವ್ಯಕ್ತವಾಗಿದೆ ಮಂಜುವನ್ನು ಕೊಲೆಗೈದಿದ್ದಾರೆ ಎಂದು ಪೋಷಕರು ಆರೋಪಿಸಿದ್ದು ಮಂಜು ಪ್ರೀತಿಸುತ್ತಿದ್ದ ಅಪ್ರಾಪ್ತೇ ಸಂಬಂಧಿಕರಿಂದ ಕೊಲೆ ಆರೋಪ ಕೇಳಿ ಬಂದಿದೆ. ಎರಡು ವರ್ಷದಿಂದ ಮಂಜು ಸಂಬಂಧಿಕರ ಪುತ್ರಿ ಯನ್ನು ಪ್ರೀತಿಸುತ್ತಿದ್ದ. ಆಕೆಯು ಮಂಜುನಾಥ್ ಮದುವೆಯಾಗುವುದಾಗಿ ಹೇಳುತ್ತಿದ್ದಳು 18 ವರ್ಷ ತುಂಬಿದ…

Read More