Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆಯಾಗಿದ್ದು ಸೋದರ ಮಾವನ ಜೊತೆ ಸೇರಿ ಗಂಡನನ್ನೇ ಪತ್ನಿ ಕೊಲೆ ಮಾಡಿದ್ದಾಳೆ. ಬೆಂಗಳೂರಿನ ಅಂದ್ರಹಳ್ಳಿಯ ಮಂಜುನಾಥ ಬಡಾವಣೆಯಲ್ಲಿ ಈ ಒಂದು ಕೊಲೆ ನಡೆದಿದೆ. ವೆಂಕಟೇಶ್ (65) ಕೊಲೆಯಾದ ಪತಿ ಎಂದು ತಿಳಿದು ಬಂದಿದೆ. ಸೋದರಮಾವ ರಂಗಸ್ವಾಮಿ ಹಾಗೂ ಮಗಳು ಪಾರ್ವತಿ ಈ ಒಂದು ಕೊಲೆ ಮಾಡಿದ್ದಾರೆ. 10 ವರ್ಷಗಳ ಹಿಂದೆ ವೆಂಕಟೇಶ್ ಮೊದಲ ಹೆಂಡತಿಯನ್ನು ಬಿಟ್ಟಿದ್ದ 6 ವರ್ಷಗಳ ಹಿಂದೆ ವೆಂಕಟೇಶ್ ಪಾರ್ವತಿಯನ್ನು ಮದುವೆಯಾಗಿದ್ದ. ಮನೆಯನ್ನ ತನ್ನ ಹೆಸರಿಗೆ ಬರೆಯುವಂತೆ ಪಾರ್ವತಿ ಗಲಾಟೆ ಮಾಡಿದ್ದಾಳೆ. ಮನೆ ಇಲ್ಲ ಅಂದರೆ ಆರು ಲಕ್ಷ ಹಣ ಕೊಡುವಂತೆ ಪಾರ್ವತಿ ಪಟ್ಟು ಹಿಡಿದಿದ್ದಾಳೆ. ಆಗ ವೆಂಕಟೇಶ್ 2:30 ಲಕ್ಷ ಕೊಡುತ್ತೇನೆ ಅಂತ ಹೇಳಿದ್ದಾನೆ. ಇದೇ ವಿಚಾರವಾಗಿ ಗಲಾಟೆ ಆಗಿ ಪತಿಯನ್ನು ಕೊಲೆ ಮಾಡಿದ್ದಾಳೆ.
ವಿಜಯಪುರ : ವಿಜಯಪುರದಲ್ಲಿ ಭೀಕರವಾದ ಕೊಲೆಯಾಗಿದ್ದು ಲಿವಿಂಗ್ ರಿಲೇಶನ್ ಶಿಪ್ ನಲ್ಲಿ ಇದ್ದಂತಹ ಮಹಿಳೆಯೊಬ್ಬಳು ತನ್ನ ಸಹೋದರನೊಂದಿಗೆ ಸೇರಿ ಪ್ರಿಯಕರನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರದ ಅಮ್ಮನ್ ಕಾಲೋನಿಯಲ್ಲಿ ಈ ಒಂದು ಕೊಲೆ ನಡೆದಿದೆ. ಸಮೀರ್ ಅಲಿಯಾಸ್ ಪಿಕೆ ಇನಾಮ್ದಾರ್ ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ತಯ್ಯಬಾ ಭಾಗವಾನ್ ಅನ್ನೋ ಮಹಿಳೆಯಿಂದ ಈ ಒಂದು ಕೊಲೆ ನಡೆದಿದ್ದು, ತಯ್ಯಾಬಾ ಸಹೋದರ ಅಸ್ಲಾಂ ಭಾಗವಾನ್ ಕೂಡ ಕೊಲೆಗೆ ಸಹಕರಿಸಿದ್ದಾನೆ. ಸಮೀರ್ ಕಿರುಕುಳಕ್ಕೆ ಬೇಸತ್ತು ಕೊಲೆ ಮಾಡಿರುವ ಮಾಹಿತಿ ತಿಳಿದು ಬಂದಿದ್ದು ಸ್ಥಳಕ್ಕೆ ಗೋಲಗುಂಬಜ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಮೀರ್ ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗಳೂರು : ರಾಜು ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸಿದ್ದು ದೆಹಲಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಂಪುಟ ಪುನಾರಚನೆ ಕುರಿತು ಚರ್ಚಿಸಿದ್ದಾರೆ. ರಾಹುಲ್ ಗಾಂಧಿ ಸಂಪುಟ ಪುನಾರಚನೆಗೆ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಬಳಿಕ ಇಂದು ಸಹ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಅಲ್ಲದೆ ಡಿಕೆ ಶಿವಕುಮಾರ್ ಸಹ ದೆಹಲಿಗೆ ಭೇಟಿ ನೀಡಿದ್ದು ಕುತೂಹಲ ಮೂಡಿಸಿದೆ. ಇದರ ಮಧ್ಯ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಟ್ವೀಟ್ ಖಾತೆಯಲ್ಲಿ ಸಂದೇಶವನ್ನು ನೀಡಿದ್ದು, ನಾನು ಪಕ್ಷದ ಶಿಸ್ತಿನ ಸಿಪಾಯಿ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ. ಕಾಂಗ್ರೆಸ್ ಪಕ್ಷ ಎಲ್ಲಿಯವರೆಗೂ ನನ್ನನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕೆಲಸ ಮಾಡಲು ಹೇಳುತ್ತಾರೋ ಅಲ್ಲಿಯವರೆಗೆ ನಾನು ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿಕೊಂಡು ಹೋಗುತ್ತೇನೆ. ಮುಂದೆಯೂ ಪಕ್ಷ ಅಧಿಕಾರಕ್ಕೆ ಬರುವಂತೆ ದುಡಿಯುವವನು ಎಂದು ತಿಳಿಸಿದ್ದಾರೆ. https://twitter.com/DKShivakumar/status/1990337691029045421?t=REtX7NeQOfOApIXzD9qOtA&s=19
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಎನ್ನುವಂತೆ ಹೈಕೋರ್ಟ್, ಅವರ ವಿರುದ್ಧ ವಿಧಿಸಲಾಗಿದ್ದಂತ ಗಡಿಪಾರು ಆದೇಶವನ್ನು ರದ್ದುಗೊಳಿಸಿ ಆದೇಶಿಸಿದೆ. ಧರ್ಮಸ್ಥಳ ಗ್ರಾಮದಲ್ಲಿನ ಬುರುಡೆ ಕೇಸ್ ಹಾಗೂ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹದ ಪ್ರಕರಣದಲ್ಲಿ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಗೆ ವಿಧಿಸಿದ್ದಂತ ಗಡಿಪಾರು ಶಿಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದ್ ಅವರಿದ್ದಂತ ನ್ಯಾಯಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ಅಲ್ಲದೇ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಕ್ತ ಕಾರಣ, ಸೆಕ್ಷನ್ ಗಳೊಂದಿಗೆ ಆದೇಶ ಹೊರಡಿಸಲು ಹೈಕೋರ್ಟ್ ಸೂಚಿಸಿದೆ.
ಧಾರವಾಡ : 10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟ ವೆಂದು ಪರಿಗಣಿಸಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ ಹಿನ್ನೆಲೆಯಲ್ಲಿ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ ನಾಲ್ಕು ವಾರ ಕಾಲಾವಕಾಶ ಕೋರಿತು. ಮಧ್ಯಂತರ ಆದೇಶ ಅರ್ಜಿದಾರರಿಗೆ ಸೀಮಿತಗೊಳಿಸಲು ಎಜಿ ಮನವಿ ಮಾಡಿದರು. ಹುಬ್ಬಳ್ಳಿಯ ಪುನಶ್ಚೇತನ ಸೇವಾ ಸಂಸ್ಥೆ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಆದೇಶ ನಾಗರೀಕರ ಮೂಲಭೂತ ಹಕ್ಕಿನ ಉಲ್ಲಂಘನೆ ಆಗಿದೆ. ಹೀಗಾಗಿ ಮಧ್ಯಂತರ ಆದೇಶ ಅರ್ಜಿದಾರರಿಗೆ ಸೀಮಿತಗೊಳಿಸಲು ಸಾಧ್ಯವಿಲ್ಲ. ಕಾನೂನಿನಿಂದಲ್ಲದೆ ಸರ್ಕಾರಿ ಆದೇಶದಿಂದ ಮೂಲಭೂತ ಹಕ್ಕು ನಿರ್ಭಂಧಿಸುವಂತಿಲ್ಲ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿತು.
ತುಮಕೂರು : ತುಮಕೂರು ಜನತೆಗೆ ಸಿಹಿ ಸುದ್ದಿಯೊಂದ್ ಇದ್ದು ತುಮಕೂರಿನವರೆಗೂ ಮೆಟ್ರೋ ವಿಸ್ತರಿಸಲು ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಬಿಎಂಆರ್ಸಿಎಲ್ ಈಗಾಗಲೇ ಟೆಂಡರ್ ಕರೆದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತಾಗಿ ರಾಜ್ಯ ಸರಕಾರ ಸಾಧಕ-ಬಾಧಕಗಳ ಚರ್ಚೆ ಮಾಡಿದೆ. ನಂತರ ಡಿಪಿಆರ್ ಮಾಡಲು ತೀರ್ಮಾನಿಸಲಾಗಿದೆ. ನಾಲ್ಕೈದು ತಿಂಗಳಲ್ಲಿ ಡಿಪಿಆರ್ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದ್ದೇವೆ ಎಂದು ಅವರು ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿ ಸ್ಫೋಟ ಕುರಿತು ಮಾಧ್ಯಮದವರ ಪ್ರಶ್ನೆಗೆ, ಕೇಂದ್ರದಲ್ಲಿ ವಿವಿಧ ಏಜೆನ್ಸಿಗಳಿವೆ. ಇವೆಲ್ಲವೂ ಒಟ್ಟಿಗೆ ಸೇರಿ ಕೆಲಸ ಮಾಡುತ್ತವೆ. ಅನುಮಾನದ ಮೇಲೆ ಆರೋಪಿಗಳನ್ನು ಹಿಡಿದುಕೊಂಡು ಬರುತ್ತಾರೆ. ಸಾಕ್ಷಿ ಸಿಗದಿದ್ದರೆ ಬಿಟ್ಟು ಕಳುಹಿಸುತ್ತಾರೆ ಎಂದು ಉತ್ತರಿಸಿದರು
ಬಾಂಗ್ಲಾದೇಶ : 2024ರ ಬಾಂಗ್ಲಾ ಹಿಂಸಾಚಾರದ ಪ್ರಕರಣದಲ್ಲಿ ಮಾಜಿ ಅಧ್ಯಕ್ಷೆ ಶೇಖ್ ಹಸೀನಾ ತಪ್ಪಿತಸ್ಥೆ ಎಂಬುದಾಗಿ ಅಂತಾರಾಷ್ಟ್ರೀಯ ಅಪರಾಧಿತ ನ್ಯಾಯಮಂಡಳಿ( ICT) ಘೋಷಣೆ ಮಾಡಿದೆ. ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಸೋಮವಾರ ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಶಿಕ್ಷೆ ವಿಧಿಸಲಾಯಿತು. ಆಗಸ್ಟ್ 2024 ರಲ್ಲಿ ಅವರ ಸರ್ಕಾರವನ್ನು ಉರುಳಿಸಿದ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಗಳ ಮೇಲೆ ಮಾರಕ ಕ್ರಮ ಕೈಗೊಳ್ಳಲು ಆದೇಶಿಸುವಲ್ಲಿ ಅವರ ಪಾತ್ರಕ್ಕಾಗಿ. ಗೈರುಹಾಜರಿಯಲ್ಲಿ ನೀಡಲಾದ ತೀರ್ಪು, ಫೆಬ್ರವರಿ 2026 ರಲ್ಲಿ ನಡೆಯಲಿರುವ ರಾಷ್ಟ್ರೀಯ ಚುನಾವಣೆಗಳಿಗೆ ಮುಂಚಿತವಾಗಿ ದೇಶದ ರಾಜಕೀಯ ಪ್ರಕ್ಷುಬ್ಧತೆಯಲ್ಲಿ ನಾಟಕೀಯ ಏರಿಕೆಯನ್ನು ಸೂಚಿಸುತ್ತದೆ. ದಂಗೆಯ ಸಮಯದಲ್ಲಿ ಢಾಕಾದಿಂದ ಪಲಾಯನ ಮಾಡಿದ ನಂತರ 78 ವರ್ಷದ ಹಸೀನಾ ಭಾರತದಲ್ಲಿ ವಾಸಿಸುತ್ತಿದ್ದಾರೆ. ವಿಚಾರಣೆಗೆ ಹಾಜರಾಗಲು ಮತ್ತೆ ಮತ್ತೆ ನ್ಯಾಯಾಲಯದ ಆದೇಶಗಳನ್ನು ಅವರು ಧಿಕ್ಕರಿಸಿದ್ದರು, ಇದನ್ನು ಅವರು “ನ್ಯಾಯಶಾಸ್ತ್ರೀಯ ತಮಾಷೆ” ಎಂದು ಕರೆದಿದ್ದಾರೆ. ಕೊಲೆಯನ್ನು ತಡೆಯುವಲ್ಲಿ ವಿಫಲತೆ ಸೇರಿದಂತೆ ಐದು ಆರೋಪಗಳನ್ನು ಪ್ರಾಸಿಕ್ಯೂಟರ್ಗಳು ಅವರ ವಿರುದ್ಧ ದಾಖಲಿಸಿದ್ದರು, ಪ್ರತಿಭಟನೆಗಳ…
ಬೆಂಗಳೂರು : ಪ್ರಯಾಣಿಕರನ್ನು ಪಿಕಪ್ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಲಾಟೆ ನಡೆದಿದೆ. ಚಾಲಕರಾದ ಸುಹೇಲ್ ಮತ್ತು ಜಗದೀಶ್ ನಡುವೆ ಗಲಾಟೆ ನಡೆದಿದೆ. ಈ ವೇಳೆ ಚಾಕು ಹಿಡಿದು ಸುಹೇಲ್ ಅಟ್ಟಹಾಸ ಮೆರೆದಿದ್ದಾನೆ. ಚಾಲಕ ಸುಹೇಲ್ ಮತ್ತೋರ್ವ ಚಾಲಕ ಜಗದೀಶ್ ಅನ್ನು ಅಟ್ಟಾಡಿಸಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ತಕ್ಷಣ ಸುಹೇಲ್ ನನ್ನ ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಿಕಪ್ ಚಾಲಕರ ಹಾವಳಿ ಮಿತಿಮೀರಿದೆ. ಸೈಡ್ ಪಿಕಪ್ ಕಿಂಗ್ ಪಿನ್ ಗಳ ನಡುವೆ ನಿತ್ಯವೂ ಗಲಾಟೆ ನಡೆಯುತ್ತಲೇ ಇರುತ್ತದೆ. ಸೈಡ್ ಪಿಕಪ್ ಹಾವಳಿಗೆ ಪೊಲೀಸರು ಬ್ರೇಕ್ ಹಾಕದಿದ್ದರಿಂದ ಗಲಾಟೆಗಳು ನಡೆಯುತ್ತಿವೆ ಎಂದು ಏರ್ಪೋರ್ಟ್ ಪೊಲೀಸರ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರ ವಲಯದ ರಾಣಿ ಕ್ರಾಸ್ ನಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶದ ಅನಂತಪುರ ಮೂಲದ ಅನಿತಾ (20) ಅಮೃತ ಯುವತಿ ಎಂದು ತಿಳಿದುಬಂದಿದೆ ಇನ್ನು ಬೈಕ್ ನ ಹಿಂಬದಿ ಕುಳಿತಿದ್ದ ಮತ್ತು ಮಹಿಳೆಗೆ ಗಂಭೀರವಾದ ಗಾಯಗಳಾಗಿದ್ದು ಟಿಪ್ಪರ್ ಜಪ್ತಿ ಮಾಡಿ ಪೊಲೀಸರು ಲಾರಿ ಚಾಲಕನನ್ನು ಅರೆಸ್ಟ್ ಮಾಡಿದ್ದಾರೆ. ಅಪಘಾತದ ಕುರಿತು ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ,ನ,೧೬- ಜನಪ್ರಿಯ ಕತೆಗಳಿಗೆ ಚಲನಚಿತ್ರಗಳ ಸಂಭಾಷಣೆಯಲ್ಲಿ ಸಾಹಿತ್ಯದ ಸ್ಪರ್ಶ ಮೂಡಿಸುವ ಮೂಲಕ ಹೊಸ ಅಧ್ಯಾಯವನ್ನು ಬಿ.ಎಲ್.ವೇಣು ಸೃಷ್ಟಿಸಿದರು ಎಂದು ಚಿಂತಕ ಹಾಗೂ ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್ ಅಭಿಪ್ರಾಯಪಟ್ಟರು.ಕೆಂಧೂಳಿ ವಾರಪತ್ರಿಕೆ ಬಳಗದಿಂದ ಕೊಡಮಾಡುವ ಕೆಂಧೂಳಿ ರಾಜ್ಯೋತ್ಸವ ಪ್ರಶಸ್ತಿಯನ್ನು ಬಿ.ಎಲ್ ವೇಣು ಅವರಿಗೆ ಪ್ರದಾನ ಮಾಡಿ ಅವರು ಮಾತನಾಡಿದರು, ಬಿ.ಎಲ್ ವೇಣು ಅವರು ಜನಪ್ರಿಯ ಕತೆ,ಕಾದಂಬರಿಕಾರರು ಸಹಜವಾಗಿಯೇ ಚಲನಚಿತ್ರಗಳ ಸಂಭಾಷಣೆಯ ಅವಕಾಶ ಬಂದಾಗ ಅದಕ್ಕೊಂದು ಸಾಹಿತ್ಯದ ಸ್ಪರ್ಶನೀಡಿ ಹೊಸ ಅರ್ಥ ಸೃಷ್ಟಿಸಿದರು ಎಂದು ಅವರು ಹೇಳಿದರು.ಸಮಾಜದ ದೊಡ್ಡ ಸಮಸ್ಯೆಯಾಗಿದ್ದ ಬೆತ್ತಲೆ ಸೇವೆಯಂತ ಸಾಮಾಜಿಕ ಸಮಸ್ಯೆಯ ಕುರಿತು ಬರೆದ ಕಾದಂಬರಿ ಲಕ್ಷಾಂತರ ಜನರಿಗೆ ಅದರ ಅರಿವು ಮೂಡಿಸುವ ಮೂಲಕ ಅನಿಷ್ಟ ಪದ್ದತಿಯನ್ನು ಹೋಗಲಾಡಿಲಸು ಕಾರಣವಾಯಿತು ಅಲ್ಲದೆ ಅದು ಚಲನಚಿತ್ರವಾಗುವ ಮೂಲಕ ಮತ್ತಷ್ಟು ಜನರಿಗೆ ಅರಿವು ಮೂಡಿಸಿದ ಕೆಲಸ ಮಾಡಿಸಿತು ಎಂದು ಅಭಿಪ್ರಾಯಪಟ್ಟರು. ಚಿತ್ರದುರ್ಗ ಇತಿಹಾಸವನ್ನು ಬರೆದ ವೇಣು ಅವರು ಅಪವಾದವಾಗಿದ್ದ ಹಿದು ಮುಸ್ಲಿಂ ನ ದ್ವೇಷಭಾವನೆಯನ್ನು ಅವರು ಕಲ್ಲರಳಿ ಹೂವಾಗಿ ಕಾದಂಬರಿ ಮೂಲಕ ಹಿಂದು ಮುಸ್ಲಿಂ…














