Author: kannadanewsnow05

ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಧಾರ್ಮಿಕ ದ್ವೇಷ ಹರಡುವ ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ. ಸಿಟಿ ರವಿ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಧಾರ್ಮಿಕ ದ್ವೇಷ ಹರಡುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿ, ಕೇಸ್ ದಾಖಲಿಸಲಾಗಿತ್ತು. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ, ಅಧೀನ ನ್ಯಾಯಾಲಯಗಳ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ  ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರ ಮಧ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾವು ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಇದ್ದೇವೆ ಎಂದು ಬೆಂಬಲ ಸೂಚಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಫ್ ಐ ಆರ್ ದಾಖಲಾದ ಮೇಲೆ ಸಿಎಂ ಬೆನ್ನಿಗೆ ಹೈಕಮಾಂಡ್ ನಿಲ್ಲುತ್ತಾ ಎಂಬ ಮಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಸಿಎಂ ಸಿದ್ದರಾಮಯ್ಯಗೆ ಬೆಂಬಲ ಕೊಟ್ಟಿದ್ದೇವೆ. ಏಕೆಂದರೆ ಸಿದ್ದರಾಮಯ್ಯ ಅವರು ಪಕ್ಷವನ್ನು ಪ್ರತಿನಿಧಿಸುತ್ತಾರೆ. ವೈಯಕ್ತಿಕವಾಗಿ ಅಲ್ಲ ಅಂದು ಇನ್ನು ದಲಿತ ನಾಯಕ ದಲಿತ ಫಂಡ್ ಬಗ್ಗೆ ನರೇಂದ್ರ ಮೋದಿ ಮಾತನಾಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಈ ಒಂದು ವಿಷಯದ ಕುರಿತಾಗಿ ಪ್ರಧಾನಿ ಮೋದಿ ಅವರಿಗೆ ಹರಿಯಾಣದಲ್ಲಿ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು. ಸಿಬಿಐ ಅವಕಾಶವನ್ನು ಹಿಂಪಡೆಯುವುದು ಸರ್ಕಾರಕ್ಕೆ ಇರುವ ಅಧಿಕಾರ. ನಾನು ಗೃಹ ಮಂತ್ರಿ ಇದ್ದಾಗ ವೀರಪ್ಪನ್…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ಸಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕುಟುಂಬದ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಹೌದು ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕುಟುಂಬದ ವಿರುದ್ಧ ಸುಮಾರು 394 ಪುಟಗಳ ದಾಖಲೆ ಸಮೇತ ಮಾಜಿ ಕರ್ಪೊರೇಟರ್ ಎನ್ ಆರ್ ರಮೇಶ್ ಎನ್ನುವವರು ದೂರು ನೀಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪುತ್ರರಾದ ಪ್ರಿಯಾಂಕ ಖರ್ಗೆ, ರಾಹುಲ್ ಖರ್ಗೆ, ಅಳಿಯ ರಾಧಾಕೃಷ್ಣ ಹಾಗೂ ಕುಟುಂಬದ ಹೆಸರಲ್ಲಿನ ಇರುವ ಸಿದ್ಧಾರ್ಥ ವಿಹಾರ ಟ್ರಸ್ಟ್ ಟ್ರಸ್ಟ್ ಗೆ ಅಕ್ರಮವಾಗಿ ಸರ್ಕಾರಿ ಭೂಮಿ ಪರಭಾರೆ ಮಾಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಹಾಗೂ ಶೈಕ್ಷಣಿಕ ಉದ್ದೇಶಕ್ಕೆಂದು ಎರಡೆರಡು ಬಾರಿ ಭೂಮಿ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. 2014ರಲ್ಲಿ ಬಿಟಿಎಂ 4ನೇ ಸ್ಟೇಜಿನ ಎರಡನೇ ಬ್ಲಾಕ್ ನಲ್ಲಿ ಎರಡು ಎಕರೆ ಹಾಗೂ ಬಿಡಿಎ…

Read More

ಧಾರವಾಡ : ಈಗಾಗಲೇ ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾಗಿದ್ದು, ಇಂದು ನಡೆದ ಸಂಪುಟ ಸಭೆಯಲ್ಲಿ ಸಿಬಿಐ ತನಿಖೆಗೆ ನೀಡಲಾಗಿರುವ ಮುಕ್ತ ಒಪ್ಪಿಗೆಯನ್ನು ಹಿಂಪಡೆದಿದೆ. ಇದರ ಬೆನ್ನಲ್ಲೇ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಗೋಲ್ಮಾಲ್ ನಡೆದಿದೆ ಎಂದು ಆರೋಪಿಸಿ ಧಾರವಾಡದ ಲೋಕಾಯುಕ್ತಕ್ಕೆ ಆರ್‌ಟಿಐ ಕಾರ್ಯಕರ್ತರು ಒಬ್ಬರು ದೂರು ನೀಡಿದ್ದಾರೆ. ಹೌದು ಧಾರವಾಡ ಜಿಲ್ಲೆಯ ನವಲಗುಂದದ ಆರ್‌ಟಿಐ ಕಾರ್ಯಕರ್ತ ಮಾಬುಸಾಬ್ ಯರಗುಪ್ಪಿ ಎನ್ನುವವರು, ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿಗಳನ್ನೇನೋಜಾರಿಗೆ ಮಾಡಿತು. ಆ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ದೊಡ್ಡ ದೊಡ್ಡ ಸಮಾವೇಶಗಳನ್ನು ರಾಜ್ಯ ಸರ್ಕಾರ ಮಾಡಿತು. ಆ ಸಮಾವೇಶಗಳು ಧಾರವಾಡ ಜಿಲ್ಲೆಯಲ್ಲೂ ನಡೆದಿದ್ದವು. ಆದರೆ, ಆ ಸಮಾವೇಶಗಳಲ್ಲಿ ಗೋಲ್ಮಾಲ್ ನಡೆದಿದ್ದು, ಅದರ ಸಂಪೂರ್ಣ ತನಿಖೆ ನಡೆಸುವಂತೆ ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ. ಕಳೆದ ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ಧಾರವಾಡ ಜಿಲ್ಲೆಯಲ್ಲಿ ಒಟ್ಟು 5 ಗ್ಯಾರಂಟಿ ಸಮಾವೇಶಗಳು ನಡೆದಿದ್ದವು. ಒಂದು ಸಮಾವೇಶದಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದರು. ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದ ಸಮಾವೇಶದ…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಯಾವಾಗ ಅಲ್ಲಿ ಅವರಿಗೆ ರಾಜಾತಿಥ್ಯ ನೀಡುವ ವಿಚಾರ ಬಹಿರಂಗವಾಯಿತೋ, ಅಲ್ಲಿಂದ ನಟ ದರ್ಶನ್ ಸೇರಿದಂತೆ ಇತರರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲಾಯಿತು. ಇದೀಗ ನಟ ದರ್ಶನ್ ಜೊತೆಗೆ ಕುಳಿತುಕೊಂಡು ತಂಬಾಕು ಜಗಿದಿದ್ದ ಆರೋಪದ ಅಡಿ ಶ್ರೀನಿವಾಸ್ ಅಲಿಯಾಸ್ ಕುಳ್ಳ ಸೀನನ ವಿರುದ್ಧದ ಕೇಸ್ ಗೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿ ತಡೆ ನೀಡಿದೆ. ಶ್ರೀನಿವಾಸ ಅಲಿಯಾಸ್ ಕುಳ್ಳ ಸೀನ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ ನೀಡಿದೆ. ಕರ್ನಾಟಕ ಜೈಲು ಅದಿನಿಯಮ 2022ರ ಸೆ.42 ಉಲ್ಲಂಘನೆ ಕೇಸ್ ದಾಖಲಾಗಿದ್ದು, ಫೋಟೋ ವೈರಲ್ ಆಗಿದ್ದಕ್ಕೆ ಕೇಸ್ ಹಾಕಲಾಗಿದೆ.ಆದರೆ ಯಾವುದೇ ಶಿಕ್ಷಾರ್ಹ ಅಪರಾಧ ಮಾಡಿಲ್ಲವೆಂದು ಶ್ರೀನಿವಾಸ್ ಪರ ಹಿರಿಯ ವಕೀಲ ಸಂದೇಶ ಚೌಟ ವಾದಿಸಿದರು. ಜೈಲು ಕೈಪಿಡಿಯಲ್ಲಿ ಒಂದೆಡೆ ಧೂಮಪಾನ ನಿಷೇಧವಿದೆ. ನಿಯಮದ ಮತ್ತೊಂದೆಡೆ ಸ್ಮೋಕಿಂಗ್ ಜೋನ್ ಬಗ್ಗೆ ಹೇಳಲಾಗಿದೆ. ನಿಯಮದಲ್ಲೇ ವೈರುಧ್ಯವಿರುವ ಹಿನ್ನೆಲೆ ಕೇಸ್…

Read More

ಹುಬ್ಬಳ್ಳಿ : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಭಾರಿ ಸಂಕಷ್ಟ ಎದುರಾಗಿದ್ದು, ಇದರ ಮಧ್ಯ ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ವಾದಂತಹ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯನವರೇ ಕೊನೆಯ ಮುಖ್ಯಮಂತ್ರಿ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಂಗ್ರೆಸ್‌ನ ಕೊನೆಯ ಮುಖ್ಯಮಂತ್ರಿ. ಸಿದ್ದರಾಮಯ್ಯ ನಂತರ ಯಾರೂ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಆಗಲ್ಲ. ಬಹಳ ಮಂದಿ ಸಿಎಂ ಪಾಳಿಯಲ್ಲಿದ್ದಾರೆ. ಗೋರಿಗೆ ಹೋಗುವವರೂ ಸಹ ಪಾಳಿ ಹಚ್ಚಿದ್ದಾರೆ. ಕೋರ್ಟ್ ಆದೇಶ ಬಂದ ನಂತರ ಸಿದ್ದರಾಮಯ್ಯ ರಾಜೀನಾಮೆ ಕೊಡೋದು ಸೂಕ್ತ ಎಂದು ತಿಳಿಸಿದರು. ಅಧಿಕಾರದಲ್ಲಿ ಇದ್ದರೆ ತನಿಖೆ ಮೇಲೆ ಪ್ರಭಾವ ಬೀರೋದು ಖಚಿತ. ಹಿಂದೆ ವಿರೋಧ ಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ ಏನು ಮಾತನಾಡಿದ್ದರು ನೆನಪಿಸಿಕೊಳ್ಳಲಿ. ಮುಖ್ಯಮಂತ್ರಿ ಹುದ್ದೆಯಲ್ಲಿದ್ದು ಯಾವುದೇ ತನಿಖೆ ಎದುರಿಸುವುದು ಸರಿಯಲ್ಲ, ಹೈಕೋರ್ಟ್ ನ ಆದೇಶವನ್ನು ಪಾಲಿಸಬೇಕು ಎಂದರು.

Read More

ಬೆಂಗಳೂರು : ರಾಜ್ಯದಲ್ಲಿ ಸಿಬಿಐ ತನಿಖೆಗೆ ನೀಡಲಾಗಿರುವ ಮುಕ್ತ ಒಪ್ಪಿಗೆಯನ್ನು ಹಿಂಪಡೆಯುವುದಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ವಿಚಾರವಾಗಿ ಇದು ಕರ್ನಾಟಕದ ಸರ್ಕಾರ ಸರ್ವಾಧಿಕಾರ ಧೋರಣೆ ತೋರಿಸುತ್ತದೆ. ರಾಜ್ಯದಲ್ಲಿ ಎಷ್ಟೇ ಲೂಟಿ ಭ್ರಷ್ಟಾಚಾರ ಆದರೂ ಸಿಬಿಐ ತನಿಖೆ ಆಗಬಾರದು. ರಾಜ ಕಾಂಗ್ರೆಸ್ ಸರ್ಕಾರ ಈ ಒಂದು ನಿರ್ಣಯದಿಂದ ಕರ್ನಾಟಕವನ್ನು ಬಿಹಾರ ರಾಜ್ಯದ ಜಂಗಲ್ ರಾಜ್ ಮಾಡಲು ಹೊರಟಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಒಂದು ನಿರ್ಣಯದಿಂದ, ಲೂಟಿಕೋರರಿಗೆ ಸ್ವರ್ಗ ಆಗಬೇಕೆಂಬ ರೀತಿಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯಕ್ಕೆ ಸಿಬಿಐ ಬರಬಾರದೆಂದು ನಿರ್ಧಾರ ಕೈಗೊಂಡಿರುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ. ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣದಲ್ಲಿ ಸಿಲುಕಿದೆ.ಸಿಬಿಐ ಬಂದರೆ ಬಂಧನವಾಗುತ್ತದೆ ಎಂದು ಭಾಗಿಯಾದ ಸಚಿವರಿಗೆ ಸಮಸ್ಯೆಯಾಗುತ್ತದೆ ಎಂದು ಇಂತಹ ದುರುದ್ದೇಶದಿಂದ ಕಾಂಗ್ರೆಸ್ ಸರ್ಕಾರ ಈ ಒಂದು ನಿರ್ಣಯ ಕೈಗೊಂಡಿದೆ. ಈ ಹಿಂದೆ ಲೋಕಾಯುಕ್ತ ಮುಚ್ಚಿ ಹಾಕಿದ್ದವರು, ಈಗ ಸಿಬಿಐ…

Read More

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ದರ್ಶನ್‌ಗೆ ಐಟಿ ಸಂಕಷ್ಟ ಎದುರಾಗಿದೆ. ಹೈ ಸೆಕ್ಯುರಿಟಿ ಸೆಲ್‌ನಿಂದ ಜೈಲು ಅಧೀಕ್ಷಕರ ಕಚೇರಿಗೆ ದರ್ಶನ್ ಕರೆತಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ. ಲೆಕ್ಕ ಪರಿಶೋಧಕರು, ಜೈಲು ಅಧೀಕ್ಷಕಿ ಲತಾ ಸಮ್ಮುಖದಲ್ಲಿ ದರ್ಶನ್ ವಿಚಾರಣೆ ನಡೆಸಿದ್ದು, ಇದೀಗ ವಿಚಾರಣೆ ಅಂತ್ಯವಾಗಿದೆ. ಸತತ 7 ಗಂಟೆಗಳ ಕಾಲ ನಟ ದರ್ಶನ್ ಐಟಿ ಅಧಿಕಾರಿಗಳ ವಿಚಾರಣೆಯನ್ನು ಎದುರಿಸಿದ್ದಾರೆ. ಈ ವೇಳೆ ಐಟಿ ಅಧಿಕಾರಿಗಳು ನಟ ದರ್ಶನ್ ಅವರಿಗೆ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲಕ್ಷಾಂತರ ರೂಪಾಯಿ ಡೀಲ್ ಮಾಡಿಕೊಂಡಿರುವ ಕುರಿತು ಪ್ರಶ್ನೆ ಕೇಳಿದ್ದಾರೆ. ಇದೀಗ ಐಟಿ ಅಧಿಕಾರಿಗಳ ವಿಚಾರಣೆ ಅಂತ್ಯವಾಗಿದ್ದು, ಬಳ್ಳಾರಿ ಜೈಲಿನಿಂದ ಎರಡು ಕಾರಿನಲ್ಲಿ ಐವರು ಅಧಿಕಾರಿಗಳು ತೆರಳಿದ್ದಾರೆ. ಬಳ್ಳಾರಿ ಜೈಲಲ್ಲಿ ದರ್ಶನ್ ವಿಚಾರಣೆ ನಡೆಯುತ್ತಿರುವ ಈ ಸಮಯದಲ್ಲೇ ದರ್ಶನ್‌ಗೆ 40 ಲಕ್ಷ ಹಣ ನೀಡಿದ್ದ ಬಗ್ಗೆ ಹೇಳಿಕೆ ನೀಡಿದ್ದ ಮಾಜಿ ಉಪ ಮೇಯರ್ ಮೋಹನ್ ರಾಜ್‌ಗೂ ಐಟಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಏರಿಯಾನ್ ಟೆಕ್ನಾಲಜಿ ಕಂಪನಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬೊಮ್ಮಸಂದ್ರದ ಕೈಗಾರಿಕಾ ಪ್ರದೇಶದಲ್ಲಿ ಏರಿಯಾನ್ ಟೆಕ್ನಾಲಜಿ ಕಂಪನಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಟೊಯೋಟಾ ಸೇರಿದಂತೆ ವಿವಿಧ ಕಂಪನಿಗಳ ಬಿಡಿ ಭಾಗಗಳನ್ನು ಇಲ್ಲಿ ತಯಾರಿಸಲಾಗುತ್ತಿತ್ತು. 3d ಡೆಕೋರೇಷನ್, ಹೈಡ್ರೋಗ್ರಾಫಿಕ್ ಪೇಂಟಿಂಗ್ ಸಹ ಕಂಪನಿಯಲ್ಲಿ ಮಾಡಲಾಗುತ್ತಿತ್ತು.  ಘಟನಾ ಸ್ಥಳದಲ್ಲಿ ಮೂರು ಅಗ್ನಿಶಾಮಕ ವಾಹನಗಳಿಂದ ಸದ್ಯ ಬೆಂಕಿ ನಂದಿಸುವ ಕಾರ್ಯಚರಣೆ ನಡೆಯುತ್ತಿದ್ದು, ಘಟನೆ ಕುರಿತಂತೆ ಬೊಮ್ಮಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದು ಇಡೀ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಗುರುತು ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಕಾಂಗ್ರೆಸ್ ಪಕ್ಷದಲ್ಲಿ ಅಂತಕಲಹ ನಡೆಯುತ್ತಿದೆ ಎಂಬ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಸಿದ್ದರಾಮಯ್ಯ ಅವರು,ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕಾಂಗ್ರೆಸ್ ನಲ್ಲಿ ಅಂತಃಕಲಹ ನಡೆಯುತ್ತಿದೆ ಎಂದು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ. ಬಹುಶಃ ಪ್ರಧಾನಿಯವರು ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಲ್ಲಿ ಉಲ್ಲೇಖಗೊಳ್ಳುತ್ತಲಿರುವ ಪಕ್ಷಗಳ ಹೆಸರಲ್ಲಿ ಗೊಂದಲ ಮಾಡಿಕೊಂಡು, ಬಿಜೆಪಿ ಬದಲಿಗೆ ಕಾಂಗ್ರೆಸ್ ಎಂದು ತಿಳಿದುಕೊಂಡು ಈ ಅಭಿಪ್ರಾಯ ವ್ಯಕ್ತಪಡಿಸಿರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ರಕ್ತದಲ್ಲಿ ಹೇಗೆ ಕೋಮುವಾದ ಸೇರಿಕೊಂಡಿದೆಯೋ, ಅದೇ ರೀತಿ ಅಂತರ್‌ಕಲಹವೂ ಸೇರಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದ @BJP4Karnataka ನಾಯಕರು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳದ ದಿನವೇ ಸಿಗಲಾರದು. ಪ್ರತಿನಿತ್ಯ ಬಿಜೆಪಿ ನಾಯಕರು ಆರೋಪ – ಪ್ರತ್ಯಾರೋಪ,…

Read More