Author: kannadanewsnow05

ಶಿವಮೊಗ್ಗ : ಲೋಕಸಭಾ ಚುನಾವಣೆಗೆ ತಮ್ಮ ಮಾನಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯ ಆಗಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗ ಕ್ಷೇತ್ರಕ್ಕೆ ಲೋಕಸಭ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಏಪ್ರಿಲ್‌ 12 ರಂದು ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಘೋಷಿಸಿದ್ದಾರೆ. https://kannadanewsnow.com/kannada/update-bmtc-conductor-taken-into-police-custody-in-bengaluru-woman-assault-case/ ಇಂದು ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ನಡೆದ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಏಪ್ರಿಲ್ 12 ರಂದು ಸುಮಾರು 25 ಸಾವಿರ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸುವುದಾಗಿ ಹೇಳಿದರು. https://kannadanewsnow.com/kannada/breaking-former-punjab-cm-beant-singhs-grandson-and-mp-ravneet-joins-bjp/ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ನನ್ನ ಗುರುತು ಕೂಡ ಇನ್ನೂ ತೀರ್ಮಾನವಾಗಿಲ್ಲ. ಮತದಾನದ ದಿನಾಂಕ ನಿಗದಿಯಾಗಿದೆ. ಆದ್ದರಿಂದ ಏಪ್ರಿಲ್ 12ರಂದು ಸಾವಿರಾರು ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸುವೆ. ಈ ರೀತಿ ಘೋಷಿಸಿದಾಗ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರ ಎದೆಯಲ್ಲಿ ನಡುಕ ಆರಂಭವಾಗುತ್ತದೆ. ಶಕ್ತಿ ಪ್ರದರ್ಶನಕ್ಕೆ ಇಳಿದಾಗಿದೆ ಎಂದು ಸಮಾವೇಶದಲ್ಲಿ ಕೆ. ಎಸ್​…

Read More

ಬೆಂಗಳೂರು : ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ನಿರ್ವಾಹಕ ಹಾಗೂ ಮಹಿಳೆಯ ನಡುವೆ ವಾಗ್ವಾದ ನಡೆದು ಮಹಿಳೆಗೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ವಾಹಕ ಹೊನ್ನಪ್ಪನನ್ನು ಇದೀಗ ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. https://kannadanewsnow.com/kannada/breaking-former-punjab-cm-beant-singhs-grandson-and-mp-ravneet-joins-bjp/ ಇಂದು ಬೆಳಿಗ್ಗೆ 10 ಗಂಟೆಗೆಈ ಘಟನೆ ನಡೆದಿದ್ದು, ಟಿಕೆಟ್ ವಿಚಾರವಾಗಿ ಮಹಿಳೆ ಮತ್ತು ಕಂಡಕ್ಟರ್ ನಡುವೆ ಗಲಾಟೆ ನಡೆದಿದೆ , ಈ ವೇಳೆ ಕೋಪಗೊಂಡ ಕಂಡಕ್ಟರ್, ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಈ ದೃಶ್ಯಗಳು ಬಸ್ನಲ್ಲಿದ್ದ ಪ್ರಯಾಣಿಕರ ಮೊಬೈಲ್ನಲ್ಲಿ ಸೆರೆಯಾಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ 354A ಅಡಿ ಎಫ್‌ಐಆರ್ (FIR) ದಾಖಲಾಗಿದೆ. https://kannadanewsnow.com/kannada/its-like-going-to-get-married-and-getting-married-to-my-father-minister-cheluvaraya-swamy-on-hdks-candidature-in-mandya/ ಟಿಕೆಟ್ ನೀಡುವ ವಿಚಾರಕ್ಕೆ ಕಿರಿಕ್ ನಡೆದಿದೆ ಎನ್ನಲಾಗಿದ್ದು, ಮಹಿಳೆ ಹಾಗೂ ಕಂಡಕ್ಟರ್ ನಡುವೆ ವಾಗ್ವಾದ ನಡೆದಿದೆ. ಬಳಿಕ ರೊಚ್ಚಿಗೆದ್ದ ಬಿಎಂಟಿಸಿ ಬಸ್ ಕಂಡಕ್ಟರ್ ಮನಬಂದಂತೆ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿದ ದೃಶ್ಯ ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

Read More

ಮಂಡ್ಯ : ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸ್ವೀಕರಿಸುವ ವಿಚಾರವಾಗಿ ಮಂಡ್ಯದಿಂದ ಸಿಎಸ್‌ ಪುಟ್ಟರಾಜು ಅಭ್ಯರ್ಥಿ ಅಂತಾ ಹೇಳಿ ಇದೀಗ ತಾವೇ ಅಭ್ಯರ್ಥಿಯಾಗಿದ್ದಾರೆ. ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದುವೆ ಆದಂತೆ ಆಗಿದೆ ಎಂದು ಎಚ್‌ಡಿ ಕುಮಾರಸ್ವಾಮಿ ಸ್ಪರ್ಧೆ ಸಚಿವ ಚಲುವರಾಯಸ್ವಾಮಿ ವ್ಯಂಗ್ಯವಾಡಿದರು. https://kannadanewsnow.com/kannada/breaking-hd-deve-gowda-complains-about-freebies-election-commission-orders-immediate-action/ ಇಂದು ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ ಮೊದಲುಮಂಡ್ಯ ಕ್ಷೇತ್ರಕ್ಕೆ ಸಿಎಸ್‌ ಪುಟ್ಟರಾಜು ಅಭ್ಯರ್ಥಿ ಎಂದು ಹೇಳಿಕೊಂಡು ತಿರುಗಾಡ್ತಿದ್ರು. ಇದೀಗ ತಾವೇ ಅಭ್ಯರ್ಥಿ ಆಗಿದ್ದಾರೆ. ಒಳ್ಳೇ ಹುಡುಗಿ ಇದ್ದಾಳೆ ನಾನೇ ಮದುವೆ ಆಗ್ತೇನೆ. ಪುಟ್ಟರಾಜು ನಿನಗೆ ಮುಂದೆ ಒಳ್ಳೆ ಹುಡುಗಿ ಹುಡುಕೋಣ ಅಂದಿದ್ದಾರೆ ಎಂದು ವ್ಯಂಗ್ಯವಾಡಿದರು. https://kannadanewsnow.com/kannada/breaking-cuet-ug-application-deadline-extended-new-date-is-as-follows-cuet-ug-2024/ ಕಳೆದ ಚುನಾವಣೆಯಲ್ಲಿ ಸಂಸದೆ ಸುಮಲತಾರನ್ನ ಇದೇ ಕುಮಾರಸ್ವಾಮಿ ನಿಂದಿಸಿದ್ರು. ಈಗ ಸುಮಲತಾ ನನ್ನ ಸಹೋದರಿ ಇದ್ದಂಗ, ಅಕ್ಕ ಇದ್ದಂಗ ಅಂತಿದ್ದಾರೆ. ಕಳೆದ ಚುನಾವಣೆಯಲ್ಲಿ ಈ ಮಾತು ಆಡಬೇಕಿತ್ತು. ಸುಮಲತಾ ನನ್ನ ಸಹೋದರಿ ಅಲ್ವಾ ಅವರೇ…

Read More

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಶುಭ ಕರಂದ್ಲಾಜೆಗೆ ಸಂಕಷ್ಟ ಎದುರಾಗಿದ್ದು, ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ) ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಮುನ್ನಲೆಗೆ ಬಂದಿದೆ. ಇಡಿ ಪ್ರಕರಣದ ವಿಚಾರಣೆಗೆ ಶೋಭಾ ಗೈರು ಹಾಜರಾಗಿದ್ದಾರೆ ಎನ್ನಲಾಗಿದೆ. ಇವರಲ್ಲದೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿ 24 ಮಂದಿ ವಿರುದ್ಧದ ಕೇಸ್ ಇದೆ.ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಈ ಹಗರಣದ ಬಗ್ಗೆ ವಿಚಾರಣೆ ನಡೆಯುತ್ತಿದೆ. ಈಗ ವಿಚಾರಣೆಗೆ ಶೋಭಾ ಕರಂದ್ಲಾಜೆ ಗೈರಾಗಿದ್ದು, ವಿಚಾರಣೆಗೆ ಹಾಜರಾತಿ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಲಾಗಿದೆ. ಇಡಿ ಪರ ವಕೀಲರು ಗೈರು ಹಿನ್ನಲೆ ವಿಚಾರಣೆಯನ್ನು ಏಪ್ರಿಲ್ 3ಕ್ಕೆ ಕೋರ್ಟ್ ಮುಂದೂಡಿದೆ. https://kannadanewsnow.com/kannada/yediyurappa-doesnt-want-workers-he-doesnt-want-people-he-wants-only-shobha-ks-eshwarappa/ ಏನಿದು ಪ್ರಕರಣ? ಕೆಐಎಡಿಬಿ ಹಗರಣಕ್ಕೆ ಸಂಬಂಧಿಸಿದಂತೆ ಇಟಾಸ್ಕಾ ಕಂಪನಿಯಿಂದ ಕಟ್ಟಾ ಸುಬ್ರಮಣ್ಯ ನಾಯ್ಡು ಪಡೆದ ಲಂಚದಲ್ಲಿ ಸಚಿವೆ ಶೋಭಾಗೂ ಪಾಲು ಸಿಕ್ಕಿದೆ ಎನ್ನಲಾಗಿದ್ದು, ಇಟಾಸ್ಕಾದಿಂದ ಬಂದಿದ್ದ 87 ಕೋಟಿ ರೂ ಕಿಕ್ ಬ್ಯಾಕ್ ನಲ್ಲಿ 47 ಕೋಟಿ ರೂ. ಶೋಭಾ ಅವರಿಗೆ…

Read More

ಶಿವಮೊಗ್ಗ : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಿದ್ದರಿಂದ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಿಎಸ್ ಯಡಿಯೂರಪ್ಪ ಸೇರಿದಂತೆ ಅವರ ಪುತ್ರರ ವಿರುದ್ಧ ವಾಗ್ದಾಳಿನ ಮುಂದುವರಿಸಿದ್ದು ಇದೀಗ ಮತ್ತೆ ಇಡೀ ಕಾರಿಂದು ಯಡಿಯೂರಪ್ಪ ಅವರಿಗೆ ಕಾರ್ಯಕರ್ತರು ಬೇಡ ಜನ ಬೇಡ ಆದರೆ ಶೋಭಾ ಮಾತ್ರ ಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ. https://kannadanewsnow.com/kannada/breaking-big-shock-for-bjp-ahead-of-elections-former-minister-kote-shivanna/ ಶಿವಮೊಗ್ಗದಲ್ಲಿ ಸಮಾರಂಭ ಒಂದರಲ್ಲಿ ಮಾತನಾಡಿದ ಅವರು, ಕಳೆದ ಎಂಎಲ್ಎ ಚುನಾವಣೆಯಲ್ಲಿ ವಿಜಯೇಂದ್ರ ತಿಣುಕಿ ಗೆದ್ದಿದ್ದಾರೆ ಹೀಗಂತ ಶ್ರೀಕಾರಿಪುರದ ಕಾಂಗ್ರೆಸ್ನವರು ಹೇಳುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ಶೋಭಾ ಗೋ ಬ್ಯಾಕ್ ಅಂದರು ಆದರೂ ಕೂಡ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ಕಾರ್ಯಕರ್ತರು ಬೇಡ ಜನ ಬೇಡ ಆದರೆ ಇವರಿಗೆ ಶೋಭಾ ಬೇಕು ಲೋಕಸಭೆಯಲ್ಲಿ ಕೂಡ ಹೊಂದಾಣಿಕೆ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. https://kannadanewsnow.com/kannada/breaking-over-rs-20-lakh-cash-seized-in-chitradurga/ ಹಿಂದುತ್ವದ ಹುಲಿಗಳಿಗೆ ಯಾಕೆ ಟಿಕೆಟ್ ಕೊಡಲಿಲ್ಲ? ಪ್ರತಾಪ್ ಸಿಂಹ, ಸಿಟಿ ರವಿ, ಅನಂತ್ ಕುಮಾರ್ ಹೆಗಡೆ ಇವರೆಲ್ಲ ಮಾಡಿದ್ದು ತಪ್ಪೇನು ಹಿಂದುತ್ವದ ಪರ ಹೋರಾಟ ಮಾಡಿದ್ದು…

Read More

ಮೈಸೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಇದೀಗ ಮೈಸೂರಿನಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು ಮಾಜಿ ಸಚಿವ ಕೋಟೆ ಶಿವಣ್ಣ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಈ ಮೂಲಕ ಚುನಾವಣೆ ಹೊತ್ತಿನಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಹೌದು ಮೈಸೂರು ಜಿಲ್ಲೆಯಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದ್ದು, ನಾಳೆ ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಕೋಟೆ ಶಿವಣ್ಣ ಸೇರ್ಪಡೆಯಾಗಲಿದ್ದಾರೆ. ಈ ಕುರಿತಂತೆ ಮೈಸೂರು ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ವಿಜಯಕುಮಾರ್ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ. ನಾಳೆ ಕಾಂಗ್ರೆಸ್ ಕಚೇರಿಯಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಮ್ಮುಖದಲ್ಲಿ ಸೇರ್ಪಡೆಗೊಳ್ಳಲಿದ್ದಾರೆ.ಬಿಜೆಪಿ ಸರ್ಕಾರದಲ್ಲಿ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿದ್ದರು. ಇದೀಗ ನಾಳೆ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಕೋಟೆ ಶಿವಣ್ಣ ಮರು ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.

Read More

ಚಿತ್ರದುರ್ಗ : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಮಾದರಿ ನೀತಿ ಸಂಹಿತೆಯನ್ನು ಅತ್ಯಂತ ಕಠಿಣವಾಗಿ ಪಾಲಿಸುತ್ತಿದ್ದು ಇದೀಗ ಚಿತ್ರದುರ್ಗದಲ್ಲಿ ದಾಖಲೆ ಇಲ್ಲದ ಸುಮಾರು 20 ಲಕ್ಷ 35000ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. https://kannadanewsnow.com/kannada/children-under-the-age-of-14-will-no-longer-be-allowed-to-use-social-media-florida/ ಚಿತ್ರದುರ್ಗದಲ್ಲಿ ವಾಹನ ಒಂದರಲ್ಲಿ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೆ ಸುಮಾರು 20 ಲಕ್ಷಕ್ಕೂ ಅಧಿಕ ಹಣವನ್ನು ಸಾಗಿಸುತ್ತಿದ್ದರು ಈ ವೇಳೆ ಚಿತ್ರದುರ್ಗ ತಹಸಿಲ್ದಾರ್ ನಾಗವೇಣಿ ನೇತೃತ್ವದಲ್ಲಿ ಪರಿಶೀಲನೆ ನಡೆದಿದ್ದು, ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/breaking-lok-sabha-elections-hd-deve-gowda-announces-mallesh-babu-to-contest-from-kolar-this-time/

Read More

ಹಾಸನ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೀಗ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಇದೀಗ ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿದ್ದು ಕೋಲಾರ ಕ್ಷೇತ್ರಕ್ಕೆ ಮಲ್ಲೇಶ ಬಾಬು ಜೆಡಿಎಸ್ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಹಾಸನದಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠರಾಗಿರುವ ಎಚ್ ಡಿ ದೇವೇಗೌಡ ಕೋಲಾರದಲ್ಲಿ ಅಭ್ಯರ್ಥಿ ಮಲ್ಲೇಶ ಬಾಬು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದ್ದಾರೆ. ಈ ಕುರಿದಂತೆ ಮಾತನಾಡಿದ ಅವರು ಕೋಲಾರಕ್ಕೆ ಬೇರೆಯವರ ಪ್ರಶ್ನೆಯೇ ಬರಲ್ಲ. ಮಲ್ಲೇಶ ಬಾಬು ಈ ಬಾರಿಯ ಲೋಕಸಭೆ ಚುನಾವಣೆ ಅಭ್ಯರ್ಥಿ.ಕೋಲಾರ ಕ್ಷೇತ್ರಕ್ಕೆ ಮಲ್ಲೇಶ್ ಬಾಬು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹಾಸನದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಸ್ ಡಿ ದೇವೇಗೌಡ ಘೋಷಿಸಿದ್ದಾರೆ.

Read More

ಬೆಂಗಳೂರು : ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಕತರ್ನಾಕ್ ಅಂತರಾಜ್ಯ ಕಳ್ಳರ ಗ್ಯಾಂಗ್ ನನ್ನು ಇದೀಗ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಪ್ರಯಾಣಿಕರಿಗೆ ಪ್ರಜ್ಞೆ ತಪ್ಪುವ ವಸ್ತು ನೀಡಿ ಇವರು ಕಳ್ಳತನ ಮಾಡುತ್ತಿದ್ದರು. ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ ಹಣ ದೋಚುತ್ತಿದ್ದರು ಎನ್ನಲಾಗುತ್ತಿದೆ. https://kannadanewsnow.com/kannada/bell-lays-off-400-employees-in-10-minutes-calls-it-shameful/ ಇದೀಗ ರೈಲ್ವೆ ಪೊಲೀಸ್ರಿಂದ ಮೂರು ಆರೋಪಿಗಳನ್ನು ಬಂದಿಸಲಾಗಿದೆ. ಆರೋಪಿಗಳಿಂದ 24 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನ ಮಹಮ್ಮದ್ ಶೌಕತ್ ಅಲಿ, ಮಹಮ್ಮದ್ ಸತ್ತರ್, ಮೊಹಮ್ಮದ್ ಆಸಾಫ್ ಬಂಧಿತ ಆರೋಪಿಗಳು ಎಂದು ಹೇಳಲಾಗುತ್ತಿದೆ. ದರೋಡೆ ಹೇಗೆ? ಆರೋಪಿಗಳು ಸಂಪೂರ್ಣ ನಕಲಿ ದಾಖಲೆ ನೀಡಿ ಟಿಕೆಟ್ ಬುಕ್ ಮಾಡುತ್ತಿದ್ದರು ಎನ್ನಲಾಗುತ್ತಿದೆ. ನಂತರ ಪ್ರಯಾಣಿಕರ ಜೊತೆ ಪರಿಚಯ ದವರಂತೆ ಮಾತಿಗೆಳೆಯುತ್ತಾರೆ.ಎರಡು ದಿನಗಳ ಕಾಲ ಪ್ರಯಾಣ ಮಾಡುವಾಗ ಪರಿಚಯ ಮಾಡಿಕೊಳ್ಳುತ್ತಾರೆ. ಬೇರೆ ಪ್ರಯಾಣಿಕರ ಜೊತೆ ಊಟ ತಿಂಡಿ ಕೂಡ ಮಾಡುತ್ತಿದ್ದರು. https://kannadanewsnow.com/kannada/breaking-udupi-two-people-drown-ed-after-they-went-fishing-in-the-water/ ಅಲ್ಲದೆ ತುಂಬಾ ಕ್ಲೋಸ್ ಆಗುತ್ತಿದ್ದರು. ಸರಿಯಾದ ಸಮಯ ನೋಡಿ ಕೋಲ್ಡ್ರಿಂಗ್ಸ್ ನಲ್ಲಿ ಮತ್ತು ಬರುವ ಔಷಧಿ…

Read More

ಉಡುಪಿ : ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ನಡೆದಿದೆ. ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತ ರ್ದುದೈವಿಗಳು ಎಂದು ಹೇಳಲಗುತ್ತಿದೆ. ಮೀನು ಹಿಡಿಯಲೆಂದು ಇಂದು(ಮಾ.26) ಬೆಳಿಗ್ಗೆ ನಾಗರ ಮಠದ ಸೀತಾ ನದಿಗೆ ಹೋಗಿದ್ದರು. ಈ ವೇಳೆ ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ನೀರು ಪಾಲಾಗಿದ್ದಾರೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Read More