Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಕಳೆದ ವರ್ಷ ಡಿಸೆಂಬರ್ ನಲ್ಲಿ ಹುಬ್ಬಳ್ಳಿಯಲ್ಲಿ ದಲಿತ ಯುವಕನನ್ನ ಅಂತರ್ಜಾತಿ ವಿವಾಹ ಆಗಿದ್ದಕ್ಕೆ, ಯುವತಿಯ ತಂದೆ ಮನೆಗೆ ನುಗ್ಗಿ ಗರ್ಭಿಣಿ ಅಂತಾನೂ ನೋಡದೆ ಕೊಡಲಿಯಿಂದ ಕೊಚ್ಚಿ ಮಗಳನ್ನೇ ಹತ್ಯೆಗೈದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಇದೀಗ ಈ ಒಂದು ಘಟನೆಯನ್ನು ಖಂಡಿಸಿದ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ರಾಜ್ಯದಲ್ಲಿ ‘ಮರ್ಯಾದಾ ಹತ್ಯೆ’ ತಡೆಗೆ ಶೀಘ್ರ ವಿಶೇಷ ಕಾನೂನು ರಚನೆ ಜಾರಿಗೊಳಿಸಲಾಗುತ್ತೆ ಎಂದು ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಇಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ಇದು ಅಟ್ರಾಸಿಟಿ ಪ್ರಕರಣವಾಗಿರುವುದರಿಂದ 60 ದಿನಗಳ ಒಳಗಾಗಿ ದೋಷರೋಪ ಪಟ್ಟಿ ಸಲ್ಲಿಸಬೇಕಾಗಿದೆ. ಹೀಗಾಗಿ ಖಾಸಗಿ ಪ್ರಾಸಿಕ್ಯೂಟರ್‌ರನ್ನು ನೇಮಕ ಮಾಡಿಕೊಳ್ಳಲು ಕ್ರಮ…

Read More

ಬೆಂಗಳೂರು : ಮಂಡ್ಯ ಬಳಿಕ ಇದೀಗ ಬೆಂಗಳೂರಲ್ಲಿ ಕಿಡಿಗೇಡಿಗಳಿಂದ ಮತ್ತೆ ಕಲ್ಲು ತೂರಾಟ ನಡೆದಿದ್ದು, ದೇವಿಯ ತೇರು ಎಳೆಯುತ್ತಿರುವ ವೇಳೆ ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿರುವ ಘಟನೆ ಚಾಮರಾಜಪೇಟೆ ಬಳಿಯ ಜೆ.ಜೆ.ನಗರ (ಜಗಜೀವನ್ ರಾಮ್ ನಗರ) ಠಾಣೆವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಜೆ.ಜೆ.ನಗರದ ವಿ.ಎಸ್. ಗಾರ್ಡನ್‌ ಓಂ ಶಕ್ತಿ ದೇವಸ್ಥಾನದ ಬಳಿ ಭಾನುವಾರ ರಾತ್ರಿ 8 ಗಂಟೆಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ವರದರಾಜು ಎಂಬುವರ ಅಪ್ರಾಪ್ತ ಮಗಳ ತಲೆಗೆ ಗಂಭೀರವಾದ ಗಾಯವಾಗಿದೆ. ಜತೆಗೆ ಇಬ್ಬರು ಮಹಿಳೆಯ ಕಾಲಿಗೆ ಗಾಯವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಜೆ.ಜೆ ನಗರ ಠಾಣೆ ಪೊಲೀಸರು ಮತ್ತು ಎಸಿಪಿ ಭರತ್‌ರೆಡ್ಡಿ ಸೇರಿ ಹಿರಿಯ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದ ಸಿಡಿದೆದ್ದಿರುವ ಓಂ ಶಕ್ತಿ ಮಾಲಾಧಾರಿಗಳು ಮತ್ತು ನೂರಾರುಸ್ಥಳೀಯರು ಜೆ.ಜೆ ನಗರ ಠಾಣೆ ಮುಂದೆ ಜಮಾಯಿಸಿ ಕಲ್ಲು ತೂರಿದವರ ವಿರುದ್ಧ ಕಠಿಣ ಕ್ರಮಜರುಗಿಸಬೇಕೆಂದು ಆಗ್ರಹಿಸಿಪ್ರತಿಭಟನೆ ನಡೆಸಿದ್ದಾರೆ.…

Read More

ಉಡುಪಿ : ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ನಲ್ಲಿ ಕಳ್ಳತನ ನಡೆದಿದ್ದು ಮೇಲ್ಚಾವಣಿಗೆ ಹಾಕಿದ್ದ ತಾಮ್ರದ ಹೊದಿಕೆಯನ್ನು ಕಳ್ಳರು ಕದ್ದಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ನಲ್ಲಿ ಒಂದು ಕಳ್ಳತನ ನಡೆದಿದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಒಂದು ಪರಶುರಾಮ್ ಥೀಮ್ ಪಾರ್ಕ್ ನಿರ್ಮಾಣಗೊಂಡಿತ್ತು. ಶಾಸಕ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಈ ಒಂದು ಯೋಜನೆಯ ರೂಪುಗೊಂಡಿತ್ತು. ಇದೀಗ ಮೇಲ್ಚಾವಣಿಯಲ್ಲಿ ಇರುವಂತಹ ತಾಮ್ರದ ಹೊದಿಕೆಯನ್ನು ಕಳ್ಳರು ಕದ್ದಿದ್ದಾರೆ. ರಾಜಕೀಯ ಕೆಸರೆರಚಾಟಕ್ಕೆ ಥೀಮ್ ಪಾರ್ಕ್ ನೆನೆಗುದಿಗೆ ಬಿದ್ದಿದೆ ಎಂದು ಉಡುಪಿ ಜಿಲ್ಲಾ ಆಡಳಿತದ ವೈಫಲ್ಯಕ್ಕೆ ಇದೀಗ ಶಾಸಕ ವಿ.ಸುನಿಲ್ ಕುಮಾರ್ ಕಿಡಿ ಕಾರಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ಇತಿಹಾಸದಲ್ಲೇ ಇದೊಂದು ದುರ್ದಿನ. ಸ್ಥಳೀಯ ಕಾಂಗ್ರೆಸ್ ಮುಖಂಡರ ದ್ವೇಷದಿಂದ ಹೀಗಾಗಿದೆ. ಎರಡು ವರ್ಷದಿಂದ ಥೀಮ್ ಪಾರ್ಕ್ ಯೋಜನೆಗೆ ಬಿಡಿಗಾಸು ಕೊಟ್ಟಿಲ್ಲ. ಅನುದಾನವಿಲ್ಲದೆ ಎರಡು ವರ್ಷಗಳಿಂದ ಥೀಮ್ ಪಾರ್ಕ್ ಪಾಳು ಬಿದ್ದಿದೆ. ಎಂದು ಸಾಮಾಜಿಕ ಜಾಲತಾಣದಲ್ಲಿ ಶಾಸಕ ಸುನಿಲ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ.

Read More

ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ವಿಚಾರಕ್ಕೆ ಸಂಭಂದಪಟ್ಟಂತೆ ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದಾನೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಸತೀಶ್ ರೆಡ್ಡಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಗನ್ ನಿಂದಲೇ ಬುಲೆಟ್ ಫೈರ್ ಆಗಿರೋದು ತನಿಖೆಯಲ್ಲಿ ಬಯಲಾಗಿದೆ. ಹೌದು ಸತೀಶ್ ರೆಡ್ಡಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಗನ್ ನಿಂದಲೇ ಬುಲೆಟ್ ಫೈರ್ ಆಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಗೆ ಗುಂಡೇಟು ತಗುಲಿದ್ದು ಬಯಲಾಗಿದೆ. ಇದೀಗ ಗುರುಚರಣ್ ಸಿಂಗ್ ನನ್ನ ಪೊಲೀಸದು ಅರೆಸ್ಟ್ ಮಾಡಿದ್ದಾರೆ. ಗನ್ ಮ್ಯಾನ್ ಗುರುಚರಣ್ ಸಿಂಗ್ ಗನ್ ನಿಂದಲೇ ಬುಲೆಟ್ ಫೈರ್ ಆಗಿದೆ. ರಾಜಶೇಖರ್ ದೇಹದಲ್ಲಿ ಗುರುಚರಣ್ ಸಿಂಗ್ ಗನ್ ಬುಲೆಟ್ ಪತ್ತೆಯಾಗಿದೆ. ಗುರುಚರಣ್ ಸಿಂಗ್ ಗನ್ ನಿಂದ ಬುಲೆಟ್ ಹಾರಿದೆ ಎಂಬ ಮಾಹಿತಿ ತಿಳಿದುಬಂದಿದೆ. ಇನ್ನು ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳಾದ ಬಲ್ಜಿತ್ ಸಿಂಗ್, ಮಹೇಂದ್ರ ಸಿಂಗ್, ಗುರುಚರಣ್ ಸಿಂಗ್, ಶಾಸಕ ಭರತತ್ ರೆಡ್ಡಿ ಸರ್ಕಾರಿ…

Read More

ಬೆಂಗಳೂರು : ಕಳೆದ ವರ್ಷ ಡಿಸೆಂಬರ್ ನಲ್ಲಿ ಹುಬ್ಬಳ್ಳಿಯಲ್ಲಿ ದಲಿತ ಯುವಕನನ್ನ ಅಂತರ್ಜಾತಿ ವಿವಾಹ ಆಗಿದ್ದಕ್ಕೆ, ಯುವತಿಯ ತಂದೆ ಮನೆಗೆ ನುಗ್ಗಿ ಗರ್ಭಿಣಿ ಅಂತಾನೂ ನೋಡದೆ ಕೊಡಲಿಯಿಂದ ಕೊಚ್ಚಿ ಮಗಳನ್ನೇ ಹತ್ಯೆಗೈದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಇದೀಗ ಈ ಒಂದು ಘಟನೆಯನ್ನು ಖಂಡಿಸಿದ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ರಾಜ್ಯದಲ್ಲಿ ‘ಮರ್ಯಾದಾ ಹತ್ಯೆ’ ತಡೆಗೆ ಶೀಘ್ರ ವಿಶೇಷ ಕಾನೂನು ರಚನೆ ಜಾರಿಗೊಳಿಸಲಾಗುತ್ತೆ ಎಂದು ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಇಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ಇದು ಅಟ್ರಾಸಿಟಿ ಪ್ರಕರಣವಾಗಿರುವುದರಿಂದ 60 ದಿನಗಳ ಒಳಗಾಗಿ ದೋಷರೋಪ ಪಟ್ಟಿ ಸಲ್ಲಿಸಬೇಕಾಗಿದೆ. ಹೀಗಾಗಿ ಖಾಸಗಿ ಪ್ರಾಸಿಕ್ಯೂಟರ್‌ರನ್ನು ನೇಮಕ ಮಾಡಿಕೊಳ್ಳಲು ಕ್ರಮ…

Read More

ಬೆಂಗಳೂರು : 2025 ನೇ ಸಾಲಿನಲ್ಲಿ ಅಂಗಾಂಗ ದಾನ ಕಾರ್ಯದಲ್ಲಿ ಇಡೀ ದೇಶದಲ್ಲಿ ಕರ್ನಾಟಕ ಮೂರನೇ ಸ್ಥಾನ ಪಡೆದುಕೊಂಡಿದೆ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಷ ಖಾತೆಯ ಮೂಲಕ ಈ ಒಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಇದು ಕರ್ನಾಟಕಕ್ಕೆ ಹೆಮ್ಮೆಯ ಕ್ಷಣ.​ಅಂಗಾಂಗ ದಾನ ಕಾರ್ಯದಲ್ಲಿ ಕರ್ನಾಟಕ 2025ನೇ ಸಾಲಿನಲ್ಲಿ ದೇಶದಲ್ಲೇ 3ನೇ ಸ್ಥಾನ ಪಡೆದಿದೆ. ಕಳೆದ ವರ್ಷ 198 ದಾನಿಗಳಿಂದ 564 ಅಂಗಾಂಗಗಳ ಕಸಿ ಮಾಡುವ ಮೂಲಕ ನೂರಾರು ಜೀವಗಳಿಗೆ ಮರುಜನ್ಮ ಸಿಕ್ಕಿದಂತಾಗಿದೆ. ​ ಮುಖ್ಯ ಅಂಕಿ-ಅಂಶಗಳು (2025): ​ಒಟ್ಟು ದಾನಿಗಳು: 198 ​ಕಿಡ್ನಿ: 306 ಲಿವರ್: 167 ಹೃದಯ: 50 ಶ್ವಾಸಕೋಶ: 29 ​ಕಣ್ಣು (Cornea): 288 ರಾಜ್ಯದಲ್ಲಿ 2016 ರಿಂದ ಈವರೆಗೂ ದಾನಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬರುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಅಂಗಾಂಗ ದಾನವು ಕೇವಲ ಒಂದು ಕೊಡುಗೆಯಲ್ಲ, ಅದು ಮತ್ತೊಬ್ಬರಿಗೆ ನೀಡುವ ಜೀವದಾನ. ಹಾಗಾಗಿ ಇಡೀ ರಾಜ್ಯದ ಜನತೆಯಲ್ಲಿ ವಿನಂತಿಸುವೆ, ‘ಜೀವಸಾರ್ಥಕತೆ’ ಕಾರ್ಯಕ್ರಮದೊಂದಿಗೆ ಕೈಜೋಡಿಸೋಣ ಅಂಗಾಂಗ ದಾನ…

Read More

ಬೆಂಗಳೂರು : ಬೆಂಗಳೂರಿನ ಜನತೆಗೆ ಜಿಬಿಎ ಮತ್ತೊಂದು ಶಾಕ್ ನೀಡಿದ್ದು, ಇನ್ಮುಂದೆ ರೋಡ್ ಸೈಡ್ ಪಾರ್ಕ್ ಮಾಡುವ ವಾಹನಗಳಿಗೆ ಶುಲ್ಕ ವಿಧಿಸುವ ಹೊಸ ನಿಯಮವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಶೀಘ್ರದಲ್ಲಿ ಜಾರಿಗೊಳಿಸಲಿದೆ. ಹೌದು ಸಿಲಿಕಾನ್‌ ಸಿಟಿ ಜನರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಶೀಘ್ರದಲ್ಲೇ ಸ್ಟ್ರೀಟ್‌ ಪಾರ್ಕಿಂಗ್‌ ನಿಯಮ ಜಾರಿಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಬೆಂಗಳೂರಿನಲ್ಲಿ ರಸ್ತೆ ಬದಿಯಲ್ಲಿ ವಾಹನ ಪಾರ್ಕಿಂಗ್‌ ಮಾಡುವುದಕ್ಕೂ ಕಾಸು ಕೊಡಬೇಕಾಗುತ್ತದೆ. ಸದ್ಯ ಪ್ರಾಯೋಗಿಕವಾಗಿ ಸ್ಟ್ರೀಟ್‌ನಲ್ಲಿ ಪೇ & ಪಾರ್ಕಿಂಗ್ ರೂಲ್ಸ್ ಜಾರಿಗೆ ತರಲು ಜಿಬಿಎ ಸಿದ್ಧತೆ ನಡೆಸಿದೆ. ಸ್ಟ್ರೀಟ್ ಪಾರ್ಕಿಂಗ್ ದರ ಎಷ್ಟು‌? ಸ್ಟ್ರೀಟ್ ಪಾರ್ಕಿಂಗ್ ಗೆ 1 ಗಂಟೆಗೆ ಫೋರ್ ವ್ಹೀಲರ್‌ಗೆ 30 ರೂ. ಒಂದು ದಿನಕ್ಕೆ 150 ರೂ. ಹಾಗು ತಿಂಗಳ ಪಾಸ್ ವ್ಯವಸ್ಥೆಗೆ 3,000 ರೂ.ನಿಗದಿ ಪಡಿಸಲಾಗಿದೆ. ಇನ್ನು ದ್ವಿಚಕ್ರ ವಾಹನಕ್ಕೆ 1 ಗಂಟೆಗೆ 15 ರೂ. ಒಂದು ದಿನಕ್ಕೆ 75 ರೂ ಹಾಗು ತಿಂಗಳಿಗೆ 1,500 ರೂ ನಿಗದಿಪಡಿಸಲಾಗಿದೆ.…

Read More

ಉತ್ತರಕನ್ನಡ : ಅಡುಗೆ ಅನಿಲ ಸೋರಿಕೆಯಾಗಿ ಮನೆಗೆ ದಿಡೀರ್ ಎಂದು ಬೆಂಕಿ ಹತ್ತಿಕೊಂಡಿರುವ ಘಟನೆ ಕೆಣಿ ಗ್ರಾಮದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೇಣಿ ಎಂಬ ಗ್ರಾಮದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಗ್ರಾಮದ ಸುದರ್ಶನ ಎಂಬುವವರ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಈ ಒಂದು ಅಗ್ನಿ ಅನಾಹುತದಲ್ಲಿ 12 ವರ್ಷದ ಬಾಲಕಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಂಕೋಲ ಸಿಪಿಐ ಹಿರೇಮಠ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.

Read More

ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ವಿಚಾರಕ್ಕೆ ಗಲಾಟೆ ನಡೆದು ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವಿಪಕ್ಷ ನಾಯಕ ಆರ್ ಅಶೋಕ ಗಂಭೀರವಾದ ಆರೋಪ ಮಾಡಿದ್ದು, ಶಾಸಕ ಜನಾರ್ಧನ ರೆಡ್ಡಿ ಅವರನ್ನು ಮುಗಿಸಲು ಸಂಚು ಮಾಡಿದ್ದಾರೆ ಎಂದು ಗಂಭೀರವಾದ ಆರೋಪ ಮಾಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಜನಾರ್ದನ ರೆಡ್ಡಿ ಅವರನ್ನು ಮುಗಿಸಲು ನಡೆಸಿರುವ ಸಂಚು ಇದಾಗಿದೆ. ಸ್ಥಳಕ್ಕೆ ಮಾಜಿ ಸಚಿವ ಶ್ರೀರಾಮುಲು ಅವರು ಬರದಿದ್ದರೆ ದೊಡ್ಡ ಅನಾಹುತವೇ ಆಗುತ್ತಿತ್ತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿ ಹೋಗಿದೆ. ಘಟನೆ ನಡೆದ ತಕ್ಷಣ ಗೃಹ ಸಚಿವ ಜಿ ಪರಮೇಶ್ವರ್ ಯಾರ ಮೇಲೆ ಗುಂಡು ಹಾರಿಸಿದರು ಅವರಿಗೆ ಕರೆ ಮಾಡಬೇಕಿತ್ತು. ಏನಾದರೂ ಅಪಾಯ ಆಗಿದೆಯಾ? ಏನಾದರೂ ತೊಂದರೆ ಆಗಿದೆಯಾ? ನಿಮಗೆ ಸೆಕ್ಯೂರಿಟಿ ಬೇಕಾ? ಅಂತ ಕರೆ ಮಾಡಬೇಕಾಗಿತ್ತು ಆದರೆ ಅವರು ಅಪರಾಧಿಗೆ ಕರೆ ಮಾಡಿದ್ದಾರೆ ಎಂದು ಕಿಡಿ ಕಾರಿದರು.

Read More

ಹುಬ್ಬಳ್ಳಿ : ಮದುವೆಗೆ ಒಪ್ಪದಿದ್ದಕ್ಕೆ ವಿಚ್ಛೇದಿತ ಮಹಿಳೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹತ್ಯೆಯಾದ ರಂಜಿತಾ ಮನೆಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿದರು. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕಾಳಮ್ಮನಗರದಲ್ಲಿರುವ ರಂಜಿತ ನಿವಾಸಕ್ಕೆ ಭೇಟಿ ನೀಡಿದರು. ನಿನ್ನೆ ಚಾಕುವಿನಿಂದ ಇರಿದು ರಂಜಿತ (30) ರಫೀಕ್ ಭೀಕರವಾಗಿ ಕೊಲೆ ಮಾಡಿದ್ದ. ಇಂದು ಬೆಳಗ್ಗೆ ಕೊಲೆ ಆರೋಪಿ ರಫೀಕ್ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಸದ್ಯ ರಂಜಿತಾ ಮನೆಗೆ ಭೇಟಿ ನೀಡಿದ ಬಿವೈ ವಿಜಯೇಂದ್ರ ರಂಜಿತಾ ಕುಟುಂಬಕ್ಕೆ ಬಿಜೆಪಿಯಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

Read More