Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿ ಆಗಿರುವ ನಟಿ ಪವಿತ್ರ ಗೌಡ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಈ ಒಂದು ಅರ್ಜಿ ವಿಚಾರಣೆ ನಡೆಸಿದ ಜಡ್ಜ್ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಿ ಆದೇಶ ಹೊರಡಿಸಿದರು. ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ ಎಂದು ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆದಂದು ಪಟ್ಟಣಗೆರೆ ಶೆಡ್ನಲ್ಲಿ ನಟ ದರ್ಶನ್ ಸೇರಿದಂತೆ ಆತನ ಸಹಚರರು ಸೇರಿ ರೇಣುಕಾ ಸ್ವಾಮಿಯನ್ನು ಭೀಕರವಾಗಿ ಕೊಂದಿದ್ದರು. ಈ ಒಂದು ಕೊಲೆಯಲ್ಲಿ ಪವಿತ್ರ ಗೌಡ ಸೇರಿದಂತೆ ನಟ ದರ್ಶನ್ ಹಾಗೂ ಎಲ್ಲಾ 17 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ಬಟ್ಟೆಯ ಮೇಲೆ ರೇಣುಕಾ ಸ್ವಾಮಿಯ ರಕ್ತದ ಕಲೆ ಹಾಗೂ ಪವಿತ್ರ ಗೌಡ ಚಪ್ಪಲಿಯಲ್ಲೂ ರೇಣುಕಾ ಸ್ವಾಮಿಯ ರಕ್ತದ ಕಲೆಗಳು ಪತ್ತೆಯಾಗಿವೆ ಎಂದು ಪೊಲೀಸರು ಉಲ್ಲೇಖಿಸಿ ಕೋರ್ಟಿಗೆ ಸಲ್ಲಿಸಿದರು. ಬಳಿಕ ನಟ ದರ್ಶನ್,…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ಕೊಲೆ ಆರೋಪಿ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಅಲ್ಲಿ ಅವರಿಗೆ ರಾಜಾತಿಥ್ಯ ನೀಡಿದ ವಿಚಾರವಾಗಿ ನಂತರ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಇದೀಗ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಹಣದ ಆಸೆಗೆ ಜೈಲಾಧಿಕಾರಿಗಳೇ ಈ ಒಂದು ರಾಜಾತಿಥ್ಯ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ನಟ ದರ್ಶನ್ ಹಾಗೂ ರೌಡಿಶೀಟರ್ ನಾಗ ಸೇರಿದಂತೆ ಹಲವು ರೌಡಿಶೀಟರ್ ಗಳು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕುರ್ಚಿಯ ಮೇಲೆ ಕುಳಿತುಕೊಂಡು ಕಾಫಿ ಕುಡಿಯುತ್ತಾ, ಒಂದು ಕೈಯಲ್ಲಿ ಸಿಗರೇಟ್ ಸೇದುತ್ತಾ ಕುಳಿತಿದ್ದ ಫೋಟೋ ಭಾರಿ ವೈರಲ್ ಆಗಿತ್ತು. ಈ ಕುರಿತು ಜೈಲಲ್ಲೇ 3 ಪ್ರಕರಣ ದಾಖಲಾಗಿದ್ದವು.ಈ ಒಂದು ಘಟನೆಯ ಬಳಿಕ ನಟ ದರ್ಶನ್ ಸೇರಿದಂತೆ ಎಲ್ಲಾ ರೌಡಿಶೀಟರ್ ಗಳನ್ನು ಬೇರೆ ಬೇರೆ ಜಿಲ್ಲಾ ಕೇಂದ್ರ ಕಾರಾಗೃಹಗಳಿಗೆ ಶಿಫ್ಟ್ ಮಾಡಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ ಕೆಲ ಅಧಿಕಾರಿ…
BREAKING : ಹುಬ್ಬಳ್ಳಿ: ಹುಡುಗಿಗೆ ಚುಡಾಯಿಸಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಮಹಿಳೆಗೆ ಚಾಕು ಇರಿತ : ಆರೋಪಿ ಅರೆಸ್ಟ್!
ಹುಬ್ಬಳ್ಳಿ : ಕಳೆದ ಕೆಲವು ತಿಂಗಳ ಹಿಂದೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ್ ಹಾಗೂ ಅಂಜಲಿ ಅಂಬಿಗರ ಕೊಲೆ ಪ್ರಕರಣ ಇಡೀ ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಿತ್ತು. ಇದೀಗ ಹುಬ್ಬಳ್ಳಿಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಹುಡುಗಿಗೆ ಚುಡಾಯಿಸಬೇಡ ಎಂದು ಮಹಿಳೆಯೊಬ್ಬರು ಯುವಕನಿಗೆ ಬುದ್ಧಿ ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಯುವಕ ಮಹಿಳೆಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿಯ ಲೋಹಿಯ ನಗರದಲ್ಲಿ ನಡೆದಿದೆ. ಹೌದು ಹುಬ್ಬಳ್ಳಿಯ ಲೋಹಿಯ ನಗರದಲ್ಲಿ ಮಹಿಳೆಗೆ ಚಾಕು ಹಿಡಿದಿರುವ ಘಟನೆ ನಡೆದಿದೆ. ನೀಲಾ ಹಡಪದ ಎನ್ನುವ ಮಹಿಳೆಗೆ ಮಹೇಶ ವ್ಯಕ್ತಿ ಚಾಕು ಇರಿದು ಪರಾರಿಯಾಗಿದ್ದಾನೆ. ಹುಡುಗಿ ಚುಡಾಯಿಸಿದ್ದಕ್ಕೆ ನೀಲಾ ಮಹೇಶ್ ಗೆ ಬುದ್ಧಿ ಹೇಳಿದರು. ಬುದ್ಧಿ ಹೇಳಿದ್ದಕ್ಕೆ ಆಕ್ರೋಶಗೊಂಡು ನೀಲಾಗೆ ಮಹೇಶ್ ಚಾಕು ಇರದಿದ್ದಾನೆ. ಮಹೇಶ್ ನೀಲಾ ಹಡಪದಿಗೆ ಚಾಕು ಇರಿದು ಪರಾರಿ ಆಗಿದ್ದಾನೆ. ಕೂಡಲೇ ಪೊಲೀಸರು ಆರೋಪಿ ಮಹೇಶನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಗಾಯಾಳು ನೆಲಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ…
ಬೆಂಗಳೂರು : ಕೆ.ಪಿ.ಎಸ್.ಸಿ.ಯಲ್ಲಿ ಯುಪಿಎಸ್ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು. ನೇಮಕಾತಿ ಪ್ರಕ್ರಿಯೆಗಳ ವಿಳಂಬದ ಕುರಿತು, ಕಾನೂನು ತೊಡಕುಗಳ ಕುರಿತು ಹಾಗೂ 371 ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ಸವಾಲುಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.ಪ್ರತಿವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಲು ಸೂಚಿಸಿದರು. ಪರೀಕ್ಷಾ ವೇಳಾಪಟ್ಟಿಯಲ್ಲಿ ಫಲಿತಾಂಶ ಪ್ರಕಟಣೆಯ ದಿನಾಂಕ ನಿಗದಿಪಡಿಸಲು ಸೂಚಿಸಲಾಯಿತು. ಸಿಬ್ಬಂದಿ ಕೊರತೆ, ವಿವಿಧ ನೇಮಕಾತಿ ಪ್ರಾಧಿಕಾರಗಳ ಪರೀಕ್ಷೆಗಳೊಂದಿಗೆ ದಿನಾಂಕ ಕ್ಲಾಷ್ ಆಗದಂತೆ ನೋಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ನ್ಯೂನ್ಯತೆಯೂ ನೇಮಕಾತಿ ವಿಳಂಬಕ್ಕೆ ಒಂದು ಕಾರಣ ಎಂದು ಸಭೆಗೆ ವಿವರಿಸಲಾಯಿತು. ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಎತ್ತಿ ಹಿಡಿದು, ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಚಗೊಳಿಸಿತ್ತು. ಇದರ ಬೆನ್ನಲ್ಲೇ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ತನಿಖೆಗೆ ಆದೇಶ ನೀಡಿದೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ, ಮುಡಾ ಹಗರಣದಲ್ಲಿ ಯಾವ ಬ್ಲ್ಯಾಕ್ ಮಾರ್ಕ್ ಇಲ್ಲ ಸಿದ್ದರಾಮಯ್ಯ ಆರೋಪ ಮುಕ್ತರಾಗಿ ಹೊರ ಬರುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮುಡಾ ಹಗರಣದಲ್ಲಿ ಅಧಿಕಾರಿಗಳು ತಪ್ಪು ಮಾಡಿರಬಹುದು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಕೋರ್ಟ್ ತನಿಖೆಗೆ ಆದೇಶ ನೀಡಿದೆ. ತನಿಖೆ ನಡೆದ ಮೇಲೆ ಎಲ್ಲಾ ಗೊತ್ತಾಗುತ್ತದೆ ಎಂದರು. ಮುಡಾ ಪ್ರಕರಣದಲ್ಲಿ ಯಾವ ಬ್ಲಾಕ್ ಮಾರ್ಕ್ ಕೂಡ ಆಗಿಲ್ಲ. ಯಾವ ಬ್ಲ್ಯಾಕ್ ಮಾರ್ಕ್ ಸಹ ಆಗಿಲ್ಲ ಮಾರ್ಕೆ ಆಗಿಲ್ಲ ಬ್ಲಾಕ್ ಮಾರ್ಕ್ ಎಲ್ಲಿಂದ ಬರುತ್ತೆ?…
ಉತ್ತರಕನ್ನಡ : ಇದೇ ಸಪ್ಟೆಂಬರ್ 22 ರಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಉದ್ಯಮಿ ವಿನಾಯಕರನ್ನು ಬೆಳ್ಳಂ ಬೆಳಿಗ್ಗೆ ಅವರ ಮನೆಯಲ್ಲೇ ದುಷ್ಕರ್ಮಿಗಳು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಈ ಒಂದು ಕೊಲೆಗೆ ಸಂಬಂಧಪಟ್ಟಂತೆ ಕೊಲೆಗೆ ಸುಪಾರಿ ನೀಡಿದ್ದ ಮತ್ತೊಬ್ಬ ಉದ್ಯಮಿ ಇದೀಗ ಗೋವಾದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಸೆಪ್ಟೆಂಬರ್ 22ರಂದು ಕಾರವಾರದಲ್ಲಿ ವಿನಾಯಕ್ ಹತ್ಯೆ ನಡೆದಿತ್ತು. ಗುರುಪ್ರಸಾದ್ ರಾಣೆ ಈ ಒಂದು ಕೊಲೆಗೆ ಸುಪಾರಿ ಕೊಟ್ಟಿದ್ದರು ಎಂದು ಹಂತಕರು ಪೋಲೀಸರ ವಿಚಾರಣೆ ವೇಳೆ ಬಾಯಿಬಿಟ್ಟಿದ್ದರು. ಹಂತಕರ ಹೇಳಿಕೆಯ ಮೇಲೆ ಬಳಿಕ ಗೋವಾ ಮೂಲದ ಉದ್ಯಮಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಯಾವಾಗ ಹಂತಕರು ಗುರುಪ್ರಸಾದ್ ರಾಣೆ ಅವರ ಹೆಸರು ಹೇಳಿದರೊ, ಇದೀಗ ಇಂದು ಗುರುಪ್ರಸಾದ ರಾಣೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉದ್ಯಮಿ ವಿನಾಯಕ್ ಹತ್ಯೆಗೆ ಸುಪಾರಿ ಕೊಟ್ಟ ಗುರುಪ್ರಸಾದ ರಾಣೆ ಗೋವಾದ ಮಾಂಡೋವಿ ನದಿಯಲ್ಲಿ ಇದೀಗ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ನಿನ್ನೆ ಹೈಕೋರ್ಟ್ ವಜಾ ಮಾಡಿದೆ.ಇದರ ಬೆನ್ನಲ್ಲೆ ಇಂದು ಜನಪ್ರತಿನಿಧಿಗಳ ಕೋರ್ಟ್ ಸಹ ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಹಾಗಾಗಿ ಈ ಒಂದು ಹಗರಣದಲ್ಲಿ ಸಿದ್ದರಾಮಯ್ಯ ನಾಳೆಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಸ್ಪೋಟಕ ಹೇಳಿಕೆ ನೀಡಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ,ಸಿಎಂ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ಮಾಡುತ್ತೇವೆ.ತಕ್ಷಣ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಸಿಎಂ ರಾಜೀನಾಮೆಗೆ ಆಗ್ರಹಿಸಿ ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ಮಾಡುತ್ತೇವೆ. ಯಾವುದೇ ತನಿಖೆಗೆ ಸಿದ್ಧ ಎಂದು ಸಿಎಂ ಹೇಳಿದ್ದಾರೆ. ಈಗ ಸಿದ್ದರಾಮಯ್ಯ ತನಿಖೆಗೆ ಸಹಕಾರ ನೀಡಬೇಕು ಎಂದು ಹೇಳಿದ್ದಾರೆ. ಭಂಡತನ ಬಿಟ್ಟು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯದ ಸಿಎಂ ಸಿದ್ದರಾಮಯ್ಯ ಇಂದು ಬೆತ್ತಲಾಗಿದ್ದಾರೆ. ಬಿಜೆಪಿ…
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವೈಯ್ಯಾಲಿಕಾವಲ್ ನಲ್ಲಿ ನೇಪಾಳಿ ಮೂಲದ ಮಹಾಲಕ್ಷ್ಮಿ ಎನ್ನುವ ಮಹಿಳೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿಯ ಫೋಟೋ ಪತ್ತೆಯಾಗಿದ್ದು, ಹಂತಕನನ್ನು ಒರಿಸ್ಸಾ ಮೂಲದ ಮಹಾಲಕ್ಷ್ಮಿಯ ಸಹೋದ್ಯೋಗಿ ಮುಕ್ತಿ ರಂಜನ್ ರಾಯ್ ಎಂದು ತಿಳಿದು ಬಂದಿದೆ. ಹೌದು ಒರಿಸ್ಸಾ ಮೂಲದ ಮುಕ್ತಿ ರಂಜನ್ ರಾಯ್ ಹೆಬ್ಬಗೋಡಿಯಲ್ಲಿ ನೆಲೆಸಿದ್ದನು. ತಮ್ಮನೊಂದಿಗೆ ಹೆಬ್ಬಗೋಡಿಯಲ್ಲಿ ವಾಸವಿದ್ದು ಪ್ರತಿನಿತ್ಯ ಮಲ್ಲೇಶ್ವರಂನ ಫ್ಯಾಶನ್ ಫ್ಯಾಕ್ಟರಿಯಲ್ಲಿ ಟೀಂ ಹೆಡ್ ಆಗಿ ಕೆಲಸ ಮಾಡುತ್ತಿದ್ದನು. ಈ ವೇಳೆ ಅದೇ ಸ್ಟೋರ್ನಲ್ಲಿ ಕೆಲಸ ಮಾಡುತ್ತಿದ್ದ ಮಹಾಲಕ್ಷ್ಮಿಯನ್ನ ರಂಜನ್ ಪ್ರೀತಿಸುತ್ತಿದ್ದನು. ಆದರೆ ಇಬ್ಬರ ಮಧ್ಯ ಅದೇನು ಮನಸ್ತಾಪ ಉಂಟಾಯಿತು ಗೊತ್ತಿಲ್ಲ. ಸೆಪ್ಟೆಂಬರ್ 1 ರಂದು ಮಹಾಲಕ್ಷ್ಮಿ ಹಾಗೂ ಮುಕ್ತಿ ರಂಜನ್ ಇಬ್ಬರು ಕೆಲಸಕ್ಕೆ ಹಾಜರಾಗಿದ್ದಾರೆ. ಬಳಿಕ ಸೆಪ್ಟೆಂಬರ್ 2ರಿಂದ ಮಹಾಲಕ್ಷ್ಮಿ ವಾರದ ರಜೆ ತೆಗೆದುಕೊಂಡಿದ್ದಾಳೆ. ಸೆಪ್ಟೆಂಬರ್ 2ರಂದು ತಾಯಿಯನ್ನು ಭೇಟಿಯಾಗಲು ತಾಯಿಯ ಮನೆಗೆ ಬರುವುದಾಗಿ ಕುಟುಂಬಸ್ಥರಿಗೆ ತಿಳಿಸಿದ್ದಾಳೆ. ಆದರೆ ಅಷ್ಟರಲ್ಲಿ ಆರೋಪಿ ಮುಕ್ತಿ…
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆದ ಶೋಧ ಕಾರ್ಯದಲ್ಲಿ ನಾಪತ್ತೆಯಾಗಿದ್ದ ಮೂವರ ಪೈಕಿ ಇಬ್ಬರ ಶವ ಪತ್ತೆಯಾಗಿದೆ. ಅದರಲ್ಲಿ ಕೇರಳ ಮೂಲದ ಲಾರಿ ಚಾಲಕನಾಗಿದ್ದ ಅರ್ಜುನ್ ಶವ ಸೇರಿದಂತೆ ಮತ್ತೋರ್ವರ ಶವ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಅರ್ಜುನನ ಮೃತದೇಹ 2 ತುಂಡುಗಳಾಗಿವೆ. ಹೌದು ಕಳೆದ ಜುಲೈ 16 ರಂದು ಬೆಳಿಗ್ಗೆ 8.40ಕ್ಕೆ ಗುಡ್ಡ ಕುಸಿತವಾಗಿತ್ತು. ಘಟನೆಯಲ್ಲಿ 9 ಜನರು ನಾಪತ್ತೆಯಾಗಿದ್ದರು. ಇದೀಗ ಕೇರಳ ಮೂಲದ ಚಾಲಕ ಅರ್ಜುನ್ ಹಾಗೂ ಇನ್ನೊರ್ವ ವ್ಯಕ್ತಿಯ ಶವ ಪತ್ತೆಯಾಗಿದೆ. ಅಲ್ಲದೆ ಅರ್ಜುನ್ ಓಡಿಸುತ್ತಿದ್ದ ಲಾರಿ ಕೂಡ ಪತ್ತೆಯಾಗಿದೆ. ಸದ್ಯ ಅರ್ಜುನ್ ಮೃತದೇಹ ಭಾರತ ಬೆಂಜ್ ಲಾರಿಯಲ್ಲಿದೆ. ಮತ್ತೊಂದು ಶವ ಯಾರದ್ದು ಎಂದು ಇನ್ನಷ್ಟೇ ದೃಢಪಡಿಸಬೇಕಿದೆ. ಶಿರೂರು ಬಳಿ, ಗಂಗಾವಳಿ ನದಿಯಲ್ಲಿ ಆರು ದಿನಗಳಿಂದ ಶೋಧ ಕಾರ್ಯ ನಡೆಸಲಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಗ್ರಾಮದಲ್ಲಿ ಶೋಧಕಾರ್ಯ ನಡೆಸಲಾಗಿತ್ತು. ಬಾರ್ಜ್…
ಮಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದ್ದು, ರಾಜ್ಯಪಾಲರ ಆದೇಶ ಸರಿ ಎಂದು ತೀರ್ಪು ನೀಡದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ನ್ಯಾಯಾಲಯ ಕೂಡ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಈ ಕುರಿತು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಸಲಹೆ ನೀಡಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಹಿಂದೆ ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ನೀಡಿದ್ದರು. ಅಪಘಾತ ಮಾಡಿ ರೈಲ್ವೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಕೊಡಬೇಕು ಬೇಡವೋ ಎನ್ನುವುದು ಅವರಿಗೆ ಬಿಟ್ಟಿದ್ದು. ಆದರೆ ಇಂತಹ ಗಂಭೀರ ಆರೋಪ ಬಂದಾಗ ರಾಜೀನಾಮೆ ಕೊಡಬೇಕು ಹೈಕೋರ್ಟ್ ಸಹ ಮೇಲ್ನೋಟಕ್ಕೆ ಪುರಾವೆ ಇದೆ ಅಂತ ಹೇಳಿದ್ದಾರೆ ಎಂದು ಅವರು ತಿಳಿಸಿದರು. ಹಾಗಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆನಿಸುತ್ತಿದೆ. ರಾಜೀನಾಮೆ ಕೊಡುವುದು ಸಿದ್ದರಾಮಯ್ಯಗೆ ಬಿಟ್ಟದ್ದು. ಯಾವ ತನಿಖಾ ಸಮಿತಿ…