Author: kannadanewsnow05

ಮಂಡ್ಯ : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಓರ್ವ ಮುಳುಗುತ್ತಿದ್ದ ವೇಳೆ ಆತನ ರಕ್ಷಣೆಗೆ ತೆರಳಿದ ಇನ್ನೂ ಮೂವರು ಸೇರಿದಂತೆ ಒಟ್ಟು ನಾಲ್ವರು ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ. ಮೃತರನ್ನು ನಾಗೇಶ್ (40) ಭರತ್ (17) ಗುರೂಪದ (32) ಮಹದೇವ (16)ಮೃತ ದುರ್ದೈವಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಕಾವೇರಿ ನದಿಯಲ್ಲಿ ಈಜುವ ವೇಳೆ ನೀರಿನಲ್ಲಿ ಓರ್ವ ಮುಳುಗಿದ್ದ. ಈ ವೇಳೆ ರಕ್ಷಣೆಗೆ ಹೋಗಿದ್ದ ಮೂವರು ಸೇರಿದಂತೆ ನಾಲ್ವರು ಇದೀಗ ದುರ್ಮರಣ ಹೊಂದಿದ್ದಾರೆ ಎನ್ನಲಾಗುತ್ತಿದೆ. ಮೈಸೂರಿನ ಕನಕಗಿರಿಯಿಂದ ಮುತ್ತತ್ತಿ ಪ್ರವಾಸಕ್ಕೆ ಸುಮಾರು 40 ಜನರು ಬಂದಿದ್ದರು.ಒಂದೇ ಬಸ್ ನಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರು ಸೇರಿದಂತೆ 40 ಜನರು ಆಗಮಿಸಿದ್ದರು. ಇದೀಗ ಇನ್ನರ ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರ ಶವಕ್ಕಾಗಿ ಕಾರ್ಯ ಶೋಧ ಕಾರ್ಯ ಮುಂದುವರೆದಿದೆ ಘಟನೆ ಸಂಬಂಧ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ಅಗ್ನಿ ದುರಂತಗಳ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದೀಗ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿನ ವಿಲ್ಲಾದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು ಅದೃಷ್ಟವಶಾತ್ ಅಗ್ನಿಶಾಮಕ ಠಾಣಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಾಯಿ-ಮಗಳು ಬಚಾವ್ ಆಗಿದ್ದಾರೆ. ಕಾನ್​ಕಾರ್ಡ್ ಕುಪರ್ಟಿನೊ ಲೇಔಟ್​ನ ವಿಲ್ಲಾದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು,​ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿನ ವಿಲ್ಲಾದಲ್ಲಿ ಅನುಪ್ ಅಂಜನ್ ಮತ್ತು ಮೇಹಾ ದಂಪತಿ ವಾಸವಿದ್ದರು. ದೇವರ ಕೋಣೆಯಲ್ಲಿ ದೀಪ ಹಚ್ಚಿ ಬಾಲ್ಕನಿಯ ರೂಮ್ ನಲ್ಲಿ ತಾಯಿ-ಮಗಳು ಇದ್ದರು. ಈ ವೇಳೆ ದೇವರ ಕೋಣೆಯಲ್ಲಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡಿದೆ. ಗ್ರೌಂಡ್ ಪ್ಲೋರ್​ನಲ್ಲಿ ಸಂಪೂರ್ಣವಾಗಿ ಬೆಂಕಿ ಆವರಿಸಿದ್ದು, ಬಾಲ್ಕನಿಯಿಂದ ಕೆಳಗೆ ಬರಲಾಗದೆ ತಾಯಿ-ಮಗಳ ರೋಧನೆ ಅನುಭವಿಸಿದ್ದರು.ಬಳಿಕ ತಾಯಿ-ಮಗಳ ಕಿರುಚಾಟ ಕೇಳಿದ ಸ್ಥಳೀಯರು, ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಠಾಣಾ ಸಿಬ್ಬಂದಿ, ಅಗ್ನಿ ಅವಘಡದಲ್ಲಿ ಸಿಲುಕಿದ್ದ ತಾಯಿ-ಮಗಳನ್ನು ರಕ್ಷಣೆ ಮಾಡಿ, ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.…

Read More

ಮಹಾರಾಷ್ಟ್ರ : ಕಿಡಿಗೇಡಿಗಳು ಮಸೀದಿಯೊಂದರ ಗೋಡೆಯ ಮೇಲೆ ಶ್ರೀ ರಾಮ್ ಎಂದು ಬರಹ ಬರೆದು ಕೋಮು ಗಲಭೆಗೆ ಕಾರಣವಾದಂತ ಘಟನೆ ಮಹಾರಾಷ್ಟ್ರದ ಮುಂಬೈನ ಬೀಡ್ ಜಿಲ್ಲೆಯಲ್ಲಿ ನಡೆದಿದ್ದು ಇದೀಗ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/breaking-five-chinese-killed-in-suicide-bombing-in-pakistanbreaking-five-chinese-killed-in-suicide-bombing-in-pakistan/ ಮಜಲ್‌ಗಾಂವ್‌ನ ಮರ್ಕಝಿ ಮಸೀದಿಯ ಗೋಡೆಯ ಮೇಲೆ ಸಂಜೆಯ ಸಮಯದಲ್ಲಿ ಕಿಡಿಗೇಡಿಯೊಬ್ಬ ಶ್ರೀರಾಮ ಎಂದು ಬರೆದಿದ್ದಾನೆ. ಇದನ್ನು ವಿರೋಧಿಸಿ ಅಪಾರ ಸಂಖ್ಯೆಯಲ್ಲಿ ಮುಸ್ಲಿಂಮರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಇನ್ನೂ ಉದ್ವಿಗ್ನ ವಾತಾವರಣವಿದ್ದು,ಪೊಲೀಸರು ನಾಕಾಬಂಧಿ ಹಾಕಿದ್ದಾರೆ. https://kannadanewsnow.com/kannada/breaking-bmtc-bus-conductor-assaults-woman-over-ticket-issue-in-bengaluru/ ಸಂಜೆ 5 ಗಂಟೆ ಸುಮಾರಿಗೆ ಕೆಲ ವಿರೋಧಿಗಳು ಧಾರ್ಮಿಕತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಮಸೀದಿಯ ಗೋಡೆಯ ಮೇಲೆ ಶ್ರೀರಾಮ ಎಂದು ಬರೆದಿದ್ದಾರೆ. ನಾವು ಸೆಕ್ಷನ್ 295 ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ. ನಾವು ದುಷ್ಕರ್ಮಿಯನ್ನು ಪತ್ತೆ ಹಚ್ಚುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಅವರನ್ನು ಬಂಧಿಸುತ್ತೇವೆ ಎಂದು ಮಜಲಗಾಂವ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ಧೀರಜ್ ಕುಮಾರ್ ತಿಳಿಸಿದ್ದಾರೆ.

Read More

ಬೆಂಗಳೂರು : ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ನಿರ್ವಾಹಕ ಮಹಿಳೆಯ ಮೇಲೆ ಅಟ್ಟಹಾಸ ಮೆರೆದಿದ್ದು, ಚಲಿಸುತ್ತಿದ್ದ ಬಸ್ ನಲ್ಲೆ ಹಲ್ಲೆ ಮಾಡಿ ಅಟ್ಟಹಾಸ ಮೆರೆದರುವ ಘಟನೆ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ 10 ಗಂಟೆಗೆ ಈ ಘಟನೆ ಸಂಭವಿಸಿದ್ದು, ಚಲಿಸುತ್ತಿರುವ ಬಸ್ ನಲ್ಲಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ ನಿರ್ವಾಹಕನ ಜೊತೆಗೆ ಮಹಿಳೆಯೊಬ್ಬರು ಕಿರಿಕ್ ಮಾಡಿಕೊಂಡಿದ್ದಾರೆ. ಈ ವೇಳೆ ಕುಪಿತುಕೊಂಡ ನಿರ್ವಾಹಕ ಒಮ್ಮೆಲೆ ಮಹಿಳೆಯ ಮೇಲೆ ರೌದ್ರಾವತಾರ ತಾಳಿದ್ದು ಹಲ್ಲೆ ಮಾಡಿದ್ದಾನೆ. ಮಹಿಳೆಯ ಮೇಲೆ ಬಿಎಂಟಿಸಿ ನಿರ್ವಾಹಕ ಹಲ್ಲೆ ನಡೆಸಿದ್ದು, ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆಯ ಮೇಲೆ ಹಲ್ಲೆ ಟಿಕೆಟ್ ವಿಚಾರವಾಗಿ ನಡೆದ ಹಲ್ಲೆಯಾಗಿದ್ದು ಇಂದು ಬೆಳಗ್ಗೆ 10 ಗಂಟೆಗೆ ನಡೆದ ಹಲ್ಲೆ ಪ್ರಕರಣವಾಗಿದೆ.ಹಲ್ಲೆಯ ದೃಶ್ಯ ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ.ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು ತೀವ್ರ ಕುತೂಹಲಕ್ಕೆ ಹೇಳಿಸುವ ಮಂಡ್ಯ ಹಾಸನ ಹಾಗೂ ಕೋಲಾರ ಕ್ಷೇತ್ರಗಳಿಗೆ ಇಂದು ಸಂಜೆಯೊಳಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು. https://kannadanewsnow.com/kannada/people-did-not-support-regional-party-so-alliance-with-bjp-for-farmers-of-karnataka-hd-kumaraswamy/ ಇಂದು ಬೆಂಗಳೂರಿನಲ್ಲಿ ಜೆಡಿಎಸ್ ಮುಖಂಡರ ಹಾಗೂ ನಾಯಕರ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯೊಂದಿಗೆ ಮಾತನಾಡಿದ ಅವರು ಈಗಾಗಲೇ ಮಂಡ್ಯ ಕೋಲಾರದ ಜಿಲ್ಲಾ ಮುಖಂಡರನ್ನು ಕರೆಸಿ ಸಭೆ ಕರೆದಿದ್ದೇನೆ. ಇಂದು ಸಂಜೆ 4 ಅಥವಾ 5:00 ಒಳಗಾಗಿ ಅಭ್ಯರ್ಥಿಗಳ ಹೆಸರು ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ಎಚ್ ಡಿ ಕುಮಾರಸ್ವಾಮಿ ತಿಳಿಸಿದರು. https://kannadanewsnow.com/kannada/sumalatha-to-hold-crucial-meeting-with-her-close-friends-supporters-tomorrow/ ಈ ವೇಳೆ ಹಾಸನ ಲೋಕಸಭಾ ಕ್ಷೇತ್ರಕ್ಕೆ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಹೆಸರು ಬಹುತೇಕ ಅಂತಿಮವಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ ಅಲ್ಲದೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸ್ವತಹ ಕುಮಾರಸ್ವಾಮಿಯವರೇ ಸ್ಪರ್ಧಿಸಲಿದ್ದಾರೆ ಎಂದು…

Read More

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಕುಮಾರಸ್ವಾಮಿ ನಿವಾಸದಲ್ಲಿ ಜೆಡಿಎಸ್ ನ ಮಹತ್ವದ ಸಭೆ ನಡೆಯಿತು ಈ ಒಂದು ಸಭೆಯಲ್ಲಿ ಮಂಡ್ಯ ಹಾಸನ ಹಾಗೂ ಕೋಲಾರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತಂತೆ ಚರ್ಚೆ ನಡೆಸಲಾಯಿತು. https://kannadanewsnow.com/kannada/sumalatha-to-hold-crucial-meeting-with-her-close-friends-supporters-tomorrow/ ನಾಡಿನ ರೈತರ ಹಿತಕ್ಕಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದೇವೆ. ಪ್ರಾದೇಶಿಕ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿಲ್ಲ.ಪ್ರಾದೇಶಿಕ ಪಕ್ಷವಾಗಿ ನಮಗೆ ಜನ ಬೆಂಬಲ ನೀಡಿಲ್ಲ ನೆರೆ ರಾಜ್ಯಗಳಿಗೆ ಅನ್ಯಾಯವಾಗದಂತೆ ನಿರ್ಧಾರ ತೆಗೆದುಕೊಳ್ಳಬೇಕು. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿ. ನಾಡಿನ ಬಿಜೆಪಿ ಸಂಸದರಿಗೆ ಧ್ವನಿ ಇಲ್ಲ ಎಂಬ ಆರೋಪ ಇದೆ. ಸ್ವತಂತ್ರವಾಗಿ ಆಡಳಿತವನ್ನು ನಡೆಸುವ ಅಧಿಕಾರ ನಮಗೆ ಸಿಕ್ಕಿಲ್ಲ ಎಂದು ಅವರು ಬೇಸರ ಹೊರಹಾಕಿದರು. https://kannadanewsnow.com/kannada/aap-workers-gheraoed-at-pm-modis-residence-detained-by-police-for-protesting-against-kejriwals-arrest/ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಾವು ಮೂರೂ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ಮಂಡ್ಯ ಹಾಸನ ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ, ದೇಶದಲ್ಲೆಡೆ ಮೋದಿ ಅಲೆ ಇದೆ…

Read More

ಮಂಡ್ಯ : ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಹಾಲಿ ಸಂಸದರಾಗಿರುವಂತಹ ಸುಮಲತಾ ಅಂಬರೀಶ್ ಅವರು ಬಿಜೆಪಿ ತನಗೆ ಟಿಕೆಟ್ ಕೊಡುತ್ತದೆ ಎಂದು ಬಹಳ ವಿಶ್ವಾಸ ಇಟ್ಟುಕೊಂಡಿದ್ದರು.ಆದರೆ ಇದೀಗ ಕೋಲಾರ್ ಹಾಸನ ಹಾಗೂ ಮಂಡ್ಯ ಕ್ಷೇತ್ರವನ್ನು ಬಿಜೆಪಿ ಮೈತ್ರಿ ಪಕ್ಷವಾದ ಜೆಡಿಎಸ್ ಗೆ ಬಿಟ್ಟು ಕೊಟ್ಟಿದೆ.ಹೀಗಾಗಿ ಸುಮಲತಾ ಅಂಬರೀಶ್ ಅವರು ನಾಳೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಹೌದು ಬಿಜೆಪಿ ಟಿಕೆಟ್ ಮಿಸ್ ಆಗಿರುವ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಅವರು ನಾಳೆ ಬೆಂಗಳೂರಿನಲ್ಲಿ ತಮ್ಮ ಆಪ್ತರು ಹಾಗೂ ಬೆಂಬಲಿಗರು ಒಂದಿಗೆ ಸುದೀರ್ಘವಾಗಿ ಒಂದು ಮಹತ್ವವಾದಂತಹ ಸಭೆ ನಡೆಸಲಿದ್ದಾರೆ.ಈ ಒಂದು ಸಭೆಯಲ್ಲಿ ಆಪ್ತರ ಹಾಗೂ ಬೆಂಬಲಿಗರ ಸಲಹೆಯನ್ನು ಪಡೆದು ತಮ್ಮ ಮುಂದಿನ ನಿರ್ಧಾರವನ್ನು ತಿಳಿಸಲಿದ್ದಾರೆ.ಹೀಗಾಗಿ ನಾಳೆ ನಡೆಯುವಂತಹ ಮಾತೃ ಸಭೆಯಲ್ಲಿ ಸುಮಲತಾ ಅಂಬರೀಶ್ ಅವರ ನಡೆ ತೀವ್ರ ಕುತೂಹಲ ಕೆರಳಿಸಿದೆ. ಬಿಜೆಪಿ ಸಭೆಗೆ ಸುಮಲತಾ ಗೈರು ಇಂದು ಮಂಡ್ಯದಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು…

Read More

ಬೆಂಗಳೂರು : ಪತ್ನಿಗೆ ಇಬ್ಬರು ಮಕ್ಕಳಿದ್ದರೂ ಕೂಡ ಅಕ್ರಮ ಸಂಬಂಧ ಹೊಂದಿದ್ದು ಇದರಿಂದ ಮನನೊಂದು ಬೇಸತ್ತ ಪತಿ ಗೋಡೆಯ ಮೇಲೆ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸೈಯ್ಯದ್ ಅಕ್ಮಲ್ ಅನ್ಸರ್ ಎಂದು ಗುರುತಿಸಲಾಗಿದೆ. ಅಕ್ಮಲ್ ಒಂದು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರು ಮಕ್ಕಳಾದ ಬಳಿಕ ಮಹಿಳೆ ಅಕ್ರಮ ಸಂಬಂಧ ಇಟ್ಟುಕೊಂಡು ಪತಿಗೆ ನಿರಂತರ ಕಿರುಕುಳ ನೀಡುತ್ತಿದ್ದಳು. ಇದೇ ಕಾರಣಕ್ಕೆ ಬೇಸತ್ತು, ಗೋಡೆಯ ಮೇಲೆ ತನ್ನ ಸಾವಿಗೆ ಕಾರಣರಾದವರ ಹೆಸರುಗಳನ್ನ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಪೋಷಕರು ಆರೋಪಿಸಿದ್ದಾರೆ. 7 ವರ್ಷಗಳ ಹಿಂದೆ ಅಕ್ಮಲ್ ಅನ್ಸರ್‌ಗೆ ವಿವಾಹವಾಗಿತ್ತು. ಆರಂಭದಲ್ಲಿ ಇಬ್ಬರೂ ಚೆನ್ನಾಗಿಯೇ ಇದ್ದರು. ಮಕ್ಕಳಾದ ಬಳಿಕ, ಮೃತ ಅಕ್ಮಲ್ ಅನ್ಸರ್ ಮೇಲೆ ಅನುಮಾನ ಪಟ್ಟು ಪತ್ನಿ ಕಿರುಕುಳ ಕೊಡ್ತಿದ್ದಳು. ಅಷ್ಟೇ ಅಲ್ಲದೇ ಆಗಾಗ ಪತಿ ಬಳಿ ಹಣಕ್ಕೆ…

Read More

ಬೆಂಗಳೂರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನಲ್ಲಿ ಕೆಲಸಮಾಡುತ್ತಿದ್ದ ಉದ್ಯೋಗಿ ಒಬ್ಬರು ಸತತವಾಗಿ 8 ತಿಂಗಳ ಕಾಲ ಕೆಲಸಕ್ಕೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಉದ್ಯೋಗಿಯನ್ನು ವಜಾ ಮಾಡಿರುವ ಆದೇಶವನ್ನು ಇದೀಗ ಹೈಕೋರ್ಟ್ ಎತ್ತಿ ಹಿಡಿದಿದೆ. ಎಚ್​ಎಎಲ್ ಸಲ್ಲಿಸಿದ್ದ ಮೇಲ್ಮನವಿಯನ್ನು ಮಾನ್ಯ ಮಾಡಿರುವ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌ ದೀಕ್ಷಿತ್ ಅವರಿದ್ದ ವಿಭಾಗೀಯಪೀಠ, ಸೇವೆಗೆ ದೀರ್ಘಾವಧಿ ಗೈರು ಹಾಜರಾಗಿರುವುದನ್ನು ಗಂಭೀರ ದುರ್ನಡತೆ ಎಂದು ಹೇಳಿ ಸೇವೆಯಿಂದ ವಜಾ ಆದೇಶವನ್ನು ಸರಿ ಎಂದು ಹೇಳಿದೆ. https://kannadanewsnow.com/kannada/chikkamagaluru-thousands-of-acres-of-grassland-gutted-in-forest-fire-at-inam-dattatreya-peetham/ ಅಲ್ಲದೇ, ಮೇಲ್ಮನವಿದಾರರು ವಜಾ ಆದೇಶದಿಂದ ಉದ್ಯೋಗಿಗೆ ಭವಿಷ್ಯದಲ್ಲಿ ಉದ್ಯೋಗ ಸಿಗಲು ತೊಂದರೆ ಆಗುತ್ತದೆ. ಇದು ತೀವ್ರ ಕಠಿಣ ಕ್ರಮವಾಗಲಿದೆ. ಆದರೆ, ಆಗಿರುವ ದುರ್ನಡತೆಗೆ ಬೆಲೆ ತೆರಬೇಕಾಗುತ್ತದೆ. ಏಕ ಸದಸ್ಯಪೀಠ ನೀಡಿದ್ದ ಆದೇಶದಂತೆ ಉದ್ಯೋಗಿಯಿಂದ ಪಡೆದಿದ್ದ 2.2 ಲಕ್ಷ ರೂ. ಹಣವನ್ನು ಹಿಂತಿರುಗಿಸುವಂತೆ ಆದೇಶ ನೀಡಿದೆ. ಪ್ರಕರಣದ ಹಿನ್ನೆಲೆ? ಎಚ್‌ಎಎಲ್​ನಲ್ಲಿ ಎಂಜಿನಿಯರ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಎ.ಕೆ.ಸಿನ್ಹಾ 2016ರ ಸೆಪ್ಟೆಂಬರ್​ 22ರಿಂದ 2017 ಜನವರಿ…

Read More

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠದ ಪರಿಸರದಲ್ಲಿ ಇಂದು ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಸಾವಿರಾರು ಎಕರೆ ಕುರುಚಲು ಹಾಗೂ ಹುಲ್ಲುಗಾವಲು ಸುಟ್ಟು ಕರಕಲಾಗಿದೆ. ಉರುಸ್ ಆಚರಣೆಗೆಂದು ಹೊರ ಜಿಲ್ಲೆಗಳಿಂದ ಬಂದವರು ಪೀಠದ ಆಸು ಪಾಸಿನ ಗುಡ್ಡದ ತಪ್ಪಲಲ್ಲಿ ಟೆಂಟ್ ಹಾಕಿಕೊಂಡು ಅಡುಗೆ ಮಾಡುತ್ತಿದ್ದು ಇದರಿಂದಲೇ ಗುಡ್ಡಕ್ಕೆ ಬೆಂಕಿ ತಗುಲಿದೆ ಎಂದು ಆರೋಪಿಸಲಾಗಿದೆ. https://kannadanewsnow.com/kannada/people-of-the-state-have-come-close-to-deadline-surrender-if-there-are-wildlife-items-by-april-11/ ಇಲ್ಲಿನ ಪ್ರಸಿದ್ದ ಬಾಬಾಬುಡನ್ ಇನಾಂ ದತ್ತಾತ್ರೇಯ ಪೀಠದ ಸುತ್ತಮುತ್ತಲು ಉರುಸ್ ಆಚರಣೆಗೆ ಬೇರೆ ಬೇರೆ ಕಡೆಯಿಂದ ಜನರು ಆಗಮಿಸಿದ್ದರು. ಅಡಿಗೆ ಮಾಡುತ್ತಿರುವ ಸಂದರ್ಭದಲ್ಲಿ ಗಾಳಿಗೆ ತೂರಿ ಸಾವಿರಾರು ಎಕರೆ ಕುರುಚಲು ಹಾಗೂ ಹುಲ್ಲುಗಾವಲು ಪ್ರದೇಶ ಸುಟ್ಟು ಕರಕಲಾಗಿದೆ ಎಂದು ಆರೋಪಿಸಲಾಗುತ್ತಿದೆ. https://kannadanewsnow.com/kannada/how-to-detect-kidney-diseases-early-here-the-information/ ಬೆಂಕಿ ಕಾಣಿಸಿಕೊಂಡು ಗಾಳಿಯ ಜೊತೆಯಲ್ಲೇ ವೇಗವಾಗಿ ಗುಡ್ಡವನ್ನು ಆವರಿಸಿಕೊಳ್ಳುವಾಗ ಅಲ್ಲಿದ್ದ ಕೆಲವರು ಜೀವಭಯದಿಂದ ಓಡಿದ್ದಾರೆ. ಟೆಂಟ್ನಲ್ಲಿದ್ದ ಬಟ್ಟೆ, ಬರೆ ಇನ್ನಿತರೆ ವಸ್ತುಗಳನ್ನು ರಕ್ಷಿಸಿಕೊಳ್ಳಲು ಹರಸಾಹಸ ಪಟ್ಟಿದ್ದಾರೆ. ಅದೃಷ್ಟವಶಾತ್ ಸಾವು, ನೋವು ಸಂಭವಿಸಿಲ್ಲ. ವಿಚಾರ ತಿಳಿದು ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಅಲ್ಲದೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ…

Read More