Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳದಲ್ಲಿ ಭೀಕರ ಕಾಲ್ತುಳಿತ ಘಟನೆ ನಡೆದಿದ್ದು, ಈ ಒಂದು ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿತ್ತು. ಇದೀಗ ಇದೆ ಬೆಳಗಾವಿ ಜಿಲ್ಲೆಯ ಇನ್ನಿಬ್ಬರು ಸಾವನ್ನಪ್ಪಿದ್ದು ಆ ಮೂಲಕ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿದೆ. ಹೌದು ಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ಬಂದಿದ್ದು, ಶಿವಾಜಿನಗರದ ನಿವಾಸಿ ಮಹಾದೇವಿ ಹನುಮಂತ ಬಾಗನೂರು ಹಾಗೂ ಶೆಟ್ಟಿಗಲ್ಲಿಯ ಅರುಣ್ ಕೋಪರ್ಡೆ ಸಾವನಪ್ಪಿದ್ದಾರೆ. ಮಹಾದೇವಿ ಅವರು ಭಾನುವಾರ 30 ಜನರ ಜೊತೆಗೆ ಮಹಾ ಕುಂಭಮೇಳಕ್ಕೆ ತೆರಳಿದ್ದರು ಎನ್ನಲಾಗಿದೆ. ಇನ್ನು ಅರುಣ್ ಪತ್ನಿಯ ಜೊತೆಗೆ ಪ್ರಯಾಗ್ ರಾಜ್ ಗೆ ತೆರಳಿದ್ದರು. ನಿನ್ನೆ ನಡೆದ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈಗಾಗ್ಲೇ ಬೆಳಗಾವಿ ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ (18) ಮೃತಾಪಟ್ಟಿದ್ದಾರೆ ಎಂದು ಮೃತರ…
ನವದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ಇಂದು ಸುಪ್ರೀಂಕೋರ್ಟ್ ನಲ್ಲಿ ನಡೆಯಿತು. ಇವಳೇ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ರಾಜಕೀಯ ಲಾಭಕ್ಕಾಗಿ ಯಾಕೆ ಇಂತಹ ಅರ್ಜಿ ಹಾಕುತ್ತೀರಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ತರಾಟೆ ತೆಗೆದುಕೊಂಡರು. ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿರುವುದನ್ನು ಹಿಂಪಡೆದಿದ್ದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌದ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಮೂರ್ತಿಗಳು ರಾಜಕೀಯ ಲಾಭಕ್ಕಾಗಿ ಯಾಕೆ ಇಂತಹ ಅರ್ಜಿ ಹಾಕುತ್ತೀರಿ? ರಾಜಕೀಯ ಮಾಡುವುದಾದರೆ ನೀವು ಫೀಲ್ಡ್ ನಲ್ಲಿ ಮಾಡಿ. ಎಂದು ಯತ್ನಾಳ್ಗೆ ಸುಪ್ರೀಂ ಕೋರ್ಟ್, ನ್ಯಾಯಮೂರ್ತಿಗಳು ತರಾಟೆ ತೆಗೆದುಕೊಂಡರು. ಬಳಿಕ ವಿಚಾರಣೆಯನ್ನು ಮಾರ್ಚ್ 26ಕ್ಕೆ ಮುಂದೂಡಿದರು. ಡಿಕೆಶಿಗೆ ಸೇರಿದ ಆಸ್ತಿಗಳಲ್ಲಿ 2017ರ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ಶೋಧ ನಡೆಸಿತ್ತು. ಈ ವೇಳೆ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಆದಾಯ…
ಬೆಂಗಳೂರು : ವಿಜಯೇಂದ್ರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬೊಮ್ಮಾಯಿ ಅವರ ಜೊತೆಗೆ ಕೆಲಸ ಮಾಡಿದಕ್ಕಾಗಿ ದ್ವೇಷ ಮಾಡುತ್ತಿದ್ದಾರೆ. ಬಸವಣ್ಣನವರ ಪಾದದ ಮೇಲೆ ಪ್ರಮಾಣ ಮಾಡಿದ್ದು ಗೊತ್ತಿಲ್ವಾ? ಬಸವಣ್ಣನವರ ಪಾದದ ಮೇಲೆ ಆಣೆ ಮಾಡಿದಂತೆ ನಡೆದುಕೊಂಡರಾ? ಬಿಎಸ್ ವೈ ಅವರ ಯಾವ ಗುಣ ವಿಜಯೇಂದ್ರ ಬಳಿ ಇಲ್ಲ. ಕೇವಲ ಹಠ, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬಿವೈ ವಿಜಯೇಂದ್ರ ರಾಜಕೀಯವಾಗಿ ನನ್ನ ಸಮಾಧಿ ಮಾಡಲು ಹೊರಟಿದ್ದಾರೆ ಎಂದು ಬಿವೈ ವಿಜಯೇಂದ್ರ ವಿರುದ್ಧ ಚಿಕ್ಕಬಳ್ಳಾಪುರ ಸಂಸದ ಡಾ.ಕೆ ಸುಧಾಕರ್ ಆಕ್ರೋಶ ಅವರ ಹಾಕಿದರು. ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಬಹಳ ಪ್ರಬಲವಾಗಿರುವ ಕಡೆಗೆ ತಿಣುಕಾಡಿಕೊಂಡು ಗೆದ್ದಿದ್ದೀರಿ. ವರಿಷ್ಠರನ್ನು ಭೇಟಿಯಾಗಿ ನಿಮ್ಮ ಎಲ್ಲಾ ವ್ಯವಹಾರ ಗಮನಕ್ಕೆ ತರುತ್ತೇನೆ. ಬೊಮ್ಮಾಯಿ ಜೊತೆಗೆ ಚೆನ್ನಾಗಿ ಕೆಲಸ ಮಾಡಿದ್ದೇವೆ ಎಂದು ನಮ್ಮ ಮೇಲೆ ದ್ವೇಷನಾ? ವಿಜಯೇಂದ್ರ ಮಾಜಿ ಸಿಎಂ ಯಡಿಯೂರಪ್ಪನವರ ಮಗ ಆಗಿರಬಹುದು ಆದರೆ ಬಿಎಸ್ ಯಡಿಯೂರಪ್ಪ ಗೆ ಹೋಲಿಕೆ ಮಾಡಲು ಸಾಧ್ಯವೇ ಇಲ್ಲ. ಇವರದ್ದು ದ್ವೇಷದ…
ಬೆಳಗಾವಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳದಲ್ಲಿ ಭೀಕರ ಕಾಲ್ತುಳಿತ ಘಟನೆ ನಡೆದಿದ್ದು, ಈ ಒಂದು ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹೌದು ಬೆಳಗಾವಿ ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ (18) ಮೃತಾಪಟ್ಟಿದ್ದಾರೆ ಎಂದು ಮೃತರ ಸಂಬಂಧಿ ಗುರುರಾಜ ಹುದ್ದಾರ ಅವರು ಮಾಹಿತಿ ನೀಡಿದ್ದಾರೆ.ಕಾಲ್ತುಳಿತಕ್ಕೆ ಸಿಕ್ಕು ಗಾಯಗೊಂಡಿದ್ದ ಬೆಳಗಾವಿಯ ನಾಲ್ವರನ್ನೂ ಪ್ರಯಾಗ್ರಾಜ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು ಎಂದು ತಿಳಿಸಲಾಗಿದೆ.ಜ್ಯೋತಿ ಅವರ ಮೊಬೈಲ್ ಬೆಳಿಗ್ಗೆಯಿಂದಲೂ ರಿಂಗ್ ಆಗುತ್ತಿತ್ತು. ಆದರೆ, ಅವರು ಕರೆ ಸ್ವೀಕರಿಸಿರಲಿಲ್ಲ. ಮೊಬೈಲ್ ರಿಂಗ್ ಆಗಿದ್ದರಿಂದ ಸುರಕ್ಷಿತವಾಗಿ ಇರಬಹುದು ಎಂದು ಕುಟುಂಬದವರು ಅಂದಾಜಿಸಿದ್ದರು.ಮೂರು ದಿನಗಳ ಹಿಂದೆ ವಡಗಾವಿ ಪ್ರದೇಶದ 13 ಜನರು ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ ಪ್ರಯಾಣ ಪ್ರಯಾಗ್ರಾಜ್ಗೆ ಪ್ರಯಾಣ ಬೆಳೆಸಿದ್ದರು.ಅಲ್ಲದೇ, ಸರೋಜಿನಿ ನಡುವಿನಹಳ್ಳಿ, ಕಾಂಚನ್ ಕೋಪಾರ್ಡೆ ಸೇರಿದಂತೆ ಇನ್ನೂ ಕೆಲವರು…
‘ಮೈಕ್ರೋ ಫೈನಾನ್ಸ್’ ಹಾವಳಿ : ಇಂದು ಸಂಜೆ ಸಿಎಂ ಜೊತೆ ಚರ್ಚಿಸಿ ‘ಸುಗ್ರೀವಾಜ್ಞೆ’ ಕಾನೂನು ಜಾರಿ : ಸಚಿವ ಜಿ.ಪರಮೇಶ್ವರ್
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸರಣಿ ಆತ್ಮಹತ್ಯೆ ನಡೆಯುತ್ತಿದೆ.ಈ ಕುರಿತು ಸಿಎಂ ಸಿದ್ದರಾಮಯ್ಯ ಮುಂದಿನ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡಲಾಗುತ್ತೆ ಎಂದು ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಕಾನೂನು ತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರು ಮಾತನಾಡಿ, ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯುವ ಕುರಿತು ಚರ್ಚಿಸಲಾಗುತ್ತದೆ. ಸಂಜೆ ಸಿಎಂ ಜೊತೆಗೆ ಚರ್ಚಿಸಿ ಅಂತಿಮಗೊಳಿಸಿ, ಸುಗ್ರೀವಾಜ್ಞೆ ಮೂಲಕ ಕಾನೂನು ತರುತ್ತೇವೆ. ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯಲು ಸುದೀರ್ಘವಾಗಿ ಚರ್ಚೆ ಆಗಿದೆ. ಕರ್ನಾಟಕ ಮೈಕ್ರೋ ಫೈನಾನ್ಸ್ ನಿಯಂತ್ರಣ ಮಸೂದೆ ಜಾರಿ ಬಗ್ಗೆ ಚರ್ಚಿಸಲಾಗಿದೆ. ಜನವರಿ 25ರಂದು ಸಿಎಂ…
ಬಾಗಲಕೋಟೆ : ಸುಮಾರು 30 ಅಕ್ಕಿಯನ್ನು ತಾಯುತ್ತಿದ್ದ ಲಾರಿಯ ಟೈರ್ ಬ್ಲಾಸ್ಟ್ ಆಗಿ, ಕೂಡಲೇ ಇಡೀ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ ಪರಿಣಾಮ ಲಾರಿಯಲ್ಲಿದ್ದ 30 ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದ ಬಳಿ ನಡೆದಿದೆ. ಗಂಗಾವತಿಯಿಂದ ಕೊಲ್ಲಾಪುರಕ್ಕೆ ಸುಮಾರು 30 ಟನ್ ಅಕ್ಕಿ ತುಂಬಿಕೊಂಡು ಹೊರಟಿದ್ದ ಲಾರಿ ರಾಜ್ಯ ಹೆದ್ದಾರಿ ಮಧ್ಯದಲ್ಲೇ ಬೆಂಕಿಗಾಹುತಿಯಾಗಿದೆ. ಟಯರ್ ಬ್ಲಾಸ್ಟ್ ಹಿನ್ನೆಲೆ ಲಾರಿಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಬೆಂಕಿ ಹತ್ತಿದ ಕೂಡಲೇ ಲಾರಿಯಿಂದ ಕೆಳಗಿಳಿದ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದು, ಲೋಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ತುಮಕೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಮಿತಿ ಮೀರಿದ್ದು, ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಸಾಲ ಪಡೆದವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದೀಗ ತುಮಕೂರಿನಲ್ಲಿ ಕೂಡ ಮತ್ತೊಂದು ಘಟನೆ ನಡೆದಿದ್ದು, ಮಹಿಳೆ ಒಬ್ಬರು ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ನೊಂದು 30 ಬಿಪಿ ಮಾತ್ರೆಗಳನ್ನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಹೌದು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅಲ್ಲಾಳಸಂದ್ರ ಹನುಮಂತಪುರದಲ್ಲಿ ಘಟನೆ ನಡೆದಿದ್ದು, ಫೈನಾನ್ಸ್ ಕಿರುಕುಳಕ್ಕೆ ಹೆದರಿ ಮಂಗಳಮ್ಮ (45) ಆತ್ಮಹತ್ಯೆಗೆ ಯತ್ನಿಸಿದ್ದಾರೆ. 30 ಬಿಪಿ ಮಾತ್ರೆಗಳನ್ನು ನುಂಗಿ ಮಂಗಳಮ್ಮ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ತುಮಕೂರು ಜಿಲ್ಲಾ ಆಸ್ಪತ್ರೆಯ ಐಸಿಯು ಘಟಕದಲ್ಲಿ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿವಿಧ ಫೈನಾನ್ಸ್ ಕಂಪನಿಗಳಲ್ಲಿ ಮಂಗಳಮ 2 ಲಕ್ಷ ಸಾಲ ಪಡೆದಿದ್ದರು. ಗ್ರಾಮೀಣ ಕೂಟದಲ್ಲಿ 2 ಲಕ್ಷ ಮತ್ತು L & T ಫೈನಾನ್ಸ್ ನಲ್ಲಿ 70 ಸಾವಿರ,ಆಶೀರ್ವಾದ ಫೈನಾನ್ಸ್ ಬಳಿ 80 ಸಾವಿರ ಸಾಲವನ್ನು ಮಂಗಳಮ್ಮ…
ಕೊಪ್ಪಳ : ಕೊಪ್ಪಳದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬಸ್ ಒಂದು ನಿಯಂತ್ರಣ ಕಳೆದುಕೊಂಡು ಪಾರ್ಟಿಯಾದ ಪರಿಣಾಮ ಏಳು ವರ್ಷದ ಬಾಲಕ ನೊಬ್ಬ ಸಾವನ್ನಪ್ಪಿದ್ದು ಬಸ್ ನಲ್ಲಿದ್ದ ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ, ಯಲಬುರ್ಗಾ ತಾಲೂಕಿನ ಹೊಸಳ್ಳಿ ಕ್ರಾಸ್ ಬಳಿ ನಡೆದಿದೆ. ಮೃತ ಬಾಲಕನನ್ನು ಬಾನಾಪುರದ ವಿವೇಕ್ (9) ಎಂದು ತಿಳಿದುಬಂದಿದ್ದು, ಬೆಂಗಳೂರಿನಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ ಬಾಲಾಜಿ ಟ್ರಾವೆಲ್ಸ್ ನ ಬಸ್ ಅಪಘಾತಕ್ಕೊಳಗಾಗಿದ್ದು, ಚಾಲಕನ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಬಸ್ಸಿನಲ್ಲಿ ಒಟ್ಟು 15 ಜನ ಪ್ರಯಾಣ ಮಾಡುತ್ತಿದ್ದರು, ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಐದು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಯಲಬುರ್ಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಚಾಲಕ ಪರಾರಿ ಪರಾರಿಯಾಗಿದ್ದು , ಯಲಬುರ್ಗಾ ಪೋಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸರಣಿ ಆತ್ಮಹತ್ಯೆ ನಡೆಯುತ್ತಿದೆ.ಈ ಕುರಿತು ಸಿಎಂ ಸಿದ್ದರಾಮಯ್ಯ ಮುಂದಿನ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡಲಾಗುತ್ತೆ ಎಂದು ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಇಂದು ಸುಗ್ರೀವಾಜ್ಞೆ ಕರುಡು ಸಿದ್ಧಪಡಿಸಲು ಸಭೆ ಕರೆಯಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ಎಸ್ ಪಿ ಗಳಿಗೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ಸಾಲಗಾರರಿಗೆ ನೀಡುವ ಕಿರುಕುಳ ನಿಲ್ಲಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಕುರಿತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ಎಸ್ ಪಿ ಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಕುರಿತು ಚಿಂತನೆ ನಡೆದಿದೆ ಎಂದು ತಿಳಿಸಿದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಸಹ ಸರ್ಕಾರ ಸಿದ್ಧವಾಗಿದೆ ಮತ್ತು ಅದರ ಕರುಡನ್ನು ತಯಾರು ಮಾಡಲು ಇವತ್ತು ಸಭೆಯೊಂದನ್ನು ಕರೆಯಲಾಗಿದೆ,…
ಬೆಂಗಳೂರು : ಬೆಂಗಳೂರಿನಲ್ಲಿ 18ರಿಂದ 20 ವರ್ಷದ ಯುವಕರು ಎಲ್ಲಿಂದರಲ್ಲಿ ಬೈಕ್ ವ್ಹಿಲಿಂಗ್ ಮಾಡುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದರಿಂದ ವಾಹನ ಚಲಾಯಿಸುವವರಿಗೆ ಹಾಗೂ ಸಾರ್ವಜನಿಕರಿಗೆ ತುಂಬಾ ಸಮಸ್ಯೆ ಆಗುತ್ತಿದೆ ಆದರೂ ಕೂಡ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದೆ. ಹೌದು ಈ ಕುರಿತು ವ್ಯಕ್ತಿಯೊಬ್ಬರು ಅರ್ಜಿಯೊಂದನ್ನು ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಭಾಗಿಯ ಪೀಠವು, ಬೆಂಗಳೂರಿನ ಕೆಲ ಏರಿಯಾಗಳಲ್ಲಿ ಬೈಕ್ ಸವಾರರಿಂದ ವ್ಹಿಲಿಂಗ್ ನಡೆಯುತ್ತಿದ್ದು, ಈ ಕುರಿತು ಯಾವುದೆ ಕ್ರಮ ಕೈಗೊಳ್ಳದ ಪೊಲೀಸರ ನಿರ್ಲಕ್ಷಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಸುಮಾರು 18 ರಿಂದ 20 ವಯಸ್ಸಿನ ಯುವಕರು ವ್ಹಿಲಿಂಗ್ ಮಾಡಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ ವ್ಹಿಲಿಂಗ್ ಮಾಡು ಅವರ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಬೆಂಗಳೂರಿನಲ್ಲಿ ವಾಸ ಮಾಡುವವರೆಗೆ ಇದರಿಂದ ತುಂಬಾ ತೊಂದರೆಯಾಗುತ್ತಿದೆ. ವ್ಹಿಲಿಂಗ್ ನಿಂದ ಅಪಘಾತವಾಗಿ ಸಾವುಗಳು ಕೂಡ ಸಂಭವಿಸುತ್ತಿವೆ. ಬೈಕ್ ಸವಾರರು…