Subscribe to Updates
Get the latest creative news from FooBar about art, design and business.
Author: kannadanewsnow05
ಕೊಪ್ಪಳ : ಕೊಪ್ಪಳದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬಸ್ ಒಂದು ನಿಯಂತ್ರಣ ಕಳೆದುಕೊಂಡು ಪಾರ್ಟಿಯಾದ ಪರಿಣಾಮ ಏಳು ವರ್ಷದ ಬಾಲಕ ನೊಬ್ಬ ಸಾವನ್ನಪ್ಪಿದ್ದು ಬಸ್ ನಲ್ಲಿದ್ದ ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ, ಯಲಬುರ್ಗಾ ತಾಲೂಕಿನ ಹೊಸಳ್ಳಿ ಕ್ರಾಸ್ ಬಳಿ ನಡೆದಿದೆ. ಮೃತ ಬಾಲಕನನ್ನು ಬಾನಾಪುರದ ವಿವೇಕ್ (9) ಎಂದು ತಿಳಿದುಬಂದಿದ್ದು, ಬೆಂಗಳೂರಿನಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ ಬಾಲಾಜಿ ಟ್ರಾವೆಲ್ಸ್ ನ ಬಸ್ ಅಪಘಾತಕ್ಕೊಳಗಾಗಿದ್ದು, ಚಾಲಕನ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಬಸ್ಸಿನಲ್ಲಿ ಒಟ್ಟು 15 ಜನ ಪ್ರಯಾಣ ಮಾಡುತ್ತಿದ್ದರು, ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಐದು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಯಲಬುರ್ಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಚಾಲಕ ಪರಾರಿ ಪರಾರಿಯಾಗಿದ್ದು , ಯಲಬುರ್ಗಾ ಪೋಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸರಣಿ ಆತ್ಮಹತ್ಯೆ ನಡೆಯುತ್ತಿದೆ.ಈ ಕುರಿತು ಸಿಎಂ ಸಿದ್ದರಾಮಯ್ಯ ಮುಂದಿನ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡಲಾಗುತ್ತೆ ಎಂದು ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಇಂದು ಸುಗ್ರೀವಾಜ್ಞೆ ಕರುಡು ಸಿದ್ಧಪಡಿಸಲು ಸಭೆ ಕರೆಯಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ಎಸ್ ಪಿ ಗಳಿಗೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ಸಾಲಗಾರರಿಗೆ ನೀಡುವ ಕಿರುಕುಳ ನಿಲ್ಲಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಕುರಿತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ಎಸ್ ಪಿ ಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಕುರಿತು ಚಿಂತನೆ ನಡೆದಿದೆ ಎಂದು ತಿಳಿಸಿದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಸಹ ಸರ್ಕಾರ ಸಿದ್ಧವಾಗಿದೆ ಮತ್ತು ಅದರ ಕರುಡನ್ನು ತಯಾರು ಮಾಡಲು ಇವತ್ತು ಸಭೆಯೊಂದನ್ನು ಕರೆಯಲಾಗಿದೆ,…
ಬೆಂಗಳೂರು : ಬೆಂಗಳೂರಿನಲ್ಲಿ 18ರಿಂದ 20 ವರ್ಷದ ಯುವಕರು ಎಲ್ಲಿಂದರಲ್ಲಿ ಬೈಕ್ ವ್ಹಿಲಿಂಗ್ ಮಾಡುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದರಿಂದ ವಾಹನ ಚಲಾಯಿಸುವವರಿಗೆ ಹಾಗೂ ಸಾರ್ವಜನಿಕರಿಗೆ ತುಂಬಾ ಸಮಸ್ಯೆ ಆಗುತ್ತಿದೆ ಆದರೂ ಕೂಡ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದೆ. ಹೌದು ಈ ಕುರಿತು ವ್ಯಕ್ತಿಯೊಬ್ಬರು ಅರ್ಜಿಯೊಂದನ್ನು ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಭಾಗಿಯ ಪೀಠವು, ಬೆಂಗಳೂರಿನ ಕೆಲ ಏರಿಯಾಗಳಲ್ಲಿ ಬೈಕ್ ಸವಾರರಿಂದ ವ್ಹಿಲಿಂಗ್ ನಡೆಯುತ್ತಿದ್ದು, ಈ ಕುರಿತು ಯಾವುದೆ ಕ್ರಮ ಕೈಗೊಳ್ಳದ ಪೊಲೀಸರ ನಿರ್ಲಕ್ಷಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಸುಮಾರು 18 ರಿಂದ 20 ವಯಸ್ಸಿನ ಯುವಕರು ವ್ಹಿಲಿಂಗ್ ಮಾಡಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ ವ್ಹಿಲಿಂಗ್ ಮಾಡು ಅವರ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಬೆಂಗಳೂರಿನಲ್ಲಿ ವಾಸ ಮಾಡುವವರೆಗೆ ಇದರಿಂದ ತುಂಬಾ ತೊಂದರೆಯಾಗುತ್ತಿದೆ. ವ್ಹಿಲಿಂಗ್ ನಿಂದ ಅಪಘಾತವಾಗಿ ಸಾವುಗಳು ಕೂಡ ಸಂಭವಿಸುತ್ತಿವೆ. ಬೈಕ್ ಸವಾರರು…
ಚಾಮರಾಜನಗರ : ರಾಜ್ಯದಲ್ಲಿ ಇಂದು ಮತ್ತೊಂದು ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರೇಕಟಿ ಗೇಟ್ ಬಲಿ ಈ ಅಪಘಾತ ಸಂಭವಿಸಿದ್ದು, ಪತಿ ಶಶಿಧರ್, ಪತ್ನಿ ಶಾಲಿನಿ ಹಾಗೂ ತಾಯಿ ಭಾಗ್ಯಮ್ಮ ಮೃತ ದುರ್ದೈವಿಗಳು ಎಂದು ತಿಳಿದುಬಂದಿದ್ದು, ಮೃತರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೂಡ್ಲಪುರ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಮೂವರು ಇಂದು ಚಿಕ್ಕದೇವಮ್ಮನ ಬೆಟ್ಟಕ್ಕೆ ಹೋಗಿ ವಾಪಸ್ ಹೋಗುವಾಗ ಬೈಕ್ ಗೆ ಕಾರು ಡಿಕ್ಕಿಯಾಗಿ ಮೂವರು ಸಾವನಪ್ಪಿದ್ದಾರೆ.ಘಟನೆ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗದಗ : ಗದಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, KSRTC ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸವಾರನ ಕಾಲು ಕಟ್ ಆಗಿರುವ ಭಯಾನಕ ಘಟನೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಕೋರ್ಟ್ ಸರ್ಕಲ್ ಬಳಿ ನಡೆದಿದೆ. KSRTC ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದ ನಿವಾಸಿಯಾದ ಬೈಕ್ ಸವಾರ ಗವಿಸಿದ್ದಪ್ಪ ಬನ್ನಿಕೊಪ್ಪ ಎಂಬವವರ ಕಾಲು ಕಟ್ ಆಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಸವಾರ ಮುಂಡರಗಿಯಿಂದ ಹಿರೇವಡ್ಡಟ್ಟಿ ಗ್ರಾಮಕ್ಕೆ ತೆರಳುತ್ತಿದ್ದರು. ಇದೇ ವೇಳೆ ಗದಗನಿಂದ ಮುಂಡರಗಿ ಪಟ್ಟಣಕ್ಕೆ ಬರುತ್ತಿದ್ದ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಬೆಳಗಾವಿಯಲ್ಲಿ ಇಂದು ಘೋರವದಂತಹ ದುರಂತ ಸಂಭವಿಸಿದ್ದು ಮದುವೆ ಮಂಟಪಕ್ಕೆ ಏಕಾಏಕಿ ಟ್ರಾಕ್ಟರ್ ನುಗ್ಗಿದೆ. ಈ ವೇಳೆ ಟ್ರ್ಯಾಕ್ಟರ್ ಹರಿದು 7 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ವಡಗಾವಿಯ ಬಾಲಕೃಷ್ಣ ನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಕಣಬರ್ಗಿಯ ಆರುಷ್ ಮಹೇಶ ಮೋದೇಕರ (7) ಎಂದು ತಿಳಿದುಬಂದಿದೆ.ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಆರುಷ್, ಮಂಟಪದೊಳಗೆ ಆಟವಾಡುತ್ತಿದ್ದ. ಈ ವೇಳೆ ಮಣ್ಣು ತುಂಬಿದ ಟ್ರಾಕ್ಟರ್ ಏಕಾಏಕಿ ಮದುವೆ ಮಂಟಪಕ್ಕೆ ನುಗ್ಗಿದೆ. ಮಂಟಪದಲ್ಲಿ ಆಟವಾಡುತ್ತಿದ್ದ ಆರುಷ್ ಮೇಲೆ ಟ್ರ್ಯಾಕ್ಟರ್ ನುಗ್ಗಿ ಡಿಕ್ಕಿ ಹೊಡೆದಿದ್ದರಿಂದ ಆರುಷ್ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆ ಕುರಿತು ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಉಡುಪಿಯಲ್ಲಿ ಇಂದು ಸರ್ಕಾರಿ ಪ್ರೌಢಶಾಲೆಯಲ್ಲಿ ಇದ್ದಂತಹ 35 ವಿದ್ಯಾರ್ಥಿಗಳ ಮೇಲೆ ಹೆಜ್ಜೆನು ದಾಳಿ ನಡೆಸಿರುವ ಘಟನೆ, ಉಡುಪಿಯ ಒಳಕಾಡು ವಾರ್ಡ್ ನಲ್ಲಿರುವ ಪ್ರೌಢಶಾಲೆಯಲ್ಲಿ ನಡೆದಿದೆ. ಹೌದು ಶಾಲೆಯಲ್ಲಿದ್ದ 35ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಹೆಜ್ಜೆನು ದಾಳಿ ನಡೆಸಿದೆ.ಹೆಜ್ಜೇನು ದಾಳಿ ಮಾಡಿದ ತಕ್ಷಣ ಮಕ್ಕಳನ್ನು ಆಸ್ಪತ್ರೆ ಕರೆದೊಯ್ಯಲು SDMC ಸದಸ್ಯ ಬಂದಿದ್ದಾನೆ. ಈ ಗೆಳೆಯ SDMC ಸದಸ್ಯನ ಮೇಲೂ ಕೂಡ ಹೆಜ್ಜೆನು ದಾಳಿ ಮಾಡಿದೆ. ಸರ್ಕಾರಿ ಶಾಲೆಯ ತರಗತಿಯ ಪಕ್ಕದಲ್ಲಿ 5 ಹೆಜ್ಜೆನು ಗೂಡುಗಳು ಇವೆ. ಸದ್ಯ ಜಿಲಾಸ್ಪತ್ರೆಯ ಐಸಿಯುವಿನಲ್ಲಿ SDMC ಸದಸ್ಯನಿಗೆ ಇದೀಗ ಚಿಕಿತ್ಸೆ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿ ವೈದ್ಯರು ಡಿಸ್ಚಾರ್ಜ್ ಮಾಡಿದ್ದಾರೆ.
ಕೊಪ್ಪಳ : ಇಂದು ಕೊಪ್ಪಳದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಸ್ಟೀಲ್ ಫ್ಯಾಕ್ಟರಿಯಲ್ಲಿ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು 10 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಅಲ್ಲಾಗ್ರಾಮದ ಬಳಿ ಇಸ್ಪಾಟ್ ಸ್ಟೀಲ್ ಫ್ಯಾಕ್ಟರಿಯಲ್ಲಿ ಈ ದುರಂತ ನಡೆದಿದೆ. ಹೌದು ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ 9 ಜನ ಅಸ್ವಸ್ಥರಾಗಿದ್ದು, ಹೊಸಪೇಟೆ ಬಳಿ ಇಸ್ಪಾಟ್ ಸ್ಟೀಲ್ ಫ್ಯಾಕ್ಟರಿಯಲ್ಲಿ ಈ ಒಂದು ಘಟನೆ ನಡೆದಿದೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.ಓರ್ವ ಕಾರ್ಮಿಕ ಮೃತಪಟ್ಟು, ಹತ್ತಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ತಾಲೂಕಿನ ಅಲ್ಲಾನಗರ ಗ್ರಾಮದ ನಿವಾಸಿ ಮಾರುತಿ ಕೊರಗಲ್ (24) ಮೃತವ್ಯಕ್ತಿ ಎಂದು ಗುರುತಿಸಲಾಗಿದೆ. ಓರ್ವ ಕಾರ್ಮಿಕ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ ಎಂದು ತಿಳಿದುಬಂದಿದೆ. ಕೊಪ್ಪಳ ತಾಲೂಕಿನ ಅಲ್ಲಾನಗರ ಗ್ರಾಮದ ಬಳಿಯ ಫ್ಯಾಕ್ಟರಿಯಲ್ಲಿ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ 10 ಜನ ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.…
ಉತ್ತರಪ್ರದೇಶ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದ್ದು, ದೇಶದ ಎಲ್ಲಾ ರಾಜ್ಯಗಳು ಸೇರಿದಂತೆ ಜಗತ್ತಿನ ವಿವಿಧ ರಾಷ್ಟ್ರಗಳಿಂದ ಅನೇಕ ಜನರು ಭೇಟಿ ನೀಡುತ್ತಿದ್ದಾರೆ. ಇದೀಗ ಪ್ರಯಾಗ್ ರಾಜ್ ನಲ್ಲಿ ವಿಮಾನ ವಿಳಂಬವಾಗಿದ್ದಕ್ಕೆ ಅನ್ನ ನೀರಿಲ್ಲದೆ ಪ್ರಯಾಣಿಕರು ಪರದಾಟ ನಡೆಸುತ್ತಿದ್ದಾರೆ. ಹೌದು ತಾಂತ್ರಿಕ ದೋಷದಿಂದ ಸ್ಪೈಸ್ ಜೆಟ್ ವಿಮಾನ ಹಾರಾಟ ಇದೀಗ ವಿಳಂಬವಾಗಿದೆ. ಪ್ರಯಾಗ್ ರಾಜ್ ನಿಂದ ಬೆಂಗಳೂರಿಗೆ ತೆರಳಬೇಕಿದ್ದ ವಿಮಾನ ಇದೀಗ ವಿಳಂಬವಾಗಿದೆ. ಗಂಟೆಗಟ್ಟಲೆ ವಿಳಂಬವಾಗಿದ್ದರಿಂದ ವಿಮಾನ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಮಧ್ಯಾಹ್ನ 2:10ಕ್ಕೆ ಹೊರಡಬೇಕಿದ್ದ ವಿಮಾನ SG664 ಸಂಜೆಯಾದರೂ ವಿಮಾನ ಹೊರಡದಿದ್ದಕ್ಕೆ ಪ್ರಯಾಣಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಬೆಳಗ್ಗೆಯಿಂದ ವಿಮಾನ ನಿಲ್ದಾಣದಲ್ಲಿ ಕನ್ನಡಿಗರು ಕಾದು ಕುಳಿತಿದ್ದಾರೆ. ಅನ್ನ, ನೀರಿಲ್ಲದೆ ನೂರಾರು ವಿಮಾನ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ರಾತ್ರಿ 11 15ಕ್ಕೆ ವಿಮಾನ ಟೇಕ್ ಆಫ್ ಆಗುವುದಾಗಿ ಸಿಬ್ಬಂದಿಗಳು ಹೇಳುತ್ತಿದ್ದಾರೆ. ಸದ್ಯ ಸ್ಪೈಸ್ ಜೆಟ್ ವಿಮಾನ ಯಾನ ಸಂಸ್ಥೆಯ ವಿರುದ್ಧ ಸದ್ಯ ಪ್ರಯಾಣಿಕರು ಆಕ್ರೋಶ ಹೊರ…
ಚಿಕ್ಕಬಳ್ಳಾಪುರ : ಮೂರ್ಚೆ ರೋಗ ಇದ್ದಂತಹ ಯುವಕನೊಬ್ಬ ಅಸ್ವಸ್ಥಗೊಂಡು ಬೋಲೇರೋ ವಾಹನದಲ್ಲಿ ಮಲಗಿದ್ದಲ್ಲಿಯೇ ಸಾವನಪ್ಪಿದ್ದು, ವಾಹನದ ಮಾಲೀಕ ಬಂಧು ನೋಡಿದಾಗ ಯುವಕವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಲ್ಲಿ ನಡೆದಿದೆ. ಹೌದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಒಂದು ಘಟನೆ ನಡೆದಿದೆ. ಗೌರಿಬಿದನೂರು ನಗರದ ನಿವಾಸಿ ಸಲ್ಮಾನ್ ಮೃತ ದುರ್ದೈವಿ ಎಂದು ತಿಳಿದುಬಂದಿದ್ದು, ಮೂರ್ಛೆ ರೋಗದಿಂದ ಬಳಲುತ್ತಿದ್ದ ಸಲ್ಮಾನ್ ಅಸ್ವಸ್ಥಗೊಂಡು ವಾಹನದಲ್ಲಿ ಕುಳಿತಿದ್ದ. ವಾಹನದ ಮಾಲೀಕ ಬಂದು ನೋಡಿದಾಗ ಸಲ್ಮಾನ್ ಮೃತಪಟ್ಟಿದ್ದ ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .