Subscribe to Updates
Get the latest creative news from FooBar about art, design and business.
Author: kannadanewsnow05
ಶಿವಮೊಗ್ಗ, : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 07 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು 59 ಸಹಾಯಕಿಯರು, ಹೊಸನಗರದಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಮತ್ತು 144 ಸಹಾಯಕಿಯರು, ಸಾಗರದಲ್ಲಿ 3 ಅಂಗನವಾಡಿ ಕಾರ್ಯಕರ್ತೆಯರು ಮತ್ತು 62 ಸಹಾಯಕಿಯರು, ಶಿಕಾರಿಪುರದಲ್ಲಿ 1 ಅಂಗನವಾಡಿ ಕಾರ್ಯಕರ್ತೆಯರು ಮತ್ತು 23 ಸಹಾಯಕಿಯರು, ಶಿವಮೊಗ್ಗದಲ್ಲಿ 16 ಅಂಗನವಾಡಿ ಕಾರ್ಯಕರ್ತೆಯರು ಮತ್ತು 93 ಸಹಾಯಕಿಯರು, ಸೊರಬದಲ್ಲಿ 3 ಅಂಗನವಾಡಿ ಕಾರ್ಯಕರ್ತೆಯರು ಮತ್ತು 42 ಸಹಾಯಕಿಯರು ತೀರ್ಥಹಳ್ಳಿಯಲ್ಲಿ 11 ಅಂಗನವಾಡಿ ಕಾರ್ಯಕರ್ತೆಯರು ಮತ್ತು 69 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನಾಂಕವಾಗಿದ್ದು, ಅರ್ಹ ಅಭ್ಯರ್ಥಿಗಳು ವೆಬ್ಸೈಟ್ https://karnemakaone.kar.nic.in/abcd/ ಮೂಲಕ…
೧] ಸುಮಂಗಲಿಯರು ಬೈತಲೆಯಲ್ಲಿ ಯಾವಾಗಲೂ ಕುಂಕುಮ ಇರದೇ ಇರಬಾರದು. ೨] ಎರಡು ಕೈಗಳಿಂದಲೂ ತಲೆಯನ್ನು ಕೆರೆದುಕೊಳ್ಳಬಾರದು, ೩] ಯಾವುದೇ ಕಾರಣಕ್ಕೂ ಸಂಧ್ಯಾ ಕಾಲದಲ್ಲಿ ಕಣ್ಣಲ್ಲಿ ನೀರು ಹಾಕಬಾರದು. ೪] ಮನೆಗೆ ಬಂದ ಹೆಂಗಸರಿಗೆ ಹರಿಶಿನ, ಕುಂಕುಮ, ಹೂಗಳನ್ನು ಕೊಟ್ಟೆ ಕಳಿಸಬೇಕು. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ೫] ಗರ್ಭಿಣಿ ಸ್ತ್ರೀಯರು ತೆಂಗಿನ ಕಾಯಿ ಮತ್ತು ಕುಂಬಳ ಕಾಯಿ ಹೊಡೆಯಕೂಡದು ಮತ್ತು ಹೊಡೆವ ಜಾಗದಲ್ಲೂ ಇರಕೂಡದು. ೬] ಗರ್ಭಿಣಿ ಸ್ತ್ರೀಯರು ನಿಂಬೆಹಣ್ಣನ್ನು ಕೊಯ್ದು ಬಾರದು…
ಮಂಡ್ಯ : ಇಂದು ಮಂಡ್ಯ ಎಸ್ಪಿ ಕಚೇರಿಗೆ ಪೊಲೀಸ್ ಮಹಾನಿರ್ದೇಶಕ ಡಾ.ಸಲೀಂ ದಿಢೀರ್ ಭೇಟಿ ನೀಡಿದರು. ಪೊಲೀಸ್ ಮಹಾನಿರ್ದೇಶಕ ಡಾ.ಸಲೀಂ ಐಪಿಎಸ್ ರನ್ನು ಹೂಗುಚ್ಚು ನೀಡಿ ಆತ್ಮೀಯವಾಗಿ ಬರಮಾಡಿಕೊಂಡ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಎಸ್ಪಿ ಕಚೇರಿಯಲ್ಲಿ ಪೊಲೀಸ್ ಮಹಾ ನಿರ್ದೇಶಕರಿಗೆ ಗೌರವ ವಂದನೆ. ಗೌರವ ವಂದನೆ ಬಳಿಕ ಎಸ್ಪಿ ಕಚೇರಿಯಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಸಭೆಯಲ್ಲಿ ವಿಮರ್ಶನ ಸಭೆ ನಡೆಸಿ ಕರ್ತವ್ಯ ನಿರ್ವಹಣೆ ಕುರಿತು ಅಧಿಕಾರಿಗಳಿಗೆ ಸೂಕ್ತ ಸಲಹೆ ನಿರ್ದೇಶನ ಕೊಟ್ಟರು.ಬಳಿಕ ಮಂಡ್ಯ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಛೇರಿಗೆ ಭೇಟಿ ನೀಡಿದರು. ಶ್ವಾನದಳ, ಉಗ್ರಾಣ, ಸ್ವಚ್ಛತೆ ಇತ್ಯಾದಿಗಳನ್ನು ಪರಿಶೀಲನೆ. ನಂತರ ಪೊಲೀಸ್ ವಸತಿ ಸಮುಚ್ಚಯಗಳಿಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಕುಟುಂದವರ ಕುಂದು ಕೊರತೆಗಳನ್ನು ಆಲಿಸಿದರು. ಇದೇ ವೇಳೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ ಸಿಬ್ಬಂದಿಗಳ ಕುಂದು ಕೊರತೆಯನ್ನು ಆಲಿಸಿದರು. ಠಾಣೆಯ ಕಾರ್ಯವೈಖರಿ & ದಾಖಲಾತಿಗಳನ್ನು ಪರಿಶೀಲಿಸಿ ಠಾಣಾಧಿಕಾರಿಗೆ ಸೂಕ್ತ…
ಬೆಂಗಳೂರು : ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದ ಮತಗಳ್ಳತನ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಮತಗಳ್ಳತನ ಯತ್ನ ಕೃತ್ಯದಲ್ಲಿ ಪಶ್ಚಿಮ ಬಂಗಾಳದ ಕುಗ್ರಾ ಮದಲ್ಲಿ ಕೂತು 10 ರುಪಾಯಿಗೆ ಒಂದು ಒಟಿಪಿ ಮಾರುತ್ತಿದ್ದ ಕಿಡಿಗೇಡಿಯೊಬ್ಬ ನನ್ನು ಎಸ್ಐಟಿ ಬಂಧಿಸಿ ಕರೆತಂದಿದೆ. ಹೌದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಗಳ್ಳತನದ ಕುರಿತು ಗಂಭೀರವಾಗಿ ಆರೋಪ ಮಾಡಿದ್ದರು. ಅಲ್ಲದೇ ಆಳಂದ್ ಕ್ಷೇತ್ರದಲ್ಲಿ ಸಹ ಮತಗಳ್ಳತನ ಆಗಿರುವ ಕುರಿತು ಆರೋಪಿಸಿದ್ದರು. ಇದೀಗ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಬಾಪಿ ಆದ್ಯ ಬಂಧಿತ ಆರೋಪಿ. ಈತನಿಂದ ಎರಡು ಲ್ಯಾಪ್ಟಾಪ್ ಹಾಗೂ ಕೆಲ ತಾಂತ್ರಿಕ ವಸ್ತುಗಳನ್ನು ಎಸ್ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇತ್ತೀಚೆಗೆ ಪ್ರಕರಣ ಸಂಬಂಧ ಕಲಬುರಗಿ ನಗರದಲ್ಲಿ ಕೆಲವರನ್ನು ವಶಕ್ಕೆ ಪಡೆದು ಎಸ್ಐಟಿ ವಿಚಾರಣೆ ನಡೆಸಿತು. ಆಗ ಬಂಗಾಳದ ವ್ಯಕ್ತಿಯೊಬ್ಬನ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಸುಳಿವು ಆಧರಿಸಿ ಬೆನ್ನತ್ತಿದ್ದ ಎಸ್ಐಟಿ, ಕೊನೆಗೆ ಹಳ್ಳಿಯಲ್ಲೇ ಕೂತು ಒಟಿಪಿ ಮಾರುತ್ತಿದ್ದ ಆದ್ಯನನ್ನು ಸೆರೆ…
ಬೆಂಗಳೂರು : ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಇತ್ತೀಚಿಗೆ HD ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಮಾಡದಿದ್ದಕ್ಕೆ ಹಾಗು ಕೋರ್ ಕಮಿಟಿಯಿಂದ ಕೈ ಬಿಟ್ಟಿದ್ದಕ್ಕೆ ಬೇಸರ ಹೊರಹಕಿದ್ದಾರೆ. ಜೆಡಿಎಸ್ ಶಾಸಕಾಂಗ ನಾಯಕ ಸ್ಥಾನ ನೀಡುತ್ತೇವೆಂದು ಆಶ್ವಾಸನೆ ನೀಡಿ ಕೊನೆಗೆ ಬೇರೆಯವರಿಗೆ ಆ ಸ್ಥಾನ ನೀಡಿದರು. ಈಗ ಪಕ್ಷದ ಕೋರ್ ಕಮಿಟಿಯಿಂದಲೂ ನನ್ನನ್ನು ಕೇಳದೆ ಕೈಬಿಟ್ಟರು. ಈ ಎಲ್ಲದರಿಂದ ನನಗೆ ನೋವಾಗಿದೆ. ಹಾಗೆಂದ ಮಾತ್ರಕ್ಕೆ ನಾನು ಪಕ್ಷ ಬಿಡುವುದಿಲ್ಲ. ನನ್ನ ಮಿತಿಯಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಪಕ್ಷದ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಪಾಂಡವಪುರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದ ವೇಳೆ ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಎಲ್ಲರೂ ಜೆಡಿಎಸ್ ಶಾಸಕಾಂಗ ನಾಯಕ ಸ್ಥಾನ ನಿಮಗೆ ನೀಡಲಾಗುತ್ತದೆ ಎಂದು ಹೇಳಿ ಶುಭ ಹಾರೈಸಿದರು. ಆದರೆ, ಮರುದಿನವೇ ಸುರೇಶ್ ಬಾಬು ಅವರನ್ನು ಜೆಡಿಎಲ್ಪಿ ನಾಯಕನ್ನಾಗಿ ಆಯ್ಕೆ ಮಾಡಿರುವ ಪತ್ರವನ್ನು ಸ್ಪೀಕರ್ ಕಚೇರಿಗೆ ಕಳುಹಿಸಿದರು. ಅದಾದ ನಂತರವೂ…
ಬೆಂಗಳೂರು : ಬೆಂಗಳೂರಲ್ಲಿ ಮತ್ತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂತಾರಾಷ್ಟ್ರೀಯ ಡ್ರಗ್ಸ್ ಮಾಫಿಯಾ ವಿರುದ್ಧ ಮತ್ತೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಕಸ್ಟಮ್ಸ್ ಅಧಿಕಾರಿಗಳು, 6.5 ಕೋಟಿ ರು. ಮೌಲ್ಯದ ಹೈಡೋ ಗಾಂಜಾ ಜಪ್ತಿ ಮಾಡಿದ್ದಾರೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕವಾಗಿ ಈ ಕಾರ್ಯಾಚರಣೆ ನಡೆದಿದ್ದು, ಬ್ಯಾಂಕಾಕ್ನಿಂದ ಕೆಐಎಗೆ ಬಂದಿಳಿದ ಮೂವರನ್ನು ಸೆರೆಹಿಡಿದು 6.5 ಕೋಟಿ ರು. ಮೌಲ್ಯದ ಗಾಂಜಾ ವಶಪಡಿ ಸಿಕೊಂಡಿದ್ದಾರೆ. ಕಳೆದ ಎರಡು ವಾರಗಳಿಂದಕೆಐಎನಲ್ಲಿಡ್ರಗ್ಸ್ ದಂಧೆಕೋರರ ವಿರುದ್ಧ ಕಸ್ಟಮ್ಸ್ ಅಧಿಕಾರಿಗಳು ನಿರಂತರ ವಾಗಿ ಕಾರ್ಯಾಚರಣೆ ನಡೆಸಿದ್ದಾರೆ. 2 ಇದುವರೆಗೆ 10ಕ್ಕೂ ಹೆಚ್ಚಿನ ಪೆಡ್ಡರ್ಗಳು ಸಿಕ್ಕಿಬಿದ್ದು 60 ಕೋಟಿ ರು. ಹೈಡೋ ಗಾಂಜಾ ಜಪ್ತಿಯಾಗಿದೆ. ಬ್ಯಾಂಕಾಂಕ್ ನಿಂದ ವಿಮಾನ ನಿಲ್ದಾಣದ ಭದ್ರತಾ ವ್ಯವಸ್ಥೆ ಕಣ್ಣು ತಪ್ಪಿಸಿ ಗಾಂಜಾ ಸಾಗಾಣಿಕೆಗೆ ಡ್ರಗ್ಸ್ ಜಾಲ ಯತ್ನಿಸಿರುವ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳಿಗೆ ಖಚಿತ ಮಾಹಿತಿ ಸಿಕ್ಕಿತು. ಈ ಸುಳಿವು ಆಧರಿಸಿ ಬ್ಯಾಂಕಾಂಗ್ನಿಂದ ಬಂದಿಳಿಯುವ…
ಬೆಳಗಾವಿ : ಈತ ಅಂತಿಂತ ಕಳ್ಳನಲ್ಲ ಈತನಿಗೆ ಕಡಿಯೋಕೆ ಬಾಲಿವುಡ್ ನಟನ ಸಿನೆಮಾನೇ ಸ್ಫೂರ್ತಿ ಅಂತೇ ಕದ್ದ ಚಿನ್ನ ಬೆಳ್ಳಿ ಹಣದಲ್ಲಿ ಕಾರು ಬೈಕ್ ತಗೊಂಡು ಶೋಕಿ ಮಾಡ್ಕೊಂಡು ಆರಾಮಾಗಿದ್ದ ಆದ್ರೆ ನಮ್ಮ ಪೊಲೀಸರು ಬಿಡ್ಬೇಕು ಅಲಾ ಇದೀಗ ಈತನನ್ನು ಹೆಡೆಮುರಿ ಕಟ್ಟಿ ಜೈಲಿಗೆ ಅಟ್ಟಿದ್ದಾರೆ. ಹೌದು ಬಂಧಿತನ ಆರೋಪಿಯ ಹೆಸರು ಸುರೇಶ ನಾಯಿಕ. ಬೆಳಗಾವಿಯ ಮಹಾಂತೇಶ ನಗರ ನಿವಾಸಿ ಎಂದು ತಿಳಿದುಬಂದಿದೆ. ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದ ವಿಶ್ವನಾಥ ದುಗ್ಗಾಣಿ ಎಂಬವರ ಮನೆಯಲ್ಲಿ, ಅಕ್ಟೋಬರ್ 18 ಹಾಗೂ 22ರ ಮಧ್ಯೆ ಮನೆಗಳ್ಳತನ ನಡೆದಿತ್ತು. ಅಪಾರ ಪ್ರಮಾಣದ ಚಿನ್ನ ಮತ್ತು ಬೆಳ್ಳಿ ಆಭರಣಗಳು ಹಾಗೂ ನಗದು ದೋಚಲಾಗಿತ್ತು. ಈ ಕುರಿತು ದೂರು ದಾಖಲಿಸಿಕೊಂಡಿದ್ದ ಯಮಕನಮರಡಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು. ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು 89 ಲಕ್ಷ 60 ಸಾವಿರ ರೂ. ಮೌಲ್ಯದ 128 ತೊಲ (1280 ಗ್ರಾಂ) ಚಿನ್ನಾಭರಣ, 5 ಲಕ್ಷ 95 ಸಾವಿರ ರೂ. ಮೌಲ್ಯದ 8.5…
ಬೆಂಗಳೂರು : ಮನೆ ಕೆಲಸದವಳ ಮೇಲೆ ಅತ್ಯಾಚಾರ ಆರೋಪದಲ್ಲಿ ಜೀವಿತಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ಅಲ್ಲಿ ವಿಚಾರಣೆ ನಡೆಸಿತು. ಈ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು ಪ್ರಜ್ವಲ್ ರೇವಣ್ಣಗೆ ಜೀವಿತಾವಧಿ ಶಿಕ್ಷೆಯ ಆದೇಶಕ್ಕೆ, ಸೂಕ್ತ ಆಧಾರಗಳು ಇಲ್ಲವಾಗಿವೆ ಎಂದು ತಿಳಿಸಿದರು. ವಿಚಾರಣೆ ವೇಳೆ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಸಾಕ್ಷಿಗಳು ನೀಡಿರುವ ಹೇಳಿಕೆಗಳು ಗೊಂದಲಮಯವಾಗಿದ್ದು, ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿಧಿಸಿರುವ ಜೀವಿತಾವಧಿ ಶಿಕ್ಷೆಯ ಆದೇಶಕ್ಕೆ ಸೂಕ್ತ ಆಧಾರಗಳು ಇಲ್ಲವಾಗಿವೆ. ಹಾಲಿ ಪ್ರಕರಣದಲ್ಲಿ ಸಾಕ್ಷಿಗಳ ನಡುವೆ ಹೊಂದಾಣಿಕೆ ಇಲ್ಲ. ಅರ್ಜಿದಾರರ ವಿರುದ್ಧ ಆರೋಪ ಸಾಬೀತಾಗುವಂತಹ ಯಾವುದೇ ಪುರಾವೆಗಳಿಲ್ಲ. ವಿದ್ಯುನ್ಮಾನ, ವೈದ್ಯಕೀಯ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ಸಾಕ್ಷಿಯಲ್ಲಿ ಸಾಕಷ್ಟು ಗೊಂದಲಗಳಿವೆ. ಆಕ್ಷೇಪಿತ ವಿಡಿಯೊಗಳು ವಿಶ್ವಾಸಾರ್ಹವಾಗಿಲ್ಲ ಎಂದು ಪೀಠಕ್ಕೆ ಹೇಳಿದರು. ಆಗಸ್ಟ್ 1ರಂದು ಪ್ರಜ್ವಲ್ರನ್ನು ದೋಷಿ ಎಂದು…
ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಕೇವಲ ಹಾರ್ನ್ ಮಾಡಿದಕ್ಕೆ ಬೈಕ್ ಗೆ ಕಾರು ಗುದ್ದಿಸಿ ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಸದಾಶಿವನಗರ್ ಪೊಲೀಸ್ ಹಣ ವ್ಯಾಪ್ತಿಯಲ್ಲಿ ನಡೆದಿದೆ. ಸಾಫ್ಟ್ವೇರ್ ಇಂಜಿನಿಯರ್ ನಿಂದ ಕೊಲೆಗೆ ಯತ್ನಿಸಿರುವ ಘಟನೆ ವರದಿಯಾಗಿದ್ದು ಹಾರ್ನ್ ಮಾಡಿದ್ದಕ್ಕೆ ಕೋಪಗೊಂಡು ಬೈಕಿಗೆ ಕಾರು ಡಿಕ್ಕಿ ಹೊಡೆದಿದ್ದಾನೆ. ಸಾಫ್ಟ್ವೇರ್ ಇಂಜಿನಿಯರ್ ಸುಕೃತ್ ಕೇಶವನಿಂದ ಈ ಒಂದು ಕೃತ್ಯ ನಡೆದಿದೆ. ಸುಕೃತ್ ಬೈಕಿಗೆ ಡಿಕ್ಕಿ ಹೊಡೆಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಕ್ಟೋಬರ್ 26ರಂದು ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ದಾವಣಗೆರೆ : ಸೈಬರ್ ಅಪರಾಧ ಲೋಕದ ಅತಿ ದೊಡ್ಡ ಸ್ಟೋರಿಗೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ ಎರಡು ತಿಂಗಳಲ್ಲಿ ಸೈಬರ್ ವಂಚಕನ ಅಕೌಂಟ್ ನಲ್ಲಿ 150 ಕೋಟಿ ರೂಪಾಯಿ ವಹಿವಾಟ ಸಂಬಂಧ ಗುಜರಾತಿನ ಅಹಮದಾಬಾದ್ ಮೂಲದ ಸಂಜಯ್ ಕುಂಟ್ ಎನ್ನುವ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ವಿಚಾರಣೆಯ ವೇಳೆ ಕರೆಂಟ್ ಅಕೌಂಟ್ ಗಳ ಮಾರಾಟ ದಂಧೆ ಬಯಲಾಗಿದೆ. ದಾವಣಗೆರೆಯ ಪ್ರಮೋದ್ ಎಂಬಾತ ಸೈಬರ್ ವಂಚಕರಿಂದ 52 ಲಕ್ಷ ರೂ. ಕಳೆದು ಕೊಂಡಿದ್ದೇನೆಂದು ಆ.29 ರಂದು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಪ್ರಕರಣದ ಜಾಡು ಹಿಡಿದ ದಾವಣಗೆರೆ ಸೆನ್ ಪೊಲೀಸರಿಗೆ ಬಗೆದಷ್ಟು ಸ್ಪೋಟಕ ಮಾಹಿತಿ ಸಿಗುತ್ತಿದೆ. ಈಗ ದೂರು ಕೊಟ್ಟ ಪ್ರಮೋದ್ ಸಹ ಸೈಬರ್ ವಂಚನೆಯ ಗ್ಯಾಂಗ್ ಸದಸ್ಯ ಎಂಬುದು ಗೊತ್ತಾಗಿದೆ. ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ. ಅಲ್ಲದೇ ಸಂಜಯ್ ವಿಚಾರಣೆ ವೇಳೆ ಕರೆಂಟ್ ಅಕೌಂಟ್ ಗಳ ಮಾರಾಟ ದಂಧೆ ಬದಲಾಗಿದ್ದು, ಉದ್ಯಮ ಇಲ್ಲದಿದ್ದರೂ ಬ್ಯಾಂಕ್ ಸೊಸೈಟಿಗಳಲ್ಲಿ ಕರೆಂಟ್…














