Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ತುಮಕೂರು : ಸಿದ್ದಗಂಗಾ ಮಠದ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗುತ್ತಿದೆ. ಮಠದ ಹೆಸರು ದುರುಪಯೋಗಪಡಿಸಿಕೊಂಡು ಕಿಡಿಗೇಡಿಗಳು ದೇಣಿಗೆ ಸಂಗ್ರಹಿಸುತ್ತಿದ್ದಾರೆ ಎನ್ನುವ ಆರೋಪ ಇದೀಗ ಕೇಳಿ ಬಂದಿದೆ. ಮಠದ ಹೆಸರಿನಲ್ಲಿ ಬಂಜೆತನಕ್ಕೆ ಎಂದು ನಕಲಿ ಔಷಧಿ ವಿತರಣೆ ಮಾಡಲಾಗುತ್ತಿದ್ದು, ನಕಲಿ ಔಷಧ ಕೊಟ್ಟು ಕಿಡಿಗೇಡಿಗಳು ದೇಣಿಗೆ ಸಂಗ್ರಹ ಮಾಡುತ್ತಿದ್ದಾರೆ. ದೇಣಿಗೆ ಸಂಗ್ರಹಕ್ಕೆ ಮಠದಿಂದ ಯಾರನ್ನು ನೇಮಿಸಿಲ್ಲ ಔಷಧಿ ವಿತರಣೆಯು ಮಾಡುತ್ತಿಲ್ಲ ಎಂದು ಸಿದ್ದಗಂಗಾ ಮಠ ಸ್ಪಷ್ಟಪಡಿಸಿದೆ.
ಬಡತನ ನೀಗಿಸುವ ದಿವ್ಯ ಮಂತ್ರ “ಕನಕಧಾರ” ಸ್ತೋತ್ರ. ‘ಕನಕ’ ಅಂದರೆ ಬಂಗಾರ ‘ಧಾರಾ’ ಅಂದರೆ ಧಾರಾಕಾರ ಮಳೆಯಂತೆ ಸುರಿಯುವುದು. ಹಾಗೆ ಧಾರೆಯಂತೆ ಬಂಗಾರದ ಮಳೆಗರೆಸಿದವರು, ಜಗತ್ತು ಕಂಡ ಮಹಾನ್ ಶ್ರೇಷ್ಠರು, ದಿವ್ಯ ಜ್ಞಾನಿಗಳ ಲ್ಲೇ ಒಬ್ಬರಾದ, ಗುರುಗಳಿಗೆಲ್ಲ ಪ್ರಥಮ ಆದಿ ಗುರು ಶಂಕರಾಚಾರ್ಯರು. ಇವರು ಕೇರಳದ ಕಾಲಡಿ ಗ್ರಾಮದಲ್ಲಿ ಜನಿಸಿದರು. ಅತೀ ಚಿಕ್ಕ ವಯಸ್ಸಿನಲ್ಲೇ ವೇದಾಧ್ಯ ಯನ, ಹಾಗೂ ಎಲ್ಲಾ ಶಾಸ್ತ್ರಗಳ ಅಧ್ಯಯನವನ್ನು ಮಾಡಿ ಸನ್ಯಾಸ ಸ್ವೀಕರಿಸಿ ಪರಿವ್ರಾಜಕಚಾರ್ಯರಾಗಿ ಇಡೀ ಭರತ ಭೂಮಿಯನ್ನು ಕಾಲ್ನಡಿಗೆಯಲ್ಲಿಯೇ ಮೂರು ಬಾರಿ ಸಂಚರಿಸಿ, ಅನ್ಯ ಧರ್ಮೀಯರು ತಮ್ಮ ಮತವನ್ನು ಸ್ಥಾಪಿಸಲು ಹವಣಿಸುತ್ತಿದ್ದ ಧರ್ಮಗಳನ್ನು ಖಂಡಿಸಿ, ಭಾರತದಲ್ಲಿ ಶಾಶ್ವತವಾದ ಸನಾತನ ಹಿಂದೂ ಧರ್ಮವನ್ನು ಪುನಃ ಪ್ರತಿಷ್ಠಾಪಿಸಿದ ಜಗದ್ಗುರು ಆದಿ ಶಂಕರಾಚಾರ್ಯರು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ…
ಬಳ್ಳಾರಿ : ಬಳ್ಳಾರಿಯಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆಯಲ್ಲಿ ಕೈ ಕಾರ್ಯಕರ್ತ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳು ಇದೀಗ ನಾಪತ್ತೆಯಾಗಿದ್ದಾರೆ. ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ಗುಂಡು ಹಾರಿಸಿದರು. ಗನ್ ಮ್ಯಾನ್ ಗಳು ಐದು ಗನ್ ಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜನಾರ್ಧನ ರೆಡ್ಡಿ ಸತೀಶ ರೆಡ್ಡಿ ಗೆ ಸಂಬಂಧಿಸಿದಂತೆ ಎಲ್ಲಾ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ. ಸತೀಶ್ ರೆಡ್ಡಿಯ ನಾಲ್ವರು ಖಾಸಗಿ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ.
ತುಮಕೂರು : ತುಮಕೂರಲ್ಲಿ ಘೋರ ದುರಂತ ಸಂಭವಿಸಿದ್ದು, ಜೋಳದ ಚಿಗುರು ಸೇವಿಸಿ 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪೆನ್ನೊಬನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಜಂಪಕ್ಕ ಎಂಬುವವರಿಗೆ ಸೇರಿದ್ದ ಸುಮಾರು 50ಕ್ಕೂ ಕುರಿಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಕುರಿಗಳು ಸಾವನ್ನಪ್ಪಿವೆ. ಇದರಿಂದ ಕುರಿಗಾಹಿ ಕಂಗಾಲಾಗಿದ್ದಾನೆ. ಪ್ರತಿದಿನದಂತೆ ಮೊನ್ನೆ ಮೇವಿಗೆ ಕುರಿಗಳನ್ನು ಕೆರೆದೋಯ್ದಗ ಈ ಘಟನೆ ನಡೆದಿದೆ. ಎಂದಿನಂತೆ 200ಕ್ಕೂ ಹೆಚ್ಚು ಕುರಿಗಳು ಹುಲ್ಲು ಮೆಯುತ್ತಿತ್ತು. ಇದ್ದಕ್ಕಿದಂತೆ 50ಕ್ಕೂ ಹೆಚ್ಚು ಕುರಿಗಳು ಕುಸಿದು ಬಿದ್ದು ಸಾವನ್ನಪ್ಪಿವೆ. ವಿಷಯ ತಿಳಿದು ಸ್ಥಳಕ್ಕೆ ಪಶು ಇಲಾಖೆ ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮುಂಬೈ : ಇಡೀ ದೇಶವೇ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಇರುವಾಗ ಮುಂಬೈನಲ್ಲಿ ಒಂದು ಘೋರವಾದ ದುರಂತ ಒಂದು ಸಂಭವಿಸಿದೆ. ಮಹಿಳೆಯೊಬ್ಬಳು ಹೊಸ ವರ್ಷಾಚರಣೆಗೆ ಸಿಹಿ ಕೊಡ್ತೇನೆ ಎಂದು ಪ್ರಿಯಕರನನ್ನು ಮನೆಗೆ ಕರೆಸಿ ಆತನ ಖಾಸಗಿ ಅಂಗವನ್ನೇ ಕತ್ತರಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಹೌದು 25 ವರ್ಷದ ವಿವಾಹಿತ ಮಹಿಳೆ ತನ್ನ 44 ವರ್ಷದ ಪ್ರಿಯಕರನಿಗೆ ಪತ್ನಿಯನ್ನು ಬಿಟ್ಟು ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಳು ಎನ್ನಲಾಗಿದೆ. ಇದು ಅವರ ನಡುವೆ ಆಗಾಗ ಜಗಳಕ್ಕೆ ಕಾರಣವಾಗಿತ್ತು. ಇದೇ ಕಾರಣಕ್ಕೆ ಡಿಸೆಂಬರ್ 31 ರಂದು ಮಹಿಳೆ ತನ್ನ ಪ್ರಿಯಕರನ ಮೇಲೆ ದಾಳಿ ನಡೆಸಿದ್ದಾಳೆ. ಡಿಸೆಂಬರ್ 31 ರಂದು ಮಹಿಳೆ ಹೊಸ ವರ್ಷಕ್ಕೆ ಸ್ವೀಟ್ ನೀಡುವ ನೆಪದಲ್ಲಿ ಅವನನ್ನು ತನ್ನ ಮನೆಗೆ ಆಹ್ವಾನಿಸಿದ್ದಳು. ಆ ಸಮಯದಲ್ಲಿ, ಮಹಿಳೆಯ ಮಕ್ಕಳು ಮನೆಯಲ್ಲಿ ಮಲಗಿದ್ದರು. ಮಹಿಳೆ ಮೊದಲು ಪ್ರಿಯಕರನ ಪ್ಯಾಂಟ್ ತೆಗೆಯಲು ಹೇಳಿ, ಅಡುಗೆ ಮನೆಗೆ ಹೋಗಿ ತರಕಾರಿ ಕತ್ತರಿಸುವ ಚಾಕು ತಂದು, ಇದ್ದಕ್ಕಿದ್ದಂತೆ ಬಲಿಪಶುವಿನ ಖಾಸಗಿ ಅಂಗದ ಮೇಲೆ…
ಗದಗ : ಗದಗದಲ್ಲಿ ಕಿಡಿಗೇಡಿಗಳು ಮಾಡಿದ ಕೃತ್ಯಕ್ಕೆ 60 ಲಕ್ಷ ಮೌಲ್ಯದ ಮೆಕ್ಕೆಜೋಳ ಇದೀಗ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು 60 ಲಕ್ಷ ಮೌಲ್ಯದ ಮೆಕ್ಕೆಜೋಳ ಬೆಂಕಿಗೆ ಆಹುತಿಯಾಗಿದೆ. ದುಷ್ಕರ್ಮಿಗಳ ಕೃತ್ಯಕ್ಕೆ 60 ಲಕ್ಷ ಮೌಲ್ಯದ ಮೆಕ್ಕೆಜೋಳ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಡೀಸೆಲ್ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ, ನಾಲ್ಕು ಜನ ದಷ್ಕರ್ಮಿಗಳು ಬೆಂಕಿಸಿರುವ ಶೆಕೆ ವ್ಯಕ್ತವಾಗಿದೆ.ಸುಮಾರು 100 ಎಕರೆ ಪ್ರದೇಶದಲ್ಲಿ ಮೆಕ್ಕೆಜೋಳ ರೈತ ಬೆಳೆದಿದ್ದರು ಸುಟ್ಟು ಹೋಗುತ್ತಿದ್ದ ಮೆಕ್ಕೆಜೋಳಕ್ಕೆ ಜಿಗಿದು ರೈತ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಕ್ಕಳ ಸಮೇತ ಬೆಂಕಿಗೆ ಜಿಗಿದು ಆ ಖಾತೆಗೆದರಿಸಿದ್ದಾರೆ ಇವಳೇ ತಕ್ಷಣ ಸ್ಥಳೀಯಲ್ಲಿದ್ದ ಗ್ರಾಮಸ್ಥರು ರೈತ ಕುಟುಂಬವನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ದಾವಣಗೆರೆ : ದಾವಣಗೆರೆ ಪಾಲಿಕೆ ಜಾಗದಲ್ಲಿ ಶಾಲಾ ಕಟ್ಟಡ ನಿರ್ಮಾಣ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಪಾಲಿಕೆ ಸಿಬ್ಬಂದಿಗಳು ಖಾಸಗಿ ಶಾಲೆ ತೆರವುಗೊಳಿಸಿರುವ ಘಟನೆ ವರದಿಯಾಗಿದೆ. ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಮಕ್ಕಳನ್ನು ಹೊರಗೆ ಕಳುಹಿಸಿ ಶಾಲೆಯನ್ನು ತೆರವುಗೊಳಿಸಿದ್ದಾರೆ. ದಾವಣಗೆರೆಯ ಎಸ್ ಓ ಜಿ ಕಾಲೋನಿಯಲ್ ಇರುವ ಜೀವಿಎಸ್ ಖಾಸಗಿ ಶಾಲೆ ಪಾಲಿಕೆ ಸಿಬ್ಬಂದಿಗಳು ತೆರವುಗೊಳಿಸಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆಯ ಕಮಿಷನರ್ ರೇಣುಕಾ ಹಾಗೂ ತಹಶೀಲ್ದಾರ್ ಅಶ್ವತ್ ಸಮುಖದಲ್ಲಿ ಶಾಲೆಯನ್ನು ತೆರವುಗೊಳಿಸಲಾಯಿತು. ಖಾಸಗಿ ವ್ಯಕ್ತಿಯಿಂದ ಜಮೀನು ಬಾಡಿಗೆ ಪಡೆದು ಪ್ರಭು ಶಾಲೆ ಶಾಲೆ ನಡೆಸುತ್ತಿದ್ದರು ಪಾಲಿಕೆಗೆ ಸೇರಿದ ಜಾಗದಲ್ಲಿ ಶಾಲೆ ಇದೆ ಎಂದು ಅಧಿಕಾರಿಗಳ ವಾದವಾಗಿತ್ತು. ಶಾಲೆ ಸ್ಥಳಾಂತರ ಮಾಡಲು ಪ್ರಭು ಸಮಯಾವಕಾಶ ಕೇಳಿದರು ಬೆಳಿಗ್ಗೆ ಕಾಲಾವಕಾಶ ಕೊಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಇದೀಗ ಪೊಲೀಸರ ಸಮ್ಮುಖದಲ್ಲಿ ಪಾಲಿಗೆ ಶಾಲೆ ತೆರವುಗೊಳಿಸಿದ್ದಾರೆ ಕಳೆದ 15 ವರ್ಷಗಳಿಂದ ಜೀವಿ ಎಸ್ ಖಾಸಗಿ ಶಾಲೆ ಅಲ್ಲಿಯೆ ನಡೆಸಿಕೊಂಡು ಬಂದಿದ್ದರು. ಮಕ್ಕಳನ್ನು ಹೊರಗೆ ಹಾಕುವ ವೇಳೆ ಮಕ್ಕಳು ಕಣ್ಣೀರಿಡುತ್ತಾ,…
ಬೆಳಗಾವಿ : ಬೆಳಗಾವಿಯಲ್ಲಿ ಮೂರು ಮಕ್ಕಳ ತಾಯಿಯ ಜೊತೆ ಅಕ್ರಮ ಸಂಬಂಧ ಹೊಂದಿದ ಯುವಕನಿಗೆ ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ವರದಿಯಾಗಿದೆ. ಆಂಟಿಯನ್ನು ಮೀಟ್ ಮಾಡಲು ಹೊರಟಿದ್ದ ಲವರ್ಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಕಳೆದ ನಾಲ್ಕು ವರ್ಷಗಳಿಂದ ಅಕ್ಷಯ್ ಎಂಬಾತ ಆಂಟಿ ಜೊತೆಗೆ ಸಂಪರ್ಕ ಹೊಂದಿದ್ದ. ಮೂರು ಮಕ್ಕಳ ತಾಯಿ ಜೊತೆಗೆ ಅಕ್ಷಯ್ ಅನೈತಿಕ ಸಂಬಂಧ ಹೊಂದಿದ್ದ ಎನ್ನುವ ಆರೋಪ ಕೇಳಿ ಬಂದಿದೆ. ಕಳೆದ ರಾತ್ರಿ ಭೇಟಿಯಾಗಬೇಕು ಬಾ ಎಂದು ಮಹಿಳೆ ಅಕ್ಷಯನನ್ನು ಕರೆದಿದ್ದಾಳೆ. ಈ ವೇಳೆ ಮಹಿಳೆಯನ್ನು ಭೇಟಿ ಮಾಡಲು ಹೊರಟಿದ್ದ ಅಕ್ಷಯನನ್ನು ದಾರಿ ಮಧ್ಯೆಯೇ ತಡೆದು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ರಾತ್ರಿ ಬೇಟಿ ಆಗಬೇಕು ಬಾ ಎಂದು ಮಹಿಳೆ ಅಕ್ಷಯನನ್ನು ಕರೆದಿದ್ದಾಳೆ ಈ ವೇಳೆ ಅಕ್ಷಯ್ ಮಹಿಳೆಯನ್ನು ಭೇಟಿ ಮಾಡಲು ಹೊರಡುವಾಗ ದಾರಿ ಮಧ್ಯೆ ತಡೆದು ಹಲ್ಲೆ ಮಾಡಿದ್ದಾರೆ. ಅಕ್ಷಯ್ ಕಲ್ಲಟಗಿ…
ಹಾಸನ : ಹಾಸನದಲ್ಲಿ ಹೊಸ ವರ್ಷದಂದು ಭೀಕರವಾದ ಅಪಘಾತ ಸಂಭವಿಸಿದ್ದು, ಹೊಸ ವರ್ಷದಂದು ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಶಬ್ಬೀರ್ (55), ತಿಮ್ಮಣ್ಣ (53) ಮತ್ತು ಸಂಜಯ್ (45) ಎಂದು ಗುರುತಿಸಲಾಗಿದೆ. ಅಡಿಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನದ ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದಿದೆ ಎನ್ನಲಾಗುತ್ತಿದೆ. ಘಟನೆ ವೇಳೆ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಹಾಸನ ಮೂಲದ ನೌಶದ್ ಎಂಬುವವರು ಗಂಭೀರ ಗಾಯಗೊಂಡಿದ್ದು, ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಕಡೂರು ಆಸ್ಪತ್ರೆಗೆ ಗಾಯಾಳುಗಳನ್ನು ರವಾನೆ ಮಾಡಲಾಗಿದೆ. ಮೃತರನ್ನು ಕಡೂರು ತಾಲೂಕಿನ ತಂಗ್ಲಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇನ್ನು ತಿಮ್ಮಣ್ಣ ಮತ್ತು ಸಂಜಯ್ ಮೃತದೇಹವನ್ನು ಕಡೂರು ಸರ್ಕಾರಿ ಆಸ್ಪತ್ರೆ, ಶಬ್ಬೀರ್ ಮೃತದೇಹವನ್ನು ಅರಸೀಕೆರೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.…
ಬಳ್ಳಾರಿ : ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆಯ ಮುಂದೆ ಅಡ್ಡಲಾಗಿ ಬ್ಯಾನರ್ ಕಟ್ಟಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆದು, ಈ ವೇಳೆ ಫೈರಿಂಗ್ ಆಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನಪ್ಪಿದ್ದಾರೆ ಇದೀಗ ಈ ಒಂದು ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ, ಶಾಸಕ ಜನಾರ್ಧನ್ ರೆಡ್ಡಿ ಖಾಸಗಿ ಗನ್ ಮ್ಯಾನ್ಗಳ 3 ಗನ್ ಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಸೀಜ್ ಮಾಡಿದ ಗನ್ ಗಳನ್ನು ಪೊಲೀಸರು ಎಫ್ ಎಸ್ ಎಲ್ ಗೆ ಕಳುಹಿಸಿದ್ದಾರೆ. ಜನಾರ್ಧನ ರೆಡ್ಡಿಯ ಖಾಸಗಿ ಗನ್ ಮ್ಯಾನ್ ಗಳ ಗನ್ ಪರಿಶೀಲನೆ ಮಾಡಲಾಗುತ್ತಿದೆ. ಜನಾರ್ಧನ ರೆಡ್ಡಿ ಗನ್ ಮ್ಯಾನ್ ಗಳ ಗನ್ ನಿಂದ ಬುಲೆಟ್ ಬಳಕೆ ಆಗದಿರುವುದು ಪತ್ತೆಯಾಗಿದ್ದು, ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.














