Author: kannadanewsnow05

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರಿಂದಲೇ ಎಡವಟ್ಟು ಆಗಿದೆ ಎಂದು ಆರೋಪಿಗಳ ಪರ ವಕೀಲರು ಈ ಒಂದು ಗಂಭೀರವಾದ ಆರೋಪ ಮಾಡಿದ್ದಾರೆ. ಹೌದು ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಿಂದ ಕೋರ್ಟ್‌ಗೆ ದಿನಕ್ಕೊಂದು ಅರ್ಜಿ ಸಲ್ಲಿಕೆಯಾಗುತ್ತಿದೆ. ನಿನ್ನೆ ಕೋರ್ಟ್‌ಗೆ ಮೂವರು ಆರೋಪಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನಮ್ಮ ಮೊಬೈಲ್ ವಶಕ್ಕೆ ಪಡೆಯುವಾಗ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ವಶಕ್ಕೆ ಪಡೆದುಕೊಂಡಿಲ್ಲ. ಬೇರೊಂದು ಜಾಗದಲ್ಲಿ ವಶಕ್ಕೆ ಪಡೆದು ಅದನ್ನ ಕಾಮಾಕ್ಷಿಪಾಳ್ಯ ಎಂದಿದ್ದಾರೆ ಎಂದು ಆರೋಪಿಸಿದ್ದಾರೆ. ದೋಷಾರೋಪ ಪಟ್ಟಿ ಸಲ್ಲಿಕೆಯಾದಾಗ ಫೋಟೋದಲ್ಲಿ ವೈಟ್ ಕಲರ್ ಟೈಲ್ಸ್ ಇದೆ. ಪೊಲೀಸ್ ಠಾಣೆಯಲ್ಲಿ ಹಳೆಯ ಮಾದರಿ ಮೊಜಾಕ್ ಇದೆ. ಹೀಗಾಗಿ, ಪ್ರಕರಣದ ದಾರಿ ತಪ್ಪಿಸಿದ್ದಾರೆ. ಆದ್ದರಿಂದ ಖುದ್ದಾಗಿ ನ್ಯಾಯಾಧೀಶರೇ ಜೈಲಿಗೆ ಭೇಟಿ ಕೊಡಬೇಕು. ಅಲ್ಲದೇ, ಸ್ಟೇಷನ್ ಸಿಸಿಟಿವಿಯನ್ನು ವಶಕ್ಕೆ ಪಡೆಯಬೇಕು. ಬದಲಾವಣೆ ಮಾಡದಂತೆ ಎಚ್ಚರಿಕೆ ವಹಿಸಬೇಕು ಅಂತ ಕೋರ್ಟ್‌ಗೆ ಅರ್ಜಿ ಸಲ್ಲಿಕೆ…

Read More

ತುಮಕೂರು : ತುಮಕೂರಿನಲ್ಲಿ ಸಿನಿಮೀಯ ರೀತಿ ದರೋಡೆ ಪ್ರಕರಣ ಒಂದು ನಡೆದಿದ್ದು, ಚಿನ್ನದ ಅಂಗಡಿ ದರೋಡೆ ಮಾಡಿದ್ದವರ ಬಂಧನಕ್ಕೆ ಹೆದ್ದಾರಿಯೇ ಬಂದ್ ಮಾಡಲಾಗಿದೆ. ತಾವರೆಕೆರೆಯಲ್ಲಿ ಬ್ಯಾರಿಕೆಡ್ ಅಳವಡಿಸಿ ಹೆದ್ದಾರಿಯಲ್ಲಿ ಬಂದ್ ಮಾಡಿದ್ದಾರೆ. ಹೆದ್ದಾರಿ ಯಾವಾಗ ಬಂದ್ ಆಗುತ್ತೋ ತಕ್ಷಣ ದರೋಡೆಕೋರರು ತಮ್ಮ ಬೊಲೆರೋ ಕಾರನ್ನು ವಾಪಸ್ ತಿರುಗಿಸಿದ್ದಾರೆ. ಹೆದ್ದಾರಿ ಬಂದ್ ಹಿನ್ನೆಲೆಯಲ್ಲಿ ಪೊಲೀಸರ ಕೈಗೂ ಸಿಗದೇ ಎಸ್ಕೇಪ್ ಆಗಿದ್ದಾರೆ. ಆದರೆ ಸ್ಥಳೀಯರು ಈ ಒಂದು ದರಡೆ ಕೋರರ ಬೆನ್ನು ಬಿದ್ದಿದ್ದಾರೆ ಒಂದು ರೀತಿಯ ಸಿನಿಮಾ ರೀತಿಯ ಶೈಲಿಯಲ್ಲಿ ಕಳ್ಳರನ್ನು ಚೇಸಿಂಗ್ ಮಾಡಿದ್ದಾರೆ. ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ರೋಚಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸರಿಯಾಗಿದೆ ಕೃತೇ ನಡೆದ ಕೆಲವೇ ಗಂಟೆಗಳಲ್ಲಿ ದರೋಡೆಕೋರರನ್ನು ಬಂಧಿಸಲಾಗಿದೆ. ಆದರೆ ಹೆದ್ದಾರಿ ಬಳಿಯೇ ಬೋಲೇರೋ ವಾಹನ ಬಿಟ್ಟು ಕಾಡಿನಲ್ಲಿ ಪರಾರಿಯಾಗಿದ್ದಾರೆ ಆದರೆ ಪೊಲೀಸರು ಕಾಡಿನಲ್ಲಿ ಕೋಂಬಿಂಗ್ ಕಾರ್ಯಚರಣೆ ನಡೆಸಿ ಮೂರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ದರೋಡೆ ಮಾಡಿ ಬೃಹತ್ ಮರದ ಬುಡದಲ್ಲಿ ಇಟ್ಟಿದ ಚಿನ್ನದ ಸಮೇತ…

Read More

ದಾವಣಗೆರೆ : ಎಂಕಾಂ ಪದವಿ ವ್ಯಾಸಂಗ ಮಾಡಿ ಸುಂದರ ಬದುಕು ಕಟ್ಟಿಕೊಳ್ಳಬೇಕಿದ್ದ ಯುವಕನೋರ್ವ ಬೆಟ್ಟಿಂಗ್​​ನಲ್ಲಿ ಹಣವನ್ನು ಕಳೆದುಕೊಂಡು, ನಂತರ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದಲ್ಲದೇ, ವೃದ್ಧೆಯೊಬ್ಬರನ್ನು ಕೊಲೆ ಮಾಡಿ ಬಂಧನಕ್ಕೆ ಒಳಗಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ನಿವಾಸಿ ಅಭಿಷೇಕ್(23) ಕೊಲೆ ಆರೋಪಿ. ಜಿಲ್ಲೆಯ ಹೊನ್ನಾಳಿ ತಾಲೂಕಿನ ನ್ಯಾಮತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಆರುಂಡಿ ಗ್ರಾಮದಲ್ಲಿ ಫೆ. 2 ರಂದು ಒಂಟಿ ಮನೆಯಲ್ಲಿದ್ದ 64 ವರ್ಷದ ಕಮಲಮ್ಮ ಅನ್ನೋ ವೃದ್ದೆಯ ಕೊಲೆ ಆಗಿತ್ತು. ಮೊದಲಿಗೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಊಹಿಸಲಾಗಿತ್ತು. ಯಾವಾಗ ಮೃತ ಕಮಲಮ್ಮನ ಮೈಮೇಲಿನ ಒಡವೆ ಕಾಣಲಿಲ್ಲವೋ ಆಗಲೇ ಅದು ಸಾಮಾನ್ಯ ಸಾವು ಅಲ್ಲ, ಕೊಲೆ ಎಂದು ಸಂಬಂಧಿಕರು ತೀರ್ಮಾನ ಮಾಡಿ ತಕ್ಷಣ ಹೊನ್ನಾಳಿ ಪೊಲೀಸರಿಗೆ ಮಾ‌ಹಿತಿ ನೀಡಿದ್ದರು. ಶಿವಮೊಗ್ಗದಲ್ಲಿ ಮರಣೋತ್ತರ ಪರೀಕ್ಷೆ ಮಾಡಿಸಿ ನಂತರ ಮೃತದೇಹದ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಇತ್ತ ಸಾವಿನ ಪ್ರಕರಣದ ಬೆನ್ನುಬಿದ್ದಿದ್ದ ದಾವಣಗೆರೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಆರಂಭ ಮಾಡಿದ್ದರು.…

Read More

ಬೆಂಗಳೂರು: ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮ ಮತ್ತು ಗುಂಪುಗೂಡುವ ಸ್ಥಳಗಳಲ್ಲಿ ಜನಸಂದಣಿಯ ನಿಯಂತ್ರಣ) ಮಸೂದೆಯು ಕಾಯಿದೆ ರೂಪ ಪಡೆಯವವರೆಗೆ ಜನಸಂದಣಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಪ್ರಮಾಣೀಕೃತ ಕಾರ್ಯವಿಧಾನ (ಎಸ್‌ಒಪಿ) ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಸೋಮವಾರ ಹೈಕೋರ್ಟ್‌ ಸೂಚನೆ ನೀಡಿತು. ಅಲ್ಲದೆ, ಚಿನ್ನಸ್ವಾಮಿ ಕ್ರೀಡಾಂಗಣದ ಮುಂದೆ ನಡೆದ ಕಾಲ್ತುಳಿತ ಸಂಬಂಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ(ಪಿಐಎಲ್) ಅರ್ಜಿಯನ್ನು ವಿಲೇವಾರಿ ಮಾಡಿತು. ಐಪಿಎಲ್‌ನಲ್ಲಿ ರಾಯಲ್ಸ್​ ಚಾಲೆಂಜರ್ಸ್​ ಜಯಗಳಿಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ನಡೆಸಿತು. ಇದು ನಾಗರಿಕರ ಸುರಕ್ಷತೆಯ ದೃಷ್ಟಿಯಿಂದ ಬಹಳ ಮಹತ್ವದ ಬೆಳವಣಿಗೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸಮಾರಂಭಗಳಲ್ಲಿ ಜನಸಂದಣಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು Standard Operating Procedure (SOP) ಅಥವಾ ಮಾರ್ಗಸೂಚಿಗಳನ್ನು ರೂಪಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಸುದ್ದಿಯ…

Read More

ಉತ್ತರಪ್ರದೇಶ : ಉತ್ತರ ಪ್ರದೇಶದ ಮೀರತ್ ನ ಕಿದ್ವಾಯಿನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಹೊತ್ತಿ ಉರಿದು, ಮನೆಯಲ್ಲಿದ್ದ aiವರು ಮಕ್ಕಳು ಸೇರಿದಂತೆ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಇಕ್ಬಾಲ್ ಏನು ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲಿಸಾರಿ ಗೇಟ್ ಪ್ರದೇಶದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಹಿತಿ ತಿಳಿದು ಬಂದಿದೆ.ಒಬ್ಬ ಮಹಿಳೆ ಮತ್ತು ಐದು ಮಕ್ಕಳು ಸೇರಿದಂತೆ ಆರು ಜನರನ್ನು ರಕ್ಷಿಸಲಾಗಿದೆ. ಒಬ್ಬ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯುತ್ ಉಪಕರಣದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ನಮಗೆ ತಿಳಿಸಲಾಗುತ್ತಿದೆ. ಪ್ರಾಥಮಿಕವಾಗಿ, ವಿದ್ಯುತ್ ಉಪಕರಣದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read More

ಹಾಸನ : ಬಿಜೆಪಿ ಮುಖಂಡ ದೇವರಾಜೆಗೌಡನಿಂದ ಕಿರುಕುಳ ಆರೋಪ ಹಾಸನದಲ್ಲಿ ವಿಷ ಸೇವಿಸಿ ಮಹಿಳೆ ಒಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಮಹಿಳೆಯನ್ನ ಹಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇದೀಗ ಅಸ್ವಸ್ಥ ಮಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಳೆನರಸೀಪುರ ಮೂಲದ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿನ್ನೆ ಮಧ್ಯಾಹ್ನ 12:30ಕ್ಕೆ ವಿಷ ಸೇವಿಸಿದ್ದಾಗಿ ಮಹಿಳೆ ಹೇಳಿಕೆ ನೀಡಿದ್ದು ಈ ಹಿನ್ನೆಲೆಯಲ್ಲಿ ರಕ್ತದ ಮಾದರಿ ಸಂಗ್ರಹಿಸಿ ವೈದ್ಯರು ಅದನ್ನು ಖಚಿತಪಡಿಸಿಕೊಳ್ಳಲು ಮುಂದಾಗಿದ್ದಾರೆ. ದೇವರಾಜೇಗೌಡ ಸುದ್ದಿಗೋಷ್ಠಿಯಲ್ಲಿ ನನಗೆ ಅವಮಾನ ಮಾಡಿದ್ದಾರೆ. ನಾನು ಜೈಲಿಗೆ ಹೋಗಿದ್ದಾಗಿ ಹೇಳಿದರೆ ಸಮಾಜದಲ್ಲಿ ಅವಮಾನ ಆಗುತ್ತಿದೆ. ಹಾಗಾಗಿ ವಿಷಯ ಸೇವಿಸಿದ್ದೇನೆ ಎಂದು ಅಸ್ವಸ್ಥ ಮಹಿಳೆ ಹೇಳಿದ್ದಾರೆ. ಈ ಹಿಂದೆ ವಕೀಲ ದೇವರಾಜೇಗೌಡ ವಿರುದ್ಧ ಮಹಿಳೆ ದೂರು ನೀಡಿದ್ದರು. ಹನಿಟ್ರ್ಯಪ್ ಆರೋಪ ಮಾಡಿದ್ದ ವಕೀಲ ದೇವರಾಜೇಗೌಡ. ತನ್ನ ವಿರುದ್ಧ ದೂರು ನೀಡಿದ ಮಹಿಳೆಯ ವಿರುದ್ಧ ಈ ಒಂದು ಆರೋಪ ಮಾಡಿದ್ದರು. ಸದ್ಯ ದೇವರ ದೇವರಾಜೇಗೌಡ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ. ಮಹಿಳೆಯ…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಒಬ್ಬನನ್ನು ನಾಲ್ವರು ಆತನ ಮೇಲೆ ಹಲ್ಲೆ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ನಡೆದಿದೆ. ಈ ಒಂದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರು ಅಪರಾಪ್ತರನ್ನು ಅರೆಸ್ಟ್ ಮಾಡಿದ್ದಾರೆ. ಎಸ್​ಎಸ್​​ಎಲ್​ಸಿ ವಿದ್ಯಾರ್ಥಿ ಸಂಕೇತ್ (16) ಕೊಲೆಯಾಗಿದ್ದಾನೆ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ ಪರಿಣಾಮ ಸಂಕೇತ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.ಘಟನೆ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರು ಅಪರಾಪ್ತರನ್ನು ಅರೆಸ್ಟ್ ಮಾಡಿದ್ದಾರೆ ಎಂದು…

Read More

ದಾವಣಗೆರೆ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಗೋಗುದ್ದು ಗ್ರಾಮದಲ್ಲಿ ಹೃದಯಾಘಾತದಿಂದ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಚಮನ್ ಸಾಬ್ ಫಾತಿಮಾ ದಂಪತಿ ಪುತ್ರ ಮುಜಾಮಿಲ್ (15) ಎನ್ನುವ ಬಾಲಕ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ. ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ ಮುಜಮಿಲ್ 9ನೇ ತರಗತಿ ಓದುತ್ತಿದ್ದ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಬಾಲಕ ಮುಜಾಮಿಲ್ ಮನೆಗೆ ಬಂದಿದ್ದ. ಇಂದು ಮುಂಜಾನೆ ಬಹಿರ್ದೆಸಿಗೆ ಹೋಗಿದ್ದಾಗ ಹೃದಯಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಬಾಲಕ ಮುಜಾಮಿಲ್ ಸಾವನಪ್ಪಿದ್ದಾನೆ. ಮಗನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಇದೀಗ ಮುಗಿಲು ಮುಟ್ಟಿದೆ.

Read More

ಬೆಂಗಳೂರು : ರಾಮನಗರದಲ್ಲಿ ಒಂದುವರೆ ಕೋಟಿ ಮೌಲ್ಯದ 750 ಗ್ರಾಂ ಡ್ರಗ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಮನಗರದ ಐಜೂರು ಠಾಣೆ ಪೊಲೀಸ್ರು ಈ ಒಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಓರ್ವ ವಿದೇಶಿ ಪ್ರಜೆ ಸೇರಿ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 450 ಎಮ್‌ಡಿಎಮ್ಎ ಮಾತ್ರೆಗಳು ಹಾಗೂ 550 ಗ್ರಾಂ ಕ್ರಿಸ್ಟಲ್ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಗೋರಿಪಾಳ್ಯದ ಸಲ್ಮಾನ್, ಸಾಧಿಕ್ ಮತ್ತು ಉಗಾಂಡಾ ಮೂಲದ ನಾನಾ ಜಾನ್ಸನ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.

Read More

ಉತ್ತರಪ್ರದೇಶ : ಲಕ್ನೋದಲ್ಲಿ 19 ವರ್ಷದ ಬಿಕಾಂ ವಿದ್ಯಾರ್ಥಿnಯೊಬ್ಬ ನೀಟ್ ಪರೀಕ್ಷೆಗೆ ತಯಾರಿ ನಡೆಸುವಂತೆ ಪದೇ ಪದೇ ಒತ್ತಡ ಹೇರಿದ ನಂತರ ತನ್ನ ತಂದೆಯನ್ನು ಗುಂಡಿಕ್ಕಿ ಕೊಂದು, ದೇಹವನ್ನು ತುಂಡು ಮಾಡಿ, ಭಾಗಗಳನ್ನು ಮನೆಯಲ್ಲಿ ಡ್ರಮ್ ಒಳಗೆ ಬಚ್ಚಿಟ್ಟಿದರುವ ಬೆಚ್ಚಿಬಿಳಿಸುವಂತಹ ಘಟನೆ ವರದಿಯಾಗಿದೆ. ರೋಗಶಾಸ್ತ್ರ ಮತ್ತು ಮದ್ಯದ ಉದ್ಯಮಿ ಮನ್ವೇಂದ್ರ ಸಿಂಗ್ ಅವರ ಮಗ 21 ವರ್ಷದ ಅಕ್ಷತ್ ಸಿಂಗ್ ತನ್ನ ತಂದೆ ಕಾಣೆಯಾಗಿರುವುದಾಗಿ ದೂರು ನೀಡಿದ್ದರು ಎಂದು ಲಕ್ನೋ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಅಕ್ಷತ್ ಕೊಲೆಯನ್ನು ಒಪ್ಪಿಕೊಂಡಿದ್ದಾರೆ. ಫೆಬ್ರವರಿ 20 ರಂದು ಬೆಳಗಿನ ಜಾವ 4:30 ಕ್ಕೆ ತಂದೆ ಮತ್ತು ಮಗನ ನಡುವೆ ಜಗಳವಾಯಿತು ಎಂದು ಅವರು ಪೊಲೀಸರಿಗೆ ತಿಳಿಸಿದರು. ಕೋಪದ ಭರದಲ್ಲಿ, ಅಕ್ಷತ್ ತನ್ನ ತಂದೆ ಮನ್ವೇಂದ್ರ ಅವರನ್ನು ಪರವಾನಗಿ ಪಡೆದ ರೈಫಲ್‌ನಿಂದ ಗುಂಡು ಹಾರಿಸಿ ಕೊಂದನು. ಸಾಕ್ಷ್ಯವನ್ನು ಮರೆಮಾಡಲು, ತಂದೆಯ ದೇಹವನ್ನು ಮೂರನೇ ಮಹಡಿಯಿಂದ ನೆಲ ಮಹಡಿಯಲ್ಲಿರುವ ಖಾಲಿ ಕೋಣೆಗೆ ಸ್ಥಳಾಂತರಿಸಲಾಯಿತು. ಆರೋಪಿ ಮಗ…

Read More