Author: kannadanewsnow05

ಬಾಗಲಕೋಟೆ : ಬಾಗಲಕೋಟೆಯಲ್ಲಿ ಉಪಚುನಾವಣೆ ಹಿನ್ನೆಲೆ ಮತದಾರರಿಗೆ ಹಣ ಹಂಚುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ಕಾಂಗ್ರೆಸ್ ಮುಖಂಡನೊಬ್ಬ ಮತದಾರರಿಗೆ ಹಣ ಹಂಚಿರುವ ವಿಡಿಯೋ ವೈರಲ್ ಆಗಿದೆ. ಜಾಫರ್ ಬೆಟಾರಿ ವಿರುದ್ಧ ಹಣ ಹಂಚಿಕೆ ಮಾಡಿರುವ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್ ದುಡ್ಡು ಇಸ್ಕೊಳ್ಳಿ ಅಂತ ಹೇಳುತ್ತಿದ್ದಾರೆ. ರಾಜೀವ್ ಗಾಂಧಿ ಕಾಲೋನಿಯ ಬಾಂಬೆ ಕಾಲೋನಿಯಲ್ಲಿ ಈ ರೀತಿ ಹಣ ಹಂಚಿಕೆ ಆಗುತ್ತಿದೆ. ಈ ರೀತಿ ಹಣ ಹಂಚಿಕೆ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಇನ್ನು ಈ ಒಂದು ವಿಡಿಯೋವನ್ನು ಜೆಡಿಎಸ್ ತನ್ನ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡಿದ್ದು, ಉಪಚುನಾವಣೆಯನ್ನು ಅಕ್ರಮವಾಗಿ ಗೆಲ್ಲಲು @INCKarnataka ಸರ್ಕಾರ ಮತದಾರರಿಗೆ ಹಣ ಹಂಚುತ್ತಿದೆ. ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ʼನ ಕುರುಡು ಕಾಂಚಾಣ ಸದ್ದು ಮಾಡುತ್ತಿದೆ. ಕಾಂಗ್ರೆಸ್‌ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕುವಂತೆ ಮತದಾರರಿಗೆ ಹಣ ಹಂಚಿಕೆ ಮಾಡಿದ್ದಾರೆ. ಬಾಗಲಕೋಟೆ ಉಪಚುನಾವಣೆ ವೇಳೆ ನಡೆದಿರುವ ಈ ಅಕ್ರಮದ ಕುರಿತು ಚುನಾವಣಾ ಆಯೋಗವೂ ಕೂಡಲೇ ಸೂಕ್ತ ಕ್ರಮ…

Read More

ಬೆಂಗಳೂರು: ರಾಜ್ಯದ ಪ್ರಸಿದ್ಧ ಗಿರಿಶಿಖರಗಳಲ್ಲಿ ಇತ್ತೀಚೆಗೆ ಚಾರಣಿಗರು ದಾರಿತಪ್ಪಿ ಆತಂಕ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ, ಚಾರಣಿಗರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿ (SOP) ಜಾರಿಗೆ ತರಲು ನಿರ್ಧರಿಸಿದೆ. ಘಟನೆಯ ಹಿನ್ನೆಲೆ: ಕೊಡಗು ಜಿಲ್ಲೆಯ ತಡಿಯಾಂಡಮೋಲ್ ಬೆಟ್ಟಕ್ಕೆ ಚಾರಣಕ್ಕೆ ಬಂದಿದ್ದ ಕೇರಳದ ಶರಣ್ಯ ಎಂಬುವವರು ದಾರಿತಪ್ಪಿ ಮೂರು ದಿನಗಳ ಕಾಲ ಕಾಡಿನಲ್ಲೇ ಸಿಲುಕಿದ್ದರು. ಇದರ ಬೆನ್ನಲ್ಲೇ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಅಪ್ರಾಪ್ತ ಬಾಲಕಿ ಶ್ರೀನಂದಾ ನಾಪತ್ತೆಯಾದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಮುಖ ನಿರ್ದೇಶನಗಳು: ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಇಲಾಖೆಯ ಉನ್ನತ ಅಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಈ ಕೆಳಗಿನ ಕ್ರಮಗಳನ್ನು ಜಾರಿಗೆ ತರಲು ಸೂಚಿಸಿದ್ದಾರೆ: ಇ-ಟ್ರ್ಯಾಕಿಂಗ್ ಆ್ಯಪ್: ಅರಣ್ಯ ಇಲಾಖೆಯ ‘ಇ-ಗಸ್ತು’ ಮಾದರಿಯಲ್ಲೇ ಚಾರಣಿಗರಿಗಾಗಿ ಪ್ರತ್ಯೇಕ ಇ-ಟ್ರ್ಯಾಕಿಂಗ್ ಆ್ಯಪ್ ಅಭಿವೃದ್ಧಿಪಡಿಸುವುದು. ಚಾರಣದ ಅವಧಿಯಲ್ಲಿ ಈ ಆ್ಯಪ್ ಅನ್ನು ಚಾರಣಿಗರ ಮೊಬೈಲ್‌ನಲ್ಲಿ ಅಳವಡಿಸುವುದರಿಂದ ಅವರು ದಾರಿತಪ್ಪಿದಾಗ ಸುಲಭವಾಗಿ ಪತ್ತೆಹಚ್ಚಲು ಸಾಧ್ಯವಾಗುತ್ತದೆ. ವೈರ್‌ಲೆಸ್ ಸಿಸ್ಟಮ್:…

Read More

ಶಿವಮೊಗ್ಗ : ನೇಣು ಬಿಗಿದ ಸ್ಥಿತಿಯಲ್ಲಿ 6ನೇ ತರಗತಿ ವಿದ್ಯಾರ್ಥಿನಿಯ ಶವ ಶವ ಪತ್ತೆಯಾಗಿದೆ. ಮನೆಯಲ್ಲಿ ಜೀವಿತ (12) ಎನ್ನುವ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶಿವಮೊಗ್ಗದ ಬೊಮ್ಮನಕಟ್ಟೆ ಪ್ರದೇಶದ ಎ ಬ್ಲಾಕ್ ನಲ್ಲಿ ಒಂದು ಘಟನೆ ನಡೆದಿದೆ. ಬೊಮ್ಮನಕಟ್ಟೆಯ ಶಾಲೆಯಲ್ಲಿ ಜೀವಿತ ಆರನೇ ತರಗತಿ ಓದುತ್ತಿದ್ದಳು ರಜೆ ಇದ್ದ ಕಾರಣ ವಿದ್ಯಾರ್ಥಿ ಜೀವಿತ ಮನೆಯಲ್ಲಿಯೇ ಇದ್ದಳು. ಬಾಲಕಿ ಜೀವಿತ ಸಾವಿನ ಬಗ್ಗೆ ಹಲವಾರು ಅನುಮಾನ ವ್ಯಕ್ತವಾಗುತ್ತಿದೆ. ಬಾಲಕಿಯ ತಾಯಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬಾಗಲಕೋಟೆ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಇಂದು ಮತದಾನ ನಡೆಯುತ್ತಿದ್ದು, ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದಾಗ ವೃದ್ದೆ ಒಬ್ಬರು ಕುಸಿದು ಬಿದ್ದ ಘಟನೆ ನಡೆದಿದೆ. ತಕ್ಷಣ ಸ್ಥಳೀಯರು ವೃದ್ದೆಯನ್ನು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇನ್ನು ಜಿಲ್ಲೆಯ ಅಮಿನಗಡದಲ್ಲಿ ಮತದಾರರಿಗೆ ಮೂಲಭೂತ ಸೌಲಭ್ಯದ ಕೊರತೆ ಉಂಟಾಗಿದೆ. ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಮತದಾರರು ಪರದಾಟ ನಡೆಸಿದರು.

Read More

ಬೆಂಗಳೂರು : ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿಲ್ಲ. ಸದನದಲ್ಲಿ ಕೂಡ ಇದಕ್ಕೆ ಉತ್ತರ ನೀಡಿದ್ದೇನೆ. ಒಂದು ವೇಳೆ ರದ್ದಾಗಿದ್ದಾರೆ ತಹಸೀಲ್ದಾರ್ ಗೆ ಅರ್ಜಿ ಸಲ್ಲಿಸಿ 15 ದಿನದೊಳಗೆ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೊಡುತ್ತೇವೆ ಎಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು. ಈ ವಿಚಾರವಾಗಿ ಮಾಧ್ಯಮಗಳಿಗೆ ಮಾತನಾಡಿದ ಅವರು ಎಪಿಎಲ್ ಕಾರ್ಡುಗಳಿಗೂ ಸಾಕಷ್ಟು ಜನರು ಅರ್ಜಿ ಹಾಕಿದ್ದಾರೆ. ಕೇಂದ್ರ ಸರ್ಕಾರ ಹೇಳಿದಂತೆ ಪರಿಷ್ಕರಣೆ ಮಾಡುತ್ತಿದ್ದೇವೆ 14 ಲಕ್ಷ ಎಪಿಎಲ್ ಕಾರಣ ಅವರು ಬಿಪಿಎಲ್ ನಲ್ಲಿ ಇದ್ದಾರೆ. ಹಂತ ಹಂತವಾಗಿ ತೊಂದರೆ ಆಗದಂತೆ ಕಾರ್ಡ್ ಪರಿಷ್ಕರಣೆ ಮಾಡುತ್ತೇವೆ ಎಂದು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.

Read More

ಬೆಂಗಳೂರು : ಬೆಂಗಳೂರಿನಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು ಜಾತ್ರೆಯಲ್ಲಿ ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್ ಹರಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹುಳಿಮಾವು ಜಾತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ. ಕೋದಂಡ ರಾಮಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಜಾತ್ರೆ ನಡೆಯುತ್ತಿತ್ತು. ಪಲ್ಲಕ್ಕಿ ನೋಡುತ್ತಾ ನಿಂತಿದೆ ಯುವಕನಿಗೆ ಟ್ರ್ಯಾಕ್ಟರ್ ಗುದ್ದಿದೆ. ಬನಶಂಕರಿ ನಿವಾಸಿ ಅಕ್ಷತ್ (27) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿ ಎಂದು ತಿಳಿದುಬಂದಿದೆ. ಸ್ನೇಹಿತರಿಗೆ ಮದುವೆ ಆಹ್ವಾನ ಪತ್ರಿಕೆ ನೀಡಲು ಅಕ್ಷತ್ ಬಂದಿದ್ದ. ಜಾತ್ರೆ ನೋಡಿಕೊಂಡು ಹೋಗೋಣ ಎಂದು ಅಲ್ಲಿಯೇ ಉಳಿದುಕೊಂಡಿದ್ದ. ಆದರೆ ಮದುವೆಗೂ ಮುನ್ನವೇ ಟ್ರ್ಯಾಕ್ಟರ್ ಹರಿದು ಅಕ್ಷತ್ ಸಾವನಪ್ಪಿದ್ದಾನೆ. ದುರ್ಘಟನೆ ನಡೆದರೂ ಕೂಡ ದೇವಾಲಯ ಟ್ರಸ್ಟಿಗಳು ಸ್ಥಳಕ್ಕೆ ಬಂದಿಲ್ಲ. ಟ್ರಾಕ್ಟರ್ ಚಾಲಕನ ಅಜಾಗರೂಪತೆಯಿಂದ ಈ ಒಂದು ಘಟನೆ ನಡೆದಿದೆ. ಘಟನೆ ಬಳಿಕ ಟ್ರಾಕ್ಟರ್ ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ. ಸ್ಥಳಕ್ಕೆ ಬೆಂಗಳೂರು ದಕ್ಷಿಣ ಸಂಚಾರಿ ಡಿಸಿಪಿ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ವಿಚಾರಣೆ ನಡೆಸಿ ಏಪ್ರಿಲ್ 15ಕ್ಕೆ ತೀರ್ಪು ಪ್ರಕಟಿಸುವುದಾಗಿ ಇದೆ ವೇಳೆ ತಿಳಿಸಿತು. ಇಂದು ವಿಚಾರಣೆ ನಡೆಯಿಸಿದ ಕೋರ್ಟ್ ವಾದ ಪ್ರತಿ ವಾದಗಳನ್ನು ಆಲಿಸಿ ಏಪ್ರಿಲ್ 15ಕ್ಕೆ ತೀರ್ಪು ಪ್ರಕಟ್ಠಿಸಲಾಗುವುದು ಎಂದು ತಿಳಿಸಿತು. 2016ರಲ್ಲಿ ಕೊಲೆ ನಡೆದಾಗ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆದಿತ್ತು. ಅಲ್ಲದೇ ಜೈಲಿನಲ್ಲಿ ಇದ್ದುಕೊಂಡೇ ಯೋಗಿಶ್‌ ಗೌಡ ಜಿಲ್ಲಾ ಪಂಚಾಯತ್‌ ಚುನಾವಣೆ ಗೆದ್ದಿದ್ದರಿಂದ ಹೈಪ್ರ‍್ರೊಫೈಲ್ ಕೇಸ್ ಆಗಿತ್ತು. ಈ ಕೊಲೆಯಲ್ಲಿ ಆಗಿನ ಜಿಲ್ಲಾ ಉಸ್ತುವಾರಿ ಸಚಿವ ಆಗಿದ್ದ ವಿನಯ್‌ ಕುಲಕರ್ಣಿ ಹೆಸರು ಬಂದಿದ್ದರಿಂದ ಮತ್ತಷ್ಟು ಸಂಚಲನ ಮೂಡಿಸಿತ್ತು. ಈ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಎ-15 ಆಗಿದ್ದಾರೆ. ಅಲ್ಲದೇ ಪೊಲೀಸ್ ಅಧಿಕಾರಿಗಳು ಕೂಡಾ ಇದರಲ್ಲಿ ತಳಕು ಹಾಕಿಕೊಂಡಿದ್ದಾರೆ. ಇನ್ನು ಈ ಕೊಲೆ ನಡೆದಿದ್ದಾದರೂ ಏಕೆ ಎನ್ನುವುದಕ್ಕೆ ಸಿಬಿಐ ಹಲವು ಸಾಕ್ಷಿ ನ್ಯಾಯಾಲಯದ ಮುಂದೆ ಇಟ್ಟಿದೆ. ಪ್ರಕರಣ…

Read More

ದಾವಣಗೆರೆ : ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಇಂದು ಮತದಾನ ಆರಂಭವಾಗಿದ್ದು, ಈಗಾಗಲೇ ಮತಗಟ್ಟೆಗೆ ಬಂದು ಮತದಾರರು ಮತ ಚಲಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಿಂದ ನೀತಿ ಉಲ್ಲಂಘನೆ ಆಗಿದ್ದು, ಬಿಜೆಪಿ ಮುಖಂಡರು ಪಲಾವ್ ಹಂಚಿಕೆ ಮಾಡಿದ್ದಾರೆ. ಹೌದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತಗಟ್ಟೆ ಸಂಖ್ಯೆ 195 ರ ಬಳಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಶೇಖರಪ್ಪ ಬಡಾವಣೆಯ ಮತಗಟ್ಟೆ ಸಂಖ್ಯೆ 195 ರಲ್ಲಿ ಶಾಮಿಯಾನ ಹಾಕಿ ಮತದಾರರಿಗೆ ಪಲಾವ್ ಹಂಚಿಕೆ ಮಾಡುತ್ತಿದ್ದಾರೆ. ಬಿಜೆಪಿ ಮುಖಂಡರು ಮತದಾರರಿಗೆ ಪಲಾವ್ ಹಂಚಿಕೆ ಮಾಡಿದ್ದು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.

Read More

ಮಂಗಳೂರು : ಮಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ವಿದ್ಯಾರ್ಥಿಗಳೇ ಡ್ರಗ್ಸ್ ಮಾರಾಟ ಜಾಲದಲ್ಲಿ ಭಾಗಿಯಾಗಿರೋದು ಪತ್ತೆಯಾಗಿದ್ದು, ಸದ್ಯ ಪೊಲೀಸರು ಐವರು ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಮಾತನಾಡಿ, ವಿದ್ಯಾರ್ಥಿಯೊಬ್ಬನ ಪೋಷಕರು ತಮ್ಮ ಪುತ್ರನ ಬಳಿ ಸಣ್ಣ ಪ್ಯಾಕೆಟ್ ಗಾಂಜಾ ದೊರಕಿದೆ ಎಂದು ಪೊಲೀಸರಿಗೆ ಮಂಗಳವಾರ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾಗಿ ವಿದ್ಯಾರ್ಥಿಯ ಬೆನ್ನು ಬಿದ್ದ ಪೊಲೀಸರಿಗೆ ಐವರು ಡ್ರಗ್ ಪೆಡ್ಲರ್ ವಿದ್ಯಾರ್ಥಿಗಳು ಇದರಲ್ಲಿ ಇರುವುದು ತಿಳಿದು ಬಂದಿದೆ. ಮಂಗಳೂರು ನಗರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ಹಾಸ್ಟೆಲ್‌ನಲ್ಲಿ ಇರದೇ ಬಾಡಿಗೆ ಕೊಠಡಿಯಲ್ಲಿ ವಾಸ್ತವ್ಯವಿದ್ದರು‌. ಈ ಐವರೂ ಗಾಂಜಾವನ್ನು ಬಾಡಿಗೆ ಕೊಠಡಿಯಲ್ಲೇ ಸಣ್ಣ ಪೊಟ್ಟಣವನ್ನಾಗಿ ಮಾಡಿ ಅಲ್ಲಿಂದಲೇ ಮಾರಾಟ ಮಾಡುತ್ತಿದ್ದರು. ಆರು ವಿವಿಧ ಕಾಲೇಜುಗಳ 40 ಮಂದಿ ವಿದ್ಯಾರ್ಥಿಗಳು ಹಾಗೂ ಬೇರೆ 10 ಮಂದಿ ಇವರ ಗಾಂಜಾ ಖರೀದಿದಾರರ ಪಟ್ಟಿಯಲ್ಲಿದ್ದರು. ಗಾಂಜಾ ಖರೀದಿ ಮಾಡುವ ಎಲ್ಲರನ್ನೂ, ಅವರ ಪೋಷಕರನ್ನು…

Read More

ಬಳ್ಳಾರಿ : ಬಳ್ಳಾರಿಯಲ್ಲಿ ಹಂಪಿ ಎಕ್ಸ್ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬಳ್ಳಾರಿಯಿಂದ ಬೆಂಗಳೂರು ಕಡೆಗೆ ಈ ಒಂದು ಹಂಪಿ ಎಕ್ಸ್ಪ್ರೆಸ್ ರೈಲು ಸಂಚರಿಸುತ್ತಿತ್ತು. ಬಳ್ಳಾರಿ ಗಡಿಭಾಗದ ಹಗರಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ ಅದೃಷ್ಟವಶತ್ ಘಟನೆಯಲ್ಲಿ ಯಾವುದೇ ರೀತಿ ಪ್ರಾಣಪಾಯ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Read More