Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯಿದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ನೀಡುವ ಉದ್ಯೋಗದಾತರಿಗೆ ಶೋಕಾಸ್ ನೋಟಿಸ್ ನೀಡಬಾರದು ಎಂದು ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ. ರಾಜ್ಯ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಕರ್ನಾಟಕ ಉದ್ಯೋಗದಾತರ ಸಂಘ, ಬೆಂಗಳೂರು ಹೋಟೆಲ್ಗಳ ಸಂಘ ಮತ್ತಿತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗ್ಡೆ ಅವರಿದ್ದ ಪೀಠ ಈ ಸೂಚನೆ ನೀಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಸರ್ಕಾರ ಹೊರಡಿಸಿರುವ ಅಧಿಸೂಚನೆ ಜಾರಿಗೆ ಸಂಬಂಧಿಸಿದಂತೆ ಸರ್ಕಾರ ಶೋಕಾಸ್ ನೋಟಿಸ್ ನೀಡುತ್ತಿದೆ. ಇದರಿಂದ ಉದ್ಯೋಗದಾತರಿಗೆ ತೊಂದರೆಯಾಗುತ್ತಿದೆ ಎಂದರು. ಇದಕ್ಕೆ ಪೀಠ, ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದೆ. ಹೀಗಿರುವಾಗ ಉದ್ಯೋಗದಾತರಿಗೆ ಶೋಕಾಸ್ ನೋಟಿಸ್ ನೀಡುವುದು ಏಕೆ ಎಂದು ಪ್ರಶ್ನಿಸಿತು. ಅಲ್ಲದೇ ಶೋಕಾಸ್ ನೋಟಿಸ್ಗಳಿಗೆ ತಡೆ ನೀಡಬೇಕಾಗುತ್ತದೆ ಎಂದು ತಿಳಿಸಿತು. ಜತೆಗೆ, ಅರ್ಜಿದಾರರ ವಿರುದ್ಧ ಯಾವುದೇ…
ಹುಬ್ಬಳ್ಳಿ : ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ ಹಿನ್ನೆಲೆಯಲ್ಲಿ, ಗೂಡ್ಸ್ ರೈಲ್ವೆ ಮ್ಯಾನೇಜರ್ ಮತ್ತು ಎಲ್ಡಿಸಿ ಹುದ್ದೆಗಳ ಪರೀಕ್ಷೆಗೆ ರೈಲ್ವೆ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡದಲ್ಲಿ ಬರೆಯಲು ಅವಕಾಶ ಇಲ್ಲ. ಹಾಗಾಗಿ ಇಂದು ಹುಬ್ಬಳ್ಳಿಯ ರೈಲ್ವೆ ವಿಭಾಗೀಯ ಕಚೇರಿಗೆ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು. ಕೇವಲ ಹಿಂದಿ ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಹಿನ್ನೆಲೆಯಲ್ಲಿ, ರೈಲ್ವೆ ಇಲಾಖೆ ಕ್ರಮ ಖಂಡಿಸಿ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಹುಬ್ಬಳ್ಳಿಯ ರೈಲ್ವೆ ವಿಭಾಗಿಯ ಕಚೇರಿಗೆ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕನ್ನಡ ಭಾಷೆಯನ್ನು ಕಡೆಗಣಿಸಿದ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದ್ದಾರೆ. ಇದೀಗ ಕರವೇ ಹೋರಾಟಕ್ಕೆ ರೈಲ್ವೆ ಇಲಾಖೆ , ಮಣಿದಿದೆ ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯನ್ನು ಮುಂದೂಡಿದೆ. ಹಿಂದಿ ಇಂಗ್ಲಿಷ್ ನಲ್ಲಿ ರೈಲ್ವೆ ಇಲಾಖೆ ಪರೀಕ್ಷೆಗೆ ಮುಂದಾಗಿತ್ತು. ಇವತ್ತು ನಡೆಯಬೇಕಿದ್ದ ರೈಲ್ವೇ ಪಧೋನ್ನತಿ ಪರೀಕ್ಷೆಯನ್ನು ಇಲಾಖೆ ಮುಂದೂಡಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ತಿಳಿಸುತ್ತೇವೆ ರೈಲ್ವೆ…
ಉತ್ತರಕನ್ನಡ : ರಾಜ್ಯದಲ್ಲಿ ಗೌರವದ ದುರಂತ ಒಂದು ಸಂಭವಿಸಿದ್ದು ಮನೆ ಮುಂದೆ ಆಟ ಆಡುತ್ತಿದ್ದಾಗ ಆಕಸ್ಮಿಕವಾಗಿ ಎರಡು ವರ್ಷದ ಮಗುವೊಂದು ಐವತ್ತು ಅಡಿ ಆಳದ ಬಾವಿಗೆ ಬಿದ್ದಿದೆ ಈ ವೇಳೆ ವ್ಯಕ್ತಿ ಒಬ್ಬ ತನ್ನ ಪ್ರಾಣವನ್ನು ಲೆಕ್ಕಿಸದೆ 50 ಅಡಿ ಆಳದ ಬಾವಿಗೆ ಇಳಿದು ಎರಡು ವರ್ಷದ ಮಗು ರಕ್ಷಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕಸ್ತೂರಬಾ ನಗರದ ನಿವಾಸಿಯಾದ ಭುವಿ ಎಂಬ ಎರಡು ವರ್ಷದ ಮಗು ಸೋಮವಾರ ಮಧ್ಯಾಹ್ನ ಎಂದಿನಂತೆ ಮನೆಯ ಅಂಗಳದಲ್ಲಿ ಆಟವಾಡುತ್ತಿತ್ತು. ಮನೆಯವರೆಲ್ಲರೂ ಕೆಲಸದಲ್ಲಿ ಮಗ್ನರಾಗಿದ್ದಾಗ, ಮಗು ಆಟವಾಡುತ್ತಾ ಮುಂಭಾಗದಲ್ಲಿದ್ದ ತೆರೆದ ಬಾವಿಗೆ ಬಿದ್ದಿದೆ. ಮಧ್ಯಾಹ್ನ ಊಟದ ಸಮಯದಲ್ಲಿ ಮಗು ಕಾಣದಿದ್ದಾಗ ಆತಂಕಗೊಂಡ ಮನೆಯವರು ಸುತ್ತಮುತ್ತ ಹುಡುಕಾಡಿದ್ದಾರೆ. ಬಾವಿಯಲ್ಲಿ ಮಗುವಿನ ಅಳುವಿನ ಶಬ್ದ ಕೇಳಿಬಂದಾಗ ಬೆಚ್ಚಿ ಬಿದ್ದಿದ್ದಾರೆ. ಮಗು ಬಾವಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ನಿವಾಸಿ ಹಾಗೂ ಸಮಾಜ ಸೇವಕರಾಗಿ ಗುರುತಿಸಿಕೊಂಡಿರುವ ಪಯ್ಯು ಚವಟಿ ಅವರು…
ಹುಬ್ಬಳ್ಳಿ : ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ ಹಿನ್ನೆಲೆಯಲ್ಲಿ, ಗೂಡ್ಸ್ ರೈಲ್ವೆ ಮ್ಯಾನೇಜರ್ ಮತ್ತು ಎಲ್ಡಿಸಿ ಹುದ್ದೆಗಳ ಪರೀಕ್ಷೆಗೆ ರೈಲ್ವೆ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡದಲ್ಲಿ ಬರೆಯಲು ಅವಕಾಶ ಇಲ್ಲ. ಕೇವಲ ಹಿಂದಿ ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಹಿನ್ನೆಲೆಯಲ್ಲಿ, ರೈಲ್ವೆ ಇಲಾಖೆ ಕ್ರಮ ಖಂಡಿಸಿ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಹುಬ್ಬಳ್ಳಿಯ ರೈಲ್ವೆ ವಿಭಾಗಿಯ ಕಚೇರಿಗೆ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕನ್ನಡ ಭಾಷೆಯನ್ನು ಕಡೆಗಣಿಸಿದ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದ್ದಾರೆ.
ಬೆಂಗಳೂರು : 66 ವರ್ಷದ ಮಹಿಳೆಯೊಬ್ಬರು ತಮ್ಮ 73 ವರ್ಷದ ಪತಿಯ ವಿರುದ್ಧ ದಾಖಲಿಸಿದ್ದ ದ್ವಿಪತ್ನಿತ್ವ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ್ದು, ಪತಿ ಇನ್ನೊಬ್ಬ ಮಹಿಳೆಯೊಂದಿಗೆ ಕೇವಲ ಸಂಬಂಧ ಹೊಂದಿರುವುದು ವಿವಾಹಕ್ಕೆ ಸಮನಾಗುವುದಿಲ್ಲ ಮತ್ತು ಆದ್ದರಿಂದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 494 ರ ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗುವುದಿಲ್ಲ ಎಂದು ಹೇಳಿದೆ. ದ್ವಿಪತ್ನಿತ್ವಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ ಒಬ್ಬ ವ್ಯಕ್ತಿಯು ತನ್ನ ಸಂಗಾತಿಯ ಜೀವಿತಾವಧಿಯಲ್ಲಿ ಇನ್ನೊಬ್ಬರನ್ನು ಮದುವೆಯಾದಾಗ ಅನ್ವಯಿಸುತ್ತದೆ. ಆ ವ್ಯಕ್ತಿಗೆ ಏಳು ವರ್ಷಗಳವರೆಗೆ ಕಠಿಣ ಅಥವಾ ಸರಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಮತ್ತು ದಂಡಕ್ಕೂ ಗುರಿಯಾಗಬೇಕಾಗುತ್ತದೆ. ನ್ಯಾಯಮೂರ್ತಿ ಆರ್ ನಟರಾಜ್ ಮಾರ್ಚ್ 3 ರಂದು ತಮ್ಮ ಆದೇಶದಲ್ಲಿ ಮಹಿಳೆಯ ದೂರಿನಲ್ಲಿ ಪತಿ ಮತ್ತು ಮಹಿಳೆ “ಅಕ್ರಮ ಸಂಬಂಧ”ದಲ್ಲಿ ವಾಸಿಸುತ್ತಿದ್ದಾರೆ ಎಂದು ಮಾತ್ರ ಉಲ್ಲೇಖಿಸಲಾಗಿದೆ ಎಂದು ಗಮನಿಸಿದರು. ಆದೇಶದಲ್ಲಿ, “ಐಪಿಸಿಯ 494 ರ ಅಡಿಯಲ್ಲಿ ಅಪರಾಧವು ಒಬ್ಬ ವ್ಯಕ್ತಿಯು ತನ್ನ ಸಂಗಾತಿಯ ಜೀವಿತಾವಧಿಯಲ್ಲಿ ಇನ್ನೊಬ್ಬರನ್ನು ಮದುವೆಯಾದಾಗ ಮಾತ್ರ ಆಕರ್ಷಿಸಲ್ಪಡುತ್ತದೆ ಎಂದು ಈಗ…
ರಾಯಚೂರು : ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಯುವಕನನ್ನು ಆತನ ತಾಯಿಯ ಎದುರಲ್ಲಿ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ನಡೆದಿದೆ. ಬುಳ್ಳಾಪುರದ ಪ್ರಾಣೇಶ್ (23) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ದಿನ್ನಿ ಗ್ರಾಮದ ಪ್ರಸಾದ್, ಮಲ್ಲೇಶ್, ಮಲ್ಲಿಕಾರ್ಜುನ್, ಅಮರೇಶ್ ಎಂಬುವವರಿಂದ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಪ್ರಸಾದ್ ಹೆಂಡತಿ ಮತ್ತು ಪ್ರಾಣೇಶ್ ನಡುವೆ ಅನೈತಿಕ ಸಂಬಂಧ ಇತ್ತು ಎನ್ನಲಾಗುತ್ತಿದೆ. ಬುಳ್ಳಾದಲ್ಲಿ ಜಾಗದ ವಿಷಯವಾಗಿ ನ್ಯಾಯ ಪಂಚಾಯಿತಿ ನಡೆಯುತ್ತಿದ್ದ ವೇಳೆ ತಾಯಿ ಎದುರಲ್ಲೇ ಕೊಡಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ. ಕಳೆದ ಮೂರು ತಿಂಗಳಿನಿಂದ ಪ್ರಾಣೇಶ್ ಗಾಗಿ ಹುಡುಕಾಟ ನಡೆಸುತ್ತಿದ್ದರು. ಪ್ರಾಣೇಶ್ ಇರುವುದನ್ನು ಖಚಿತಪಡಿಸಿಕೊಂಡು ಹಿಂದಿನಿಂದ ಬಂದ ಪ್ರಸಾದ್ ತಲೆಗೆ ಕೊಡಲಿಯಿಂದ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಪ್ರಾಣೇಶ್ ನನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಆರೋಪಿಗಳು ತಲೆ ಮರೆಸಿಕೊಂಡಿದ್ದು, ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಮ್ಶೆಡ್ಪುರ : ಅದು ಮದುವೆ ಮನೆ ಎಲ್ಲರು ಮದ್ವೆ ಸಂಭ್ರಮದಲ್ಲಿ ಇದ್ದರು. ಆದರೆ ಅದೊಂದು ಘಟನೆ ಇಡಿ ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ. ಹೌದು ಮದುವೆಯ ಸಂಭ್ರಮದಲ್ಲಿದ್ದ ಮನೆಯಲ್ಲಿ ರಸಗುಲ್ಲಾ ಸೇವನೆಯು ವ್ಯಕ್ತಿಯೊಬ್ಬರ ಪಾಲಿಗೆ ಮೃತ್ಯುವಾಗಿ ಪರಿಣಮಿಸಿದ ಘಟನೆ ಜಾರ್ಖಂಡ್ನ ಜಮ್ಶೆಡ್ಪುರ ಸಮೀಪದ ಮಲಿಯಂತ ಗ್ರಾಮದಲ್ಲಿ ನಡೆದಿದೆ. ರಸಗುಲ್ಲಾ ಗಂಟಲಲ್ಲಿ ಸಿಲುಕಿ ಲಲಿತ್ ಸಿಂಗ್ (41) ಎಂಬುವವರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಶುಕ್ರವಾರ ತಡರಾತ್ರಿ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಲಲಿತ್ ಸಿಂಗ್ ಕೂಡ ಪಾಲ್ಗೊಂಡಿದ್ದರು. ಊಟದ ಸಮಯದಲ್ಲಿ ರಸಗುಲ್ಲಾ ತಿನ್ನುತ್ತಿದ್ದಾಗ, ಅದು ಅವರ ಗಂಟಲಿನಲ್ಲಿ ಸಿಲುಕಿಕೊಂಡಿದೆ. ಇದರಿಂದಾಗಿ ಅವರಿಗೆ ತಕ್ಷಣವೇ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಸಿಂಗ್ ಅವರು ಉಸಿರಾಡಲು ಕಷ್ಟಪಡುತ್ತಿರುವುದನ್ನು ಕಂಡು ಅಲ್ಲಿದ್ದ ಅತಿಥಿಗಳು ಮತ್ತು ಸಂಬಂಧಿಕರು ಅವರ ಗಂಟಲಿನಲ್ಲಿ ಸಿಲುಕಿದ್ದ ರಸಗುಲ್ಲಾವನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ ಆದರೆ, ಯಾವುದೇ ಪ್ರಯೋಜನವಾಗಲಿಲ್ಲ. ಅವರ ಸ್ಥಿತಿ ಗಂಭೀರವಾಗುತ್ತಿದ್ದಂತೆ ತಕ್ಷಣ ಅವರನ್ನು ಜಮ್ಶೆಡ್ಪುರದ ಎಂಜಿಎಂ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಪರಿಶೀಲಿಸಿದ ವೈದ್ಯರು ಅವರು…
ಬೆಂಗಳೂರು : ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರತದಿಂದ ದುಬೈಗೆ ಹಾರಾಟ ನಡೆಸಬೇಕಿದ್ದ ವಿಮಾನಗಳು ರದ್ದಾಗಿವೆ. ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್ಪ್ರೆಸ್ ಸೇವೆಗಳು ಸ್ಥಗಿತಗೊಂಡಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ 24 ಹಾಗೂ ಮಂಗಳೂರಿನಿಂದ ಕೆಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ನಿಂದ ನಿರ್ಗಮನ ಮತ್ತು ಆಗಮಿಸಬೇಕಿದ್ದ ಒಟ್ಟು 24 ವಿಮಾನಗಳ ಹಾರಾಟ ಕ್ಯಾನ್ಸಲ್ ಆಗಿವೆ. ಕೆಂಪೇಗೌಡ ಏರ್ಪೋರ್ಟ್ನಿಂದ ನಿರ್ಗಮಿಸಬೇಕಿದ್ದ 11 ಫ್ಲೈಟ್ಗಳು ಮತ್ತು ಅರಬ್ ದೇಶಗಳಿಂದ ಕೆಐಎಬಿಗೆ ಆಗಮಿಸಬೇಕಿದ್ದ 13 ಫ್ಲೈಟ್ ರದ್ದಾಗಿವೆ. ಅಬುದಾಬಿ, ರಿಯಾದ್, ಜಿಡ್ಡಾ, ಡಮಾಮ್, ದುಬೈ ಹಾಗೂ ದೋಹಾದಿಂದ ಕೆಐಎಬಿಗೆ ಆಗಮಿಸಿದ್ದ ವಿಮಾನಗಳು ಕ್ಯಾನ್ಸಲ್ ಆಗಿವೆ ಎನ್ನಲಾಗಿದೆ. ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಭವಿಷ್ಯದ ಬೇರೆ ದಿನಾಂಕಕ್ಕೆ ತಮ್ಮ ಪ್ರಯಾಣವನ್ನು ಮರುನಿಗದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪ್ರಯಾಣ ಬೇಡವೆನ್ನುವವರು ಟಿಕೆಟ್ ರದ್ದುಗೊಳಿಸಿ…
ಬೆಂಗಳೂರು : ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 39.37 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. 39.37 ಲಕ್ಷ ಮೌಲ್ಯದ 1 ಕೆಜಿ 125 ಗ್ರಾಂ ಹೈಡ್ರೋಪೋನಿಕ ಗಾಂಜಾ ಜಪ್ತಿ ಮಾಡಿದ್ದಾರೆ. ಆರೋಪಿಯು ಫೋಟೋ ಫ್ರೇಮ್ನಲ್ಲಿ ಅಡಗಿಸಿ ಬಿಟ್ಟು ಗಾಂಜಾ ಸಾಗಾಟ ಮಾಡುತ್ತಿದ್ದ. ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯ ಬಳಿ ಗಾಂಜಾ ಪತ್ತೆಯಾಗಿದೆ. ಆರೋಪಿಯನ್ನು ಗಾಜಾ ಸಮೇತ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. NDPS ಕಾಯ್ದೆಯ ಅಡಿ ಅಧಿಕಾರಿಗಳಿಂದ ಪ್ರಕರಣ ದಾಖಲಾಗಿದೆ.
BREAKING : ಸಿಲೆಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ : ‘PNG’ ಇದ್ದರೆ, ‘LPG’ ಸರೆಂಡರ್ ಮಾಡುವುದು ಕಡ್ಡಾಯ
ನವದೆಹಲಿ : ಗ್ಯಾಸ್ ಸಿಲಿಂಡರ್ ಅಭಾವದ ನಡುವೆ ಇದೀಗ ಗ್ರಾಹಕರಿಗೆ ಕೇಂದ್ರ ಸರ್ಕಾರ ಇದೀಗ ಬಿಗ್ ಶಾಕ್ ನೀಡಿದೆ. PNG ಇದ್ದರೆ, ಎಲ್ಪಿಜಿ ಸರೆಂಡರ್ ಮಾಡುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹೌದು ಮನೆಗಳಲ್ಲಿ ಪೈಪ್ಡ್ ನ್ಯಾಚುರಲ್ ಗ್ಯಾಸ್ ಸಂಪರ್ಕ ಹೊಂದಿದ ಗ್ರಾಹಕರು ಎಲ್ಪಿಜಿ ಸಿಲಿಂಡರ್ ಸಂಪರ್ಕವನ್ನು ಕಡ್ಡಾಯವಾಗಿ ಹಿಂತಿರುಗಿಸಬೇಕು ಎಂದು ಸೂಚನೆ ನೀಡಿದೆ. LPG ಸಿಲಿಂಡರ್ ಸಂಪರ್ಕವನ್ನು ಕಡ್ಡಾಯವಾಗಿ ಗ್ರಾಹಕರು ಹಿಂದಿರುಗಿಸಬೇಕು ಎಂದು ಪಿಎನ್ಜಿ ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಖಡಕ್ ಸೂಚನೆ ಕೊಟ್ಟಿದೆ. ಎಲ್ಪಿಜಿ ಕೊರತೆಯನ್ನು ನೀಗಿಸಲು ಕೇಂದ್ರ ಸರ್ಕಾರ ಈ ಒಂದು ಕ್ರಮ ಕೈಗೊಂಡಿದೆ. ಗ್ರಾಹಕರಿಗೆ ಸುಲಭವಾಗಿ ಸಿಲಿಂಡರ್ ಸಿಗುವಂತೆ ಮಾಡಲು ಈ ಒಂದು ಕ್ರಮ ಕೈಗೊಂಡಿದೆ. ಇನ್ನು ಬೆಂಗಳೂರಿನಲ್ಲಿ ಹೋಟೆಲ್ಗಳಲ್ಲಿ ಪ್ರತಿನಿತ್ಯ ಸಾವಿರ ಸಿಲಿಂಡರ್ ಪೂರೈಸಲು ಸರ್ಕಾರ ನಿರ್ಧರಿಸಿದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ.












