Author: kannadanewsnow05

ಚಾಮರಾಜನಗರ: ಕರ್ನಾಟಕ ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಆರಂಭವಾಗಿದೆ. ಇಲಾಖೆಯ ಸುಧಾರಿತ ‘ಕಾವೇರಿ 2.0’ ಪೋರ್ಟಲ್ ಮೂಲಕ ರಾಜ್ಯದಲ್ಲೇ ಮೊದಲ ಬಾರಿಗೆ ಸಂಪೂರ್ಣ ಕಾಗದ ರಹಿತ (Paperless) ಆಸ್ತಿ ನೋಂದಣಿ ಪ್ರಕ್ರಿಯೆಗೆ ಚಾಮರಾಜನಗರದ ಉಪನೋಂದಣಿ ಕಚೇರಿಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. ಮುದ್ರಾಂಕ ಇಲಾಖೆಯ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರಾದ ಎಂ. ಪಿ. ಮುಲ್ಲೈ ಮುಗಿಲನ್ ಅವರು ಈ ನೂತನ ವ್ಯವಸ್ಥೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ತಂತ್ರಜ್ಞಾನದ ಬಳಕೆಯಿಂದ ಸಾರ್ವಜನಿಕರಿಗೆ ಪಾರದರ್ಶಕ ಮತ್ತು ವೇಗದ ಸೇವೆ ನೀಡುವುದು ಸರ್ಕಾರದ ಉದ್ದೇಶವಾಗಿದೆ. ಚಾಮರಾಜನಗರ ಜಿಲ್ಲೆಯಿಂದ ಈ ಕ್ರಾಂತಿಕಾರಿ ಬದಲಾವಣೆ ಆರಂಭವಾಗಿರುವುದು ಹೆಮ್ಮೆಯ ವಿಷಯ,” ಎಂದು ತಿಳಿಸಿದರು. ಏನಿದು ಕಾಗದ ರಹಿತ ನೋಂದಣಿ? ಈ ಹೊಸ ವ್ಯವಸ್ಥೆಯಡಿ ಸಾರ್ವಜನಿಕರು ಆಸ್ತಿ ನೋಂದಣಿಗಾಗಿ ದಸ್ತಾವೇಜುಗಳ ಕಟ್ಟುಗಳನ್ನು ಹಿಡಿದು ಕಚೇರಿಗೆ ಅಲೆಯುವ ಅಗತ್ಯವಿರುವುದಿಲ್ಲ. ಎಲ್ಲ ದಾಖಲೆಗಳನ್ನು ಕಾವೇರಿ 2.0 ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕವೇ ಅಪ್‌ಲೋಡ್ ಮಾಡಲಾಗುತ್ತದೆ. ನೋಂದಣಿ…

Read More

ಬೆಂಗಳೂರು : ಪ್ರತಿಯೊಬ್ಬರು 12 ಗಂಟೆ ಕೆಲಸ ಮಾಡಬೇಕು ಎಂದು ಇನ್ಫೋಸಿಸ್ ನಾರಾಯಣಮೂರ್ತಿ ಹೇಳಿಕೆಗೆ ಇದೀಗ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಎಂಎಲ್ಸಿ ಬಿ ಕೆ ಹರಿಪ್ರಸಾದ್ ಆಕ್ರೋಶ ಹೊರ ಹಾಕಿದ್ದು, ಕಾರ್ಮಿಕ ದಿನಾಚರಣೆಯ ವೇಳೆ ಕೆಲಸದ ಅವಧಿಯ ಬಗ್ಗೆ ಪ್ರಸ್ತಾಪಿಸಿ ಆಯಮ್ಮ ಯಾರು ಸಿಂಪಲ್ ಸುಧಾ ಅಂತೆ ಗೊತ್ತಿಲ್ಲ ಸುಧಾಮೂರ್ತಿ ಗಂಡ ಹೇಳುತ್ತಾರೆ ಹೆಚ್ಚು ಕೆಲಸ ಮಾಡಿ ಅಂತ ಹೇಳುತ್ತಾರೆ. ವಾರಕ್ಕೆ 75 ಗಂಟೆ ಕೆಲಸ ಮಾಡಬೇಕು ಅಂತ ಹೇಳುತ್ತಾರೆ. ದಿನಕ್ಕೆ 12 ಗಂಟೆ ಕೆಲಸ ಅಂದರೆ ನಾವೇನು ಪ್ರಾಣಿಗಳ ನಾವೇನು ಮನುಷ್ಯರ ಪ್ರಾಣಿಗಳ ಎಂದು ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಬಿಕೆ ಹರಿಪ್ರಸಾದ್ ಮಾತನಾಡಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ದಿನಕ್ಕೆ 8 ಗಂಟೆ ಕೆಲಸ ಮಾಡಬೇಕು ಅಂತ ಹೇಳಿದರು. ಮಾಲಿಕ ಕೆಲಸ ಕೊಡಬಹುದು ನಾವು ಕೆಲಸ ಮಾಡಿದರೆ ಒಂದು ರೂಪಾಯಿ ಲೆಕ್ಕದಲ್ಲಿ ಅವರಿಗೆ ಕಂಪನಿ ಕೊಡೋಕೆ ನೂರಾರು ಎಕರೆ ಕೊಟ್ಟರು. ನಾವು…

Read More

ನವದೆಹಲಿ : ಅಸ್ಸಾಂ ಪೊಲೀಸರು ದಾಖಲಿಸಿರುವ ಮಾನನಷ್ಟ ಮತ್ತು ಫೋರ್ಜರಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಏಪ್ರಿಲ್ 24ರಂದು ಗುವಾಹಟಿ ಹೈಕೋರ್ಟ್ ಖೇರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ಬದಲಿಸುವ ಮೂಲಕ ಅವರಿಗೆ ಬಂಧನದಿಂದ ರಕ್ಷಣೆ ನೀಡಿದೆ. ಹೈಕೋರ್ಟ್ ಆದೇಶಕ್ಕೆ ತಡೆ: ಈ ಹಿಂದೆ ಏಪ್ರಿಲ್ 24ರಂದು ಗುವಾಹಟಿ ಹೈಕೋರ್ಟ್ ಖೇರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೈಕೋರ್ಟ್‌ನ ಈ ತೀರ್ಪಿನಿಂದಾಗಿ ಖೇರಾ ಅವರಿಗೆ ಬಂಧನದ ಭೀತಿ ಎದುರಾಗಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು, ಹೈಕೋರ್ಟ್ ನೀಡಿದ್ದ ಆದೇಶವನ್ನು ಬದಿಗೆ ಸರಿಸಿ ಅವರಿಗೆ ಜಯ ನೀಡಿದೆ. ಪ್ರಕರಣದ ಹಿನ್ನೆಲೆ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನೀಡಿದ್ದಾರೆ ಎನ್ನಲಾದ…

Read More

ಬೆಂಗಳೂರು: ರಾಜ್ಯದ ವಿವಿಧ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರ ಆರೋಗ್ಯ ಮತ್ತು ಹಿತದೃಷ್ಟಿಯಿಂದ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಮಾಸಿಕ ಒಂದು ದಿನದ ‘ಋತುಚಕ್ರದ ವೇತನ ಸಹಿತ ರಜೆ’ (Paid Menstrual Leave) ನೀಡುವ ಸಂಬಂಧ ಕಾನೂನು ಜಾರಿಗೆ ತರಲು ಗಂಭೀರ ಪರಿಶೀಲನೆ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಕಾನೂನು ಹೋರಾಟ ಮತ್ತು ಸರ್ಕಾರದ ಸ್ಪಷ್ಟನೆ: ರಾಜ್ಯ ಕಾರ್ಮಿಕ ಇಲಾಖೆಯು 2025ರ ನವೆಂಬರ್ 20ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಕರ್ನಾಟಕ ಎಂಪ್ಲಾಯರ್ಸ್ ಅಸೋಸಿಯೇಷನ್, ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರದ ಪರ ವಕೀಲರು ಹಾಜರಾಗಿ, ಮಹಿಳಾ ನೌಕರರಿಗೆ ಈ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಶಾಸನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸರ್ಕಾರ ಮುಕ್ತವಾಗಿದೆ ಎಂದು ತಿಳಿಸಿದರು.…

Read More

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ನಿನ್ನೆ AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಇರಿವುದರಿಂದ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದೀಗ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಅನುಭವಿ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾದರೆ ಕಾಂಗ್ರೆಸ್ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರನ್ನು ಹೈಕಮಾಂಡ್‌ ಕುರ್ಚಿಯಿಂದ ಇಳಿಸಿದರೆ ದಲಿತ ಸಿಎಂ ವಿಚಾರ ಮುನ್ನೆಲೆಗೆ ಬರುತ್ತದೆ ಎಂಬ ಯತೀಂದ್ರ ಅವರ ಹೇಳಿಕೆಗೆ ಗುರುವಾರ ಪ್ರತಿಕ್ರಿಯಿಸಿದ ಗೃಹ ಸಚಿವರು, ಯತೀಂದ್ರ ಅವರು ಹೇಳಿದ ಮೇಲೆ ಆಯ್ತಲ್ಲ. ನಾನು ಮಾತನಾಡುವುದೇನಿದೆ? ಈ ವಿಚಾರದಲ್ಲಿ ಏನನ್ನೂ ಮಾತನಾಡುವುದಿಲ್ಲ. ಹೈಕಮಾಂಡ್‌ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು. ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾದರೆ ನಾವು ಸ್ವಾಗತಿಸುತ್ತೇವೆ. ಖರ್ಗೆ ಅವರು ಹಿರಿಯರು, ಅವರ ಸಮಕಾಲೀನರೆಲ್ಲ ಮುಖ್ಯಮಂತ್ರಿ ಆಗಿದ್ದಾರೆ. ವೀರಪ್ಪ ಮೊಯ್ಲಿ, ಗುಂಡೂರಾವ್‌ ಎಲ್ಲರೂ ಮುಖ್ಯಮಂತ್ರಿ ಆಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಐವತ್ತು ವರ್ಷದ ಸಾಧನೆಯಲ್ಲಿ ಹೈಕಮಾಂಡ್‌ ಅವರಿಗೆ…

Read More

ಬೆಂಗಳೂರು : ಬೆಂಗಳೂರು: ತರಬೇತಿ ನಿರತ ಗಗನಸಖಿಯೊಬ್ಬರ(Air Hostess) ಮೇಲೆ ರಸ್ತೆಯಲ್ಲೇ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಬಂಧಿತ ಚಂದ್ರಶೇಖರ್ ಮತ್ತು ಸಂತ್ರಸ್ತ ಯುವತಿ ಇಬ್ಬರೂ ಪರಿಚಯಸ್ಥರಾಗಿದ್ದು, ಒಂದೇ ಏರಿಯಾದಲ್ಲಿ ವಾಸವಾಗಿದ್ದರು. ಆರಂಭದಲ್ಲಿ ಇಬ್ಬರ ನಡುವೆ ಸ್ನೇಹವಿತ್ತು. ಆದರೆ ಇತ್ತೀಚೆಗೆ ಆರೋಪಿ ಚಂದ್ರಶೇಖರ್ ಯುವತಿಯನ್ನು ಪ್ರೀತಿಸುವಂತೆ ಪೀಡಿಸಲು ಆರಂಭಿಸಿದ್ದ ಎನ್ನಲಾಗಿದೆ. ಯುವಕನ ವರ್ತನೆಯಿಂದ ಬೇಸತ್ತಿದ್ದ ಯುವತಿ ಆತನನ್ನು ಸಂಪೂರ್ಣವಾಗಿ ದೂರ ಮಾಡಲು ಮುಂದಾಗಿದ್ದಳು. ನಡೆದಿದ್ದೇನು?: ನಗರದ ಖಾಸಗಿ ಏವಿಯೇಷನ್ ಅಕಾಡೆಮಿಯೊಂದರಲ್ಲಿ ಗಗನಸಖಿ ತರಬೇತಿ ಪಡೆಯುತ್ತಿದ್ದ ಸಂತ್ರಸ್ತೆ, ತನ್ನ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶದ ರಸ್ತೆಯಲ್ಲಿ ಯುವತಿ ಏಕಾಂಗಿಯಾಗಿ ನಡೆದುಕೊಂಡು ಹೋಗುತ್ತಿದ್ದರು. ಇದನ್ನೇ ಹೊಂಚು ಹಾಕಿದ್ದ ಆರೋಪಿ ಚಂದ್ರಶೇಖರ್, ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ರಸ್ತೆಯಲ್ಲೇ ಅಡ್ಡಗಟ್ಟಿದ್ದಾನೆ. ಬಳಿಕ ಆಕೆಯ ಮೇಲೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಲು…

Read More

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮುರಗಮಲ್ಲಾದಲ್ಲಿ ಮೃತ್ಯು ದರ್ಶನವಾಗಿದೆ. ಕೆರೆಯಲ್ಲಿ ಮುಳುಗುತ್ತಿದ್ದ ತನ್ನ ಮಕ್ಕಳನ್ನು ಪ್ರಾಣದ ಹಂಗು ತೊರೆದು ರಕ್ಷಿಸಲು ಹೋದ ತಾಯಿಯೋರ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಅತ್ಯಂತ ಹೃದಯವಿದ್ರಾವಕ ಘಟನೆ ನಡೆದಿದೆ. ಬೆಂಗಳೂರಿನ ಬನಶಂಕರಿ ನಿವಾಸಿ ತಬುಸುಮ್ ಖಾನ್ (24) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಬೆಂಗಳೂರಿನಿಂದ ಕುಟುಂಬ ಸಮೇತ ಮುರಗಮಲ್ಲಾದ ದರ್ಗಾಕ್ಕೆ ಭೇಟಿ ನೀಡಲು ಈ ತಂಡ ಆಗಮಿಸಿತ್ತು. ದರ್ಶನದ ನಂತರ ಎಲ್ಲರೂ ಸೇರಿ ಹತ್ತಿರದಲ್ಲೇ ಇರುವ ಕೆರೆಯ ಬಳಿ ವಿಶ್ರಾಂತಿ ಪಡೆಯಲು ತೆರಳಿದ್ದರು. ಈ ಸಂದರ್ಭದಲ್ಲಿ ಕುಟುಂಬಸ್ಥರು ಕೆರೆಯ ದಡದಲ್ಲಿ ಕಾಲ ಕಳೆಯುತ್ತಿದ್ದರು. ಸ್ವಲ್ಪ ದೂರದಲ್ಲಿದ್ದ ಬಟ್ಟೆಯನ್ನು ತರಲೆಂದು ತಾಯಿ ತಬುಸುಮ್ ಖಾನ್ ಅವರು ತೆರಳಿದ್ದಾಗ, ಮಕ್ಕಳು ಕೆರೆಯ ನೀರಿನಲ್ಲಿ ಆಟವಾಡಲು ಹತ್ತಿರ ಹೋಗಿದ್ದಾರೆ. ಮಕ್ಕಳನ್ನು ಉಳಿಸಲು ಹೋದ ತಾಯಿ: ಮಕ್ಕಳು ಆಟವಾಡುತ್ತಾ ಆಳವಾದ ಪ್ರದೇಶಕ್ಕೆ ಹೋದಾಗ ನೀರಿನಲ್ಲಿ ಮುಳುಗಲು ಪ್ರಾರಂಭಿಸಿದ್ದಾರೆ. ಇದನ್ನು ಕಂಡ ತಾಯಿ ತಬುಸುಮ್ ಅವರು ಕ್ಷಣಾರ್ಧದಲ್ಲಿ ಧಾವಿಸಿ…

Read More

ಬೆಂಗಳೂರು : ಬೆಂಗಳೂರಲ್ಲಿ ಮಹಿಳೆಯ ಜೊತೆ ರಾಸಲೀಲೆ ವಿಡಿಯೋ ಇಟ್ಟುಕೊಂಡು ಕಾಮುಕನೊಬ್ಬ ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಆರ್ ಆರ್ ನಗರ ಪೊಲೀಸ್ರಿಂದ ಆರೋಪಿ ಚಂದ್ರೇಗೌಡನನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿ ಚಂದ್ರೇಗೌಡ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನಾಗಿದ್ದು, ನಾನು ಪೊಲೀಸ್, ರಿಪೋರ್ಟರ್, ವಕೀಲ ಎಂದು ಹೇಳಿ ವಂಚನೆ ಎಸಗುತ್ತಿದ್ದ. ಅಲ್ಲದೇ ಹಲವು ಮಹಿಳೆಯರಿಗೆ ಬ್ಲಾಕ್ ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಪರಿಚಯ ಮಾಡಿಕೊಂಡಿದ್ದ ಚಂದ್ರೆಗೌಡ ನನಗೆ ಡಿವೋರ್ಸ್ ಆಗಿದ್ದು ಮದುವೆಯಾಗುತ್ತೇನೆ ಎಂದು ನಂಬಿಸಿದ್ದಾನೆ. ಅಲ್ಲದೆ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ಹಾಗೆಯೇ ಜೊತೆಗೆ ದೈಹಿಕ ಸಂಪರ್ಕವನ್ನು ಬೆಳೆಸಿದ್ದಾನೆ. ಆ ವೇಳೆ ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲೆ ಮಾಡಿದ್ದಾನೆ ನಂತರ ಬೆದರಿಕೆ ಒಡ್ಡಿ 5 ಲಕ್ಷ ಹಣವನ್ನು ಕೂಡ ಚಂದ್ರೇಗೌಡ ಪಡೆದುಕೊಂಡಿದ್ದಾನೆ. ಸದ್ಯ ಪೊಲೀಸರು ಕಿರಾತಕನನ್ನು ಅರೆಸ್ಟ್ ಮಾಡಿದ್ದಾರೆ. ಚಂದ್ರೇಗೌಡನ ಮೊಬೈಲ್ ನಲ್ಲಿ ರಾಸಲೀಲೆ ವಿಡಿಯೋಗಳು ಇದ್ದು ಸುಮಾರು 20ಕ್ಕೂ ಹೆಚ್ಚು ಮಹಿಳೆಯರ ಜೊತೆಗಿದ್ದ ವಿಡಿಯೋಗಳು ಪತ್ತೆಯಾಗಿವೆ.…

Read More

ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಈಗ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ವಿದ್ಯುತ್ ದರವನ್ನು 56 ಪೈಸೆ ಹೆಚ್ಚಳ ಮಾಡಲಾಗಿದ್ದು, ಈ ಪರಿಷ್ಕೃತ ದರವು ಇಂದಿನಿಂದಲೇ ಜಾರಿಗೆ ಬರಲಿದೆ. ದರ ಏರಿಕೆಗೆ ಕಾರಣವೇನು? ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗವು (KERC) ಈ ಬೆಲೆ ಏರಿಕೆಗೆ ಅನುಮೋದನೆ ನೀಡಿದೆ. ಬೆಸ್ಕಾಂ ಎದುರಿಸುತ್ತಿರುವ ಸುಮಾರು 2,000 ಕೋಟಿ ರೂಪಾಯಿಗಳ ಆರ್ಥಿಕ ನಷ್ಟವನ್ನು ಸರಿದೂಗಿಸಲು ಮತ್ತು ಇಂಧನ ಹೊಂದಾಣಿಕೆ ವೆಚ್ಚವನ್ನು (Fuel Adjustment Cost) ಸರಿದೂಗಿಸಲು ಈ ಕ್ರಮ ಅನಿವಾರ್ಯ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ. ಯಾವ ಜಿಲ್ಲೆಗಳಿಗೆ ಅನ್ವಯ? ಬೆಸ್ಕಾಂ ವ್ಯಾಪ್ತಿಗೆ ಒಳಪಡುವ ಒಟ್ಟು ಎಂಟು ಜಿಲ್ಲೆಗಳ ಗ್ರಾಹಕರಿಗೆ ಈ ಹೊರೆ ಬೀಳಲಿದೆ: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ರಾಮನಗರ, ಚಿತ್ರದುರ್ಗ ಮತ್ತು ದಾವಣಗೆರೆ. ಗ್ರಾಹಕರ ಮೇಲೆ ಬೀರುವ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದ್ದು, ಮದ್ಯದ ಅಮಲಿನಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು, ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಪುಂಡರ ಅಟ್ಟಹಾಸ ಇದೀಗ ಮಿತಿಮೀರಿದೆ. ಮನೆಗಳ ಕಿಟಕಿ ಮತ್ತು ಗಾಜುಗಳನ್ನು ಹೊಡೆದಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ಲಾಂಗ್ ಹಿಡಿದು ಓಡಾಡಿದ್ದಾರೆ. ರಸ್ತೆಗಳಲ್ಲಿ ಸಿಕ್ಕ ಸಿಕ್ಕವರನ್ನು ಮಚ್ಚಿನಿಂದ ಪುಂಡರು ಬೆದರಿಸಿದ್ದಾರೆ. ಪುಂಡರ ಅಟ್ಟಹಾಸದ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ನೀಡಿದ ಮನೆಗಳ ಕಿಟಕಿ ಮತ್ತು ಗಾಜುಗಳನ್ನು ಹೊಡೆದು ಅಟ್ಟಹಾಸ ಮೆರೆದಿದ್ದಾರೆ. ಇದನ್ನು ಪ್ರಶ್ನಿಸಿದ ಅಕ್ಕಪಕ್ಕದವರಿಗೂ ಮಚ್ಚು ತೋರಿಸಿ ಬೆದರಿಸಿದ್ದಾರೆ. ಪೊಲೀಸರಿಗೆ ಹೇಳಿದರೆ ಮುಗಿಸಿ ಬಿಡುತ್ತೇವೆ ಎಂದು ಪುಂಡರು ಬೆದರಿಸಿದ್ದಾರೆ ಗಲಾಟೆಯ ದೃಶ್ಯ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸರಿಯಾಗಿದೆ ಏಪ್ರಿಲ್ 25 ರಂದು ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು ಪುಂಡರ ಹಟಹಾಸಕ್ಕೆ ಜನರು ಇದೀಗ ಆತಂಕಕ್ಕೆ ಒಳಗಾಗಿದ್ದಾರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಲೇಔಟ್ ಜನರು ಆಗ್ರಹಿಸಿದ್ದಾರೆ

Read More