Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ತೀವ್ರ ರಾಜಕೀಯ ಸಂಚಲನ ಮೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಹಸನ ಈಗ ಹೊಸ ತಿರುವು ಪಡೆದುಕೊಂಡಿದೆ. ಸಿಎಂ ಹುದ್ದೆಯಿಂದ ಕೆಳಗಿಳಿಯಲು ಸಿದ್ಧರಾಗಿರುವ ಸಿದ್ದರಾಮಯ್ಯ ಅವರು, ಹೈಕಮಾಂಡ್ ನಾಯಕರು ತಮಗೆ ನೀಡಿದ್ದ ಆಫರ್‌ಗಳನ್ನು ನಯವಾಗಿಯೇ ತಿರಸ್ಕರಿಸುವ ಮೂಲಕ ಅಚ್ಚರಿಯ ನಡೆ ಇಟ್ಟಿದ್ದಾರೆ. ದೆಹಲಿ ಮಟ್ಟದ ನಾಯಕರ ಲೆಕ್ಕಾಚಾರಗಳಿಗೆ ಎರಡು ಪ್ರಮುಖ ವಿಚಾರಗಳಲ್ಲಿ ಬಿಗ್ ಚೆಕ್‌ಮೇಟ್ ನೀಡುವ ಮೂಲಕ ತಮ್ಮದೇ ಆದ ರಾಜಕೀಯ ಪಟ್ಟು ಮುಂದುವರಿಸಿದ್ದಾರೆ. ರಾಷ್ಟ್ರ ರಾಜಕಾರಣದಲ್ಲಿ ಒಬಿಸಿ (ಹಿಂದುಳಿದ ವರ್ಗಗಳ) ಪ್ರಭಾವಿ ನಾಯಕನ ಅವಶ್ಯಕತೆ ಇರುವುದನ್ನು ಮನಗಂಡಿದ್ದ ಕಾಂಗ್ರೆಸ್ ಹೈಕಮಾಂಡ್, ಸಿದ್ದರಾಮಯ್ಯ ಅವರನ್ನು ದೆಹಲಿ ರಾಜಕಾರಣಕ್ಕೆ ಮುನ್ನಡೆಸಲು ಪ್ಲಾನ್ ಮಾಡಿತ್ತು. ಸಿದ್ದರಾಮಯ್ಯನವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸುವ ಹಾಗೂ ಕೇಂದ್ರ ಮಟ್ಟದಲ್ಲಿ ಪ್ರಮುಖ ಜವಾಬ್ದಾರಿ ನೀಡುವ ಆಫರ್ ಅನ್ನು ಹೈಕಮಾಂಡ್ ಮುಂದಿಟ್ಟಿತ್ತು. ಆದರೆ, ಈ ಪ್ರಸ್ತಾಪವನ್ನು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ನಾಯಕರ ನಿಲುವಿಗೆ ಸೆಡ್ಡು ಹೊಡೆದಿರುವ ಸಿದ್ದರಾಮಯ್ಯ, ತಮಗೆ ದೆಹಲಿ…

Read More

ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರಾಜ್ಯ ಸರ್ಕಾರಕ್ಕೆ ಬುಧವಾರ ಸಲ್ಲಿಸಿದ ಜಾತಿ ಗಣತಿಯ ಅಂತಿಮ ವರದಿಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಶೇಕಡಾ 32ರಿಂದ 42ಕ್ಕೆ ಹೆಚ್ಚಿಸಿ ಶಿಫಾರಸು ಮಾಡಿದೆ ಎನ್ನಲಾಗಿದೆ. ಅಲ್ಲದೆ, ಮುಸ್ಲಿಂ ಸಮುದಾಯ ರಾಜ್ಯದಲ್ಲಿ ಅತಿ ಹೆಚ್ಚು ಅಂದರೆ, 80.14 ಲಕ್ಷ ಜನಸಂಖ್ಯೆ ಹೊಂದಿದೆ. ರಾಜ್ಯ ದ ಜನಸಂಖ್ಯೆಯಲ್ಲಿ ಶೇ.14ರಷ್ಟು ಮುಸ್ಲಿಮರಿದ್ದಾರೆ. ಎಂದು ವರದಿಯಲ್ಲಿ ಉಲ್ಲೇಖಿಸಿದೆ ಎನ್ನಲಾಗಿದೆ. ವರದಿಯು 13 ಅಧ್ಯಾಯಒಳಗೊಂಡಿದ್ದು, ಪ್ರತಿ ಜಾತಿ ಹೊಂದಿರುವ ಜನಸಂಖ್ಯೆ, ಸಾಮಾಜಿಕ, ಆರ್ಥಿಕ, ರಾಜಕೀಯ ಸ್ಥಿತಿ ಸೇರಿದಂತೆ ಸಮಗ್ರ ಮಾಹಿತಿಯನ್ನು ಉಲ್ಲೇಖಿಸಲಾಗಿದೆ. ಈ ವರದಿಯ ಪ್ರಕಾರ, ಮುಸ್ಲಿಂ ಸಮುದಾಯ ರಾಜ್ಯದಲ್ಲಿ ಅತಿ ಹೆಚ್ಚು ಅಂದರೆ ಶೇ. 14ರಷ್ಟಿದ್ದು, ನಂತರದ ಸ್ಥಾನದಲ್ಲಿ ವೀರಶೈವರು- ಲಿಂಗಾಯತರು, ಒಕ್ಕಲಿಗರು, ಕುರುಬ ಸಮುದಾಯ ಇದೆ ಎಂದು ತಿಳಿಸಿದೆ. ಮುಸ್ಲಿಂ ಸಮುದಾಯದ ನಂತರ ವೀರಶೈವ/ಲಿಂಗಾಯತ ಸಮುದಾಯದ ಜನಸಂಖ್ಯೆ 65 ಲಕ್ಷ ಇದ್ದು, ಜನಸಂಖ್ಯೆಯಲ್ಲಿ ಶೇ.11ರಷ್ಟು ಪಾಲು ಹೊಂದಿದೆ. ಒಕ್ಕಲಿಗರು 60 ಲಕ್ಷ ಇದ್ದು, ಒಟ್ಟು ಜನಸಂಖ್ಯೆಯಲ್ಲಿ…

Read More

ಬೆಂಗಳೂರು : ಇಂದು ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ಆದರೆ ಸಂಪುಟದ ಎಲ್ಲಾ ಸಚಿವರಿಗೂ ಉಪಹಾರ ಕೂಟ ಆಯೋಜನೆ ಮಾಡಿದ್ದು ಬಳಿಕ ರಾಜಭವನಕ್ಕೆ ತೆರಳಿ, ರಾಜ್ಯಪಾಲರನ್ನು ಭೇಟಿಯಾಗಿ ಬಳಿಕ ರಾಜೀನಾಮೆ ನೀಡುವ ಸಾಧ್ಯತೆ ಇತ್ತು ಎಂದು ಹೇಳಲಾಗಿತ್ತು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವುದು ಸ್ವಲ್ಪ ತಡವಾಗಬಹುದು ಎನ್ನಲಾಗಿದೆ. ಹೌದು ಇದಕ್ಕೆ ಕಾರಣ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ.ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಬುಧವಾರ ತಡರಾತ್ರಿ 11:45 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ ಸಿದ್ದರಾಮಯ್ಯ ಅವರು ಇಂದು ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿದ್ದರು. ಇದಕ್ಕೆ ಸ್ಪಂದಿಸಿದ್ದ ಲೋಕಭವನ ಗುರುವಾರ ಬೆಳಗ್ಗೆ 11:30 ಕ್ಕೆ ಹಾಗೂ ಮಧ್ಯಾಹ್ನ 3 ಗಂಟೆಯ…

Read More

ಬೆಳಗಾವಿ: ಭಾರತೀಯ ರಿಸರ್ವ್ ಬ್ಯಾಂಕ್ ನಿಯಮ ಉಲ್ಲಂಘಿಸಿ 35 ಸಾವಿರ ಜನರಿಂದ ಕೋಟ್ಯಂತರ ರೂ. ಠೇವಣಿ ಸಂಗ್ರಹಿಸಿರುವ ಪ್ರಕರಣದಲ್ಲಿ ಬಂಧನವಾಗಿರುವ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರಗೆ ಮತ್ತೆ 14 ದಿ‌ನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಳಗಾವಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಹತ್ತು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ಶಿವಾನಂದ ನೀಲಣ್ಣವರ ಅವರನ್ನು ಇಂದು ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಹಾಜರುಪಡಿಸಿದರು. ಸಿಐಡಿ ಡಿವೈಎಸ್ಪಿ ಕೋದಂಡರಾಮ್ ನೇತೃತ್ವದ ತಂಡ ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾಲಯಕ್ಕೆ ಕರೆತಂದಿತ್ತು.‌ ಪ್ರಕರಣದ ತನಿಖೆ ಇನ್ನೂ ಮುಂದುವರೆದಿರುವ ಹಿನ್ನೆಲೆ ಸಿಐಡಿ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಮನವಿ ಸಲ್ಲಿಸಿದರು. ಮನವಿಯನ್ನು ಪರಿಗಣಿಸಿದ ನ್ಯಾಯಾಧೀಶರಾದ ಗಂಗಾಧರ್ ಕೆ. ಅವರು, ಶಿವಾನಂದ ನೀಲಣ್ಣವರ ಅವರನ್ನು ಜೂನ್ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದರು. ಇದರೊಂದಿಗೆ ಹತ್ತು ದಿನಗಳ ಸಿಐಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ನೀಲಣ್ಣವರಗೆ ಹಿಂಡಲಗಾ ಜೈಲಿಗೆ ರವಾನಿಸಲಾಯಿತು.

Read More

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ತಾಲ್ಲೂಕಿನ ಬೈರಾಪುರ ಗ್ರಾಮದ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಈ ದುರ್ಘಟನೆ ನಡೆದಿದೆ. ವೇಗವಾಗಿ ಬಂದ ಲಾರಿಯೊಂದು ಬೊಲೆರೊ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದ್ದೇ ಈ ಭೀಕರ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ವಾಹನವು ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಮೂವರು ಪ್ರಯಾಣಿಕರು ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗಳಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮೊಳಕಾಲ್ಮೂರು ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಮೃತಪಟ್ಟ ದುರ್ದೈವಿಗಳ ಗುರುತು ಇನ್ನು ಪತ್ತೆಯಾಗಬೇಕದ್ದು, ಪೊಲೀಸರು ಆ ನಿಟ್ಟಿನಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ. ಅಪಘಾತದ ಬಳಿಕ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಲಾರಿ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಭಾರಿ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳು ದಟ್ಟವಾಗಿವೆ ಎಂಬ ಸ್ಪೋಟಕ ಮಾಹಿತಿಯನ್ನು ಹಿರಿಯ ಕಾಂಗ್ರೆಸ್ ನಾಯಕ ಆರ್. ವಿ. ದೇಶಪಾಂಡೆ ಬಿಚ್ಚಿಟ್ಟಿದ್ದಾರೆ. ಈ ಬೆಳವಣಿಗೆಯು ಆಡಳಿತಾರೂಢ ಕಾಂಗ್ರೆಸ್ ವಲಯದಲ್ಲಿ ಹಾಗೂ ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್. ವಿ. ದೇಶಪಾಂಡೆ ಅವರು, ತಾವೇ ಖುದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾಗಿ ತಿಳಿಸಿದರು. ಈ ಭೇಟಿಯ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು, “ನಾನು ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಹೇಳಿರುವುದಾಗಿ ದೇಶಪಾಂಡೆ ಬಹಿರಂಗಪಡಿಸಿದ್ದಾರೆ. “ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದಾಗ ಅವರು ನಾಳೆಯೇ ರಾಜೀನಾಮೆ ಕೊಡುವುದಾಗಿ ಹೇಳಿದರು. ಆದರೆ, ನಾವು ಅವರಿಗೆ ರಾಜೀನಾಮೆ ನೀಡದಂತೆ ಮನವಿ ಮಾಡಿದ್ದೇವೆ. ಆದಾಗ್ಯೂ, ನಾಳೆ ಅವರು ರಾಜೀನಾಮೆ ನೀಡಬಹುದು ಎಂಬ ಮುನ್ಸೂಚನೆ ನನಗೆ ಸಿಗುತ್ತಿದೆ” ಎಂದು ದೇಶಪಾಂಡೆ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.…

Read More

ಬೆಂಗಳೂರು : ನಿನ್ನೆ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ರಾಹುಲ್ ಗಾಂಧಿ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಹಲವು ವಿಚಾರಗಳು ಕುರಿತು ಚರ್ಚಿಸಿದ್ದು ಈ ವೇಳೆ ರಾಜೀನಾಮೆ ವಿಚಾರವಾಗಿ ನನಗೆ ಸ್ವಲ್ಪ ದಿನ ಕಾಲಾವಕಾಶ ಬೇಕು ಎಂದು ಕೇಳಿದಾಗ ರಾಹುಲ್ ಗಾಂಧಿ ಅವರ ಮನವಿಯನ್ನು ಸರಸಾಗಾಟವಾಗಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಮಾನವೊಲಿಕೆಗೆ ಸಿದ್ದರಾಮಯ್ಯ ಯತ್ನ ಮಾಡಿದ್ದು, ಚಿಂತನೆಗೆ ಕಾಲಾವಕಾಶ ನೀಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದರು ಕನಿಷ್ಠ 15 ದಿನ ಕಾಲಾವಕಾಶ ನೀಡಿ ಎಂದು ಸಿದ್ದರಾಮಯ್ಯ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದರು. ಜಾತಿಗಣತಿ ವರದಿ ಅನುಷ್ಠಾನ ನನ್ನ ಕನಸು ಜಾದಿಗಣತಿ ವರದಿ ಸ್ವೀಕರಿಸಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದರು. ಬಳಿಕ ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರ ಮನವಿ ನಿರಾಕರಿಸಿದ್ದಾರೆ. ಹೆಚ್ಚಿನ ಸಮಯ ನೀಡಲು ಸಾಧ್ಯವಿಲ್ಲ ಎರಡು ದಿನಗಳಲ್ಲಿ ರಾಜೀನಾಮೆ ನೀಡಿ ಎಂದು ಖಡಕ್ ಸೂಚನೆ ಕೊಟ್ಟಾಗ ಸಿದ್ದರಾಮಯ್ಯ ರಾಹುಲ್ ಗಾಂಧಿ ಮಾತಿಗೆ ಸಮ್ಮತಿ ಸೂಚಿಸಿದ್ದಾರೆ.

Read More

ಶಿವಮೊಗ್ಗ: ರಾಜ್ಯದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಶಿವಮೊಗ್ಗದಲ್ಲಿ ಕರ್ತವ್ಯದಲ್ಲಿದ್ದ ಯುವ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತ ದುರ್ದೈವಿಯನ್ನು 26 ವರ್ಷದ ಈರಣ್ಣ ಗುಡಾದಾರ್ ಎಂದು ಗುರುತಿಸಲಾಗಿದ್ದು, ಇವರ ಅಕಾಲಿಕ ಮರಣವು ಪೊಲೀಸ್ ಇಲಾಖೆ ಹಾಗೂ ಅವರ ಕುಟುಂಬಸ್ಥರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಮೂಲತಃ ಬೆಳಗಾವಿಯ ಯುವಕ: ಮೃತ ಈರಣ್ಣ ಗುಡಾದಾರ್ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನವರಾಗಿದ್ದಾರೆ. ಇವರು ಕಳೆದ 7 ವರ್ಷಗಳಿಂದ ಶಿವಮೊಗ್ಗದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) 8ನೇ ಪಡೆಯಲ್ಲಿ ಕಾನ್ಸ್‌ಟೇಬಲ್ ಆಗಿ ಅತ್ಯಂತ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇಲಾಖೆಯಲ್ಲಿ ಉತ್ತಮ ನಡವಳಿಕೆಯಿಂದ ಎಲ್ಲರ ಗಮನ ಸೆಳೆದಿದ್ದ ಯುವ ಸಿಬ್ಬಂದಿಯನ್ನು ಕಳೆದುಕೊಂಡು ಸಹೋದ್ಯೋಗಿಗಳು ಕಣ್ಣೀರಿಡುತ್ತಿದ್ದಾರೆ. 18 ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ಈರಣ್ಣ: ಈ ದುರಂತದ ಬೆನ್ನಲ್ಲೇ ಮತ್ತೊಂದು ಅತ್ಯಂತ ನೋವಿನ ಸಂಗತಿ ಬೆಳಕಿಗೆ ಬಂದಿದೆ. ಮೃತ ಈರಣ್ಣ ಅವರಿಗೆ ಕೇವಲ 18 ದಿನಗಳ ಹಿಂದೆಯಷ್ಟೇ ಅತ್ಯಂತ…

Read More

ಬೆಂಗಳೂರು : ಅಂದುಕೊಂಡಂತೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಬಹುತೇಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಸಾಧ್ಯತೆ ಇದೆ. ಹಾಗಾಗಿ ಅವರು ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಕೂಡ ಇದೆ. ಹೌದು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್ ಅಂಗಳದಲ್ಲಿ ಚರ್ಚೆ ನಡೆದಿದ್ದು ಸಿಎಂ ಡಿಸಿಎಂ ಆಯ್ಕೆ ಆಧರಿಸಿ ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಘೋಷಣೆ ಮಾಡಲಾಗುತ್ತದೆ. ಶಾಸಕಾಂಗ ಪಕ್ಷದ ಸಭೆಯ ಬಳಿಕ ಕೆಪಿಸಿಸಿ ಅಧ್ಯಕ್ಷರ ರಾಜೀನಾಮೆ ಕೂಡ ನಡೆಯುತ್ತೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಈಗಾಗಲೇ ರಾಜ್ಯ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ರಾಜೀನಾಮೆ ನೀಡಿದಂತೆ ಆ ಒಂದು ಅಧ್ಯಕ್ಷ ಸ್ಥಾನದ ಮೇಲೆ ಸತೀಶ್ ಜಾರಕಿಹೊಳಿ ಕಣ್ಣು ಇಟ್ಟಿದ್ದಾರೆ. ಕೆಲ ನಾಯಕರ ಜೊತೆಗೆ ಸತೀಶ್ ಜಾರಕಿಹೊಳಿ ಮಾತುಕತೆ ಕೂಡ ನಡೆಸಿದ್ದಾರೆ. ನೂತನ ಮುಖ್ಯಮಂತ್ರಿ ಆಯ್ಕೆ…

Read More

ಬೆಂಗಳೂರು : ನಾಳೆ ಬೆಳಿಗ್ಗೆ 10:30ಕ್ಕೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಇದೀಗ ಟ್ವೀಟ್ ನಲ್ಲಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ವಿದಾಯದ ಸಂದೇಶ ತಿಳಿಸಿದ್ದಾರೆ. ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ‌ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ. ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ. ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಪೌಷ್ಟಿಕ ಆಹಾರದ ಭದ್ರತೆ ನೀಡುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಆಧಾರವಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಆಹಾರಧಾನ್ಯ ವಿತರಿಸಲು ಈವರೆಗೆ 18,897 ಕೋಟಿ ರೂ. ವ್ಯಯಿಸಲಾಗಿದ್ದು, 4.26 ಕೋಟಿ ಪಡಿತರದಾರರು ಮೂರು ಹೊತ್ತು ನೆಮ್ಮದಿಯಿಂದ ಊಟ ಮಾಡುತ್ತಿದ್ದಾರೆ. https://twitter.com/siddaramaiah/status/2059535232995635525?t=XBW1iNQ8aFRHsrCi_jMZug&s=19

Read More