Author: kannadanewsnow05

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿರು ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಪ್ರತಿಭಟನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 21 ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಧ್ಯರಾತ್ರಿಯ ಬಂಧನ ಮಾಡಿ ಜಾಮೀನು ಮಂಜೂರು ಮಾಡಲಾಗಿದೆ. ಆನೇಕಲ್ ನ ಸರ್ಜಾಪುರದಲ್ಲಿರುವ ಅಜೀಮ್ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ನಿನ್ನೆ ಏಕಾಏಕಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಾರೆ. ಸ್ಪಾರ್ಕ್ ಎನ್ನುವ ಸಂಘಟನೆ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಿತ್ತು. ದೇಶ ವಿರೋಧಿ ಕಾರ್ಯಕ್ರಮ ಆಯೋಜನೆ ಮಾಡಿರುವ ಆರೋಪ ಕೇಳಿ ಬಂದಿದೆ. ಎಬಿವಿಪಿ ಪ್ರತಿಭಟನೆ ವಿರುದ್ಧವಾಗಿ ಕಾಲೇಜಿನ ವಿದ್ಯಾರ್ಥಿಗಳು ಕಳೆದ ರಾತ್ರಿ ಆಕ್ರೋಶ ಹೊರಹಾಕಿದ್ದು ಘೋಷಣೆ ಕೂಗಿ ಕಿಡಿ ಕಾರಿದ್ದಾರೆ. ಇದೇ ವೇಳೆ ಓರ್ವ ವಿದ್ಯಾರ್ಥಿ ಮೇಲೆ ಹಲ್ಲೆ ಕೂಡ ಮಾಡಿರುವ ಆರೋಪ ಕೇಳಿ ಬಂದಿದೆ. ಕಾಶ್ಮೀರ ಮಹಿಳೆಯರ ಧ್ವನಿ ಕುರಿತು ಕಾರ್ಯಕ್ರಮ ಯೋಜನೆ ಮಾಡಲಾಗಿತ್ತು. ಆದರೆ ಎಬಿವಿಪಿ ಪ್ರತಿಭಟನೆ ಮೂಲಕ ಪ್ರತಿಭಟನೆ ಮಾಡಿ ಆಸ್ತಿಪಾಸ್ತಿ ಹಾನಿ ಮಾಡಿದ್ದಾರೆ. ಬಲವಂತವಾಗಿ ವಿಶ್ವವಿದ್ಯಾಲಯಕ್ಕೆ ನುಗ್ಗಿ…

Read More

ಬೆಂಗಳೂರು: ಮಧ್ಯಾಹ್ನದ ಊಟಕ್ಕೆ ಅಥವಾ ಮಕ್ಕಳಿಗೆ ಲಂಚ್ ಬಾಕ್ಸ್ ಕಳುಹಿಸಲು ಪ್ರತಿದಿನ ಒಂದೇ ರೀತಿಯ ಅಡುಗೆ ಮಾಡಿ ಬೇಸರವಾಗಿದೆಯೇ? ಹಾಗಿದ್ದರೆ, ಮದುವೆ ಮನೆ ಅಥವಾ ಹೋಟೆಲ್‌ನಲ್ಲಿ ಸಿಗುವಂತಹ ಅದ್ಭುತ ರುಚಿಯ ವೆಜ್ ಪಲಾವ್ (Vegetable Pulao) ಅನ್ನು ಕೇವಲ 30 ನಿಮಿಷಗಳಲ್ಲಿ ನಿಮ್ಮ ಮನೆಯಲ್ಲೇ ತಯಾರಿಸಬಹುದು. ಉದುರುದುರಾದ ಅನ್ನ, ಹಸಿರು ಮಸಾಲೆಯ ಘಮ ಮತ್ತು ಕರಿದ ಬ್ರೆಡ್ ತುಂಡುಗಳ ಕ್ರಂಚಿ ರುಚಿ – ಈ ಪಲಾವ್‌ನ ಸ್ಪೆಷಾಲಿಟಿ. ಇದನ್ನು ಮಾಡುವ ಸರಳ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು (Ingredients): ರುಚಿಕರ ಪಲಾವ್ ತಯಾರಿಸಲು ಈ ಕೆಳಗಿನ ಪದಾರ್ಥಗಳನ್ನು ಸಿದ್ಧಪಡಿಸಿಕೊಳ್ಳಿ: ಅಕ್ಕಿ: 1.5 ಕಪ್ (ಸೋನಾ ಮಸೂರಿ ಅಥವಾ ಬಾಸುಮತಿ – 20 ನಿಮಿಷ ನೆನೆಸಿಡಿ). ತರಕಾರಿಗಳು: 1 ಕಪ್ (ಕ್ಯಾರೆಟ್, ಬೀನ್ಸ್, ಆಲೂಗಡ್ಡೆ, ಬಟಾಣಿ, ನೂಲ್ ಕೋಲ್). ಒಗ್ಗರಣೆಗೆ: 1 ಈರುಳ್ಳಿ, 1 ಟೊಮೆಟೊ, 3-4 ಚಮಚ ಎಣ್ಣೆ + ತುಪ್ಪ. ರುಬ್ಬಲು (ಹಸಿರು ಮಸಾಲೆ): ½ ಕಪ್ ತೆಂಗಿನಕಾಯಿ…

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಕಲ್ಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ರಾಷ್ಟ್ರೋತ್ಥಾನ ಶಾಲೆಯ ಬಳಿ ಈ ಒಂದು ಘಟನೆ ಸಂಭವಿಸಿದೆ. ಬೈಕ್ ಸವಾರ ಶಿವಲಿಂಗಪ್ಪ ಸ್ಥಳದಲ್ಲೇ ಸಾವನಪ್ಪಿದ್ದರೆ ಮತ್ತೊಬ್ಬ ಮತ್ತೊಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಸಿಸಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಬೈಕ್ ಸವಾರನಿಗೆ ಥಾರ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಸಾವನ್ನಪ್ಪಿದ್ದು, ಮತ್ತೊರ್ವನಿಗೆ ಗಂಭೀರವಾದ ಗಾಯವಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು ಸುಮಾರು 175 ಅಂಗಡಿಗಳು ಇರುವ ಕಟ್ಟಡದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಚಿಕ್ಕಪೇಟೆಯ ಕುಂಬಾರಪೇಟೆ ಬಳಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡದ ಮೊದಲ ಮಹಡಿಯಲ್ಲಿ ಫ್ಯಾನ್ಸಿ ಸ್ಟೋರ್, ಪ್ಲಾಸ್ಟಿಕ್ ಅಂಗಡಿ ಇವೆಲ್ಲ ಕೂಡ ಹೊತ್ತಿ ಉರಿಯುತ್ತಿವೆ. ವಿನೋದ್ ಎಂಬವರಿಗೆ ಈ ಒಂದು ಕಟ್ಟಡ ಸೇರಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಅಕ್ಕಪಕ್ಕದ ಕಟ್ಟಡಗಳಿಗೂ ಬೆಂಕಿಯ ಜ್ವಾಲೆ ವ್ಯಾಪಿಸಿದೆ. ಇಡೀ ಏರಿಯಾದಲ್ಲಿ ದಟ್ಟ ಹೊಗೆ ಆವರಿಸಿದೆ. 5 ಅಗ್ನಿಶಾಮಕ ವಾಹನ ದಳ ಸಿಬ್ಬಂದಿಗಳು ಸಹ ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದಾರೆ. ಘಟನೆ ಸ್ಥಳಕ್ಕೆ ಪೊಲೀಸರು ಸಹ ಭೇಟಿ ನೀಡಿದ್ದಾರೆ.

Read More

ಬೆಂಗಳೂರು : ಮರಕ್ಕೆ ಬುಲೆಟ್ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉನ್ನಿಕೃಷ್ಣ ಜಂಕ್ಷನ್ನಲ್ಲಿ ಒಂದು ಅಪಘಾತ ಸಂಭವಿಸಿದೆ ಮೃತ ಸವಾರರನ್ನ ಕಿರಣ್ (25) ಯಶವಂತ್ (25) ಎಂದು ತಿಳಿದುಬಂದಿದೆ. ಬೆಂಗಳೂರಿನ ಯಲಹಂಕ ನ್ಯೂಟೋನ್ ಉನ್ನಿಕೃಷ್ಣನ್ ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದ್ದು, ಮರಕ್ಕೆ ಬುಲೆಟ್ ಬೈಕ್ ಡಿಕ್ಕಿಯಾಗಿ ಪಲ್ಟಿ ಆಗಿದ್ದರಿಂದ ಕಿರಣ ಸ್ಥಳದಲ್ಲಿ ಸಾವನ್ನಪ್ಪಿದದ್ದಾನೆ. ಇನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಯಶವಂತ ಸಾವನಪ್ಪಿದ್ದಾನೆ. ಇನ್ನು ಬೈಕ್ ನಲ್ಲಿ ಇದ್ದ ಮತ್ತೋರ್ವ ಯುವಕ ಗೌತಮ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಧರಿಸದೆ ಬೈಕ್ ನಲ್ಲಿ ತೆರಳುವಾಗ ಈ ಅಪಘಾತ ಸಂಭವಿಸಿದೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಮಂಡ್ಯ : ಅಧಿಕಾರಿಗಳಿಂದ ಸರ್ಕಾರಿ ಜಮೀನು ಅಕ್ರಮ ಪರಭಾರೆ ಆರೋಪ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಚೇರಿ ಸೇರಿ ಮೂರು ಕಡೆ ಲೋಕಾಯುಕ್ತ ದಾಳಿ ಮಾಡಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಕ್ರಮ ಖಾತೆ ಮಾಡಿರುವ ಬಗ್ಗೆ ಲೋಕಾಯುಕ್ತರು ಪರಿಶೀಲನೆ ನಡೆಸುತ್ತಿದ್ದಾರೆ ತಾಲೂಕು ಕಚೇರಿ, ಬೆಳಗೋಳ ಗ್ರಾಮ ಸಹಾಯಕ ಬಸವಯ್ಯ, ಆರ್.ಐ ಉಮೇಶ್ ಗೆ ಸೇರಿದ ಮೈಸೂರಿನ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗೋಳ ವ್ಯಾಪ್ತಿಯ ಸರ್ಕಾರಿ ಜಮೀನು ಅಕ್ರಮ ಖಾತೆಯ ಬಗ್ಗೆ ದೂರು ಬಂದಿತ್ತು. ಸಾರ್ವಜನಿಕರಿಂದ ಲೋಕಾಯುಕ್ತರಿಗೆ ವ್ಯಾಪಕವಾದ ದೂರುಗಳು ಬಂದ ಹಿನ್ನೆಲೆಯಲ್ಲಿ ಕಚೇರಿ ಮೇಲೆ ಇಂದು ಏಕಾಏಕಿ ದಾಳಿ ಮಾಡಿದ್ದಾರೆ.ಕೆಲವು ದಾಖಲೆಗಳನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯ ಕುರಿತು ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಬೆಂಗಳೂರು : ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಾಪ್ಟರ್ 1 ಚಲನಚಿತ್ರದ ಕುರಿತು ಬಾಲಿವುಡ್ ನಟ ರಣವೀರ್ ಸಿಂಗ್ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕರ್ನಾಟಕ ಹೈಕೋರ್ಟ್ ನಟ ರಣವೀರ್ ಸಿಂಗ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ರಣವೀರ್ ಸಿಂಗ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು. ಇಂದು ಹೈಕೋರ್ಟ್ ಪೀಠದಲ್ಲಿ ರಣವೀರ್ ಸಿಂಗ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ಮಾರ್ಚ್ 2ಕ್ಕೆ ಮುಂದೂಡಿದರು.ಆದರೆ ರಣವೀರ್ ಸಿಂಗ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದ್ದು, ವಿಚಾರಣೆಗೆ ಸಹಕರಿಸುವಂತೆ ಸೂಚಿಸಿದ್ದಾರೆ.

Read More

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಪತಿಯೊಬ್ಬ ತನ್ನ ಪತ್ನಿಗೆ ಚಾಕು ಇರಿದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗಾವಿಯಲ್ಲಿ ನಡೆದ ಈ ಘಟನೆ ಅತ್ಯಂತ ದುರದೃಷ್ಟಕರ ಮತ್ತು ಆಘಾತಕಾರಿಯಾಗಿದೆ. ವೈಯಕ್ತಿಕ ಕಲಹಗಳು ಇಂತಹ ತೀವ್ರ ಸ್ವರೂಪದ ಹಿಂಸಾಚಾರಕ್ಕೆ ತಿರುಗುವುದು ಸಮಾಜಕ್ಕೆ ಕಳವಳಕಾರಿ ಸಂಗತಿ. ರಾಮದುರ್ಗ ಪಟ್ಟಣದ ನಿವಾಸಿ ಉಮೇಶ ಬಡಿಗೇರ (34) ಮೃತ ದುರ್ದೈವಿ. ಕ್ಷುಲ್ಲಕ ಕಾರಣಕ್ಕೆ ಪತ್ನಿ ಜೊತೆ ಉಮೇಶ ಸಾರಾಯಿ ಕುಡಿದು ಬಂದು ಜಗಳ ಮಾಡುತ್ತಿದ್ದ. ಮೊನ್ನೆ ಮತ್ತೆ ಜಗಳ ಆಗಿದೆ. ಈ ವೇಳೆ ಜಗಳ ವಿಕೋಪಕ್ಕೆ ಹೋಗಿದ್ದು, ಪತ್ನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ. ಬಳಿಕ ತಾನು ಕೂಡ ಬಾವಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಉಮೇಶನ ಪತ್ನಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆಯ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ: * ಘಟನೆ: ಬೆಳಗಾವಿ ಜಿಲ್ಲೆಯಲ್ಲಿ ಕೌಟುಂಬಿಕ…

Read More

ದಾವಣಗೆರೆ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ 15 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಗೋಗುದ್ದು ಗ್ರಾಮದ ಚಮನ್‌ಸಾಬ್ ಮತ್ತು ಫಾತಿಮಾ ದಂಪತಿಯ ಪುತ್ರ ಮುಜಾಮಿಲ್ (15) ಮೃತ ಬಾಲಕ. ಆತ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಾಲೆಗೆ ರಜೆ ಹಿನ್ನೆಲೆ ಮನೆಗೆ ಬಂದಿದ್ದ ಮುಜಾಮಿಲ್ ಇಂದು ಮುಂಜಾನೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಅಸ್ವಸ್ಥನಾಗಿ ಕುಸಿದುಬಿದ್ದಿದ್ದಾನೆ. ವಿಷಯ ತಿಳಿದ ಕುಟುಂಬಸ್ಥರು ತಕ್ಷಣವೇ ಸಮೀಪದ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರೂ, ಮಾರ್ಗ ಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯಂತೆ, ಹೃದಯಾಘಾತವೇ ಸಾವಿಗೆ ಕಾರಣ ಎನ್ನಲಾಗಿದೆ.

Read More

ಬೆಂಗಳೂರು : ಸಚಿವ ಸಂಪುಟ ಪುನಾರಚನಿಗೆ 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಎಲ್ಲ ಶಾಸಕರಿಗೂ ಮಂತ್ರಿ ಆಗುವ ಆಸೆ ಇರುತ್ತೆ ಅಲ್ವಾ. ಶಾಸಕರು ಪತ್ರ ಬರೆದು ಕೇಳಿರುವುದರಲ್ಲಿ ತಪ್ಪೇನಿದೆ? ಎಂದು ತಿಳಿಸಿದರು. ಪತ್ರಿಕೆಯಲ್ಲಿ ಈ ವಿಚಾರ ನೋಡಿದ್ದೇನೆ ಅಷ್ಟೇ, ನನಗೆ ಇನ್ನು ಪತ್ರ ತಲುಪಿಲ್ಲ. ಎಲ್ಲ ಶಾಸಕರಿಗೂ ಮಂತ್ರಿ ಆಗಬೇಕು ಎಂಬ ಆಸೆ ಇರುತ್ತೆ ಮೋದಿ ಶಾಸಕರಾಗಿ ಆಯ್ಕೆ ಆಗದೆ ಸಿಎಂ ಆಗೋದ್ರು ಅಲ್ವಾ. ಅದಕ್ಕಾಗಿ ಎಲ್ಲರಿಗೂ ಸಚಿವರಾಗಬೇಕು ಎಂಬ ಆಸೆ ಇರುತ್ತದೆ. ಮುಖ್ಯಮಂತ್ರಿ ಆಗದಿದ್ದರೂ ಕೆಲವರು ಮಂತ್ರಿ ಆಗಿದ್ದವರು ಇದ್ದಾರೆ ಶಾಸಕರು ಆಗದೆ ಇದ್ದರೂ ಸಚಿವರಾದವರು ಇದ್ದಾರೆ. ಅದಕ್ಕೆ ಶಾಸಕರು ಸಂಪುಟ ಪುನಾರ ರಚನೆಗೆ ಬೇಡಿಕೆ ಇಟ್ಟಿದ್ದಾರೆ. ಪಕ್ಷದ ಶಾಸಕರು ಪತ್ರ ಬರೆದು ಕೇಳಿರುವುದು ತಪ್ಪೇನಿದೆ? ಹೊಸ ಪೀಳಿಗೆ ಬೆಳೆಯಬೇಕು ಅಲ್ವಾ? ನಾನು ಮೊದಲ ಬಾರಿ ಮಂತ್ರಿಯಾಗಿ 36 ವರ್ಷಗಳು ಆಯ್ತು ಹೊಸ ಜನರೇಷನ್ ಬರಬೇಕು…

Read More