Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದಾಳೆ. ಅಲ್ಲದೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಹಾಗೂ ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾಳೆ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಹಿಳೆಗೆ ಬಸವ ಜಯ ಮೃತ್ಯುಂಜಯ ಶ್ರೀ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏಪ್ರಿಲ್ ನಾಲ್ಕರಂದೇ ಮಹಿಳೆ ಸೇರಿ ನಾಲ್ವರ ವಿರುದ್ಧ ಸ್ವಾಮೀಜಿ ದೂರು ನೀಡಿದ್ದರು ಫೆಬ್ರವರಿ 11ರಂದು ಹಲ್ಲೆ ಮಾಡಿದ್ದಾರೆ. ಎಂದು ಸ್ವಾಮೀಜಿ ದೂರು ನೀಡಿದ್ದಾರೆ. ವಿಜಯಪುರ ತಾಲೂಕಿನ ಕಗ್ಗೊಡ ಬಳಿ ನನಗೆ ಹಲ್ಲೆ ಮಾಡಿದ್ದಾರೆ ಎಂದು ಸ್ವಾಮೀಜಿ ದೂರು ನೀಡಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆಗೆ ಮೃತ್ಯುಂಜಯ ಶ್ರೀಗಳು ದೂರು ನೀಡಿದ್ದಾರೆ. ಬೆಂಗಳೂರು ಮೂಲದ ತ್ರಿವೇಣಿ, ಪೃಥ್ವಿ ಗೌಡ, ಯಶವಂತ ಹಾಗೂ ಸ್ಪೀಡ್ ನ್ಯೂಸ್ ಎಂಡಿ ವೀರೇಶ್ ವಿರುದ್ಧ ಜಯ ಮೃತ್ಯುಂಜಯ ಶ್ರೀಗಳು…
ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೀಡಿದ್ದ ‘ಬಿ’ ವರದಿಯನ್ನು ಪ್ರಶ್ನಿಸಿ ಈ ಹಿಂದೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಜಾರಿ ನಿರ್ದೇಶನಾಲಯ (ಇ.ಡಿ) ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಹೌದು ವಿಶೇಷ ನ್ಯಾಯಾಲಯವು ಈ ಹಿಂದೆ ಲೋಕಾಯುಕ್ತದ ಕ್ಲೀನ್ ಚೀಟನ್ನು ಅಂಗೀಕರಿಸಿತ್ತು. ಇದನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಹೈಕೋರ್ಟ್ ಸಿಎಂ ಕುಟುಂಬಕ್ಕೆ ತುರ್ತು ನೋಟಿಸ್ ಜಾರಿ ಮಾಡಿದೆ. ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸುವಂತೆ ಕೋರಲಾಗಿದ್ದು, ED ಮೇಲ್ಮನವಿ ಸಲ್ಲಿಸಿದ್ದರಿಂದ ಪ್ರಕರಣ ಹೊಸ ತಿರುವು ಪಡೆದಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರಿಗೆ ಮಾರ್ಟ್ 26ರಂದು ತುರ್ತು ನೋಟಿಸ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ವರದಿಯನ್ನು ಪುರಸ್ಕರಿಸಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚೀಟ್ ನೀಡಿತ್ತು. ಆದರೆ…
ಬೆಂಗಳೂರು : ಬಸವ ಜಯ ಮೃತ್ಯುಂಜಯ ಶ್ರೀಗಳ ವಿರುದ್ಧ ಈಗ ಗಂಭೀರವಾದ ಆರೋಪವನ್ನು ಕೇಳಿ ಬಂದಿದ್ದು, ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಮಹಿಳೆಗೆ ಲೈಂಗಿಕ ಹಾಗು ಮಾನಸಿಕವಾಗಿ ಶೋಷಣೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವರಿಗೆ ಮಹಿಳೆ ದೂರು ನೀಡಿದ್ದು, ಅಲ್ಲದೆ ಮಹಿಳಾ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗಕ್ಕೂ ದೂರು ಮಹಿಳೆ ದೂರು ನೀಡಿದ್ದಾರೆ. ಸ್ವಾಮೀಜಿಯ ವಿರುದ್ಧ ಈ ಒಂದು ಗಂಭೀರ ಆರೋಪ ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಡುವುದಾಗಿ ಕೂಡ ಸ್ವಾಮೀಜಿ ಬ್ಲಾಕ್ ಮಾಡುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಲೈಂಗಿಕವಾಗಿ ಸಹಕರಿಸುವಂತೆ ಒತಾಯಿಸಿ, ಜಯ ಮತ್ತು ಜಯ ಸ್ವಾಮೀಜಿ ವಿರುದ್ಧ ಮಹಿಳೆ ಗಂಭೀರವಾದ ಆರೋಪ ಮಾಡಿದ್ದಾಳೆ. ಬೆಂಗಳೂರಿನ ತ್ಯಾಗರಾಜ್ ನಗರದ ನಿವಾಸಿ ಆಗಿರುವ ಮಹಿಳೆ, ಅವರು ಹಣ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲಾಕ್ ಮೇಲ್ ಮಾಡಿದ್ದರ್. ಅಲ್ಲದೇ ಲೈಂಗಿಕವಾಗಿ…
ಕಲಬುರ್ಗಿ : ಕಲಬುರಗಿಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಅರೆಬೆಂದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಕೊಲೆಯಾದ ಮಹಿಳೆ ಶಾಲಾ ಶಿಕ್ಷಕಿಯಾಗಿದ್ದು, ಕೊಟ್ಟ ಹಣವನ್ನು ವಾಪಸ್ ಕೇಳಿದ್ದಕ್ಕೆ ಪರಿಚಯಸ್ಥ ವ್ಯಕ್ತಿಯಿಂದಲೇ ಶಿಕ್ಷಕಿಯ ಕೊಲೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು, ನಂತರ ಮೃತ ದೇಹವನ್ನು ಆರೋಪಿ ಸುಟ್ಟು ಹಾಕಿದ್ದಾನೆ ಎಂದು ತನಿಖೆ ವೇಳೆ ಬಯಲಾಗಿದೆ. ಕೊಲೆಯಾದ ಮಹಿಳೆ ಶಾಲಾ ಶಿಕ್ಷಕಿ ಜ್ಯೋತಿ ಕಪಾಳೆ ಹಿರೇಮಠ(57) ಎಂಬುದು ಗೊತ್ತಾಗಿದ್ದು, ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಪರಿಚಯಸ್ಥ ವ್ಯಕ್ತಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಶಿಕ್ಷಕಿಯ ಮೃತ ದೇಹವನ್ನು ಸುಟ್ಟು ಹಾಕಿರೋದು ಹೊತ್ತಾಗಿದೆ. ಪ್ರಕರಣ ಸಂಬಂಧ ಆರೋಪಿ ಆನಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಜ್ಯೋತಿ ಕಪಾಳೆ ಹಿರೇಮಠ ಕೆಲಸ ಮಾಡುತ್ತಿದ್ದರು. ಹೀಗಾಗಿ ಬೀದರ್ನಲ್ಲಿಯೇ ಮನೆ ಮಾಡಿಕೊಂಡು ಶಾಲೆಗೆ ಹೋಗಿ ಬರುತ್ತಿದ್ದರು. ಆದರೆ ವಾರಕೊಮ್ಮೆ ಕಲಬುರಗಿಗೆ ಬಂದು ವಾಪಸ್ ತೆರಳುವ ಅಭ್ಯಾಸ ಅವರಿಗೆ…
ಬೆಂಗಳೂರು : ಬೆಂಗಳೂರಿನಲ್ಲಿ ಹೆಬ್ಬಗೋಡಿ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಕಳೆದ 12 ವರ್ಷಗಳಿಂದ ಬೆಂಗಳೂರಿನಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದೆ ವೇಳೆ ಬಂದಿದ್ದ ಆರೋಪಿಯಿಂದ ಒಟ್ಟು ಹದಿನಾಲ್ಕು ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸಿಜ್ ಮಾಡಿದ್ದಾರೆ. ಹೌದು ಕಳೆದ 12 ವರ್ಷಗಳಿಂದ ಬೆಂಗಳೂರಿಗೆ ಬಂದಿದ್ದ ನೈಜೀರಿಯಾ ಪ್ರಜೆ ಇಮ್ಯಾನುಯೆಲ್ ನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಮ್ಯಾನುಯೆಲ್ 12 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಡ್ರಗ್ ಪೆಡ್ಲಿಂಗ್ ದಂಧೆ ಶುರು ಮಾಡಿದ್ದ. ಆತ ಭಾರತೀಯ ಮಹಿಳೆಯನ್ನು ಮದುವೆಯಾಗಿ ಡ್ರಗ್ಸ್ ದಂಧೆ ನಡೆಸುತ್ತಿದ್ದ. ಬೆಂಗಳೂರಿನ ಹೆಬ್ಬಗೋಡಿ ಪೋಲೀಸರು ಇದೀಗ ಇಮ್ಯಾನುಯೆಲ್ ನನ್ನ ಅರೆಸ್ಟ್ ಮಾಡಿದ್ದಾರೆ. ಅಲ್ಲದೇ 14 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಮಾಡಿದ್ದಾರೆ. 2014ರಲ್ಲಿ ಭಾರತಕ್ಕೆ ಬಂದಿದ್ದ ನೈಜೀರಿಯಾ ಪ್ರಜೆ ಇಮಾನುವಲ್ ಬಿಜಿನೆಸ್ ವಿಸಾದ ಅಡಿ ಭಾರತಕ್ಕೆ ಬಂದಿದ್ದಾನೆ. ಬೆಂಗಳೂರಿಗೆ ಬಂದು ಇಲ್ಲಿನ ಮಹಿಳೆಯನ್ನೇ ಮದುವೆಯಾಗಿದ್ದಾನೆ 4-5 ಮನೆಗಳನ್ನು ಬಾಡಿಗೆ ಪಡೆದು ಆರೋಪಿ…
ಬೆಂಗಳೂರು : ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಫಲಿತಾಂಶ ಹೊರ ಬೀಳಲಿದೆ ಈ ಕುರಿತು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಏಪ್ರಿಲ್ 9ರಂದು , ಫಲಿತಾಂಶ ಹೊರ ಬೀಳಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಫಲಿತಾಂಶ ಬಿಡುಗಡೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಫಲಿತಾಂಶ ಪ್ರಕಟಣೆಯ ಕುರಿತು ಇಲಾಖೆಯು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಈಗಾಗಲೇ ಪತ್ರ ಬರೆದಿದೆ. ಸಚಿವರ ಲಭ್ಯತೆಯನ್ನು ಆಧರಿಸಿ ಅಧಿಕೃತವಾಗಿ ಫಲಿತಾಂಶ ಹೊರಬೀಳಲಿದೆ.ತಾಂತ್ರಿಕ ಕೆಲಸಗಳು ಹಾಗೂ ಅಂಕಗಳ ಕ್ರೋಡೀಕರಣ ಪ್ರಕ್ರಿಯೆ ಮುಗಿದಿದ್ದು, ಏಪ್ರಿಲ್ 9 ರಂದು ರಿಸಲ್ಟ್ ನೀಡಲು ಇಲಾಖೆ ಉತ್ಸುಕವಾಗಿದೆ. ಇನ್ನು ಪ್ರಕಟ ಆಗುವ ಫಲಿತಾಂಶವನ್ನು ನೋಡುವುದು ಹೇಗೆ ಎಂಬ…
ಬೆಂಗಳೂರು : ಮಹಿಳೆಯರು ಹಾಗೂ ಯುವತಿಯರು ಸೋಶಿಯಲ್ ಮೀಡಿಯಾ ಬಳಸುವ ಮುನ್ನ ಆದಷ್ಟು ಎಚ್ಚರದಿಂದ ಇರುವುದು ಒಳ್ಳೆಯದು. ಹೌದು ಇದೀಗ ಮಹಿಳೆಯ ಖಾಸಗಿ ಫೋಟೋ ಮತ್ತು ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಘಟನೆ ಸಂಭಂದ ಕೆಆರ್ ಪುರಂ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಆಂಧ್ರಪ್ರದೇಶ ಮೂಲದ ಚೆನ್ನೂರು ಮಹೇಶ್ ಹಾಗೂ ವನ್ನೂರು ಸ್ವಾಮಿ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಸ್ನಾಪ್ ಚಾಟ್ ಮೂಲಕ ಆರೋಪಿಗಳು ಮಹಿಳೆಗೆ ಪರಿಚಯವಾಗಿದ್ದರು. ನಂತರ ನಂಬರ್ ಎಕ್ಸ್ ಚೇಂಜ್ ಮಾಡಿಕೊಂಡು ಕಾಲಿಂಗ್ ಮತ್ತು ಚಾಟಿಂಗ್ ನಡೆಸಿದ್ದಾರೆ. ವಾಟ್ಸಪ್ ವಿಡಿಯೋ ಕಾಲ್ ವೇಳೆ ಸ್ಕ್ರೀನ್ ಶಾಟ್ ತೆಗೆದು ಬೆದರಿಕೆ ಹಾಕಿದ್ದಾರೆ. ಜಾಲತಾಣದಲ್ಲಿ ಫೋಟೋ ಮತ್ತು ವಿಡಿಯೋ ಪೋಸ್ಟ್ ಮಾಡುವುದಾಗಿ ಆರೋಪಿಗಳು ಮಹಿಳೆಗೆ ಬೆದರಿಕೆ ಹಾಕಿದ್ದಾರೆ. ಬ್ಲಾಕ್ಮೇಲ್ ಮಾಡಿ ಚಿನ್ನಾಭರಣ ಮತ್ತು ಹಣ ಪಡೆದಿದ್ದಾರೆ. ಮಹಿಳೆಯಿಂದ ಸುಮಾರು 2 ಕೆಜಿ ಚಿನ್ನ ಹಾಗೂ 40 ಲಕ್ಷ ರೂಪಾಯಿ ಆರೋಪಿಗಳು ಮಹಿಳೆಯಿಂದ ಪಡೆದಿದ್ದಾರೆ. ಆರೋಪಿಗಳ ಕಾಟಕ್ಕೆ ಬೇಸತ್ತು…
ಬೀದರ: ಗಡಿ ಜಿಲ್ಲೆಯಾದ ಬೀದರನಲ್ಲಿಏ.11 ಮತ್ತು 12 ರಂದು ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಅರ್ಥಪೂರ್ಣವಾಗಿ ನಡೆಸಲು ಸರ್ವಸಿದ್ಧತೆ ನಡೆದಿದೆ ಎಂದುಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸಮ್ಮೇಳನದ ಮೆರವಣಿಗೆ, ವಸತಿ, ಸಾರಿಗೆ ಸೇರಿ ವಿವಿಧ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ರಾಜ್ಯದ ಎಲ್ಲ ಜಿಲ್ಲೆಗಳಿಂದ ಪತ್ರಕರ್ತರು ಬರಲಿದ್ದಾರೆ. ಪತ್ರಕರ್ತರಿಗೆ ವಸತಿ, ಆಹಾರ ಸೇರಿದಂತೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸಮ್ಮೇಳನ ಮಾದರಿಯಾಗಿ ಸಂಘಟಿಸಲು ತೀವ್ರಗತಿಯ ತಯಾರಿಗಳು ನಡೆದಿವೆ ಎಂದು ತಿಳಿಸಿದರು. 11 ರಂದು ಬೆಳಿಗ್ಗೆ 11ಕ್ಕೆ ಝೀರಾ ಕನ್ವೆನ್ಶನ್ ಹಾಲ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಜಿಲ್ಲೆಯ ಎಲ್ಲ ಶಾಸಕರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆ ವಹಿಸಲಿದ್ದಾರೆ…
ಬೀದರ್ : ಬೀದರ್ ನಲ್ಲಿ ಏಪ್ರಿಲ್ 11 & 12ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಸಂಘಟಿಸಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರತಿ ವರ್ಷದಂತೆಯೇ ಈ ಬಾರಿಯೂ ರಾಜ್ಯ ವ್ಯಂಗ್ಯಚಿತ್ರಕಾರರ ಸಂಘದ ಸಹಯೋಗದಲ್ಲಿ ವ್ಯಂಗ್ಯಚಿತ್ರ ಪ್ರದರ್ಶನ ಏರ್ಪಡಿಸಲಾಗುವುದು. ಪತ್ರಿಕೆ, ಮ್ಯಾಗಜಿನ್ ಗಳಲ್ಲಿ ವ್ಯಂಗ್ಯಚಿತ್ರಗಳಿದ್ದರೆ ಸೊಬಗು. ನೂರಾರು ಪದಗಳಲ್ಲಿ ಹೇಳುವುದನ್ನು ಒಂದು ವ್ಯಂಗ್ಯಚಿತ್ರ ಧ್ವನಿಸಬಲ್ಲದು. ಪ್ರಸ್ತುತ ರಾಜಕೀಯ ಸನ್ನಿವೇಶ, ಸಾಮಾಜಿಕ ಸೇರಿದಂತೆ ಯುದ್ಧದ ಸನ್ನೀವೇಶದ ತನಕ ಕನ್ನಡಿ ಹಿಡಿಯಬಲ್ಲದು. ಅಷ್ಟು ಪರಿಣಾಮಕಾರಿ ಮಾಧ್ಯಮ ವ್ಯಂಗ್ಯಚಿತ್ರ. ಅದಕ್ಕಾಗಿಯೇ ಸುದ್ದಿಮನೆಯಲ್ಲಿ ವ್ಯಂಗ್ಯಚಿತ್ರಕಾರರಿಗೆ ವಿಶೇಷ ಸ್ಥಾನಮಾನವಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಸಮ್ಮೇಳನದಲ್ಲಿ ವ್ಯಂಗ್ಯಚಿತ್ರಕಾರರಿಗೆ, ಕೆಯುಡಬ್ಲ್ಯೂಜೆ ವೇದಿಕೆ ಕಲ್ಪಿಸಿಕೊಂಡು ಬಂದಿದೆ. ವ್ಯಂಗ್ಯಚಿತ್ರ ಪ್ರದರ್ಶನವನ್ನು ರಾಜ್ಯ ವ್ಯಂಗ್ಯಚಿತ್ರಕಾರರ ಸಂಘವು ನಿಭಾಯಿಸುತ್ತಿದೆ. ಸುದ್ದಿಮನೆಯ ವ್ಯಂಗ್ಯಚಿತ್ರಕಾರರು ಈ ಪ್ರದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ವಿವರಗಳಿಗೆ ಎಂ.ವಿ.ಶಿವರಾಂ (84533 33722) ಅವರನ್ನು ಸಂಪರ್ಕಿಸಬಹುದು.
ಬೆಂಗಳೂರು : ನಿನ್ನೆ ಗೃಹ ಸಚಿವ ಜಿ ಪರಮೇಶ್ವರ್, ಸಿದ್ದರಾಮಯ್ಯ ಇನ್ನು ಎರಡು ವರ್ಷ ಸಿಎಂ ಎಂಬ ಹೇಳಿಕೆ ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದು, ಪರಮೇಶ್ವರ್ ಹೇಳಿಕೆಯನ್ನು ಅವರಿಗೆ ಕೇಳಬೇಕು. ಪರಮೇಶ್ವರ ಅವರು ಗೃಹ ಸಚಿವರಿದ್ದಾರೆ ಅವರು ಹೇಳಿದಂತೆ ಕೇಳೋಣ. ನಮ್ಮ ಅಣ್ಣ ಇವತ್ತೇ ಮುಖ್ಯಮಂತ್ರಿ ಆಗುತ್ತಾರೆ ಅಂತ ಏನು ಹೇಳಿಲ್ಲ. ಸಿಎಂ ಆಗಬೇಕು ಎಂಬ ಆಸೆ ಇದೆ ಆಸೆ ಇಲ್ಲ ಅಂತ ನಾನು ಹೇಳಿಲ್ಲ ಇನ್ನು ಸಮಯವಿದೆ ಚುನಾವಣೆ ಮುಗಿದ ಮೇಲೆ ಮಾತನಾಡೋಣ ಎಂದು ಡಿಕೆ ಸುರೇಶ್ ತಿಳಿಸಿದರು. ಇನ್ನು ಬಾಗಲಕೋಟೆ ಹಾಕು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕುರಿತು ಮಾತನಾಡಿದ ಅವರು ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಯಾವುದೇ ಅನುಮಾನ ಬೇಡ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲುತ್ತೆ, ಬಾಗಲಕೋಟೆ ಗೆಲುವು ಕಷ್ಟ ಎಂಬುದು ಕೇವಲ ಊಹಾಪೋಹ ಎಂದು ಡಿಕೆ ಸುರೇಶ್ ತಿಳಿಸಿದರು. ಇನ್ನು ರಾಜ್ಯದ ಹಲವಡೆ…













