Author: kannadanewsnow05

ಧಾರವಾಡ : ಗಾಂಜಾ ಸೇವಿಸದಿದ್ದರೂ ಕೂಡ ಕೇಸ್ ಹಾಕುವುದಾಗಿ ಪೊಲೀಸರು ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರ ವಿರುದ್ಧ ಈ ಒಂದು ಗಂಭೀರ ಆರೋಪ ಕೇಳಿಬಂದಿದೆ. ಹಾಗಾಗಿ ಮರ್ಯಾದೆಗೆ ಹೆದ್ದಾರಿ ವಿದ್ಯಾರ್ಥಿ ಒಬ್ಬ ಆತ್ಮಹತ್ಯೆ ಶರಣಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಆದಿತ್ಯ ಮ್ಯಾಗೇರಿ (20) ಎಂದು ತಿಳಿದು ಬಂದಿದೆ. ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಹಲವಾರು ಯುವಕರನ್ನು ಠಾಣೆಗೆ ಕರೆದೊಯ್ಯುತ್ತಾರೆ. ಅದರಲ್ಲಿ ಆದಿತ್ಯ ಎನ್ನುವ ವಿದ್ಯಾರ್ಥಿ ಕೊಡ ಒಬ್ಬ. ಆತ ಗಾಂಜಾ ಸೇವನೆ ಮಾಡಿರಲಿಲ್ಲ ಆದರೂ ಕೂಡ ಅದರ ಮೇಲೆ ಪೊಲೀಸರು ಕೇಸ್ ಹಾಕಿರುತ್ತಾರೆ. ಅದಾದ ಮೇಲೆ ರಿಪೋರ್ಟ್ ನಲ್ಲಿ ನೆಗೆಟಿವ್ ಎಂದು ಬರುತ್ತದೆ. ಬಳಿಕ ಆತನನ್ನು ಬಿಟ್ಟು ಕಳುಹಿಸುತ್ತಾರೆ. ಆದರೆ ಆತ ಮನೆಗೆ ಬಂದು ನೇಣು ಹಾಕಿಕೊಳ್ಳುತ್ತಾನೆ. ಎಲ್ಲಿ ಮತ್ತೆ ಪೊಲೀಸರು ನನ್ನನ್ನು ಪೊಲೀಸ್ ಠಾಣೆಗೆ ಕರೆಯುತ್ತಾರೆ ಎಂದು ಹೆದರಿ ನೇಣು ಬಿಗಿದುಕೊಂಡು ಆದಿತ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಆದಿತ್ಯ…

Read More

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಜಟಾಪಟಿ ತೀವ್ರವಾಗಿ ನಡೆಯುತ್ತಿದ್ದು, ಇದರ ನಡುವೆ ಕೆಪಿಸಿಸಿ ಪಟ್ಟದ ಅಧ್ಯಕ್ಷ ಸ್ಥಾನಕ್ಕೂ ಅಹಿಂದ ನಾಯಕರ ಪೈಪೋಟಿ ನಡೆಯುತ್ತಿದೆ. ಇದೀಗ ಇಕ್ಬಾಲ್ ಹುಸೇನ್ ಅವರು ಡಿಕೆ ಶಿವಕುಮಾರ್ ಸಿಎಂ ಆಗುವ ಎಲ್ಲ ಲಕ್ಷಣ ಕಾಣುತ್ತಿದೆ ಎಂದು ಮತ್ತೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇನ್ನು ಈ ವಿಚಾರವಾಗಿ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಮಾತನಾಡಿದ ಇಕ್ಬಾಲ್ ಹುಸೇನ್ ಒಳ್ಳೆಯ ರೀತಿಯಲ್ಲಿ ನಾವು ಜನಗಳಿಗೆ ಕೆಲಸ ಮಾಡಿಕೊಡಬೇಕಾಗುತ್ತದೆ. ಬದಲಾವಣೆ ಬೇಕು ಅಂತ ಜನ ಬಯಸುತ್ತಿದ್ದು ಅದರಲ್ಲಿ ನಾನು ಕೂಡ ಒಬ್ಬ ಹಾಗಾಗಿ ಮೇ ತಿಂಗಳಲ್ಲಿ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಸಿಗುತ್ತೆ ಎನ್ನುವ ಭರವಸೆ ಇದೆ ಎಂದು ಇಕ್ಬಾಲ್ ಹುಸೇನ್ ಹೇಳಿಕೆ ನೀಡಿದರು. ಕಾಲ ಬಹಳ ಸನ್ನೀಹಿತವಾಗಿದೆ ಅವರಿಗೆ ಅಧಿಕಾರ ಸಿಗುವ ಎಲ್ಲ ಲಕ್ಷಣಗಳು ಕಾಣುತ್ತಿದೆ. ನಾನು ಮತ್ತು ಎಲ್ಲಾ ಸಾಕಷ್ಟು ಶಾಸಕರು ಕೂಡ ಇದನ್ನೇ ಬಯಸುತ್ತಿದ್ದೇವೆ. ಜನ ಕಾರ್ಯಕರ್ತರು ಮುಖಂಡರು ಕೂಡ ಡಿಸಿಎಂ ಡಿಕೆ ಶಿವಕುಮಾರ್…

Read More

ಕೋಲಾರ : ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಕಲ್ಲಿನಿಂದ ಜಜ್ಜಿ ಯುವಕನನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದ ಎಪಿಎಂಸಿ ಮಾರುಕಟ್ಟೆಯ ಲಕ್ಷ್ಮಿ ಬಾರ್ ಬಳಿ ಈ ಘಟನೆ ನಡೆದಿದೆ.ಬಿಡಿ ಕಾಲೋನಿಯ ನಿವಾಸಿ ಸಲ್ಮಾನ್ ಪಾಷಾ (25)ಎನ್ನುವ ಯುವಕನನ್ನು ಕೊಲೆ ಮಾಡಲಾಗಿದೆ. ಆಟೋ ಚಾಲಕ ಅಬ್ದುಲ್ ರಶೀದ್ ಎಂಬಾತನಿಂದ ಸಲ್ಮಾನ್ ಪಾಷಾ ಕೊಲೆ ಆಗಿದೆ. ಕೊಲೆಯಾದ ಸಲ್ಮಾನ್ ಪಾಷಾ ಸೋಫಾ ರಿಪೇರಿ ಕೆಲಸ ಮಾಡಿಕೊಂಡಿದ್ದ. ಅಬ್ದುಲ್ ರಶೀದ್ ಕೊಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಕೊಲೆ ಮಾಡಿದ ಆಟೋ ಚಾಲಕ ಅಬ್ದುಲ್ ರಶೀದ್ದನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Read More

ಬೆಂಗಳೂರು : ಧಾರವಾಡದ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಮಹತ್ವದ ತೀರ್ಪು ನೀಡಿತು. ಇದೀಗ ಈ ಒಂದು ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಶಾಸಕ ವಿನಯ್ ಕುಲಕರ್ಣಿ ಕಳೆದ ಎರಡು ದಿನಗಳ ಹಿಂದೆ ಹೈಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ವಿಭಾಗಿಯ ಪೀಠದಲ್ಲಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ ಮೇಲ್ಮನವಿಯ ಅರ್ಜಿ ವಿಚಾರಣೆ  ನಡೆಯಿತು. ಕುಲಕರ್ಣಿ ಪರವಾಗಿ ಸುಪ್ರೀಂ ಕೋರ್ಟ್ ವಕೀಲ ಎಸ್ ನಾಗಮುತ್ತು ಅವರು ವಾದ ಮಂಡಿಸಿದರು. ಕೋರ್ಟ್ನಲ್ಲಿ ಸಾಕ್ಷಿ ವಿಚಾರಣೆ ನಡೆಯುವಾಗ ಜಾಮೀನಿನ ಮೇಲೆ ಇದ್ದರು 7 ಸಾಕ್ಷಿಗಳಿದ್ದಾರೆ, ಎಲ್ಲರೂ ಪ್ರತಿಕೂಲ ಸಾಕ್ಷಿಗಳಾಗಿದ್ದಾರೆ ಎಂದು ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಸಿವಿ ನಾಗೇಶ್ ಅವರು ವಾದ ಮಾಡಿಸಿದರು. ಇದೆ ಮೊದಲ ಬಾರಿಗೆ ವಿಚಾರಣೆಗೆ ಬರುತ್ತಿದೆಯಲ್ಲವೇ ಎಂದು ಹೈಕೋರ್ಟ್ ಪ್ರಶ್ನೆ ಮಾಡಿತು. ಪ್ರತಿವಾದಿ ಸಿಬಿಐ…

Read More

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಅಷ್ಟೇ, ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಫ್ಲೆಕ್ಸ್ ಬ್ಯಾನರ್ ಗಳಿದ್ದ ಅಂಗಡಿಗೆ ಬೆಂಕಿ ತಗುಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿತ್ತು.ಇದೀಗ ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಗಡ ಸಂಭವಿಸಿದ್ದು, ಕಾರ್ಮಿಕರು ವಾಸವಿದ್ದ 12 ಶೆಡ್ ಗಳಿಗೆ ಬೆಂಕಿ ಬಿದ್ದಿದೆ. ತಡರಾತ್ರಿ 2:00 ಸುಮಾರಿಗೆ ಬೆಂಗಳೂರಿನ ಸೋಮಸುಂದರ ಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ. ಚುನಾವಣೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳಕ್ಕೆ ಕಾರ್ಮಿಕರು ಹೋಗಿದ್ದಾರೆ. ಹಾಗಾಗಿ ಆ ಒಂದು ಶೆಡ್ ಗಳಲ್ಲಿ ಯಾರು ಇಲ್ಲದ ಕಾರಣ ಬಹುದೊಡ್ಡ ಅನಾಹುತ ತಪ್ಪಿದೆ. ಘಟನಾ ಸ್ಥಳಕ್ಕೆ ಬಂಡೆಪಾಳ್ಯ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ದಾರೆ.

Read More

ಬೆಂಗಳೂರು: ಶಾಲೆಗಳಲ್ಲಿ ಪತ್ರಿಕೆಗಳ ಪ್ರಮುಖ ಸುದ್ದಿಗಳನ್ನು ಪ್ರತಿನಿತ್ಯ ಓದುವ ಕ್ರಮ ಕಡ್ಡಾಯ ಮಾಡಿರುವ ಸರ್ಕಾರದ ಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ) ಸ್ವಾಗತಿಸಿದೆ. ಶಾಲೆಗಳಲ್ಲಿ ಓದುವ ಮತ್ತು ಬೋರ್ಡ್ ಮೇಲೆ ಬರೆಯುವ, ನೋಟೀಸ್ ಬೋರ್ಡ್ ನಲ್ಲಿ ಹಾಕುವ ಅಭ್ಯಾಸವು ಮಾಸುತ್ತಿದೆ. ಮೊಬೈಲ್ ಯುಗದ ಪ್ರಭಾವದಲ್ಲಿ ಹಿಂದಿನ ಪದ್ದತಿಗಳು ಮರೆತು ಹೋಗುತ್ತಿರುವ ಈ ಹೊತ್ತಿನಲ್ಲಿ ಸರ್ಕಾರದ ಕ್ರಮ ಅಗತ್ಯವಿತ್ತು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರ ಅಲ್ಲಿನ ಸರ್ಕಾರಿ ಶಾಲೆಗಳಲ್ಲಿ ದಿನಪತ್ರಿಕೆ ಓದುವುದನ್ನು ಡಿಸೆಂಬರ್/2025 ರಲ್ಲಿ ಕಡ್ಡಾಯ ಮಾಡಿದ್ದು, ಇದೇ ರೀತಿಯಲ್ಲಿ ರಾಜ್ಯ ಸರ್ಕಾರ ಕೂಡ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕೆಯುಡಬ್ಲ್ಯೂಜೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿತ್ತು. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಪ್ರತ್ಯೇಕವಾಗಿ ಮನವಿ ಮಾಡಿತ್ತು. ಪರಿಣಿತರ ಅಭಿಪ್ರಾಯ ಮತ್ತು ಕೆಯುಡಬ್ಲ್ಯೂಜೆ ಮನವಿಗೆ ರಾಜ್ಯ ಸರ್ಕಾರ ಮನ್ನಣೆ ನೀಡಿ, ಈ ನಿಟ್ಟಿನಲ್ಲಿ ಕೂಡಲೇ ಕ್ರಮ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರನ್ನು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಪ್ರೀತಿ ವಿಚಾರಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ರಾಜೇಶ್ (35) ಎನ್ನುವ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಕುದುರು ರಸ್ತೆಯ ಮಲ್ಲಿಕುಂಟೆಯ ಮನೆಯಲ್ಲಿ ಈ ಒಂದು ಘಟನೆ ನಡೆದಿದ್ದು, ಬೆಂಗಳೂರಿನ ಬಾಗಲೂರು ಸಾತನೂರು ನಿವಾಸಿಯಾಗಿರುವ ರಾಜೇಶ್, ಪ್ರೀತಿಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಗನ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದು ಆತ್ಮಹತ್ಯೆ ಅಲ್ಲ ಕೊಲೆ ಅಂತ ಅನುಮಾನ ವ್ಯಕ್ತಪಡಿಸಿದ್ದಾರೆ. ಸಂಬಂಧಿಕರ ಬಳಿ ಕೆಲಸ ಮಾಡಿಕೊಂಡಿದ್ದ ಮೃತ ರಾಜೇಶ್ ಸ್ಟಿಲ್ ಅಂಗಡಿ, ತೋಟ ನೋಡಿಕೊಂಡಿದ್ದ ಈ ವೇಳೆ ರಾಜೇಶ್ ಯುವತಿ ಒಬ್ಬಳನ್ನು ಪ್ರೀತಿಸುತ್ತಿದ್ದ. ಇಬ್ಬರ ನಡುವೆ ಆಗಾಗ ಗಲಾಟೆ ಆಗುತ್ತಿದ್ದರ ಆರೋಪ ಹೇಳಿ ಬಂದಿದ್ದು, ಅಲ್ಲದೆ ಈ ಕುರಿತು ರಾಜೇಶ್ ಡೆತ್ ನೋಟ್ ಬರೆದಿಟ್ಟಿದ್ದ. ಅದರಲ್ಲಿ ಯುವತಿಯ ಕಿರುಕುಳದ ಬಗ್ಗೆ ಉಲ್ಲೇಖಿಸಿದ್ದು ಕುದುರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಅಪ್ರಾಪ್ತ ಮಕ್ಕಳ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ. ಆಪ್ರಾಪ್ತ ಮಕ್ಕಳಿಗೆ ಮನಮದಂತೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಒಂದು ಘಟನೆ ನಡೆದಿದ್ದು ಕಾಂಗ್ರೆಸ್ ಮುಖಂಡ ಆನಂದ ನಾಯ್ಡು ವಿರುದ್ಧ ಇದೀಗ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಆನಂದ ನಾಯ್ಡು ಬೆಂಗಳೂರು ಉತ್ತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಗಿದ್ದು, ಮಕ್ಕಳಿಗೆ ಕಚ್ಚಿ ರಾಡ್ ನಿಂದ ಭೀಕರವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಮಕ್ಕಳ ಕಾಲು, ಮೈ ಹಾಗೂ ಕೈ ಮೇಲೆ ಆನಂದ ನಾಯ್ಡು ಹಲ್ಲೆ ಮಾಡಿದ್ದಾನೆ. ಅಲ್ಲದೇ ಕಚ್ಚಿ ಗಾಯಗೊಳಿಸಿದ್ದಾನೆ ಎಂದು ಆತನ ವಿರುದ್ಧ ಗಂಭೀರವಾದ ಆರೋಪ ಕೇಳಿ ಬಂದಿದ್ದು, ಇದೀಗ ಆನಂದ ನಾಯ್ಡು ವಿರುದ್ಧ ದೂರು ದಾಖಲಾಗಿದೆ. ಮಹಿಳೆಯ ಜೊತೆಗೆ ಆನಂದ ನಾಯ್ಡು ಅಕ್ರಮ ಸಂಬಂಧ ಹೊಂದಿದ್ದ ಎನ್ನುವ ಆರೋಪ ಕೂಡ ಇದ್ದು, ಆಕ್ರಮ ಸಂಬಂಧವನ್ನು ಮಹಿಳೆಯ ಪತಿ ಆತನಿಗೆ ಪ್ರಶ್ನೆ ಮಾಡಿದ್ದಾರೆ. ಆಕ್ರಮ ಸಂಬಂಧ…

Read More

ಹಾವೇರಿ : ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 200ಕ್ಕೂ ಹೆಚ್ಚು ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಸರ್ಕಾರವೇ ಆ್ಯಂಬುಲೆನ್ಸ್ ವ್ಯವಸ್ಥೆಯನ್ನು ನಿಯಂತ್ರಿಸಲಿದ್ದು, ಟ್ಯಾಬ್ ಮೂಲಕ ರೋಗಿಯ ಸ್ಥಿತಿಗತಿ ವೀಕ್ಷಿಸುವ ನೂತನ ವ್ಯವಸ್ಥೆ ಜಾರಿಯಾಗಲಿದೆಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು. ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯದ 1300 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 200ಕ್ಕೂ ಹೆಚ್ಚು ವೈದ್ಯರ ನೇಮಕಕ್ಕೆ ಕ್ರಮಕೈಗೊಳ್ಳಲಾಗುವುದು. ಕರ್ನಾಟಕದಲ್ಲಿ ಇನ್ನು ಮುಂದೆ ಆ್ಯಂಬುಲೆನ್ಸ್ ವ್ಯವಸ್ಥೆಯನ್ನು ಖಾಸಗಿಯವರಿಗೆ ನೀಡದೇ ಸರ್ಕಾರವೇ ಕಂಟ್ರೋಲ್ ಮಾಡುತ್ತದೆ. ಆ್ಯಂಬುಲೆನ್ಸಗಳಿಗೆ ಟ್ಯಾಬ್ ಅಳವಡಿಕೆ ಮಾಡುತ್ತೇವೆ. ಆಗ ಸಿಬ್ಬಂದಿ ರೋಗಿಯನ್ನು ಟ್ಯಾಬ್ ಮೂಲಕ ತೋರಿಸಿ ವೈದ್ಯರ ಬಳಿ ಮಾತಾಡಬಹುದು. ರೋಗಿಯ ಸ್ಥಿತಿಗತಿ ವೀಕ್ಷಿಸಬಹುದು ಎಂದರು. ಅಲ್ಲದೇ ರೆಡಿಯೋಲಜಿ ತಜ್ಞರ ಕೊರತೆ ಮೊದಲಿನಿಂದಲೂ ಇದೆ. ಅವರಿಗೆ ಹೆಚ್ಚಿನ ಬೇಡಿಕೆ ಇದ್ದು, ಟೆಲಿ ರೆಡಿಯಾಲಾಜಿ‌ ಮೂಲಕ ಈ ಕೊರತೆ ನೀಗಿಸುತ್ತೇವೆ. ರೋಗಿ ಎಷ್ಟು ಹೊತ್ತು ಆ್ಯಂಬುಲೆನ್ಸ್‌ನಲ್ಲಿ ಇದ್ದ, ಆಸ್ಪತ್ರೆಗೆ ಕರೆತಂದ ಸಮಯ, ತುರ್ತು ಚಿಕಿತ್ಸೆಯ ಎಲ್ಲಾ ವಿವರ…

Read More

ಬೆಂಗಳೂರು : ಕಳೆದ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಬಾನೆಟ್ ಮೇಲೆ ವ್ಯಕ್ಯಿಯೊಬ್ಬರು ಕೂತಿದ್ದರೂ ಲೆಕ್ಕಿಸಿದೇ ವಾಹನ ಚಲಾಯಿಸಿದ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿರುವ ಕೊಲೆ ಯತ್ನ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಕಾರು ಚಾಲಕನಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬೆಂಗಳೂರಿನ ಆರ್. ಸುರೇಶ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ತನಿಖೆಯ ನೆಪದಲ್ಲಿ ಪೊಲೀಸರು ಅರ್ಜಿದಾರರ ವಿರುದ್ಧ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಮಧ್ಯಂತರ ಆದೇಶ ಮಾಡಿದೆ. ವಾದ ಆಲಿಸಿದ ಪೀಠ, ರಜಾಕಾಲದ ಬಳಿಕ ಪ್ರಕರಣದ ವಿಚಾರಣೆ ನಡೆಸಲಾಗುವುದು. ಅಲ್ಲಿಯವರಿಗೆ ಬಲವಂತದ ಕ್ರಮ ಕೈಗೊಳ್ಳಬಾರದು. ಎಲ್ಲರ ವಾದಗಳಿಗೂ ಪ್ರತಿಕ್ರಿಯಿಸಲಾಗುವುದು. ಆರೋಪ ಪಟ್ಟಿಯನ್ನು ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸುವುದಕ್ಕೂ ಮುನ್ನ ಹೈಕೋರ್ಟ್​ಗೆ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಜೂನ್ 5 ಕ್ಕೆ ಮುಂದೂಡಿತು. ಪ್ರಕರಣದ ಹಿನ್ನೆಲೆ? ಫೆಬ್ರುವರಿ 11ರಂದು ಎಸ್​ಯುವಿ ವಾಹನದ ಚಾಲಕ ಆರ್ ಸುರೇಶ್ ಮತ್ತು ದೂರುದಾರ ನಂಜುಂಡ ನಡುವೆ ರಸ್ತೆಯಲ್ಲಿ ವಾಗ್ವಾದ ನಡೆದಿತ್ತು.…

Read More