Author: kannadanewsnow05

ಬೆಂಗಳೂರು : ನಿನ್ನೆ ಬೆಂಗಳೂರಿನ ವೈಟ್ಫೀಲ್ಡ್ ವ್ಯಾಪ್ತಿಯಲ್ಲಿ ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ನಡೆದಿತ್ತು. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಪಾಪಿ ಮಗನೊಬ್ಬ ಕೊಲೆ ಮಾಡಿರುವ ಘಟನೆ ರಾಜರಾಜೇಶ್ವರಿ ನಗರದ ಬೆಮಲ್ ಲೇಔಟ್ ನಲ್ಲಿ ನಡೆದಿದೆ. ಹೌದು ತಾಯಿ ಸಾವಿತ್ರಮ್ಮ (72) ಅವರನ್ನು ಪಾಪಿ ಪುತ್ರ ವೆಂಕಟೇಶ್ ಮಹಡಿ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ. ತಾಯಿ ಸಾವಿತ್ರಮ್ಮ ಪಾರ್ಶ್ವವಾಯು ಪೀಡಿತರಾಗಿ ಮನೆಯಲ್ಲಿಯೇ ಇದ್ದರು. ಸುಮಾರು ನಾಲ್ಕರಿಂದ ಐದು ವರ್ಷದಿಂದ ತಾಯಿ ಸಾವಿತ್ರಮ್ಮ ಅನಾರೋಗ್ಯದಿಂದ ಬಳಲುತ್ತಿದ್ದರು. ಇದೀಗ ಮಗ ಬೇಸರದಿಂದ ತಾಯಿಯನ್ನು ಮೂರನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಚಲಾವಣೆ ರದ್ದಾಗಿರುವ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳಂತೆ ನಕಲಿ ನೋಟುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್‌ ಕಚೇರಿಯಲ್ಲಿ ಬದಲಾಯಿಸಲು ಯತ್ನಿಸಿದ ವ್ಯಕ್ತಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. 2 ಸಾವಿರ ರೂಪಾಯಿ ಮುಖಬೆಲೆಯ 300ಕ್ಕೂ ಅಧಿಕ ನಕಲಿ ನೋಟುಗಳನ್ನು ತಂದಿದ್ದ 52 ವರ್ಷ ವಯಸ್ಸಿನ ವ್ಯಕ್ತಿಯನ್ನು ಬಂಧಿಸಲಾಗಿದೆ. ನಾಗಶೆಟ್ಟಿಹಳ್ಳಿಯ ನಿವಾಸಿಯಾಗಿರುವ ಬಂಧಿತ ಆರೋಪಿ ಎಪ್ರಿಲ್ 9ರಂದು ನೃಪತುಂಗ ರಸ್ತೆಯ ಆರ್‌ಬಿಐ ಕಚೇರಿಗೆ ಭೇಟಿ ನೀಡಿದ್ದ. ತನ್ನ ಬಳಿ ಇರುವ 2 ಸಾವಿರ ರೂಪಾಯಿ ಮುಖಬೆಲೆಯ ಸುಮಾರು 375 ನೋಟುಗಳನ್ನು ಜಮೆ ಮಾಡುವಂತೆ ಕೋರಿದ್ದ. ಆದರೆ ಅಧಿಕಾರಿಗಳು ನೋಟುಗಳನ್ನು ತಪಾಸಣೆ ನಡೆಸಿದಾಗ ಅವುಗಳು ನಕಲಿ ಎಂದು ತಿಳಿದುಬಂದಿದೆ. ಆರ್‌ಬಿಐ ಸಹಾಯಕ ಜನರಲ್ ಮ್ಯಾನೇಜರ್ ಭೀಮ್ ಚೌಧರಿ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದ ಹಿಂದೆ ದೊಡ್ಡ ಜಾಲವಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗೆ ಈ ನಕಲಿ ನೋಟುಗಳನ್ನು ಪೂರೈಸಿದವರು ಯಾರು ಮತ್ತು…

Read More

ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷವಿರೋಧಿ ಚಟುವಟಿಕೆ ನಡೆಸಿದ ಬೆನ್ನಲ್ಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ನಸೀರ್ ಅಹ್ಮದ್ ಹಾಗೂ ಎಂಎಲ್ಸಿ ಅಬ್ದುಲ್ ಜಬ್ಬರ್ ವಿರುದ್ಧ ಇದೀಗ ಕಾಂಗ್ರೆಸ್ ಪಕ್ಷ ಕಠಿಣವಾದ ಕ್ರಮ ಕೈಗೊಂಡಿದೆ. ಈಗಾಗಲೇ ನಸೀರ್ ಅಹ್ಮದ್ ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದು, ಅದರ ಬೆನ್ನಲ್ಲೇ ಇಂದು ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದಲೇ ಅಬ್ದುಲ್ ಜಬ್ಬಾರ್ ಅವರನ್ನು ಅಮಾನತುಗೊಳಿಸಿ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ. ಈ ಒಂದು ಉಚ್ಚಾಟನೆ ಕಠಿಣ ಕ್ರಮ ಮತ್ತೆ ಮುಂದುವರೆದಿದ್ದು, ಬೆಂಗಳೂರಿನ ಉತ್ತರ ತಾಲೂಕಿನ ಯೂಥ್ ಕಾಂಗ್ರೆಸ್ ಉಪಾಧ್ಯಕ್ಷೆಯನ್ನು ಕೂಡ ಉಚ್ಚಾಟನೆ ಗೊಳಿಸಲಾಗಿದೆ. ಹೌದು ರಿಜ್ವಾನ್ ಅರ್ಷದ್ ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿದ್ದ ಯೂಥ್ ಕಾಂಗ್ರೆಸ್ ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷೆ ಅಫ್ರಿನ್ ಖಾನ್ ಅವರನ್ನು ಕೂಡ ಉಚ್ಚಾಟನೆ ಮಾಡಲಾಗಿದ್ದು, ರಿಜ್ವಾನ್ ಅರ್ಷದ್ ಮೀರ್ ಸಾಧಿಕ್ ಎಂದು ಯುವತಿ ಪೋಸ್ಟ್ ಮಾಡಿದ್ದಳು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್…

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ ಅದರಲ್ಲಿ ಮಹಿಳೆಯರಿಗೆ ಅನುಕೂಲವಾಗಲಿ ಎಂದು, ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಯೋಜನೆ ಜಾರಿ ಮಾಡಿದ್ದು ಇದೀಗ ಈ ಒಂದು ಯೋಜನೆ ಪರಿಣಾಮ ಮಹಿಳೆಯರು ಬಸ್ ನಲ್ಲಿ ಎಂತೆಂಥ ಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂದು ಈ ಒಂದು ವಿಡಿಯೋದಲ್ಲಿ ತಿಳಿದು ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯ ಆಗಿರುವ ಹುಲಿಗೆಮ್ಮ ಎನ್ನುವ ಮಹಿಳೆ ಬಸ್ ನಲ್ಲಿ ಪ್ರಯಾಣಿಸುತ್ತಿರುವಾಗ ತಮ್ಮ ಕಷ್ಟವನ್ನು ಬಿಚ್ಚಿಟ್ಟಿದ್ದಾರೆ. ಸಿದ್ದರಾಮಯ್ಯನವರೇ ನಿಮ್ಮ ಉಚಿತ ಬಸ್ ಅವಶ್ಯಕತೆ ನಮಗೆ ಇಲ್ಲ. ಉಚಿತ ಯೋಜನೆಯನ್ನು ತೆಗೆದುಹಾಕಿ ನಾವು ದುಡ್ಡು ಕೊಟ್ಟೆ ಸಂಚರಿಸುತ್ತೇವೆ. ಫ್ರೀ ಬಸ್ ನಿಂದ ನಮಗೆ ಪ್ರತಿದಿನ ವನವಾಸ ಎದುರಿಸುತ್ತಿದ್ದೇವೆ. ಬಸ್ ಹತ್ತಿದರೆ ಸಾಕು ಕೂರೋಕೆ ಬೇಡ ನಿಲ್ಲೋಕು ಸಹ ಜಾಗ ಇಲ್ಲ. ಬಸ್ ನಲ್ಲಿ ಸಂಚಾರ ಮಾಡುವುದು ತುಂಬಾ ಕಷ್ಟ ಆಗುತ್ತಿದೆ ಹಾಗಾಗಿ ಉಚಿತ ಬಸ್ ಪ್ರಯಾಣ ಯೋಜನೆ ವಾಪಸ್ ತೆಗೆದುಕೊಳ್ಳಿ…

Read More

ಕಲಬುರಗಿ : ಇಂದು ರಾಜ್ಯದಲ್ಲಿಯೇ ಅತಿ ಹೆಚ್ಚು ತಾಪಮಾನ ಕಲಬುರ್ಗಿ ಜಿಲ್ಲೆಯ ಒಂದರಲ್ಲಿ ದಾಖಲಾಗಿದೆ. ಕಲ್ಬುರ್ಗಿ ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಅತಿ ಹೆಚ್ಚು ಬಿಸಿಲು ದಾಖಲಾಗಿದೆ . ಕಲ್ಬುರ್ಗಿ ತಾಲೂಕಿನ ಔರಾದ್ ಗ್ರಾಮದಲ್ಲಿ ಅತಿ ಹೆಚ್ಚು ತಾಪಮಾನ ದಾಖಲಾಗಿದ್ದು ಔರಾದ್ ಗ್ರಾಮದಲ್ಲಿ 45 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅತಿ ಹೆಚ್ಚು ಉಷ್ಣಾಂಶ ದಾಖಲಾದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಆರೆಂಜ್ ಘೋಷಣೆ ಮಾಡಿದೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಮಾಡಿದ್ದು ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ಅನಾವಶ್ಯಕವಾಗಿ ಹೊರಬರದಂತೆ ಸಾರ್ವಜನಿಕರಿಗೆ ಸೂಚನೆ ನೀಡಿದೆ .

Read More

ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಇದೀಗ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಡಿಸಿಎಂ ಡಿಕೆ ಶಿವಕುಮಾರ್ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ. ನಸಿರ್ ಅಹಮದ್ ಅವರ ವಿರುದ್ಧ ಕೂಡ ಕಠಿಣ ಕ್ರಮ ತೆಗೆದುಕೊಂಡಿದ್ದು ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಸಚಿವ ಸ್ಥಾನದ ಮೇಲೆ ತೂಗುಗತ್ತಿ ನೇತಾಡುತ್ತಿದೆ. ಹೌದು ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ, ನಸೀರ್ ಅಹಮದ್ ತಲೆದಂಡಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿರಲಿಲ್ಲ. ನಾನು ಪಾರ್ಟಿ ಕೆಲಸಕ್ಕೆ ಹೋಗಿದ್ದೆ ಒಂದು ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹೈಕಮಾಂಡ್ ಕೆಲಸ ಮಾಡಲು ತಾನೇ ನಾನು ಕೇರಳಕ್ಕೆ ಹೋಗಿದ್ದು ಮೋಜು ಮಾಸ್ತಿ ಮಾಡಲು ಕಳ್ಳಾಟ ಆಡಲು ಹೋಗಿದ್ದಿನ? ಇಲ್ಲ ತಾನೇ? ಮೊಬೈಲ್ ಸ್ವಿಚ್ ಆಫ್ ಮಾಡಿ ಹಾಲಿಡೇಸ್…

Read More

ಬೆಂಗಳೂರು : ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ, ನಸೀರ್ ಅಹಮದ್ ತಲೆದಂಡಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿರಲಿಲ್ಲ. ನಾನು ಪಾರ್ಟಿ ಕೆಲಸಕ್ಕೆ ಹೋಗಿದ್ದೆ ಒಂದು ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹೈಕಮಾಂಡ್ ಕೆಲಸ ಮಾಡಲು ತಾನೇ ನಾನು ಕೇರಳಕ್ಕೆ ಹೋಗಿದ್ದು ಮೋಜು ಮಾಸ್ತಿ ಮಾಡಲು ಕಳ್ಳಾಟ ಆಡಲು ಹೋಗಿದ್ದಿನ? ಇಲ್ಲ ತಾನೇ? ಮೊಬೈಲ್ ಸ್ವಿಚ್ ಆಫ್ ಮಾಡಿ ಹಾಲಿಡೇಸ್ ಹೋಗಿದ್ದರೆ ಅದು ತಪ್ಪು. ಹಗಲು ರಾತ್ರಿ ನಾನು ಕೆಲಸ ಮಾಡಿದ್ದೇನೆ ದಿನಕ್ಕೆ 350 ಕಿಲೋ ಮೀಟರ್ ಪ್ರಯಾಣ ಮಾಡಿ ಪ್ರಚಾರ ಮಾಡಿದ್ದೇನೆ ಈಗ ನನ್ನ ಮೇಲೆ ಒಂದಷ್ಟು ಆರೋಪ ಮಾಡುತ್ತಿದ್ದಾರೆ ಯಾಕೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಸಚಿವರ ಜೊತೆ ಸಭೆಯ ಬಳಿಕ ಅಸಮಾಧಾನ ಹೊರಹಾಕಿದ್ದಾರೆ. ಮುಂದಿನ ಟಾರ್ಗೆಟ್ ನಾನೇ ಎಂದು ಹೇಳುತ್ತಿದ್ದಾರೆ ಮಾಧ್ಯಮಗಳಲ್ಲಿ ಈ ರೀತಿಯ ಚರ್ಚೆ ನಡೆಯುತ್ತಿದೆ…

Read More

ಬೆಂಗಳೂರು: ರಾಜಕೀಯವಾಗಿ ಹಾವು-ಏಣಿಯಾಟದಂತಿರುವ ರಾಜ್ಯ ಮತ್ತು ಕೇಂದ್ರದ ಇಬ್ಬರು ಪ್ರಬಲ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಅವರ ಅಪರೂಪದ ಕ್ಷಣವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಏನಿದು ವಿಶೇಷ? ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಡೆದ ‘ಶ್ರೀ ಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಸಿಎಂ ಸಿದ್ದರಾಮಯ್ಯ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಪ್ರಧಾನಿಗಳು ಸಿಎಂ ಸಿದ್ದರಾಮಯ್ಯ ಅವರ ಕಿವಿಯಲ್ಲಿ ಏನೋ ರಹಸ್ಯವಾಗಿ ಹೇಳುತ್ತಿರುವ ಫೋಟೋ ಈಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಕಿವಿಯಲ್ಲಿ ಗುಸುಗುಸು: ಪ್ರಧಾನಿ ಮೋದಿ ಅತ್ಯಂತ ಆತ್ಮೀಯವಾಗಿ ಸಿಎಂ ಕಿವಿಯಲ್ಲಿ ಮಾತನಾಡುತ್ತಿದ್ದರೆ, ಸಿದ್ದರಾಮಯ್ಯ ಅವರು ಅಷ್ಟೇ ಗಂಭೀರವಾಗಿ ಆಲಿಸುತ್ತಿರುವುದು ಕಂಡುಬಂದಿದೆ. ಸಿಎಂ ರಿಂದಲೇ ಪೋಸ್ಟ್: ವಿಶೇಷವೆಂದರೆ, ಸ್ವತಃ ಮುಖ್ಯಮಂತ್ರಿಗಳೇ ಈ ಫೋಟೋವನ್ನು ತಮ್ಮ ಅಧಿಕೃತ ‘X’ (ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನೆಟ್ಟಿಗರ ಚರ್ಚೆ: ಪರಸ್ಪರ ರಾಜಕೀಯ ಟೀಕೆಗಳಲ್ಲಿ ತೊಡಗುವ ಈ ಇಬ್ಬರು ನಾಯಕರು…

Read More

ರಾಯಚೂರು : ರಾಯಚೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಿಲ್ಲೆಯ ಸಿಂಧನೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿ ವೇಳೆ ಓರ್ವ ಮಹಿಳೆಯನ್ನ ರಕ್ಷಣೆ ಮಾಡಿದ್ದಾರೆ.ಬಂಧಿತ ಆರೋಪಿಗಳನ್ನು ಗಂಗಾಧರ, ಶಾಮಣ್ಣ, ವಿಜಯಕುಮಾರ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಅಭಿಷೇಕ ಪರಾರಿಯಾಗಿದ್ದಾನೆ. ನಗರದ ಹೊರವಲಯದ ನ್ಯಾಷನಲ್ ಲೇಔಟ್‌ನ ಮನೆಯೊಂದರಲ್ಲಿ ದಂಧೆ ನಡೆಯುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ದಾಳಿ ವೇಳೆ ಮೂವರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಮನಗರ ಮೂಲದ ಸಂತ್ರಸ್ತ ಮಹಿಳೆಯನ್ನ ರಕ್ಷಿಸಲಾಗಿದೆ. ಇದಕ್ಕಾಗಿಯೇ ಮನೆಯನ್ನ ಬಾಡಿಗೆ ಪಡೆದಿದ್ದು, ಕೆಲಸ ಕೊಡಿಸುವುದಾಗಿ ನಂಬಿಸಿ ಅಮಾಯಕ ಹೆಣ್ಣುಮಕ್ಕಳನ್ನ ದಂಧೆಗೆ ಬಳಸುತ್ತಿದ್ದ ಎನ್ನಲಾಗಿದೆ. ಸದ್ಯ ಆರೋಪಿ ಅಭಿಷೇಕ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮುಂಬೈ : ಇಡೀ ದೇಶದಲ್ಲಿಯೇ ಬೆಚ್ಚಿ ಬೆಳಿಸುವಂತಹ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 180ಕ್ಕೂ ಹೆಚ್ಚು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಇದೀಗ ಕೇಳಿಬಂದಿದೆ. ಅಲ್ಲದೆ ಆರೋಪಿ ಮೊಬೈಲ್ ನಲ್ಲಿ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಲಭ್ಯವಾಗಿವೆ. ಹೌದು ಆರೋಪಿ ಅಯಾನ್ ಅಹಮದ್ ತನ್ವೀರ್ ಎನ್ನುವ ಮೊಬೈಲ್ ನಲ್ಲಿ 350ಕ್ಕೂ ಹೆಚ್ಚು ಅಪ್ರಪ್ತ ಬಾಲಕಿಯರ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಸದ್ಯ ಅಮರಾವತಿ ಗ್ರಾಮೀಣ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿ ಅಯಾನ್ ಮನೆ ಮೇಲೆ ಬುಲ್ಡೋಜರ್ ನಿಂದ ಆತನ ಮನೆ ತೆರುಗೊಳಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಅಮರಾವತಿಯ ಗ್ರಾಮೀಣ ಪೊಲೀಸ್ರಿಂದ ಇದೀಗ ತೀವ್ರ ತನಿಖೆ ನಡೆಯುತ್ತಿದೆ.

Read More