Subscribe to Updates
Get the latest creative news from FooBar about art, design and business.
Author: kannadanewsnow05
ಈ ವರ್ಷ ಶೋಭಕೃತ್ ನಾಮ ಸಂವತ್ಸರ ಸ್ವಾಗತಿಸಲಿದೆ. ಶೋಭಕೃತ್ ಎಂದರೆ ಲಾಭ, ಪ್ರಯೋಜನಗಳನ್ನು ತರುವುದು. ಈ ವರ್ಷ ಯುಗಾದಿ ದಿನದಂದು ಬುಧಾದಿತ್ಯ ಮತ್ತು ಗಜಕೇಸರಿ ಎಂಬ ಎರಡು ರಾಜಯೋಗಗಳು ರೂಪುಗೊಳ್ಳುತ್ತವೆ ಈ ಪರಾಭವ ನಾಮ ಸಂವತ್ಸರ ಯುಗಾದಿಯ ನಂತರ 2 ರಾಜಯೋಗ, ಈ 3 ರಾಶಿಯವರಿಗೆ ಶುಭ ಈ ವರ್ಷ ಯುಗಾದಿ ದಿನದಂದು ಬುಧಾದಿತ್ಯ ಮತ್ತು ಗಜಕೇಸರಿ ರಚನೆಯಾಗಲಿದೆ. ಮತ್ತೊಂದೆಡೆ ಮೀನ ರಾಶಿಯಲ್ಲಿ, ದೇವರ ಗುರು ಗುರು, ಗ್ರಹಗಳ ಆಡಳಿತಗಾರ ಸೂರ್ಯ, ಬುಧ, ಚಂದ್ರ ಮತ್ತು ರಾಹು ಸೇರಿದ್ದಾರೆ. ಈ ಅಪರೂಪದ ಸಂಯೋಜನೆಯೊಂದಿಗೆ, ಕೆಲವು ರಾಶಿಚಕ್ರ ಚಿಹ್ನೆಗಳು ಈ ಯುಗಾದಿಯಿಂದ ಎಲ್ಲಾ ಅದೃಷ್ಟವನ್ನು ಪಡೆಯುತ್ತವೆ. ಹಿಂದೂ ಪಂಚಾಂಗದ ಪ್ರಕಾರ ಹೊಸ ವರ್ಷ ಯುಗಾದಿಯ ದಿನದಿಂದ ಪ್ರಾರಂಭವಾಗುತ್ತದೆ. ಈ ಹಬ್ಬವನ್ನು ಚೈತ್ರ ಶುದ್ಧ ಪಾಡ್ಯಮಿಯಂದು ಆಚರಿಸಲಾಗುತ್ತದೆ. ಕನ್ನಡಿಗರು ಅತ್ಯಂತ ಅದ್ಧೂರಿಯಾಗಿ ಆಚರಿಸುವ ಯುಗಾದಿ ಹಬ್ಬ ಈ ವರ್ಷ ಮಾರ್ಚ್ 19 ರಂದು ಬಂದಿದೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ…
ಕರ್ನಾಟಕದ ಜನಪದ ಸಂಸ್ಕೃತಿಯ ತವರು ಉತ್ತರ ಕರ್ನಾಟಕದಲ್ಲಿ ಯುಗಾದಿ ಎಂದರೆ ಕೇವಲ ಹಬ್ಬವಲ್ಲ, ಅದು ಬದುಕಿನ ಹೊಸ ಪಯಣದ ಆರಂಭ. ಪ್ರಕೃತಿಯಲ್ಲಿನ ಬದಲಾವಣೆ, ರೈತಾಪಿ ವರ್ಗದ ಹೊಸ ಹರುಷ ಹಾಗೂ ಸಾವಿರಾರು ವರ್ಷಗಳ ಇತಿಹಾಸವನ್ನು ಮೈಗೂಡಿಸಿಕೊಂಡಿರುವ ಈ ಹಬ್ಬವು ಉತ್ತರ ಕರ್ನಾಟಕದ ಜನಜೀವನದಲ್ಲಿ ಅತ್ಯಂತ ಮಹತ್ವದ ಸ್ಥಾನ ಪಡೆದಿದೆ. ಬೇವಿನ ಕಹಿ, ಬೆಲ್ಲದ ಸಿಹಿಯನ್ನು ಸಮನಾಗಿ ಸ್ವೀಕರಿಸುವ ಈ ಪರ್ವಕಾಲದ ಸಂಪೂರ್ಣ ಮಾಹಿತಿ ಇಲ್ಲಿದೆ. ೧. ಐತಿಹಾಸಿಕ ಹಿನ್ನೆಲೆ ಯುಗಾದಿ ಎಂದರೆ ‘ಯುಗ’ ಮತ್ತು ‘ಆದಿ’ ಅಂದರೆ ಹೊಸ ಯುಗದ ಆರಂಭ ಎಂದರ್ಥ. ಪುರಾಣಗಳ ಪ್ರಕಾರ, ಬ್ರಹ್ಮದೇವನು ಸೃಷ್ಟಿ ಕಾರ್ಯವನ್ನು ಆರಂಭಿಸಿದ್ದು ಇದೇ ಚೈತ್ರ ಶುದ್ಧ ಪಾಡ್ಯಮಿಯ ದಿನ. ಉತ್ತರ ಕರ್ನಾಟಕದ ಇತಿಹಾಸವನ್ನು ಗಮನಿಸಿದರೆ, ಶಾತವಾಹನ ಅರಸನಾದ ಶಾಲಿವಾಹನನು ಶತ್ರುಗಳನ್ನು ಜಯಿಸಿ ಹೊಸ ಶಕೆಯನ್ನು (ಶಾಲಿವಾಹನ ಶಕೆ) ಆರಂಭಿಸಿದ್ದು ಇದೇ ದಿನ ಎಂಬ ಐತಿಹ್ಯವಿದೆ. ವಿಜಯನಗರದ ಅರಸರ ಕಾಲದಲ್ಲೂ ಯುಗಾದಿಯನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತಿತ್ತು ಎಂಬ ಉಲ್ಲೇಖಗಳಿವೆ. ೨. ಧಾರ್ಮಿಕ ಮತ್ತು…
ತುಮಕೂರು : ಇತ್ತೀಚೆಗೆ ಕಾಂಗ್ರೆಸ್ ನಾಯಕ ಈವಿಎಂ ಮಷೀನ್ ನಲ್ಲಿ ವೋಟ್ ಚೂರಿ ಆಗಿದೆ ಎಂದು ಗಂಭೀರವಾಗಿ ಆರೋಪ ಮಾಡಿದ್ದರು. ಆದರೆ ಕೇಂದ್ರ ಚುನಾವಣಾ ಆಯೋಗ ಇದಕ್ಕೆ ಸ್ಪಷ್ಟನೆ ನೀಡುತ್ತಾ ಆರೋಪಗಳನ್ನು ನಿರಾಕರಿಸುತ್ತಲೇ ಬಂದಿದೆ. ಇದೀಗ ತುಮಕೂರಿನಲ್ಲಿ ನಡೆದ ಸಹಕಾರಿ ಸಂಘದ ಚುನಾವಣೆಯಲ್ಲಿ ಚುನಾವಣಾ ಅಧಿಕಾರಿಯೇ ಬ್ಯಾಲೆಟ್ ಪೇಪರ್ ನಲ್ಲಿ ಅಕ್ರಮ ಎಸಗಿದ್ದು ಕಂಡು ಬಂದಿದೆ. ಹೌದು ತುಮಕೂರು ಜಿಲ್ಲೆಯ ವಿ.ಎಸ್.ಎಸ್.ಎನ್ ಸೊಸೈಟಿ ಚುನಾವಣೆಯಲ್ಲಿ ಅಕ್ರಮದ ಆರೋಪ ಕೇಳಿ ಬಂದಿದೆ. ಸಹಕಾರಿ ಸಂಘದ ಚುನಾವಣೆಯಲ್ಲಿ ಬ್ಯಾಲೇಟ್ ಪೇಪರ್ ಅಕ್ರಮ ನಡೆದಿದೆ ಎಂದು ಜೆಡಿಎಸ್ ಚುನಾವಣಾ ಏಜೆಂಟ್ಗಳು ಆರೋಪಿಸಿದ್ದಾರೆ. ತುಮಕೂರಿನ ಕುಣಿಗಲ್ ತಾಲೂಕಿನ ಸಂತೇಮಾವತ್ತೂರಿನ ನಿನ್ನೆ ನಡೆದ ವಿ.ಎಸ್.ಎಸ್.ಎನ್ ಸೊಸೈಟಿ ಚುನಾವಣೆಯಲ್ಲಿ ಸ್ವತಃ ಚುನಾವಣಾಧಿಕಾರಿಯೇ ಅಕ್ರಮವಾಗಿ ಬ್ಯಾಲೇಟ್ ಪೇಪರನ್ನು ಮತಪೆಟ್ಟಿಗೆಗೆ ತುಂಬಿಸಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ. ನಿನ್ನೆ ಸಂತೇಮಾವತ್ತೂರಿನ ಸಾಲಗಾರರ 11 ಕ್ಷೇತ್ರಗಳಿಗೆ, 1 ಸಾಮಾನ್ಯ ಕ್ಷೇತ್ರಕ್ಕೆ ಚುನಾವಣೆ ನಡೆದಿತ್ತು. ಆದರೆ ಮತದಾನದ ನಡುವೆ ಒಂದಷ್ಟು ಮತಪತ್ರಗಳನ್ನು ಚುನಾವಣಾಧಿಕಾರಿ ಸುನೀಲ್ ಮತಪೆಟ್ಟಿಗೆಗೆ ಹಾಕಿದ್ದು,…
ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಸಾಮಾನ್ಯ ಜನರಿಗೆ ಎಟುಕದಂತಾಗುತ್ತಿರುವ ದುಬಾರಿ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ ಹಾಕಲು ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಆಸ್ಪತ್ರೆಗಳ ಶುಲ್ಕವನ್ನು ವೈಜ್ಞಾನಿಕವಾಗಿ ನಿಯಂತ್ರಿಸಲು ಸರ್ಕಾರ ಹೊಸ ಕರಡು ಮಸೂದೆಯನ್ನು ಸಿದ್ಧಪಡಿಸಿದ್ದು, ಶೀಘ್ರದಲ್ಲೇ ಜಾರಿಗೆ ತರುವ ಸಾಧ್ಯತೆಯಿದೆ. ಖಾಸಗಿ ವೈದ್ಯಕೀಯ ಸಂಸ್ಥೆಗಳು ವಿಧಿಸುತ್ತಿರುವ ಭಾರಿ ಚಿಕಿತ್ಸಾ ಶುಲ್ಕಗಳು ಸಾರ್ವಜನಿಕರ ಟೀಕೆಗೆ ಒಳಗಾಗುತ್ತಲೇ ಬರುತ್ತಿದೆ. ದುಬಾರಿ ಶುಲ್ಕ ವಿಧಿಸುವ ಮೂಲಕ ಆರೋಗ್ಯ ಸೇವೆ ಕೈಗೆಟುಕದ ಪರಿಸ್ಥಿತಿ ಎದುರಾಗಿದೆ. ಅನಿರ್ಬಂಧಿತ ಚಿಕಿತ್ಸಾ ಶುಲ್ಕದ ಮೂಲಕ ಸಾರ್ವಜನಿಕರ ಮೇಲೆ ಭಾರಿ ಹೊರೆ ಬೀಳುತ್ತಿದೆ. ಬೇಕಾಬಿಟ್ಟಿ ಶುಲ್ಕ ವಸೂಲಿ ಮಾಡುವ ಮೂಲಕ ಖಾಸಗಿ ಆಸ್ಪತ್ರೆಗಳು ಬಡವರ ಕೈಗೆ ಸಿಗದಂತಾಗಿವೆ. ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕಕ್ಕೆ ಕಡಿವಾಣ ಹಾಕಲು ಸಾರ್ವಜನಿಕರು ಪದೇ ಪದೆ ಆಗ್ರಹಿಸುತ್ತಿದ್ದರೂ ಸರ್ಕಾರಕ್ಕೆ ಅದರ ನಿಯಂತ್ರಣ ಸಾಧ್ಯವಾಗಿಲ್ಲ. 2016ರಲ್ಲಿ ರಮೇಶ್ ಕುಮಾರ್ ಆರೋಗ್ಯ ಸಚಿವರಾಗಿದ್ದಾಗ ಖಾಸಗಿ ಆಸ್ಪತ್ರೆಗಳ ಆಟಾಟೋಪಕ್ಕೆ ಕಠಿಣವಾಣ ಹಾಕಲು ಸರ್ಕಾರ ಮುಂದಾಗಿತ್ತು. ದುಬಾರಿ ಶುಲ್ಕಕ್ಕೆ ಕಡಿವಾಣ ಹಾಕುವುದು, ಪಾರದರ್ಶಕತೆ ತರುವುದು,…
ನವದೆಹಲಿ : ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಇಂದು ದಿನಾಂಕವನ್ನು ಘೋಷಿಸಿದೆ. ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು ಮೇ 4ಕ್ಕೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಎಚ್ ವೈ ಮೇಟಿ ಹಾಗೂ ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆಯಲ್ಲಿ ಈ ಎರಡು ಕ್ಷೇತ್ರಗಳು ತೆರವಾಗಿವೆ. ಇಂದು ಈ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಆಗಿದೆ. ಈ ಹಿನ್ನೆಲೆಯಲ್ಲಿ ಬಿರುಸಿದ ಸಿದ್ದತೆ ನಡೆಯುತ್ತಿದೆ. ಬಾಲಕೋಟೆ ಮತ್ತು ದಾವಣಗೆರೆ ದಕ್ಷಿಣಕ್ಕೆ ಟಿಕೆಟ್ ಫೈಟ್ ಜೋರಾಗಿದೆ. ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಪೈಪೋಟಿ ನಡೆಯುತ್ತಿದೆ. ದಾವಣಗೆರೆ ದಕ್ಷಿಣಕ್ಕೆ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬುವುದು ಕಾಂಗ್ರೆಸ್ ಮುಸ್ಲಿಂ ಮುಖಂಡರ ಬೇಡಿಕೆಯಾಗಿದೆ. ಆದರೆ ಇದಕ್ಕೆ ಸಚಿವ ಎಸ್ ಎಸ್ ಮಲ್ಲಕಾರ್ಜುನ ಅವರ ವಿರೋಧ ಇದೆ. ಇನ್ನು ಬಿಜೆಪಿಯಲ್ಲೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪೈಪೋಟಿ…
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ನಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರನನ್ನು ಹತ್ಯೆ ಮಾಡಿದ್ದು, ಒಳನುಸುಳುವಿಕೆಯನ್ನು ವಿಫಲಗೊಳಿಸಿದೆ. ಕೆಲ ಕಾಲ ಪಾಕಿಸ್ತಾನ ಉಗ್ರನ ಕಡೆಯಿಂದಲೂ ಗುಂಡಿನ ಚಿಕ್ಕಮಕಿ ನಡೆದಿತ್ತು ಆದರೆ ಭಾರತೀಯ ಸೇನೆ ಪಾಕಿಸ್ತಾನ ಉಗ್ರನನ್ನು ಹತ್ಯೆಗೈಯಲು ಸಫಲವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಪೋಸ್ಟ್ ಮಾಡಿದೆ. ಮಾರ್ಚ್ 14 ಹಾಗೂ 15ರ ರಾತ್ರಿ ಭಯೋತ್ಪಾದಕ ಒಳನುಸುಳುವಿಕೆಗೆ ಯತ್ನಿಸುತ್ತಾನೆ ಎಂಬ ಜಮ್ಮು ಕಾಶ್ಮೀರ ಪೊಲೀಸರ ನಿಖರ ಮಾಹಿತಿ ಆಧರಿಸಿ, ಕಾರ್ಯಾಚರಣೆ ನಡೆಸಲಾಯಿತು ಎಂದು ತಿಳಿಸಿದೆ. ಜಂಟಿ ಕಾರ್ಯಾಚರಣೆ ವೇಳೆ ಪೊದೆಯಲ್ಲಿ ಅನುಮಾನಾಸ್ಪದ ಚಲನವಲನ ಗಮನಿಸಿದ ಸೈನಿಕರು, ಭಯೋತ್ಪಾದಕನ್ನು ಸೆರೆಹಿಡಿಯಲು ಯತ್ನಿಸಿದರು. ಅಷ್ಟರಲ್ಲಿ ಭಯೋತ್ಪಾದಕ ಗುಂಡು ಹಾರಿಸಲು ಯತ್ನಿಸಿದ್ದಾನೆ. ಕೆಲಕಾಲ ಗುಂಡಿನಚಕಮಕಿ ನಡೆದಿದೆ. ಈ ವೇಳೆ ಒಬ್ಬ ಪಾಕಿಸ್ತಾನಿ ಉಗ್ರನನ್ನು ಹತ್ಯೆ ಮಾಡಲಾಗಿದೆ
ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣ ಸಮೀಪದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದ 13 ಜನರು ಗಾಯಗೊಂಡಿದ್ದಾರೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಗೂಡ್ಸ್ ಆಟೋದಲ್ಲಿ ತೆರಳುತ್ತಿದ್ದಾಗ ಯಳಂದೂರು ಬಳಿ ಅಡ್ಡ ಬಂದ ಬೈಕ್ಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ಸಮಯದಲ್ಲಿ ಆಟೋ ರಸ್ತೆ ಬದಿಗೆ ಪಲ್ಟಿಯಾಗಿದೆ. ಗಾಯಗೊಂಡ 13 ಮಂದಿಯಲ್ಲಿ 9 ಮಂದಿಗೆ ತೀವ್ರ ಗಾಯಗಳಾದ ಹಿನ್ನೆಲೆ ಜಿಲ್ಲಾಸ್ಪತ್ರೆ ಸಿಮ್ಸ್ಗೆ ರವಾನೆ ಮಾಡಲಾಗಿದ್ದು, ಉಳಿದವರಿಗೆ ಯಳಂದೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಯಳಂದೂರು ಪೊಲೀಸರು ಭೇಟಿ ಕೊಟ್ಟು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು : ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ಗೆ ಬೇಡಿಕೆ ವಿಪರೀತವಾಗುತ್ತಿದೆ. ಇದೇ ವೇಳೆ, ಇಂಡಿಯನ್ ಆಯಿಲ್ನ ಒನ್ ಆ್ಯಪ್ ಭಾರೀ ಪ್ರಮಾಣದಲ್ಲಿ ಡೌನ್ಲೋಡ್ ಆಗುತ್ತಿದೆ. ಪ್ಲೇಸ್ಟೋರ್ನಲ್ಲಿ ಚ್ಯಾಟ್ಜಿಪಿಟಿಯಂತಹ ಆ್ಯಪ್ಗಳನ್ನು ಮೀರಿಸಿ ಒನ್ ಆ್ಯಪ್ ನಂಬರ್ ಸ್ಥಾನದಲ್ಲಿದೆ. ಹೌದು ಪ್ಲೇಸ್ಟೋರ್ನಲ್ಲಿ ಇಂಡಿಯನ್ ಆಯಿಲ್ನ ಒನ್ ಆ್ಯಪ್ ನಂಬರ್ ಒನ್ ಎನಿಸಿದೆ. ಚ್ಯಾಟ್ಜಿಪಿಟಿ ಇತ್ಯಾದಿ ಸ್ಟಾರ್ ಆ್ಯಪ್ಗಳನ್ನು ಇದು ಹಿಂದಿಕ್ಕಿದೆ.ಒನ್ ಆ್ಯಪ್ನಲ್ಲಿ ಇಂಡೇನ್ ಗ್ರಾಹಕರು ಎಲ್ಪಿಜಿ ಬುಕಿಂಗ್ ಸೇರಿದಂತೆ ಹಲವಾರು ಕಾರ್ಯಗಳನ್ನು ಮಾಡಬಹುದು. ಹೊಸ ಎಲ್ಪಿಜಿ ಕನೆಕ್ಷನ್, ಏಜೆನ್ಸಿ ಬದಲಾವಣೆ, ಗ್ಯಾಸ್ ಬುಕಿಂಗ್ ಇತ್ಯಾದಿ ಕೆಲಸಗಳನ್ನು ಈ ಒನ್ ಆ್ಯಪ್ನಲ್ಲಿ ಮಾಡಲು ಅವಕಾಶ ಇರುತ್ತದೆ.ಚ್ಯಾಟ್ಜಿಪಿ, ಸ್ಟೋರಿ ಟಿವಿ, ಫ್ರೀರೀಲ್ಸ್, ಮೀಶೋ, ಫ್ಲಿಪ್ಕಾರ್ಟ್, ಜಿಯೋಹಾಟ್ಸ್ಟಾರ್ ಇತ್ಯಾದಿ ಆ್ಯಪ್ಗಳನ್ನು ಮೀರಿಸಿ, ಇಂಡಿಯನ್ ಆಯಿಲ್ ಒನ್ ಆ್ಯಪ್ ಅತಿಹೆಚ್ಚು ಡೌನ್ಲೋಡ್ ಆದ ಆ್ಯಪ್ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದೆ. https://twitter.com/jaipandya/status/2032813013573812649?t=ljmSjALQfC6tD_A0JifgHQ&s=19
ಚಿತ್ರದುರ್ಗ : ಇಂದು ಭೀಕರ ಅಪಘಾತದಲ್ಲಿ ಮೂವರು RSI ಅಧಿಕಾರಿಗಳ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಚಿತ್ರದುರ್ಗ ಜಿಲ್ಲೆಯ ಹೆಗ್ಗೆರೆ ಬಳಿ ಸಂಭವಿಸಿದ ಅಪಘಾತದಲ್ಲಿ ಮೂವರು ಆರ್ ಎಸ್ಐ ಗಳು ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದು ಚಿಕಿಸಿ ಪಡೆಯುತ್ತಿದ್ದಾರೆ ಎಂದು ತಿಳಿಸಿದರು. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಮಾಧ್ಯಮಗಳು ಮಾತನಾಡಿದ ಅವರು, ಮದುವೆ ಕಾರ್ಯಕ್ರಮಕ್ಕೆ ಎಂದು ಬಳ್ಳಾರಿಗೆ ಐವರು ಆರ್ಎಸ್ಐ ಅಧಿಕಾರಿಗಳು ತೆರಳುತ್ತಿದ್ದರು. ಎಲ್ಲರೂ ಇತ್ತೀಚಿಗೆ ನೇಮಕ ಆಗಿರುವ ಪೊಲೀಸ ಅಧಿಕಾರಿಗಳಾಗಿದ್ದಾರೆ. ನಿಧಾನಗತಿಯಲ್ಲಿ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಮೃತರ ಕುಟುಂಬಕ್ಕೆ ನಿಯಮಾನುಸಾರ ಪರಿಹಾರ ನೀಡುತ್ತೇವೆ. ಪೊಲೀಸ್ ಅಧಿಕಾರಿಗಳು ರಜೆಯಲ್ಲಿದ್ದಾಗ ಈ ಘಟನೆ ನಡೆದಿದೆ. ರಜೆಯಲ್ಲಿದ್ದಾಗ ದುರಂತ ನಡೆದಿದ್ದು, ಯಾವ ರೀತಿ ನೆರವು ನೀಡಬಹುದು. ಈ ಬಗ್ಗೆ ವಿಚಾರಿಸಿ ಸರ್ಕಾರದಿಂದ ನೆರವು ನೀಡಲಾಗುವುದು. ಮಾನವೀಯತೆಯಿಂದ ಉತ್ತರ ಕುಟುಂಬಕ್ಕೆ ನೆರವು ನೀಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಘೋಷಣೆ ಮಾಡಿದರು.
ಬೆಂಗಳೂರು : ಕೇಂದ್ರ ಸರ್ಕಾರ ತೊಂದರೆ ಆಗದಂತೆ ನೋಡುತ್ತೇವೆ ಅಂದಿದ್ದಾರೆ ಕೇಂದ್ರ ಸರ್ಕಾರ ಈ ಕುರಿತು ಕೂಡಲೇ ಕ್ರಮ ವಹಿಸಲಿ ಹೋಟೆಲ್ಗಳ ಮೇಲೆ ತುಂಬಾ ಜನ ಅವಲಂಬಿತರಾಗಿದ್ದಾರೆ ಹೋಟೆಲ್ ನಿಲ್ಲಿಸಿದರೆ ಕಷ್ಟ ಆಗುತ್ತೆ ಜನರ ಜೀವನ ಕೂಡ ಅಸ್ತವ್ಯಸ್ತವಾಗುತ್ತದೆ ಎಂದು ತಿಳಿಸಿದ್ದಾರೆ. ರಾಜ್ಯದ ಪ್ರಮುಖ ನಗರಗಳಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ವಾಣಿಜ್ಯ ಎಲ್ಪಿಜಿ (Commercial LPG) ಸಿಲಿಂಡರ್ಗಳ ಪೂರೈಕೆಯಲ್ಲಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಹೋಟೆಲ್ಗಳು, ಸಣ್ಣ ಪ್ರಮಾಣದ ತಿಂಡಿ ಅಂಗಡಿಗಳು ಮತ್ತು ಕ್ಯಾಟರಿಂಗ್ ಉದ್ಯಮಗಳು ಸಂಕಷ್ಟಕ್ಕೆ ಸಿಲುಕಿವೆ. ಸುದ್ದಿಯ ಪ್ರಮುಖ ಅಂಶಗಳು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ (Commercial LPG) ತೀವ್ರ ಕೊರತೆ ಕಾಣಿಸಿಕೊಂಡಿದೆ. ಗೃಹಬಳಕೆಯ ಸಿಲಿಂಡರ್ಗಳಿಗೆ ಆದ್ಯತೆ ನೀಡುವ ಕೇಂದ್ರದ ಇತ್ತೀಚಿನ ಆದೇಶದಿಂದಾಗಿ ಹೋಟೆಲ್ ಮತ್ತು ಕ್ಯಾಟರಿಂಗ್ ಉದ್ಯಮಕ್ಕೆ ತೊಂದರೆಯಾಗಿದೆ ಎಂದು ಸಿಎಂ ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಪೂರೈಕೆಯನ್ನು ಸರಿಪಡಿಸಲು…














