Author: kannadanewsnow05

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು , ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಎಂಟು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೋಡಾಳ ಗ್ರಾಮದ ಬಳಿ ಈ ಒಂದು ಭೀಕರವಾದ ಅಪಘಾತ ಸಂಭವಿಸಿದೆ. ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕೆಕೆಆರ್ಟಿಸಿ ಬಸ್ ಪಲ್ಟಿ ಆಗಿದೆ. ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಕೊಪ್ಪಳ ಜಿಲ್ಲೆಯ ಕುಕನೂರಿನಿಂದ ಈ ಒಂದು ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದ್ದು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ವಾಣಿಜ್ಯ ಮತ್ತು ಗೃಹಬಳಕೆಯ ಸಿಲಿಂಡರ್‌ಗಳ ತೀವ್ರ ಕೊರತೆ ಉಂಟಾಗಿರುವ ಬೆನ್ನಲ್ಲೇ, ಖದೀಮರು ಇದನ್ನೇ ಲಾಭ ಮಾಡಿಕೊಳ್ಳುತ್ತಿದ್ದಾರೆ. ಯುಗಾದಿ ಹಬ್ಬದ ಹಿನ್ನೆಲೆ ಮನೆಯ ಮುಂದೆ ಅಥವಾ ಕಾಂಪೌಂಡ್ ಒಳಗೆ ಇಟ್ಟಿದ್ದ ಸಿಲಿಂಡರ್‌ಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡಲಾಗುತ್ತಿದೆ. ಈಗಾಗಲೇ ನಗರದ ಕಲ್ಯಾಣ ನಗರ ಸೇರಿದಂತೆ ಹಲವೆಡೆ ಇಂತಹ ಘಟನೆಗಳು ವರದಿಯಾಗಿದ್ದು, ಹಬ್ಬದ ಸಂಭ್ರಮದಲ್ಲಿದ್ದ ಸಾರ್ವಜನಿಕರು ಕಂಗಾಲಾಗಿದ್ದಾರೆ. ಈ ಕುರಿತು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದೀಗ ಸಿಲಿಂಡರ್ ಅಭಾವ ಬೆನ್ನೆಲೆ ಬೆಂಗಳೂರಿನಲ್ಲಿ ಸಿಲಿಂಡರ್ ಕಳ್ಳತನ ನಡೆದಿದೆ. ಯುಗಾದಿ ಹಬ್ಬದ ದಿನವೇ ಸಿಲಿಂಡರಿಗಳನ್ನು ಕಳ್ಳತನ ಮಾಡಲಾಗಿದೆ ಗ್ರಹ ಬಳಕೆಯ ಎಲ್ಲೆರಡು ಸಿಲಿಂಡರ್ ಗಳನ್ನು ಕಳ್ಳರು ಕಳ್ಳತನ ಮಾಡಿದ್ದಾರೆ. ವಿಶ್ವಪ್ರಿಯ ಅಪಾರ್ಟ್ಮೆಂಟ್ನಲ್ಲಿ ಸಿಲಿಂಡರ್ ಗಳನ್ನು ಕಳ್ಳರು ಕದ್ದು ವೈದಿದ್ದಾರೆ. ಬೆಂಗಳೂರಿನ ಬೇಗೂರು ಬಳಿಯ ಅಪಾರ್ಟ್ಮೆಂಟ್ ನಲ್ಲಿ ಬೈಕ್ ನಲ್ಲಿ ಬಂದು ಹೆಲ್ಮೆಟ್ ಹಾಕಿಕೊಂಡು ಸಿಲಿಂಡರ್ ಸ್ಕೂಟಿ ಮೇಲೆ ಇಟ್ಟುಕೊಂಡು ಎಸ್ಕೇಪ್ ಆಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಯುಗಾದಿ…

Read More

ಬೆಳಗಾವಿ : ಪ್ರಪಂಚದಲ್ಲಿ ಕೆಟ್ಟ ಮಕ್ಕಳು ಇರುತ್ತಾರೆ ಹೊರತು ಕೆಟ್ಟ ತಂದೆ ತಾಯಿ ಇರಲ್ಲ ಅಂತ ಹಿಂದೆ ಹಿರಿಯರು ಹೇಳಿರುವ ಮಾತಿದೆ. ಆದರೆ ಆ ಒಂದು ಮಾತಿಗೆ ವಿರುದ್ಧವಾಗಿ ಈಗ ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಹೆಣ್ಣು ಮಗು ಹುಟ್ಟಿದೆ ಅಂತ 15 ದಿನದ ಹಸುಗೂಸನ್ನೆ, ಭೀಕರವಾಗಿ ಕೊಲೆ ಮಾಡಿದ ಪಾಪಿ ತಂದೆಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಬೆಳಗಾವಿ ತಾಲ್ಲೂಕಿನ ಉಕ್ಕಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹದಿನೈದು ದಿನದ ನವಜಾತ ಶಿಶು ಪ್ರಿಯಾಂಕಾ(15 ದಿನ) ಕೊಲೆಯಾದ ದುರ್ದೈವಿ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದ ಭೀಮರಾಯ ಚಿಪ್ಪಾಡಿ ಕೊಲೆ ಮಾಡಿರುವ ಪಾಪಿ ತಂದೆ. ಸ್ವಂತ ತಂದೆಯಿಂದಲೇ ಮಗುವಿನ ಹತ್ಯೆ ನಡೆದಿರುವುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. ನನ್ನ ಗಂಡನೇ ಮಗುವಿಗೆ ವಿಷ ನೀಡಿ ಕೊಲೆ ಮಾಡಿದ್ದಾರೆ ಎಂದು ಹೆಂಡತಿ ಶೀಲಾ ಚಿಪ್ಪಾಡಿ ಕಾಕತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿ ಭೀಮರಾಯನನ್ನು…

Read More

ತುಮಕೂರು : ತುಮಕೂರು ಜಿಲ್ಲೆಯ ಪಾವಗಡದಲ್ಲಿ ಮೇಲಾಧಿಕಾರಿ ಜಂಟಿ ನಿರ್ದೇಶಕರ ಕಿರುಕುಳದಿಂದ ಬೇಸತ್ತು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮಲ್ಲಿಕಾರ್ಜುನ (59) ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾರಿ ವಿವಾದ ಎಬ್ಬಿಸಿದೆ. ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ಅವರು ನೇಣಿಗೆ ಶರಣಾಗಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕಾರಣವೆಂದು ಹೇಳಿದ ವೀಡಿಯೋ ವೈರಲ್ ಆಗಿದೆ. ಮೃತ ಮಲ್ಲಿಕಾರ್ಜುನ ಆತ್ಮಹತ್ಯೆಗೆ ಮುನ್ನ ವಿಡಿಯೋ ಮಾಡಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕೃಷ್ಣಪ್ಪ ಕಾರಣ ಎಂದು ಆರೋಪಿಸಿದ್ದಾರೆ. ನನ್ನ ತಾಯಿ, ಪತ್ನಿ ಮತ್ತು ಮಕ್ಕಳು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಆದರೆ ಮೇಲಾಧಿಕಾರಿ ನೀಡಿದ ಕಿರುಕುಳದಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ಅಲ್ಲದೆ, ಕೃಷ್ಣಪ್ಪ ಅವರಿಗೆ ದೇವರು ಹಾಗೂ ಕಾನೂನು ಶಿಕ್ಷೆ ನೀಡಲಿದೆ ಎಂದೂ ಹೇಳಿದ್ದಾರೆ. ಮಲ್ಲಿಕಾರ್ಜುನ ಮೂಲತಃ ಪಾವಗಡ ತಾಲೂಕಿನವರಾಗಿದ್ದು, ಕಳೆದ ಮೂರು ವರ್ಷಗಳಿಂದ ಅಲ್ಲಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಾವಿಗೆ…

Read More

ಯಾದಗಿರಿ : ಆತ ಕರ್ತವ್ಯ ಲೋಕದ ಹಿನ್ನೆಲೆಯಲ್ಲಿ ವಜಾಗೊಂಡಿದ್ದ. ಬಳಿಕ ಊರಿಗೆ ತೆರಳಲು ವಾಹನ ಸಿಗದಿದ್ದಕ್ಕೆ KKRTC ಬಸ್ ಅನ್ನೆ ಕದ್ದೋಯ್ದಿದ್ದಾನೆ ಹೌದು ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ವಜಾಗೋಂಡ ಚಾಲಕನಿಂದಲೇ ಕೆಕೆಆರ್‌ಟಿಸಿ ಬಸ್ ಕಳ್ಳತನ ನಡೆದಿದೆ ಮಾರ್ಚ್ 19 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೈದಾಪುರ ನಿಲ್ದಾಣದಲ್ಲಿ ನಿಲ್ಲಿಸಿದ ಬಸ್ ಅನ್ನು ಮಹಿಪಾಲರೆಡ್ಡಿ ಎಂಬ ವಜಾಗೋಂಡ ನೌಕರ ಕದ್ದು ಒಯ್ದಿದ್ದಾನೆ. ಕೆಕೆಆರ್‌ಟಿಸಿಯ ಚಾಲಕ ಕಮ್ ನಿರ್ವಾಹಕನಾಗಿದ್ದ ಮಹಿಪಾಲರೆಡ್ಡಿ ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಆತನನ್ನು ವಜಾ ಮಾಡಲಾಗಿತ್ತು. ವಜಾಗೊಂಡ ಚಾಲಕ ಮಹಿಪಾಲ ರೆಡ್ಡಿ ಇಂದಲೇ ಇದೀಗ ಬಸ್ ಕಳ್ಳತನ ನಡೆದಿದೆ. ಸ್ವಗ್ರಾಮ ರಾಜನಹಳ್ಳಿಗೆ ಹೋಗಲು ಯಾವುದೇ ವಾಹನ ಸಿಕ್ಕಿರಲಿಲ್ಲ. ಬಸ್ ಕಳ್ಳತನ ಮಾಡಿ ಗ್ರಾಮದ ದೇವಸ್ಥಾನದ ಬಳಿ ನಿಲ್ಲಿಸಿದ್ದಾನೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಚಾಲಕನ ಮಹಿಪಾಲ ರೆಡ್ಡಿ ವಿರುದ್ಧ ಕೆಎಸ್ ದಾಖಲಾಗಿದೆ. ಕಳ್ಳತನವಾಗಿದ್ದ ಕೆಕೆಆರ್‌ಟಿಸಿ ಬಸ್ ಅನ್ನು ಪೊಲೀಸರು ವಾಪಸ್ ತಂದಿದ್ದಾರೆ.

Read More

ದಾವಣಗೆರೆ : ಕರ್ನಾಟಕದಲ್ಲಿ ಏಪ್ರಿಲ್ 9 ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆಗೆ ಮತದಾನ ನಡೆಯಲಿದ್ದು ಈಗಾಗಲೇ ಬಿಜೆಪಿ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಆದರೆ ಕಾಂಗ್ರೆಸ್ ಮಾತ್ರ ಇನ್ನು ಅಭ್ಯರ್ಥಿಗಳ ಹೆಸರು ಘೋಷಣೆಯಲ್ಲಿ ಗೊಂದಲದಲ್ಲಿ ಇದೆ ಆದರೆ ಟಿಕೆಟ್ ಘೋಷಣೆ ಮೊದಲೇ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಇಂದು ಸಚಿವ ಮಲ್ಲಿಕಾರ್ಜುನ ಪುತ್ರ ಸಮರ್ಥ್ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ನಿಟ್ಟುವಳ್ಳಿ ದುರ್ಗಾಂಬಿಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದರು. ಕಾಂಗ್ರೆಸ್ ನಲ್ಲಿ ಟಿಕೆಟ್ ಫೈನಲ್ ಆಗಿಲ್ಲ ಆದರೂ ತಾಯಿ ಡಾ. ಪ್ರಭಾ ಮಲ್ಲಿಕಾರ್ಜುನ್ ಜೊತೆಗೆ ಸಮರ್ಥ ನಾಮಪತ್ರ ಸಲ್ಲಿಸಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಸಮರ್ಥ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್, ಸಲೀಂ ಅಹಮದ್ ಹಾಗೂ ಗೋಣೆಪ್ಪ ಸಾಥ್ ಕೊಟ್ಟಿದ್ದರು. ಟಿಕೆಟ್ ಘೋಷಣೆ ಆಗದೆ…

Read More

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಲ್ಲಿ ಹುಲಿಗಳ ಉಪಟಳ ಮುಂದುವರೆದಿದ್ದು ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ನಿನ್ನೆ ಹುಲಿಕಂಡು ಚೆನ್ನಮ್ಮಲ್ಲಿಪುರ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದರು. ಹುಲಿ ಸರಿಗೆ ಮದ್ದೂರು ಅರಣ್ಯ ವಲಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು ಜಯಪ್ರಕಾಶ್ ಎಂಬ ಸಾಕಾಣಿ ಸಹಾಯದಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹುಲಿ ಓಡಾಟದಿಂದ ಜಮೀನಿಗೆ ತರಲು ರೈತರು ಹಿಂದೇಟು ಹಾಕುತ್ತಿದ್ದಾರೆ.

Read More

ಬೆಂಗಳೂರು : ಕರ್ನಾಟಕದಲ್ಲಿ ಏಪ್ರಿಲ್ 9ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಈಗಾಗಲೇ ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ಇನ್ನು ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರವಾಗಿ ಗೊಂದಲದಲ್ಲಿದೆ. ಇನ್ನು ಉಪಚುನಾವಣೆಗೆ ಹಿನ್ನಲೆ ರಾಜ್ಯಕ್ಕೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಆಗಮಿಸಲಿದ್ದು, ಚುನಾವಣಾ ಪ್ರಚಾರ ಸೇರಿದಂತೆ ಹಲವು ವಿಚಾರಗಳ ಜೊತೆ ಸಿಎಂ ಡಿಸಿಎಂ ಜೊತೆ ಚರ್ಚಿಸಲಿದ್ದಾರೆ. ಇನ್ನು ಈ ವಿಚಾರವಾಗಿ ಜೆಡಿಎಸ್ ನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೇರಳ, ತಮಿಳುನಾಡು, ಅಸ್ಸಾಂ, ಪುದುಚೇರಿ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೆ ವಿಧಾನಸಭಾ ಚುನಾವಣಾ ದಿನಾಂಕ ಘೋಷಣಾದ ಬೆನ್ನಲ್ಲೇ @INCIndia ಕಲೆಕ್ಷನ್ ಏಜೆಂಟ್, ಕರ್ನಾಟಕದ ಸೂಪರ್ ಸಿಎಂ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ಬರುತ್ತಿದ್ದಾರೆ!! ಹೈಕಮಾಂಡ್ ಗುಲಾಮಗಿರಿಯಲ್ಲಿ ತೊಡಗಿರುವ ಇಲ್ಲಿನ @INCKarnataka ಪಟಾಲಂ ಮತ್ತು ಡಿಸಿಎಂ @DKShivakumar ಕರ್ನಾಟಕವನ್ನು ಎಟಿಎಂ ಮಾಡಿಕೊಂಡು, ಹೈಕಮಾಂಡ್ ಖಜಾನೆ ತುಂಬಿಸಲು ಜನರ ತೆರಿಗೆ ಹಣವನ್ನು ಲೂಟಿ ಹೊಡೆಯುತ್ತಿದ್ದಾರೆ. ಕಳೆದ ಬಾರಿ ವಾಲ್ಮೀಕಿ ನಿಗಮದಲ್ಲಿ…

Read More

ಬೆಂಗಳೂರು : ಬೆಂಗಳೂರು ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ KSIIDC ಮತ್ತೊಂದು ದಿಟ್ಟ ಹೆಜ್ಜೆ ಯನ್ನು ಇರಿಸಿದೆ. ನಗರದ ಹೊರವಲಯದಲ್ಲಿ ಆಯ್ಕೆ ಮಾಡಲಾದ 3 ಸ್ಥಳಗಳನ್ನು ಎಎಐ (ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ) ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ, ಅನೇಕ ವಿಷಯಗಳ ಕುರಿತು ಪ್ರಸ್ತಾಪ ಮಾಡಿ, ಈ ಸ್ಥಳಗಳಲ್ಲಿರುವ ಸವಾಲುಗಳ ಕುರಿತು ತಿಳಿಸಿದ್ದಾರೆ. ಈ ಕುರಿತು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಮ ಟ್ವೀಟ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಈ ಹಿನ್ನೆಲೆಯಲ್ಲಿ, ವಿವರವಾದ ಕಾರ್ಯತಂತ್ರ ಮತ್ತು ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಲಾಗಿದೆ. ಈ ಟೆಂಡರ್’ನಲ್ಲಿ 3-4 ಸಂಸ್ಥೆಗಳು ಭಾಗವಹಿಸಿದ್ದು, ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಅವರು ಸಲ್ಲಿಸುವ ವರದಿಯ ಆಧಾರದಲ್ಲಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಪ್ರಸ್ತಾವಿತ ಹೊಸ ವಿಮಾನ ನಿಲ್ದಾಣವು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ವಾಯು ಸಂಚಾರ ಬೇಡಿಕೆಯನ್ನು ಪೂರೈಸಲು ಮತ್ತು ಕರ್ನಾಟಕದ ದೀರ್ಘಕಾಲೀನ ವಾಯುಯಾನ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಭದ್ರಪಡಿಸುವಲ್ಲಿ ನಿರ್ಣಾಯಕ ಪಾತ್ರ…

Read More

ರಾಯಚೂರು : ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ವೃದ್ದೆ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ವಾರ್ಡ್ ನಂಬರ್ 14ರಲ್ಲಿ ನಡೆದಿದೆ. ಮೃತ ವೃದ್ಧೆಯನ್ನು ಈಶಮ್ಮ (60) ಎಂದು ತಿಳಿದುಬಂದಿದೆ. ಮನೆ ಮೇಲ್ಚಾವಣಿ ಕುಸಿದು ಬಿದ್ದು ವೃದ್ದೆ ಈಶಮ್ಮ ಗಾಯಗೊಂಡಿದ್ದರು. ತಕ್ಷಣ ಅವರನ್ನು ರಾಯಚೂರು ಜಿಲ್ಲೆಯ ಮಸ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಮಸ್ಕಿ ಆಸ್ಪತ್ರೆಯಲ್ಲಿ ಈಶಮ್ಮ ಸಾವನ್ನಪ್ಪಿದ್ದಾರೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ.

Read More