Author: kannadanewsnow05

ಬೆಂಗಳೂರು : ನಂದಿನಿ ಹಾಲು ಮತ್ತು ಡೈರಿ ಉತ್ಪನ್ನಗಳ ಸುರಕ್ಷತೆಯನ್ನು ಪ್ರಶ್ನಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತಿರಸ್ಕರಿಸಿ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಸೋಮವಾರ ಸಾರ್ವಜನಿಕ ಸ್ಪಷ್ಟೀಕರಣವನ್ನು ನೀಡಿದೆ. ಇನ್‌ಸ್ಟಾಗ್ರಾಮ್ ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಹರಡುತ್ತಿರುವ ಆರೋಪಗಳನ್ನು “ಸುಳ್ಳು ಮತ್ತು ದಾರಿತಪ್ಪಿಸುವ” ಎಂದು ಫೆಡರೇಶನ್ ಹೇಳಿಕೆಯಲ್ಲಿ ತಿಳಿಸಿದೆ. ಈ ಪೋಸ್ಟ್‌ಗಳು ಗ್ರಾಹಕರಲ್ಲಿ ತಪ್ಪಿಸಬಹುದಾದ ಗೊಂದಲವನ್ನು ಸೃಷ್ಟಿಸಿವೆ ಮತ್ತು ನಂದಿನಿ ಉತ್ಪನ್ನಗಳ ತಯಾರಿಕೆಯಲ್ಲಿ ಅನುಸರಿಸುವ ಗುಣಮಟ್ಟದ ಮಾನದಂಡಗಳನ್ನು ಪ್ರತಿಬಿಂಬಿಸುವುದಿಲ್ಲ ಎಂದು ಅದು ಹೇಳಿದೆ. ಕೆಎಂಎಫ್ ತನ್ನ ಎಲ್ಲಾ ಹಾಲು ಮತ್ತು ಡೈರಿ ವಸ್ತುಗಳು ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ನಿಗದಿಪಡಿಸಿದ ನಿಯಮಗಳನ್ನು ಪಾಲಿಸುತ್ತವೆ ಎಂದು ಹೇಳಿದೆ. ಉತ್ಪಾದನೆ, ಸಂಸ್ಕರಣೆ ಮತ್ತು ಪ್ಯಾಕೇಜಿಂಗ್ ಅನ್ನು ನಿಗದಿತ ವೈಜ್ಞಾನಿಕ ವಿಧಾನಗಳು ಮತ್ತು ಶಾಸನಬದ್ಧ ಮಾನದಂಡಗಳಿಗೆ ಅನುಸಾರವಾಗಿ ನಡೆಸಲಾಗುತ್ತದೆ ಎಂದು ಸಹಕಾರಿ ಸಂಸ್ಥೆ ಹೇಳಿದೆ. ಪರಿಶೀಲಿಸದ ವಿಷಯವನ್ನು ಅವಲಂಬಿಸದಂತೆ ಗ್ರಾಹಕರಲ್ಲಿ ಒಕ್ಕೂಟವು ಮನವಿ ಮಾಡಿತು ಮತ್ತು ನಂದಿನಿ ಉತ್ಪನ್ನಗಳು ದೈನಂದಿನ ಬಳಕೆಗೆ ಸುರಕ್ಷಿತವೆಂದು…

Read More

ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದೊಡ್ಡರಿ ಕಾವಲು ಗೇಟ್ ಬಳಿ ಸ್ಕೂಟಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನ ರಮೇಶ್ (23) ಮತ್ತು ಪುರುಷೋತ್ತಮ್ (26) ಎಂದು ತಿಳಿದುಬಂದಿದೆ. ರಮೇಶ್ ಹಾಗೂ ಕಿರಣ್ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಬರುತ್ತಿದ್ದ ಪುರುಷೋತ್ತಮ್ ಬೈಕ್​ ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯ ತೀವ್ರತೆಯಿಂದ ರಮೇಶ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರೆ, ಬೈಕ್ ಸವಾರ ಪುರುಷೋತ್ತಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸ್ಕೂಟಿಯಲ್ಲಿದ್ದ ಕಿರಣ್ ಗಂಭೀರ ಗಾಯಗಳೊಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಸಾವೆ ಠಾಣಾ ಸಿಬ್ಬಂದಿ ಭೇಟಿ ನೀಡಿ, ಪರಿಶೀಲಿಸಿದ್ದು, ದೂರು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸ್ಥಳೀಯರು ರಸ್ತೆ ಸುರಕ್ಷತಾ ಕ್ರಮಗಳನ್ನು ಬಲಪಡಿಸುವಂತೆ ಆಗ್ರಹಿಸಿದ್ದಾರೆ.

Read More

ಬೆಂಗಳೂರು : ಇಂದು ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಕೋರಲು ಇದೀಗ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೇಶ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ವಿಜಯಲಕ್ಷ್ಮಿ ಮತ್ತು ಪುತ್ರ ವಿನೇಶ್ ಸಹೋದರ ದಿನಕರ್ ತೂಗುದೀಪ್, ನಟ ಧನ್ವಿರ್ ಸಂಗೀತ ನಿರ್ದೇಶಕ ವಿ ಹರಿಕೃಷ್ಣ ಜೈಲಿಗೆ ಆಗಮಿಸಿದ್ದು ದರ್ಶನಗೆ 49ನೇ ಹುಟ್ಟುಹಬ್ಬದ ಶುಭಾಶಯಗಳು ಕೋರಲು ಭೇಟಿ ನೀಡಿದ್ದಾರೆ.

Read More

ಬೀದರ್ : ಆಕಸ್ಮಿಕವಾಗಿ ಕಾರಂಜಾ ಡ್ಯಾಂ ಕಾಲುವೆಗೆ ಬಿದ್ದು ತಂದೆ ಮಗ ಸಾವನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಾಲಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ಈ ಒಂದು ದುರಂತ ನಡೆದಿದೆ. ಕಾಲುವೆ ಬಿದ್ದು ತಂದೆ ವಿಶ್ವನಾಥ್ ಮತ್ತು ಪುತ್ರ ಅಮರೇಶ್ ಸಾವನ್ನಪ್ಪಿದ್ದಾರೆ. ಹಳ್ಳಿಕೇಡ್ ಬಿ ಗ್ರಾಮದ ವಿಶ್ವನಾಥ ಹಾಗೂ ಅಮರೇಶ್ (23) ಸಾವನ್ನಪ್ಪಿದ್ದಾರೆ ಬೀದರ್ನಲ್ಲಿ ಸಿಮೆಂಟ್ ಖಾಲಿ ಮಾಡಿ ವಾಪಸ್ ಊರಿಗೆ ಹೋಗುತ್ತಿದ್ದರು. ಈ ವೇಳೆ ಕಾಲು ತೊಳೆದುಕೊಳ್ಳುತ್ತಿದ್ದ ಅಮರೇಶ್ ಕಾಲು ಜಾರಿ ಕಾರಂಜಾ ಡ್ಯಾಮ್ ಕಾಲುವೆಗೆ ಬಿದ್ದಿದ್ದಾನೆ. ಪುತ್ರನ ರಕ್ಷಣೆಗೆ ಹೋದ ತಂದೆ ವಿಶ್ವನಾಥ್ ಜಮಾದಾರ್ ಸಹ ಸಾವನಪ್ಪಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ತಂದೆ ಹಾಗೂ ಮಗನ ಶವ ಹೊರ ತೆಗೆದಿದ್ದು, ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೊಪ್ಪಳ : ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಪ್ಪಳ ಜಿಲ್ಲೆಯ ಗಂಗಾವತಿ 1ನೇ ಹೆಚ್ಚುವರಿ ಸೇಷನ್ಸ್ ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಈ ಒಂದು ಮರಣದಂಡನೆ ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದ್ದಾರೆ.ಅಪರಾಧಿಗಳಾದ ಶರಣಬಸವರಾಜ್ ಮಲ್ಲ ಹಾಗೂ ಚರಣ್ ಎನ್ನುವ ಮೂವರು ಆರೋಪಿಗಳಿಗೆ ಇದೀಗ ಗಂಗಾವತಿ 1ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಪ್ರಕರಣ ಹಿನ್ನೆಲೆ ಕಳೆದ ಮಾರ್ಚ್ ತಿಂಗಳಲ್ಲಿ ಗಂಗಾವತಿ ತಾಲೂಕಿನ ಸಾಣಾಪೂರ ಬಳಿ ಈ ಪೈಶಾಚಿಕ ಕೃತ್ಯ ನಡೆದಿತ್ತು. ಇಸ್ರೇಲ್ ಮೂಲದ ಮಹಿಳೆಯ ಮೇಲೆ ಅಮಾನವೀಯವಾಗಿ ಅತ್ಯಾಚಾರವೆಸಗಿದ್ದರು. ಈ ಘಟನೆಯಲ್ಲಿ ವಿದೇಶಿ ಯುವಕನ ಕೊಲೆಯಾಗಿತ್ತು. ಈ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಜಿಲ್ಲೆಯ ಪ್ರವಾಸೋದ್ಯಮದ ಮೇಲೆ ಕರಿನೆರಳು ಬಿದ್ದಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅತ್ಯಂತ ಚುರುಕಾಗಿ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.…

Read More

ತುಮಕೂರು : ರಾಜ್ಯದಲ್ಲಿ ನಾನು ಆಕಸ್ಮಿಕವಾಗಿ ಮುಖ್ಯಮಂತ್ರಿ ಆದವನು. ಈ ನಾಡಿನ 6 ಕೋಟಿ ಜನರು ಆಶೀರ್ವಾದ ಮಾಡಿ ನಾನು ಮುಖ್ಯಮಂತ್ರಿ ಆದವನಲ್ಲ ಎಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು. ಈ ನಾಡಿನ ಆರು ಕೋಟಿ ಜನರು ಆಶೀರ್ವಾದ ಮಾಡಿ ನಾನು ಸಿಎಂ ಆದವನಲ್ಲ. ದೈವ ಪ್ರೇರೇಪಣೆ ಹಾಗೂ ಗುರು ಹಿರಿಯರ ಆಶೀರ್ವಾದದಿಂದ ಸಿಎಂ ಆಗಿದ್ದೆ. ಜೊತೆಗೆ ನಮ್ಮ ಪಕ್ಷದಲ್ಲಿ ಗೆದ್ದ ಶಾಸಕರಿಂದ ನಾನು ಸಿಎಂ ಆಗಿದ್ದೆ. ರಾಜ್ಯದಲ್ಲಿ ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ ನಾನು ಕೊಟ್ಟಿರುವ ಯೋಜನೆಗಳಿಗೆ ಎಂದು ಜಾಹಿರಾತು ನೀಡಿಲ್ಲ. ಜನಸಾಮಾನ್ಯರಿಗೆ ಹತ್ತಿರವಾಗಿ ಕೆಲಸ ಮಾಡಿದ್ದೇನೆ ಎಂದು ಚಿಕ್ಕನಾಯಕನಹಳ್ಳಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ ನೀಡಿದರು. ಈ ಹಿಂದೆ ನಾನು ಹಲವು ಬಾರಿ ಚಿಕ್ಕನಾಯಕನಹಳ್ಳಿಗೆ ಭೇಟಿ ನೀಡಿದ್ದೇನೆ 2018ರಲ್ಲಿ ಗ್ರಾಮ ವಾಸ್ತವ್ಯಕ್ಕೆ ತಿಮ್ಮನಹಳ್ಳಿಗೆ ಭೇಟಿ ನೀಡಿದ್ದೆ ಸಭೆ ಮಾಡುವ ತಯಾರಿ ನಡೆಸಿದರು ಆದರೆ ಸಭೆ ಮಾಡಲು ಆಗಲಿಲ್ಲ ಅದೆಲ್ಲವೂ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಶಾಲಾ ಬಸ್ ಹರಿದು ಇಬ್ಬರು ಮಕ್ಕಳು ಸಾವನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಬೆಂಗಳೂರಿನಲ್ಲಿ ಡೆಡ್ಲಿ ರಸ್ತೆಗೆ ಇದೀಗ ಮತ್ತೊಂದು ಮಗು ಬಲಿಯಾಗಿದೆ. ಬೈಕ್ ನಿಂದ ಕೆಳಗೆ ಬಿದ್ದ ಮಗುವಿನ ಮೇಲೆ ಕಾರು ಹರಿದಿದೆ ಬೆಂಗಳೂರಿನ ಹೊರಮಾವು ಬಳಿಯ ಹಳೆಹಳಿಯಲ್ಲಿ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಎರಡು ವರ್ಷದ ತ್ರಿಶೂಲ್ ಸಾವನ್ನಪ್ಪಿದ್ದಾನೆ. ತ್ರಿಶೂಲನ್ನು ದೇಗುಲಕ್ಕೆ ಕರೆದುಲಾಗುತ್ತಿತ್ತು. ನಿನ್ನೆ ಶಿವರಾತ್ರಿ ಹಿನ್ನೆಲೆ ಇವನ ದೇಗುಲಕ್ಕೆ ಕರೆದೊಯ್ಯುತ್ತಿದ್ದರು ಬೈಕ್ ನಲ್ಲಿ ವಾಪಸ್ ಬರುವಾಗ ಹಿಂಬದಿಯಿಂದ ಕಾರು ಡಿಕ್ಕಿ ಆಗಿ ಕೆಳಗೆ ಬಿದ್ದ ತ್ರಿಶೂಲ್ ಮೇಲೆ ಕಾರು ಹರಿದಿದೆ ಸ್ಥಳದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿದೆ. ತಂದೆ ತಾಯಿ ಉಜ್ಜಯ್ಯನಿಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ ಸ್ಥಳೀಯರು ಘಟನೆ ಸಂಭಂದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Read More

ಧಾರವಾಡ : ಕಳೆದ 2024 ಏಪ್ರಿಲ್ 18 ರಂದು ಕೆಎಲ್‌ಇ ವಿಶ್ವವಿದ್ಯಾಲಯ ಆವರಣದಲ್ಲಿ ನೇಹ ಹಿರೇಮಠ್ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಕೊಲೆ ಆರೋಪಿಯಾಗಿದ್ದ ಫಯಾಜ್ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ. ಹೌದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮೂರನೇ ಬಾರಿಗೆ ಫಯಾಜ್ ಜಾಮೀನು ಅರ್ಜಿ ವಜಾಗೊಳಿಸಿದೆ ಕೆಎಲ್ಇ ವಿಶ್ವ ವಿದ್ಯಾಲಯದ ಆವರಣದಲ್ಲಿಯೇ ಫಯಾಜ್ ನೇಹಾ ಹಿರೇಮಠಗಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ. 2014 ಏಪ್ರಿಲ್ 18 ರಂದು ಈ ಒಂದು ಕೊಲೆ ನಡೆದಿತ್ತು. ದೇಶಾದ್ಯಂತ ನೇಹಾ ಹಿರೇಮಠ ಕೊಲೆ ಪ್ರಕರಣ ಭಾರಿ ಸಂಚಲನ ಮೂಡಿಸಿತು. ಇದೀಗ ಫಯಾಜ್ ಗ್ರಾಮೀಣ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾ ಗೊಳಿಸಿದೆ

Read More

ಬೆಂಗಳೂರು : ಬಾಗೇಪಲ್ಲಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರು ಆದೇಶ ಹೊರಡಿಸಿದ್ದಾರೆ. ಪರಾಜಿತ ಅಭ್ಯರ್ಥಿ ಶ್ರೀಮರಾಜು ಅವರು ಅರ್ಜಿ ಸಲ್ಲಿಸಿದ್ದರು. ಆಯ್ಕೆ ಅಸಿಂಧು ಕೋರಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಬಳಿಕ ಹೈಕೋರ್ಟ್ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಆಯ್ಕೆ ಆದೇಶ ಹೊರಡಿಸಿದೆ. ಪ್ರಕರಣದ ಹಿನ್ನೆಲೆ 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಎಸ್‌.ಎನ್‌. ಸುಬ್ಬಾರೆಡ್ಡಿ ಚುನಾಯಿತರಾಗಿದ್ದರು. ಚುನಾವಣೆಯಲ್ಲಿ ಎಸ್‌.ಎನ್‌. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಜತೆಗೆ ಆಸ್ತಿಗಳ ತೆರಿಗೆ ಪಾವತಿ ಬಾಕಿ ಮಾಹಿತಿಯನ್ನು ಪ್ರಮಾಣಪತ್ರದಲ್ಲಿ ಉಲ್ಲೇಖಿಸಿಲ್ಲ. ಹಾಗಾಗಿ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕೆಂದು ಬಿಜೆಪಿ ಪಕ್ಷದ ಪರಾಜಿತ ಅಭ್ಯರ್ಥಿ ಸಿ. ಮುನಿರಾಜು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.ಆ ಅರ್ಜಿಯನ್ನು ವಜಾಗೊಳಿಸಲು ಎಸ್‌.ಎನ್‌. ಸುಬ್ಬಾರೆಡ್ಡಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.…

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ದಲ್ಲಿ ತೆರಳುತ್ತಿದ್ದ ಶಿಕ್ಷಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಆನೇಕಲ್ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮಿಪುರ ಸರ್ಕಾರಿ ಶಾಲಾ ಶಿಕ್ಷಕಿ ಯೋಗೀಶ್ವರಿ (46) ಸಾವನ್ನಪ್ಪಿದ್ದಾರೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್ ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದು ಯೋಗೀಶ್ವರಿ ಸಾವನಪ್ಪಿದ್ದಾರೆ ಶಿಕ್ಷಕಿ ಯೋಗೀಶ್ವರಿ ಮೃತ ದೇಹ ಸರ್ಕಾರಿ ಆಸ್ಪತ್ರೆಗೆ ಶವಾಹಾರಕ್ಕೆ ರವಾನಿಸಲಾಗಿದೆ ಘಟನೆ ಸಂಭಂದ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More