Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಕಲಬುರಗಿ: ಪ್ರೀತಿಸಿ ಕೈಹಿಡಿದ ಪತಿಯೇ ನಿರಂತರವಾಗಿ ನೀಡುತ್ತಿದ್ದ ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಬೇಸತ್ತು, ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ಕರುಣಾಜನಕ ಘಟನೆ ಕಲಬುರಗಿ ತಾಲ್ಲೂಕಿನ ಔರಾದ್ (ಬಿ) ಗ್ರಾಮದಲ್ಲಿ ಸಂಭವಿಸಿದೆ. ಹೊಟ್ಟೆಯಲ್ಲಿದ್ದ ಕಂದಮ್ಮನೊಂದಿಗೆ ಗೃಹಿಣಿ ಪ್ರಾಣ ಕಳೆದುಕೊಂಡಿರುವುದು ಇಡೀ ಗ್ರಾಮದಲ್ಲಿ ತೀವ್ರ ಶೋಕದ ವಾತಾವರಣವನ್ನು ಸೃಷ್ಟಿಸಿದೆ. ಔರಾದ್ (ಬಿ) ಗ್ರಾಮದ ನಿವಾಸಿಯಾದ ಶೃತಿ (೨೨) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ಶೃತಿ ಅವರು ಸುಮಾರು ಎರಡು ವರ್ಷಗಳ ಹಿಂದೆ ಗೋಪಾಲ್ ಎಂಬಾತನನ್ನು ಪ್ರೀತಿಸಿ, ಆತನ ಗುಣನಡತೆಗಳನ್ನು ನಂಬಿ ವಿವಾಹವಾಗಿದ್ದರು. ಮದುವೆಯ ಆರಂಭದ ದಿನಗಳಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತಾದರೂ, ದಿನ ಕಳೆದಂತೆ ಪತಿ ಗೋಪಾಲ್ನ ಅಸಲಿ ಮುಖವಾಡ ಕಳಚಿ ಬಿದ್ದಿತ್ತು. ವಿವಾಹದ ನಂತರ ಗೋಪಾಲ್ ಕುಡಿತ, ಜೂಜಾಟ ಸೇರಿದಂತೆ ಹಲವು ಕೆಟ್ಟ ದುಶ್ಚಟಗಳಿಗೆ ದಾಸನಾಗಿದ್ದ ಎನ್ನಲಾಗಿದೆ. ಇದರಿಂದಾಗಿ ಆತ ಸಾಲದ ಸುಳಿಗೆ ಸಿಲುಕಿದ್ದು, ತನಗಿದ್ದ ಸಾಲವನ್ನು ತೀರಿಸುವ ಸಲುವಾಗಿ ಇದ್ದ…
ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿನ್ನಡೆಯಾಗದಂತೆ ತಡೆಯಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದೆ. ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳಿಗೆ ಪ್ರತಿಯಾಗಿ ಒಟ್ಟಾರೆ 6,086 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಇಲಾಖೆಯು ಅಧಿಕೃತವಾಗಿ ಅನುಮತಿ ನೀಡಿ ಆದೇಶ ಹೊರಡಿಸಿದೆ. ಹೆಚ್ಚುವರಿ ಹುದ್ದೆಗಳಿಗೆ ಇಲಾಖೆಯ ಪ್ರಸ್ತಾವನೆ: ಶಿಕ್ಷಣ ಇಲಾಖೆಯ (ಪದವಿ ಪೂರ್ವ) ನಿರ್ದೇಶನಾಲಯವು ಈ ಬಾರಿ ಶೈಕ್ಷಣಿಕ ಅಗತ್ಯತೆಗಳನ್ನು ಮನಗಂಡು ಹೆಚ್ಚಿನ ಹುದ್ದೆಗಳ ನೇಮಕಾತಿಗೆ ಕೋರಿಕೆ ಸಲ್ಲಿಸಿತ್ತು. ಪ್ರಸಕ್ತ ಸಾಲಿನಲ್ಲಿ 100 ಸರ್ಕಾರಿ ಪಿಯು ಕಾಲೇಜುಗಳಲ್ಲಿ ಹೊಸದಾಗಿ ಗಣಕ ವಿಜ್ಞಾನ (Computer Science) ವಿಷಯವನ್ನು ಆರಂಭಿಸಲು ಅನುಮತಿ ನೀಡಿರುವುದು ಹಾಗೂ 60 ಸರ್ಕಾರಿ ಪಿಯು ಕಾಲೇಜುಗಳನ್ನು ‘ಆದರ್ಶ ಕಾಲೇಜುಗಳಾಗಿ’ ಉನ್ನತೀಕರಿಸಿರುವುದು ಇದಕ್ಕೆ ಪ್ರಮುಖ ಕಾರಣವಾಗಿತ್ತು. ಇದರೊಂದಿಗೆ ಹಾಲಿ ಇರುವ ಬಡ್ತಿ ಹಾಗೂ ವಯೋನಿವೃತ್ತಿ ಹಿನ್ನೆಲೆಯಲ್ಲಿ ಖಾಲಿಯಾಗುವ ಹುದ್ದೆಗಳನ್ನು ಪರಿಗಣಿಸಿ, ಒಟ್ಟು 6,687 ಅತಿಥಿ ಉಪನ್ಯಾಸಕರ ನೇಮಕಾತಿಗೆ ಮತ್ತು ಅವರ…
ಕಲಬುರಗಿ: ರಾಜ್ಯದ ಕಾಂಗ್ರೆಸ್ ಸರ್ಕಾರವು ಮತ್ತೆ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣಕ್ಕೆ ಮುಂದಾಗಿದೆಯೇ ಎಂಬ ಬಲವಾದ ಅನುಮಾನ ಹಾಗೂ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಗುರುವಾರ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ, ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಪ್ರಸಿದ್ಧ ಲಾಡ್ಲೆ ಮಶಾಕ್ ದರ್ಗಾ ಗಲಾಟೆಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ. ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರ ಲಿಖಿತ ಮನವಿಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದಾಗಿ ಗಲಾಟೆಯಲ್ಲಿ ಭಾಗಿಯಾಗಿದ್ದ ಮುಸ್ಲಿಂ ಯುವಕರು ಹಾಗೂ ಕೆಲವು ಪ್ರಮುಖ ಮುಖಂಡರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಕಳೆದ 2022ರ ಮಹಾಶಿವರಾತ್ರಿಯ ಸಂದರ್ಭದಲ್ಲಿ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗದ ಪೂಜೆ ನೆರವೇರಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಭಾರಿ ಸಂಘರ್ಷ ಏರ್ಪಟ್ಟಿತ್ತು. ಕೆಲವು ಕಿಡಿಗೇಡಿಗಳು ಪವಿತ್ರ ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದಾರೆ ಎಂಬ ಆರೋಪ ಕೇಳಿಬಂದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಈ…
ಬೆಂಗಳೂರು : ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚಿತವಾಗಿರುವ ಧರ್ಮಸ್ಥಳದ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾ೧ಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಸಂಬಂಧ ಕೇಂದ್ರ ತನಿಖಾ ವಿಭಾಗ (ಸಿಬಿಐ) ಅಥವಾ ಕೇಂದ್ರ ಸರ್ಕಾರ ಅಂತಿಮ ನಿರ್ಣಯ ತೆಗೆದುಕೊಳ್ಳಲಿ ಎಂದು ಸುಪ್ರೀಂ ಕೋರ್ಟ್ಗೆ ಅಭಿಪ್ರಾಯ ತಿಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ರಾಜ್ಯ ಗೃಹ ಹಾಗೂ ಕಾನೂನು ಇಲಾಖೆ ಹಿರಿಯ ಅಧಿಕಾರಿಗಳ ಜತೆ ಸರ್ಕಾರ ಸಮಾಲೋಚನೆ ನಡೆಸಿದೆ. ಪ್ರಕರಣದ ವಿಚಾರಣೆ ಮುಂದಿನ ವಾರ ಮತ್ತೆ ಸುಪ್ರೀಂ ಕೋರ್ಟ್ ಮುಂದೆ ಬರಲಿದ್ದು, ಅಷ್ಟರಲ್ಲಿ ಕೋರ್ಟ್ಗೆ ತನ್ನ ನಿಲುವು ಏನೆಂದು ಸರ್ಕಾರ ಸ್ಪಷ್ಟಪಡಿಸಲಿದೆ ಎಂದು ಗೃಹ ಇಲಾಖೆ ತಿಳಿಸಿದೆ. ಸಾಕ್ಷಿಗಳ ಕೊರತೆ ಹಿನ್ನೆಲೆಯಲ್ಲಿ ಸೌಜನ್ಯ ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ನನ್ನು ಸಿಬಿಐ ನ್ಯಾಯಾಲಯವು ಖುಲಾಸೆಗೊಳಿಸಿತ್ತು. ಈ ತೀರ್ಪು ಬಳಿಕ ಮಗಳ ಹತ್ಯೆ ಪ್ರಕರಣದ ಮರು ತನಿಖೆಗೆ ಆದೇಶಿಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಮೃತ ಸೌಜನ್ಯ ತಾಯಿ ಕುಸುಮಾವತಿ ಗೌಡ ಮೊರೆ ಹೋಗಿದ್ದರು.…
ಬೆಳಗಾವಿ: ಹಿರಿಯ ವೈದ್ಯರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಡಾ. ದಿನೇಶ್ ಲಕ್ಷ್ಮಣ ಭಟ್ಕಳ (79) ಆತ್ಮಹತ್ಯೆ ಮಾಡಿಕೊಂಡ ವೈದ್ಯ. ಮಂಡೋಳಿ ರಸ್ತೆಯಲ್ಲಿರುವ ಗೋಡ್ಸೆವಾಡಿಯಲ್ಲಿರುವ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾಗಿದ್ದು, ಹಲವು ವರ್ಷಗಳಿಂದ ವೈದ್ಯರಾಗಿ ಸೇವೆ ಸಲ್ಲಿಸಿ, ನಂತರ ಬೆಳಗಾವಿಯಲ್ಲಿ ನೆಲೆಸಿದ್ದರು. ಡಾ. ಭಟ್ಕಳ ಅವರು ತಮ್ಮ ಮನೆಯ ಬಾಲ್ಕನಿಯಲ್ಲಿ ತಾವೇ ತಮ್ಮ ಮೇಲೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುಂಡಿನ ಸದ್ದು ಕೇಳಿ ಮನೆಯವರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ಸ್ಥಳಕ್ಕೆ ಧಾವಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಆದರೆ, ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದರು. ಸ್ಥಳಕ್ಕೆ ಟಿಳಕವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅನಾರೋಗ್ಯ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಹಿನ್ನೆಲೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ, ನಿಖರವಾದ ಕಾರಣ ಪೊಲೀಸರ ತನಿಖೆಯಿಂದಲೇ ಸ್ಪಷ್ಟವಾಗಲಿದೆ.
ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್ ನ ಮೂರನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ಪ್ರವೇಶ ಕಲ್ಪಿಸುವ ಡಿಸಿಇಟಿ ಹಾಗೂ ಎಂ.ಟೆಕ್/ಎಂಇ ಪ್ರವೇಶ ಪರೀಕ್ಷೆಗಳು ಮೇ 23ರಂದು ನಡೆಯಲಿದ್ದು ಸಕಲ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಈ ಎರಡೂ ಪರೀಕ್ಷೆಗಳು ಅಂದು ಬೆಂಗಳೂರು, ಬಳ್ಳಾರಿ, ಬಾಗಲಕೋಟೆ, ದಾವಣಗೆರೆ, ಧಾರವಾಡ, ಕಲ್ಬುರ್ಗಿ, ಮೈಸೂರು ಮತ್ತು ತುಮಕೂರು ಕೇಂದ್ರಗಳಲ್ಲಿ ನಡೆಯಲಿವೆ ಎಂದು ಅವರು ವಿವರಿಸಿದ್ದಾರೆ. ಡಿಸಿಇಟಿ ಪರೀಕ್ಷೆಯನ್ನು 51 ಕೇಂದ್ರಗಳಲ್ಲಿ ಒಟ್ಟು 21,095 ಹಾಗೂ ಎಂ.ಟೆಕ್ ಪರೀಕ್ಷೆಯನ್ನು 26 ಕೇಂದ್ರಗಳಲ್ಲಿ ಒಟ್ಟು 12,116 ಅಭ್ಯರ್ಥಿಗಳು ಬರೆಯುತ್ತಿದ್ದಾರೆ. ಈ ಎರಡೂ ಕೋರ್ಸ್ ಗಳಿಂದ ಒಟ್ಟು 34,211 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.. ಇದಲ್ಲದೆ ಹೊರನಾಡು, ಗಡಿನಾಡು ಅಭ್ಯರ್ಥಿಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆ ಕೂಡ ಬೆಂಗಳೂರಿನಲ್ಲಿ ಅಂದು ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.
ಬೆಂಗಳೂರು : ಕೃಷಿ ಮಾರಾಟ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಮತ್ತು ಬೆಂಗಳೂರು ಜಲಮಂಡಳಿಯಲ್ಲಿ ಖಾಲಿ ಇರುವ ವಿವಿಧ ರೀತಿಯ ಒಟ್ಟು 37 ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜೂನ್ 4 ಕೊನೆ ದಿನ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಪರಿಶಿಷ್ಟ ಜಾತಿಯ ಒಳ ಮೀಸಲಾತಿ ನಿಗದಿ ನಂತರ ಪರೀಕ್ಷೆ ನಡೆಸದೇ ಇರುವ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿದು, ಮರು ಅಧಿಸೂಚನೆ ಹೊರಡಿಸಲು ಸರ್ಕಾರ ಸೂಚಿಸಿತ್ತು. ಆ ಪ್ರಕಾರ ಸಂಬಂಧಪಟ್ಟ ಇಲಾಖೆಗಳಿಂದ ಒಳ ಮೀಸಲಾತಿ ಅಳವಡಿಸಿಕೊಂಡು ಮರು ಅಧಿಸೂಚನೆ ಹೊರಡಿಸಿದ ನಂತರ ಅರ್ಜಿ ಕರೆದಿದ್ದು, ಈ ಹಿಂದೆ ಅರ್ಜಿ ಸಲ್ಲಿಸಿದವರು ಪುನಃ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪರಿಶಿಷ್ಟ ಜಾತಿಯ ಎ, ಬಿ ಮತ್ತು ಸಿ ವರ್ಗ ಗಳ ಆರ್ ಡಿ ಸಂಖ್ಯೆ ದಾಖಲು ಮಾಡದವರು ಕೂಡ ಈ ಹಿಂದಿನ ಅರ್ಜಿಯಲ್ಲೇ ಎಡಿಟ್ ಮಾಡಿ,…
ಶಿವಮೊಗ್ಗ : ಸಾಗರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗಾಗಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ www.sw.kar.nic.in ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಆ ಪ್ರತಿಯನ್ನು ಸಂಬಂಧಪಟ್ಟ ವಿದ್ಯಾರ್ಥಿನಿಲಯದ ವಾರ್ಡನ್ ಅವರಿಗೆ ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಕಳೆದ ಸಾಲಿನ ಅಂಕಪಟ್ಟಿ,ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ, ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಾಗಿದ್ದಲ್ಲಿ ಎಸ್ ಎ ಟಿ ಎಸ್ ಐಡಿ(SATS ID) ಮೆಟ್ರಿಕ್ ನಂತರದ ವಿದ್ಯಾರ್ಥಿಗಳಾಗಿದ್ದಲ್ಲಿ ಎಸ್ ಎಸ್ ಪಿ ಐಡಿ ಮತ್ತು ಯೂನಿವರ್ಸಿಟಿ ರಿಜಿಸ್ಟ್ರೇಷನ್ ನಂಬರ್ ನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಈ ಪ್ರವೇಶಾತಿಗೆ ಸಂಬಂಧಿಸಿದಂತೆ ಯಾವುದೇ ಹೆಚ್ಚಿನ ಮಾಹಿತಿ ಅಥವಾ ಗೊಂದಲಗಳಿದ್ದಲ್ಲಿ ಕಚೇರಿ ವೇಳೆಯಲ್ಲಿ ಸಹಾಯಕ ನಿರ್ದೇಶಕರು,…
ಬೆಂಗಳೂರು, ಮೇ 21: ಕಾಂಪಾ ನಿಧಿಯಲ್ಲಿ ಅರಣ್ಯ ಭೂಮಿ ರಕ್ಷಣೆಗೆ ಹಣ ಒದಗಿಸಲು ಅವಕಾಶವಿದ್ದು, ನಗರ ಮತ್ತು ಪಟ್ಟಣದ ಸಮೀಪ ಇರುವ ಕೋಟ್ಯಂತರ ರೂ. ಬೆಲೆ ಬಾಳುವ ಅರಣ್ಯ ಭೂಮಿ ಒತ್ತುವರಿ ಆಗದಂತೆ ಬೇಲಿ ಹಾಕಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಇತ್ತೀಚೆಗೆ ತಾವು ಹಾಸನ ನಗರಕ್ಕೆ ಹೊಂದಿಕೊಂಡಿರುವ ಮಡೆನೂರು ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ್ದು, ಇಲಾಖೆ ಹೆಸರಲ್ಲಿ ಆರ್.ಟಿ.ಸಿ. ಇದ್ದರೂ ಅಲ್ಲಿ ಅರಣ್ಯ ಬೆಳೆಸಿಲ್ಲ. ಹೀಗಾಗಿ ಒತ್ತುವರಿ ನಡೆಯುತ್ತದೆ. ಕೂಡಲೇ ಇಂತಹ ಭೂಮಿ ಗುರುತಿಸಿ ಬೇಲಿಹಾಕಿ, ಸ್ಥಳೀಯ ಪ್ರಭೇದದ ಸಸಿಗಳನ್ನು ನೆಟ್ಟು ನೆಡುತೋಪು ಅಭಿವೃದ್ಧಿಪಡಿಸಿ ಎಂದು ಸೂಚಿಸಿದರು. ಅರಣ್ಯ ಭೂಮಿಯ ಇಂಡೀಕರಣಕ್ಕೆ ಸೂಚನೆ: ಸರ್ಕಾರದಿಂದ ಮತ್ತು ಹಿಂದೆ ರಾಜರ ಆಳ್ವಿಕೆ ಕಾಲದಲ್ಲಿ ಅರಣ್ಯ ಎಂದು ಗೆಜೆಟ್ ಅಧಿಸೂಚನೆ ಆಗಿದ್ದರೂ ಅರಣ್ಯ ಸ್ವರೂಪವಿದ್ದರೂ ಇನ್ನೂ ಕೆಲವು ಕಡೆ ಅರಣ್ಯ ಎಂದು ಇಂಡೀಕರಣ ಆಗದೆ, ಆರ್.ಟಿ.ಸಿ.ಯಲ್ಲಿ ಅರಣ್ಯ ಎಂದು ದಾಖಲಾಗದ ಕಾರಣ…
ಬೆಂಗಳೂರು: ರಾಜ್ಯದಲ್ಲಿ ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕ್ ನೀಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ತೆರಿಗೆ ಕಡಿತದ ಸಾಧ್ಯತೆಯನ್ನು ಸಂಪೂರ್ಣವಾಗಿ ತಳ್ಳಿಹಾಕಿದರು. ಇಂಧನ ದರ ಏರಿಕೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ತನ್ನ ಪಾಲಿನ ತೆರಿಗೆಯನ್ನು ಕಡಿತಗೊಳಿಸಿ ಜನರಿಗೆ ನಿರಾಳತೆ ನೀಡುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. “ಕೇಂದ್ರ ಸರ್ಕಾರದವರು ಬೆಲೆಯನ್ನು ಏರಿಸುತ್ತಾ ಹೋಗುವುದು, ನಾವು ಇಲ್ಲಿ ಕಡಿಮೆ ಮಾಡುತ್ತಾ ಕೂರಬೇಕಾ?” ಎಂದು ಮರುಪ್ರಶ್ನಿಸಿದ ಅವರು, ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಆಕ್ರೋಶ ಹೊರಹಾಕಿದರು. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ದೇಶದಲ್ಲಿದ್ದ ಇಂಧನ ದರಗಳನ್ನು ನೆನಪಿಸಿದರು.…














