Subscribe to Updates
Get the latest creative news from FooBar about art, design and business.
Author: kannadanewsnow05
ಉಡುಪಿ : ಉಡುಪಿಯಲ್ಲಿ ಟೂರಿಸ್ಟ್ ಬೋಟ್ ಪಲ್ಟಿಯಾಗಿ ಇದುವರೆಗೂ ಮೂವರು ಸಾವನ್ನಪ್ಪಿದ್ದು ಅದರಲ್ಲಿ ಮೈಸೂರು ಮೂಲದ ಯೂಟ್ಯೂಬರ್ ಆದಂತಹ ನಿಶಾ ಮತ್ತು ಮಧುಗೌಡ ಸ್ನೇಹಿತೆ ದಿಶಾ ಕೂಡ ಇದೀಗ ಸಾವನ್ನಪ್ಪಿದ್ದಾರೆ. ಮೈಸೂರಿನ ಉದಯಗಿರಿಯ ಜಲಾಪುರಿ ನಿವಾಸಿ ದಿಶಾ (23) ಮೃತ ದುರ್ದೈವಿ. ಘಟನೆಯಲ್ಲಿ ಸಿಂಧು, ಶಂಕರಪ್ಪ, ದಿಶಾ ಕೊನೆಯುಸಿರೆಳೆದಿದ್ದಾರೆ. ಧರ್ಮ ರಾಜ್ ಎಂಬ ಯುವಕನಿಗೆ ಚಿಕಿತ್ಸೆ ಮುಂದುವರಿದಿದೆ. ಡೆಲ್ಟಾ ಬೀಚ್ನಿಂದ ಟೂರಿಸ್ಟ್ ಬೋಟ್ನಲ್ಲಿ 28 ಮಂದಿ ಪ್ರವಾಸಿಗರು ತೆರಳಿದ್ದರು. ಮೈಸೂರಿನ ಬಿಪಿಓ ಒಂದರಲ್ಲಿ 28 ಮಂದಿ ಸಹೋದ್ಯೋಗಿಗಳು ಕೆಲಸ ಮಾಡುತ್ತಿದ್ದರು. ಎರಡು ಪ್ರತ್ಯೇಕ ಬೋಟ್ ಗಳಲ್ಲಿ ತಲಾ 14 ಮಂದಿ ಯುವಕ-ಯುವತಿಯರು ತೆರಳಿದ್ದರು. ಒಂದು ಬೋಟ್ ಮಗುಚಿ ಸಮುದ್ರ ಪಾಲಾಗಿತ್ತು.
ನವದೆಹಲಿ : ಭಾರತದಲ್ಲಿ ಹಲವು ಪ್ರಮುಖ ರಾಜಕಾರಣಿಗಳು ಮತ್ತು ಗಣ್ಯರು ವಿಮಾನ ಅಥವಾ ಹೆಲಿಕಾಪ್ಟರ್ ಅಪಘಾತಗಳಲ್ಲಿ ದುರಂತ ಅಂತ್ಯ ಕಂಡಿದ್ದಾರೆ. ಸಂಜಯ್ ಗಾಂಧಿ, ವೈ.ಎಸ್. ರಾಜಶೇಖರ ರೆಡ್ಡಿ, ಮಾಧವರಾವ್ ಸಿಂಧಿಯಾ, ಜಿಎಂಸಿ ಬಾಲಯೋಗಿ, ದೋರ್ಜಿ ಖಂಡು ಮತ್ತು ಜನರಲ್ ಬಿಪಿನ್ ರಾವತ್ ಅವರಂತಹ ಪ್ರಮುಖ ನಾಯಕರು ವಾಯು ದುರಂತಗಳಲ್ಲಿ ಸಾವನ್ನಪ್ಪಿದವರಲ್ಲಿ ಸೇರಿದ್ದಾರೆ. ಇಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಕೂಡ ವಿಮಾನ ಸಾವನಪ್ಪಿದ್ದಾರೆ. ಹೌದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇದು ಸಂಜಯ್ ಗಾಂಧಿ ಮತ್ತು ವಿಜಯ್ ರೂಪಾನಿ ಅವರಂತಹ ನಾಯಕರ ದುರಂತ ಸಾವುಗಳನ್ನು ನೆನಪಿಸುವಂತಿದೆ. ವಿಮಾನ, ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣಕ್ಕೀಡಾದ ಪ್ರಮುಖ ರಾಜಕೀಯ ನಾಯಕರು ಯಾರ್ಯಾರು ಎಂಬ ಬಗ್ಗೆ ವಿವರ ಇಲ್ಲಿದೆ. ಪ್ರಮುಖ ರಾಜಕಾರಣಿಗಳು: * ಹೋಮಿ ಭಾಭಾ (1966) ಭಾರತದ ಪ್ರವರ್ತಕ ಪರಮಾಣು ಭೌತಶಾಸ್ತ್ರಜ್ಞ ಹೋಮಿ ಜಹಾಂಗೀರ್ ಭಾಭಾ ಅವರು ಜನವರಿ 24, 1966 ರಂದು ಏರ್ ಇಂಡಿಯಾ ಫ್ಲೈಟ್ 101 ರಲ್ಲಿ…
ಬೆಂಗಳೂರು : ನೂತನ ನೀತಿಯಲ್ಲಿ ಜವಳಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಕಾರ್ಮಿಕರಿಗೆ ಹಾಗೂ ಕೈಮಗ್ಗ ನೇಕಾರರಿಗೆ 2ರಿಂದ 3 ಸಾವಿರ ಸಹಾಯಧನ ಸೇರಿದಂತೆ ಇನ್ನಿತರ ಅಂಶಗಳು ಒಳಗೊಂಡ ನೂತನ ಜವಳಿ ಹಾಗೂ ಸಿದ್ಧ ಉಡುಪು ನೀತಿಯನ್ನು ಪರಿಷ್ಕರಿಸಲಾಗಿದ್ದು, ಶೀಘ್ರದಲ್ಲಿ ಇದನ್ನು ಘೋಷಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ಜವಳಿ ಸಚಿವ ಶಿವಾನಂದ ಎಸ್. ಪಾಟೀಲ್ ತಿಳಿಸಿದರು. ವಿಧಾನಪರಿಷತ್ನಲ್ಲಿ ಮಂಗಳವಾರ ಬಿಜೆಪಿ ಸದಸ್ಯ ಎಂ. ನಾಗರಾಜ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಹಿಂದಿನ ಮೂರು ಜವಳಿ ನೀತಿಗಳ ಸಾಧಕ-ಬಾಧಕಗಳ ಅಧ್ಯಯನ ಮಾಡಿ, ಎಲ್ಲರ ಸಲಹೆ ಸೂಚನೆಗಳನ್ನು ಪರಿಗಣಿಸಿ, 2025ರಿಂದ 2030ರ ವರೆಗೆ ಹೊಸ ಜವಳಿ ನೀತಿ ರೂಪಿಸಲಾಗಿದೆ. ಶೀಘ್ರದಲ್ಲಿ ಇದನ್ನು ಘೋಷಿಸಿ, ಕಾರ್ಯಾರೂಪಕ್ಕೆ ತರಲಾಗುವುದು ಎಂದರು. 2024-25ನೇ ಸಾಲಿನ ಬಜೆಟ್ನಲ್ಲಿ 2024ರಿಂದ 29ರ ಅವಧಿಯಲ್ಲಿ 10 ಸಾವಿರ ಕೋಟಿ ಬಂಡವಾಳ ಹೂಡಿ 2 ಲಕ್ಷ ಮಂದಿಗೆ ಉದ್ಯೋಗ ಸೃಷ್ಟಿಸುವುದಾಗಿ ತಿಳಿಸಲಾಗಿದೆ. ಇದಕ್ಕೆ ಪೂರಕವಾಗಿ ಹೊಸ ಜವಳಿ ನೀತಿಯನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ.ನೇಕಾರ ಸನ್ಮಾನ…
ಶಿವಮೊಗ್ಗ : ರಾಜ್ಯದಲ್ಲಿ ಕೆಎಫ್ಡಿಗೆ ಮತ್ತೊಂದು ಬಲಿಯಾಗಿದ್ದು, ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಕಟ್ಟೆಹಕ್ಲು ಗ್ರಾಮದ ಕಿಶೋರ್ (29) ಎಂಬ ಯುವಕ ಮಂಗನ ಕಾಯಿಲೆಗೆ ಬಲಿಯಾಗಿದ್ದಾನೆ. ಕಳೆದ ಹಲವು ದಿನಗಳಿಂದ ಯುವಕ ಕಿಶೋರ್ ಕೆಎಫ್ಡಿ ಕಾಯಿಲೆಯಿಂದ ಬಳಲುತ್ತಿದ್ದ. ಈ ಹಿನ್ನಲೆ ಕಿಶೋರ್ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಚಿಕಿತ್ಸೆ ಫಲಕಾರಿಯಾಗದೆ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಕಿಶೋರ್ ಸಾವನಪ್ಪಿದ್ದಾನೆ. ಕಟ್ಟೆಹಕ್ಲು ಗ್ರಾಮದ ಕಿಶೋರ್ ಕೆಎಫ್ಡಿ ಪಾಸಿಟಿವ್ ಬಂದಿತ್ತು. ಜನವರಿ 21ರಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯುವಕನನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಜನವರಿ 22ಕ್ಕೆ ಕೆಎಫ್ಡಿ ಪಾಸಿಟಿವ್ ವರದಿ ಬಂದಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ಗೆ ರವಾನೆ ಮಾಡಲಾಗಿತ್ತು. ಅಲ್ಲಿಯೂ ಕೂಡ ಚಿಕಿತ್ಸೆ ಫಲಿಸದೆ ಬುಧವಾರ ಬೆಳಗಿನಜಾವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತ ಯುವಕನ ಗ್ರಾಮದಲ್ಲಿ ಇದುವರೆಗೂ ಯಾರಲ್ಲೂ ಸಹ ಕೆಎಫ್ಡಿ ಲಕ್ಷಣಗಳು ಹಾಗೂ ಜ್ವರ ಕಂಡು ಬಂದಿಲ್ಲ. ಆದರೆ, ಇವರಿಗೆ ಹೇಗೆ ಜ್ವರ ಬಂತು ಎಂಬುದು ಇನ್ನೂ ಪತ್ತೆಯಾಗಬೇಕಿದೆ.
ಬೆಂಗಳೂರು : ಮಹಾರಾಷ್ಟ್ರ ಡಿಸಿಎಂ ಅಜೀತ್ ಪವಾರ್ ಅಜಿತ್ ಅವರ ನಿಧನಕ್ಕೆ ಇಂದು ಸದನದಲ್ಲಿ ಸಂತಾಪ ಸೂಚಿಸಲಾಯಿತು. ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಅಜಿತ್ಪವಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಐವರು ಸಹ ಪ್ರಯಾಣಿಕರು ಇಂದಿನ ಬೆಳಗ್ಗೆ ನಡೆದ ವಿಮಾನ ಅಪಘಾತದಲ್ಲಿ ನಿಧನರಾಗಿರುವುದು ಅತ್ಯಂತ ವಿಷಾದಕರ ಸಂಗತಿ ಎಂದು ತಿಳಿಸ ಬಯಸುತ್ತೇನೆ ಎಂದು ಸಂತಾಪ ಸೂಚಿಸಿದರು. ಅಜಿತ್ ಪವಾರ್ ಜುಲೈ 7 1959 ರಂದು ಅಹಮದ್ ನಗರದಲ್ಲಿ ಜನಿಸಿದ್ದು, 1982 ರಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆಯ ಮಂಡಳಿಗೆ ಆಯ್ಕೆಯಾಗುವ ಮೂಲಕ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸಿದರು. ಪುಣೆ ಜಿಲ್ಲಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ 14 ವರ್ಷಗಳ ಕಾಲ ಸೇವೆ ಸಲ್ಲಿಸಿದರು. 1991ರಲ್ಲಿ ಬಾರಾಮತಿ ಕ್ಷೇತ್ರದಿಂದ ಮೊದಲ ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಅವರು ಕೇಂದ್ರ ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ನಂತರ ಭಾರಮಾತಿ ವಿಧಾನ ಪರಿಷತ್ ಕ್ಷೇತ್ರದಿಂದ ಎರಡು ಬಾರಿ ಮಹಾರಾಷ್ಟ್ರ ವಿಧಾನಸಭೆಗೆ…
ಮುಂಬೈ : ಇಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭೀಕರ ವಿಮಾನ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಈ ಕುರಿತು ವಿಮಾನ ರನ್ವೇ ಬಳಿಯೇ ಹಾರುತ್ತಿತ್ತು.ರನ್ವೇ ಸಮೀಪಿಸಲು ಇನ್ನೇನು 100 ಅಡಿ ಇದ್ದಾಗ ಪತನಗೊಂಡು ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರತ್ಯಕ್ಷ ದರ್ಶಿ ಒಬ್ಬರು, ವಿಮಾನ ನೆಲಕ್ಕೆ ಬಿದ್ದ ಕೂಡಲೇ ದೊಡ್ಡ ಸ್ಫೋಟಗೊಂಡಿತು. ನಂತರ 4-5 ಹೆಚ್ಚಿನ ಸ್ಫೋಟಗಳು ಸಂಭವಿಸಿದವು. ವಿಮಾನ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಳ್ಳುವುದನ್ನು ನೋಡಿದ ಕೂಡಲೇ ನಾವು ಸ್ಥಳಕ್ಕೆ ಧಾವಿಸಿ ಪ್ರಯಾಣಿಕರನ್ನು ಹೊರಗೆ ತೆಗೆಯಲು ಪ್ರಯತ್ನಪಟ್ಟೆವು. ಆದರೆ ಬೆಂಕಿಯ ಜ್ವಾಲೆಯಿಂದ ನಮಗೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು. ಅಜಿತ್ ಪವಾರ್ ಇಂದು ಬೆಳಿಗ್ಗೆ 8:10ಕ್ಕೆ ಮುಂಬೈನಿಂದ ತಮ್ಮ ಸ್ವಕ್ಷೇತ್ರ ಬಾರಾಮತಿಗೆ ಖಾಸಗಿ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. 8:45ರ ವೇಳೆಗೆ ಅವರ ವಿಮಾನ ಬಾರಾಮತಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಲ್ಯಾಂಡ್ ಆಗುವ ಕೆಲ ಸೆಕೆಂಡ್ ಮೊದಲು ವಿಮಾನ ಪತನವಾಗಿದೆ. ಅಜಿತ್ ವಾರ್ ಜೊತೆಗೆ ಅವರ ಆಪ್ತ ಸಹಾಯಕ, ಇಬ್ಬರು ಪೈಲೆಟ್…
ಬೆಂಗಳೂರು : ಇತ್ತೀಚಿಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಬ್ಯಾಂಕ್ ಎಟಿಎಂ ಮನೆಗಳ್ಳತನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ಮತ್ತೊಂದು ದರೋಡೆಯಾಗಿದ್ದು ಕೇವಲ 20 ದಿನಗಳ ಹಿಂದೆ ಮನೆ ಕೆಲಸಕ್ಕೆ ಎಂದು ಸೇರಿದ ನೇಪಾಳ ಮೂಲದ ದಂಪತಿ ಮನೆಯಲ್ಲಿದ್ದ 18 ಕೋಟಿ ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾರೆ. ಬೆಂಗಳೂರಿನ ಮಾರತಹಳ್ಳಿಯಲ್ಲಿರುವ ಉದ್ಯಮಿ ಶಿವಕುಮಾರ್ ಎಂಬುವರ ಮನೆಯಲ್ಲಿ ಜನವರಿ 25ರಂದು ಹಾಡಹಗಲೇ ಘಟನೆ ನಡೆದಿದೆ. ನೇಪಾಳ ಮೂಲದ ದಿನೇಶ್ (32) ಹಾಗೂ ಕಮಲಾ (25) ಎಂಬ ದಂಪತಿ ಕೃತ್ಯವೆಸಗಿ ಪರಾರಿಯಾಗಿರುವ ಆರೋಪಿಗಳು ಎಂದು ತಿಳಿದುಬಂದಿದೆ. ಶಿವಕುಮಾರ್ ಅವರ ಮನೆಯ ಹೌಸ್ ಕೀಪಿಂಗ್ ಹಾಗೂ ಸಣ್ಣಪುಟ್ಟ ಕೆಲಸಗಳಿಗಾಗಿ ದಿನೇಶ್ ಹಾಗೂ ಕಮಲಾ ದಂಪತಿಯನ್ನು ಕೇವಲ 20 ದಿನಗಳ ಹಿಂದಷ್ಟೆ ಸೇರಿಸಿಕೊಳ್ಳಲಾಗಿತ್ತು. ಜನವರಿ 25ರಂದು ಸಂಬಂಧಿಕರೊಬ್ಬರ ಮನೆಯಲ್ಲಿ ಭೂಮಿ ಪೂಜೆ ಇದ್ದುದರಿಂದ ಶಿವಕುಮಾರ್ ಅವರ ಕುಟುಂಬ ಬೆಳಗ್ಗೆಯೇ ಹೆಚ್.ಕ್ರಾಸ್ಗೆ ತೆರಳಿತ್ತು. ಆ ಸಂದರ್ಭ ಬಳಸಿಕೊಂಡ ಆರೋಪಿಗಳು ನೆಲಮಹಡಿ, ಮೊದಲ ಮಹಡಿಯಲ್ಲಿದ್ದ ಬೆಡ್ ರೂಮ್…
ನವದೆಹಲಿ : ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಡಿಸಿಎಂ ಅಜಿತ್ ಕುಮಾರ್ ಸಾವನಪ್ಪಿದ್ದು, ಇವರ ಈ ಒಂದು ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ನಲ್ಲಿ ಭೀಕರ ವಿಮಾನ ಅಪಘಾತದಿಂದ ನಾನು ದುಃಖಿತನಾಗಿದ್ದೇನೆ. ಅಜಿತ್ ಪವಾರ್ ಜನ ಸೇವೆ ಸಲ್ಲಿಸುವ ಸಲ್ಲಿಸುವ ಕಠಿಣ ಪರಿಶ್ರಮಿ ಬಡವರ ಸಬಲೀಕರಣದಲ್ಲಿ ಅವರ ಉತ್ಸಾಹ ಗಮನಾರ್ಹವಾಗಿದೆ. ಅಜಿತ್ ಪವಾರ್ ಅಕಾಲಿಕ ನಿಧನ ತುಂಬಾ ಆಘಾತಕಾರಿಯಾಗಿದೆ. ಅವರ ಕುಟುಂಬ ಅಭಿಮಾನಿಗಳಿಗೆ ಸಂತಪ್ಪ ಸೂಚಿಸುತ್ತೇನೆ ಮೃತರ ಕುಟುಂಬಗಳಿಗೆ ದೇವರು ಶಕ್ತಿ ಧೈರ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಕ್ವೀಟ್ ನಲ್ಲಿ ಸಂತಾಪ ಸೂಚಿಸಿದ್ದಾರೆ. https://twitter.com/narendramodi/status/2016378092802187363?t=I4jkHY2yH2RHneGP7DhldQ&s=19 ಇನ್ನೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ಅಜಿತ್ ಪವರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು…
ಬೆಂಗಳೂರು : ಕಾಲ್ತುಳಿತ ದುರಂತ ನಡೆದ ಬಳಿಕ ಬೆಂಗಳೂರಿನಲ್ಲಿ ಇದುವರೆಗೂ ಯಾವುದೇ ದೇಶೀಯ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆದಿಲ್ಲ. ಇದೀಗ ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಆದರೆ ಆರ್ಸಿಬಿ ಮ್ಯಾನೇಜ್ಮೆಂಟ್ ಇದೀಗ ಬೆಂಗಳೂರಲ್ಲಿ ಉದ್ಘಾಟನಾ ಪಂದ್ಯ ನಡೆಸಲು ಹಿಂದೇಟು ಹಾಕುತ್ತಿದೆ. ಆದರೆ, ಆರ್ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಐಪಿಎಲ್ (IPL) ಪಂದ್ಯ ನೋಡೋ ಆಸೆಯಲ್ಲಿರುವ ಆರ್ಸಿಬಿ ಅಭಿಮಾನಿಗಳ ಕನಸು ನನಸಾಗುವ ಸಣ್ಣ ಸೂಚನೆ ಸಿಕ್ಕಿದೆ. ಆರ್ಸಿಬಿ ಮ್ಯಾನೇಜ್ಮೆಂಟ್ನಿಂದಲೇ ಅಂಥದೊಂದು ಸುಳಿವು ಸಿಕ್ಕಿದೆ. ಇಂದು ಅಥವಾ ನಾಳೆ ಬೆಂಗಳೂರಿನಲ್ಲಿ ಆರ್ಸಿಬಿ (RCB) ಪಂದ್ಯಗಳನ್ನು ಆಡುತ್ತಾ, ಅಥವಾ ಬೇರೆಡೆಗೆ ಹೋಗುತ್ತಾ ಅನ್ನೋ ಅಧಿಕೃತ ವಿಚಾರ ಹೊರಬೀಳಲಿದೆ. ಹೌದು, ಕೆಎಸ್ಸಿಎ ಕಳೆದ ವಾರವಷ್ಟೇ ಬೆಂಗಳೂರಿನಲ್ಲಿ ಆಡುವ ನಿರ್ಧಾರ ಆರ್ಸಿಬಿ ಮ್ಯಾನೇಜ್ಮೆಂಟ್ ನಿರ್ಧಾರ ಮಾಡಲಿದೆ, ನಮ್ಮದೇನು ಇಲ್ಲ ಅನ್ನೋ ಮಾತನ್ನ ಹೇಳಿ ಆರ್ಸಿಬಿ ಕಡೆ ಬೊಟ್ಟು ಮಾಡಿತ್ತು.…
ಬೆಂಗಳೂರು : ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟುಗಳಂಥ ಚಟುವಟಿಕೆಗಳಲ್ಲಿ ಎಲ್ಲ ಪಕ್ಷಗಳ ಪ್ರಭಾವಿಗಳೂ ಶಾಮೀಲಾಗಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದರು. ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಅಕ್ರಮ ಚಟುವಟಿಕೆಗಳಲ್ಲಿ ಯಾವ ನಾಯಕರು ಭಾಗಿ ಆಗಿದ್ದಾರೆ. ಯಾವ ನಾಯಕರ ನೇತೃತ್ವದಲ್ಲಿ ನಡೆಯುತ್ತಿದೆ ಅಂತ ವಿವರಣೆ ಕೊಡಲ್ಲ. ಇದರ ಹಿಂದೆ ದೊಡ್ಡವರೇ ಇದ್ದಾರೆ. ಎಲ್ಲ ಪಕ್ಷದವರೂ ಇದರಲ್ಲಿ ಇದ್ದಾರೆ. ಹಾಗಾಗಿ ಇದರ ಬಗ್ಗೆ ನಾನು ವಿವರಣೆ ಕೊಡುವುದಿಲ್ಲ ಎಂದರು. ಇದಕ್ಕೂ ಮುಂಚೆ ಮಾತನಾಡಿದ ಶಾಸಕಿ ಕರೆಮ್ಮ ನಾಯಕ್, ಅಕ್ರಮ ಮರಳು ದಂಧೆ, ಮಟ್ಕಾ, ಜೂಜು ಚಟುವಟಿಕೆ ಗಳಿಗೆ ಕಡಿವಾಣ ಹಾಕಿ. ರಾಯಚೂರು ಜಿಲ್ಲೆಯಾದ್ಯಂತ ಇಂತಹ ಪ್ರಕರಣಗಳು ಹೆಚ್ಚಾಗಿವೆ. ಕಳ್ಳತನ ಪ್ರಕರಣಗಳು ಕೂಡ ಜಾಸ್ತಿ ಆಗಿವೆ. ನಾನು ಶಾಸಕಿ ಅದ ಮೇಲೆ ನನ್ನ ಕ್ಷೇತ್ರ ದಲ್ಲಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಮುಂದಾಗಿದ್ದೆ. ಆದರೆ ಸದ್ಯ ಆಗ್ತಾ ಇಲ್ಲ. ಗೃಹ…














