Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬ ಭೀಕರವಾಗಿ ಗುಂಡಿನ ದಾಳಿ ನಡೆಸಿದ್ದಾನೆ. ಅಮೇರಿಕಾದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್ನಲ್ಲಿ ಈ ಒಂದು ಗುಂಡಿನ ದಾಳಿ ನಡೆದಿದ್ದು, ತಕ್ಷಣ ಡೊನಾಲ್ಡ್ ಟ್ರಂಪ್ ಅವರನ್ನು ಭದ್ರತಾ ಸಿಬ್ಬಂದಿಗಳು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಅದೃಷ್ಟವಶತ್ ಟ್ರಂಪ್ಪ್ರಾಣಪಾಯದಿಂದ ಪಾರಾಗಿದ್ದಾರೆ. ವೈಟ್ ಹೌಸ್ ಪ್ರತಿನಿಧಿಗಳ ಔತಣ ಕೂಟದಲ್ಲಿ ಈ ಒಂದು ಗುಂಡಿನ ದಾಳಿ ನಡೆದಿದ್ದು, ಟ್ರಂಪ್ ಗುರಿಯಾಗಿಸಿಯೇ ಈ ಒಂದು ಗುಂಡಿನ ದಾಳಿ ನಡೆದಿದ್ದ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಕಾರ್ಯಕ್ರಮದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಕೂಡಲೇ ಭದ್ರತಾ ಸಿಬ್ಬಂದಿಗಳು ದಾಳಿಕೋರನನ್ನು ಅರೆಸ್ಟ್ ಮಾಡಿದ್ದಾರೆ. ಸೀಕ್ರೆಟ್ ಸರ್ವಿಸಸ್ ಸಿಬ್ಬಂದಿಗಳು ಗುಂಡು ಹಾರಿಸಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಈ ಒಂದು ಘಟನೆ ಕುರಿತು ಡೊನಾಲ್ಡ್ ಟ್ರಂಪ್ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ನವದೆಹಲಿ : ಇರಾನ್ ಅಮೇರಿಕಾ ಯುದ್ಧದ ನಡುವೆ ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಶೂಟ್ ಔಟ್ ಆಗಿದೆ. ಅಮೆರಿಕದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್ ನಲ್ಲಿ ಗುಂಡಿನ ದಾಳಿ ನಡೆದಿದೆ. ವೈಟ್ ಹೌಸ್ ಪ್ರತಿನಿಧಿಗಳ ಔತಣಕೂಟದಲ್ಲಿ ಈ ಒಂದು ಗುಂಡಿನ ದಾಳಿ ನಡೆದಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಕ್ಷಣ ಟ್ರಂಪ್ ಅವರನ್ನು ಸಿಬ್ಬಂದಿಗಳು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯ ವೇಳೆ ವೇದಿಕೆ ಮೇಲೆ ರೊನಾಲ್ಡ್ ಟ್ರಂಪ್ ಹಾಗು ಜೆಡಿ ವ್ಯಾನ್ಸ್ ಇದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಇನ್ನು ಗುಂಡಿನ ದಾಳಿಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದು ಇದು ತುಂಬಾ ಪ್ರಕ್ಷುಬ್ದ ಸಂಜೆಯಾಗಿತ್ತು ಆದರೆ ರಹಸ್ಯ ಸಂಸ್ಥೆಗಳು ಉತ್ತಮವಾಗಿ ಕೆಲಸ ಮಾಡಿವೆ ಎಂದು ಡೊನಾಲ್ಡ್ ಟ್ರಂಪ್ ಸಾಮಾಜಿಕ…
BREAKING : ಬೆಂಗಳೂರಲ್ಲಿ ಅನೈತಿಕ ಸಂಬಂಧಕ್ಕೆ ಬಿತ್ತು ಹೆಣ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಕೊಲೆ!
ಬೆಂಗಳೂರು : ತಮ್ಮ ಸ್ನೇಹಿತೆ ವಿಚಾರವಾಗಿ ಇಬ್ಬರು ಗೆಳೆಯರ ನಡುವಿನ ಕಿತ್ತಾಟವು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಟಾಲಮ್ಮ ಲೇಔಟ್ ನಿವಾಸಿ ರಾಮಚಂದ್ರ (46) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ ಕೂಲಿ ಕಾರ್ಮಿಕ ಹರೀಶ್ನನ್ನು ಬಂಧಿಸಲಾಗಿದೆ. ತಮ್ಮ ಮನೆ ಹತ್ತಿರದಲ್ಲಿರುವ ಸ್ನೇಹಿತೆ ಮನೆಗೆ ಶುಕ್ರವಾರ ರಾತ್ರಿ ರಾಮಚಂದ್ರ ತೆರಳಿದ್ದಾಗ ಈ ಹತ್ಯೆ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ರಾಮಚಂದ್ರ ಮೂಲತಃ ತಮಿಳುನಾಡು ರಾಜ್ಯದವನಾಗಿದ್ದು, ಹಲವು ವರ್ಷಗಳಿಂದ ಕಾಡುಗೋಡಿ ಹತ್ತಿರದ ಪಟಾಲಮ್ಮ ಲೇಔಟ್ನಲ್ಲಿ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳ ಜತೆ ವಾಸವಾಗಿದ್ದ. ಈರುಳ್ಳಿ ಮಾರಾಟ ಮಳಿಗೆಯಲ್ಲಿ ಲಾರಿ ಚಾಲಕನಾಗಿದ್ದ ಆತನಿಗೆ ಅದೇ ಮಳಿಗೆಯ ಕೆಲಸ ಮಾಡುತ್ತಿದ್ದ ಮಹಿಳೆ ಪರಿಚಯವಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ತೊರೆದು ಆಕೆ ಏಕಾಂಗಿಯಾಗಿ ವಾಸವಾಗಿದ್ದಳು. ತಮಿಳುನಾಡು ಮೂಲದ ರಾಮಚಂದ್ರ ರೆಡ್ಡಿ, ವ್ಯಾಪಾರಕ್ಕೆಂದು ಬೆಂಗಳೂರಿಗೆ ಬರುತ್ತಿದ್ದ. ಆ ಸಂದರ್ಭದಲ್ಲಿ ರಾಮಚಂದ್ರ ರೆಡ್ಡಿಗೆ ಮಹಿಳೆಯೊಬ್ಬರ ಪರಿಚಯವಾಗಿದ್ದು, ಬಳಿಕ ಇಬ್ಬರ…
ವಾಷಿಂಗ್ಟನ್ : ಇರಾನ್ ಅಮೇರಿಕಾ ಯುದ್ಧದ ನಡುವೆ ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಶೂಟ್ ಔಟ್ ಆಗಿದೆ. ಅಮೆರಿಕದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್ ನಲ್ಲಿ ಗುಂಡಿನ ದಾಳಿ ನಡೆದಿದೆ. ವೈಟ್ ಹೌಸ್ ಪ್ರತಿನಿಧಿಗಳ ಔತಣಕೂಟದಲ್ಲಿ ಈ ಒಂದು ಗುಂಡಿನ ದಾಳಿ ನಡೆದಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಕ್ಷಣ ಟ್ರಂಪ್ ಅವರನ್ನು ಸುರಕ್ಷಿತ ಸಿಬ್ಬಂದಿಗಳು ಕರೆದುಕೊಂಡು ಹೋಗಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯ ವೇಳೆ ವೇದಿಕೆ ಮೇಲೆ ರೊನಾಲ್ಡ್ ಟ್ರಂಪ್ ಇದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಉತ್ತರಪ್ರದೇಶ : ಉತ್ತರ ಪ್ರದೇಶದಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಬರ್ತಡೆ ಪಾರ್ಟಿಯಲ್ಲಿ ಕೇಕ್ ವಿಚಾರಕ್ಕೆ ಜಗಳ ಆಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೇಕ್ ವಿಚಾರವಾಗಿ ನಡೆದ ಜಗಳದಲ್ಲಿ ಗುಂಡಿನ ದಾಳಿ ನಡೆದಿದ್ದು 3 ಸಾವನಪ್ಪಿದ್ದಾರೆ. ಉತ್ತರಪ್ರದೇಶದ ಬುಲೆಂದ ಶಹರ್ನ ಖುರ್ಜಾದಲ್ಲಿ ಈ ಒಂದು ಘಟನೆ ನಡೆದಿದೆ. ಬರ್ತಡೆ ಪಾರ್ಟಿಯಲ್ಲಿ ಮುಖಕ್ಕೆ ಕೇಕ್ ಬಳಿಯುವ ವಿಚಾರಕ್ಕೆ ಗಲಾಟೆ ಆಗಿದೆ ಈ ವೇಳೆ ಗುಂಡಿನ ದಾಳಿ ನಡೆಸಿ ಮೂರು ಯುವಕರು ಸಾವನಪ್ಪಿದ್ದಾರೆ. ಉತ್ತರ ಪ್ರದೇಶದಲ್ಲಿ ಸಂಭ್ರಮದ ಹುಟ್ಟುಹಬ್ಬದ ಪಾರ್ಟಿಯು ದುರಂತದಲ್ಲಿ ಅಂತ್ಯಗೊಂಡಿದೆ. ಕೇವಲ ಕೇಕ್ ವಿಚಾರವಾಗಿ ಸ್ನೇಹಿತರ ನಡುವೆ ಉಂಟಾದ ಸಣ್ಣ ಜಗಳ ವಿಕೋಪಕ್ಕೆ ಹೋಗಿ, ಗುಂಡಿನ ದಾಳಿ ನಡೆದಿದೆ. ಈ ಭೀಕರ ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಮೈಸೂರು : ಮೈಸೂರಲ್ಲಿ ಘೋರ ಘಟನೆ ಒಂದು ಸಂಭವಿಸಿದ್ದು ಕಂಪಲಾಪುರ ಗ್ರಾಮದಲ್ಲಿ ಹಾವು ಕಡಿದು 14 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಹಸುವಿಗೆ ಹುಲ್ಲು ಹಾಕುವಾಗ ಬಾಲಕ ವೆಂಕಟೇಶ್ (14) ಗೆ ಹಾವು ಕಡಿದಿತ್ತು. ಬಲಗೈ ಬೆರಳಿಗೆ ಹಾವು ಕಚ್ಚಿದ್ದರು ಕೂಡ ಮನೆಯವರಿಗೆ ಬಾಲಕ ತಿಳಿಸಿಲ್ಲ. ಅಂಗಡಿಯಿಂದ ಪ್ಲಾಸ್ಟರ್ ತಂದು ವೆಂಕಟೇಶ್ ಬೆರಳಿಗೆ ಸುತ್ತಿಕೊಂಡಿದ್ದ. ಬಳಿಕ ಅಸ್ವಸ್ಥಗೊಂಡು ಬಾಲಕ ವೆಂಕಟೇಶ್ ಪ್ರಜ್ಞೆತಪ್ಪಿ ಬಿದ್ದಿದ್ದಾನೆ. ತಕ್ಷಣ ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ವೆಂಕಟೇಶನನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ವೆಂಕಟೇಶ ಮೃತಪಟ್ಟಿದ್ದಾನೆ. ಘಟನೆ ಕುರಿತಂತೆ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಐಪಿಎಲ್ನಲ್ಲಿ ಒಂದೇ ದಿನ ಹತ್ತಿರತ್ತಿರ ಒಂದು ಸಾವಿರ ರನ್! ಟಿ20 ಕ್ರಿಕೆಟ್ನಲ್ಲೀಗ ಯಾವುದೂ ಅಸಾಧ್ಯವಲ್ಲ, ಎಷ್ಟು ದೊಡ್ಡ ಮೊತ್ತವಾದರೂ ತಂಡಗಳು ಯಶಸ್ವಿಯಾಗಿ ಬೆನ್ನತ್ತಲಿದೆ ಎನ್ನುವುದಕ್ಕೆ ಶನಿವಾರ ಐಪಿಎಲ್ನಲ್ಲಿ ನಡೆದ 2 ಪಂದ್ಯಗಳೇ ಸಾಕ್ಷಿ. ಒಂದೇ ದಿನ ಬರೋಬ್ಬರಿ 986 ರನ್ ದಾಖಲಾಯಿತು. ಐಪಿಎಲ್ ನಲ್ಲಿ ಇದು ಹೊಸ ದಾಖಲೆಯಾಗಿದೆ. ಹೌದು ಶನಿವಾರದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 265 ರನ್ ಗುರಿಯನ್ನು ಪಂಜಾಬ್ ಕಿಂಗ್ಸ್ ಯಶಸ್ವಿಯಾಗಿ ಬೆನ್ನತ್ತಿ, ಟಿ20 ಕ್ರಿಕೆಟ್ನಲ್ಲೇ ಗರಿಷ್ಠ ರನ್ ಚೇಸ್ ದಾಖಲೆ ಬರೆಯಿತು. ಇನ್ನು 2ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ನೀಡಿದ 229 ರನ್ ಗುರಿಯನ್ನು ಸನ್ ರೈಸೆರ್ಸ್, ಬೆನ್ನತ್ತಿ, ಐಪಿಎಲ್ನಲ್ಲಿ ಗರಿಷ್ಠ ರನ್ ಚೇಸ್ ಮಾಡಿದ ತಂಡಗಳ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯಿತು. 2024ರ ಏ.27ರಂದು ಡೆಲ್ಲಿ ಹಾಗೂ ಮುಂಬೈ ಪಂದ್ಯದಲ್ಲಿ 504, ಲಖನೌ-ರಾಜಸ್ಥಾನ ಪಂದ್ಯದಲ್ಲಿ 392 ಸೇರಿ ಒಂದೇ ದಿನ 896 ರನ್ ದಾಖಲಾಗಿತ್ತು. ಇದು ಐಪಿಎಲ್ ನಲ್ಲಿ ಒಂದೇ…
ಹಾವೇರಿ : ಹಾವೇರಿಯಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ಇಂದ ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಪಿಂಕಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಒಂದು ಕೋಟಿ ಮೌಲ್ಯದ ಔಷಧ ಮತ್ತು ವೈದ್ಯಕೀಯ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ. ಆದರೆ ಅದೃಷ್ಟವಶಾತ್ ಯಾವುದೇ ರೋಗಿಗಳಿಗೆ ತೊಂದರೆ ಆಗಿಲ್ಲ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರಕ್ಕೆ ಅಪಮಾನ ಮಾಡಿದ ಪ್ರಕರಣದಲ್ಲಿ ಬಾಲಿ ವುಡ್ ನಟ ರಣವೀರ್ಸಿಂಗ್ ಬೇಷರತ್ ಕ್ಷಮೆಯಾಚಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ಶನಿವಾರ ರದ್ದುಗೊಳಿಸಿದೆ. ನಟನಿಗೆ ನಾಲ್ಕು ವಾರಗಳಲ್ಲಿ ಚಾವುಂಡಿ ದೈವ ಸನ್ನಿದಾನಕ್ಕೆ ಭೇಟಿ ನೀಡುವಂತೆ ಸೂಚನೆ ನೀಡಿದನ್ಯಾಯ ಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಲೇವಾರಿ ಮಾಡಿತು. ಗೋವಾದಲ್ಲಿ ನಡೆದಿದ್ದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (ಐಎಫ್ಎಫ್ಐ) ಚಾವುಂಡಿ ದೈವಕ್ಕೆ ಅಪಮಾನ ಮಾಡಿದ ಆರೋಪ ಸಂಬಂಧ ಖಾಸಗಿ ದೂರು, ಬೆಂಗಳೂರಿನ ಹೈಗೌಂಡ್ಸ್ ಠಾಣೆ ಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಪಡಿಸುವಂತೆ ಕೋರಿ ರಣವೀರ್ ಸಿಂಗ್ ಅರ್ಜಿ ಸಲ್ಲಿಸಿದ್ದರು. ಚಾವುಂಡಿ ಬೆಟ್ಟಕ್ಕೆ ಹೋಗಲು ರಣವೀರ್ಗೆ ಭದ್ರತಾ ಸಮಸ್ಯೆ ಇದೆ ಎಂದು ನಟನ ಪರ ವಕೀ ಲರುಹೇಳಿದಾಗ, ದೂರುದಾರರ ಪರ ವಕೀಲ ಸಿ.ಜಿ ಮಲೆಯಾಳ್ ‘ಪೊಲೀಸರು, ರಕ್ಷಣೆ ನೀಡುತ್ತಾರೆ’ ಎಂದು ಸಮರ್ಥನೆ ನೀಡಿದರು. ಮಧ್ಯಪ್ರವೇಶಿಸಿದ ನ್ಯಾ.ನಾಗಪ್ರಸನ್ನ, ‘ಪೊಲೀಸರು ಲಿವ್ -ಇನ್, ವೈವಾಹಿಕ ಸಂಬಂಧಿತ ಪ್ರಕಣಗಳ ಹಿಂದೆ ಬಿದ್ದಿದ್ದಾರೆ, ನೈಜ…
ಬೆಂಗಳೂರು : ರಾಜ್ಯವು ಹಲವು ವರ್ಷಗಳ ನಂತರ ಹೀಟ್ ವೇವ್ ಬಿಸಿ ಅನುಭವಿಸುತ್ತಿದೆ. ಇದರ ಪರಿಣಾಮ ಕೊಳವೆಬಾವಿ, ಅಣೆಕಟ್ಟುಗಳಲ್ಲಿ ನೀರು ಕಡಿಮೆಯಾಗಿದೆ. ಮುಂದಿನ ಎರಡು ತಿಂಗಳಲ್ಲಿ ರಾಜ್ಯ ನೀರಿನ ಸಮಸ್ಯೆ ಎದುರಿಸ ಬಹುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಸಿದ್ದಾರೆ. ಅಲ್ಲದೆ ಪರಿಹಾರ ನೀಡಲು ಶಾಸಕರ ಅಧ್ಯ ಕತೆಯ ಟಾಸ್ಟ್ ಫೋರ್ಸ್ ಕೆಲಸ ಎಂದು ತಿಳಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಲವು ವರ್ಷಗಳ ನಂತರ ಹೀಟ್ ವೇವ್ನ ಅನುಭವ ಆಗುತ್ತಿದೆ. ಇದರಿಂದ ರಕ್ಷಣೆಗಾಗಿ ಆರೋಗ್ಯ ಇಲಾಖೆಯಿಂದ ಎಸ್ ಒಪಿ ಪ್ರಕಟಿಸಲಾಗಿದೆ. ಅದರ ಜತೆಗೆ ಕೊಳವೆಬಾವಿ, ಅಣೆಕಟ್ಟುಗಳಲ್ಲಿ ನೀರು ಕಡಿಮೆಯಾಗುತ್ತಿದೆ. ಮುಂದಿನ ಎರಡು ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು. ಅದಕ್ಕಾಗಿ ಮುಖ್ಯಮಂತ್ರಿ ಸಿದ್ದರಾ ಮಯ್ಯ ಅವರು ಈಗಾಗಲೇ ಸಭೆ ನಡೆಸಿದ್ದಾರೆ. ನೀರಿನ ಸಮಸ್ಯೆ ಎದುರಾಗದಂತೆ ಏನೆಲ್ಲ ಕ್ರಮ ಕ್ರಮ ಕೈಗೊಳ್ಳಬೇಕು ಎಂಬ ಕುರಿತು ಸೂಚನೆ ನೀಡಿದ್ದಾರೆ ಎಂದರು. ಹವಾಮಾನ ಏರುಪೇರಿನಿಂದ ಸಮಸ್ಯೆ ಎದುರಾಗು ತ್ತದೆ. ಸಮಸ್ಯೆ ಎದುರಿಸಲು ಹಣದ ಕೊರತೆಯಿಲ್ಲ.…













