Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ, ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಒಂದರ ಹಿಂಭಾಗ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ನಿಶಾದ್ ಹಾಗೂ ಆದೇಶ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 10.5 ಲಕ್ಷದ ರೂ. ಮೌಲ್ಯದ 21 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರೂ ಹಾಸ್ಟೆಲ್ ಹಿಂಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ, ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಹೊರ ರಾಜ್ಯಗಳಿಂದ ಕಡಿಮೆ ಬೆಲೆಗೆ ಗಾಂಜಾ ತಂದು ಇಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಆರೋಪಿಗಳ ವಿರುದ್ಧ ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆ ಅಡಿ ಕೇಸ್ ದಾಖಲಾಗಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.
ಬೆಂಗಳೂರು : ನಾಳೆ ಮಧ್ಯಾಹ್ನ 3:00ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಆಗಲಿದೆ. https://karresults.nic.in ವೆಬ್ಸೈಟ್ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೆ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ಗೆ ಎಸ್ಎಂಎಸ್ ಸಹ ಬರಲಿದೆ ಮೊಬೈಲ್ ಗೆ ಎಸ್ಎಂಎಸ್ ಮೂಲಕ ಫಲಿತಾಂಶವನ್ನು ಮಂಡಳಿ ರವಾನೆ ಮಾಡಲಿದೆ ಬಳಿಕ ಸಂಜೆ 6:15ಕ್ಕೆ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಂಜೆ ವೇಳೆಗೆ ಫಲಿತಾಂಶ ಲಭ್ಯ ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವುದರಿಂದ, ಮತದಾನ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಸಂಜೆ ವೇಳೆಗೆ ಸಚಿವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಫಲಿತಾಂಶದ ಸಂಪೂರ್ಣ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEAB) ಈಗಾಗಲೇ ಅಂಕಪಟ್ಟಿಗಳನ್ನು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡುವ ಎಲ್ಲಾ ತಾಂತ್ರಿಕ ಸಿದ್ಧತೆಗಳನ್ನು ಪೂರೈಸಿದೆ. ಪರೀಕ್ಷೆಯ ಹಿನ್ನಲೆ ಪರೀಕ್ಷೆ ನಡೆದ ದಿನಾಂಕ: ಫೆಬ್ರವರಿ 28 ರಿಂದ ಮಾರ್ಚ್ 17, 2026. ಪರೀಕ್ಷಾ ಕೇಂದ್ರಗಳು: ರಾಜ್ಯಾದ್ಯಂತ ಒಟ್ಟು 1,217 ಕೇಂದ್ರಗಳಲ್ಲಿ ಸುಗಮವಾಗಿ…
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಚಿಕ್ಕರಂಗಶೆಟ್ಟಿ ದೊಡ್ಡಿ ಹೊರ ವಲಯದ ಹಾವಿನ ಮೂಲೆಯಲ್ಲಿ ಕಾಡಗಿಚ್ಚು ಹಬ್ಬಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹಾವಿನ ಮೂಲೆಯಲ್ಲಿ ಈ ಒಂದು ಅಗ್ನಿವಗಡ ಸಂಭವಿಸಿದೆ ಸುಮಾರು 50ರಿಂದ 60 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ನಿಯಂತ್ರಣಕ್ಕೆ ಸಿಗದೆ ಬೆಂಕಿಯ ಕೆನ್ನಾಲಿಗೆ ಕ್ಷಣ ಕ್ಷಣಕ್ಕು ಅರಣ್ಯಕ್ಕೆ ವ್ಯಾಪಿಸುತ್ತಿದೆ.
ನವದೆಹಲಿ : ಬಿಜೆಪಿ ಆರ್ಎಸ್ಎಸ್ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದದ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದು, ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಚಿಲ್ಲರೆತನದಿಂದ ಕೂಡಿದೆ ಎಂದು ದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ಕಾಲೇಜು ದಿನಗಳಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಗಮನಿಸಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಎಂದಿಗೂ ಅಸಂಬದ್ಧವಾಗಿ ಮಾತನಾಡುತ್ತಿರಲಿಲ್ಲ. ಖರ್ಗೆ ತಮ್ಮ ಸ್ಥಾನದ ಮಹತ್ವವನ್ನು ಅರಿತುಕೊಳ್ಳಬೇಕು, ರಾಹುಲ್ ಗಾಂಧಿ ಸಾಂಗತ್ಯ ಹೆಚ್ಚಾಗಿರುವ ಪರಿಣಾಮ ಹೀಗೆ ಮಾತನಾಡಿದ್ದಾರೆ ಎಂದು ಕಿಡಿ ಕಾರಿದರು. ರಾಹುಲ್ ಸಹವಾಸವನ್ನು ಕರೆಗೆ ಬಿಟ್ಟರೆ ಎಲ್ಲವೂ ಸರಿಯಾಗುತ್ತದೆ ಗುಜರಾತ್ ರಾಜ್ಯದ ಜನರು ಅವಿದ್ಯಾವಂತರು ಎಂದು ಹೇಳಿದ್ದಾರೆ ಹಾಗಾದರೆ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಜನರು ದಡ್ಡರೆ? ಉತ್ತರ ಪ್ರದೇಶ ಬಿಹಾರ ಅಸ್ಸಾಂ ರಾಜ್ಯಗಳ ಜನರು ದಡ್ಡರೆ? ಕಾಂಗ್ರೆಸ್ ಗೆ ಮತ ಹಾಕಿಲ್ಲ ಅಂದ ತಕ್ಷಣ ಅವಮಾನ ಮಾಡಬಾರದು ಎಂದು ಪ್ರಹಲಾದ ಜೋಶಿ ತಿಳಿಸಿದರು
BREAKING : ಬೆಂಗಳೂರಲ್ಲಿ ಪೇಯ್ಡ್ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಗಳಿಗೆ ಹೊತ್ತಿಕೊಂಡಿ ಬೆಂಕಿ : ತಪ್ಪಿದ ಭಾರಿ ಅನಾಹುತ!
ಬೆಂಗಳೂರು : ಪೇಯ್ಡ್ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೆಂಗಳೂರಿನ ಸುಮನಹಳ್ಳಿ ಬ್ರಿಡ್ಜ್ ಬಳಿ ಈ ಒಂದು ಘಟನೆ ನಡೆದಿದೆ. ಪೈಯ್ಡ್ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ನಿಲ್ಲಿಸಿ ಸವಾರರು ತೆರಳಿದ್ದರು. ಈ ವೇಳೆ ಏಕಾಏಕಿ ಅಲ್ಲಿ ನಿಲ್ಲಿಸಿದ್ದ ಬೈಕ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ 4-5 ಬೈಕುಗಳಿಗೆ ಬೆಂಕಿಯ ಕೆನಾಲಿಗೆ ಆವರಿಸಿದೆ. ತಕ್ಷಣ ಸ್ಥಳೀಯರು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬೆಂಕಿಯನ್ನು ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿದ್ದಾರೆ. ಅಕ್ಕ ಪಕ್ಕದ ಬೈಕುಗಳನ್ನು ಸಾರ್ವಜನಿಕರು ತಕ್ಷಣ ಬೇರೆ ಕಡೆಗೆ ಸ್ಥಳಾಂತರಿಸಿದ್ದಾರೆ ಆಗಬೇಕಾಗಿದ್ದ ಬಾರಿ ಅನಾಹುತ ಒಂದು ಸ್ಥಳೀಯರು ತಪ್ಪಿಸಿದ್ದಾರೆ.
ಬೆಂಗಳೂರು : ಕೇರಳ ವಿಧಾನಸಭಾ ಚುನಾವಣಾ ಪ್ರಚಾರ ಭಾಷಣದಲ್ಲಿ ಗುಜರಾತಿಗಳು ಅನಕ್ಷರಸ್ಥರು ಎಂಬ ತಮ್ಮ ಹೇಳಿಕೆಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಕಳೆದ ಏಪ್ರಿಲ್ 5, 2026 ರಂದು ಕೇರಳದ ಇಡುಕ್ಕಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಾ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ಇತ್ತೀಚೆಗೆ ಕೇರಳದಲ್ಲಿ ನಡೆದ ಚುನಾವಣಾ ಭಾಷಣದಲ್ಲಿ ನಾನು ಮಾಡಿದ ಕೆಲವು ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ಅರ್ಥೈಸಲಾಗಿದೆ. ಹೀಗಿದ್ದರೂ ಈ ಹೇಳಿಕೆಗೆ ನನ್ನ ಪ್ರಾಮಾಣಿಕ ವಿಷಾದವನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ. ಗುಜರಾತ್ ಜನರ ಬಗ್ಗೆ ನನಗೆ ಯಾವಾಗಲೂ ಗೌರವವಿದೆ ಮತ್ತು ಮುಂದೆಯೂ ಗೌರವ ಇರುತ್ತದೆ ಎಂದು ಬರೆದಿದ್ದಾರೆ. ಖರ್ಗೆ ಹೇಳಿದ್ದೇನು? ಕೇರಳದ ಜನರು ಬಹಳ ಬುದ್ಧಿವಂತರು ಮತ್ತು ವಿದ್ಯಾವಂತರು. ಅವರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ. ಪ್ರಧಾನಿ ಮೋದಿ ಮತ್ತು ಪಿಣರಾಯಿ ವಿಜಯನ್ ಅವರು ಗುಜರಾತ್…
ಚಾಮರಾಜನಗರ : ಚಾಮರಾಜನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ, ವ್ಯಕ್ತಿಯೊಬ್ಬ ಮಹಿಳೆಯರ ಒಳಉಡುಪುಗಳನ್ನು ಕದ್ದು ವಿಕೃತಿ ಮೆರೆಯುತ್ತಿದ್ದಾನೆ. ಈತನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆದ ನಂತರ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಹೌದು ಹೌಸಿಂಗ್ ಬೋರ್ಡ್ ಕಾಲೋನಿಯ ನಿವಾಸಿಗಳಿಗೆ ರಾತ್ರಿ ವೇಳೆ ಹೊರಬರಲು ಭಯವಾಗುತ್ತಿದೆ. ಒಳಉಡುಪು ಕದ್ದು ಅದನ್ನು ಧರಿಸುವ ಇಂತಹ ಸೈಕೋ ವ್ಯಕ್ತಿಗಳು ಮುಂದೆ ಮತ್ತಷ್ಟು ದೊಡ್ಡ ಅನಾಹುತಗಳನ್ನು ಮಾಡಬಹುದೇ ಎಂಬ ಆತಂಕ ಮನೆಮಾಡಿದೆ. ಆರೋಪಿಯ ವಿಕೃತ ಚಟುವಟಿಕೆಯ ವಿಡಿಯೋ ತುಣುಕುಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ. ಈ ದೃಶ್ಯಗಳನ್ನು ನೋಡಿ ಸಾರ್ವಜನಿಕರು ಆತನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕೂಡಲೇ ಆತನನ್ನು ಬಂಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಮನೆಯ ಮುಂದೆ ಒಣಗಲು ಹಾಕಿದ್ದ ಒಳಉಡುಪುಗಳು ಪದೇ ಪದೇ ನಾಪತ್ತೆಯಾಗುತ್ತಿದ್ದವು. ಈ ಬಗ್ಗೆ ಸಂಶಯಗೊಂಡ ಸ್ಥಳೀಯರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ, ವ್ಯಕ್ತಿಯೊಬ್ಬ ಕಳ್ಳತನ ಮಾಡುತ್ತಿರುವ ದೃಶ್ಯ ಸ್ಪಷ್ಟವಾಗಿ ಸೆರೆಯಾಗಿದೆ. ಸ್ಥಳೀಯ ನಿವಾಸಿಗಳ ದೂರಿನ ಮೇರೆಗೆ ಚಾಮರಾಜನಗರ ಪೊಲೀಸರು ಸ್ಥಳಕ್ಕೆ ಭೇಟಿ…
ನವದೆಹಲಿ : ಅಮೆರಿಕ-ಇರಾನ್ ಕದನ ವಿರಾಮದಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಮೋದಿ ಸರ್ಕಾರದ ವಿದೇಶಾಂಗ ನೀತಿ ಬಗ್ಗೆ ತೀವ್ರ ಟೀಕಿಸಿದ್ದು, ಪಾಕಿಸ್ತಾನವನ್ನು ಜಾಗತಿಕವಾಗಿ ಏಕಾಂಗಿಯಾಗಿಸುವಲ್ಲಿ ಮೋದಿ ವಿಫಲ, ಇದು ಭಾರತದ ರಾಜತಾಂತ್ರಿಕತೆಗೆ ದೊಡ್ಡ ಹಿನ್ನಡೆ ಎಂದಿದ್ದಾರೆ. ಸಾಮಾಜಿಕ ಜಾಲತಾಣ ‘X’ ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಜೈರಾಮ್ ರಮೇಶ್, ‘ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಎರಡು ವಾರಗಳ ಕದನ ವಿರಾಮವನ್ನು ಇಡೀ ಜಗತ್ತು ಸ್ವಾಗತಿಸುತ್ತಿದೆ. ಆದರೆ ಈ ಇಡೀ ಪ್ರಕ್ರಿಯೆಯಲ್ಲಿ ಭಾರತದ ಸ್ಥಾನಮಾನಕ್ಕೆ ಪೆಟ್ಟು ಬಿದ್ದಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ಮೋದಿಯವರ ಇಸ್ರೇಲ್ ಭೇಟಿಯ ನಂತರ ನಡೆದ ಹತ್ಯೆಗಳು ಭಾರತದ ಜಾಗತಿಕ ಖ್ಯಾತಿಗೆ ಕಳಂಕ ತಂದಿವೆ ಎಂದು ಅವರು ಆರೋಪಿಸಿದ್ದಾರೆ. ಪಾಕಿಸ್ತಾನವನ್ನು ಜಗತ್ತಿನಿಂದ ಪ್ರತ್ಯೇಕಿಸುವ ಮೋದಿ ಸರ್ಕಾರದ ಪ್ರಯತ್ನಗಳು ಸಂಪೂರ್ಣ ವಿಫಲವಾಗಿವೆ. ಭಯೋತ್ಪಾದನೆ ಪೋಷಿಸುತ್ತಿರುವ ಪಾಕಿಸ್ತಾನ ಇದೀಗ ಎರಡು ಬಲಾಢ್ಯ ದೇಶಗಳ ನಡುವೆ ಶಾಂತಿ ಸಂಧಾನದಲ್ಲಿ ಪಾತ್ರ ವಹಿಸಿರುವುದು ಪ್ರಧಾನಿ ಮೋದಿಯವರ ರಾಜತಾಂತ್ರಿಕತೆಗೆ ಬಿದ್ದ…
ಬೆಂಗಳೂರು : ಬೆಂಗಳೂರಿನಲ್ಲಿ ಯುವ ರಂಗಭೂಮಿ ಕಲಾವಿದ ಮುರಳಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಿರುಚಿತ್ರಗಳಲ್ಲಿಯೂ ನಟಿಸಿದ್ದ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಈ ಘಟನೆ ಕನ್ನಡ ರಂಗಭೂಮಿ ವಲಯದಲ್ಲಿ ತೀವ್ರ ಆಘಾತ ಉಂಟು ಮಾಡಿದೆ. ಹೌದು ರಂಗಭೂಮಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಯುವ ಕಲಾವಿದ ಮುರಳಿ ಎಂಬಾತ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ಸಾರಕ್ಕಿ ಸಮೀಪದ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಮುರಳಿ ಅವರು ರಂಗಭೂಮಿಯಲ್ಲಿ ಸಕ್ರಿಯರಾಗಿದ್ದು, ಕೆಲ ಕಿರುಚಿತ್ರಗಳಲ್ಲಿ ನಟಿಸುವ ಮೂಲಕವೂ ಗಮನಸೆಳೆದಿದ್ದರು. ಕಲೆಯ ಮೇಲಿನ ಅಪಾರ ಆಸಕ್ತಿ ಹೊಂದಿದ್ದ ಅವರು, ತಮ್ಮ ಅಭಿನಯದ ಮೂಲಕ ಸ್ನೇಹಿತರು ಹಾಗೂ ಸಹ ಕಲಾವಿದರ ಮನಸ್ಸಿನಲ್ಲಿ ವಿಶೇಷ ಸ್ಥಾನ ಗಳಿಸಿದ್ದರು. ಕಿರಣ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಬೆಂಗಳೂರು : ಸತತ ಮೂರು ವಾರಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಇರಾನ್ – ಅಮೆರಿಕ, ಇಸ್ರೇಲ್ ನಡುವಿನ ಯುದ್ಧವು ತಾರ್ಕಿಕ ಅಂತ್ಯ ಕಾಣುವ ಲಕ್ಷಣ ಕಾಣಿಸುತ್ತಿದೆ. ಯುದ್ಧಕ್ಕೆ 2 ಕದನ ವಿರಾಮ ಘೋಷಣೆ ಮಾಡುತ್ತಿದ್ದಂತೆಯೇ ಕಚ್ಚಾ ತೈಲದ ಬೆಲೆ ಭರ್ಜರಿ ಕುಸಿತ ಕಂಡಿದೆ. ಅಲ್ಲದೆ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಾಗಿದೆ? ಎಂಬ ಬಗ್ಗೆ ಇಲ್ಲಿ ಮಾಹಿತಿ ಇದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಕಡಿಮೆಯಾಗಿ ಕದನ ವಿರಾಮದ ಬೆನ್ನಲ್ಲೆ, ಆಶ್ಚರ್ಯಕರ ಎಂಬಂತೆ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ದಿಢೀರ್ ಏರಿಕೆ ಕಂಡುಬಂದಿದೆ. ಸಾಮಾನ್ಯವಾಗಿ ಯುದ್ಧದಂತಹ ಪರಿಸ್ಥಿತಿ ತಿಳಿಯಾದಾಗ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾದ ಚಿನ್ನದಿಂದ ಹಣವನ್ನು ಹೊರತೆಗೆದು ಶೇರು ಮಾರುಕಟ್ಟೆಗೆ ಹಾಕುತ್ತಾರೆ, ಇದರಿಂದ ಚಿನ್ನದ ಬೆಲೆ ಇಳಿಯಬೇಕಿತ್ತು. ಆದರೆ ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ: ಏಪ್ರಿಲ್ 8 ರಂದು…













