Author: kannadanewsnow05

ತುಮಕೂರು : ತುಮಕೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ ಆಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯ ಎಂಬ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಎಸ್ಆರ್ಟಿಸಿ ಬಸ್ ಒಂದು ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಐದಾರು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿದ್ದು ಎಲ್ಲರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. 40ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ಡಿಪೋಗೆ ಈ ಒಂದು ಕೆ ಎಸ್ ಆರ್ ಟಿ ಸಿ ಬಸ್ ಸೇರಿತ್ತು. ಹೊಸದುರ್ಗ ಕಡೆಯಿಂದ ಬೆಂಗಳೂರು ಕಡೆಗೆ ಬಸ್ ತೆರಳುವಾಗ ಈ ಅಪಘಾತ ಸಂಭವಿಸಿದೆ. ಪಲ್ಟಿಯಾದ ಅರಸಕ್ಕೆ ಸರ್ಕಾರಿ ಬಸ್ ಸಂಪೂರ್ಣ ನುಜ್ಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಗುಬ್ಬಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಗುಬ್ಬಿ…

Read More

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ಬಳಿ ಮನುಕುಲವೇ ತಲೆತಗ್ಗಿಸುವಂತಹ ಘಟನೆ ನಡೆದಿದೆ. ಹೊಸ ಕಾರು ಖರೀದಿಸಿ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಸಂಭ್ರಮದಿಂದ ಮನೆಗೆ ಮರಳುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಕಾರಿನ ಸಮೇತ ಯುವಕನನ್ನು ಸುಟ್ಟು ಹಾಕಿದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಸೋಮು ಅಲಿಯಾಸ್ ಸೋಮಲಿಂಗಪ್ಪ ಪಡಸಲಗಿ (36) ಕೊಲೆಯಾದವರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆಗೀಡಾದ ವ್ಯಕ್ತಿಯ ಸಂಬಂಧಿ ಸದಾಶಿವ ಪಡಸಲಗಿ, ರವಿ ಪಾಟೀಲ್​ ಹಾಗೂ ನವೀನ್​ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹೊಸ ಕಾರು ಖರೀದಿಸಿದ್ದ ಸೋಮಲಿಂಗಪ್ಪ ಮನೆ ದೇವರ ಪೂಜೆ ಮಾಡಿಕೊಂಡು ಬಸವ ಜಯಂತಿಯಂದು ಸಂಜೆ 7:30ರ ಸುಮಾರಿಗೆ ಗ್ರಾಮದತ್ತ ಬರುತ್ತಿದ್ದರು. ಇವರು ಬರುವುದನ್ನೇ ಕಾದು ಕುಳಿತಿದ್ದ ಸದಾಶಿವ ಪಡಸಲಗಿ ಹಾಗೂ ಸಹಚರರು, ಕಾರಿಗೆ ಅಡ್ಡಲಾಗಿ ನಿಂತು ಗಲಾಟೆ ಮಾಡಿದ್ದಾರೆ. ಸೋಮಲಿಂಗಪ್ಪ ಕಾರಿನಿಂದ ಇಳಿದು ಬರುತ್ತಿದ್ದಂತೆ ಸದಾಶಿವ…

Read More

ಬೆಂಗಳೂರು : ಈಗಾಗಲೇ ಉತ್ತರ ಕರ್ನಾಟಕ ಭಾಗದಲ್ಲಿ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನದಲ್ಲಿ ಭಾರಿ ಏರಿಕೆ ಆಗಿದ್ದು, ನಿನ್ನೆ ಬೀದರ್ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನಕ್ಕೆ 20 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹಾಗೂ ಬಿಸಿಲಿನ ತೀವ್ರತೆ ಎರಡೂ ಒಂದೇ ಸಮಯದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಇಂದು ಮತ್ತು ಮುಂದಿನ ಎರಡು ದಿನಗಳಿಗೆ ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಇಂದು ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಚಾಮರಾಜನಗರ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಗಾಳಿಯ ವೇಗವೂ ಹೆಚ್ಚಾಗಬಹುದು ಎಂದು ಇಲಾಖೆ ಎಚ್ಚರಿಸಿದೆ. ನಾಳೆ ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ. ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ,…

Read More

ಬೆಂಗಳೂರು : ರಾಜ್ಯದಲ್ಲಿ ಇದೇ ಏಪ್ರಿಲ್​ 23 ಹಾಗೂ 24 ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, 3.30 ಲಕ್ಷ ವಿದ್ಯಾರ್ಥಿಗಳು 750 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ವಸ್ತ್ರ ಸಂಹಿತೆಯನ್ನು ಕಡ್ಡಾಯ ಜೊತೆಗೆ ಹಲವು ನಿಯಮಗಳನ್ನು ಸಹ ಪಾಲಿಸಬೇಕಿದೆ. ರಾಜ್ಯದಲ್ಲಿ ಇದೇ ಏಪ್ರಿಲ್​ 23 ಹಾಗೂ 24 ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, 3.30 ಲಕ್ಷ ವಿದ್ಯಾರ್ಥಿಗಳು 750 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಈ ಹಿನ್ನಲೆ ಪ್ರಾಧಿಕಾರ ಡ್ರೆಸ್ ಕೋಡ್ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಆಯಾ ಕಾಲೇಜಿನ ಹಿರಿಯ ಪ್ರಾಧ್ಯಾಪಕರಿಗೆ ಡ್ರೆಸ್ ಕೂಡ ವಿಚಾರವಾಗಿ ಈಗಾಗಲೇ ವಿಶೇಷ ತರಬೇತಿ ನೀಡಲಾಗಿದೆ. ಪರೀಕ್ಷಾ ನಿಯಮಗಳು ಮತ್ತು ವಸ್ತ್ರ ಸಂಹಿತೆ (Dress Code) ವಸ್ತ್ರ ಸಂಹಿತೆ: ವಿದ್ಯಾರ್ಥಿಗಳು ಅರ್ಧ ತೋಳಿನ ಶರ್ಟ್ ಅಥವಾ ಟಿ-ಶರ್ಟ್ ಧರಿಸುವುದು ಸೂಕ್ತ. ಉದ್ದ ತೋಳಿನ ಅಂಗಿಗಳು ಅಥವಾ ದೊಡ್ಡ ಬಟನ್ ಇರುವ ಬಟ್ಟೆಗಳಿಗೆ ಅನುಮತಿಯಿಲ್ಲ. ವಿದ್ಯಾರ್ಥಿನಿಯರು ಸರಳವಾದ ಉಡುಪುಗಳನ್ನು ಧರಿಸಬೇಕು (ಕಿವಿ ಓಲೆ, ಸರ ಮುಂತಾದ ಆಭರಣಗಳನ್ನು…

Read More

ಬೆಂಗಳೂರು : ಎಸ್ ಎಸ್ ಎಲ್ ಸಿ ಯಲ್ಲಿ ಹಿಂದಿ ಭಾಷೆಗೆ ಗೈಡ್ ಬದಲು ಅಂಕ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ ರಾಜ್ಯ ಸರ್ಕಾರದ ಮರು ಪರಿಶೀಲನ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾ ಗೊಳಿಸಿ ಈ ಒಂದು ಆದೇಶ ಹೊರಡಿಸಿದೆ. ಎಸ್ ಎಸ್ ಎಲ್ ಸಿ ಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡುವಂತೆ ಈ ಹಿಂದೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟಕ್ಕೆ ಮರುಪರಿಶೀಲನ ಅರ್ಜಿ ಸಲ್ಲಿಸಿತ್ತು. ಇದೀಗ ಹೈಕೋರ್ಟ್ ಮರುಪರಿಶೀಲನ ಅರ್ಜಿಯನ್ನು ವಜಾಗೊಳಿಸಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನು ನೀಡಿ ಎಂದು ಮಹತ್ವದ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಇ.ಎಸ್ ಇಂದಿರೇಶ್ ಅವರಿದ್ದ ಹೈಕೋರ್ಟ್ ಪೀಠ ಈ ಒಂದು ಆದೇಶ ಹೊರಡಿಸಿದೆ. ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡಿ ಎಂದು ಆದೇಶ ಹೊರಡಿಸಿದ್ದು, ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಶಶಿಕಿರಣ್…

Read More

ಬೆಂಗಳೂರು : ನಗರದಲ್ಲಿ ಜೀವಂತ ಗ್ರೆನೇಡ್‌ ಪತ್ತೆ ಪ್ರಕರಣದ ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟವಾಗಲಿದೆ. ನಗರದಲ್ಲಿ 2008ರ ಮಾದರಿಯಲ್ಲಿ ಸ್ಫೋಟ ನಡೆಸಲು ಆರೋಪಿಗಳು ಸಂಚು ರೂಪಿಸಿದ್ದರು. ಆರ್‌ಟಿ ನಗರದ ಮನೆಯಲ್ಲಿ ಜೀವಂತ ಗ್ರೆನೇಡ್, ಪಿಸ್ತೂಲ್, ಗುಂಡುಗಳು ವಶಕ್ಕೆ ಪಡೆಯಲಾಗಿತ್ತು. 2023 ರಲ್ಲಿ ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದರು. ಖಚಿತ ಮಾಹಿತಿ‌ ಮೇರೆಗೆ ಸಿಸಿಬಿ ದಾಳಿ ನಡೆಸಿತ್ತು. ಸ್ಫೋಟಕ ವಸ್ತುಗಳು, ವಾಕಿ ಟಾಕಿ, ಮ್ಯಾಪನ್ನು ವಶಪಡಿಸಿಕೊಳ್ಳಲಾಗಿತ್ತು. ನಂತರ ಪ್ರಕರಣ ಎನ್ಐಎ ಕೈಗೆತ್ತಿಕೊಂಡು ವಿಚಾರಣೆ ಮಾಡಿತ್ತು. ಬೆಂಗಳೂರು ಸ್ಫೋಟದ ರೂವಾರಿ ಟಿ. ನಾಜೀರ್ ಜೊತೆ ಆರೋಪಿಗಳು ಸಂಪರ್ಕ ಹೊಂದಿದ್ದರು. ಜೈಲಿನಲ್ಲಿ ನಾಜೀರ್‌ನಿಂದ ಉಗ್ರವಾದಕ್ಕೆ ಪ್ರೇರಣೆ ಇತ್ತು. ಜೈಲಿನಿಂದ ಹೊರಬಂದ ಬಳಿಕ ವಿವಿಧೆಡೆ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ. 2023 ರಲ್ಲಿ ಸಂಚು ರೂಪಿಸುತ್ತಿದ್ದ ವೇಳೆ ಆರೋಪಿಗಳ ಸೆರೆ ಹಿಡಿಯಲಾಗಿತ್ತು. ಪ್ರಕರಣದಲ್ಲಿ ಎ1 ಟಿ ನಾಜೀರ್, ಎ2 ಜುನೈದ್, ಎ3 ಸೈಯಾದ್ ಸುಹೈಲ್ ಖಾನ್, ಎ4 ಮಹಮ್ಮದ್ ಉಮರ್, ಎ5 ಜಾಹಿದ್ ತಬ್ರೇಜ್, ಎ6 ಸೈಯದ್,…

Read More

ಉತ್ತರಕನ್ನಡ : ಉತ್ತರಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಅತೀ ವೇಗದ ಚಾಲನೆಯಿಂದ ಕಾರೊಂದು (Car) ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್‌ನ ಅಜಗಾಂವ ಬಳಿ ನಡೆದಿದೆ. ಧಾರವಾಡದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತ ದುರ್ದೈವಿಗಳು. ಸದ್ಯ ಮೃತದೇಹಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದಾಂಡೇಲಿಯಿಂದ ಹಳಿಯಾಳಕ್ಕೆ ಹೋಗುವಾಗ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಎರಡು ಮರಗಳ ನಡುವೆ ಸಿಲುಕಿಕೊಂಡಿದೆ. ಘಟನೆ ಸಂಬಂಧ ದಾಂಡೇಲಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಜೋಂಬಿ ಡ್ರಗ್ಸ್ ಸೇವಿಸುತ್ತಿದ್ದ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದುನಿಯಾ ವಿಜಯ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರವರಿಗೆ ಸಂಕಷ್ಟೇ ದೂರಾಗಿದೆ ವಿಡಿಯೋ ಬಗ್ಗೆ ಸ್ಪಷ್ಟನೆ ಕೇಳಿ ಬಾಗಲೂರು ಠಾಣೆ ಪೊಲೀಸರು ನೋಟಿಸ್ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಈ ಒಂದು ವಿಡಿಯೋ ಕುರಿತಂತೆ ಸಮಾಜದ ಜಾಲತಾಣದಲ್ಲಿ ನಟ ವಿಜಯ್ ಮತ್ತು ಭಾಸ್ಕರ್ ರಾವ್ ವಿಡಿಯೋ ಅಪ್ಲೋಡ್ ಮಾಡಿದ್ದರು. ಪ್ರಕರಣ ಸಂಬಂಧ ಬಾಗಲೂರು ಪೊಲೀಸ್ ಸರು ತನಿಖೆ ಮುಂದುವರೆಸಿದ್ದಾರೆ ಈಗಾಗಲೇ ಈ ಒಂದು ವಿಡಿಯೋ ಹಂಚಿಕೊಂಡಿದ್ದ 15 ಜನರಿಗೆ ನೋಟಿಸ್ ನೀಡಿದ್ದಾರೆ ಮಾಹಿತಿಯ ಬಗ್ಗೆ ದಾಖಲೆ ಒದಗಿಸುವಂತೆ ಸೂಚನೆ ನೀಡಿದ್ದಾರೆ. ದುನಿಯಾ ವಿಜಯ್ ಮತ್ತು ಭಾಸ್ಕರ್ ರಾವ್ ಈಗಾಗಲೇ ವಿಡಿಯೋ ಡಿಲೀಟ್ ಮಾಡಿದ್ದಾರೆ ಆ ವಿಡಿಯೋ ರಿಟ್ಯು ಮಾಡುವಂತೆ ಇನ್ಸ್ಟಾಗ್ರಾಂ ಗೆ ಪೊಲೀಸರು ಪತ್ರ ಬರೆದಿದ್ದಾರೆ ವಿಡಿಯೋ ಆದ ಬಳಿಕ ನೋಟಿಸ್ ಕೊಡಲು ಪೊಲೀಸರು ಚಿಂತನೆ ನಡೆಸಿದ್ದಾರೆ ವಿಡಿಯೋ ಬಗ್ಗೆ ಸ್ಪಷ್ಟನೆ ಕೇಳಿ ಬಾಗಲೂರು…

Read More

ಬೆಳಗಾವಿ : ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್‌ಗೆ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ನಗರದ ಯಡಿಯೂರಪ್ಪ ಮಾರ್ಗದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಬೆಳಗಿನ ಜಾವ ನಿದ್ರೆಯ ಮಂಪರಿನಲ್ಲಿದ್ದ ಚಾಲಕ ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.ಅಪಘಾತದ ರಭಸಕ್ಕೆ ಚಾಲಕನ ಪಕ್ಕದಲ್ಲಿದ್ದ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದರೆ, ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತದಿಂದಾಗಿ ವಾಹನವೂ ನಜ್ಜುಗುಜ್ಜಾಗಿದ್ದು, ವಾಹನದೊಳಗಿನಿಂದ ಗಾಯಾಳು ಹಾಗೂ ಮೃತಪಟ್ಟವರನ್ನು ಹೊರತೆಗೆದು ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತಕ್ಕೀಡಾದ ಈ ಗೂಡ್ಸ್ ಗಾಡಿ ಕೊಲ್ಲಾಪುರದಿಂದ ಶಿವಮೊಗ್ಗದ ಸೊರಬಕ್ಕೆ ಹೋಗ್ತಿತ್ತು. ಕೋಳಿ ತುಂಬಿಸಿಕೊಂಡು ಹೋಗುತ್ತಿದ್ದ ಈ ಲಾರಿ ಡಿಕ್ಕಿ ಹೊಡೆದ ಪರಿಣಾಮ ನೂರಾರು ಕೋಳಿಗಳು ಕೂಡ ಸಾವನ್ನಪ್ಪಿವೆ. ಘಟನಾ ಸ್ಥಳಕ್ಕೆ ಹಿರೇಬಾಗೆವಾಡಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಿರೇಬಾಗೆವಾಡಿ…

Read More

ಬೆಳಗಾವಿ : ಬೆಳಗಾವಿಯಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ಹೆತ್ತ ತಾಯಿ ಅಂತ್ಯಕ್ರಿಯೆಗೆ ಪಾಪಿ ಮಕ್ಕಳು ಬಾರದೆ ದುರಹಂಕಾರ ಮೆರೆದಿದ್ದಾರೆ. ಬೆಳಗಾವಿಯ ಶಾಹುನಗರದಲ್ಲಿ ಈ ಒಂದು ಮನಕಲಕುವ ಘಟನೆ ನಡೆದಿದೆ. ವಯೋಸಹಜ ಕಾಯಿಲೆಯಿಂದ ಅಂಜನಾಧಾಮನೆ ಎನ್ನುವ ವೃದ್ದೆ ಸಾವನಪ್ಪಿದ್ದಾರೆ. ಬೆಳಗಾವಿ ತಾಲೂಕಿನ ಮಾರಿಹಾಳ ಗ್ರಾಮದ ಅಂಜನಾದಾಮನೆ ಸಾವನಪ್ಪಿದ್ದಾರೆ. ಕಳೆದ ಮೂರು ವರ್ಷಗಳಿಂದ ವೃದ್ಧಾಶ್ರಮದಲ್ಲಿ ಅಂಜನಾ ಇದ್ದರು ವೃದ್ದೆಗೆ ಇಬ್ಬರು ಮಕ್ಕಳಿದ್ದರೂ ನೋಡಿಕೊಳ್ಳದೆ ಅಮಾನವೀಯವಾಗಿ ವರ್ತಿಸಿದ್ದರು. ಬಳಿಕ ಅಂಜನಾ ಅವರ ಸ್ಥಿತಿ ಕಂಡು ಸಹೋದರ ವೃದ್ಧಾಶ್ರಮಕ್ಕೆ ಸೇರಿಸಿದ್ದರು. ಇದೀಗ ಅಂಜನಾ ಅವರ ಸಾವಿನ ಸುದ್ದಿ ಆಶ್ರಮದ ಸಿಬ್ಬಂದಿಗಳು ಮಕ್ಕಳಿಗೆ ಕರೆ ಮಾಡಿ ತಿಳಿಸಿದ್ದಾರೆ. ಆದರೆ ಅವರು ನೀವೇ ಅಂತ್ಯಕ್ರಿಯೆ ಮಾಡಿ ಎಂದು ಪಾಪಿ ಮಕ್ಕಳು ಕರೆ ಕಟ್ ಮಾಡಿದ್ದಾರೆ. ಬಳಿಕ ನಗರಸೇವಕ ಶಂಕರ್ ಪಾಟೀಲ್ ಮತ್ತು ಗಂಗಾಧರ್ ಪಾಟೀಲ್ ಗೆ ಕರೆ ಮಾಡಿದ್ದು ಆಶ್ರಮಕ್ಕೆ ತೆರಳಿ ವೃದ್ದೆ ಅಂಜನಾ ಅವರ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಕೇವಲ 10 ಕಿ.ಮೀ ದೂರದಲ್ಲಿದ್ದರೂ ಪಾಪಿ ಮಕ್ಕಳು ಬಾರದೆ…

Read More