Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಕಲಬುರಗಿ : ನಿವೃತ ಸೈನಿಕ ತಲೆಗೆ ಕಬ್ಬಿಣದ ರಾಡ್ ಇಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರ್ಗಿಯ ರಾಮಮಂದಿರ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ರವಿಚಂದ್ರ ಖೇಡ್ (45) ಎಂದು ತಿಳಿದುಬಂದಿದೆ. ಇಂಡಿಯನ್ ಆಯಿಲ್ ಡಿಪೋದಲ್ಲಿ ರವಿಚಂದ್ರ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ವಿವಾದಿತ ಖಾಸಗಿ ಜಾಗದಲ್ಲಿ ರವಿಚಂದ್ರವಾಗಿ ಕೊಲೆಯಾಗಿದ್ದಾರೆ. ವಿವಾದಿತ ಜಾಗದಲ್ಲಿ ಕಳೆದ ತಿಂಗಳು ಟಿನ್ ಶೆಡ್ ನಿರ್ಮಿಸಲಾಗಿತ್ತು. ಅದನ್ನು ವಿರೋಧಿ ಗುಂಪು ರಾತ್ರೋರಾತ್ರಿ ಜೆಸಿಬಿ ಇಂದ ಕೆಡವಲಾಗಿತ್ತು. ಅದೇ ವಿಚಾರವಾಗಿ ವಿರೋಧಿ ಗುಂಪಿನಿಂದ ರವಿಚಂದ್ರನ ಕೊಲೆಯಾಗಿದೆ. ನೈಟ್ ಶಿಫ್ಟ್ ನಲ್ಲಿ ರವಿಚಂದ್ರನ್ ಸೆಕ್ಯೂರಿಟಿ ಗಾರ್ಡ್ ಆಗಿದ್ದರು. ಕಂಡವರ ಜಾಗಕ್ಕೆ ಬೇಲಿ ಹಾಕುವ ಗ್ಯಾಂಗ್ ನಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಳೆದ 4 ವರ್ಷದ ಹಿಂದೆ ರವಿಚಂದ್ರ ಬಿಎಸ್ಎಫ್ ನಿಂದ ನಿವೃತ್ತಿಯಾಗಿದ್ದರು. ಕಲ್ಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಹಡಲಗಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಸ್ಟೇಷನ್…

Read More

ಬೆಂಗಳೂರು: ದೇಶಾದ್ಯಂತ ಈಗಾಗಲೇ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಗಗನಕ್ಕೇರಿ ಸಾರ್ವಜನಿಕರು ಕಂಗಾಲಾಗಿದ್ದಾರೆ. ಇದರ ನಡುವೆಯೇ ಇದೀಗ ಇಂಧನ ದರ ಏರಿಕೆಯಿಂದ ತತ್ತರಿಸಿದ್ದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಕೇಂದ್ರ ಸರ್ಕಾರ ಮತ್ತೊಂದು ಭಾರಿ ಶಾಕ್ ನೀಡಿದೆ. ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ (CNG) ದರವನ್ನು ಮತ್ತೆ ಒಂದು ರೂಪಾಯಿ ಹೆಚ್ಚಳ ಮಾಡುವ ಮೂಲಕ ಗ್ರಾಹಕರ ಜೇಬಿಗೆ ಕತ್ತರಿ ಹಾಕಲಾಗಿದೆ. ಕೇವಲ ಎರಡು ದಿನಗಳ ಹಿಂದಷ್ಟೇ ಪ್ರತಿ ಕೆಜಿ ಸಿಎನ್‌ಜಿ ದರವನ್ನು 2 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು. ಈ ಬೆಲೆ ಏರಿಕೆಯ ಆಘಾತದಿಂದ ಚಾಲಕರು ಚೇತರಿಸಿಕೊಳ್ಳುವ ಮುನ್ನವೇ, ಕೇವಲ 48 ಗಂಟೆಗಳ ಅವಧಿಯಲ್ಲಿ ಎರಡನೇ ಬಾರಿಗೆ ಮತ್ತೆ 1 ರೂಪಾಯಿ ಏರಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಈ ದಿಢೀರ್ ನಿರ್ಧಾರದಿಂದಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಹೊಸ ಸಿಎನ್‌ಜಿ ದರಗಳು ದೇಶಾದ್ಯಂತ ಅನ್ವಯವಾಗಲಿವೆ. ಬೆಂಗಳೂರಿನಲ್ಲಿ 90 ರೂಪಾಯಿ ಗಡಿ ದಾಟಿದ ಸಿಎನ್‌ಜಿ! ನಿರಂತರವಾಗಿ ಹೆಚ್ಚುತ್ತಿರುವ ಇಂಧನ ಬೆಲೆಯಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಕೆಜಿ ಸಿಎನ್‌ಜಿ…

Read More

ಬೆಂಗಳೂರು : ಲಕ್ಕುಂಡಿಯಲ್ಲಿ ಮನೆ ನಿರ್ಮಾಣ ಮಾಡುವಾಗ ಪ್ರಾಚೀನ ಕಾಲದ ಚಿನ್ನಾಭರಣ ದೊರೆತಿದ್ದು, ದೇಶಾದ್ಯಂತ ಅಷ್ಟೆ ಭಾರಿ ಸದ್ದು ಮಾಡಿತ್ತು ಇದೀಗ ಲಕ್ಕುಂಡಿಯನ್ನು ಯುನೆಸ್ಕೋ ಪಟ್ಟಿಯಲ್ಲಿ ಸೇರಿಸಲು ತಯಾರಿ ನಡೆಸಿದ್ದು, ಎರಡು ತಿಂಗಳಲ್ಲಿ ಪ್ರಸ್ತಾಪ ಸಲ್ಲಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ವಿಧಾನಸೌಧದಲ್ಲಿ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಲಕ್ಕುಂಡಿ ಪಾರಂಪರಿಕ‌ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಹಾಗೂ ರಾಜ್ಯ ಮಟ್ಟದ ಸಲಹಾ ಸಮಿತಿಯು ಕಾನೂನಾತ್ಮಕವಾಗಿ ರಚನೆಯಾಗಿದೆ. ಲಕ್ಕುಂಡಿ ಪ್ರಾಧಿಕಾರ ಗದಗನ್ನು ಮುಖ್ಯ ಕಚೇರಿ ಮಾಡಿ ಕೆಲಸ ಆರಂಭಿಸಿದೆ. 3 ವರ್ಷದಲ್ಲಿ ಲಕ್ಕುಂಡಿ ತಾಣಕ್ಕೆ ರಾಜ್ಯ ಸರ್ಕಾರ ಹೊಸ ಸ್ಪರ್ಶವನ್ನು ನೀಡಿದೆ. ಲಕ್ಕುಂಡಿಯಲ್ಲಿ ಮೊದಲ ಹಂತವಾಗಿ ಪ್ರಾಚ್ಯಾವಶೇಷ ವಸ್ತುಗಳ ಅನ್ವೇಷಣೆ ಆರಂಭಿಸಲಾಗಿದೆ ಎಂದರು. 10 ಪಲ್ಲಕ್ಕಿ ಹೊತ್ತು, ಗ್ರಾಮ ಪಂಚಾಯತಿ ಸುತ್ತಾಡಿ ಪ್ರಾಚ್ಯಾವಶೇಷ ವಸ್ತುಗಳನ್ನು ನಮಗೆ ಕೊಡಿ ಎಂದು ಮನವಿ ಮಾಡಿದೆವು. ಆಗ ಗ್ರಾಮದವರು 1500 ಪ್ರಾಚೀನ ವಸ್ತುಗಳನ್ನು ನಮಗೆ ಕೊಟ್ಟು ಸ್ಪಂದನೆ ಮಾಡಿದರು. ಜನಾಂದೋಲನ‌ ಮಾಡಬೇಕು ಅಂತ ಸಪ್ತಾಹ ಅಂತ…

Read More

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ದೊರೆತಿದೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು, ಮುಂಬರುವ ಜೂನ್ 30ರಿಂದ ಜುಲೈ 29ರ ವರೆಗೆ ಬೂತ್ ಮಟ್ಟದ ಅಧಿಕಾರಿಗಳು (BLO) ರಾಜ್ಯಾದ್ಯಂತ ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ನಡೆಸಲಿದ್ದಾರೆ ಎಂದು ಪ್ರಮುಖ ಮಾಹಿತಿ ನೀಡಿದರು. ಮತದಾರರ ಪಟ್ಟಿ ಪರಿಷ್ಕರಣೆಯು ವ್ಯವಸ್ಥಿತವಾಗಿ ನಡೆಯಲಿದ್ದು, ಇದಕ್ಕಾಗಿ ವಿವಿಧ ಹಂತಗಳ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ಮೊದಲ ಹಂತವಾಗಿ 2026ರ ಜೂನ್ 20ರಿಂದ ಜೂನ್ 29ರ ವರೆಗೆ ಅಗತ್ಯ ಸಿದ್ಧತೆಗಳು, ಅಧಿಕಾರಿಗಳಿಗೆ ತರಬೇತಿ ಹಾಗೂ ನಮೂನೆಗಳ ಮುದ್ರಣ ಕಾರ್ಯಗಳು ನಡೆಯಲಿವೆ. ಇದಾದ ಬಳಿಕ ಜೂನ್ 30ರಿಂದ ಜುಲೈ 29ರ ವರೆಗೆ ಬಿಎಲ್‍ಓಗಳು ಮತದಾರರ ಮನೆಗಳಿಗೆ ನೇರವಾಗಿ ಭೇಟಿ ನೀಡಿ, ನಿಗದಿತ ಗಣತಿ ನಮೂನೆಗಳನ್ನು ವಿತರಿಸಿ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಲಿದ್ದಾರೆ. ಮನೆ ಮನೆ ಸಮೀಕ್ಷೆಯ ಪ್ರಕ್ರಿಯೆ ಪೂರ್ಣಗೊಂಡ…

Read More

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನಿಂದ 47 ಜೀವಂತ ಆಮೆಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ಬ್ಯಾಕಾಂಕ್‌ನಿಂದ ಬಂದಿಳಿದ ಪ್ರಯಾಣಿಕನನ್ನು ಬಂಧಿಸಲಾಗಿದೆ. ಈ ಪ್ರಾಣಿಗಳನ್ನು ಅಕ್ರಮವಾಗಿ ಭಾರತಕ್ಕೆ ಸಾಗಿಸಲು ಯತ್ನಿಸಲಾಗುತ್ತಿದ್ದು, ಕಳ್ಳ ಸಾಗಾಣಿಕೆ ದಂಧೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ ಎಂಬ ಶಂಕೆ ವ್ಯಕ್ತವಾಗಿದೆ. ಕೆಲವರು ಆಮೆಗಳು ಅದೃಷ್ಟ ತರಲಿವೆ ಎಂಬ ನಂಬಿಕೆಯನ್ನು ಬಳಸಿಕೊಂಡು ಜನರಿಗೆ ಮಾರಾಟ ಮಾಡುವುದರಿಂದ ಇಂತಹ ಅಕ್ರಮ ದಂಧೆಗಳು ಹೆಚ್ಚಾಗುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಖಚಿತ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿ, ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ವೇಳೆ ವಿವಿಧ ಜಾತಿಯ ಆಮೆಗಳು ಪತ್ತೆಯಾಗಿವೆ. ವಶಪಡಿಸಿಕೊಂಡ ಪ್ರಾಣಿಗಳಲ್ಲಿ ರೆಡ್ ಫೂಟೆಡ್ ಆಮೆ, ಆಫ್ರಿಕನ್ ಸ್ಪರ್‌ಡ್ ಆಮೆ, ಅರ್ಜೆಂಟೀನಾದ ಕಪ್ಪು-ಬಿಳಿ ಟೆಗು ಹಾಗೂ ಗೋಯಲ್ಡಿಯ ಮಾರ್ಮೊಸೆಟ್ ಸೇರಿದಂತೆ ಅಪರೂಪದ ಜಾತಿಗಳು ಸೇರಿವೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಕಾಯ್ದೆ 1962ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಬಂಧಿತ ಪ್ರಯಾಣಿಕನನ್ನು ಮುಂದಿನ ಕ್ರಮಕ್ಕಾಗಿ ವನ್ಯಜೀವಿ (ರಕ್ಷಣೆ)…

Read More

ಹಾವೇರಿ: ರಾಜ್ಯದಲ್ಲಿ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ಹಾವೇರಿ ಜಿಲ್ಲೆಯಲ್ಲಿ ಮತ್ತೊಂದು ಬೃಹತ್ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿಯ ಚಿನ್ನದ ಅಂಗಡಿಯೊಂದಕ್ಕೆ ನುಗ್ಗಿದ ಖದೀಮರು ಸಾರ್ವಜನಿಕರಲ್ಲಿ ಭೀತಿ ಮೂಡಿಸುವ ರೀತಿಯಲ್ಲಿ ಸುಮಾರು 70 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ಇಡೀ ದರೋಡೆಯ ದೃಶ್ಯಗಳು ಅಂಗಡಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ಸಂಭವಿಸಿದೆ. ಇಲ್ಲಿನ ಸ್ಥಳೀಯ ನಿವಾಸಿ ಅಣ್ಣಪ್ಪ ಭಜಂತ್ರಿ ಅವರಿಗೆ ಸೇರಿದ ಜುವೆಲ್ಲರಿ ಶಾಪ್‌ ಅನ್ನು ಗುರಿಯಾಗಿಸಿಕೊಂಡ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಎಂದಿನಂತೆ ವ್ಯಾಪಾರ ಮುಗಿಸಿ ಅಂಗಡಿ ಮುಚ್ಚಿದ್ದ ಸಮಯದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ತಿಜೋರಿ ಸಮೇತ ಎಸ್ಕೇಪ್ ಆದ ಕಳ್ಳರು! ಅಂಗಡಿಯ ಬೀಗ ಮುರಿದು ಒಳನುಗ್ಗಿದ ದರೋಡೆಕೋರರು ಅಂದಾಜು 300 ಗ್ರಾಂ ಚಿನ್ನ ಹಾಗೂ ಬರೋಬ್ಬರಿ 25 ಕೆಜಿ ತೂಕದ…

Read More

ಕಾಲಿವುಡ್ ಚಿತ್ರರಂಗದ ಖ್ಯಾತ ನಟ ಜಯಂ ರವಿ ಅವರ ವೈವಾಹಿಕ ಜೀವನದಲ್ಲಿ ಎದ್ದಿರುವ ಬಿರುಗಾಳಿ ಈಗ ಮತ್ತೊಂದು ಸ್ಫೋಟಕ ಹಂತಕ್ಕೆ ತಲುಪಿದೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ಜಯಂ ರವಿ ಅವರು ತಮ್ಮ ಪತ್ನಿ ಆರತಿ ಮತ್ತು ಅವರ ಕುಟುಂಬದ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಾ, ತೀವ್ರ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕೂಗಾಡಿ, ಕಿರುಚಾಡಿ ತಮ್ಮ ಆಕ್ರೋಶ ಹಾಗೂ ನೋವನ್ನು ಹೊರಹಾಕಿರುವ ನಟ, ತಮ್ಮ ಖಾಸಗಿ ಬದುಕಿನಲ್ಲಿ ಎದುರಿಸುತ್ತಿರುವ ನರಕಯಾತನೆಯನ್ನು ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದ್ದಾರೆ. ಪತ್ನಿಯೊಂದಿಗಿನ ಮುನಿಸು ಕೇವಲ ದಾಂಪತ್ಯ ಕಲಹಕ್ಕೆ ಸೀಮಿತವಾಗದೆ, ಮಕ್ಕಳ ಭೇಟಿಗೂ ಮುಳ್ಳಾಗಿದೆ ಎಂದು ರವಿ ಅಳಲು ತೋಡಿಕೊಂಡಿದ್ದಾರೆ. “ನನ್ನ ಸ್ವಂತ ಮಕ್ಕಳನ್ನು ನೋಡಲು ನನಗೆ ಸಾಧ್ಯವಾಗುತ್ತಿಲ್ಲ. ಅವರಿಗೆ ಫೋನ್ ಮಾಡಲು ಸಹ ಬಿಡುತ್ತಿಲ್ಲ. ಮಕ್ಕಳನ್ನು ನಾನು ಭೇಟಿಯಾಗಬಾರದು ಎಂಬ ಕಾರಣಕ್ಕೆ ಶಾಲೆಗೆ ಬಾಡಿಗಾರ್ಡ್‌ಗಳನ್ನು ಕಳುಹಿಸಿ ತಡೆಹಿಡಿಯಲಾಗಿದೆ” ಎಂದು ಜಯಂ ರವಿ ಆರೋಪಿಸಿದ್ದಾರೆ. ಮಕ್ಕಳನ್ನು ನೋಡಲಾಗದ ಈ ತೀವ್ರ ನೋವಿನಿಂದಾಗಿ ಮನನೊಂದು ತಾವೇ ಕೈಗಳನ್ನು ಕುಯ್ದುಕೊಂಡು ಆತ್ಮಹತ್ಯೆಗೂ…

Read More

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ತನ್ನ ತನಿಖೆಯನ್ನು ತೀವ್ರಗೊಳಿಸಿದೆ. ಇದರ ಭಾಗವಾಗಿ, ಇದೀಗ ದೇಶದ ರಾಜಧಾನಿ ದೆಹಲಿಯಲ್ಲಿ ಸಿಬಿಐ ಅಧಿಕಾರಿಗಳು ಪ್ರಮುಖ ಕಾರ್ಯಾಚರಣೆ ನಡೆಸಿ ಉಪನ್ಯಾಸಕಿಯೊಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಉಪನ್ಯಾಸಕಿಯನ್ನು ಮನಿಷಾ ಗುರುನಾಥ ಎಂದು ಗುರುತಿಸಲಾಗಿದೆ. ಈಕೆ ಪ್ರಶ್ನೆ ಪತ್ರಿಕೆ ಸೋರಿಕೆ ಜಾಲದೊಂದಿಗೆ ನೇರ ಸಂಪರ್ಕ ಹೊಂದಿದ್ದರು ಮತ್ತು ಅಭ್ಯರ್ಥಿಗಳಿಗೆ ಅಕ್ರಮವಾಗಿ ಪ್ರಶ್ನೆ ಪತ್ರಿಕೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮನಿಷಾ ಅವರ ಬಂಧನದೊಂದಿಗೆ ಈ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿಸಲ್ಪಟ್ಟ ಒಟ್ಟು ಆರೋಪಿಗಳ ಸಂಖ್ಯೆ ಇದೀಗ 9ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಸಿಬಿಐ ವಶದಲ್ಲಿರುವ ಉಪನ್ಯಾಸಕಿ ಮನಿಷಾ ಸೇರಿದಂತೆ ಬಂಧಿತ ಒಂಬತ್ತೂ ಆರೋಪಿಗಳನ್ನು ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಜಾಲದ ಹಿಂದೆ ದೇಶದ ಬೇರೆ ಬೇರೆ ರಾಜ್ಯಗಳ ದೊಡ್ಡ ಕೈವಾಡವಿರುವ…

Read More

ಬೆಂಗಳೂರು : ತಾಂತ್ರಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ ಮೇ 17ರಂದು ಸಂಚಾರ ವ್ಯತ್ಯಯ ಉಂಟಾಗಲಿದೆ. ಹೊಸಹಳ್ಳಿ-ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಒಟ್ಟು ಎರಡು ಗಂಟೆಗಳ ಅವಧಿಗೆ ಮೆಟ್ರೋ ರೈಲು ಸಂಚಾರದಲ್ಲಿ ಭಾಗಶಃ ವ್ಯತ್ಯಯವುಂಟಾಗಲಿದೆ. ನೇರಳೆ ಮಾರ್ಗದ ಇತರ ಭಾಗಗಳು ಹಾಗೂ ಹಸಿರು, ಹಳದಿ ಮಾರ್ಗಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಬೆಂಗಳೂರು ಬಿಎಂಆರ್‌ಸಿಎಲ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್‌ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜಿನ ನಡುವೆ ನಾಳೆ ತುರ್ತು ಮತ್ತು ಅಗತ್ಯ ಸುರಕ್ಷತಾ ಕಾಮಗಾರಿಗಳು ನಡೆಯಲಿವೆ. ಈ ತಾಂತ್ರಿಕ ಕಾರಣದಿಂದಾಗಿ, ನಾಳೆ ಬೆಳಗ್ಗೆ 2 ಗಂಟೆಗಳ ಕಾಲ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಬೆಳಿಗ್ಗೆ 9 ಗಂಟೆಯ ನಂತರ ಈ ಮಾರ್ಗದಲ್ಲಿ ಎಂದಿನಂತೆ ರೈಲುಗಳು ಸಂಚರಿಸಲಿವೆ.…

Read More

ಬೆಂಗಳೂರು : ಅತಿ ಹೆಚ್ಚು ಜನಸಂದಣಿ ಹೊಂದಿರುವ ದೇಶದ ನಿಲ್ದಾಣಗಳ ಪೈಕಿ ಒಂದಾದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ತಲುಪಿದೆ. ಈ ವಿಮಾನ ನಿಲ್ದಾಣದಿಂದ 2025-26ನೇ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಸಂಚಾರ ನಡೆಸಿದ್ದಾರೆ. ಅದೇ ರೀತಿ, 532,000 ಮೆಟ್ರಿನ್​ ಟನ್​ ಸರಕುಗಳನ್ನು ಸಾಗಣೆ ಮಾಡಲಾಗಿದೆ ಎಂಬ ಅಂಶ ತಿಳಿದುಬಂದಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ನ 134 ನೇ ಮಂಡಳಿ ಸಭೆಯಲ್ಲಿ, 2025-26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೈಗೊಂಡ ಪ್ರಮುಖ ಸಾಧನೆಗಳು, ಕಾರ್ಯಕ್ಷಮತೆಯ ಮುಖ್ಯಾಂಶಗಳು ಮತ್ತು ಅಭಿವೃದ್ಧಿ ಉಪಕ್ರಮಗಳ ಪರಿಶೀಲನಾ ಸಭೆಯಲ್ಲಿ ಈ ವಿವರ ನೀಡಲಾಗಿದೆ. ವಿಮಾನ ನಿಲ್ದಾಣದ ಅಧಿಕೃತ ಹೇಳಿಕೆಯ ಪ್ರಕಾರ, 2025-26ರ ಹಣಕಾಸು ವರ್ಷದಲ್ಲಿ ಬಿಎಲ್‌ಆರ್ ವಿಮಾನ ನಿಲ್ದಾಣವು 44.47 ಮಿಲಿಯನ್ ಪ್ರಯಾಣಿಕರನ್ನು…

Read More